ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಾಯಘಾತದಿಂದ ನಿಧನ

ಸುದ್ದಿಗಳು News

Posted by vidyamaana on 2024-07-05 17:20:19 |

Share: | | | | |


ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಾಯಘಾತದಿಂದ ನಿಧನ

ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದರಾಗಿದ್ದಂತ ಕುಂಬ್ಳೆ ಶ್ರೀಧರ ರಾವ್ ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದಾಗಿ ತಿಳಿದು ಬಂದಿದೆ.

ಇಂದು ನೆಕ್ಕಿಲಾಡಿ ಗ್ರಾಮದ ಶಾಂತಿನಗರದ ಸಮೀಪದಲ್ಲಿನ ಬೇರಿಕೆ ನಿವಾಸಿಯಾಗಿದ್ದಂತ ಶ್ರೀಧರ ರಾವ್ ಅವರಿಗೆ ಇಂದು ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು.

ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದ್ರೇ ಚಿಕಿತ್ಸೆ ಫಲಿಸದೇ ಅವರು ಇಂದು ನಿಧನರಾಗಿದ್ದಾರೆ.

ಮೃತರು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಪತ್ನಿ ಸುಲೋಚನಾ, ಪುತ್ರರಾದ ಬೆಂಗಳೂರಿನಲ್ಲಿ ಪತ್ರಕರ್ತರಾಗಿರುವ ಗಣೇಶ್ ಪ್ರಸಾದ್, ಕೃಷ್ಣಪ್ರಸಾದ್ ಮತ್ತು ದೇವಿಪ್ರಸಾದ್, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

 Share: | | | | |


ಅನುಮತಿ ಪಡೆಯದೆ ಭರ್ತಿ ಮಾಡಿದ ಹುದ್ದೆಗಳಿಗೆ ವೇತನ ಇಲ್ಲ: ಸರ್ಕಾರ ನಿರ್ಧಾರ

Posted by Vidyamaana on 2024-01-05 15:03:39 |

Share: | | | | |


ಅನುಮತಿ ಪಡೆಯದೆ ಭರ್ತಿ ಮಾಡಿದ ಹುದ್ದೆಗಳಿಗೆ ವೇತನ ಇಲ್ಲ: ಸರ್ಕಾರ ನಿರ್ಧಾರ

ಬೆಂಗಳೂರು : ಆರ್ಥಿಕ ಇಲಾಖೆಯ ಅನುಮತಿ ಪಡೆದುಕೊಳ್ಳದೆ ರಾಜ್ಯದಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಭರ್ತಿ ಮಾಡಿರುವ ಹುದ್ದೆಗಳಿಗೆ ವೇತನಾನುದಾನ ನೀಡದಿರಲು ಸರ್ಕಾರ ನಿರ್ಧರಿಸಿದೆ.ರಾಜ್ಯದಲ್ಲಿ 41 ಸರ್ಕಾರಿ ವಿವಿಗಳಿದ್ದು, ಕೆಲವು ವಿವಿಗಳ ಕುಲಪತಿಗಳು ಹಣಕಾಸು ಇಲಾಖೆಯಿಂದ ಅನುಮೋದನೆ ಪಡೆದುಕೊಳ್ಳದೆ ತಮ್ಮ ನಿವೃತ್ತಿ ಅವಧಿಯ ಕೊನೆ ಕ್ಷಣದಲ್ಲಿ ಭರ್ತಿ ಮಾಡಿದ ಪ್ರಕರಣಗಳಿವೆ.ಆರ್ಥಿಕ ಇಲಾಖೆ ಈ ಮೊದಲೇ ಎಚ್ಚರಿಕೆ ನೀಡಿದ್ದರೂ ನೇಮಕಾತಿ ಮಾಡಿಕೊಳ್ಳಲಾಗಿದೆ.


ಅನುಮತಿ ಪಡೆದುಕೊಳ್ಳದೆ ಭರ್ತಿ ಮಾಡಿದ ಹುದ್ದೆಗಳನ್ನು ಮಂಜೂರಾದ ಹುದ್ದೆಗಳೆಂದು ಪರಿಗಣಿಸಲಾಗುವುದಿಲ್ಲ. ಈ ಹುದ್ದೆಗಳ ಭರ್ತಿಗೆ ಸಹಮತ ನೀಡುವುದಿಲ್ಲವೆಂದು ಆರ್ಥಿಕ ಇಲಾಖೆಯಿಂದ ವಿವಿಗಳಿಗೆ ಸೂಚನೆ ನೀಡಲಾಗಿದೆ. ಈ ಹುದ್ದೆಗಳಿಗೆ ವಿವಿಯ ಆರ್ಥಿಕ ಸಂಪನ್ಮೂಲದಿಂದ ಮಾತ್ರ ವೇತನ ನೀಡಬೇಕಾಗುತ್ತದೆ. ಆರ್ಥಿಕ ಇಲಾಖೆ ನೀಡುವ ವೇತನಾನುನುದಾನ ಬಳಕೆ ಸಾಧ್ಯವಿರುವುದಿಲ್ಲ.


ಆರ್ಥಿಕ ಇಲಾಖೆ ಅನುಮತಿ ಪಡೆದುಕೊಳ್ಳದೆ ಭರ್ತಿ ಮಾಡಿದ ಹುದ್ದೆಗಳಿಗೆ ವೇತನಾನುದಾನ ನೀಡಲು ವಿವಿಗಳು ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿದ ಆರ್ಥಿಕ ಇಲಾಖೆ ಪರಿಶೀಲಿಸಿದಾಗ ಅನುಮತಿ ಪಡೆದುಕೊಳ್ಳದೆ ನೇಮಕಾತಿ ನಡೆಸಿರುವುದು ಕಂಡುಬಂದಿದೆ.ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿರುವ ಎಲ್ಲಾ ಸಾಮಾನ್ಯ ವಿವಿ, ವೈದ್ಯಕೀಯ ವಿವಿ, ಕೃಷಿ ವಿವಿಗಳು ಆಡಳಿತ ಮಂಡಳಿಯ ಅನುಮೋದನೆ ಪಡೆದು ತಮ್ಮ ಹಂತದಲ್ಲಿ ಅನುಮೋದನೆ ಪಡೆದುಕೊಂಡ ಹುದ್ದೆಗಳ ವಿವರ, ಸರ್ಕಾರದ ಆದೇಶ ನೀಡಿರುವ ಕುರಿತಾದ ಮಾಹಿತಿ ಸಲ್ಲಿಸುವಂತೆ ಸೂಚಿಸಲಾಗಿದೆ.

ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಎಸ್.ಡಿ.ಎಮ್ ನ ವಿದ್ಯಾರ್ಥಿ ಚಂದ್ರಿಕಾ ಅಯ್ಕೆ

Posted by Vidyamaana on 2023-12-24 16:34:55 |

Share: | | | | |


ಬೆಳ್ತಂಗಡಿ : ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಟಕ್ಕೆ ಎಸ್.ಡಿ.ಎಮ್ ನ ವಿದ್ಯಾರ್ಥಿ ಚಂದ್ರಿಕಾ ಅಯ್ಕೆ

ಬೆಳ್ತಂಗಡಿ : 2023-24 ಸಾಲಿನ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿಧಿಸಿ ರಾಷ್ಟ್ರಮಟ್ಟದ ಕ್ಯಾಲಿಕಟ್ ನಲ್ಲಿ ಡಿ.28 ರಂದು ನಡೆಯುತ್ತಿರುವ ಸೌತ್‌ ಜೋನ್ ಫುಟ್ಬಾಲ್ ಪಂದ್ಯಾಟಕ್ಕೆ ಉಜಿರೆ ಎಸ್.ಡಿ.ಎಮ್ ಕಾಲೇಜಿನ ದ್ವಿತೀಯ ಬಿ.ಕಾಂ. ವಿದ್ಯಾರ್ಥಿನಿ ಚಂದ್ರಿಕಾ (20) ಆಯ್ಕೆಯಾಗಿದ್ದಾರೆ. 

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಅಂಕಾಜೆ ದಿ.ಮೋಹನ್ ಮತ್ತು ಯಶೋಧ ದಂಪತಿಗಳ ಮೊದಲ ಪುತ್ರಿ ಚಂದ್ರಿಕಾ‌ ಹಲವು ಕ್ರೀಡಾಕುಟದಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದುಕೊಂಡಿದ್ದಾರೆ.


ಇವರು 2022-23 ಸಾಲಿನ ಕೇರಳ ಕೊಚ್ಚಿಯಲ್ಲಿ ನಡೆದ ಹ್ಯಾಂಡ್ವಾಲ್ ಪಂದ್ಯಾಟದಲ್ಲಿ ಮಂಗಳೂರು ಯೂನಿವರ್ಸಿಟಿ ತಂಡವನ್ನು ಪ್ರತಿನಿಧಿಸಿ ಸೌತ್‌ ಜೋನ್‌ ಆಡಿದ್ದಾರೆ‌.2022-23 ಸಾಲಿನ ಬೆಂಗಳೂರಿನಲ್ಲಿ ನಡೆದ ಅಮೇಚೂರ್ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾಳೆ.2022-23ಸಾಲಿನ ಉಡುಪಿಯಲ್ಲಿ ನಡೆದ ಮಂಗಳೂರು ಯೂನಿವರ್ಸಿಟಿ ಗೇಮ್ ನಲ್ಲಿ  400 ಮೀಟರ್ hardals ನಲ್ಲಿ ದ್ವಿತೀಯ ಸ್ಥಾನ ಮತ್ತು 4.400 ಮೀಟರಿನಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.2022-23 ಸಾಲಿನಲ್ಲಿ ಮೈಸೂರು ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಾರೆ.2023-24ಸಾಲಿನಲ್ಲಿ ನಡೆದ ಮಂಗಳೂರುನಲ್ಲಿ ನಡೆದ  ರಾಜ್ಯ ಮಟ್ಟದ ಅಮೇಚುರ್ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಾರೆ.2023-24 ಸಾಲಿನಲ್ಲಿ  ಮಂಗಳೂರಿನಲ್ಲಿ ನಡೆದ ಮಂಗಳೂರು ಯೂನಿವರ್ಸಿಟಿ  ರೇಸಿಂಗ್ ಭಾಗವಹಿಸಿ ದ್ವಿತೀಯ ಸ್ಥಾನ ಪಡೆದಿದ್ದಾಳೆ.

ಮಾಣಿ ಟು ಸಂಪಾಜೆ ಶೀಘ್ರವೇ ಫೋರ್ ವೇ

Posted by Vidyamaana on 2023-11-04 08:34:52 |

Share: | | | | |


ಮಾಣಿ ಟು ಸಂಪಾಜೆ ಶೀಘ್ರವೇ ಫೋರ್ ವೇ

ಪುತ್ತೂರು: ಮಾಣಿ-ಸಂಪಾಜೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ೨೨೦೦ ಕೋಟಿ ರೂ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಮುಂದಿನ ನಾಲ್ಕು ವರ್ಷದೊಳಗೆ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲಿದ್ದು ಈ ಭಾಗದ ಜನತೆಯ ಬಹುವರ್ಷಗಳ ಕನಸು ನನಸಾಗುವ ಕಾಲ ಬಂದಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.

ಮಾಣಿಯಿಂದ ಸಂಪಾಜೆ ತನಕ ೭೬ ಕಿ ಮೀ ರಸ್ತೆಯು ಮುಂದಿನ ದಿನಗಳಲ್ಲಿ ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಲಿದೆ. ೭೬ ಕಿ ಮಿ ರಸ್ತೆ ಕಾಮಗಾರಿಗೆ ಮೊದಲ ಹಂತದಲ್ಲಿ ೧೧೦೦ ಕೋಟಿ ರೂ ಮತ್ತು ಎರಡನೇ ಹಂತದಲ್ಲಿ ೧೧೦೦ ಕೋಟಿ ರೂ ಒಟ್ಟು ೨೨೦೦ ಕೋಟಿ ರೂ ಗಳ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ.

ಕಳೇದ ಕೆಲದಿನಗಳ ಹಿಂದೆ ಚತುಷ್ಪಥ ರಸ್ತೆ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಜೊತೆ ಶಾಸಕರಾದ ಅಶೋಕ್ ರೈ ಹಾಗೂ ಮಂಗಳೂರು ಸಂಸದ ನಳಿನ್‌ಕುಮಾರ್ ಕಟೀಲ್ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ ಮಾಣಿಯಿಂದ ಪುತ್ತೂರು ವರೆಗೆ ಚತುಷ್ಪಥ ರಸ್ತೆ ಕಾಮಗಾರಿಯ ವಿಚಾರವೂ ಚರ್ಚೆಯಾಗಿತ್ತು. ಆ ಬಳಿಕ ಕೇಂದ್ರ ಹೆದ್ದಾರಿ ಪ್ರಾಧಿಕಾರ ರೀಜನಲ್ ಮೆನೆಜರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಶಾಸಕರು ಮತ್ತು ಸಂಸದರು ಚರ್ಚೆ ನಡೆಸಿದ್ದರು. ಇದೀಗ ಮಾಣಿಯಿಂದ ಸಂಪಾಜೆ ತನಕ ಚತುಷ್ಪಥ ಕಾಮಗಾರಿಗೆ ಹೆದ್ದಾರಿ ಪ್ರಾಧಿಕಾರ ಒಪ್ಪಿಕೊಂಡಿದ್ದು ಇದಕ್ಕೆ ಬೇಕಾದ ಎಲ್ಲಾ ಯೋಜನಾ ವರದಿಯನ್ನು ಸಿದ್ದಪಡಿಸಿಕೊಳ್ಳಲು ಮುಂದಾಗಿದೆ.

ಮಾಣಿಯಿಂದ ಸಂಪಾಜೆ ತನಕ ಭೂ ಒತ್ತುವರಿ ಪ್ರಕ್ರಿಯೆ, ಸೇತುವೆ ಕಾಮಗಾರಿ ಸೇರಿದಂತೆ ರಸ್ತೆ ಅಗಲೀಕರಣಕ್ಕೆ ಬೇಕಾದ ಎಲ್ಲಾ ಯೋಜನೆಗಳನ್ನು ಸಿದ್ದಪಡಿಸಲಾಗುತ್ತಿದ್ದು ಮುಂದಿನ ನಾಲ್ಕು ತಿಂಗಳೊಳಗೆ ಈ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಳ್ಳಲಿದೆ. ಬಳಿಕ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು ಮುಂದಿನ ನಾಲ್ಕು ವರ್ಷದೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲಿದ್ದು ಮಾಣಿಯಿಂದ ಸಂಪಾಜೆ ತನಕ ಪೂರ್ಣ ಪ್ರಮಾಣದ ಚತುಷ್ಪಥ ರಸ್ತೆ ನಿರ್ಮಾಣವಾಗಲಿದೆ.


೨ ಫೈಓವರ್ ೧ ಅಂಡರ್‌ಪಾಸ್

ಬೈಪಾಸ್ ಹಾಗೂ ದರ್ಬೆಯ ಬಳಿ ಫ್ಲೈ ಓವರ್ ನಿರ್ಮಾಣವಾಗಲಿದೆ ಮತ್ತು ವಿವೇಕಾನಂದ ವಿದ್ಯಾ ಸಂಸ್ಥೆಯ ಬಳಿ ಅಂಡರ್‌ಪಾಸ್ ನಿರ್ಮಾಣವಾಗಲಿದೆ. ವಿದ್ಯಾರ್ಥಿಗಳ ಹಿತ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಅಂಡರ್‌ಪಾಸ್ ನಿರ್ಮಾಣ ಮಾಡಲಾಗುತ್ತದೆ. ಉಳಿದಂತೆ ಮಾಣಿಯಿಂದ ಸಂಪಾಜೆ ತನಕ ಅಗತ್ಯ ಇರುವ ಕಡೆಗಳಲ್ಲಿ ಫ್ಲೈ ಓವರ್ ಮತ್ತು ಅಂಡರ್ ಪಾಸ್ ಕಾಮಗಾರಿ ನಡೆಯಲಿದೆ.


ಕಿ ಮೀ ಕಡಿತವಾಗಲಿದೆ

ಮಾಣಿಯಿಂದ ಸಂಪಾಜೆ ತನಕ ಚತುಷ್ಪಥ ರಸ್ತೆ ನಿರ್ಮಾಣವಾದಲ್ಲಿ ರಸ್ತೆಯು ನೇರವಾಗಿ ನಿರ್ಮಾಣವಾಗಲಿರುವ ಕಾರಣ ಕಿ ಮಿ ಅಂತರವೂ ಕಡಿಮೆಯಾಗುವ ಸಾಧ್ಯತೆ ಇದೆ.



ಶಾಸಕನಾಗಿ ಆಯ್ಕೆಯಾದ ಮೊದಲ ದಿನದಂದೇ ಚತುಷ್ಪಥ ರಸ್ತೆಯ ಕನಸು ಕಂಡಿದ್ದೆ. ಆ ಬಳಿಕ ನಾನು ಅದರ ಬಗ್ಗೆ ಮಾಹಿತಿ ಕಲೆ ಹಾಕಲು ಹೆದ್ದಾರಿ ಪ್ರಾಧಿಕಾರದ ದೆಹಲಿ ಮತ್ತು ಬೆಂಗಳೂರು ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಚರ್ಚಿಸಿದ್ದೆ. ಇದೀಗ ನಾನು ಮತ್ತು ಸಂಸದ ನಳಿನ್‌ಕುಮಾರ್ ಕಟೀಲ್ ಕಾಮಗಾರಿಗೆ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಿದ್ದೇವೆ. ಪ್ರಸ್ತಾವನೆಗೆ ಕೇಂದ್ರದ ಒಪ್ಪಿಗೆ ದೊರಕಿದ್ದು ಮುಂದೆ ಯೋಜನಾ ವರದಿ ಸಿದ್ದಗೊಂಡ ಬಳಿಕ ಕಾಮಗಾರಿ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಒಟ್ಟು ಎರಡು ಹಂತದಲ್ಲಿ ೨೨೦೦ ಕೋಟಿ ರೂ ಅನುದಾನಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗಿದ್ದು ಸುಮಾರು ೩೦೦೦ ಕೋಟಿ ರೂ ವೆಚ್ಚದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ. ಅಭಿವೃದ್ದಿಗಾಗಿ ನಾನು ಮತ್ತು ನಳಿನ್‌ಕುಮಾರ್ ಕಟೀಲ್ ಜೊತೆಯಾಗಿ ಈ ವಿಚಾರದಲ್ಲಿ ಕೆಲಸ ಮಾಡಿದ್ದೇವೆ . ಅಭಿವೃದ್ದಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಜನತೆಯ ಬಹುವರ್ಷಗಳ ಕನಸು ಮತ್ತು ನನ್ನ ಕನಸು ನನಸಾಗಿದ್ದು ಇದು ಬಹಳ ಸಂತೋಷದ ವಿಚಾರವಾಗಿದೆ


ಅಶೋಕ್ ರೈ, ಶಾಸಕರು ಪುತ್ತೂರು

ನಮ್ಮ ಮೆಟ್ರೋಗೆ ಬಲಿಯಾದ ಯುವಕ ಯಾರು?

Posted by Vidyamaana on 2024-03-21 20:21:00 |

Share: | | | | |


ನಮ್ಮ ಮೆಟ್ರೋಗೆ ಬಲಿಯಾದ ಯುವಕ ಯಾರು?

ಬೆಂಗಳೂರು, (ಮಾರ್ಚ್ 21): ಇತ್ತೀಚೆಗೆ ನಮ್ಮ ಮೆಟ್ರೋ (Namma Metro )ಒಂದಲ್ಲಾ ಒಂದು ವಿಚಾರಕ್ಕೆ ಸುದ್ದಿಯಾಗುತ್ತಿದೆ. ಈ ಹಿಂದೆ ಮೆಟ್ರೋ ಹಳಿಗೆ ಹಾರಿದ ಪ್ರಕರಣಗಳು ನಡೆದಿದ್ದವು. ಆದ್ರೆ, ಯಾವುದೇ ಸಾವು-ನೋವು ಸಂಭವಿಸಿರಲಿಲ್ಲ. ಆದ್ರೆ, ಇಂದು (ಮಾರ್ಚ್ .21) ಮಧ್ಯಾಹ್ನ 2:10ರ ಸುಮಾರಿಗೆ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ (Athiguppe Metro) ರೈಲು ಬರುವಾಗ ಯುವಕ ಹಳಿಗೆ ಜಿಗಿದಿದ್ದಾನೆ. ಪರಿಣಾಮ ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಿಂದ ಸುಮಾರು ಎಂಟು ಅಡಿ ದೂರದಲ್ಲಿ ಯುವಕನ ದೇಹವನ್ನು ರೈಲು ಎಳೆದೊಯ್ದಿದೆ. ಇದರಿಂದ ಯುವಕನ ದೇಹ ಎರಡು ತುಂಡಾಗಿದೆ. ಸದ್ಯ ಯುವಕನ ಮೃತದೇಹವನ್ನು ಹೊರಗೆ ತೆಗೆದು ವಿಕ್ಟೋರಿಯ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡ ಯುವಕನನನ್ನು ಧ್ರುವ್ ಟಕ್ಕರ್ ಎಂದು ಗುರುತಿಸಲಾಗಿದ್ದು, ಆತನ ಕುಟುಂಬಕ್ಕೆ ಮತ್ತು ಕಾಲೇಜಿಗೆ ಪೊಲೀಸರು ಮಾಹಿತಿ ನೀಡಿದ್ದಾರೆ.ಮಟ್ರೋ ರೈಲು ಬರುವ ಹಲವು ನಿಮಿಷಗಳ ಕಾಲ ಮೊದಲೇ ಧ್ರುವ್ ಟಕ್ಕರ್ ಅತ್ತಿಗುಪ್ಪೆ ನಿಲ್ದಾಣಕ್ಕೆ ಬಂದಿದ್ದ. ನಂತರ ನಿಲ್ದಾಣದ ಬಲ ಭಾಗದ ತುದಿಗೆ ಹೋಗಿ ನಿಂತಿದ್ದ. ಧ್ರುವ್ ಟಕ್ಕರ್ ಜೊತೆಗೆ ಒರ್ವ ಯುವತಿ ಹಾಗೂ ಮತ್ತೊರ್ವ ಯುವಕ ಇದ್ದ. ಹಾಗೇ ಮೂವರು ಮಾತನಾಡುತ್ತಾ ಮಾತನಾಡುತ್ತಾ ನಿಂತಿದ್ದರು. ನಂತರ ರೈಲು ಬರುವ ಸಮಯದಲ್ಲಿ . ಧ್ರುವ್ ಟ್ರಾಕ್ ಮೇಲೆ ಹಾರಿದ್ದಾನೆ. ಜೊತೆಗಿದ್ದವರು ಎಳೆದುಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಆದ್ರೆ ರೈಲು ಹತ್ತಿರ ಬಂದಾಗ ಸ್ಥಳದಿಂದ ಓಡಿ ಹೋಗಿದ್ದಾರೆ. ಪರಿಣಾಮ ರೈಲು ಸ್ವಲ್ಪ ದೂರ ಎಳೆದೊಯ್ದಿದ್ದು, ರುಂಡ-ಮುಂಡ ಬೇರೆ-ಬೇರೆಯಾಗಿದೆ. ರೈಲಿನ ಕೆಳಗೆ ಸಿಲುಕಿದ್ದ ಮೃತದೇಹವನ್ನು ಹೊರಗೆ ತೆಗೆದು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.ಡಿಸಿಪಿ ಎಸ್‌.ಗಿರೀಶ್‌ ಹೇಳಿದ್ದಿಷ್ಟು

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಎಸ್‌.ಗಿರೀಶ್‌ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದರು. ಈ ವೇಳೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, 19 ರಿಂದ 20 ವರ್ಷದ ಹುಡುಗನ ಸಾವಾಗಿದೆ. ಮೃತ ಧ್ರುವ್ ಟಕ್ಕರ್ ಮಹಾರಾಷ್ಟ್ರದ ಮುಂಬೈ ಮೂಲದವನು. ಈತ ನ್ಯಾಷನಲ್ ಲಾ ಕಾಲೇಜ್ ಫಸ್ಟ್ ಇಯರ್ ವಿದ್ಯಾರ್ಥಿ ಎಂದು ಮಾಹಿತಿ ನೀಡಿದರು.

ಸದ್ಯ ವಿದ್ಯಾರ್ಥಿ ಸಾವಿನ ಬಗ್ಗೆ ಕಾಲೇಜು ಮತ್ತು ಆತನ ಕುಟುಂಬಕ್ಕೆ ಪೊಲೀಸರು ಮಾಹಿತಿ ರವಾನಿಸಿದ್ದು, ಧ್ರುವ್ ಟಕ್ಕರ್ ಏಕೆ ಆತ್ಮಹತ್ಯೆ ಮಾಡಿಕೊಂಡ? ಆತ್ಮಹತ್ಯೆಗೆ ಕಾರಣವೇನು? ಎನ್ನುವುದರ ಬಗ್ಗೆ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇನ್ನು ಸ್ಥಗಿತಗೊಂಡಿದ್ದ ಮೆಟ್ರೋ ಸಂಚಾರ ಮತ್ತೆ ಪುನಾರಂಭವಾಗಿದೆ.

ಗವರ್ನಮೆಂಟ್ ಸ್ಕೀಂ - ಬ್ಯಾಂಕ್ ಲೋನ್ ಹೆಸ್ರಲ್ಲಿ ಮಹಾ ದೋಖಾ: ಮಹಿಳೆ ಬಂಧನ

Posted by Vidyamaana on 2023-08-23 04:24:23 |

Share: | | | | |


ಗವರ್ನಮೆಂಟ್ ಸ್ಕೀಂ - ಬ್ಯಾಂಕ್ ಲೋನ್ ಹೆಸ್ರಲ್ಲಿ ಮಹಾ ದೋಖಾ: ಮಹಿಳೆ ಬಂಧನ

ವಿಜಯನಗರ; ಹಲವರು ಯುವಕರನ್ನು ನಂಬಿಸಿ ಮದುವೆಯಾಗಿದ್ದಲ್ಲದೆ, ಅವರಿಂದಲೇ ಹಣ ಪಡೆದು ವಂಚಿಸಿದ್ದ ಮಹಿಳೆಯನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ. ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ವಾಸವಿದ್ದ ತಬಸ್ಸುಮ್ ಎಂಬಾಕೆ ಬಂಧಿತ ಮಹಿಳೆ ಎಂದು ತಿಳಿದುಬಂದಿದೆ.


ಹೊಸಪೇಟೆ ತಾಲೂಕಿನಲ್ಲಿ ಹಣ ದೋಖಾ ಮಾಡಿರುವ ಪ್ರಕರಣದಲ್ಲಿ ಕೋರ್ಟ್ ನಿರ್ದೇಶನದಂತೆ ಹೊಸಪೇಟೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪೊಲೀಸರು ಆರೋಪಿ ಮಹಿಳೆಯ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದು, ಆಗಸ್ಟ್ 19ರಂದು ಉಡುಪಿಯಲ್ಲಿ ವಶಕ್ಕೆ ಪಡೆದಿದ್ದಾರೆ.


ಮದುವೆಯಾಗುವುದು ನಂಬಿಸಿ ಹಣ ಪಡೆಯುವುದು, ಬ್ಯಾಂಕ್ ಲೋನ್ ಮಾಡಿಸುವುದಾಗಿ ಹೇಳಿ ವಂಚಿಸುವುದು, ಸರಕಾರಿ ಕೆಲಸ ತೆಗೆಸಿಕೊಡುತ್ತೇನೆಂದು ಹೇಳಿ ವಂಚನೆ ಮಾಡಿರುವುದು, ಅಲ್ಪಸಂಖ್ಯಾತ ಇಲಾಖೆಯ ಯೋಜನೆಯಡಿ ಆಟೋ, ಆಂಬುಲೆನ್ಸ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದು ಇತ್ಯಾದಿ ಹಲವಾರು ರೀತಿಯ ದೂರುಗಳು ಈಕೆಯ ಮೇಲಿದ್ದು ಪೊಲೀಸರು ಬಂಧಿಸಿದ್ದಾರೆ ಎಂದು ವಿಜಯನಗರ ಎಸ್ಪಿ ಶ್ರೀಹರಿ ಬಾಬು ತಿಳಿಸಿದ್ದಾರೆ. ಈ ಹಿಂದೆ ಉಡುಪಿಯಲ್ಲಿ ಇದೇ ರೀತಿ ಹಲವರಿಗೆ ಮೋಸ ಎಸಗಿದ ಬಗ್ಗೆ ದೂರು ದಾಖಲಾಗಿತ್ತು. ತನಿಖೆ ಮುಂದುವರಿದಿದೆ ಎಂದವರು ತಿಳಿಸಿದ್ದಾರೆ.

ಪುತ್ತೂರು : ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ - ರಸ್ತೆ ತಡೆ

Posted by Vidyamaana on 2024-06-21 11:57:43 |

Share: | | | | |


ಪುತ್ತೂರು : ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ - ರಸ್ತೆ ತಡೆ

ಪುತ್ತೂರು: ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದನ್ನು ಖಂಡಿಸಿ ಪುತ್ತೂರು ಬಿಜೆಪಿಯಿಂದ ಜೂ. ೨೦ರಂದು ಪುತ್ತೂರು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು. ಮೆರವಣಿಗೆಯ ನಡುವೆ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಬಳಿಯ ಗಾಂಧಿಕಟ್ಟೆ ಬಳಿ  ರಸ್ತೆ ತಡೆಯು ನಡೆಯಿತು. ಪೊಲೀಸರು ಬಂದು ಕಾರ್ಯಕರ್ತರನ್ನು ರಸ್ತೆ ತಡೆ ಮಾಡದಂತೆ ಮನವಿ ಮಾಡಿ ರಸ್ತೆಯಲ್ಲಿ ಕುಳಿತ ಕಾರ್ಯಕರ್ತರನ್ನು ಎಬ್ಬಿಸುವ ಪ್ರಯತ್ನ ಮಾಡಿದರು.  ಕೊನೆಗೆ ಪ್ರತಿಭಟನಾಕಾರರು ಕೋರ್ಟ್ ರಸ್ತೆಯ ಮೂಲಕ ತಾಲೂಕು ಆಡಳಿತ ಸೌಧದ ಮುಂದೆ ತಹಸೀಲ್ದಾರ್ ಕಚೇರಿ‌  ಮೂಲಕ ಸರಕಾರಕ್ಕೆ ಉಗ್ರ ಪ್ರತಿಭಟನೆಯ ಎಚ್ಚರಿಕೆಯ ಮನವಿ ಸಲ್ಲಿಸಿದರು.



Recent News


Leave a Comment: