Posted by vidyamaana on 2024-07-03 19:44:44 |
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.
ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕುಎಂಬುದು ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸುಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.
ಕಾಲೇಜುನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.
ಹೆಚ್ಚುಅನುದಾನ ಕೊಡಿ
ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನುನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರುಮನವಿ ಸಲ್ಲಿಸಿದರು.
Posted by Vidyamaana on 2023-07-09 05:57:26 |
ಮಂಗಳೂರು: ಕಾರ್ಮಿಕನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಮಾಡಿರುವ ಘಟನೆ ನಗರದ ಮುಳಿಹಿತ್ಲುವಿನಲ್ಲಿ ನಡೆದಿದೆ.
ಉತ್ತರ ಭಾರತ ಮೂಲದ ಗಜ್ಞಾನ್ ಅಲಿಯಾಸ್ ಜಗು ಎಂಬ ಕಾರ್ಮಿಕನನ್ನು ಮಶುಪಾ ಜನರಲ್ ಸ್ಟೋರ್ ಮಾಲೀಕ ತೌಸಿಫ್ ಹುಸೈನ್ ಎಂಬಾತ ಕೊಲೆ ಮಾಡಿರುವುದಾಗಿ ಹೇಳಲಾಗಿದೆ.
ಬೆಂಕಿ ಹಚ್ಚಿ ಕೊಂದ ಬಳಿಕ ಆರೋಪಿ ವಿದ್ಯುತ್ ಶಾಕ್ ಎಂದು ಪೊಲೀಸ್ ದೂರು ನೀಡಿದ್ದಾನೆ. ಶನಿವಾರ ಬೆಳಗ್ಗೆ 7.30 ಕ್ಕೆ ಕೃತ್ಯ ಎಸಗಿದ್ದು, ಬಳಿಕ ಮಧ್ಯಾಹ್ನ 1.30 ಕ್ಕೆ ವೆನ್ಲಾಕ್ ಆಸ್ಪತ್ರೆಗೆ ರವಾನೆ ಮಾಡಿ ವಿದ್ಯುತ್ ಶಾಕ್ ನಿಂದ ಘಟನೆ ಅಂತಾ ತಿರುಚಲು ಯತ್ನಿಸಿದ್ದಾನೆ.
ಆದರೆ ಪೊಲೀಸರ ಅನುಮಾನದಿಂದ ವಿಚಾರಿಸಿದಾಗ ಕೃತ್ಯ ಬಯಲಾಗಿದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ತೌಸಿಫ್ ಹುಸೈನ್ ಅನ್ನು ಪೊಲೀಸರು ಬಂಧಿಸಿದ್ದಾರೆ.
Posted by Vidyamaana on 2024-04-04 13:55:45 |
ವಿಜಯಪುರ : ಕೊನೆಗೂ ಫಲಿಸಿತು ಕರುನಾಡಿನ ಪ್ರಾರ್ಥನೆ, ಸತತ 22ಗಂಟೆಗಳ ಕಾರ್ಯಾಚರಣೆ ನಂತರ ಕೊಳವೆ ಬಾವಿಗೆ ಬಿದ್ದಿದ್ದ ಎರಡು ವರ್ಷದ ಮಗು ಸ್ವಾತ್ವಿಕ್ ರಕ್ಷಣೆ ಮಾಡಲಾಗಿದೆ.ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಮಗುವನ್ನು ಸತತ 21 ಗಂಟೆಗಳ ಕಾರ್ಯಾಚರಣೆ ಬಳಿಕ ರಕ್ಷಣೆ ಮಾಡಲಾಗಿದ್ದು, ಹೈದರಾಬಾದಿನ ಎಂದ ಎನ್ ಡಿ ಆರ್ ಎಫ್ ತಂಡ ಕಾರ್ಯಾಚರಣೆ ಬಳಿಕ ಮಗುವನ್ನು ಸುರಕ್ಷಿತವಾಗಿ ಕೊಳವೆ ಬಾವಿಯಿಂದ ಹೊರ ತೆಗೆಯಲಾಗಿದೆ.
Posted by Vidyamaana on 2024-02-28 07:52:06 |
ಮಂಗಳೂರು : ಪಿಎಚ್ ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಉಳ್ಳಾಲ ಠಾಣೆಗೆ ಭೇಟಿ ನೀಡಿ ಠಾಣಾಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.ಗಾಂಜಾ ಪ್ರಕರಣದ ಆರೋಪಿ, ಡ್ರಗ್ಸ್ ಪೆಡ್ಲರ್ ಶಾರೂಕ್ ಶೇಕ್ ಎಂಬಾತ ಡ್ರಗ್ಸ್ ಹಾಗೂ ಇನ್ನಿತರ ಮೋಸದಾಟವಾಡಿ ಆಕೆಯನ್ನು ಅಪಹರಿಸಿರುವುದು ಸ್ಪಷ್ಟವಾಗಿದೆ ಎನ್ನಲಾಗುತ್ತಿದೆ.ಎಂಎಸ್ಸಿ ಪೂರೈಸಿದ್ದ ಚೈತ್ರಾ ಹೆಬ್ಬಾರ್ ದೇರಳಕಟ್ಟೆಯ ಖಾಸಗಿ ಯುನಿವರ್ಸಿಟಿಯಲ್ಲಿ ಪಿಎಚ್ ಡಿ ಮಾಡುತ್ತಿದ್ದಳು. ಕೋಟೆಕಾರು ಬಳಿಯ ಮಾಡೂರಿನಲ್ಲಿ ಪಿಜಿ ಒಂದರಲ್ಲಿದ್ದ ಯುವತಿಯನ್ನು ಫೆ.17ರಂದು ರೈಲಿನಲ್ಲಿ ಶಾರೂಕ್ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದು ಇಲಾಖೆ ತೀವ್ರ ತನಿಖೆ ನಡೆಸುತ್ತಿದ್ದು ಇನ್ನು ಕೆಲವೇ ದಿನಗಳಲ್ಲಿ ಆಕೆಯನ್ನು ಕರೆತರಲಾಗುವುದು ಎಂದು ಠಾಣಾಧಿಕಾರಿ ತಿಳಿಸಿದರು.
ಶಾರುಕ್ ಶೇಖ್ ಕತಾರಿನಲ್ಲಿದ್ದಾಗ ಪ್ರಕರಣ ಒಂದರಲ್ಲಿ ಸಿಕ್ಕಿಬಿದ್ದು ಜೈಲು ಪಾಲಾಗಿದ್ದ ಎನ್ನಲಾಗಿದೆ. ಆನಂತರ ಊರಿಗೆ ಬಂದು ಡ್ರಗ್ಸ್ ಪೆಡ್ಲರ್ ಆಗಿ ಹಲವು ಯುವ ಜನತೆಯನ್ನು ಡ್ರಗ್ಸ್ ಜಾಲಕ್ಕೆ ಸಿಲುಕಿಸುತ್ತಿದ್ದ ಎನ್ನಲಾಗಿದೆ.ಯಾವುದೇ ಉದ್ಯೋಗ ಇಲ್ಲದ ಶಾರೂಖ್ ಗಾಂಜಾ ವ್ಯವಹಾರದ ಹಣದಲ್ಲೇ ಬದುಕುತಿದ್ದ ಎನ್ನಲಾಗಿದೆ.
ಠಾಣಾಧಿಕಾರಿ ಜೊತೆ ಮಾತನಾಡಿದ ಪುತ್ತಿಲ, ಡ್ರಗ್ ಪೆಡ್ಲರ್ ಶಾರೂಕ್ ನನ್ನು ಶೀಘ್ರ ಬಂಧಿಸಿ ಈತನ ಜಾಲದ ಹಿಂದಿನ ಕಾಣದ ಕೈಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದರು.ಈಗಾಗಲೇ ಉಳ್ಳಾಲದಲ್ಲಿ ಡ್ರಗ್ಸ್ ಜಾಲದಲ್ಲಿ ಯುವತಿಯರನ್ನು ಸಿಲುಕಿಸಿ ಲವ್ ಜಿಹಾದ್ ಮೂಲಕ ಭಯೋತ್ಪಾದನೆಗೆ ಸಿಲುಕಿಸಿರುವುದು ಗೊತ್ತಿರುವಾಗ ಈ ಪ್ರಕರಣವನ್ನು ಗಂಭೀರ ಪ್ರಕರಣವೆಂದು ಪರಿಗಣಿಸಬೇಕು ಎಂದರು. ಉಳ್ಳಾಲದಲ್ಲಿ ಇಂತಹ ಘಟನೆಗಳು ಹೆಚ್ಚಾಗಿ ನಡೆಯುತ್ತಿರುವುದು ಇಡೀ ಜಿಲ್ಲೆಗೆ ಅಪಾಯಕಾರಿ ಬೆಳವಣಿಗೆ, ಇದನ್ನು ಮಟ್ಟ ಹಾಕದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲೆಗೆ ಮಾರಕವಾಗಲಿದೆ ಎಂದು ಅರುಣ್ ಪುತ್ತಿಲ ಠಾಣಾಧಿಕಾರಿಗಳಲ್ಲಿ ಹೇಳಿದರು.
ಶಿಕ್ಷಣ ಕಾಶಿಯಾಗಿರುವ ತುಳುನಾಡಿನಲ್ಲಿ ಕೆಲಸ ಇಲ್ಲದ ಕೆಲ ಯುವಕರು ಗಾಂಜಾ ಡ್ರಗ್ಸ್ ವ್ಯವಹಾರ ಮೂಲಕ ವಿದ್ಯಾರ್ಥಿಗಳ ಜೀವನವನ್ನೇ ಹಾಳು ಮಾಡುತ್ತಿದ್ದಾರೆ. ಕೆಲಸ ಇಲ್ಲದೆ ಶೋಕಿ ಮಾಡುವ ಕೆಲವರ ಬಗ್ಗೆ ಇಲಾಖೆ ಗಮನಿಸಬೇಕು ಹಾಗೂ ಪಿಜಿಗಳ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದರುಪೊಲೀಸ್ ಇಲಾಖೆಯವರು ಇದಕ್ಕೆ ಸೂಕ್ತ ರೀತಿ ಸ್ಪಂದಿಸುವುದಾಗಿ ಭರವಸೆ ನೀಡಿದರು. ಆಕೆ ಆಗಮಿಸಿದ ಕೂಡಲೇ ಸೂಕ್ತ ಹಾಸ್ಟೇಲ್ ವ್ಯವಸ್ಥೆಗೆ ಕುಟುಂಬಸ್ಥರ ಜೊತೆ ಮಾತುಕತೆ ನಡೆಸಬೇಕೆಂದು ಪುತ್ತಿಲರ ಜೊತೆ ಠಾಣಾಧಿಕಾರಿ ಹೇಳಿದರು.
ಉಳ್ಳಾಲದ ಹಿಂದೂ ಮುಖಂಡ ಅರುಣ್ ಉಳ್ಳಾಲ, ಪುತ್ತಿಲ ಪರಿವಾರದ ಪ್ರಧಾನ ಕಾರ್ಯದರ್ಶಿ ಉಮೇಶ್ ಕೋಡಿಬೈಲ್ ಸಹಿತ ಪ್ರಮುಖರು ಉಪಸ್ಥಿತರಿದ್ದರು.
Posted by Vidyamaana on 2024-02-11 08:46:14 |
ಅಬುಧಾಬಿ: ಯುಎಇ ಯಲ್ಲಿ ನೆಲೆಸಿರುವ ಕೇರಳದ ರಾಜೀವ್ ಅರಿಕ್ಕಾಟ್ ಅವರಿಗೆ ಅಬುದಾಬಿ ಲಾಟರಿಯಲ್ಲಿ ಬರೋಬ್ಬರಿ 33 ಕೋಟಿ ರೂ.(15 ಮಿಲಿಯನ್ ದಿರ್ಹಾಮ್) ಬಂಪರ್ ಬಹುಮಾನ ಬಂದಿದೆ. ಅವರು ತಮ್ಮ ಮಕ್ಕಳ ಜನ್ಮದಿನಕ್ಕೆ ಹೋಲುವ ನಂಬರಿನ ಲಾಟರಿ ಟಿಕೆಟ್ ಖರೀದಿಸಿದ್ದರು. ಇದು ಅವರಿಗೆ ಅದೃಷ್ಟವಾಗಿ ಮೊದಲ ಬಹುಮಾನ ಗಳಿಸುವಂತೆ ಮಾಡಿದೆ. ಅಬುಧಾಬಿಯ ಅರ್ಕಿಟೆಕ್ಚರ್ ಸಂಸ್ಥೆ ಅಲ್ ಐನ್ನಲ್ಲಿ ರಾಜೀವ್ ಕೆಲಸ ಮಾಡುತ್ತಿದ್ದಾರೆ. “ನಾನು 3 ವರ್ಷಗಳಿಂದ ಬಿಗ್ ಟಿಕೆಟ್ ಲಾಟರಿಗಳನ್ನು ಖರೀದಿಸುತ್ತಿದ್ದೇನೆ. ಮೊತ್ತವನ್ನು 19 ಜನರೊಂದಿಗೆ ಸಮಾನವಾಗಿ ಹಂಚಿಕೊಳ್ಳುತ್ತೇನೆ ಎಂದಿದ್ದಾರೆ.
Posted by Vidyamaana on 2024-02-17 21:49:20 |
ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳೂರಿನ ಕಾಂಗ್ರೆಸ್ ಸಮಾವೇಶದತ್ತ ಬರುವ ವೇಳೆ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಖ್ಯಮಂತ್ರಿ ವಿಮಾನ ನಿಲ್ದಾಣದಿಂದ ಕಾಂಗ್ರೆಸ್ ಸಮಾವೇಶ ನಡೆಯುವ ಸಹ್ಯಾದ್ರಿ ಮೈದಾನಕ್ಕೆ ಬರುವ ವೇಳೆ ಮುತ್ತಿಗೆ ಹಾಕಲು ಬೊಂದೆಲ್ ಬಳಿ ಕಾರ್ಯಕರ್ತರು ಸೇರಿದ್ದರು. 50ಕ್ಕೂ ಹೆಚ್ಚು ಕಾರ್ಯಕರ್ತರು ಸೇರಿದ್ದು ರಸ್ತೆಯಲ್ಲಿ ಮುಖ್ಯಮಂತ್ರಿ ಬರುವಾಗ ಕಪ್ಪು ಪಟ್ಟಿ ಹಿಡಿದು ಪ್ರತಿಭಟನೆಗೆ ಯತ್ನಿಸಿದ್ದರು. ಈ ವೇಳೆ ಪೊಲೀಸರು ಅವರನ್ನು ವಶಕ್ಕೆ ಪಡೆದಿದ್ದಾರೆ
Posted by Vidyamaana on 2023-12-04 21:38:52 |
ವಿಜಯಪುರ : ನಗರದ ಖಾಸಗಿ ಗೋದಾಮಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಮೆಕ್ಕೆಜೋಳ ತುಂಬಿದ್ದ ಚೀಲ ನಿಟ್ಟು ಕುಸಿದು ಸುಮಾರು 10ಕ್ಕೂ ಹೆಚ್ಚು ಕಾರ್ಮಿಕರು ಚೀಲದ ಅಡಿಯಲ್ಲಿ ಸಿಲುಕಿರುವ ಘಟನೆ ನಡೆದಿದೆ. ರಕ್ಷಿಸಲ್ಪಟ್ಟ ಮೂವರು ಕಾರ್ಮಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ರಾತ್ರಿ ವೇಳೆ ಕತ್ತಲಲ್ಲೂ ರಕ್ಷಣ ಕಾರ್ಯಾಚರಣೆ ಮುಂದುವರೆದಿದೆ.
ಸೋಮವಾರ ಸಂಜೆ ಬಿಹಾರ ಮೂಲದ ಕಾರ್ಮಿಕರು ನಗರದ ಕೈಗಾರಿಕಾ ಪ್ರದೇಶದಲ್ಲಿರುವ ರಾಜಗುರು ಇಂಡಸ್ಟ್ರೀಸ್ ಸಂಸ್ಥೆಯ ಗೋದಾಮಿನಲ್ಲಿ ಧಾನ್ಯಗಳ ಚೀಲಗಳನ್ನು ಜೋಡಿಸುವ ಕೆಲಸದಲ್ಲಿ ನಿರತರಾಗಿದ್ದರು.ಈ ಹಂತದಲ್ಲಿ ಚೀಲಗಳ ನಿಟ್ಟು ಜೋಡಿಸುವ ಕೆಲಸದಲ್ಲಿ ತೊಡಗಿದ್ದಾಗಲೇ ಏಕಾಏಕಿ ತುಂಬಿದ ಚೀಲಗಳ ನಿಟ್ಟು ಕುಸಿದು ಕೆಲಸದಲ್ಲಿ ತೊಡಗಿದ್ದ ಕಾರ್ಮಿಕರ ಬಿದ್ದಿದೆ. ಇದರಿಂದಾಗಿ ಸುಮಾರು 20-25 ಕಾರ್ಮಿಕರು ಕುಸಿದ ಚೀಲಗಳ ಅಡಿಯಲ್ಲಿ ಸಿಲುಕಿದ್ದು, ಜೀವನ್ಮರಣದೊಂದಿಗೆ ಹೋರಾಟ ನಡೆಸಿದ್ದಾಗಿ ಪ್ರತ್ಯಕ್ಷದರ್ಶಿ ಕಾರ್ಮಿಕರು ವಿವರಿಸಿದ್ದಾರೆ.
ಬಿಹಾರ ಮೂಲದ ಸುಮಾರು 50ಕ್ಕೂ ಹೆಚ್ಚು ಕಾರ್ಮಿಕರು ರಾಜಗುರು ಇಂಡಸ್ಟ್ರೀಸ್ ಅವರ ಫುಡ್ ಪ್ರೊಸೆಸಿಂಗ್ ಘಟಕದಲ್ಲಿ ಕೆಲಸ ಮಾಡುತ್ತಿದ್ದಾರೆ. ಸೋಮವಾರ ಸಂಜೆ ಮೆಕ್ಕೆಜೋಳ ತುಂಬಿದ್ದ ಚೀಲಗಳನ್ನು ನಿಟ್ಟಿನಂತೆ ಜೋಡಿಸುವ ಕೆಲಸದಲ್ಲಿ ತೊಡಗಿದ್ದರು.
ಸ್ಥಳದಲ್ಲಿರುವ ಕಾರ್ಮಿಕರು ಹೇಳುವ ಪ್ರಕಾರ ಮೆಕ್ಕೆಜೋಳದ ಚೀಲಗಳ ಅಡಿಯಲ್ಲಿ ಸುಮಾರು 25 ಕಾರ್ಮಿಕರು ಸಿಲುಕಿದ್ದು, 3-4 ಕಾರ್ಮಿಕರು ರಕ್ಷಣೆಗೆ ಕೂಗಿಕೊಳ್ಳುವ ಧ್ವನಿ ಕೇಳಿಸುತ್ತಿದೆ ಎಂದು ವಿವರಿಸಿದ್ದಾರೆ.ಘಟನೆಯಲ್ಲಿ ಗಾಯಗೊಂಡಿರುವ ಸುಮಾರು 3 ಕಾರ್ಮಿಕರರನ್ನು ನಗರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ದಾಖಲಿಸಿದ್ದು, ರಕ್ಷಣಾ ಕಾರ್ಯಾಚರಣೆ ಸಂಸರ್ಭದಲ್ಲಿ ಸೊಂಟದ ವರೆಗೆ ಚೀಲದ ನಿಟ್ಟಿಯಲ್ಲಿ ಸಿಲಕುರಿತು ಮೂವರು ಕಾರ್ಮಿಕರು ಪತ್ತೆಯಾಗಿದ್ದಾರೆ. ಆತಂಕದಲ್ಲಿರುವ ಕಾರ್ಮಿಕರಿಗೆ ಆತ್ಮ ಸ್ಥೈರ್ಯ ತುಂಬುತ್ತಿರುವ ಅಧಿಕಾರಿಗಳು, ಕುಡಿಯಲು ನೀರು ಒದಗಿಸಿದ್ದಾರೆ.ವಿಷಯ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, 3 ಅಗ್ನಿಶಾಮಕ ವಾಹನಗಳು ಸ್ಥಳದಲ್ಲಿ ಇರಿಸಸಲಾಗಿದೆ. 5 ಜೆಸಿಬಿ ಯಂತ್ರಗಳ ಸಹಾಯದಿಂದ ಅಪಾಯದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಿಸುವ ಕಾರ್ಯಾಚರಣೆ ನಡೆದಿದೆ.
ರಕ್ಷಿಸಲ್ಪಡುವ ಕಾರ್ಮಿಕರನ್ನು ತುರ್ತಾಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸಾಗಿಸಲು ಸ್ಥಳದಲ್ಲಿ 5 ಅಂಬ್ಯುಲೆನ್ಸ್ಗಳನ್ನು ಸನ್ನದ್ಧ ಸ್ಥಿತಿಯಲ್ಲಿ ಇರಿಸಲಾಗಿದೆ. ಗೋದಾಮುಗಳಲ್ಲಿ ರಾತ್ರಿ ವೇಳೆ ಸೂಕ್ತ ಬೆಳಕಿನ ವ್ಯವಸ್ಥೆ ಇಲ್ಲ. ಹೀಗಾಗಿ ರಾತ್ರಿ ವೇಳೆ ಕಾರ್ಯಾರಣೆಗೆ ಹೆಚ್ಚಿನ ಬೆಳಕಿಗಾಗಿ 2 ಜನರೇಟರ್ ತರಿಸಲಾಗಿದೆ.
ಕಾರ್ಯಚರಣೆಯಲ್ಲಿ ತೊಡಗಿರುವ ತಂಡಗಳ ಅಧಿಕಾರಿಗಳ ಮಾಹಿತಿ ಪ್ರಕಾರ ಮೂವರು ಕಾರ್ಮಿಕರು ಚೀಲಗಳ ಅಡಿಯಲ್ಲಿ ಸಿಲುಕಿದ್ದರೂ ಸುರಕ್ಷಿತವಾಗಿರುವುದು ಗೋಚರಿಸುತ್ತಿದೆ. ಇನ್ನೂ ಸುಮಾರು 10ಕ್ಕೂ ಹೆಚ್ಚು ಕಾರ್ಮಿಕರು ಚೀಲಗಳ ಅಡಿಯಲ್ಲಿ ಇರುವ ಸಾಧ್ಯತೆ. ಪೂರ್ಣ ಕಾರ್ಯಾಚರಣೆಯ ಬಳಿಕವೇ ಅಪಾಯಕ್ಕೆ ಸಿಲುಕಿರುವ ಕಾರ್ಮಿಕರ ನಿಖರ ಸಂಖ್ಯೆ ಬಹಿರಂಗವಾಗಲಿದೆ ಎಂದು ಹೇಳಿದ್ದಾರೆ.
ಅವಘಡ ಸಂಭಸಿರುವ ಗೋದಾಮಿನಲ್ಲಿ ಭಾರಿ ಪ್ರಮಾಣ ಧಾನ್ಯ ತುಂಬಿರುವ ಚೀಲಗಳನ್ನು ನಿಟ್ಟಾಗಿ ಒಟ್ಟಿದ್ದು, ಕಾರ್ಯಾಚರಣೆ ವೇಳೆ ಮತ್ತೆ ಕುಸಿಯುವ ಭೀತಿ ಇದೆ. ಹೀಗಾಗಿ ಮನುಷ್ಯರು ನೇರವಾಗಿ ಕಾರ್ಯಚರಣೇ ನಡೆಸದೆ ಜೆಸಿಬಿ ಯಂತ್ರಗಳ ಸಹಾಯದಿಂದ ಸೂಕ್ಷ್ಮವಾಗಿ ರಕ್ಷಣ ಕಾರ್ಯಾಚರಣೆ ನಡೆಸಿದ್ದಾರೆ.
ವಿಷಯ ತಿಳಿಯುತ್ತಲೇ ಸ್ಥಳಕ್ಕೆ ತೆರಳಿ ಬೀಡುಬಿಟ್ಟಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ ಭಗವಾನ್, ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯ ಮೇಲೆ ನಿಗಾ ವಹಿಸಿದ್ದಾರೆ.