Posted by vidyamaana on 2023-07-10 07:10:00 | Last Updated by Vidyamaana on 2023-09-05 06:51:23
ಪುತ್ತೂರು: “ನೆಟ್ಟೇ ಕಮ್ಮಿ. ನನ ಬರೋಡ್ಚಿ…”
ಹೀಗೆ ಹೇಳಿ ಔಷಧಿ ನೀಡಿದರೆಂದರೆ, ಯಾರದೇ ರೋಗವಾದರೂ ವಾಸಿಯಾಗಲೇಬೇಕು. ಆಸ್ಪತ್ರೆಗೆ ಹೋಗಿ ತಾಸುಗಟ್ಟಲೇ ಕಾಯಬೇಕೆಂದಿಲ್ಲ. ಹೆದರಿಕೆಯಾಗುವ ಬಿಲ್ ಕೂಡ ಇಲ್ಲ. ಯಾರೇ ಬಂದರೂ ಅವರ ನಗುವೇ ದಿವ್ಯೌಷಧ.
ಇದು ಎರಡೇ ಸಾಲಿನಲ್ಲಿ ವಿವರಣೆ ಕೊಡಬಹುದಾದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರ ಪರಿಚಯ. ತನ್ನ 16ನೇ ವಯಸ್ಸಿಗೇ ಡಾ. ಶಿವರಾಮ ಭಟ್ ಅವರ ಜೊತೆಗೆ ಕಾಂಪೌಂಡರ್ ಆಗಿ ಸೇರಿಕೊಂಡ ಅವರು, ಇದುವರೆಗೆ ಸುದೀರ್ಘ 68 ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಹಾರಾಡಿಯಲ್ಲಿ ವಾಸವಾಗಿರುವ ಇವರ ತಂದೆ ಶಂಕರ್ ಭಟ್, ತಾಯಿ ಕಾವೇರಮ್ಮ. ಸರಸ್ವತಿ ಇವರ ಪತ್ನಿ. ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಪುತ್ರ ಕಾರ್ತಿಕ್ ತನ್ನ ಪತ್ನಿ - ಮಗನೊಂದಿಗೆ ಲಂಡನಿನಲ್ಲಿ ವಾಸವಾಗಿದ್ದಾರೆ.
ಇದೀಗ ತನ್ನ 82ನೇ ವಯಸ್ಸಿನಲ್ಲಿ ವಿಶ್ರಾಂತ ಜೀವನಕ್ಕೆ ತೆರಳಿದ್ದಾರೆ. ವಯೋ ಸಹಜ ಸಮಸ್ಯೆಗಳ ಕಾರಣದಿಂದಾಗಿ ಡಾ. ಶಿವರಾಮ ಭಟ್ ಅವರ ಕ್ಲಿನಿಕ್ ಅನ್ನು ಬಂದ್ ಮಾಡಲಾಗಿದೆ ಎಂದು ಕ್ಲಿನಿಕ್ ಮುಂದುಗಡೆ ಬೋರ್ಡ್ ಹಾಕಲಾಗಿದೆ.
ಹಾಗಾಗಿ, ಔಷಧಕ್ಕೆಂದು ಆಗಮಿಸುವ ಜನರು ಬೋರ್ಡ್ ನೋಡಿ, ಹ್ಯಾಪ್ ಮೋರೆ ಹಾಕಿಕೊಂಡು ವಾಪಾಸ್ ಹೋಗುತ್ತಿದ್ದಾರೆ. ದಿನಕ್ಕೆ ಸುಮಾರು 300 ಮಂದಿಯಂತೆ ತಿಂಗಳಿಗೆ 10 ಸಾವಿರದಷ್ಟು ಮಂದಿ ಇವರ ಔಷಧವನ್ನೇ ಅವಲಂಬಿತರಾಗಿದ್ದರು. ಇದೀಗ ಇಷ್ಟು ಮಂದಿ ಬೇರೆ ವೈದ್ಯರ ಮೊರೆ ಹೋಗಲೇಬೇಕಾದ ಅನಿವಾರ್ಯತೆ ಎದುರಾಗಿದೆ.
ಮಳೆಗಾಲ ಆರಂಭವಾಯಿತೆಂದರೆ ಜ್ವರ, ಶೀತ, ಕೆಮ್ಮು ಸಿದ್ಧ. ಇದಕ್ಕೆಲ್ಲಾ ಕಾಂಪೌಂಡರ್ ನೀಡುವ 3 ಹೊತ್ತಿನ ಮದ್ದು ಸಾಕು. ಕಡಿಮೆ ಶುಲ್ಕ ಮಾತ್ರವಲ್ಲ, ಸುಲಭದಲ್ಲಿ ಸಿಗುವ ವೈದ್ಯರು ಎಂಬ ಕಾರಣಕ್ಕೆ ಜನರೂ ಇಲ್ಲಿಗೆ ಆಗಮಿಸುತ್ತಿದ್ದರು. ಇನ್ನು ಮುಂದೆ ಪುತ್ತೂರಿನ ಹೃದಯ ಭಾಗದಲ್ಲಿ ಇದ್ದ ಡಾ. ಶಿವರಾಮ ಭಟ್ ಅವರ ಕ್ಲಿನಿಕಿನಲ್ಲಿ ಕಾಂಪೌಂಡರ್ ಮದ್ದು ನೀಡುವುದಿಲ್ಲ!
ಡಾ. ಶಿವರಾಮ ಭಟ್ ಗುರು:
ಡಾ. ಶಿವರಾಮ ಭಟ್ ಅವರನ್ನೇ ಗುರುವಾಗಿ ನೆಚ್ಚಿಕೊಂಡಿದ್ದ ಕಾಂಪೌಂಡರ್ ಖ್ಯಾತಿಯ ನರಸಿಂಹ ಭಟ್ ಅವರು, ಸುದೀರ್ಘ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಡಾ. ಶಿವರಾಮ ಭಟ್ ಅವರ ನಿಧನದ ನಂತರವೂ ಅವರ ಹೆಸರಿನಲ್ಲೇ ಕ್ಲಿನಿಕ್ ನಡೆಯುತ್ತಿತ್ತು. ಆಗ ಕಾಂಪೌಂಡರ್ ಅವರೇ ಔಷಧ ನೀಡುತ್ತಿದ್ದರು. ಕ್ಲಿನಿಕಿಗೆ ಆಗಮಿಸಿದ ಹೆಚ್ಚಿನ ಜನರಿಗೆ ಇವರೇ ಡಾ. ಶಿವರಾಮ ಭಟ್ ಎಂದು ನಂಬಿದ್ದರು.
ಸರ್ಕಾರಿ ಉದ್ಯೋಗದ ಅವಕಾಶವನ್ನೇ ಕೈಚೆಲ್ಲಿದರು!
ನರಸಿಂಹ ಭಟ್ ಅವರಿಗೆ ಸರ್ಕಾರಿ ಉದ್ಯೋಗದ ಅವಕಾಶವೂ ಕೈಬೀಸಿ ಕರೆಯಿತು. ಆದರೆ ಡಾ. ಶಿವರಾಮ್ ಭಟ್ ಅವರನ್ನೇ ಮಾನಸ ಗುರುವಾಗಿ ಸ್ವೀಕರಿಸಿದ್ದರಿಂದ, ಸರ್ಕಾರಿ ಉದ್ಯೋಗದ ಅವಕಾಶವನ್ನು ಕೈಚೆಲ್ಲಿದರು. ಡಾ. ಶಿವರಾಮ ಭಟ್ ಅವರು ಇರುವವರೆಗೂ ಹಾಗೂ ಅವರು ಇಲ್ಲದ ಬಳಿಕವೂ ತನ್ನ ಗುರುವಿನ ಹೆಸರಿನಲ್ಲಿಯೇ ಔಷಧ ನೀಡಿತ್ತಿದ್ದರು ಎನ್ನುವುದು ಕಾಂಪೌಂಡರ್ ಅವರ ವಿಶೇಷತೆ.
Posted by Vidyamaana on 2023-10-09 15:45:30 |
ಹೊಸದಿಲ್ಲಿ: ಲೋಕಸಭಾ ಚುನಾವಣೆಗೆ ಪೂರ್ವಭಾಯಿಯಾಗಿ ದೇಶದ ಕುತೂಹಲ ಕೆರಳಿಸಿರುವ ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆಯಾಗಿದೆ. ಸೋಮವಾರ ಭಾರತೀಯ ಚುನಾವಣಾ ಆಯೋಗವು ಐದು ರಾಜ್ಯಗಳ ಚುನಾವಣೆಗೆ ದಿನಾಂಕ ಘೋಷಣೆ ಮಾಡಿದೆ.
ಮಿಜೋರಾಂ, ಛತ್ತೀಸ್ಗಢ, ಮಧ್ಯಪ್ರದೇಶ, ರಾಜಸ್ಥಾನ ಮತ್ತು ತೆಲಂಗಾಣ ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಮುಖ್ಯ ಆಯುಕ್ತ ರಾಜೀವ್ ಕುಮಾರ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಮಿಜೋರಾಂ ವಿಧಾನಸಭೆ ಚುನಾವಣೆಯು ನವೆಂಬರ್ 7ರಂದು ನಡೆಯಲಿದೆ. ಛತ್ತೀಸ್ ಗಡದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ನ.7 ಮತ್ತು 17ರಂದು ಮತದಾನ ನಡೆಯಲಿದೆ. ಮಧ್ಯ ಪ್ರದೇಶದಲ್ಲಿ ನ.17, ರಾಜಸ್ಥಾನದಲ್ಲಿ ನ.23ರಂದು ಮತ್ತು ತೆಲಂಗಾಣದಲ್ಲಿ ನ. 30ರಂದು ಮತದಾನ ನಡೆಯಲಿದೆ.
ಎಲ್ಲಾ ಐದು ರಾಜ್ಯಗಳಲ್ಲಿ ಮತ ಎಣಿಕೆಯು ಡಿಸೆಂಬರ್ 3ರಂದು ನಡೆಯಲಿದೆ.
Posted by Vidyamaana on 2023-09-01 08:17:27 |
ಬೆಂಗಳೂರು: ಇಂದಿನಿಂದ ರೇಷನ್ ಕಾರ್ಡ್ ತಿದ್ದುಪಡಿಗೆ ಕಾಲಾವಕಾಶ ನೀಡಲಾಗಿದ್ದು, ಪಡಿತರ ಚೀಟಿದಾರರು ಪಡಿತರ ಚೀಟಿಯಲ್ಲಿನ ವಿವರಗಳಲ್ಲಿ ಯಾವುದೇ ತಪ್ಪು ಕಂಡುಬಂದಲ್ಲಿ ವಿವರಗಳನ್ನು ಸರಿಪಡಿಸಿಕೊಳ್ಳಬಹುದಾಗಿದೆ.
ಬಿಪಿಎಲ್ ದಾರರಿಗೆ ಹೊಸ ಸಂಕಷ್ಟ ಎದುರಾಗಿದೆ. ಬಿಪಿಎಲ್ ಕಾರ್ಡ್ ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರಿಂದ ಮಹಿಳೆಯರಿಗೆ ಸರ್ಕಾರ ನೀಡುತ್ತಿರುವ 2000 ರೂ. ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾಗಿದ್ದಾರೆ. ಇದೀಗ ಸರ್ಕಾರ, ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಇಂದಿನಿಂದ (ಸೆಪ್ಟೆಂಬರ್ 01) ಅವಕಾಶ ನೀಡಿದೆ.
ಪಡಿತರ ಚೀಟಿಯ ತಪ್ಪುಗಳನ್ನು ತಿದ್ದುಪಡಿ ಮಾಡಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾದ ಅವಕಾಶ ಒದಗಿ ಬಂದಿದೆ.ರೇಷನ್ ಕಾರ್ಡ್ನಲ್ಲಿ ಹೆಸರು ಬದಲಾವಣೆ, ಆಧಾರ್ ಕಾರ್ಡ್ ನಲ್ಲಿರುವ ಹೆಸರು ಸೇರ್ಪಡೆ, ಹೊಸ ಸದಸ್ಯರು ಸೇರಿಸುವುದು, ಯಾರಾದರೂ ಮೃತಪಟ್ಟರೆ ಅಂಥವರ ಹೆಸರು ಡಿಲೀಟ್, ಬೇರೆ ಜಿಲ್ಲೆಗೆ ವರ್ಗಾವಣೆ ಹಾಗೂ ವಿಳಾಸ ಪರಿಷ್ಕರಣೆ ಮಾಡಲು ಆಹಾರ ಇಲಾಖೆ ಅವಕಾಶ ಕೊಟ್ಟಿದೆ
Posted by Vidyamaana on 2024-04-05 14:27:16 |
ಮಂಗಳೂರು, ಎ. 5: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ದ.ಕ. ಜಿಲ್ಲೆಯ ಸೌಜನ್ಯಾ ಪರ ಹೋರಾಟ ಸಮಿತಿ ನೋಟ ಅಭಿಯಾನ ಹಮ್ಮಿಕೊಂಡಿದ್ದು, ಹೋರಾಟ ಗಾರರು ಈ ಬಾರಿ ನೋಟ ಮತ ಚಲಾಯಿಸುವ ಮೂಲಕ ರಾಜಕೀಯ ಪಕ್ಷಗಳಿಗೆ ಎಚ್ಚರಿಕೆ ನೀಡಲು ಮುಂದಾಗಿದ್ದಾರೆ ಎಂದು ಸಮಿತಿಯ ಮುಖಂಡ ಗಿರೀಶ್ ಮಟ್ಟಣ್ಣನವರ್ ತಿಳಿಸಿದ್ದಾರೆ.
ನಗರದ ಪ್ರೆಸ್ ಕ್ಲಬ್ ನಲ್ಲಿ ಈ ಬಗ್ಗೆ ಶುಕ್ರವಾರ ಮಾಹಿತಿ ನೀಡಿದ ಅವರು, ಧರ್ಮಸ್ಥಳದಲ್ಲಿ ನಡೆದ ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣ ಮಾತ್ರವಲ್ಲ ಅದಕ್ಕಿಂತಲೂ ಹಿಂದೆ ನಡೆದ ಆನೆ ಮಾವುತ ಪ್ರಕರಣ, ಪದ್ಮಾವತಿ ಕೊಲೆ ಪ್ರಕರಣ ಸೇರಿದಂತೆ ರಾಜ್ಯದಲ್ಲಿ ನಡೆದ ಎಲ್ಲಾ ಹೆಣ್ಣು ಮಕ್ಕಳ ಅತ್ಯಾಚಾರ ಪ್ರಕರಣಗಳನ್ನು ಗಂಭೀರವಾಗಿ ಪರಿಗನೀಸುವ ನಿಟ್ಟಿನಲ್ಲಿ ಈ ನಿರ್ಧಾರ ಮಾಡಿರುವುದಾಗಿ ಹೇಳಿದರು.
Posted by Vidyamaana on 2023-10-27 20:34:17 |
ಪುತ್ತೂರು: ಎ ಬಿ ಸಿ ಡಿ ಹೀಗೇ Zತನಕ ಇಂಗ್ಲೀಷ್ ಅಕ್ಷರಗಳು ತರಗತಿಯ ಗೋಡೆಗಳಲ್ಲಿ ಬಣ್ಣ ಬಣ್ಣಗಳಿಂದ ಬರೆಯಲಾಗಿದೆ, ಜೊತೆಗೆ ಅಕ್ಷರ ಓದಲು ಕಲಿಯುವಂತೆ ಸಹಕಾರಿಯಾಗಲು ಹೊಂದಿಕೊಂಡಿರುವ ಚಿತ್ರಗಳು, ಗೋಡೆಗಳಲ್ಲಿರುವ ಅಕ್ಷರವನ್ನು ನೋಡಿ ಪುಸ್ತಕದಲ್ಲಿ ಬರೆಯುವ ಅಬ್ಯಾಸ ಮಾಡಿಕೊಳ್ಳುವ ಹಾಲುಗಲ್ಲದ ಪುಟ್ಟ ಮಕ್ಕಳು. ಇದು ಕಂಡು ಬಂದಿದ್ದು ಕಾವು ಸರಕಾರಿ ಎಲ್ಕೆಜೆ ಯುಕೆಜಿ ತರಗತಿ ಕೊಠಡಿಯಲ್ಲಿ. ಮಕ್ಕಳ ಕಲಿಕೆಗೆ ನರವಾಗಲೆಂದು ಇಂಗ್ಲೀಷ್ ಅಕ್ಷರಗಳನ್ನು ಗೋಡೆಗಳಲ್ಲಿ ಜೋಡಿಸಿದ್ದು ಲಿಯೋ ಕ್ಲಬ್ ತಂಡ, ಲಯನ್ಸ್ ಕ್ಲಬ್ ನ ಸಹಬಾಗಿತ್ವದಲ್ಲಿ ಸಮಾಜ ಸೇವೆಯಲ್ಲಿ ತೊಡಗಿಕೊಂಡಿರುವ ಲಿಯೋ ಕ್ಲಬ್ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನ ಛಾಪನ್ನು ಮೂಡಿಸಿದೆ.
ಕಾವು ಸರಕಾರಿ ಪ್ರಾಥಮಿಕ ಶಾಲೆಯನ್ನು ಕಾವು ಹೇಮನಾಥ ಶೆಟ್ಟಿಯವರು ದತ್ತು ತೆಗೆದುಕೊಂಡಿದ್ದಾರೆ. ದತ್ತು ತೆಗೆದುಕೊಂಡ ಬಳಿಕ ಇಲ್ಲಿ ಆಂಗ್ಲ ಮಾಧ್ಯಮ ಎಲ್ಕೆಜಿ ಯುಕೆಜಿ ತರಗತಿಯನ್ನು ಪ್ರಾರಂಭ ಮಾಡಲಾಗಿದೆ. ಸರಕಾರ ಕೆಪಿಎಸ್ ಸ್ಕೂಲ್ಗಳಲ್ಲಿ ಆಂಗ್ಲ ಮಾದ್ಯಮ ತರಗತಿ ಆರಂಭ ಮಾಡುವ ಮೊದಲೇ ಕಾವು ಸರಕಾರಿ ಶಾಲೆಯಲ್ಲಿ ಇಂಗ್ಲೀಷ್ ಕ್ರಾಂತಿಯನ್ನು ಪ್ರಾರಂಭಿಸಲಾಗಿತ್ತು. ಮಕ್ಕಳ ಸಂಖ್ಯೆಯೂ ಗಣನೀಯವಾಗಿದೆ.
ಕಲಿಕೆಗೆ ಸಹಕಾರಿ
ತರಗತಿಯ ಕೊಠಡಿಯ ಗೋಡೆಗಳಲ್ಲಿ ಇಂಗ್ಲೀಷ್ ಅಕ್ಷರಮಾಲೆಯನ್ನು ಚಿತ್ರ ಸಹಿತ ಬರೆದಿರುವ ಕಾರಣ ಮಕ್ಕಳಿಗೆ ಅಕ್ಷರದ ಪರಿಚಯ ಮತ್ತು ಅಕ್ಷರವನ್ನು ಬರೆಯುವ ವಿಧಾನವನ್ನು ಸುಲಭದಲ್ಲಿ ಮನನ ಮಾಡಬಹುದಾಗಿದೆ. ಸಾಧಾರಣವಾಗಿ ಶಾಲೆಯ ಗೋಡೆಗಳಲ್ಲಿ ಪಕ್ಷಿ, ಪರಿಸರ ಸೇರಿದಂತೆ ಇತರೆ ಬಣ್ಣ ಬಣ್ಣದ ಚಿತ್ರಗಳನ್ನು ಬಿಡಿಸಲಾಗುತ್ತದೆ. ಕಾವು ಶಾಲೆಯಲ್ಲಿ ಲಿಯೋ ಕ್ಲಬ್ ಮಕ್ಕಳ ಶಿಕ್ಷಣಕ್ಕೆ ನೆರವು ಆಗುವ ರೀತಿಯಲ್ಲಿ ಚಿತ್ರಗಳನ್ನು , ಅಕ್ಷರಗಳನ್ನು ಬರೆದಿರುವುದು ಮಕ್ಕಳ ಪೋಷಕರಲ್ಲೂ ಸಂತಸಕ್ಕೆ ಕಾರಣವಾಗಿದೆ. ಕಳೆದ ೨೦ ದಿನಗಳ ಹಿಂದೆ ಈ ಚಿತ್ರಗಳನ್ನು ಬಿಡಿಸಲಾಗಿದ್ದು ಆ ಬಳಿಕ ಮಕ್ಕಳ ಕಲಿಕಾ ಉತ್ಸಾಹವೂ ಇಮ್ಮಡಿಗೊಂಡಿದೆ ಮತ್ತು ಅಕ್ಷರ ಜ್ಞಾನವೂ ಮಕ್ಕಳಲ್ಲಿ ವೃದ್ದಿಯಾಗಿದೆ ಎನ್ನುತ್ತಾರೆ ಪೋಷಕರು.
ಆದೃತಿ ಯೋಜನೆಯಡಿ ನಾಲ್ಕು ಜಿಲ್ಲೆಗಳಲ್ಲಿ ಸೇವೆ
ಲಿಯೋ ಕ್ಲಬ್ ಇದರ ಆದೃತಿ ಯೋಜನೆಯಡಿ ಕ್ಲಬ್ ವ್ಯಾಪ್ತಿಯ ಹಾಸನ , ಚಿಕ್ಕಮಗಳೂರು, ಮಡಿಕೇರಿ ಮತ್ತು ದ ಕ ಜಿಲ್ಲೆಯ ಆಯ್ದ ೧೫ ಸರಕಾರಿ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಇದೇ ಸೇವೆ ನಡೆಯಲಿದೆ. ದ ಕ ಜಿಲ್ಲೆಯ ಕಿನ್ನಿಗೋಳಿ ಕರೆಕಾಡು, ಹಳೆಯಂಗಡಿ ಕೊಳ್ನಾಡಿ ಮುಚ್ಚಿ, ಮೂಡಬಿದ್ರೆ ಮಚ್ಚೂರು ಶಾಲೆ ಹಾಗೂ ಮಂಗಳೂರು ನಗರ ವ್ಯಾಪ್ತಿಯ ಸರಕಾರಿ ಶಾಲೆಗಳಲ್ಲಿ ವರ್ಣಮಾಲೆ ಅಕ್ಷರ ಜೋಡನಾ ಕಾರ್ಯಕ್ಕೆ ಆಯ್ಕೆಗೊಂಡಿದೆ. ಲಿಯೋ ಕ್ಲಬ್ ವತಿಯಿಂದ ಆರೋಗ್ಯ ಮೇಳ, ಉದ್ಯೋಗ ಮೇಳ, ವಿಕಲಚೇತನರ ಜೊತೆ ಸಹಭೋಜನೆ, ವ್ಯಕ್ತಿತ್ವ ವಿಕಸನ ಸಮಾವೇಶ, ಸೇರಿದಂತೆ ಇನ್ನಿತರ ಸಮಾಜಸೇವಾ ಕಾರ್ಯಗಳು ನಿರಂತರವಾಗಿ ನಡೆಯುತ್ತಿದ್ದು ಕ್ಲಬ್ನ ಹಿರಿಮೆಯನ್ನು ಹೆಚ್ಚಿಸಿದೆ.
ಲಿಯೋ ಕ್ಲಬ್ ಸಂಸ್ಥೆ ಈ ಸೇವೆ ಇನ್ನೊಬ್ಬರಿಗೆ ಉತ್ತೇಜನ ನೀಡುವ ಕಾರ್ಯವಾಗಿದೆ. ಸರಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಬಡ ಗ್ರಾಮೀಣ ಮಕ್ಕಳ ಕಲಿಕೆಗೆ ಸಹಾಯ ಮಾಡುವ ಉದ್ದೇಶದಿಂದ ಈ ವರ್ಣ ಮಾಲೆಯನ್ನು ರಚಿಸಿದ್ದು ಇದಕ್ಕಾಗಿ ನಾನು ಅವರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ. ಇದೇ ಸೇವೆಯನ್ನು ಕ್ಲಬ್ ವ್ಯಾಪ್ತಿಯ ನಾಲ್ಕು ಜಿಲ್ಲೆಗಳಲ್ಲಿ ಮುಂದುವರೆಸಲಿದ್ದಾರೆ. ಸಂಸ್ಥೆಯ ಮೂಲಕ ಶಿಕ್ಷಣ, ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ಮುಂದಿನ ಯುವ ಸಮೂಹವಕ್ಕೆ ಸಮಾಜ ಸೇವಾ ಮನೋಭಾವ ಬೆಳೆಸುವ ಕೆಲಸ ನಿರಂತರ ಆಗಬೇಕಿದ್ದು ಅದನ್ನು ಲಿಯೋ ಕ್ಲಬ್ ಮೂಲಕ ನಡೆಸಲಾಗುತ್ತಿದೆ.
ಮೆಲ್ವಿನ್ ಡಿಸೋಜಾ, ಲಯನ್ಸ್ ಜಿಲ್ಲಾ ಗವರ್ನರ್
ಚಿತ್ರ ಇದೆ
ಲಿಯೋ ಡಿಸ್ಟ್ರಿಕ್ಟ್ ೩೧೭ ಡಿ ಇದರ ವತಿಯಿಂದ ಕ್ಲಬ್ ವ್ಯಾಪ್ತಿಯ ನಾಲ್ಕು ಜಿಲ್ಲೆಗಳ ಆಯ್ದ ಸರಕಾರಿ ಪೂರ್ವ ಪ್ರಾಥಮಿಕ (ಎಲ್ಕೆಜಿ, ಯುಕೆಜಿ) ತರಗತಿ ಗಳಲ್ಲಿ ಮಕ್ಕಳ ಕಲಿಕೆಗೆ ನೆರವಾಗುವುದು ಮತ್ತು ಕಲಿಕಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶದಿಂದ ಕೊಠಡಿಗಳಲ್ಲಿ ಆಧುನಿಕತೆಯ ಟಚಪ್ನೊಂದಿಗೆ ಅಕ್ಷರ ವರ್ಣ ಮಾಲೆಯನ್ನು ಚಿತ್ರದ ಮೂಲಕ ಬರೆಯಲಾಗಿದೆ. ಪ್ರಸಿದ್ದ ಆರ್ಟಿಸ್ಟ್ ಮೂಲಕ ಈ ವರ್ಣ ಮಾಲೆಯನ್ನು ರಚಿಸಲಾಗಿದೆ. ಲಿಯೋ ಕ್ಲಬ್ ಸದಸ್ಯರ ಸಹಕಾರದಿಂದ ಚಿತ್ರಕ್ಕೆ ಬಣ್ಣ ಕೊಡುವ ಕಾರ್ಯವನ್ನು ಮಾಡಲಾಗಿದೆ. ಕ್ಲಬ್ ವತಿಯಿಂದ ಮಕ್ಕಳ ಕಲಿಕಾ ವ್ಯವಸ್ಥೆಗೆ ಒತ್ತು ನೀಡುವ ಉದ್ದೇಶವೂ ಇದರ ಹಿಂದೆ ಇದ್ದು , ಕ್ಲಬ್ ವ್ಯಾಪ್ತಿಯ ದ ಕ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಈ ಸೇವೆಯನ್ನು ನಡೆಸಲಾಗುವುದು. ಕ್ಲಬ್ ಯೋಜನೆಗೆ ಪೋಷಕರಿಂದ ಮತ್ತು ಸಾರ್ವಜನಿಕರಿಂದ ಅಭಿನಂದನೆಗಳು ವ್ಯಕ್ತವಾಗಿದೆ, ಸಮಾಜ ಸೇವೆ ಇನ್ನೂ ಮುಂದುವರೆಯಲಿದೆ.
ಡಾ. ರಂಜಿತಾ ಎಚ್ ಶೆಟ್ಟಿ
ಜಿಲ್ಲಾಧ್ಯಕ್ಷರು ಲಿಯೋ ಕ್ಲಬ್ ೩೧೭ಡಿ
ಚಿತ್ರ ಇದೆ
ಕಲಿಕೆಗೆ ತುಂಬಾ ಸಹಕಾರಿಯಾಗಿದೆ
ತರಗತಿಯ ಗೋಡೆಗಳಲ್ಲಿ ಇಂಗ್ಲೀಷ್ ವರ್ಣಮಾಲೆಯನ್ನು ಚಿತ್ರ ಸಹಿತ ಬರೆದಿರುವುದು ನಮಗೆ ತುಂಬಾ ಸಹಕಾರಿಯಾಗಿದೆ. ಮಕ್ಕಳಿಗೆ ಅಕ್ಷರದ ಪರಿಚಯ ಮಾಡಿಸಲು ಮತ್ತು ಬರೆಯವುದು ಮತ್ತು ಓದುವುದನ್ನು ಕಲಿಸಲು ಇದು ಪ್ರಯೋಜನಕಾರಿಯಾಗಿದ್ದು ಇತರ ಕಡೆಗೂ ಇದು ವಿಸ್ತರಣೆಯಾಗಬೇಕಿದೆ.
ವಂದಿತಾ, ಕಾವು ಶಾಲೆ ಶಿಕ್ಷಕಿ
Posted by Vidyamaana on 2023-10-22 15:59:15 |
ಲಕ್ನೋ : ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಕೆಲವು ಗೂಂಡಾಗಳು ಅರ್ಚಕರೊಬ್ಬರನ್ನ ಥಳಿಸಿ ನಂತರ ದೇವಾಲಯದಿಂದ ಅಪಹರಿಸಲು ಪ್ರಯತ್ನಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ದೇವಾಲಯದ ಅರ್ಚಕನ ಅಪಹರಿಸಲು ಯತ್ನಿಸಿದ ದುಷ್ಕರ್ಮಿಗಳು, ಆಘಾತಕಾರಿ ವಿಡಿಯೋ ನೋಡಿ
ಈ ಘಟನೆಯು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.ನಿಲ್ಲಿಸಿದ್ದ ಕಾರಿನಲ್ಲಿ ಅರ್ಚಕನನ್ನ ಸಾಗಿಸುವುದು ಅವರ ಯೋಜನೆಯಾಗಿತ್ತು. ಆದಾಗ್ಯೂ, ಗದ್ದಲದಿಂದಾಗಿ ಜನಸಂದಣಿ ಜಮಾಯಿಸಿದ ನಂತರ ಗೂಂಡಾಗಳು ಅರ್ಚಕರನ್ನ ಬಿಟ್ಟು ಸ್ಥಳದಿಂದ ಪಲಾಯನ ಮಾಡಬೇಕಾಯಿತು.
Posted by Vidyamaana on 2024-03-21 19:48:39 |
ಪುತ್ತೂರು: ಚಿನ್ನ, ವಜ್ರಾಭರಣಗಳಲ್ಲಿ ಸದಾ ಹೊಸತನವನ್ನು ಪರಿಚಯಿಸುವ ಮೂಲಕ ಗ್ರಾಹಕರ ಪ್ರೀತಿಗೆ ಪಾತ್ರವಾಗಿರುವ ಮುಳಿಯ ಜ್ಯುವೆಲ್ಸ್ನಲ್ಲಿ ಈ ವರ್ಷದ ಡೈಮಂಡ್ ಫೆಸ್ಟ್ಗೆ ಮಾ.20ರಂದು ಚಾಲನೆ ನೀಡಲಾಯಿತು. ಎಲ್ಲರ ಮನೆಯಲ್ಲೂ ವಜ್ರಾಭರಣ ಇರಬೇಕೆಂಬ ಪರಿಕಲ್ಪಣೆಯೊಂದಿಗೆ ಮುಳಿಯ ಸಂಸ್ಥೆ " ನನ್ನ ಪ್ರಥಮ ವಜ್ರಾಭರಣ” ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಿದೆ.
ಪ್ರತಿಯೊಬ್ಬರಿಗೂ ವಜ್ರಾಭರಣ ನೀಡುವ ಮುಳಿಯದ ಕನಸು ನನಸಾಗಲಿ:ಗೋಪಾಲಕೃಷ್ಣ ಭಟ್
ದ್ವಾರಕ ಕನ್ ಸ್ಟ್ರಕ್ಷನ್ ಮಾಲಕ ಗೋಪಾಲಕೃಷ್ಣ ಭಟ್ ಡೈಮಂಡ್ ಫೆಸ್ಟ್ಗೆ ಚಾಲನೆ ನೀಡಿ ಮಾತನಾಡಿ ಸುಮಾರು ದಶಕಗಳ ಆರಂಭದಲ್ಲಿ ಪುತ್ತೂರಿನಲ್ಲಿ ಗ್ರಾಹಕರ ವಿಶ್ವಾಸಾರ್ಹತೆಯೊಂದಿಗಿರುವ ಮುಳಿಯ ಜ್ಯುವೆಲ್ಸ್ ಎಲ್ಲರ ಮನೆಮಾತಾಗಿದೆ. ಸಂಸ್ಥೆಯ ಉದ್ಯಮ ಯಶಸ್ಸು ಇನ್ನು ಮುಂದಕ್ಕೂ ಇನ್ನೂ ಹೆಚ್ಚಾಗಲಿ. ಅವರ ಪ್ರತಿ ಮನೆಯಲ್ಲೂ ವಜ್ರಾಭ ರಣ ಇರಬೇಕೆಂಬ ಉದ್ದೇಶ ಏನಿದೆಯೋ ಅದು ಈಡೇರಿಸುವಂತೆ ಮಹಾಲಿಂಗೇಶ್ವರ ದೇವರ ಅಶೀರ್ವಾದ ಇರಲಿ. ಅದೇ ರೀತಿ ಪುತ್ತೂರಿನ ಪ್ರತಿಯೊಬ್ಬರಿಗೂ ವಜ್ರಾಭರಣ ನೀಡುವ ಅವರ ಕನಸು ನಸಾಗಲಿ ಎಂದರು
ಪುತ್ತೂರು ಸಹಿತ ನಮ್ಮ ಸಂಸ್ಥೆಯ ಶಾಖೆಗಳಲ್ಲಿ ಆ ಭಾಗದ ಪ್ರತಿಯೊಬ್ಬ ಗ್ರಾಹಕರು ವಜ್ರಾಭರಣ ಹೊಂದಿರಬೇಕೆಂಬ ಯೋಚನೆಯಲ್ಲಿ ಮತ್ತು ನನಗೊಂದು ವಜ್ರದ ಆಭರಣ ಮಾಡಬೇಕೆಂಬ ಎಲ್ಲರ ಮನಸಿನ ಇಚ್ಚೆ ಈಡೇರಬೇಕೆಂಬ ನಿಟ್ಟಿನಲ್ಲಿ ಈ ಡೈಮಂಡ್ ಫೆಸ್ಟ್ ಆಯೋಜಿಸಿದ್ದೇವೆ. ಒಂದು ಕಾಲದಲ್ಲಿ ವಜ್ರವನ್ನು ಖರೀದಿಸುವುದು ಕಷ್ಟ ಎಂಬ ಭಾವನೆ ಇತ್ತು. ಇವತ್ತು ನಮ್ಮ ಆದಾಯದ ಮಿತಿ, ಜನರ ಜೀವನ ಶೈಲಿ ಉತ್ತಮವಾದಂತೆ ಇವತ್ತು ವಜ್ರ ಎಲ್ಲರಿಗೂ ಕೈಗೆಟಕುವ ಸೊತ್ತು ಆಗಿದೆ. ಮೈ ಡೈಮಂಡ್ ಫೆಸ್ಟ್ನಲ್ಲಿ ಸಂಸ್ಥೆಯಿಂದ ಮನೆಗಳಿಗೆ ವಿಶೇಷ ಕಾರ್ಡ್ ಅನ್ನು ಕೊಡುತ್ತೇವೆ. ಅದರಲ್ಲಿ ವಜ್ರವನ್ನು ಹೊಂದಿರದ ಅಥವಾ ಹೊಂದಿರುವ ಕುರಿತು ಗುರುತು ಮಾಡಿಕೊಂಡಾಗ ಇಲ್ಲದವರು ವಜ್ರವನ್ನು ಖರೀದಿ ಮಾಡುವ ವ್ಯವಸ್ಥೆ ಇದೆ. ಈ ಯೋಜನೆಯಲ್ಲಿ ಶೇ.90 ಕ್ಯಾಶ್ ಬ್ಯಾಕ್ ಮತ್ತು ಶೇ. 95 ಎಕ್ಸೆಂಜ್ ಆಫರ್ ನೀಡಲಾಗಿದೆ. ಮೈ ಫೆಸ್ಟ್ ಡೈಮಂಡ್ ಯೋಜನೆಯಲ್ಲಿ ಯಾರು ಪ್ರಥಮವಾಗಿ ವಜ್ರ ಖರೀದಿ ಮಾಡುತ್ತಾರೋ ಅವರಿಗೆ ವಜ್ರ ಹಿಡಿಯುವುದಿಲ್ಲ ಎಂದಾದರೆ ಎರಡು ತಿಂಗಳೊಳಗೆ ಅವರು ಚಿನ್ನದೊಂದಿಗೆ ಅದನ್ನು ಯಾಥಾ ಸ್ಥಿತಿಯಲ್ಲಿ ಬದಲಾವಣೆಗೆ ಅವಕಾಶ ನೀಡಲಾಗಿದೆ ಎಂದು ಕೇಶವಪ್ರಸಾದ್ ಮುಳಿಯ ಹೇಳಿದರು
ವಜ್ರಕ್ಕೆ ಹೂಡಿಕೆ ಲಾಭದಾಯಕ:
ಮುಳಿಯ ಜ್ಯುವೆಲ್ಸ್ನ ಮುಖ್ಯ ಆಡಳಿತಾಧಿಕಾರಿ ಕೇಶವಪ್ರಸಾದ್ ಮುಳಿಯ ಅವರು ಪ್ರಾಸ್ತಾವಿಕವಾಗಿ ಮಾತನಾಡಿ ವಜ್ರ ಕೈ ಗೆಟಕದು ಎಂಬ ಭಾವನೆ ಗ್ರಾಹಕರಲ್ಲಿದೆ. ಆದರೆ ಪ್ರಸ್ತುತ ಕಾಲದಲ್ಲಿ ಬೆಲೆಬಾಳುವ ಆಂಡ್ರಾಯ್ಡ್ ಮೊಬೈಲ್ ಖರೀದಿಸುವ ಸಂದರ್ಭದ ದರ ಮತ್ತೆ ಮತ್ತೆ ಕಡಿಮೆ ಆಗುತ್ತಾ ಹೋಗುತ್ತದೆ. ಆದರೆ ವಜ್ರವನ್ನು ಇವತ್ತು ಕೊಂಡರೆ ನಾಳೆ ಅದರ ದರ ಜಾಸ್ತಿಯಾಗುತ್ತದೆ ಹೊರತು ಕಡಿಮೆ ಆಗುವುದಿಲ್ಲ. ಇವತ್ತು ವಜ್ರಕ್ಕೆ ಹೂಡಿಕೆ ಮಾಡುವುದು ಲಾಭದಾಯಕ. ಈ ನಿಟ್ಟಿನಲ್ಲಿ ಎಲ್ಲರ ಮನೆಯಲ್ಲೂ ವಜ್ರಾಭರಣ ಇರಬೇಕೆಂಬ ಪರಿಕಲ್ಪನೆಯ ಜೊತೆಗೆ ನನ್ನ ಪ್ರಥಮ ವಜ್ರಾಭರಣ ವಿಶೇಷ ಕಾರ್ಯಕ್ರಮ ಆಯೋಜಿಸಿದ್ದೇವೆ. ಗ್ರಾಹಕರು ಇದರ ಸದುಪಯೋಗ ಪಡೆಯುವಂತೆ ವಿನಂತಿಸಿದರು. ಶಾಖಾ ಪ್ರಬಂಧಕ ರಾಘವೇಂದ್ರ ಪಾಟೀಲ್, ಮಾರುಕಟ್ಟೆ ಮ್ಯಾನೇಜರ್ ಸಂಜೀವ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಂಕರ್, ರಾಜೇಶ್ ಅತಿಥಿಗಳನ್ನು ಗೌರವಿಸಿದರು. ಪೂಜಿತ ಪ್ರಾರ್ಥಿಸಿದರು. ಪ್ಲೋರ್ ಮೇನೆಜರ್ ಯತೀಶ್ ಸ್ವಾಗತಿಸಿ, ಪ್ಲೋರ್ ಮೇನೆಜರ್ ಆನಂದ್ ವಂದಿಸಿದರು. ಉಪಶಾಖಾ ಪ್ರಬಂಧಕ ಪ್ರವೀಣ್ ಕಾರ್ಯಕ್ರಮ ನಿರೂಪಿಸಿದರು. ಸಭೆಯಲ್ಲಿ ರಮೇಶ್ ಭಟ್, ಇಂಜಿನಿಯರ್ ಸತ್ಯನಾರಾಯಣ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.