ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


ಅಜ್ಜಿಕಟ್ಟೆ ರಿಫಾಯಿಯ್ಯ ದಫ್ ಇದರ ನೂತನ ಕಮಿಟಿ ರಚನೆ

Posted by Vidyamaana on 2023-08-19 13:18:46 |

Share: | | | | |


ಅಜ್ಜಿಕಟ್ಟೆ ರಿಫಾಯಿಯ್ಯ ದಫ್ ಇದರ ನೂತನ ಕಮಿಟಿ ರಚನೆ

ಪುತ್ತೂರು: ರಿಫಾಯಿಯ್ಯ ದಫ್ ಕಮೀಟಿ ಅಜ್ಜಿಕಟ್ಟೆ ಇದರ ಸಭೆ ಜೂ.30ರಂದು ನಡೆಯಿತು. ಜಮಾತಿನ ಗೌರವ್ಯಾಧ್ಯಕ್ಷ ಇಬ್ರಾಹಿಂ ಮುಲಾರ್, ಅಧ್ಯಕ್ಷ ಅಬೂಬಕ್ಕರ್ ಮುಲಾರ್ ಅಧ್ಯಕ್ಷತೆಯಲ್ಲಿ ಮಹಾಸಭೆ ನಡೆಯಿತು. ವೇದಿಕೆಯಲ್ಲಿ ದಫ್ ಕಮಿಟಿಯ ಅಧ್ಯಕ್ಷ ಸುಲೈಮಾನ್ ಮುಲಾರ್,ಪ್ರಮುಖ ಕಾರ್ಯದರ್ಶಿ ಆಶ್ರಫ್ ಕುರಿಯ ಹಾಗೂ SKSSF ಅಧ್ಯಕ್ಷ ಉಸ್ಮಾನ್ ಅಜ್ಜಿಕಟ್ಟೆ ಉಪಸ್ಥಿತಿಯಲ್ಲಿ 2023..24 ನೇ ಸಾಲಿನ ನೂತನ ಕಮಿಟಿಯನ್ನು ರಚನೆ ಮಾಡಲಾಯಿತು.ಅಧ್ಯಕ್ಷರಾಗಿ ಹಸೈನಾರ್ ಅಜ್ಜಿಕಟ್ಟೆ, ಉಪಾಧ್ಯಕ್ಷರಾಗಿ ಮುಸ್ತಾಫ ಮುಲಾರ್ ಮತ್ತು ಆಶ್ರಫ್ ಕುರಿಯ, ಪ್ರ. ಕಾರ್ಯದರ್ಶಿಯಾಗಿ ನಿಝರ್ ಅಜ್ಜಿಕಟ್ಟೆ, ಜೊತೆ ಕಾರ್ಯದರ್ಶಿಯಾಗಿ ಆಸಿಫ್ ಕುರಿಯ ಎ ಆರ್ ಮತ್ತು ಫವಾಜ್ ಕುರಿಯ,ಕೋಶಾಧಿಕಾರಿಯಾಗಿ ರಝಕ್ ಮುಲಾರ್ ಆಯ್ಕೆಯಾದರು. ಸದಸ್ಯರಾಗಿ ಸುಲೈಮಾನ್ ಮುಲಾರ್,ಅಬ್ದುಲ್ ಕುಂಞ ಕುರಿಯ,ಜಬ್ಬಾರ್ ಕುರಿಯ,ಹುಸೈನಾರ್ ಅಜ್ಜಿಕಟ್ಟೆ,ಮಹಮ್ಮದ್ (ಮಮ್ಮು) ಅಜ್ಜಿಕಟ್ಟೆ,ಇಬ್ರಾಹಿಂ ವೆಲ್ಡಿಂಗ್,ಝಾಯಿದ್ ಬೊಲ್ಲಗುಡ್ಡೆ,ಮಜೀದ್ ಕೋಡಿಜಾಲ್ ಆಯ್ಕೆಯಾದರು

ಎಲಾನ್ ಮಸ್ಕ್ ಜೊತೆ ಅಕ್ರಮ ಸಂಬಂಧ ಪತ್ನಿಗೆ ಡಿವೋರ್ಸ್ ಕೊಟ್ಟ ಗೂಗಲ್ ಸಹ ಸಂಸ್ಥಾಪಕ!

Posted by Vidyamaana on 2023-09-16 21:42:32 |

Share: | | | | |


ಎಲಾನ್ ಮಸ್ಕ್ ಜೊತೆ ಅಕ್ರಮ ಸಂಬಂಧ ಪತ್ನಿಗೆ ಡಿವೋರ್ಸ್ ಕೊಟ್ಟ ಗೂಗಲ್ ಸಹ ಸಂಸ್ಥಾಪಕ!

ನ್ಯೂಯಾರ್ಕ್: ಉದ್ಯಮಿ ಎಲಾನ್ ಮಸ್ಕ್ ಮತ್ತೆ ಸುದ್ದಿಯಲ್ಲಿದ್ದಾರೆ. ಈ ಬಾರಿ ಟ್ವಿಟರ್ ನಿಯಮ ಬದಲಾವಣೆ, ಶ್ರೀಮಂತರ ಪಟ್ಟಿ, ಉದ್ಯಮ ಸೇರಿದ ಕಾರಣವಲ್ಲ. ಇದೀಗ ಸುಂದರ ಸಂಸಾರದ ನಡುವೆ ಬಿರುಗಾಳಿ ಎಬ್ಬಿಸಿದ ಕಾರಣಕ್ಕೆ ಎಲಾನ್ ಮಸ್ಕ್ ಮತ್ತೆ ಟ್ರೆಂಡ್ ಆಗಿದ್ದಾರೆತನ್ನ ಪತ್ನಿಗೆ ಎಲಾನ್ ಮಸ್ಕ್ ಜೊತೆ ಅಫೇರ್ ಇದೆ ಅನ್ನೋ ಕಾರಣಕ್ಕೆ ಗೂಗಲ್ ಸಹ ಸಂಸ್ಥಾಪಕ ಸರ್ಗೆ ಬ್ರಿನ್ ದಾಂಪತ್ಯ ಜೀವನಕ್ಕೆ ವಿಚ್ಛೇದನ ನೀಡಿದ್ದಾರೆ. ಕೋರ್ಟ್ ಸರ್ಗೆ ಬ್ರಿನ್ ಹಾಗೂ ನಿಕೋಲ್ ಶನಹಾನ್ ಡಿವಿರೋಸ್‌ಗೆ ಅಂಕಿತ ಹಾಕಿದೆ.


2022ರಲ್ಲೇ ಎಲಾನ್ ಮಸ್ಕ್ ಹಾಗೂ ನಿಕೋಲ್ ಶಹನಾನ್ ನಡುವೆ ಗಾಢವಾದ ಸಂಬಂಧವಿದೆ ಅನ್ನೋ ಮಾತುಗಳು ಕೇಳಿಬಂದಿತ್ತು. ನಿಕೋಲ್ ಹಾಗೂ ಮಸ್ಕ್ ಗೆಳೆಯರಾಗಿದ್ದರು. ಆದರೆ ಈ ಗೆಳೆತನ ಅಕ್ರಮ ಸಂಬಂಧವಾಗಿ ಮಾರ್ಪಟ್ಟಿತ್ತು ಅನ್ನೋದು ಮಾಜಿ ಪತಿ ಸರ್ಗೆ ಬ್ರಿನ್ ಆರೋಪ. ಇದಕ್ಕೆ ಪುಷ್ಠಿ ನೀಡುವ ಹಲವು ದಾಖಲೆಗಳನ್ನು ಸರ್ಗೆ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಮಾಧ್ಯಮಗಳಲ್ಲೂ ಮಸ್ಕ್ ಹಾಗೂ ನಿಕೋಲ್ ನಡುವಿನ ಅಫೇರ್ ಸುದ್ದಿಯಾಗಿತ್ತು.ಗೆಳೆಯರಾಗಿದ್ದ ಸರ್ಗೆ ಹಾಗೂ ಮಸ್ಕ್ ಹಲವು ಬಾರಿ ಸುದ್ದಿಯಾಗಿದ್ದಾರೆ. ಎಲಾನ್ ಮಸ್ಕ್ ಸಂಕಷ್ಟದಲ್ಲಿದ್ದಾರೆ ಹಲವು ಬಾರಿ ಸರ್ಗೆ ಬ್ರಿನ್ ನೆರವು ನೀಡಿದ್ದರು. 2021ರಿಂದ ನಿಕೋಲ್ ಪತಿ ಸರ್ಗೆಗಿಂತ ಹೆಚ್ಚು ಮಸ್ಕ್ ಜೊತೆ ಆತ್ಮೀಯವಾಗಿದ್ದರು. ಹಲವು ಸುತ್ತಿನ ಮಾತುಕತೆ ಬಳಿಕ ಇಬ್ಬರು ಪರಸ್ಪರ ಬೇರ್ಪಟ್ಟಿದ್ದಾರೆ. 2018 ನವೆಂಬರ್ 11 ರಂದು ಗೂಗಲ್ ಸಹ ಸಂಸ್ಥಾಪಕ ಸರ್ಗೆ ಬ್ರಿನ್ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ನಿಕೋಲ್ ಶನಹಾನ್ ಕೈಹಿಡಿದ ಸರ್ಗೆ ಕಳೆದ ಮೂರು ವರ್ಷ ಜೊತೆಯಾಗಿದ್ದರು. ಇವರಿಗೆ ಹೆಣ್ಣು ಮಗುವಿದೆ. 2015ರ ಯೋಗ ಕಾರ್ಯಕ್ರಮದಲ್ಲಿ ಇವರಿಬ್ಬರು ಭೇಟಿಯಾಗಿದ್ದರು.


ಮಸ್ಕ್ ತಂದೆ ಕಳವಳ: ಜಗತ್ತಿನ ಶ್ರೀಮಂತ ವ್ಯಕ್ತಿಯಾಗಿರುವ ನನ್ನ ಪುತ್ರನನ್ನು ಯಾವುದೇ ಸಮಯದಲ್ಲಿ ಹತ್ಯೆ ಮಾಡಬಹುದು ಎಂದು ಎಲಾನ್‌ ಮಸ್‌್ಕರ ತಂದೆ ಎರ್ರಾಲ್‌ ಮಸ್‌್ಕ ಕಳವಳ ವ್ಯಕ್ತಪಡಿಸಿದ್ದಾರೆ. ಅಮೆರಿಕ ಸರ್ಕಾರ ನಿರ್ಧಾರಗಳಲ್ಲಿ ಎಲಾನ್‌ ಮಸ್‌್ಕ ಪಾತ್ರದ ಕುರಿತು ಇತ್ತೀಚೆಗೆ ಪ್ರಕಟವಾದ ವರದಿಯೊಂದರ ಹಿನ್ನೆಲೆಯಲ್ಲಿ ಎರ್ರಾಲ್‌ ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಉಕ್ರೇನ್‌ ಯುದ್ದದ ವಿಷಯದಲ್ಲಿ ಈಗಾಗಲೇ ಮಸ್‌್ಕ ರಷ್ಯಾದ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಜೊತೆಗೆ ಸರ್ಕಾರದ ಮೇಲೆ ಅವರ ಪ್ರಭಾವದ ವಿಷಯದ ಕೂಡಾ ಹತ್ಯೆಗೆ ಕಾರಣವಾಗಬಹುದು ಎಂದು ಎರ್ರಾಲ್‌ ಹೇಳಿದ್ದಾರೆ. ರಷ್ಯಾ ಯುದ್ಧದ ವೇಳೆ ಮಸ್‌್ಕ ಉಕ್ರೇನ್‌ಗೆ ಉಚಿತ ಇಂಟರ್ನೆಟ್‌ ಒದಗಿಸಿದ್ದರು.

ಕೊಂಬೆಟ್ಟು: ವಿದ್ಯುತ್ ಸುರಕ್ಷತಾ ಸಪ್ತಾಹ

Posted by Vidyamaana on 2023-07-08 16:42:46 |

Share: | | | | |


ಕೊಂಬೆಟ್ಟು: ವಿದ್ಯುತ್ ಸುರಕ್ಷತಾ ಸಪ್ತಾಹ

ಪುತ್ತೂರು: ಮೆಸ್ಕಾಂನ ಪುತ್ತೂರು ಉಪವಿಭಾಗದ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ ವಿದ್ಯುತ್ ಸುರಕ್ಷತಾ ಸಪ್ತಾಹ ಕೊಂಬೆಟ್ಟು ಜ್ಯೂನಿಯರ್ ಕಾಲೇಜಿನಲ್ಲಿ ಜರಗಿತು.ಪುತ್ತೂರು ನಗರ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಮಚಂದ್ರ ಎ. ಮಾತನಾಡಿ, ವಿದ್ಯುತ್ ಬಳಕೆ ಮತ್ತು ಎಚ್ಚರಿಕೆ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಕಾಲೇಜಿನ ಉಪಪ್ರಾಂಶುಪಾಲರು ಹಾಗೂ ಸಿಬ್ಬಂದಿಗಳು ಸಹಕರಿಸಿದರು. ಸಹಾಯಕ ಇಂಜಿನಿಯರ್ ರಾಜೇಶ್ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು.

ಮೆಸ್ಕಾಂ ಪವರ್ ಮ್ಯಾನ್ ಗಳಾದ ಶಂಕರ ತಳ್ಳಿ, ಹೇಮಂತ್ ಮತ್ತು ಸಂತೋಷ್ ಜಾದವ್ ಉಪಸ್ಥಿತರಿದ್ದರು.

ಪುತ್ತೂರು: ನಗರ ಸಭಾ ಸದಸ್ಯ ಶಿವರಾಮ ಸಪಲ್ಯ ನೇಣು ಬಿಗಿದು ಆತ್ಮಹತ್ಯೆ..!!!

Posted by Vidyamaana on 2023-03-16 09:37:38 |

Share: | | | | |


ಪುತ್ತೂರು: ನಗರ ಸಭಾ ಸದಸ್ಯ ಶಿವರಾಮ ಸಪಲ್ಯ ನೇಣು ಬಿಗಿದು ಆತ್ಮಹತ್ಯೆ..!!!

ಪುತ್ತೂರು; ನಗರಸಭಾ ಸದಸ್ಯ ಶಿವರಾಮ ಸಪಲ್ಯ ಅವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇದೀಗ ನಡೆದಿದೆ. ನಗರಸಭೆಯ ಒಂದನೇ ವಾರ್ಡ್ ಸದಸ್ಯರಾಗಿದ್ದ ಅವರು ಸಾಲ್ಮರ ಸಮೀಪದ ಉರಮಾಲಿನಲ್ಲಿರುವ ತನ್ನ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಮಾಹಿತಿ ಲಭ್ಯವಾಗಿದೆ.ಅವರು ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರು ಎಂದು ಮಾಹಿತಿ ಲಭ್ಯವಾಗಿದೆ.

ಪತಿಯು ಫೋನ್ ಕರೆ ಸ್ವೀಕರಿಸುತ್ತಿಲ್ಲವೆಂದು ಪತ್ನಿಯು ಹತ್ತಿರದ ಮನೆಯವರ  ಬಳಿ ತೆರಳುವಂತೆ ತಿಳಿಸಿದ್ದು, ಈ ವೇಳೆ ಅವರು ಮನೆ ಬಳಿ ತೆರಳಿ ನೋಡಿದಾಗ ಶಿವರಾಮ್ ರವರು ನೇಣು ಬಿಗಿದುಕೊಂಡಿದ್ದರು ಎಂದು ವರದಿಯಾಗಿದೆ. ಮೃತರು ಪತ್ನಿ ಮತ್ತು ಮಕ್ಕಳನ್ನು ಅಗಲಿದ್ದಾರೆ

ಉಡುಪಿ: ಭೀಕರ ಕಾರು ಅಪಘಾತ - ಯುವಕ ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ

Posted by Vidyamaana on 2023-12-21 16:34:47 |

Share: | | | | |


ಉಡುಪಿ: ಭೀಕರ ಕಾರು ಅಪಘಾತ - ಯುವಕ ಸ್ಥಳದಲ್ಲೇ ಸಾವು, ನಾಲ್ವರ ಸ್ಥಿತಿ ಗಂಭೀರ

ಉಡುಪಿ : ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿ.21ರಂದು ತಡರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಉದ್ಯಾವರದ ಐಸಿವೈಎಂ ಅಧ್ಯಕ್ಷ ಸ್ಥಳದಲ್ಲೇ ಸಾವನ್ನಪ್ಪಿ, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.ಅಪಘಾತದಲ್ಲಿ ಮೃತರಾದವರನ್ನು ಉದ್ಯಾವರದ ಸಂಪಿಗೆ ನಗರದ ನಿವಾಸಿ ರಾಬರ್ಟ್ ಕ್ಯಾಸ್ತಲಿನೋ ಎಂಬವರ ಪುತ್ರ ಜೋಯಿಸ್ಟನ್ ಕ್ಯಾಸ್ಟಲಿನೋ (22) ಎಂದು ಗುರುತಿಸಲಾಗಿದೆ.ಉದ್ಯಾವರದ ಐಸಿವೈಎಂ ಘಟಕದ ಸದಸ್ಯರಿದ್ದ ಫಿಗೋ ಕಾರು ಕುಂದಾಪುರದಲ್ಲಿ ಕಾರ್ಯಕ್ರಮ ಮುಗಿಸಿ ಉಡುಪಿ ಕಡೆಗೆ ಬರುತ್ತಿದ್ದಾಗ ಕೋಟೇಶ್ವರ ಬಳಿ ಕೆಟ್ಟು ನಿಂತ ಲಾರಿಗೆ ಡಿಕ್ಕಿ ಹೊಡೆದಿದೆ.


ಪರಿಣಾಮ ಲೆಸ್ಟನ್ ಪಿಂಟೊ (22), ಜಸ್ಟಿನ್ ಕಾರ್ಡೋಜಾ (22), ವಿಲ್ಸನ್ ಮಾರ್ಟಿಸ್ (23) ಮತ್ತು ಗ್ಲಾಡೆನ್ ಡಿಸಿಲ್ವಾ (23) ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದವರು ಉದ್ಯಾವರದ ಐಸಿವೈಎಂ ಘಟಕದ ಸದಸ್ಯರು ಎಂದು ತಿಳಿದು ಬಂದಿದೆ.ಯುವ ನಾಯಕನ ಅಗಲಿಕೆಗೆ ಕ್ರೈಸ್ತ ಸಮುದಾಯ ಸಂತಾಪ ಸೂಚಿಸಿದೆ.

ತನ್ನನ್ನು ಮುಗಿಸಿಬಿಡುತ್ತಾರೆ ಹೇಳಿಕೆಯನ್ನೇ ನೀಡಿಲ್ಲವೆಂದ ಮಾಜಿ ಶಾಸಕ

Posted by Vidyamaana on 2023-08-11 12:56:45 |

Share: | | | | |


ತನ್ನನ್ನು ಮುಗಿಸಿಬಿಡುತ್ತಾರೆ ಹೇಳಿಕೆಯನ್ನೇ ನೀಡಿಲ್ಲವೆಂದ ಮಾಜಿ ಶಾಸಕ

ಬೆಳ್ತಂಗಡಿ: ಸೌಜನ್ಯ ಕೊಲೆ,ಅತ್ಯಾಚಾರ ಪ್ರಕರಣದಲ್ಲಿ ಸತ್ಯ ಹೇಳಿದರೆ ನನ್ನನ್ನು ಮುಗಿಸಿ ಬಿಡುತ್ತಾರೆ ಎಂದು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಮಾಜಿ ಶಾಸಕ ವಸಂತ ಬಂಗೇರ ಹೇಳಿದ್ದರು. ಆದರೆ ಇದೀಗ ನಾನು ಆ ರೀತಿ ಹೇಳಿಕೆ ನೀಡಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.


ಈ ಬಗ್ಗೆ ಪುತ್ತೂರಿನಲ್ಲಿ ಮಾತನಾಡಿದ ಅವರು ಸೌಜನ್ಯ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಿದ್ದೇ ನಾನು, ವಿಧಾನಸಭೆಯಲ್ಲಿ ಈ ಬಗ್ಗೆ ಒತ್ತಾಯ ಮಾಡಿರುವುದೇ ನಾನು, 6 ತಿಂಗಳು ಸಿಬಿಐ ಚೆನ್ನಾಗಿ ತನಿಖೆ ಮಾಡಿದೆ, ಆದರೆ 6 ತಿಂಗಳ ಬಳಿಕ ಸಿಬಿಐ ಕವಚಿ ಬಿದ್ದಿದ್ದು, ತಪ್ಪು ದಾರಿಯಲ್ಲಿ ಹೋಗಿದೆ. ನನ್ನ ಪ್ರಕಾರ ಈ ಪ್ರಕರಣವನ್ನು ತನಿಖೆ ಮಾಡಿ ಆರೋಪಿಗಳ ಪತ್ತೆ ಹಚ್ಚಲು ಸಾಧ್ಯ ಸಂದರ್ಭ ಬಂದಾಗ ಸೌಜನ್ಯ ವಿಚಾರದಲ್ಲಿ ಹೇಳಬೇಕಾದ ವಿಚಾರವನ್ನು ಹೇಳುತ್ತೇನೆ.


ಆದರೆ ಸತ್ಯ ಹೇಳಿದರೆ ನನ್ನನ್ನು ಕೊಲ್ಲುತ್ತಾರೆ ಎಂದು ನಾನು ಹೇಳೆ ಇಲ್ಲ ಎಂದರು. ಜೀವಂತವಾಗಿ ಯಾರಿಗೂ ನನ್ನನ್ನು ಕೊಲ್ಲಲು ಸಾಧ್ಯವಿಲ್ಲ ಜಿಲ್ಲೆಯಲ್ಲಿ ತಾಲೂಕಿನಲ್ಲಿ ಎಷ್ಟೇ ದೊಡ್ಡವರಿಗೂ ಒಬ್ಬನನ್ನು ಕೊಲ್ಲಲು ಸಾಧ್ಯವಿಲ್ಲ. ಬೆಳ್ತಂಗಡಿಯಲ್ಲಿ ನಡೆದ ಸಭೆಯಲ್ಲಿ ದೇವರು ನನ್ನನ್ನು ರಕ್ಷಣೆ ಮಾಡುತ್ತಾರೆ ಎಂದಿದ್ದೆ, ಆದರೆ ನನ್ನ ಮಾತನ್ನು ಮಾಧ್ಯಮಗಳ ತಿರುಚಿವೆ ಎಂದಿದ್ದಾರೆ.



Leave a Comment: