KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ರಶ್ಯನ್ ತೈಲ ಖರೀದಿಯಲ್ಲಿ ಹೆಚ್ಚುಳ

Posted by Vidyamaana on 2023-01-19 09:02:36 |

Share: | | | | |


ರಶ್ಯನ್ ತೈಲ ಖರೀದಿಯಲ್ಲಿ ಹೆಚ್ಚುಳ

   ಭಾರತ ಕಳೆದ ವರ್ಷಕ್ಕಿಂತ 33 ಪಟ್ಟು ಹೆಚ್ಚು ರಶ್ಯನ್ ತೈಲವನ್ನು ಖರೀದಿಸುತ್ತಿದೆ. ವಿಶ್ವದ ಮೂರನೇ ಅತಿದೊಡ್ಡ ಕಚ್ಚಾ ತೈಲ ಆಮದುದಾರ ದೇಶವಾಗಿ ಭಾರತ ಕಳೆದ ಡಿಸೆಂಬರ್ನಲ್ಲಿ ರಶ್ಯದಿಂದ ದಿನಕ್ಕೆ ಸರಾಸರಿ 12 ಲಕ್ಷ ಬ್ಯಾರೆಲ್ಗಳನ್ನು ಖರೀದಿಸಿದೆ ಎನ್ನುತ್ತಿವೆ ವರದಿಗಳು. ಇದು ದಾಖಲೆ ಪ್ರಮಾಣದ ತೈಲ ಖರೀದಿಯಾಗಿದೆ. ಹಿಂದಿನ ವರ್ಷಕ್ಕಿಂತ ಭಾರೀ ದೊಡ್ಡ ಮೊತ್ತದ ಆಮದು ಇದಾಗಿದೆ. ಈ ಪ್ರಮಾಣ ನವೆಂಬರ್ನಲ್ಲಿ ಖರೀದಿಸಿದ್ದಕ್ಕಿಂತ ಶೇ.29ರಷ್ಟು ಜಾಸ್ತಿ.

ಹಲವು ತಿಂಗಳುಗಳ ಹಿಂದೆ ಇರಾಕ್ ಮತ್ತು ಸೌದಿ ಅರೇಬಿಯವನ್ನು ಹಿಂದಿಕ್ಕಿದ ನಂತರ ರಶ್ಯವು ಈಗ ಸುಲಭವಾಗಿ ಭಾರತದ ಅತಿದೊಡ್ಡ ತೈಲ ಮೂಲವಾಗಿದೆ. ಉಕ್ರೇನ್ ಆಕ್ರಮಣದಿಂದ ಅನೇಕ ಖರೀದಿದಾರರು ರಶ್ಯದಿಂದ ತೈಲ ಖರೀದಿಸುವುದಕ್ಕೆ ಹಿಂದೇಟು ಹಾಕಿರುವ ಹೊತ್ತಲ್ಲಿ ಭಾರತೀಯ ಸಂಸ್ಕರಣಾಗಾರಗಳು ಅಗ್ಗದ ರಶ್ಯದ ಕಚ್ಚಾ ತೈಲವನ್ನು ದೊಡ್ಡ ಮಟ್ಟದಲ್ಲಿ ಆಮದು ಮಾಡಿಕೊಳ್ಳುತ್ತಿವೆ. ರಶ್ಯ ತನ್ನ ಕಚ್ಚಾ ತೈಲವನ್ನು ಭಾರತೀಯ ಸಂಸ್ಕರಣಾಗಾರಗಳಿಗೆ ಆಕರ್ಷಕ ರಿಯಾಯಿತಿಯಲ್ಲಿ ನೀಡಿದೆ. ಇದರ ಪರಿಣಾಮವಾಗಿ ರಶ್ಯದ ಕಚ್ಚಾ ತೈಲದ ಅತಿದೊಡ್ಡ ಆಮದುದಾರ ದೇಶವಾಗಿ ಭಾರತ ಚೀನಾವನ್ನು ಮೀರಿಸಿದೆ.

ಭಾರತವು ತನ್ನ ತೈಲ ಬೇಡಿಕೆಯ ಶೇ. 85ಕ್ಕಿಂತ ಹೆಚ್ಚಿನ ಪ್ರಮಾಣದ ಆಮದು ಮಾಡಿಕೊಳ್ಳುತ್ತಿದೆ. ಮೇ ತಿಂಗಳಿನಿಂದ ಡೀಸೆಲ್ ಮತ್ತು ಗ್ಯಾಸೋಲಿನ್ನ ಪಂಪ್ ಬೆಲೆಗಳನ್ನು ಹೆಚ್ಚಿಸದಂತೆ ಸರಕಾರದಿಂದ ತಡೆಯಲ್ಪಟ್ಟ ಸರಕಾರಿ ಸ್ವಾಮ್ಯದ ಸಂಸ್ಕರಣಾಗಾರಗಳು ಅಗ್ಗದ ರಶ್ಯದ ಆಮದುಗಳಿಗೆ ಹೆಚ್ಚು ಒಲವು ತೋರಿವೆ.

ಭಾರತಕ್ಕೆ ತೈಲ ಪೂರೈಸುವ ಇತರ ಎರಡು ಪ್ರಮುಖ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುವ ಪ್ರಮಾಣ ಕೂಡ ಕಳೆದ ತಿಂಗಳು ಹೆಚ್ಚಾಗಿದೆ. ಇರಾಕ್ನಿಂದ ದಿನಕ್ಕೆ 8,86,000 ಬ್ಯಾರೆಲ್ಗಳು ಅಂದರೆ ಶೇ. 7ರಷ್ಟು ಏರಿಕೆಯಾಗಿದ್ದರೆ, ಸೌದಿ ಅರೇಬಿಯದಿಂದ ದಿನಕ್ಕೆ 7,48,000 ಬ್ಯಾರೆಲ್ಗಳು ಅಂದರೆ ಶೇ. 12ರಷ್ಟು ಹೆಚ್ಚಿದೆ ಎಂದು ವರದಿಗಳು ಹೇಳುತ್ತಿವೆ.

ಉಕ್ರೇನ್ ಮೇಲೆ ರಶ್ಯ ಯುದ್ಧ ಆರಂಭಿಸಿದಾಗಿನಿಂದ ರಶ್ಯ ಮತ್ತು ಭಾರತದ ಮಧ್ಯೆ ತೈಲ ವ್ಯವಹಾರ ಸಾಕಷ್ಟು ಹೆಚ್ಚಿದೆ. ಎಪ್ರಿಲ್ ತಿಂಗಳಿನಿಂದೀಚೆ ರಶ್ಯದಿಂದ ಭಾರತ ಆಮದು ಮಾಡಿಕೊಂಡ ಕಚ್ಚಾ ತೈಲದ ಪ್ರಮಾಣ ಐವತ್ತು ಪಟ್ಟು ಹೆಚ್ಚಾಗಿದೆ. ಉಕ್ರೇನ್ ಯುದ್ಧಕ್ಕೆ ಮುನ್ನ ರಶ್ಯದಿಂದ ಭಾರತ ಆಮದು ಮಾಡಿಕೊಳ್ಳುತ್ತಿದ್ದ ತೈಲದ ಪ್ರಮಾಣ ಶೇ. 0.2 ಮಾತ್ರ. ಈಗ ವಿದೇಶಗಳಿಂದ ಭಾರತ ಆಮದು ಮಾಡಿಕೊಳ್ಳುವ ತೈಲದಲ್ಲಿ ರಶ್ಯದ ಪಾಲು ಶೇ. 10ಕ್ಕೆ ಹೆಚ್ಚಿದೆ.

ಮೇ ತಿಂಗಳಲ್ಲಿ ಭಾರತೀಯ ಕಂಪೆನಿಗಳು ರಶ್ಯನ್ ತೈಲ ಕಂಪೆನಿಗಳಿಂದ 25 ಮಿಲಿಯನ್ ಬ್ಯಾರಲ್ ಕಚ್ಚಾ ತೈಲವನ್ನು ಖರೀದಿ ಮಾಡಿದ್ದವು. ಇದರೊಂದಿಗೆ ಭಾರತಕ್ಕೆ ತೈಲ ಸರಬರಾಜು ಮಾಡುವ ದೇಶಗಳ ಪೈಕಿ ರಶ್ಯ ಸೌದಿ ಅರೇಬಿಯವನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೇರಿತ್ತು. ಇರಾಕ್ ಭಾರತಕ್ಕೆ ಈಗಲೂ ಅತಿದೊಡ್ಡ ತೈಲ ಸರಬರಾಜುದಾರ ದೇಶವಾಗಿ ಮುಂದುವರಿದಿದೆ.

ಎಲ್ಲವೂ ಉಕ್ರೇನ್ ಯುದ್ಧದ ಪರಿಣಾಮ. ಉಕ್ರೇನ್ ಯುದ್ಧ ಶುರುವಾದಾಗಿನಿಂದ ರಶ್ಯ ಮೇಲೆ ವಿವಿಧ ರೀತಿಯ ಅಂತರ್ರಾಷ್ಟ್ರೀಯ ನಿಷೇಧಗಳನ್ನು ಹೇರಲಾಗಿದೆ. ತತ್ಪರಿಣಾಮವಾಗಿ ರಶ್ಯದಿಂದ ಅತಿ ಕಡಿಮೆ ಬೆಲೆಗೆ ತೈಲ ಬಿಕರಿಯಾಗುತ್ತಿದೆ. ಭಾರತ ಈ ಅವಕಾಶವನ್ನು ಸದುಪಯೋಗಿಸಿಕೊಳ್ಳುತ್ತಿದ್ದು, ಭಾರತೀಯ ತೈಲ ಸಂಸ್ಕರಣ ಸಂಸ್ಥೆಗಳು ಕಡಿಮೆ ಬೆಲೆಗೆ ರಶ್ಯ ತೈಲವನ್ನು ಖರೀದಿ ಮಾಡುತ್ತಿವೆ. ಹೀಗಾಗಿಯೇ ಎಪ್ರಿಲ್ ನಂತರದ ಅವಧಿಯಲ್ಲಿ ರಶ್ಯದಿಂದ ಭಾರತ ಆಮದು ಮಾಡಿಕೊಳ್ಳುವ ತೈಲ ಪ್ರಮಾಣ ಹೆಚ್ಚುತ್ತಿರುವುದು.

ಉಕ್ರೇನ್ ಮೇಲೆ ಯುದ್ಧ ಮಾಡುತ್ತಿರುವ ರಶ್ಯ ಮೇಲೆ ಅಮೆರಿಕ ಹಾಗೂ ಅನೇಕ ಯುರೋಪಿಯನ್ ದೇಶಗಳು ನಿರ್ಬಂಧಗಳನ್ನು ಹೇರಿವೆ. ರಶ್ಯ ಜೊತೆ ಯಾವುದೇ ವ್ಯವಹಾರ ಮಾಡದಂತೆ ಇತರ ಹಲವು ದೇಶಗಳಿಗೆ ತಾಕೀತು ಮಾಡುತ್ತಿವೆ. ಹೀಗಿದ್ದರೂ ಭಾರತ ರಶ್ಯ ಜೊತೆ ಮಿಲಿಟರಿ ಶಸ್ತ್ರಾಸ್ತ್ರ ಖರೀದಿ ಮುಂದುವರಿಸುತ್ತಿದೆ, ಈಗ ತೈಲ ಖರೀದಿ ಪ್ರಮಾಣವನ್ನು ಗಣನೀಯವಾಗಿ ಹೆಚ್ಚಿಸುತ್ತಿದೆ. ರಶ್ಯದೊಂದಿಗಿನ ತಾನು ಹೊಂದಿರುವ ವ್ಯವಹಾರವನ್ನು ಭಾರತ ಸಮರ್ಥಿಸಿಕೊಳ್ಳುತ್ತಿದೆ. ತನ್ನ ಹಿತಾಸಕ್ತಿಗೆ ತಕ್ಕಂತೆ ನಡೆ ಇಡುವುದಾಗಿ ಭಾರತ ಸ್ಪಷ್ಟಪಡಿಸಿದೆ.

ಈಗ ಅತಿ ಹೆಚ್ಚು ತೈಲ ಆಮದು ಮಾಡಿಕೊಳ್ಳುವ ಮತ್ತು ಬಳಕೆ ಮಾಡುವ ದೇಶಗಳಲ್ಲಿ ಭಾರತ ಮೂರನೇ ಸ್ಥಾನದಲ್ಲಿದೆ. ಅಮೆರಿಕ ಮತ್ತು ಚೀನಾ ಬಿಟ್ಟರೆ ಭಾರತವೇ ಅತಿಹೆಚ್ಚು ತೈಲ ಆಮದು ಮಾಡಿಕೊಳ್ಳುವುದು. ಭಾರತದಲ್ಲಿ ಬಳಕೆಯಾಗುವ ತೈಲದಲ್ಲಿ ಶೇ. 85ರಷ್ಟು ಪ್ರಮಾಣವು ಬೇರೆ ದೇಶಗಳಿಂದ ಆಮದಾಗಿರುವಂಥವೇ. ಇರಾಕ್ ಮತ್ತು ಸೌದಿ ಅರೇಬಿಯ ಸಾಂಪ್ರದಾಯಿಕವಾಗಿ ಭಾರತಕ್ಕೆ ಅತಿ ಹೆಚ್ಚು ತೈಲ ಸರಬರಾಜು ಮಾಡುತ್ತಿದ್ದ ದೇಶಗಳು. ಈಗ ರಶ್ಯ ಪ್ರವೇಶವಾಗಿದೆ.

ಉಕ್ರೇನ್ ಮತ್ತು ರಶ್ಯ ಯುದ್ಧದ ಪರಿಣಾಮ ಬೇರೆ ತೈಲ ಮಾರುಕಟ್ಟೆಗಳಲ್ಲಿ ಬೆಲೆ ಸಿಕ್ಕಾಪಟ್ಟೆ ಹೆಚ್ಚುತ್ತಿದೆ. ಅಮೆರಿಕ ಮತ್ತಿತರ ದೇಶಗಳ ಒತ್ತಡದಿಂದಾಗಿ ರಶ್ಯದಿಂದ ತೈಲ ಖರೀದಿಸಲು ಹಲವು ದೇಶಗಳು ಹಿಂದೇಟು ಹಾಕಿವೆ. ಹೀಗಾಗಿ, ರಶ್ಯದ ಉರಲ್ನಲ್ಲಿರುವ ಕಚ್ಚಾ ತೈಲವನ್ನು ಖರೀದಿಸಲು ಮುಂದಾಗಿರುವ ದೇಶಗಳು ಕಡಿಮೆಯೇ. ಹೀಗಾಗಿ, ರಶ್ಯದ ತೈಲ ಕಡಿಮೆ ಬೆಲೆಗೆ ಸಿಗುತ್ತಿದೆ. ಭಾರತದ ತೈಲ ಸಂಸ್ಕರಣ ಕಂಪೆನಿಗಳು ರಶ್ಯದಿಂದ ಒಂದು ಬ್ಯಾರಲ್ಗೆ 30 ಡಾಲರ್ ರಿಯಾ ಯಿತಿ ದರದಲ್ಲಿ ಕಚ್ಚಾ ತೈಲ ಖರೀದಿ ಮಾಡುತ್ತಿವೆ.

ರಶ್ಯ ತೈಲ ಖರೀದಿ ಸಮರ್ಥಿಸಿದ ಭಾರತ

ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳು, ಪರಸ್ಪರರ ಹಿತಾಸಕ್ತಿ ಹಾಗೂ ದ್ವಿಪಕ್ಷೀಯ ಸಹಕಾರ ಬಲಪಡಿಸುವ ಸಂಬಂಧ ಭಾರತ ಮತ್ತು ರಷ್ಯಾ ಮಂಗಳವಾರ ಮಾಸ್ಕೊದಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದವು.

ಭಾರತೀಯ ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ರಷ್ಯಾ ವಿದೇಶಾಂಗ ಸಚಿವ ಸೆರ್ಗಿ ಲಾವ್ರೊವ್ ಅವರು ಮಾತುಕತೆಯಲ್ಲಿ ಭಾಗಿಯಾಗಿದ್ದರು.

ಫೆಬ್ರುವರಿಯಲ್ಲಿ ರಷ್ಯಾ ಮತ್ತು ಉಕ್ರೇನ್ ಸಂಘರ್ಷ ಶುರುವಾದ ನಂತರ ಉಭಯ ಸಚಿವರು ಈಗಾಗಲೇ ನಾಲ್ಕು ಬಾರಿ ಪರಸ್ಪರ ಭೇಟಿಯಾಗಿ ಪರಸ್ಪರ ಮಾತುಕತೆ ನಡೆಸಿದ್ದರು.

ಭಾರತ ಮತ್ತು ರಷ್ಯಾ ನಡುವಿನ ಹಿತಾಸಕ್ತಿಗಳ ಬಗ್ಗೆ ಸಹಜ ಚರ್ಚೆ ನಡೆಸಿದ್ದೇವೆ. ಅಸ್ಥಿರತೆಯ ಈ ಕಾಲದಲ್ಲಿ, ನಾವು ನಿಜವಾಗಿಯೂ ಜಾಗತಿಕ ಆರ್ಥಿಕತೆಯ ಸ್ಥಿರತೆಗೆ ನೆರವಾಗುವ ಒಳ್ಳೆಯ ಕೆಲಸ ಮಾಡುತ್ತಿದ್ದೇವೆ. ತೈಲ ಮತ್ತು ಅನಿಲ ಖರೀದಿಯಲ್ಲಿ ಮೂರನೇ ಅತಿದೊಡ್ಡ ಗ್ರಾಹಕ ಎನಿಸಿರುವ ನಮ್ಮ ದೇಶದ ಆದಾಯವು ಹೆಚ್ಚಿಲ್ಲದ ಕಾರಣ, ನಾವು ಕೈಗೆಟಕುವ ದರದಲ್ಲಿ ಇಂಧನ ಪಡೆಯಬೇಕಾಗಿದೆ. ಈ ಹಿನ್ನೆಲೆಯಲ್ಲಿ ರಷ್ಯಾ ಜತೆಗಿನ ಸಂಬಂಧ ಭಾರತಕ್ಕೆ ಪ್ರಯೋಜನಕಾರಿಯಾಗಿದೆ. ರಷ್ಯಾ ಜತೆಗೆ ನಮ್ಮ ಬಾಂಧವ್ಯವನ್ನು ಮುಂದುವರಿಸುತ್ತೇವೆ’ ಎಂದು ಜೈಶಂಕರ್, ರಷ್ಯಾದಿಂದ ತೈಲ ಖರೀದಿ ಸಮರ್ಥಿಸಿಕೊಂಡರು.

ಇದು ಯುದ್ಧ ಕಾಲವಲ್ಲ’ವೆಂದು ಪುಟಿನ್ ಅವರಿಗೆ ಮೋದಿ ಹೇಳಿದ್ದ ಕಿವಿ ಮಾತನ್ನು ನೆನಪಿಸಿದ ಅವರು, ಉಕ್ರೇನ್ ಮೇಲೆ ಆಗುತ್ತಿರುವ ಪರಿಣಾಮಗಳನ್ನು ಗಮನಿಸಿಯೇ ಉಭಯ ರಾಷ್ಟ್ರಗಳಿಗೂ ಮಾತುಕತೆಗೆ ಮರಳುವಂತೆ ಭಾರತ ಬಲವಾಗಿ ಒತ್ತಾಯಿಸುತ್ತಲೇ ಇದೆ’ ಎಂದು ಎಸ್. ಜೈಶಂಕರ್ ಹೇಳಿರುವುದಾಗಿ ‘ಎನ್ಡಿಟಿವಿ’ ವರದಿ ಮಾಡಿದೆ.

ಉಕ್ರೇನ್ ಮೇಲಿನ ರಷ್ಯಾ ಆಕ್ರಮಣವನ್ನು ಭಾರತ ಈವರೆಗೆ ಖಂಡಿಸಿಲ್ಲ. ರಾಜತಾಂತ್ರಿಕತೆ ಮತ್ತು ಮಾತುಕತೆ ಮೂಲಕವೇ ಬಿಕ್ಕಟ್ಟು ಶಮನಕ್ಕೆ ಭಾರತ ಉಭಯತ್ರರನ್ನು ಒತ್ತಾಯಿಸುತ್ತಲೇ ಇದೆ.  


ಪುಟಿನ್ ಜತೆ ಮಾತುಕತೆಗೆ ಝೆಲೆನ್ಸ್ಕಿ ಒಲವು

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಮಾತುಕತೆ ನಡೆಸಲು ನಿರಾಕರಿಸಿದ್ದ ಉಕ್ರೇನ್ ನಿಲುವಿನಲ್ಲಿ ಮಹತ್ವದ ಬದಲಾವಣೆಯಾಗಿದ್ದು, ಶಾಂತಿ ಮಾತುಕತೆ ಸಾಧ್ಯತೆಯತ್ತ ಸಾಗುವ ಸುಳಿವು ನೀಡಿದೆ. 

       ಅಮೆರಿಕದಲ್ಲಿ ನಡೆಯಲಿರುವ ಪ್ರಮುಖ ಚುನಾವಣೆಯ ಹಿನ್ನೆಲೆಯಲ್ಲಿ ಉಕ್ರೇನ್ ನಿಲುವು ಬದಲಿಸಿಕೊಂಡಿದ್ದು, ಪುಟಿನ್ ಜತೆಗೆ ಶಾಂತಿ ಮಾತುಕತೆ ನಡೆಸುವ ಸಾಧ್ಯತೆಯ ಬಗ್ಗೆ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಸುಳಿವು ನೀಡಿದ್ದಾರೆ.

       ಸೋಮವಾರ ತಡವಾಗಿ ವಿಶ್ವ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಝೆಲೆನ್ಸ್ಕಿ ಅವರು ‘ರಷ್ಯಾವನ್ನು ನಿಜವಾದ ಶಾಂತಿ ಮಾತುಕತೆಗಳಿಗೆ ಮರಳುವಂತೆ ಒತ್ತಡ ಹೇರಬೇಕು’ ಎಂದು ಒತ್ತಾಯಿಸಿದರು.

        ಉಕ್ರೇನ್ನ ಎಲ್ಲ ಆಕ್ರಮಿತ ಭೂಮಿಯನ್ನು ಹಿಂದಿರುಗಿಸಬೇಕು, ಯುದ್ಧದಿಂದ ಉಂಟಾದ ಹಾನಿ ಮತ್ತು ಯುದ್ಧ ಅಪರಾಧಗಳ ವಿಚಾರಣೆ ನಡೆಸಿ ಸೂಕ್ತ ಪರಿಹಾರ ನೀಡಬೇಕು ಎಂದು ಝೆಲೆನ್ಸ್ಕಿ ಅವರು ಪುಟಿನ್ ಜತೆಗಿನ ಶಾಂತಿ ಮಾತುಕತೆಗೆ ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ರಿಪಬ್ಲಿಕನ್ ಪಕ್ಷದ ಸಂಸದರು ಹೆಚ್ಚಿನ ಸಂಖ್ಯೆಯಲ್ಲಿ ಆರಿಸಿ ಬಂದರೆ ಬೈಡನ್ ಸರ್ಕಾರ ಉಕ್ರೇನ್ಗೆ ಮಿಲಿಟರಿ ಮತ್ತು ಆರ್ಥಿಕ ನೆರವಿನ ಪ್ಯಾಕೇಜ್ ಮುಂದುವರಿಸುವುದು ಕಷ್ಟವಾಗಬಹುದು ಎನ್ನುವ ಕಾರಣಕ್ಕೆ ಝೆಲೆನ್ಸ್ಕಿ ಅವರು, ಪುಟಿನ್ ಜತೆಗೆ ಮಾತುಕತೆ ಅಸಾಧ್ಯವೆಂದಿದ್ದ ರಾಗವನ್ನು ಈಗ ಬದಲಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

      ರಷ್ಯಾದ ವಿದೇಶಾಂಗ ಉಪ ಸಚಿವ ಆಂಡ್ರೀ ರುದೆನ್ಕೊ ಅವರು, ಮಾತುಕತೆಗೆ ಪುನಾ ಮರಳಲು ರಷ್ಯಾ ಯಾವುದೇ ಷರತ್ತುಗಳನ್ನು ಮುಂದಿಟ್ಟಿಲ್ಲ. ಆದರೆ, ಮಾತುಕತೆ ನಡೆಸಲು ಉಕ್ರೇನ್ಗೆ ಇಚ್ಛಾಶಕ್ತಿಯ ಕೊರತೆ ಇದೆ ಎಂದು ಆರೋಪಿಸಿದರು.

BREAKING :ವಯನಾಡ್ ನಲ್ಲಿ ಭೀಕರ ಭೂಕುಸಿತ : ಮೃತರ ಸಂಖ್ಯೆ 95ಕ್ಕೆ ಏರಿಕೆ, 2 ದಿನಗಳ ಶೋಕಾಚರಣೆ ಘೋಷಣೆ

Posted by Vidyamaana on 2024-07-30 17:12:16 |

Share: | | | | |


BREAKING :ವಯನಾಡ್ ನಲ್ಲಿ ಭೀಕರ ಭೂಕುಸಿತ : ಮೃತರ ಸಂಖ್ಯೆ 95ಕ್ಕೆ ಏರಿಕೆ, 2 ದಿನಗಳ ಶೋಕಾಚರಣೆ ಘೋಷಣೆ

ವಯನಾಡ್ : ಕೇರಳದ ವಯನಾಡ್ ಜಿಲ್ಲೆಯ ಮೆಪ್ಪಾಡಿ ಬಳಿಯ ಗುಡ್ಡಗಾಡು ಪ್ರದೇಶಗಳಲ್ಲಿ ಮಂಗಳವಾರ ಮುಂಜಾನೆ ಸಂಭವಿಸಿದ ಭಾರಿ ಭೂಕುಸಿತದಲ್ಲಿ ಕನಿಷ್ಠ 95 ಜನರು ಸಾವನ್ನಪ್ಪಿದ್ದಾರೆ ಮತ್ತು 119 ಜನರು ಗಾಯಗೊಂಡಿದ್ದಾರೆ. ಮೂಲಗಳ ಪ್ರಕಾರ, ಗುಡ್ಡಗಾಡು ಪ್ರದೇಶಗಳಿಂದ ಈವರೆಗೆ 250 ಜನರನ್ನು ರಕ್ಷಿಸಲಾಗಿದೆ.ರಕ್ಷಣಾ ಕಾರ್ಯಾಚರಣೆಗಾಗಿ ಸೇನೆ ಮತ್ತು ನಾಲ್ಕು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ (NDRF) ತಂಡಗಳನ್ನು ನೆಲದಲ್ಲಿ ನಿಯೋಜಿಸಲಾಗಿದೆ.

ಉಪ್ಪಿನಂಗಡಿ : ಜ.13, 14 ರಂದು ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಾಹಿತ್ಯೋತ್ಸವ

Posted by Vidyamaana on 2024-01-11 20:59:54 |

Share: | | | | |


ಉಪ್ಪಿನಂಗಡಿ : ಜ.13, 14 ರಂದು ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಾಹಿತ್ಯೋತ್ಸವ

ಉಪ್ಪಿನಂಗಡಿ : ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ ಫೆಡರೇಶನ್ ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಾಹಿತ್ಯೋತ್ಸವವು 2024 ಜನವರಿ 13, 14ರಂದು ಉಪ್ಪಿನಂಗಡಿಯ ಸರಳಿಕಟ್ಟೆಯ ಮಸೀದಿ ಸಭಾಂಗಣದಲ್ಲಿ ನಡೆಯಲಿದೆ. ಶಾಖೆ, ಸೆಕ್ಟರ್, ಡಿವಿಷನ್ ಸಾಹಿತ್ಯೋತ್ಸವ ಈಗಾಗಲೇ ಮುಕ್ತಾಯಗೊಂಡಿದ್ದು, ಡಿವಿಷನ್ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದ ಸ್ಪರ್ಧಾರ್ಥಿಗಳು ಜಿಲ್ಲಾ ಮಟ್ಟದಲ್ಲಿ ನಡೆಯುವ ಸಾಹಿತ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ. 5 ವೇದಿಕೆಗಳಲ್ಲಿ ಜೂನಿಯರ್, ‌ಸೀನಿಯರ್, ಜನರಲ್, ಹಾಗೂ ಕ್ಯಾಂಪಸ್ ವಿಭಾಗಗಳಲ್ಲಿ ನಡೆಯುವ ಕಲಾ ಸಾಹಿತ್ಯ ಸ್ಪರ್ಧೆಯಲ್ಲಿ 6 ಡಿವಿಷನ್ ನಿಂದ ಸುಮಾರು 900 ಸ್ಪರ್ಧಾರ್ಥಿಗಳು ತಮ್ಮ ಪ್ರತಿಭೆಯನ್ನು ಅಲಂಕರಿಸಲಿದ್ದಾರೆ ಎಂದು ಸಂಘಾಟಕರು ತಿಳಿಸಿದ್ದಾರೆ.

ಉಪ್ಪಿನಂಗಡಿ: ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾಲಕ

Posted by Vidyamaana on 2024-04-20 15:41:19 |

Share: | | | | |


ಉಪ್ಪಿನಂಗಡಿ: ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಬಾಲಕ

ಉಪ್ಪಿನಂಗಡಿ: ಬಾಲಕನೋರ್ವ ಮನೆಯ ಕಿಟಕಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಎಂಬಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ಬಾಲಕ ಇಲ್ಲಿನ ಖಾಸಗಿ ಶಾಲೆಯ ಮುಂದಿನ ಅವಧಿಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಕರಾಯ ಗ್ರಾಮದ ಶಿವಗಿರಿ ದುಗಲಾಡಿ ಮನೆ ನಿವಾಸಿ ನಂದನ್ (13) ಎಂದು ಗುರುತಿಸಲಾಗಿದೆ.

ಪಂಜದ ದಿವಂಗತ ರೋಹಿತ್ ಗೌಡ ಎಂಬವ ರ ಮಗನಾಗಿದ್ದ ಈತ ತನ್ನ ತಂದೆಯ ನಿಧನದ ನಂತರ ದುಗಲಾಡಿಯ ತನ್ನ ಮಾವನ ಮನೆಯಲ್ಲಿದ್ದು ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಕಲಿಯುತ್ತಿದ್ದ. ಈತ ಏಳನೇ ತರಗತಿ ಉತ್ತೀರ್ಣನಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ 8 ನೇ ತರಗತಿಗೆ ತೇರ್ಗಡೆ ಹೊಂದಿದ್ದ.

ಅಂಬರ್ ಗ್ರೀಸ್ (ತಿಮಿಂಗಿಲದ ವಾಂತಿ )ಅಕ್ರಮ ಮಾರಾಟ ಪ್ರಕರಣ: ಆರೋಪಿಗೆ ಜಾಮೀನು

Posted by Vidyamaana on 2023-12-29 21:33:56 |

Share: | | | | |


ಅಂಬರ್ ಗ್ರೀಸ್ (ತಿಮಿಂಗಿಲದ ವಾಂತಿ )ಅಕ್ರಮ ಮಾರಾಟ ಪ್ರಕರಣ: ಆರೋಪಿಗೆ ಜಾಮೀನು

ಪುತ್ತೂರು :ಅಕ್ರಮವಾಗಿ ತಿಮಿಂಗಿಲದ ವಾಂತಿಯನ್ನು (ಅಂಬರ್ ಗ್ರೀಸ್) ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಎಂಬ ಪ್ರಕರಣದ  ಆರೋಪಿ ಎನ್ನಲಾಗಿದ್ದ ಅಬೂಬಕ್ಕರ್ ಸಿದ್ದೀಕ್ ರವರಿಗೆ ಪುತ್ತೂರು  ಹಿರಿಯ ವ್ಯವಹಾರಿಕ ನ್ಯಾಯಾಧೀಶರಾದ ಗೌಡ ಆರ್. ಪಿ ಅವರು ಜಾಮೀನು ಮಂಜೂರು ಮಾಡಿದ್ದಾರೆ.

ಪೋಲೀಸ್ ಸಿ.ಐ ಡಿ ಅರಣ್ಯ ಸಂಚಾರಿ ದಳ ಮಂಗಳೂರು ರವರು ತಮಗೆ ದೊರೆತ ಖಚಿತ ಮಾಹಿತಿಯ ಆಧಾರದಲ್ಲಿ ದಿನಾಂಕ 19 /12/2023 ರಂದು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪುತ್ತೂರು ನಗರದ ಕೋರ್ಟ್ ರಸ್ತೆ ಬಳಿ ಅಂದರೆ ಪುತ್ತೂರು ಕೋರ್ಟ್ ನಿಂದ ಪುತ್ತೂರು ಕೆ.ಎಸ್.ಆರ್. ಟಿ.ಸಿ ಬಸ್ ನಿಲ್ದಾಣದ ಕಡೆಗೆ ಹೋಗುವ ಸಾರ್ವಜನಿಕರ ರಸ್ತೆಯಲ್ಲಿ ಸರ್ಕಾರದ ಪರವಾನಿಗೆ ಇಲ್ಲದೆ ಅಕ್ರಮವಾಗಿ K A.21  Z 3733 ನೇ ಮಾರುತಿ ಸುಜುಕಿ ಕಾರಿನಲ್ಲಿ ಅಕ್ರಮವಾಗಿ ಸುಮಾರು 3.5  ಕಿಲೋ ತೂಕದ ಕೋಟ್ಯಾಂತರ ಮೌಲ್ಯದ ಅಂಬರ್ ಗ್ರೀಸ್ (ತಿಮಿಂಗಿಲ ವಾಂತಿ) ಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸಿದ್ದ ಆರೋಪಿಯನ್ನು ಬಂಧಿಸಿ ಹಾಗೂ ಕಾರನ್ನು ಮತ್ತು ಸೊತ್ತುಗಳನ್ನು ಪಂಚರ ಸಮಕ್ಷಮ ಮಹಜಾರು ಮೂಲಕ ವಶಪಡಿಸಿಕೊಂಡಿದ್ದು, ಆರೋಪಿಯ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯಿದೆ 1972 ರ ಅಡಿಯಲ್ಲಿ ಪ್ರಕರಣವನ್ನು  ದಾಖಲಿಸಿದ್ದರು. ತದನಂತರ ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿದಿಸಿತ್ತು. ಆರೋಪಿ ಅಬೂಬಕ್ಕರ್  ಸಿದ್ದೀಕ್ ತನ್ನ ಪರ ವಕೀಲರಾದ ಶ್ರೀ ಮಹೇಶ್ ಕಜೆಯವರ ಮುಖಾಂತರ ಮಾನ್ಯ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರು  ಆರೋಪಿ ಪರ ಸಲ್ಲಿಸಿದ್ದ ಜಾಮೀನು ಅರ್ಜಿಗೆ ಅಕ್ಷೇಪವನ್ನು ಸಲ್ಲಿಸಿದ್ದರು. ವಾದ ವಿವಾದವನ್ನು ಆಲಿಸಿದ  ಪುತ್ತೂರಿನ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಲಯವು ಆರೋಪಿಗೆ ಶರ್ತಬದ್ಧ ಜಾಮೀನು ಮಂಜೂರು ಮಾಡಿದೆ.

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಕತ್ತಿ ವಶಕ್ಕೆ

Posted by Vidyamaana on 2024-08-29 05:58:32 |

Share: | | | | |


ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಕೊಲೆ ಪ್ರಕರಣ: ಆರೋಪಿಗಳ ಮನೆಯಿಂದ ಬೈಕ್, ಕತ್ತಿ ವಶಕ್ಕೆ

ಬೆಳ್ತಂಗಡಿ : ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ (83) ಕೊಲೆ ಪ್ರಕರಣ ಸಂಬಂಧ ಇಬ್ಬರು ಆರೋಪಿಗಳನ್ನು ಆ.26 ರಂದು ಐದು ದಿನ ಪೊಲೀಸ್ ಕಸ್ಟಡಿಗೆ ಪಡೆದ ಬಳಿಕ ಆ.28 ರಂದು ಮಧ್ಯಾಹ್ನ ಕಾಸರಗೋಡು ಮನೆಗೆ ತೆರಳಿದ ಧರ್ಮಸ್ಥಳ ಪೊಲೀಸರ ತಂಡ ಕೊಲೆಗೆ ಬಳಸಿದ ಬೈಕ್, ಕತ್ತಿ, ಬಟ್ಟೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್(83) ಅವರನ್ನು ಕೊಲೆ ಮಾಡಿದ ಆರೋಪಿಗಳಾದ ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ

Recent News


Leave a Comment: