ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 13

Posted by Vidyamaana on 2023-08-13 00:43:48 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ ಆ 13

ಪುತ್ತೂರು ಶಾಸಕ ಅಶೋಕ್ ಕುಮಾರ್ ಅವರು ಆಗಸ್ಟ್ 13 ರಂದು

ಬೆಳ್ಳಗ್ಗೆ  10:00 ಆಟಿಡೊಂಜಿ ದಿನ ಕರ್ನಾಟಕ ರಾಜ್ಯ ದೇವಾಡಿಗರ ಸಂಘ,ಮಣ್ಣ ಗುಡ್ಡ ಮಂಗಳೂರು 

ಬೆಳ್ಳಗ್ಗೆ  11

ಆಟಿದ ಕೂಟ ಬಂಟರ ಭವನ  ಸುರತ್ಕಲ್ 

ಮದ್ಯಾಹ್ನ  1:00 ಆಟಿದ ಕೂಟ  ಬಂಟರ ಭವನ  ಪುತ್ತೂರು 

ಮದ್ಯಾಹ್ನ  2:00 ವಿಟ್ಲ ವಲಯ ಬಂಟರ ಸಂಘದ ಆಟಿದ ಕೂಟ ಪುಣಚ ಬೈಲು ಗುತ್ತು 


ಮದ್ಯಾಹ್ನ 2:30 ಕೆಸರು ಗದ್ದೆ ವಿಟ್ಲ 


ಮದ್ಯಾಹ್ನ  3:30 ಕೆಸರು ಗದ್ದೆ  ಬಿಳಿಯೂರು 


ಮದ್ಯಾಹ್ನ  4:00 ಕೆಸರು ಗದ್ದೆ  ಪುಳಿತ್ತಡಿ ಉಪ್ಪಿನಂಗಡಿ 


ಸಂಜೆ 5:30 ಕೆಸರು ಗದ್ದೆ ಕೈಕಾರ

ಕಾರ್ಯಕ್ರಮದ ಲ್ಲಿ ಭಾಗವಹಿಸಲಿದ್ದಾರೆ

ನಂದಾವರದಲ್ಲಿ ಮನೆಯೊಂದರ ಮೇಲೆ ಕುಸಿದ ಗುಡ್ಡ

Posted by Vidyamaana on 2023-07-07 04:37:35 |

Share: | | | | |


ನಂದಾವರದಲ್ಲಿ ಮನೆಯೊಂದರ ಮೇಲೆ ಕುಸಿದ ಗುಡ್ಡ

ಬಂಟ್ವಾಳ : ತಾಲೂಕಿನ ಸಜೀಪಮುನ್ನೂರು ಗ್ರಾಮದ ನಂದಾವರ ಗುಂಪು ಮನೆಯಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದು ಬಿದ್ದು ಮಹಿಳೆಯೋರ್ವರು ಮೃತಪಟ್ಟು, ಯುವತಿಯೋರ್ವಳು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

   ಮನೆಯೊಳಗೆ ಸಿಲುಕಿ ಹಾಕಿಕೊಂಡಿದ್ದ ಇಬ್ಬರು ಮಹಿಳೆಯರ ಪೈಕಿ ಓರ್ವ ಮಹಿಳೆಯನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಮಣ್ಣಿನೊಳಗಿದ್ದ ಮಹಿಳೆಯನ್ನು ರಕ್ಷಣೆ ಮಾಡಲು ಮಾಡಿದ ಸತತ ಪ್ರಯತ್ನ ವಿಫಲವಾಗಿದೆ. ಮಹಿಳೆ ಮೃತಪಟ್ಟಿದ್ದಾರೆ.

   ನಂದಾವರ ನಿವಾಸಿ ಮಹಮ್ಮದ್ ಅವರ ಪತ್ನಿ ಝರೀನಾ(47) ಹಾಗೂ ಶಫಾ(20) ಮನೆಯಡಿಯಲ್ಲಿ ಸಿಲುಕಿ ಹಾಕಿಕೊಂಡವರು. ಝರಿನಾ ಅವರು ಮೃತಪಟ್ಟಿದ್ದು,  ಸಫಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಕೆಲವು ಗಂಟೆಗಳ ಕಾಲ ರಕ್ಷಣಾ ಕಾರ್ಯದಲ್ಲಿ ಸ್ಥಳೀಯರು ತೊಡಗಿದ್ದರು. ಬಂಟ್ವಾಳ ಅಗ್ನಿಶಾಮಕ ಅಧಿಕಾರಿಗಳು, ಪೊಲೀಸರು, ತಾಲೂಕು ಆಡಳಿತದ ಸಿಬಂದಿ, ತಹಶೀಲ್ದಾರ್ ಎಸ್.ಬಿ.ಕೂಡಲಗಿ ಸ್ಥಳಕ್ಕೆ ಧಾವಿಸಿದ್ದಾರೆ.

ಚೀನಾ ಫಂಡಿಂಗ್ ಆರೋಪ: ನ್ಯೂಸ್ ಕ್ಲಿಕ್ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸರಿಂದ ದಾಳಿ

Posted by Vidyamaana on 2023-10-03 11:34:47 |

Share: | | | | |


ಚೀನಾ ಫಂಡಿಂಗ್ ಆರೋಪ: ನ್ಯೂಸ್ ಕ್ಲಿಕ್ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸರಿಂದ ದಾಳಿ

ನವದೆಹಲಿ: ಚೀನಾ ಫಂಡಿಂಗ್, ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಯುಎಪಿಎ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯೂಸ್ ಕ್ಲಿಕ್ ಸುದ್ದಿ ಪೋರ್ಟಲ್ ಗೆ ಸೇರಿದ ಹಲವಾರು ಪತ್ರಕರ್ತರ ಮನೆಗಳಿಗೆ ದಿಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.

Readmore..,...

ಪಡೀಲ್ ಕೆಪುಳು ಬಳಿ ಬೈಕ್ ಸ್ಕೂಟರ್ ನಡುವೆ ನಡೆದ ಅಪಘಾತದ ಸಿ ಸಿ ಟಿವಿ ದೃಶ್ಯ!


ಅಕ್ರಮ ಹಣ ವರ್ಗಾವಣೆ ಮತ್ತು ಚೀನಾ ಪರವಾದ ವಿಷಯವನ್ನು ತನ್ನ ವೇದಿಕೆಯಲ್ಲಿ ಪ್ರಕಟಿಸಿದ ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ವಿಶೇಷ ಘಟಕ ಮಂಗಳವಾರ ನ್ಯೂಸ್ಕ್ಲಿಕ್ ಮಾಧ್ಯಮಕ್ಕೆ ಸಂಬಂಧಿಸಿದ ಸ್ಥಳಗಳ ಮೇಲೆ ದಾಳಿ ನಡೆಸಿದೆ.


ದೆಹಲಿ-ಎನ್ ಸಿಆರ್ ಪ್ರದೇಶದಲ್ಲಿನ ಮಾಧ್ಯಮ ಸಂಸ್ಥೆಯ ಅಧಿಕಾರಿಗಳು ಮತ್ತು ಅದರ ಉದ್ಯೋಗಿಗಳ ನಿವಾಸಗಳ ಮೇಲೆ ದಾಳಿ ನಡೆಸಲಾಗುತ್ತಿದೆ. ಸುದ್ದಿವಾಹಿನಿಯು ಅಮೆರಿಕದ ಬಿಲಿಯನೇರ್ ನೆವಿಲ್ಲೆ ರಾಯ್ ಸಿಂಘಮ್ ಅವರಿಂದ 38 ಕೋಟಿ ರೂಪಾಯಿಗಳನ್ನು ಪಡೆದು ಭಾರತದಲ್ಲಿ ಚೀನಾ ಪರ ಪ್ರಚಾರವನ್ನು ಮಾಡುತ್ತಿದೆ ಎಂಬ ಆರೋಪದ ಮೇಲೆ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಪ್ರಕರಣದಲ್ಲಿ ನ್ಯೂಸ್ ಕ್ಲಿಕ್ ಮೇಲೆ ಇಡಿ ತನಿಖೆ ನಡೆಸುತ್ತಿದೆ.


ಮಾಧ್ಯಮವೊಂದರ ವರದಿ ಪ್ರಕಾರ ಪೊಲೀಸರು ತನಿಖೆ ವೇಳೆ ಹಲವು ಡಿಜಿಟಲ್ ಸಾಕ್ಷ್ಯಗಳನ್ನೂ ವಶಪಡಿಸಿಕೊಂಡಿದ್ದಾರೆ. ಇವುಗಳಲ್ಲಿ ಲ್ಯಾಪ್ ಟಾಪ್, ಮೊಬೈಲ್ ಫೋನ್ ಗಳು, ಹಾರ್ಡ್ ಡಿಸ್ಕ್ ಗಳು ಕೂಡ ಸೇರಿವೆ.

ಅಂಬಿಕಾ ಮಹಾವಿದ್ಯಾಲಯದಲ್ಲಿ ಚಿತ್ತ ಚಿಕಿತ್ಸಾ ಆಪ್ತ ಸಮಾಲೋಚನಾ ಕೇಂದ್ರದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Posted by Vidyamaana on 2023-09-17 10:14:08 |

Share: | | | | |


ಅಂಬಿಕಾ ಮಹಾವಿದ್ಯಾಲಯದಲ್ಲಿ ಚಿತ್ತ ಚಿಕಿತ್ಸಾ ಆಪ್ತ ಸಮಾಲೋಚನಾ ಕೇಂದ್ರದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

ಪುತ್ತೂರು : ನಾವು ತಿನ್ನುವ ಆಹಾರ ನಮ್ಮ ಆರೋಗ್ಯದ ಮೇಲೆ ನಿರ್ಣಾಯಕ ಪರಿಣಾಮ ಬೀರುತ್ತದೆ. ಬಾಯಿಗೆ ರುಚಿಯಾಗುವುದೆಲ್ಲವೂ ಆರೋಗ್ಯವರ್ಧಕವಲ್ಲ. ಇಂದು ಅನೇಕ ಕಲಬೆರಕೆ ವಸ್ತುಗಳೂ ಮಾರುಕಟ್ಟೆಯನ್ನು ಆವರಿಸಿಕೊಂಡಿವೆ. ಹಾಗಾಗಿ ನಮ್ಮ ಆಹಾರ ವ್ಯವಸ್ಥೆಯೇ ದೈಹಿಕ ದೃಢತೆಯನ್ನು ಕ್ಷೀಣಿಸುವಂತೆ ಮಾಡುತ್ತಿದೆ. ಈ ಬಗೆಗೆ ಪ್ರತಿಯೊಬ್ಬರೂ ಜಾಗರೂಕತೆ ವಹಿಸುವುದು ಅತ್ಯಂತ ಅಗತ್ಯ ಎಂದು ಪುತ್ತೂರಿನ ‘ಡಾ.ಪ್ರದೀಪ್ ಕುಮರ‍್ಸ್’ ಆಯುರ್ವೇದ ಆಸ್ಪತ್ರೆಯ ನಿರ್ದೇಶಕ ಡಾ.ಪ್ರದೀಪ್ ಕುಮಾರ್ ಹೇಳಿದರು.



ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ಮಹಾವಿದ್ಯಾಲಯದ ಮನಃಶಾಸ್ತ್ರ ವಿಭಾಗ ಮುನ್ನಡೆಸುತ್ತಿರುವ ಚಿತ್ತ ಚಿಕಿತ್ಸಾ ಎಂಬ ಆಪ್ತ ಸಮಾಲೋಚನಾ ಕೇಂದ್ರದ ವಾರ್ಷಿಕ ಚಟುವಟಿಕೆಗಳನ್ನು ಶುಕ್ರವಾರ ಉದ್ಘಾಟಿಸಿ ಆಧುನಿಕ ಜೀವನಶೈಲಿಯ ಮುಂದಿನ ಪರಿಣಾಮಗಳು ಎಂಬ ವಿಷಯದ ಬಗೆಗೆ ಉಪನ್ಯಾಸ ನೀಡಿದರು.


ನಮ್ಮ ಸುತ್ತಮುತ್ತಲಿನ ಪರಿಸರದಲ್ಲಿ ನಮ್ಮ ದೇಹಕ್ಕೆ ಅತ್ಯುತ್ತಮ ಪರಿಣಾಮ ಬೀರಬಹುದಾದ ಹಣ್ಣು ಹಂಪಲುಗಳಿವೆ. ವೈವಿಧ್ಯಮಯ ತರಕಾರಿಗಳಿವೆ. ಆದರೆ ವಾಟ್ಸಾಪ್‌ನಲ್ಲಿ ಚೆನ್ನಾಗಿ ಪ್ರಚಾರ ಇದೆ ಅನ್ನುವ ಕಾರಣಕ್ಕೆ ಯಾವುದೋ ವಿದೇಶೀ ಹಣ್ಣುಗಳನ್ನು ನಾವು ಆರೋಗ್ಯಕ್ಕೆ ಪೂರಕ ಎಂಬಂತೆ ಸ್ವೀಕರಿಸುತ್ತಿದ್ದೇವೆ. ಆದರೆ ನಮ್ಮ ಪರಿಸರದ ಫಲವಸ್ತುಗಳು ನೀಡಬಹುದಾದ ಆರೋಗ್ಯವನ್ನು ಇನ್ಯಾವುದೋ ದೇಶದಲ್ಲಿ ಬೆಳೆದ ಹಣ್ಣು ನೀಡುವುದಕ್ಕೆ ಸಾಧ್ಯವಿಲ್ಲ ಎಂಬುದನ್ನು ಅರಿಯಬೇಕು ಎಂದು ಹೇಳಿದರು.


ರೋಗಕ್ಕೆ ಪರಿಹಾರವನ್ನು ಕಂಡುಕೊಳ್ಳುವ ಮೊದಲು ರೋಗ ಬರದಂತೆ ದೇಹವನ್ನು ಕಾಪಾಡಿಕೊಳ್ಳುವ ಯೋಚನೆ ಮಾಡಬೇಕು. ಫಿಜ್ಜಾ, ಬರ್ಗರ್, ಐಸ್‌ಕ್ರೀಂ, ಚಾಕಲೇಟ್‌ನಂತಹ ವಸ್ತುಗಳಲ್ಲಿ ದೇಹಕ್ಕೆ ಬೇಕಾಗುವ ಧಾತುಗಳಿಲ್ಲ. ಅದರಿಂದ ದೇಹಕ್ಕೆ ಹಾನಿಯೇ ಹೊರತು ಉಪಯೋಗಗಳಿಲ್ಲ. ಆದ್ದರಿಂದ ಇಂತಹ ಆಹಾರದ ಬದಲಾಗಿ ಪಾರಂಪರಿಕ ಆಹಾರ ವ್ಯವಸ್ಥೆಗೆ ನಾವು ಮರಳಬೇಕಿದೆ. ನಿತ್ಯ ಯೋಗಾಭ್ಯಾಸ, ಪ್ರಾಣಾಯಾಮ ಮಾಡುವುದರಿಂದ ನಮ್ಮ ಬದುಕನ್ನು ಸುಂದರವಾಗಿ ರೂಪಿಸಿಕೊಳ್ಳಬಹುದು ಎಂದು ತಿಳಿಸಿದರು.


ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಮಹಾವಿದ್ಯಾಲಯದ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ ಮಾತನಾಡಿ ಮನಃಶಾಸ್ತ್ರ ವಿಷಯವನ್ನು ಬೋಧಿಸುತ್ತಿರುವ ಹಲವು ಕಾಲೇಜುಗಳು ರಾಜ್ಯದಲ್ಲಿದ್ದರೂ ವಿಭಾಗದ ಮೂಲಕ ಆಪ್ತ ಸಮಾಲೋಚನಾ ಕೇಂದ್ರವನ್ನು ಮುನ್ನಡೆಸುತ್ತಿರುವ ಕಾಲೇಜುಗಳು ಅತ್ಯಂತ ವಿರಳ. ಅಂತಹ ಕೇಂದ್ರವನ್ನು ಮುನ್ನಡೆಸುವುದಕ್ಕೆ ಮನಃಶಾಸ್ತ್ರ ಉಪನ್ಯಾಸಕರಿಗೆ ಸಾಕಷ್ಟು ತಜ್ಞತೆ ಬೇಕು. ಅಂಬಿಕಾ ಮಹಾವಿದ್ಯಾಲಯದ ಮನಃಶಾಸ್ತ್ರ ವಿಭಾಗ ಕಳೆದ ಒಂದು ವರ್ಷದಿಂದ ಆಪ್ತಸಮಾಲೋಚನಾ ಕೇಂದ್ರವನ್ನು ಮುನ್ನಡೆಸುತ್ತಿದ್ದು, ವಿದ್ಯಾರ್ಥಿಗಳಷ್ಟೇ ಅಲ್ಲದೆ ಸಾರ್ವಜನಿಕರೂ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ ಎಂದರು.


ವೇದಿಕೆಯಲ್ಲಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ಮುಖ್ಯಸ್ಥ ಚಂದ್ರಕಾಂತ ಗೋರೆ, ಕಾರ್ಯಕ್ರಮ ಆಯೋಜನಾ ಸಮಿತಿಯ ಸದಸ್ಯ ಗಿರೀಶ ಭಟ್ ಕೂವೆತ್ತಂಡ, ವಿದ್ಯಾರ್ಥಿ ಸಂಯೋಜಕಿ ದೀಕ್ಷಾ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಅಪರ್ಣಾ ಪ್ರಾರ್ಥಿಸಿದರು. ವಿದ್ಯಾರ್ಥಿ ನವೀನ್ ಶೆಟ್ಟಿ ಸ್ವಾಗತಿಸಿದರು. ವಿದ್ಯಾರ್ಥಿನಿ ಅಭೇದ ಗೋವಿಂದ ಭಟ್ ವಂದಿಸಿದರು

ಕಾರು ಚೇಸ್ ಮಾಡಿ ಯುವತಿಗೆ ಕಿರುಕುಳ: ಇಬ್ಬರ ಬಂಧನ

Posted by Vidyamaana on 2024-04-01 19:38:18 |

Share: | | | | |


ಕಾರು ಚೇಸ್ ಮಾಡಿ ಯುವತಿಗೆ ಕಿರುಕುಳ: ಇಬ್ಬರ ಬಂಧನ

ಬೆಂಗಳೂರು: ಕಾರಿನಲ್ಲಿ ಹೋಗುತ್ತಿದ್ದ ಯುವತಿಯೊಬ್ಬರನ್ನು ಚೇಸ್ ಮಾಡಿಕೊಂಡು ಬಂದು ಕಿರುಕುಳ ನೀಡಿದ ಇಬ್ಬರು ಬೈಕ್ ಸವಾರರನ್ನು ಬಂಧಿಸಿರುವುದಾಗಿ ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಹೊಸಪೇಟೆಯಲ್ಲಿ ನಡೆಯಿತೇ ಮರ್ಯಾದಾಗೇಡು ಹತ್ಯೆ?

Posted by Vidyamaana on 2023-11-21 08:03:49 |

Share: | | | | |


ಹೊಸಪೇಟೆಯಲ್ಲಿ ನಡೆಯಿತೇ ಮರ್ಯಾದಾಗೇಡು ಹತ್ಯೆ?

ವಿಜಯನಗರ: ಅವಳ ಮದುವೆಗೆ ಇನ್ನು ಕೇವಲ ಎರಡು ದಿನ ಬಾಕಿ ಇತ್ತು. ಮದುವೆಗೆ ಸಂಬಂಧಿಸಿದ ಹಲವು ಕಾರ್ಯಕ್ರಮಗಳು ಮುಗಿದಿದ್ದವು. ಉಳಿದಿದ್ದು ತಾಳಿ ಕಟ್ಟುವುದೊಂದೇ. ಅಂಥ ಹೊತ್ತಲ್ಲೇ ಯುವತಿಯೊಬ್ಬಳು ತನ್ನ ಭಾವಿ ಗಂಡನ ಮನೆಯಲ್ಲೇ ಸಾವಿಗೆ (Bride Ends life) ಶರಣಾಗಿದ್ದಾಳೆ.ಆಕೆ ಜಾತಿ ವೈಷಮ್ಯಕ್ಕೆ (Caste revenge) ಬಲಿಯಾದಳೇ? ಗಂಡನ ಮನೆಯವರೇ ಕೊಂದು ಹಾಕಿದರು ಎಂಬ ಆಕೆಯ ತಾಯಿ ಮನೆಯವರ ಆರೋಪ ನಿಜವೇ? ಜಾತಿಯ ಕಾರಣಕ್ಕಾಗಿ ಮಗಳಿಗೆ ತೊಂದರೆಯಾಗಬಾರದು ಎಂಬ ಕಾರಣಕ್ಕಾಗಿ ಆಕೆಯೊಬ್ಬಳನ್ನೇ ವರನ ಮನೆಗೆ ಕಳುಹಿಸಿಕೊಟ್ಟು ತಾವು ದೂರದಿಂದಲೇ ಆಶೀರ್ವಾದ ಮಾಡಲು ನಿರ್ಧರಿಸಿದ್ದೇ ತಪ್ಪಾಯಿತಾ? ಹುಡುಗಿಯ ಮನೆಯವರು ಯಾರೂ ಮದುವೆಗೆ ಬರಬಾರದು ಎಂಬ ಹುಡುಗನ ಕಡೆಯವರ ಆಗ್ರಹ ಆಕೆಯ ಬಾಳಿಗೆ ಕುತ್ತಾಯಿತಾ?


ಇಂಥ ಹಲವು ಪ್ರಶ್ನೆಗಳನ್ನು ಒಳಗೊಂಡ ದಾರುಣ ಸಾವು ಸಂಭವಿಸಿದ್ದು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಟಿಬಿ ಡ್ಯಾಂನಲ್ಲಿ. ಮೃತಪಟ್ಟ ಯುವತಿಯ ಹೆಸರು ಐಶ್ವರ್ಯ. ಸೌಂದರ್ಯದ ಖನಿಯಾಗಿದ್ದ ಆಕೆಗೆ ಇನ್ನೂ ಕೇವಲ ಎರಡು ದಿನದಲ್ಲಿ ಮದುವೆ ನಡೆಯುವುದಕ್ಕಿತ್ತು. ಆದರೆ, ಹುಡುಗನ ಮನೆಯಲ್ಲೇ ಆಕೆಯ ಕೊನೆಯ ಉಸಿರು ನಿಂತಿದೆ.ಐಶ್ವರ್ಯಗೆ ಮದುವೆ ನಿಶ್ಚಯವಾಗಿದ್ದು ಅಶೋಕ್‌ ಕುಮಾರ್‌ ಎಂಬ ಹುಡುಗನ ಜತೆ. ಅವರಿಬ್ಬರೂ ಬಾಲ್ಯದಿಂದಲೇ ಕ್ಲಾಸ್‌ಮೇಟ್ಸ್‌. ಪ್ರೀತಿಗಿಂತಲೂ ಹೆಚ್ಚಾದ ಬಾಂಧವ್ಯವೊಂದು ಅವರ ನಡುವೆ ಇತ್ತು. ಅವರಿಬ್ಬರೂ ಖಾಸಗಿ ಕಂಪನಿಯಲ್ಲಿ ಒಳ್ಳೆಯ ಉದ್ಯೋಗದಲ್ಲೂ ಇದ್ದರು.


ಇಷ್ಟೊಂದು ಅರ್ಥ ಮಾಡಿಕೊಳ್ಳುವಿಕೆ ಇರುವುದರಿಂದ ಮದುವೆಯಾಗೋಣ ಎಂದು ನಿರ್ಧರಿಸಿದರು. ಹತ್ತು ವರ್ಷಗಳ ಪ್ರೀತಿ ಕಂ ಸ್ನೇಹಕ್ಕೆ ತಾಳಿ ಕಟ್ಟಲು ಬಯಸಿದ್ದರು. ಆದರೆ, ಆಗ ಅವರ ಮದುವೆಗೆ ಎದುರಾಗಿದ್ದು ಜಾತಿ. ಅದುವರೆಗೆ ಯಾವ ಹಂತದಲ್ಲೂ ಅಡ್ಡ ಬಾರದ ಜಾತಿ ಮದುವೆ ವಿಚಾರಕ್ಕೆ ಅಡ್ಡ ಬಂತು. ಐಶ್ವರ್ಯ ಸಾಕಷ್ಟು ಬುದ್ಧಿವಂತೆ ಮತ್ತು ಒಳ್ಳೆಯ ಉದ್ಯೋಗದಲ್ಲಿದ್ದರೂ ಆಕೆ ಪರಿಶಿಷ್ಟ ಜಾತಿಗೆ ಸೇರಿದವಳು ಎಂಬ ಕಾರಣಕ್ಕೆ ಅಶೋಕ್‌ ಕುಮಾರ್‌ ಮನೆಯವರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದರು. ಯಾಕೆಂದರೆ, ಅಶೋಕ್‌ ಕುಮಾರ್‌ ಗೌಂಡರ್‌ ಜಾತಿಗೆ ಸೇರಿದವರು.


ಮದುವೆಯ ಮಾತುಕತೆಗಳು ಈ ಕಾರಣಕ್ಕಾಗಿ ಮುರಿದು ಬಿದ್ದಾಗ ಐಶ್ವರ್ಯಳ ತಂದೆ ಸುಬ್ರಮಣಿ ಅವರು ಬೇಡ ಮಗಳೇ ಈ ಸಂಬಂಧ. ನಿನ್ನ ವಿದ್ಯೆಗೆ, ನಿನ್ನ ಉದ್ಯೋಗಕ್ಕೆ ಒಳ್ಳೆಯ ಸಂಬಂಧ ಬರುತ್ತದೆ.ಜಾತಿಯ ಕಾರಣಕ್ಕಾಗಿ ತುಚ್ಛೀಕರಿಸುವವರ ಜತೆ ಹೇಗೆ ಬದುಕುತ್ತೀಯಾ ಎಂದು ಕೇಳಿದ್ದರು. ಆದರೆ, ಐಶ್ವರ್ಯಗೆ ಎಲ್ಲರಿಗಿಂತ ಹೆಚ್ಚಾಗಿ ಅಶೋಕ್‌ ಕುಮಾರ್‌ ಮೇಲೆ ನಂಬಿಕೆ ಇತ್ತು. ಯಾರು ಕೈಬಿಟ್ಟರೂ ಅವನೊಬ್ಬ ಆಧರಿಸಿ ನಿಲ್ಲುತ್ತಾನೆ ಎನ್ನುವ ನಂಬಿಕೆ ಇತ್ತು. ಆ ಕಾರಣಕ್ಕಾಗಿ ಮನೆಯವರನ್ನು ಹಠ ಮಾಡಿ ಒಪ್ಪಿಸಿದ್ದಳು ಐಶ್ವರ್ಯ.ಕೊನೆಗೆ ಐಶ್ವರ್ಯಳ ತಂದೆ ಮದುವೆಯಾಗಲು ಒಪ್ಪಿದರು. ಆದರೆ, ಅಶೋಕ್‌ ಕುಮಾರ್‌ ಗೌಂಡರ್‌ ಅವರ ಕುಟುಂಬ ದೊಡ್ಡದೊಂದು ಷರತ್ತನ್ನು ವಿಧಿಸಿತ್ತು. ಅದೇನೆಂದರೆ, ನಾವು ಮದುವೆ ಮಾಡಿಕೊಳ್ಳುತ್ತಿರುವುದು ಐಶ್ವರ್ಯಳನ್ನು ಮಾತ್ರ. ನಮಗೆ ಬೇಕಾಗಿರುವುದು ಆಕೆ ಮಾತ್ರ. ಸಂಬಂಧವಾಯಿತು ಎಂಬ ಕಾರಣಕ್ಕಾಗಿ ನಿಮ್ಮ ಮನೆಯವರು ನಮ್ಮ ಜತೆ ಬೆರೆಯಲು ಮುಂದಾಗಬಾರದು ಎಂದರು. ಅದಕ್ಕೂ ಐಶ್ವರ್ಯ ಮನೆಯವರು ಒಪ್ಪಿದರು. ಕೊನೆಗೆ ನೀವ್ಯಾರು ಮದುವೆಗೂ ಬರುವಂತಿಲ್ಲ ಎಂದು ತಾಕೀತು ಮಾಡಿದರು. ಐಶ್ವರ್ಯ ತಂದೆ ಸುಬ್ರಮಣಿ ಅವರು ಮಗಳ ಮದುವೆಗೇ ಹೋಗಬಾರದು ಎಂದರೆ ಹೇಗೆ ಒಮ್ಮೆ ಕೇಳಿಕೊಂಡರಾದರೂ ಕೊನೆಗೆ ಮಗಳಿಗೆ ಒಳ್ಳೆಯದಾಗಬೇಕು ಎಂಬ ಒಂದೇ ಕಾರಣಕ್ಕೆ ಆಯಿತು… ಮದುವೆಗೆ ಬರೋದಿಲ್ಲ ಎಂದು ಹೇಳಿಬಿಟ್ಟಿದ್ದರು.


ಮೂರು ದಿನ ಮೊದಲೇ ಐಶ್ವರ್ಯ ಒಬ್ಬಳೇ ಹೋಗಿದ್ದಳು


ಹುಡುಗನ ಮನೆಯವರ ಷರತ್ತಿನಂತೆ ಐಶ್ವರ್ಯ ಮೂರು ದಿನದ ಮೊದಲು ಒಬ್ಬಳೇ ಆಗಿ ವರನ ಮನೆಗೆ ಹೋಗಿದ್ದಳು. ಮದುವೆ ಮನೆಯಲ್ಲಿ ನಡೆದ ಕಾರ್ಯಕ್ರಮಗಳಲ್ಲಿ ಆಕೆ ಭಾಗಿಯಾಗಿದ್ದಳು. ಅದಾದ ಬಳಿಕ ಆಕೆಯ ಶವ ಅದೇ ವರನ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಯಿತು.ಎರಡು ಗಂಟೆ ಬಳಿಕ ಸಾವಿನ ಮಾಹಿತಿ ಕೊಟ್ರು


ಈ ನಡುವೆ, ಕೆಳ ಜಾತಿಯವರು ಎಂಬ ಕಾರಣಕ್ಕೆ ಮಗಳನ್ನು ಕೊಂದಿದ್ದಾರೆ ಎಂದು ಯುವತಿಯ ತಂದೆ ಸುಬ್ರಮಣಿ ಆರೋಪಿಸಿದರು.


ʻʻನಮ್ಮ ಕುಟುಂಬದವರು ಮದುವೆಗೆ ಬರಬಾದರು ಅಂತ ಹುಡುಗನ ಕಡೆಯವರು ಷರತ್ತು ವಿಧಿಸಿದ್ದರು. ಅದಕ್ಕೂ ಒಪ್ಪಿ ಹುಡುಗನ ಮನೆಗೆ ಯುವತಿಯನ್ನಷ್ಟೇ ಕಳುಹಿಸಿದ್ದೆವು. ಒಬ್ಬಳೇ ಬಂದಿದ್ದಾಳ ಅಂತ ಪ್ಲಾನ್ ಮಾಡಿ ಕೊಲೆ ಮಾಡಲಾಗಿದೆʼʼ ಎಂದು ಪೋಷಕರು ಆರೋಪ ಮಾಡಿದ್ದಾರೆ.ಹುಡುಗ ಹುಡುಗಿ ಏಳೆಂದು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರಾದರೂ ನಮಗೂ ಅವರಿಗೂ ಹೊಂದಾಣಿಕೆಯಾಗೊಲ್ಲ ಅನ್ನುವುದು ಮೊದಲೇ ಗೊತ್ತಿತ್ತು. ಮದುವೆ ಆಗೋದು ಬೇಡ ಅಮ್ಮ ಅಂತ ನನ್ನ ಮಗಳಿಗೆ ಹೇಳಿದ್ದೆ. ನಮ್ಮ ಸಂಪ್ರದಾಯದಂತೆ ಮದುವೆ ಮಾಡಿಕೊಳ್ತೇವೆ ಅಂತ ಶಾಸ್ತ್ರಕ್ಕೆ ಕರ್ಕೊಂಡು ಹೋದರು. ನಾವು ಮಗಳ ಪ್ರೀತಿ ಮುಖ್ಯ ಅಂತ ಒಪ್ಪಿಕೊಂಡಿದ್ದೆವು. ಘಟನೆ ನಡೆದ ಎರಡು ಗಂಟೆ ಬಳಿಕ ನನಗೆ ಫೋನ್ ಮಾಡಿ ಈ ರೀತಿ ಆಗಿದೆ ಅಂತ ಹೇಳಿದರು ಎಂದು ಸುಬ್ರಮಣಿ ಹೇಳಿದರು.


ಅವರೇ ಮೂರ್ನಾಲ್ಕು ಆಸ್ಪತ್ರೆಗೆ ಕರ್ಕೊಂಡು ಹೋಗಿದ್ದಾರೆ, ಆದ್ರೆ ಜೀವ ಉಳಿದಿಲ್ಲ. ನನ್ನ ಮಗಳು ಗಟ್ಟಿಗಿತ್ತಿ. ಆತ್ಮಹತ್ಯೆ ಮಾಡಿಕೊಳ್ಳೊಳಲ್ಲ. ಇದರ ಬಗ್ಗೆ ಸರಿಯಾಗಿ ತನಿಖೆಯಾಗಬೇಕಿದೆ ಎಂದು ಹೇಳಿದ್ದಾರೆ ತಂದೆ.


ಯುವತಿ ಆತ್ಮಹತ್ಯೆಗೆ ಯುವಕನ ಕುಟುಂಬಸ್ಥರೇ ಪ್ರಚೋದನೆ ಮಾಡಿದ್ದಾರೆ. ಐಶ್ವರ್ಯ ಕುತ್ತಿಗೆಯ ಭಾಗದಲ್ಲಿ ಹಗ್ಗದಿಂದ ಕಟ್ಟಿರೋ ಕಲೆ ಇದೆ. ಒದೊಂದು ಪಕ್ಕಾ ಕೊಲೆ ಅಂತ ಯುವತಿ ಪೋಷಕರು ದೂರು ನೀಡಿದ್ದಾರೆ. ಹೊಸಪೇಟೆಯ ಟಿಬಿ ಡ್ಯಾಂ ಪೊಲೀಸ್ ಠಾಣೆಯಲ್ಲಿ ಯುವತಿ ಪೋಷಕರಿಂದ ದೂರು ದಾಖಲಾಗಿದೆ.



Leave a Comment: