ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಸುದ್ದಿಗಳು News

Posted by vidyamaana on 2024-07-25 06:35:41 |

Share: | | | | |


ಕಾಲೇಜು ಶುಲ್ಕ ಹಣದಲ್ಲಿ ದಂಡ ಕಟ್ಟಿದ ಯುವಕ.! PSI ಮಾಡಿದ್ದೇನು ಗೊತ್ತಾ..?

ಬಾಗಲಕೋಟೆ: ಬಾಗಲಕೋಟೆ ಜಿಲ್ಲೆ ಇಲಕಲ್ ನಗರದ ಕಂಠಿ ಸರ್ಕಲ್ ಬಳಿ ತ್ರಿಬಲ್ ರೈಡ್ ನಲ್ಲಿ ಬಂದ ಯುವಕರಿಗೆ ಪಿಎಸ್ ಐ ಬುದ್ದಿವಾದ ಹೇಳಿದ ಘಟನೆ ನಡೆದಿದೆ. ತ್ರಿಬಲ್ ರೈಡ್ ಮೂಲಕ ಕಾಲೇಜ್ ಅಡ್ಮಿಷನ್ ಗೆ ಹೊರಟಿದ್ದ ವಿದ್ಯಾರ್ಥಿಗಳನ್ನು ಇಳಕಲ್ ನಗರ ಠಾಣಾ ಮಹಿಳಾ ಪಿಎಸ್‌ಐ ಎಸ್.ಆರ್.ನಾಯಕ್ ಎಂಬವರು ಬಾಲಕನಿಗೆ ದಂಡ ಕಟ್ಟುವಂತೆ ಒತ್ತಾಯಿಸಿದ್ದರು.

ಆದ್ರೆ, ಕಣ್ಣೀರಿಟ್ಟ ಬಾಲಕ, ನನ್ನ ಬಳಿ ಹಣವಿಲ್ಲ ಆದರೆ, ಕಾಲೇಜು ಶುಲ್ಕ ಕಟ್ಟಲೆಂದು ಇಟ್ಟುಕೊಂಡಿರುವ ದುಡ್ಡಿದೆ ಅಷ್ಟೇ. ಅದನ್ನೇ ತಗೆದುಕೊಳ್ಳಿ ಎಂದು ಅಳುತ್ತ ದುಡ್ಡು ಕೊಟ್ಟಿದ್ದಾನೆ.

ಬಾಲಕನ ಹೇಳಿಕೆಯನ್ನು ಪರಿಶೀಲಿಸಿದ ಬಳಿಕ ಮಹಿಳಾ ಪಿಎಸ್‌ಐ ಅಪ್ಪಿಕೊಂಡು ಸಾಂತ್ವನ ತಿಳಿಸಿ, ತಮ್ಮ ಬಳಿಯಿದ್ದ ದಂಡದ ಹಣವನ್ನು ವಾಪಸ್ ಕೊಟ್ಟು, ಧೈರ್ಯ ತುಂಬಿದ್ದಾರೆ. ಪೋಷಕರು ಮಕ್ಕಳಿಗೆ ಬೈಕ್, ಸ್ಕೂಟರ್ ಕೊಡುವ ಮುನ್ನ ಹತ್ತು ಬಾರಿ ಎಚ್ಚರ ವಹಿಸಿ ಎಂದು ಮಹಿಳಾ ಪಿಎಸ್‌ಐ ಹೇಳಿದ್ದಾರೆ.

 Share: | | | | |


ಪುತ್ತೂರು ನಗರಸಭೆ ಉಪಚುನಾವಣೆ : ವಾರ್ಡ್-11 ರಲ್ಲಿ ಬಿಜೆಪಿ ಮನೆ ಮನೆ ಭೇಟಿ

Posted by Vidyamaana on 2023-12-18 22:10:56 |

Share: | | | | |


ಪುತ್ತೂರು ನಗರಸಭೆ ಉಪಚುನಾವಣೆ : ವಾರ್ಡ್-11 ರಲ್ಲಿ ಬಿಜೆಪಿ ಮನೆ ಮನೆ ಭೇಟಿ

ಪುತ್ತೂರು : ಡಿ.22 ರಂದು ನಡೆಯಲಿರುವ ನಗರಸಭೆ ಉಪಚುನಾವಣೆಗೆ ಸಂಬಂಧಿಸಿ ನೆಲ್ಲಿಕಟ್ಟೆ ವಾರ್ಡ್ 11ರಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ರೈ ಅವರ ಪರವಾಗಿ ಬಿಜೆಪಿಯಿಂದ ಮನೆ ಮನೆ ಭೇಟಿ ಮತಯಾಚನೆ ಆರಂಭಗೊಂಡಿದೆ.ಪುಡಾ ಮಾಜಿ ಅಧ್ಯಕ್ಷ ಎಸ್.ಅಪ್ಪಯ್ಯ ಮಣಿಯಾಣಿ, ಬೂತ್ ಅಧ್ಯಕ್ಷ ಗಣೇಶ್ ಕಾಮತ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಜಯಂತಿ ನಾಯಕ್, ನಗರ ಮಂಡಲದ ಪ್ರಧಾನ ಕಾರ್ಯದರ್ಶಿ ಜಯಶ್ರೀ ಎಸ್. ಶೆಟ್ಟಿ, ನಗರಸಭೆ ನಿಕಟಪೂರ್ವ ಉಪಾಧ್ಯಕ್ಷೆ ವಿದ್ಯಾ ಆರ್ ಗೌರಿ, ಸದಸ್ಯರಾದ ಮಮತಾ ರಂಜನ್, ಪೂರ್ಣಿಮಾ, ಬಿಜೆಪಿ ನಗರ ಯುವ ಮೋರ್ಚಾ ಅಧ್ಯಕ್ಷ ಸಚಿನ್ ಶೆಣೈ, ಸತೀಶ್ ನ್ಯಾಕ್ ಪರ್ಲಡ್ಕ, ರೋಹಿತ್ ನೆಲ್ಲಿಕಟ್ಟೆ, ಆರ್ಯಾವು ಗ್ರಾ.ಪಂ ಅಧ್ಯಕ್ಷೆ ಗೀತಾ, ನೆಲ್ಲಿಕಟ್ಟೆ ನಿವಾಸಿಗಳಾದ ಗೌತಮ್, ಉಲ್ಲಾಸ್ ಪೈ, ಶೇಖರ್ ಬ್ರಹ್ಮನಗರ, ಅಶೋಕ್ ಬ್ರಹ್ಮನಗರ, ಮೋಹನ್ ಮಡಿವಾಳ, ಸಂಕೇತ್ ಸಹಿತ ಹಲವಾರು ಮಂದಿ ಮನೆಮನೆ ಮತಯಾಚನೆಯಲ್ಲಿ ಭಾಗವಹಿಸಿದ್ದರು.


ವಾರ್ಡ್‌ ವಿವಿಧ ಮನೆಗಳಿಗೆ ತೆರಳಿ ಮತಯಾಚನೆ ಮಾಡಿದರು.


ವಾರ್ಡ್ 11 ರಲ್ಲಿ ಕಾಂಗ್ರೆಸ್ ನಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ರೋಹಿತ್ ನೆಲ್ಲಿಕಟ್ಟೆ ಅವರು ಬಿಜೆಪಿ ಅಭ್ಯರ್ಥಿ ರಮೇಶ್ ರೈ ಅವರ ಪರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ನೆಲ್ಲಿಕಟ್ಟೆ ವಾರ್ಡ್-11 ರಲ್ಲಿ ಕಾಂಗ್ರೆಸ್ ನಿಂದ ಸ್ಪರ್ಧಿಸಲು ಅವಕಾಶ ನೀಡುವಂತೆ ರೋಹಿತ್ ಅವರು ಪಕ್ಷದ ಮುಖಂಡರಿಗೆ ಕೋರಿಕೆ ಸಲ್ಲಿಸಿದ್ದರು. ಆದರೆ ಅವರಿಕೆ ಅವಕಾಶ ದೊರೆಯದೆ ದಾಮೋದರ್ ಭಂಡಾರ್ಕರ್ ಅವರಿಗೆ ಪಕ್ಷ ಅವಕಾಶ ನೀಡಿದೆ. ಇದರಿಂದ ಅಸಮಾಧಾನಗೊಂಡು ರೋಹಿತ್ ಅವರು ಬಿಜೆಪಿ ಅಭ್ಯರ್ಥಿಯ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಕಡಬ: ಇಚ್ಚಂಪಾಡಿಯಲ್ಲಿ ಕಾಡಾನೆ ದಾಳಿ:ಗಂಭೀರ ಗಾಯಗೊಂಡು ಬಿಜು ಕುಮಾರ್ ಆಸ್ಪತ್ರೆಗೆ ದಾಖಲು

Posted by Vidyamaana on 2023-05-28 13:44:56 |

Share: | | | | |


ಕಡಬ: ಇಚ್ಚಂಪಾಡಿಯಲ್ಲಿ ಕಾಡಾನೆ ದಾಳಿ:ಗಂಭೀರ ಗಾಯಗೊಂಡು ಬಿಜು ಕುಮಾರ್ ಆಸ್ಪತ್ರೆಗೆ ದಾಖಲು

ಕಡಬ : ಕಾಡಾನೆ ದಾಳಿಗೆ ಇಬ್ಬರು ಮೃತಪಟ್ಟ ಘಟನೆ ಬೆನ್ನಿಗೇ ಮತ್ತೆ ಕಾಡಾನೆ ದಾಳಿ ನಡೆದಿದೆ. ಆದರೆ ವ್ಯಕ್ತಿ ಪವಾಡಸದೃಶ ಪಾರಾಗಿದ್ದು, ಗಂಭೀರ ಗಾಯಗೊಂಡಿದ್ದಾರೆ

ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ಮೇ 28ರಂದು ಮಧ್ಯಾಹ್ನ ನಡೆದಿದೆ.

ಇಚ್ಲಂಪಾಡಿ ನಿವಾಸಿ ವಿಜುಕುಮಾರ್ ಕಾಡಾನೆ ದಾಳಿಯಿಂದ ಗಾಯಗೊಂಡವರು. ಇವರು ಮಧ್ಯಾಹ್ನ ಕೆಲಸಕ್ಕೆ ಹೋಗುತ್ತಿದ್ದ ವೇಳೆ ಇಚ್ಲಂಪಾಡಿ ಗ್ರಾಮದ ನಡುಮನೆ ಕ್ರಾಸ್ ಬಳಿ ಕಾಡಾನೆ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಗಂಭೀರ ಗಾಯಗೊಂಡಿರುವ ವಿಜುಕುಮಾರ್ ಅವರಿಗೆ ಕಡಬದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಪುತ್ತೂರು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಈ ಪ್ರದೇಶದಲ್ಲಿ ಎರಡು ಕಾಡಾನೆಗಳು ಬೀಡು ಬಿಟ್ಟಿವೆ ಎಂದು ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆ ಮೃತ್ಯು.

Posted by Vidyamaana on 2023-04-28 06:46:59 |

Share: | | | | |


ಕೊಕ್ಕಡ: ತಲೆಗೆ ಮರಬಿದ್ದು  ಮಹಿಳೆ ಮೃತ್ಯು.


ಕೊಕ್ಕಡ:ಮರ ಕಡಿಯುತ್ತಿದ್ದ ವೇಳೆ ಮಹಿಳೆಯೊರ್ವರ ತಲೆಗೆ ಆಕಸ್ಮಿಕವಾಗಿ ಮರ ಬಿದ್ದು ಸ್ಥಳದಲ್ಲಿಯೇ ಸಾವಿಗೀಡಾದ  ಘಟನೆ ಕೊಕ್ಕಡದಲ್ಲಿ ಇಂದು ಎ. 28 ರಂದು ನಡೆದಿದೆ.

ಕೊಕ್ಕಡ ಗ್ರಾಮದ ಹಲ್ಲೀಂಗೇರಿ ನಿವಾಸಿ ಗಾಯತ್ರಿ (55 ವ) ಎಂದು ಗುರುತಿಸಲಾಗಿದೆ.

ಹಲ್ಲೀಂಗೇರಿ ಕ್ವಾಟ್ರಸ್ ಬಳಿ ಮರವೊಂದರ ಗೆಲ್ಲುಗಳನ್ನು ತೆಗೆಯುವ ವೇಳೆ ಈ ದುರಂತ ನಡೆದಿದೆ.

ಧರ್ಮಸ್ಥಳ ಠಾಣೆಗೆ ದೂರು ನೀಡಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರಿದ್ದಾರೆ.

ಅಡ್ಡಾದಿಡ್ಡಿ ವಾಹನ ನಿಲ್ಲಿಸುವ ಸವಾರರೇ ಎಚ್ಚರಿಕೆ!!!

Posted by Vidyamaana on 2023-08-22 16:09:29 |

Share: | | | | |


ಅಡ್ಡಾದಿಡ್ಡಿ ವಾಹನ ನಿಲ್ಲಿಸುವ ಸವಾರರೇ ಎಚ್ಚರಿಕೆ!!!

ಪುತ್ತೂರು: ಪೇಟೆಯಲ್ಲಿ ವಾಹನ ದಟ್ಟಣೆ ಕೈಮೀರಿ ಹೋಗಲು ಒಂದು ಕಾರಣ ಅಡ್ಡಾದಿಡ್ಡಿ ವಾಹನ ನಿಲ್ಲಿಸುವುದೂ. ಇದನ್ನು ನಿಯಂತ್ರಿಸುವಲ್ಲಿ ಟ್ರಾಫಿಕ್ ಪೊಲೀಸರು ಬಿಗು ನಿಲುವು ಕೈಗೊಂಡಿದ್ದು, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಆಸುಪಾಸು ಕೆಲ ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಬಸ್ ನಿಲ್ದಾಣ ಮುಂಭಾಗದ ಖಾಸಗಿ ಕಟ್ಟಡದ ಎದುರು ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ ಮಾಡುತ್ತಿದ್ದರು. ಇದು ದೊಡ್ಡ ತಲೆನೋವಾಗಿದ್ದು, ದಿನನಿತ್ಯ ಸಂಚಾರ ದಟ್ಟಣೆ ಉದ್ಭವವಾಗುತ್ತಿತ್ತು. ಇದಕ್ಕೆ ಪರಿಹಾರವಾಗಿ, ದ್ವಿಚಕ್ರ ವಾಹನ ನಿಲ್ದಾಣ ಹಾಗೂ ಆಟೋ ರಿಕ್ಷಾಗಳಿಗೆ ಪ್ರತ್ಯೇಕ ಸ್ಥಳವನ್ನು ಪಾರ್ಕಿಂಗಿಗಾಗಿ ನಿಗದಿ ಮಾಡಲಾಗಿದೆ. ಒಂದು ವೇಳೆ ಸಾರ್ವಜನಿಕರು ಇದರಿಂದ ಹೊರಭಾಗದಲ್ಲಿ‌ ತಮ್ಮ ವಾಹನಗಳನ್ನು‌ ಪಾರ್ಕಿಂಗ್ ಮಾಡಿದ್ದೇ ಆದರೆ, ಸಂಚಾರ ಪೊಲೀಸರು ಕ್ರಮ ಕೈಗೊಳ್ಳುವುದು ನಿಶ್ಚಿತ.

ಇದೇ ರೀತಿ ಗಾಂಧೀ ಕಟ್ಟೆ, ನಗರಸಭೆಯ ವಾಣಿಜ್ಯ ಸಂಕೀರ್ಣ ಮೊದಲಾದ ಕಡೆಗಳಲ್ಲೂ ಸುಧಾರಣಾ ಕ್ರಮಗಳನ್ನು ಅಳವಡಿಸಿದ್ದಾರೆ. ಸೂಕ್ತ ಯಲ್ಲೋ ಮಾರ್ಕ್ ಮಾಡಿದ್ದಾರೆ.

ಟ್ರಾಫಿಕ್ ಪಿ.ಎಸ್.ಐ. ಉದಯರವಿ ನೇತೃತ್ವದ ಪೊಲೀಸರ ತಂಡದ ಈ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ - ಶಶಿಕುಮಾರ್ ವರ್ಗಾವಣೆ

Posted by Vidyamaana on 2023-02-23 11:49:48 |

Share: | | | | |


ಮಂಗಳೂರು ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ - ಶಶಿಕುಮಾರ್ ವರ್ಗಾವಣೆ

ಮಂಗಳೂರು:ಫೆ 23  ಮಂಗಳೂರು ಪೊಲೀಸ್ ಆಯುಕ್ತರಾಗಿದ್ದ ಎನ್. ಶಶಿಕುಮಾರ್ ಅವರನ್ನು ವರ್ಗಾವಣೆ ಮಾಡಲಾಗಿದ್ದು, ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿರುವ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ಪೊಲೀಸ್ ಕಮೀಷನರ್ ಆಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಶಶಿಕುಮಾರ್ ಅವರನ್ನು ರೈಲ್ವೇ ಇಲಾಖೆ ಪೊಲೀಸ್ ಡಿಐಜಿಯಾಗಿ ವರ್ಗಾವಣೆ ಮಾಡಲಾಗಿದ್ದು, ಕುಲದೀಪ್ ಕುಮಾರ್ ಆರ್. ಜೈನ್ ಅವರನ್ನು ಮಂಗಳೂರು ಪೊಲೀಸ್ ಆಯುಕ್ತರಾಗಿ ನಿಯೋಜಿಸಿ ಸರ್ಕಾರ ಆದೇಶಿಸಿದೆ.

ಇರ್ದೆ : ಬಡವರ ಅಕ್ರಮಸಕ್ರಮ ಕಡತ ವಿಲೇವಾರಿಗೂ ಹಣ ಕೇಳುತ್ತಿದ್ದ ಬಿಜೆಪಿಗರು ಇದೇ ಕಾರಣಕ್ಕೆ ನಾನು ಬಿಜೆಪಿ ಬಿಟ್ಟುಬಂದೆ: ಅಶೋಕ್ ರೈ

Posted by Vidyamaana on 2023-04-27 07:12:28 |

Share: | | | | |


ಇರ್ದೆ : ಬಡವರ ಅಕ್ರಮಸಕ್ರಮ ಕಡತ ವಿಲೇವಾರಿಗೂ ಹಣ ಕೇಳುತ್ತಿದ್ದ ಬಿಜೆಪಿಗರು ಇದೇ ಕಾರಣಕ್ಕೆ ನಾನು ಬಿಜೆಪಿ ಬಿಟ್ಟುಬಂದೆ: ಅಶೋಕ್ ರೈ

ಪುತ್ತೂರು: ನಾನು ಹಣಮಾಡಬೇಕು ಎಂಬ ಉದ್ದೇಶಕ್ಕೆ ರಾಜಕೀಯಕ್ಕೆ ಬಂದಿಲ್ಲ, ನನಗೆ ರಾಜಕೀಯಕ್ಕೆ ಬಂದು ಹಣ ಮಾಡಬೇಕೆಂಬ ಆಸೆಯೂ ಇಲ್ಲ. ನಾನು ಕಳೆದ ೨೨ ವರ್ಷಗಳಿಂದ ಮಾಡಿದ ಸಮಾಜ ಸೇವೆ ಸಾರ್ಥಕವಾಗಿದೆ ಎಂಬ ಸಂಥೋಷ ನನಗಿದೆ. ಅಭಿಮಾನಿಗಳು ಮತ್ತು ಕಾರ್ಯಕರ್ತರ ಅಭಿಮಾನಕ್ಕೆ ನಾನು ಚಿರಋಣಿಯಾಗಿದ್ದೇನೆ ಎಂದೆಂದಿಗೂ ನಿಮ್ಮ ಜೊತೆಯೇ ಇರುವೆ, ನಿಮ್ಮ ನೋವು ನಲಿವುಗಳಿಗೆ ಸದಾ ಸ್ಪಂದಿಸುವೆ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್‌ಕುಮಾರ್ ಸಭೆಯಲ್ಲಿ ನೆರೆದ ನೂರಾರು ಮಂಧಿ ಕಾರ್ಯಕರ್ತರಿಗೆ ನೀಡಿದ ವಾಗ್ದಾನದ ಮಾತುಗಳು, ಈ ಮಾತುಗಳನ್ನಾಡುವ ವೇಳೆ ರೈಗಳು ಸ್ವಲ್ಪ ಹೊತ್ತು ಗದ್ದಧಿತರಾದರು.

Recent News


Leave a Comment: