ಪುತ್ತೂರು :ಭೀಕರ ಅಪಘಾತ - 10 ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿ

ಸುದ್ದಿಗಳು News

Posted by vidyamaana on 2024-05-27 18:41:30 |

Share: | | | | |


ಪುತ್ತೂರು :ಭೀಕರ ಅಪಘಾತ - 10 ಕ್ಕೂ  ಹೆಚ್ಚು ವಾಹನಗಳು ಪುಡಿ ಪುಡಿ

ಪುತ್ತೂರು : ಪುತ್ತೂರಿನ ಹೊರ ವಲಯದ ಸಂಟ್ಯಾರಿನಲ್ಲಿ ಭೀಕರ ಅಪಘಾತ ನಡೆದು 10ಕ್ಕೂ ಹೆಚ್ಚು ವಾಹನಗಳು ಪುಡಿ ಪುಡಿಯಾದ ಘಟನೆ ಮೇ.27ರಂದು ಸಂಜೆ ನಡೆದಿದೆ. 

ಪಾಣಾಜೆ - ಸಂಟ್ಯಾರ್ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ ನಿಲ್ಲಿಸಿದ್ದ ಹತ್ತಕ್ಕೂ ಹೆಚ್ಚು ಬೈಕ್ ಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ. 


ಪಾಣಾಜೆ ಕಡೆಯಿಂದ ಅತೀ ವೇಗದಲ್ಲಿ ಬರುತಿದ್ದ ಕಾರೊಂದು  ಈ ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನಗಳಿಗೆ ಡಿಕ್ಕಿಯಾಗಿದೆ. ಸಂಟ್ಯಾರ್ ಜಂಕ್ಷನ್ ನಲ್ಲಿ   ವಾಹನ ನಿಲ್ಲಿಸಿ ಬಸ್ ನಲ್ಲಿ ಉದ್ಯೋಗಕ್ಕೆ ತೆರಳುವವರ 10 ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಪುಡಿ ಪುಡಿಯಾಗಿ ಚೆಲ್ಲಪಿಲ್ಲಿಯಾಗಿದೆ.

 Share: | | | | |


ಪ್ರತಿಭಟನೆ ವೇಳೆ ಹೃದಯಾಘಾತ: ಬಿಜೆಪಿ ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ನಿಧನ

Posted by Vidyamaana on 2024-06-17 16:11:21 |

Share: | | | | |


ಪ್ರತಿಭಟನೆ ವೇಳೆ ಹೃದಯಾಘಾತ: ಬಿಜೆಪಿ ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ನಿಧನ

ಶಿವಮೊಗ್ಗ: ಬಿಜೆಪಿ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ನಿಧನರಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು.

KSRTCಯಲ್ಲಿ ಚಾಲಕರಾಗ್ಬೇಕಾ? – ಆ.22ರಂದು ಸಂದರ್ಶನ ಇದೆ

Posted by Vidyamaana on 2023-08-19 04:27:27 |

Share: | | | | |


KSRTCಯಲ್ಲಿ ಚಾಲಕರಾಗ್ಬೇಕಾ? – ಆ.22ರಂದು ಸಂದರ್ಶನ ಇದೆ

ಮಂಗಳೂರು: ರಾಜ್ಯ ಸರಕಾರದ ಸಾರಿಗೆ ನಿಗಮದ ಬಸ್ ಗಳಲ್ಲಿ ಗುತ್ತಿಗೆ ಆಧಾರದಲ್ಲಿ ಚಾಲಕರನ್ನು ನೇಮಕಗೊಳಿಸುವ ಪ್ರಕ್ರಿಯೆಗೆ ಅರ್ಜಿ ಆಹ್ವಾನಿಸಲಾಗಿದ್ದು, ನೇರ ನೇಮಕ ಪ್ರಕ್ರಿಯೆ ನಡೆಯಲಿದೆ. ದ.ಕ. ಹಾಗೂ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.


ಆಸಕ್ತ ಅಭ್ಯರ್ಥಿಗಳು ಆಗಸ್ಟ್ ತಿಂಗಳ 22ರ ಮಂಗಳವಾರದಂದು ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಇಂದಿರಾಗಾಂಧಿ ಜನ್ಮಶತಾಬ್ದಿ ಭವನದ ಕೆಳ ಅಂತಸ್ಥಿನಲ್ಲಿ ಸಂದರ್ಶನಕ್ಕೆ ಹಾಜರಾಗುವಂತೆ ಸೂಚಿಸಲಾಗಿದೆ. ಬೆಳಗ್ಗೆ 10 ಗಂಟೆಯಿಂದ 1ಗಂಟೆಯ ತನಕ ಅವಕಾಶ ಕಲ್ಪಿಸಲಾಗಿದೆ.

ಸಲ್ಲಿಸಬೇಕಾದ ದಾಖಲೆಗಳು:

ಆಧಾರ್ ಕಾರ್ಡ್

ವಾಹನ ಚಾಲನಾ ಪರವಾಣಿಗೆ ಪತ್ರ

ಭಾರೀ ಗಾತ್ರದ ವಾಹನ ಚಾಲನೆ ಅನುಜ್ಞಾ ಪತ್ರ

4 ಪಾಸ್ ಪೋರ್ಟ್ ಫೋಟೊ

7ನೇ ತರಗತಿ ಮೇಲ್ಪಟ್ಟ ತೇರ್ಗಡೆಯಾದ ಅಂಕಪಟ್ಟಿ

ಜಿಲ್ಲೆಯ ಮಂಗಳೂರು ಬಂಟ್ವಾಳ ಉಳ್ಳಾಲ ಮೂಡುಬಿದರೆ ಶಾಲೆಗಳಿಗೆ ರಜೆ

Posted by Vidyamaana on 2023-07-04 02:48:11 |

Share: | | | | |


ಜಿಲ್ಲೆಯ ಮಂಗಳೂರು ಬಂಟ್ವಾಳ ಉಳ್ಳಾಲ ಮೂಡುಬಿದರೆ ಶಾಲೆಗಳಿಗೆ ರಜೆ


ಮಂಗಳೂರು: ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡದ ಮಂಗಳೂರು, ಬಂಟ್ವಾಳ, ಮೂಡುಬಿದರೆ, ಉಳ್ಳಾಲ ತಾಲೂಕುಗಳ ಅಂಗನವಾಡಿ, ಶಾಲಾ - ಕಾಲೇಜುಗಳಿಗೆ ಜುಲೈ 4ರಂದು ರಜೆ‌ ಘೋಷಿಸಿ ಜಿಲ್ಲಾಧಿಕಾರಿ‌ ಆದೇಶ ಹೊರಡಿಸಿದ್ದಾರೆ.


ಪುತ್ತೂರಿನಲ್ಲಿ ಮಳೆ ಪ್ರಮಾಣ ಕಡಿಮೆ ಇದ್ದು, ಇಲ್ಲಿನ ಶಾಲಾ - ಕಾಲೇಜುಗಳಿಗೆ ರಜೆ ನೀಡಲಾಗಿಲ್ಲ ಎಂದು ಸಹಾಯಕ ಆಯುಕ್ತ ಗಿರೀಶ್ ನಂದನ್ ತಿಳಿಸಿದ್ದಾರೆ.

ಕರಾವಳಿಯಲ್ಲಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 4 ದಿನ ಆರು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತುರ್ತು ಕ್ರಮಗಳನ್ನು ಘೋಷಿಸಿದೆ. ಅದರಂತೆ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಹಾಗೂ ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಅಲ್ಲದೇ, ಪ್ರವಾಸಿಗರಿಗೆ ಎಚ್ಚರಿಕೆ ಹಾಗೂ ಸಮುದ್ರಕ್ಕೆ ಇಳಿಯದಂತೆಯೂ ಸೂಚನೆ ನೀಡಲಾಗಿದೆ.

ದ.ಕ.ದಲ್ಲಿ ತಹಶೀಲ್ದಾರ್‌ಗೆ ಶಾಲಾ-ಕಾಲೇಜಿಗೆ ರಜೆ ಘೋಷಿಸುವ ಅಧಿಕಾರ ನೀಡಿ ಡಿಸಿ ಆದೇಶಿಸಿದ್ದಾರೆ. ಉಳಿದ ತಾಲೂಕಿನಲ್ಲಿ ಮಳೆ ಪರಿಸ್ಥಿತಿ ನೋಡಿ ರಜೆ ನೀಡಲು ಸೂಚಿಸಲಾಗಿದ್ದು, ಕಾಸರಗೋಡು ಜಿಲ್ಲೆಯಲ್ಲಿ ಇಂದು ರಜೆ ಘೋಷಿಸಲಾಗಿದೆ.

ಝೀರೋದಿಂದ 256 ಬೆಡ್ ಆಸ್ಪತ್ರೆ ಕಟ್ಟಿದ ಸಾಮಾನ್ಯ ರೈತ ಕುಟುಂಬದ ಡಾ.ಧನಂಜಯ ಸರ್ಜಿ ; ಕಡಿಮೆ ವೆಚ್ಚದ ವೈದ್ಯಕೀಯ ಚಿಕಿತ್ಸೆ, 160 ವಿಶೇಷ ಚೇತನ ಮಕ್ಕಳ ದತ್ತು, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವನ - ಸಾಧನೆ

Posted by Vidyamaana on 2024-05-28 22:21:06 |

Share: | | | | |


ಝೀರೋದಿಂದ 256 ಬೆಡ್ ಆಸ್ಪತ್ರೆ ಕಟ್ಟಿದ ಸಾಮಾನ್ಯ ರೈತ ಕುಟುಂಬದ ಡಾ.ಧನಂಜಯ ಸರ್ಜಿ ; ಕಡಿಮೆ ವೆಚ್ಚದ ವೈದ್ಯಕೀಯ ಚಿಕಿತ್ಸೆ, 160 ವಿಶೇಷ ಚೇತನ ಮಕ್ಕಳ ದತ್ತು, ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜೀವನ - ಸಾಧನೆ

ಶಿವಮೊಗ್ಗ, ಮೇ.28: ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಸಾಮಾನ್ಯ ರೈತ ಕುಟುಂಬದಲ್ಲಿ ಹುಟ್ಟಿ ಬೆಳೆದು, ಸಣ್ಣ ಪ್ರಾಯದಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಣ ಪಡೆದು ಶಿವಮೊಗ್ಗ ಜಿಲ್ಲೆಯಲ್ಲಿ ಖ್ಯಾತ ಮಕ್ಕಳ ತಜ್ಞರಾಗಿ ಸಾವಿರಾರು ಮಂದಿಗೆ ದೃಷ್ಟಿಯಿತ್ತವರು. 

ಉತ್ಕೃಷ್ಟ ಗುಣಮಟ್ಟದ ಸೇವೆ, ಕೈಗೆಟುಕುವ ದರದಲ್ಲಿ ರೋಗಿಗಳಿಗೆ ಒಂದೇ ಸೂರಿನಡಿ ಸರ್ವ ರೀತಿಯ ಆರೋಗ್ಯ ಸೇವೆ ನೀಡುವ ಡಾ.ಧನಂಜಯ ಸರ್ಜಿ ಶಿವಮೊಗ್ಗದಲ್ಲಿ ಸ್ಥಾಪಿಸಿದ ಸರ್ಜಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಲೆನಾಡಿನಲ್ಲಿ ಮನೆಮಾತಾಗಿದೆ. ಖಾಸಗಿ ಆಸ್ಪತ್ರೆ ಗಳೆಂದರೆ ಬಿಲ್ ನೋಡುತ್ತಲೇ ರೋಗಿಯ ಎದೆ ಝಲ್ ಎನ್ನುತ್ತದೆ. ಆದರೆ, ಇದಕ್ಕೆ ತದ್ವಿರುದ್ಧ ಸರ್ಜಿ ಆಸ್ಪತ್ರೆ. 2014ರಲ್ಲಿ ಝೀರೋ ಬೆಡ್ ನಿಂದ ಆರಂಭಗೊಂಡ ಆಸ್ಪತ್ರೆ ಇಂದು 256 ಬೆಡ್ ಗೆ ತಲುಪಿದ್ದು ಪ್ರಸ್ತುತ ಆರೋಗ್ಯ ಕ್ಷೇತ್ರದ ಹೀರೋ ಆಗಿ ಬೆಳೆದದ್ದು ಅಚ್ಚರಿಯ ಸಂಗತಿ.

ಸರಳ, ಸಜ್ಜನ, ಹಮ್ಮು ಬಿಮ್ಮು ಇಲ್ಲದ ಸಹೃದಯಿ ವ್ಯಕ್ತಿತ್ವದ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರೂ ಆದ ಡಾ.ಧನಂಜಯ ಸರ್ಜಿ ಅವರು ಮೂಲತಃ ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಗೊತ್ತೇನಹಳ್ಳಿ ಗ್ರಾಮದವರು. ಸರ್ಜಿ ರುದ್ರಪ್ಪ, ತಾಯಿ ರೇಣುಕಾ ಅವರ ಪುತ್ರ. ಇವರ ಎಲ್ಲ ಸಾಧನೆಯ ಹಿಂದೆ ಪತ್ನಿ, ಆಸ್ಪತ್ರೆಯ ನಿರ್ದೇಶಕರೂ ಆದ ನಮಿತಾ ಸರ್ಜಿ ಅವರ ಶ್ರಮವೂ ಇದೆ. 


ದಾವಣಗೆರೆಯ ಜೆಜೆಎಂ ಕಾಲೇಜಿನಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ ಅತ್ಯುತ್ತಮ ವಿದ್ಯಾರ್ಥಿಯಾಗಿ ಹೊರಹೊಮ್ಮಿದವರು ಡಾ.ಧನಂಜಯ ಸರ್ಜಿ. ಶಿಕ್ಷಣದ ಹಂತದಲ್ಲೇ ಜಿಲ್ಲೆಯ ಆರೋಗ್ಯ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಕನಸು ಕಂಡವರು. ಆ ಕನಸು ಈಗ ಸಾಕಾರಗೊಂಡಿದೆ. 2007ರ ಮಾರ್ಚ್ 18ರಂದು ಶಿವಮೊಗ್ಗದಲ್ಲಿ ಸರ್ಜಿ ಚೈಲ್ಡ್ ಕೇರ್ ಸೆಂಟರ್ ಮೂಲಕ ಇವರ ಸೇವೆ ಆರಂಭಗೊಂಡಿತ್ತು. ನಂತರ ಶಿವಮೊಗ್ಗದ ಖಾಸಗಿ ಆಸ್ಪತ್ರೆಗಳಲ್ಲಿ ತಿಂಗಳ ಸಂಬಳಕ್ಕೆ ಕೆಲಸ ಮಾಡಿದ್ದರು. 2014ರಲ್ಲಿ ಹೊಸ ಆಸ್ಪತ್ರೆ ಆರಂಭಿಸಿ, ಕೇವಲ 9 ವರ್ಷದಲ್ಲಿ 256 ಬೆಡ್ ವರೆಗೆ ತಲುಪಿದೆ.ಜಿಲ್ಲಾಡಳಿತದಿಂದ ಪ್ರಶಂಸಾ ಪತ್ರ 


ಎರಡು ವರ್ಷಗಳ ಹಿಂದೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮಕ್ಕಳ ಐಸಿಯು ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡ ಸಂದರ್ಭ ನವಜಾತ 13 ಮಕ್ಕಳನ್ನೂ ಸರ್ಜಿ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿತ್ತು. ಸರ್ಜಿ ಆಸ್ಪತ್ರೆಯಲ್ಲಿ ಈ ಶಿಶುಗಳಿಗೆ ಸೂಕ್ತ ಚಿಕಿತ್ಸೆ ನೀಡಿದ್ದು ಜೀವ ಕಾಪಾಡಿತ್ತು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಧನಂಜಯ ಸರ್ಜಿ ಅವರಿಗೆ ಪ್ರಶಂಸಾ ಪತ್ರ ನೀಡುವ ಮೂಲಕ ಸೇವೆಗೆ ಬೆನ್ನು ತಟ್ಟಿ ಪ್ರೋತ್ಸಾಹಿಸಿತ್ತು.


ಇಂದು ಒಂದೇ ಸೂರಿನಡಿ ಎಲ್ಲಾ ರೀತಿಯ ಚಿಕಿತ್ಸಾ ಸೌಲಭ್ಯದ ಆಸ್ಪತ್ರೆಯನ್ನಾಗಿಸಿದ್ದಾರೆ. ಕೈಗೆಟಕುವ ದರ, ಉತ್ಕೃಷ್ಟ ಹಾಗೂ ನಗುಮೊಗದ ವಿಶ್ವಾಸಾರ್ಹ ಸೇವೆಯೇ ಇವರ ಯಶಸ್ಸಿಗೆ ಕಾರಣ. ಈಗ ಅವರ ಆಸ್ಪತ್ರೆಗೆ ರಾಜ್ಯದ ಧಾರವಾಡ, ಹಾವೇರಿ, ಬಳ್ಳಾರಿ, ಚಿತ್ರದುರ್ಗ, ಶಿರಸಿ, ಚಿಕ್ಕಮಗಳೂರು, ಹಾಸನ, ಅರಸೀಕರ ಹಾಗೂ ತುಮಕೂರು, ಬೆಂಗಳೂರು ಜಿಲ್ಲೆಗಳಿಂದ ನಿತ್ಯವೂ ನೂರಾರು ರೋಗಿಗಳು ಚಿಕಿತ್ಸೆಗಾಗಿ ಬರುತ್ತಿದ್ದಾರೆ. ಒಟ್ಟು 75 ಐಸಿಯು ಬೆಡ್ ಗಳು ಆಪರೇಷನ್ ಥಿಯೇಟರ್ ಗಳ ಸೌಲಭ್ಯ ಇದೆ. ಎರಡೂ ಸರ್ಜಿ ಆಸ್ಪತ್ರೆ ಸೇರಿ ವರ್ಷಕ್ಕೆ ಎರಡು ಲಕ್ಷ ರೋಗಿಗಳು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಪ್ರತಿದಿನಕ್ಕೆ ಸರಾಸರಿ 500ರಿಂದ 750 ರೋಗಿಗಳನ್ನು ತಪಾಸಣೆ ನಡೆಸಿ, ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ ವರ್ಷದಲ್ಲಿ 1800ರಿಂದ 2000 ವರೆಗೆ ಹೆರಿಗೆ ಆಗುತ್ತಿದ್ದು, ಚಿಕಿತ್ಸೆ ನೀಡಲಾಗುತ್ತಿದೆ

ಕಡಬದಲ್ಲಿ ಕಾಡಾನೆ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Posted by Vidyamaana on 2023-09-28 21:01:17 |

Share: | | | | |


ಕಡಬದಲ್ಲಿ ಕಾಡಾನೆ ದಾಳಿ: ವ್ಯಕ್ತಿಗೆ ಗಂಭೀರ ಗಾಯ

ಕಡಬ: ಸಮೀಪದ ಮೀನಾಡಿಯಲ್ಲಿಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟು ಮೂರು ತಿಂಗಳು ಕಳೆಯುತ್ತಿದ್ದಂತೆಯೇ ಐತ್ತೂರು ಗ್ರಾಮದಲ್ಲಿ ಮತ್ತೊಂದು ಕಾಡಾನೆ ದಾಳಿಯಾಗಿದ್ದು, ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ.



ಐತ್ತೂರು ಗ್ರಾಮದ ಗೇರ್ತಿಲ‌ ನಿವಾಸಿ ಓಡಿ ಎಂಬವರ ಪುತ್ರ ಕೂಲಿ ಕಾರ್ಮಿಕ ಚೋಮ (56) ಗಾಯಗೊಂಡವರು.


ಅವರು ಗುರುವಾರ ಸಂಜೆ ಕೂಲಿ‌ ಕೆಲಸ ಬಿಟ್ಟು ಮನೆಯ ಕಡೆ ತೆರಳುತ್ತಿದ್ದ ಸಂದರ್ಭದಲ್ಲಿ ಗ್ರಾಮದ ನೆಲ್ಯಡ್ಕ ಶಾಲೆಗೆ ಹೊಂದಿಕೊಂಡಿರುವ ಕಾರ್ತಿಕೇಯ ಭಜನಾ ಮಂದಿರದ ಬಳಿ ಕಾಡಾನೆ ಹಠಾತ್ತಾಗಿ ಎದುರು ಬಂದು ಅವರನ್ನು‌ ಸೊಂಡಿಲಿನಿಂದ ಎತ್ತಿ ಬಿಸಾಕಿದೆ. ಪರಿಣಾಮವಾಗಿ ಚೋಮ‌ ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಅವರನ್ನು ಕಡಬ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಅಲ್ಲಿ ಪ್ರಥಮ‌ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದೆ.


ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಪುತ್ತೂರಿನ ಜನತೆಗೆ ತಲೆನೋವಾಗಿದೆ ಹೈ-ಫೈ ಕಳ್ಳರ ಕಾಟ

Posted by Vidyamaana on 2023-07-31 15:58:06 |

Share: | | | | |


ಪುತ್ತೂರಿನ ಜನತೆಗೆ ತಲೆನೋವಾಗಿದೆ ಹೈ-ಫೈ ಕಳ್ಳರ ಕಾಟ

ಪುತ್ತೂರು: ಮನೆಯನ್ನು ಟಾರ್ಗೆಟ್ ಮಾಡಿ, ಹೊಂಚು ಹಾಕಿ ಸಂಚು ರೂಪಿಸಿ, ಕನ್ನ ಹಾಕುವ ಹೊರರಾಜ್ಯದ ಕಳ್ಳರ ತಂಡ ಪುತ್ತೂರಿಗೆ ಎಂಟ್ರಿ ನೀಡಿದೆ! ಹಾಗಾಗಿ ನಿಮ್ಮ ಮನೆಗೆ ಬೀಗ ಹಾಕಿ, ಹೊರಗಡೆ ಹೋಗುವಾಗ ಎಚ್ಚರ ವಹಿಸಿ.

ಅರೆ! ಹೊರರಾಜ್ಯದ ಕಳ್ಳರ ಗುಂಪು ನಮ್ಮ ಮನೆಯೊಳಗೆ ಹೇಗೆ ಬರುವುದು? ನಮ್ಮ ಮನೆಯೊಳಗೆ ಏನಿದೆ ಎಂದು ಅವರಿಗೆ ತಿಳಿಯುವುದಾದರೂ ಹೇಗೆ? ಎಂಬಿತ್ಯಾದಿ ಪ್ರಶ್ನೆ ನಿಮ್ಮ ಮನದೊಳಗೆ ಮೂಡಬಹುದು. ಹೀಗೆಂದು ಹೇಳಿ, ಕಳ್ಳರ ತಂಡವನ್ನು ಉಪೇಕ್ಷೆ ಮಾಡದಿರಿ. ಕಾರಣ, ಪುತ್ತೂರು ಪೇಟೆಯಲ್ಲಿ ಹಾಡಹಗಲೇ ಮನೆಯೊಂದಕ್ಕೆ ನುಗ್ಗಿರುವ ಕಳ್ಳರು, ಸ್ವಲ್ಪದರಲ್ಲೇ ಎಸ್ಕೇಪ್ ಆಗಿದ್ದಾರೆ.

ಇಲ್ಲಿ ಗಮನಿಸಬೇಕಾದ ವಿಷಯವೇನೆಂದರೆ, ಕಳ್ಳರು ಒಂದು ಸಣ್ಣ ಸುಳಿವನ್ನು ಬಿಟ್ಟುಹೋಗಿಲ್ಲ. ಹೆಚ್ಚೇಕೆ, ಕಳ್ಳರ ಕೈಬೆರಳಿನ ಗುರುತೂ ಪತ್ತೆಯಾಗಿಲ್ಲ. ಹಾಗೆಂದು ಬಂಗಲೆಯಂತಹ ಮನೆ ಪೂರ್ತಿ ತಡಕಾಡಿದ್ದಾರೆ. ಕೈಗೆ ಸಿಕ್ಕ ಸಣ್ಣ ಪುಟ್ಟ ವಸ್ತುಗಳನ್ನು ದೋಚಿದ್ದಾರೆ. ಮಾತ್ರವಲ್ಲ, ಮನೆಯಲ್ಲಿ ಕೃತ್ಯದ ಸಚಿತ್ರ ಮಾಹಿತಿ ನೀಡಬೇಕಿದ್ದ ಸಿಸಿ ಕ್ಯಾಮರಾದ ಇಡೀಯ ಸೆಟ್ಟನ್ನೇ ಹೊತ್ತೊಯ್ದಿದ್ದಾರೆ. ಅಚ್ಚರಿ ಪಡಬೇಕಾದ ವಿಚಾರವೇನೆಂದರೆ, ಮನೆಯ ಬಾಗಿಲನ್ನು ಗ್ಯಾಸ್ ಕಟ್ಟರಿನಂತಹ ಆಯುಧದಿಂದ ತುಂಡರಿಸಿ ಒಳ ನುಗ್ಗುತ್ತಾರೆ ಎನ್ನುವುದು. ಸೋಮವಾರ ಮನೆಯೊಳಗೆ ನುಗ್ಗಿದ ಕಳ್ಳರು, ಮಾಡಿರುವ ರಾದ್ಧಾಂತ ನೋಡಿದರೆ – ಪ್ರೊಫೆಷನಲ್ ಕಳ್ಳರು ಎನ್ನುವುದು ಸ್ಪಷ್ಟ.

ಆದ್ದರಿಂದ ಮನೆಯಿಂದ ಹೊರ ಹೋಗುವಾಗ ಸ್ಥಳೀಯರ ಗಮನಕ್ಕೆ ತನ್ನಿ. ಒಂದು ದಿನ ಮನೆ ಬಿಟ್ಟು ಹೋಗುತ್ತೀರಿ ಎಂದರೆ, ಸ್ಥಳೀಯ ಪೊಲೀಸ್ ಠಾಣೆಯ ಗಮನಕ್ಕೆ ತನ್ನಿ. ಇನ್ನು, ಬೆಲೆಬಾಳುವ ಚಿನ್ನಾಭರಣಗಳನ್ನು ಸೇಫ್ ಲಾಕರಿನಲ್ಲೋ, ಬ್ಯಾಂಕ್ ಲಾಕರಿನಲ್ಲೋ ಇಡುವುದನ್ನು ಮಾತ್ರ ಮರೆಯದಿರಿ.

ಸ್ಥಳೀಯರ ಸಹಕಾರ!!??:

ಹೊರರಾಜ್ಯದ ಕಳ್ಳರಿಗೆ ನಮ್ಮ ಮನೆಯ ಮಾಹಿತಿ ತಿಳಿಯುವುದಾದರೂ ಹೇಗೆ ಎನ್ನುವ ಯಕ್ಷಪ್ರಶ್ನೆ ಎಲ್ಲರಲ್ಲೂ ಸಹಜವಾಗಿ ಮೂಡುತ್ತದೆ. ಉತ್ತರ ಸುಲಭವೇ ಇದೆ. ಹೊರರಾಜ್ಯದ ಕಳ್ಳರು, ಸ್ಥಳೀಯರ ನೆರವು ಪಡೆದುಕೊಳ್ಳದೇ ಏಕಾಏಕೀ ನುಗ್ಗಲು ಸಾಧ್ಯವೇ ಇಲ್ಲ. ಏಕೆಂದರೆ, ಮನೆಯವರು ಎಷ್ಟು ಹೊತ್ತಿಗೆ ಹೊರಹೋಗುತ್ತಾರೆ, ಪುನಃ ಎಷ್ಟು ಹೊತ್ತಿಗೆ ಹಿಂದಿರುಗಿ ಬರುತ್ತಾರೆ ಎನ್ನುವ ಸ್ಪಷ್ಟ ಮಾಹಿತಿ ಅವರಲ್ಲಿರುತ್ತದೆ. ಅದು ಹಾಡಹಗಲೇ ಆದರೂ ಸರಿ, ಸ್ಥಳೀಯರಿಗೆ ಸಂದೇಹವೇ ಬಾರದ ರೀತಿಯಲ್ಲಿ ಕನ್ನ ಹಾಕುತ್ತಾರೆ. ಮನೆಯ ಬಾಗಿಲು ಎಷ್ಟೇ ಗಟ್ಟಿಯಾಗಿರಲಿ, ಅದನ್ನು ಮುರಿಯುವ ಆಯುಧಗಳು ಅವರಲ್ಲಿರುತ್ತವೆ ಎನ್ನುವುದು ಸೋಮವಾರದ ಘಟನೆಯಿಂದ ಸಾಬೀತಾಗಿದೆ. ಇಷ್ಟೇಲ್ಲಾ ಯೋಜನೆ ರೂಪಿಸಬೇಕಾದರೆ, ಸ್ಥಳೀಯರ ಸಹಕಾರ ಖಂಡಿತಾ ಪಡೆದುಕೊಂಡಿರಲೇಬೇಕು ಅಲ್ಲವೇ?


ಹೈಫೈ ಕಳ್ಳರು:

ಜನಸಂಖ್ಯೆ ಹೆಚ್ಚಿರುವ ಪ್ರದೇಶವನ್ನೇ ಆಯ್ಕೆ ಮಾಡಿಕೊಳ್ಳುವ ಕಳ್ಳರು, ಸ್ಥಳೀಯರ ಗಮನಕ್ಕೂ ಬಾರದಂತೆ ಕೃತ್ಯ ಎಸಗಿ ಕಣ್ಮರೆಯಾಗುತ್ತಾರೆ. ಪೇಟೆಯಲ್ಲಿ ಹತ್ತಿರತ್ತಿರ ಮನೆಗಳಿದ್ದರೂ, ಪಕ್ಕದ ಮನೆಯಲ್ಲೇನೂ ನಡೆಯುತ್ತಿದೆ ಎನ್ನುವುದು ತಿಳಿಯುವುದೇ ಇಲ್ಲ. ಅಂದರೆ ಪೇಟೆಯ ಲೋಪಗಳನ್ನು ತಮ್ಮ ಕೃತ್ಯಕ್ಕೆ ಬಳಸಿಕೊಳ್ಳುವ ತಂಡವಿದು. ಈ ತಂಡ ಕಾರಿನಲ್ಲೇ ತಿರುಗಾಡುತ್ತಾ, ಯಾರಿಗೂ ಸಂದೇಹ ಬಾರದಂತೆ ಕಾರ್ಯಾಚರಿಸುತ್ತದೆ ಎನ್ನುವುದು ಸೋಮವಾರದ ಘಟನೆಯಿಂದ ತಿಳಿದುಬಂದಿದೆ.

Recent News


Leave a Comment: