ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ ಸದನದಲ್ಲಿ ತುಳುವಿನಲ್ಲೇ ವಿಚಾರಮಂಡಿಸಿದ ಶಾಸಕ ಅಶೋಕ್ ರೈ

ಸುದ್ದಿಗಳು News

Posted by vidyamaana on 2024-07-24 16:44:22 |

Share: | | | | |


ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ ಸದನದಲ್ಲಿ ತುಳುವಿನಲ್ಲೇ ವಿಚಾರಮಂಡಿಸಿದ ಶಾಸಕ ಅಶೋಕ್ ರೈ

ಪುತ್ತೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಸೇರಿಸಬೇಕು ಎಂದು ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ತುಳು ಭಾಷೆಯಲ್ಲೇ ವಿಧಾನಸಭಾ ಅಧಿವೇಶನದಲ್ಲಿ ವಿಚಾರವನ್ನು ಮಂಡಿಸಿದ್ದು , ಶಾಸಕರ ಬೇಡಿಕೆಗೆ ಸರಕಾರದಿಂದ ಗಟ್ಟಿ ಭರವಸೆ ದೊರೆತಿದ್ದು ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆ ಈಡೇರಲಿದೆ ಎಂದು ಸರಕಾರ ಭರವಸೆಯನ್ನು ನೀಡಿದೆ.

ತುಳುವಿಗೆ ೨೦೦೦ ವರ್ಷದ ಇತಿಹಾಸವಿದೆ

ತುಳುಭಾಷೆಗೆ ಎರಡು ಸಾವಿರ ವರ್ಷದ ಇತಿಹಾಸವಿದೆ. ತುಳು ಮಾತನಾಡುವ ಮಂದಿ ವಿಶ್ವದೆಲ್ಲೆಡೆ ಇದ್ದಾರೆ. ತುಳು ಭಾಷೆಗೆ ಮಾನ್ಯತೆ ಸಿಗಬೇಕು ಎಂದು ಅನೇಕ ವರ್ಷಗಳಿಂದ ಹೋರಾಟಗಳು ನಡೆಯುತ್ತಿದೆ. ಎಟಂನೇ ಪರಿಚ್ಚೇಧಕ್ಕೆ ಸೇರ್ಪಡೆ ಮಾಡಬೇಕು ಎಂಬ ಬೇಡಿಕೆ ಇನ್ನೊಂದು ಕಡೆ ಇದೆ ಇದೆಲ್ಲದರ ನಡುವೆ ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂಬ ಆಗ್ರಹವನ್ನು ಶಾಸಕನಾಗಿ ಕಳೆದ ಒಂದು ವರ್ಷದಿಂದ ಮಾಡುತ್ತಿದ್ದೇನೆ.

೧೯೯೪ ರಲ್ಲಿ ವೀರಪ್ಪ ಮೊಯಿಲಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದ್ದಾರೆ, ೨೦೦೭ ರಲ್ಲಿ ಕೇರಳ ಸರಕಾರ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದೆ, ಆಕಾಶವಾಣಿಯಲ್ಲಿ ೧೯೭೬ ರಿಂದ ಆಕಾಶವಾಣಿಯಲ್ಲಿ ತುಳು ಕಾರ್ಯಕ್ರಮ ಪ್ರಸಾರವಾಗುತ್ತಿದೆ, ಅಮೇರಿಕಾದಲ್ಲಿ ಸಿಆರ್ ಎಕ್ಸಾಮ್‌ಗೆ ಅರ್ಜಿ ನಮೂನೆಯಲ್ಲೂ ವಿಶ್ವದ ೧೨೨ ಭಾಷೆಯ ಜೊತೆಗೆ ತುಳುವಿಗೆ ಮಾನ್ಯತೆ ನೀಡಲಾಗಿದೆ, ಗೂಗಲ್ ಸಂಸ್ಥೆಯವರು ತರ್ಜುಮೆ ಮಾಡಬಲ್ಲ ಭಾಷೆಗಳ ಪಟ್ಟಿಯಲ್ಲಿ ತುಳುವನ್ನು ಸೇರ್ಪಡೆ ಮಾಡಿದ್ದಾರೆ. ಇಷ್ಟೆಲ್ಲಾ ಇರುವಾಗ ನಮ್ಮ ರಾಜ್ಯದಲ್ಲಿ ತುಳುವನ್ನು ಅದಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು.

ಮೂರು ರಾಜ್ಯಗಳಿಗೆ ಅಧ್ಯಯನ ತಂಡ ಕಳಿಸಿದ್ದೇನೆ

ಬಿಹಾರ, ಪಶ್ಚಿಮಬಂಗಾಳ ಮತ್ತು ಆಂದ್ರಕ್ಕೆ ವಿಶೇಷ ಪ್ರತಿನಿಧಿಯನ್ನು ತನ್ನ ಸ್ವಂತ ಖರ್ಚಿನಲ್ಲಿ ಕಳಿಸಿದ್ದೇನೆ. ಈ ಮೂರು ರಾಜ್ಯಗಳಲ್ಲಿ ಸ್ಥಳೀಯ ಭಾಷೆಯನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಯಾವ ಆಧಾರದಲ್ಲಿ ಘೋಷಣೆ ಮಾಡಿದ್ದಾರೆ ಎಂಬುದನ್ನು ಅಧ್ಯಯನ ನಡೆಲಲಾಗಿದೆ. ಆಂದ್ರದಿಂದ ವರದಿಯನ್ನು ತರಿಸಿದ್ದೇನೆ.. ಈ ವರದಿಯನ್ನು ಸರಕಾರದ ಮುಂದೆ ಇಡಲಿದ್ದು ಅದರ ಆಧಾರದಲ್ಲಿ ಕರ್ನಾಟಕದಲ್ಲಿ ತುಳುವನ್ನು ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ಸಹಕಾರಿಯಾಗಲಿದೆ ಎಂಬ ಕಾರಣಕ್ಕೆ ನಾನು ಸ್ವಂತ ಖರ್ಚಿನಲ್ಲೇ ಅಧ್ಯಯನ ತಂಡವನ್ನು ಮೂರು ರಾಜ್ಯಗಳಿಗೆ ಕಳಿಸಿದ್ದೇನೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.

ವಿಶ್ವದಲ್ಲೇ ತುಳವರಿದ್ದಾರೆ, ತುಳುವರು ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಾರೆ.


ನಿಕ್ಲು ಗಲಾಟೆ ಮಲ್ಪೊಡ್ಚಿ ಕುಲ್ಲುಲೆ ಮಾರ್ರೆ

ಪುತ್ತೂರು ಶಾಸಕ ಅಶೋಕ್ ರೈಯವರು ಸದನದಲ್ಲಿ ತುಳು ಭಾಷೆಯಲ್ಲಿ ಮಾತನಾಡುವ ವೇಳೆ ಮಧ್ಯದಲ್ಲಿ ಮಾತನಾಡಿದ ಮಂಗಳೂರು ಶಾಸಕ ವೇದವ್ಯಾಸ ಕಾಮತ್‌ರಲ್ಲಿ ಈರ್ ಬೊಕ್ಕ ಪಾತೆರ‍್ಲೆ , ಇತ್ತೆ ಯಾನ್ ಪಾತರೊಂದುಲ್ಲೆ ಎಂದು ಶಾಸಕ ಅಶೋಕ್ ರೈ ವೇದವ್ಯಾಸ ಕಾಮತರಿಗೆ ಹೇಳಿದಾಗ ಮಧ್ಯಪ್ರವೇಶ ಮಾಡಿದ ಸಭಾಪತಿ ಯು ಟಿ ಖಾದರ್ ನಿಕ್ಲು ಗಲಾಟೆ ಮಲ್ಪೊಡ್ಚಿ ಮಾರ್ರೆ ಈರ್ ಕುಲ್ಲುಲೆ ಎಂದು ಶಾಸಕ ವೇದವ್ಯಾಸ ಕಾಮತರಿಗೆ ಕುಳಿತುಕೊಳ್ಳಲು ಹೇಳಿದರು.

 ಇದೇನು ಮಂಗಳೂರು ಅಧಿವೇಶನವಾ: ಆರ್ ಅಶೋಕ್

ಸದನದಲ್ಲಿ ಶಾಸಕ ಅಶೋಕ್ ರೈ ಮತ್ತು ಸಭಾಪತಿ ಯು ಟಿ ಖಾದರ್ ರವರು ತುಳುವಿನಲ್ಲಿ ಮಾತನಾಡುತ್ತಿದ್ದ ವೇಳೆ ಎದ್ದು ನಿಂತ ವಿರೋಧ ಪಕ್ಷದ ನಾಯಕ ಆರ್ ಆಶೋಕ್ ಇದೇನು ಮಂಗಳೂರು ಅಧಿವೇಶಧನವಾ? ಎಂದು ನಗುತ್ತಲೇ ಹೇಳಿದರು. ಈ ವೇಳೆ ಮಾತನಾಡಿದ ಶಾಸಕ ಅಶೋಕ್ ರೈಯವರು ವಿರೋಧ ಪಕ್ಷದ ನಾಯಕರಾದ ಆರ್ ಆಶೋಕ್ ರವರೇ ನಾವು ತುಳುವಿನಲ್ಲಿ ಮಾತನಾಡಿದ್ದನ್ನು ಕನ್ನಡದಲ್ಲಿ ಹೇಳುತ್ತೇನೆ. ನೀವು ನಮ್ಮ ಹೋರಾಟಕ್ಕೆ , ನಮ್ಮ ಬೇಡಿಕೆಗೆ ಬೆಂಬಲವನ್ನು ನೀಡಬೇಕು, ಇಡೀ ಸದನ ನಮ್ಮ ನಿಲುವಿಗೆ ಬೆಂಬಲ ನೀಡಬೇಕು ಅ ಮೂಲಕ ತುಳು ಭಾಷೆಗೆ ಸರಕಾರದಿಂದ ಮಾನ್ಯತೆ ದೊರೆಯುವಂತಾಗಲಿ ಇದಕ್ಕೆ ಎಲ್ಲರ ಸಹಕಾರವನ್ನು ಕೋರಿದರು. ತುಳುವಿಗೆ ಲಿಪಿ ಇದೆ, ವಿಶ್ವದಲ್ಲೆಡೆ ತುಳು ಮಾತನಾಡುವ ಮಂದಿ ಇದ್ದಾರೆ ಎಂದು ಹೇಳಿದ ಶಾಸಕ ಅಶೋಕ್ ರೈಯವರು ಸಭಾಧ್ಯಕ್ಷೆರೇ ಈರ್ ಸಪೋರ್ಟು ಮಲ್ಪೊಡು, ಈರ್‌ನ ಸಹಕಾರ ಎಂಕ್ಲೆಗ್ ಬೋಡು ಎಂದು ಮನವಿ ಮಾಡಿದರು.

ಅಶೋಕ್ ರೈಗೆ ಅಭಿನಂದನೆ ಸಲ್ಲಿಸಿದ ವೇದವ್ಯಾಸ ಕಾಮತ್

ಸದನದಲ್ಲಿ ಮಾತನಾಡಿದ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ತುಳು ವಿಚಾರದಲ್ಲಿ ಪ್ರಾರಂಭದಿಂದಲೇ ಸರಕರದ ಗಮನಸೆಳೆದ ಪುತ್ತೂರು ಶಾಸಕರಾದ ಅಶೋಕ್ ರೈಯವರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಭೆಯಲ್ಲಿ ತಿಳಿಸಿದರು.

ನಿಮ್ಮ ಕಾಳಜಿಗೆ ಅಭಿನಂದನೆ; ಸಚಿವ ಖರ್ಗೆ

ತನ್ನ ಸ್ವಂತ ಖರ್ಚಿನಲ್ಲಿ ಅಧ್ಯಯನ ತಂಢವನ್ನು ಮೂರು ರಾಜ್ಯಕ್ಕೆ ಕಳುಹಿಸುವ ಮೂಲಕ ತನ್ನ ಊರಿನ ಮಾತೃಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಡಬೇಕು ಎನ್ನುವ ನಿಮ್ಮ ಕಾಳಜಿಗೆ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಪ್ರಿಯಾಂಕ ಖರ್ಗೆ ಶಾಸಕ ಅಶೋಕ್ ರೈಯವರಿಗೆ ಅಭಿನಂದನೆ ಸಲ್ಲಿಸಿದರು. ಮಾತೃಭಷೆಯ ಮೇಲೆ ಎಲ್ಲರಿಗೂ ಪ್ರೀತಿ ಇರುತ್ತದೆ ಆದರಲ್ಲೂ ಅಶೋಕ್ ರೈಯವರು ಈವಿಚಾರದಲ್ಲಿ ಒಂದು ಹಜ್ಜೆ ಮುಂದೆ ಇದ್ದಾರೆ ಇದು ಅಭಿನಂದನಾರ್ಹ ಎಂದು ಸಚಿವರು ಸಭೆಯಲ್ಲಿ ಹೇಳಿದರು.

 ಖಂಡಿತವಾಗಿಯೂ ಬೇಡಿಕೆ ಈಡೇರಲಿದೆ: ಪ್ರಿಯಾಂಕ ಖರ್ಗೆ

ಡಾ. ಮೋಹನ್ ಆಳ್ವರ ನೇತೃತ್ವದ ಸಮಿತಿಯ ವರದಿಯಲ್ಲಿ ಸಾಧ್ಯವಿದೆ ಎಂಬುದರ ಬಗ್ಗೆ ವರದಿ ನೀಡಲಾಗಿದೆ.. ತನ್ನ ಸ್ವಂತ ಖರ್ಚಿನಲ್ಲಿ ತಂಡವನ್ನು ಕಳುಹಿಸಿ ಅಧ್ಯಯನ ನಡೆಸಿದ ಶಾಸಕ ಅಶೋಕ್ ರೈಯವರ ಕಾಳಜಿಯನ್ನು ಮೆಚ್ಚಲೇಬೇಕು. ತುಳು ಭಾಷೆ, ಅದರ ಸಂಸ್ಕೃತಿ, ಅದರ ಸೌಂದರ್ಯ, ಪ್ರಾಚೀನತೆ, ಎಲ್ಲವೂ ಗೌರವದಿಂದ ಕೂಡಿದೆ. ಸರಕಾರದ ಮುಂದೆ ಈ ಪ್ರಸ್ತಾಪ ಇದೆ. ತುಳುವಿಗೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಲ್ಲಿ ಸರಕಾರಕ್ಕೆ ಮುತುವರ್ಜಿ ಇದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಪರವಾಗಿ ಮಾತನಾಡಿದ ಸಚಿವ ಪ್ರಿಯಾಂಕ ಖರ್ಗೆ ಸಭೆಗೆ ತಿಳಿಸಿದರು. ವೈಯುಕ್ತಿಕವಾಗಿಯೂ ಈ ಪ್ರಸ್ತಾಪಕ್ಕೆ ನನ್ನ ಬೆಂಬಲ ಇದೆ ಎಂದು ಸಚಿವರು ಹೇಳಿದರು.

ಸಚಿವರ ಸಭೆ ಕರೆದು ತೀರ್ಮಾನಿಸಿ: ಸಭಾಪತಿ

ಈ ವಿಚಾರದಲ್ಲಿ ಸರಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಚಿವರನ್ನೊಳಗೊಂಡಂತೆ ಆ ಭಾಗದ ಶಾಸಕರ ಸಭೆಯನ್ನು ಕರೆದು ತೀರ್ಮಾನ ಕೈಗೊಳ್ಳುವಂತೆ ಸಭಾಪತಿ ಯು ಟಿ ಖಾದರ್ ರವರು ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಸೂಚನೆಯನ್ನು ನೀಡಿದರು.

ಎರಡನೇ ಬಾರಿಗೆ ತುಳುವಿನಲ್ಲಿ ಮಾತು

ಶಾಸಕ ಅಶೋಕ್ ರೈಯವರು ತಾನು ಶಾಸಕನಾಗಿ ಮೊದಲ ಅಧಿವೇಶನದಲ್ಲೇ ತುಳುವಿನಲ್ಲಿ ಮಾತನಾಡಿದ್ದರು. ಈ ವಿಚಾರ ಅತೀ ಹೆಚ್ಚು ವೈರಲ್ ಆಗಿತ್ತು. ಅಧಿವೇಶನದ ಇತಿಹಾಸದಲ್ಲೇ ಮೊದಲ ಬಾರಿಗೆ ತುಳುವಿನಲ್ಲಿ ಮಾತನಾಡುವ ಮೂಲಕ ತುಳುವನ್ನು ವಿಶ್ವಕ್ಕೆ ಪರಿಚಯಿಸುವ ಕೆಲಸವನ್ನು ಮಾಡಿದ್ದರು. ಇದೀಗ ಎರಡನೇ ಬಾರಿಗೆ ತುಳುವಿನಲ್ಲಿ ಅಧಿವೇಶನದಲ್ಲಿ ಮಾತನಾಡಿರುವುದು ತುಳು ಭಾಷೆಗೆ ಸಿಕ್ಕ ಮಾನ್ಯತೆ ಎಂದೇ ಹೇಳಬಹುದು

 Share: | | | | |


ಹಾಜಿ ಅಲಿ ದರ್ಗಾ ನವೀಕರಣ: ನಟ ಅಕ್ಷಯ್ ಕುಮಾರ್ 1.21 ಕೋಟಿ ರೂ. ದೇಣಿಗೆ!

Posted by Vidyamaana on 2024-08-08 22:06:48 |

Share: | | | | |


ಹಾಜಿ ಅಲಿ ದರ್ಗಾ ನವೀಕರಣ: ನಟ ಅಕ್ಷಯ್ ಕುಮಾರ್ 1.21 ಕೋಟಿ ರೂ. ದೇಣಿಗೆ!

ಮುಂಬೈ : ಹಾಜಿ ಅಲಿ ದರ್ಗಾದ ನವೀಕರಣ ಯೋಜನೆಗೆ ಬಾಲಿವುಡ್ ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ 1.21 ಕೋಟಿ ರೂ. ದೇಣಿಗೆ ನೀಡಿದ್ದಾರೆ ಎಂದು ಮಸೀದಿಯ ಟ್ರಸ್ಟ್ ನ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.ಈ ವಿಷಯವನ್ನು ಹಾಜಿ ಅಲಿ ದರ್ಗಾದ ವ್ಯವಸ್ಥಾಪಕ ಟ್ರಸ್ಟಿ ಸುಹೈಲ್ ಖಂದ್ವಾನಿ ಅವರು ಎಕ್ಸ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಪುತ್ತೂರಿನಲ್ಲಿ ಮತ್ತೆ ಬಂದಿದೆ ಚರುಂಬುರಿ ಹಬ್ಬ

Posted by Vidyamaana on 2023-08-12 10:54:11 |

Share: | | | | |


ಪುತ್ತೂರಿನಲ್ಲಿ ಮತ್ತೆ ಬಂದಿದೆ ಚರುಂಬುರಿ ಹಬ್ಬ

ಪುತ್ತೂರು: ಚರುಂಬುರಿ ಪ್ರಿಯರೇ ಇತ್ತ ಕೇಳಿ, ಪುತ್ತೂರಿನಲ್ಲಿ ಮತ್ತೊಮ್ಮೆ ಚರುಂಬುರಿ ಹಬ್ಬ ಶುರುವಾಗಿದೆ.

ಇತಿಹಾಸದಲ್ಲೇ ಮೊದಲ ಬಾರಿಗೆ ಚರುಂಬುರಿ ಹಬ್ಬದ ಪರಿಕಲ್ಪನೆಯನ್ನು ಜನರ ಮುಂದಿಟ್ಟು ಯಶಸ್ವಿಯಾಗಿರುವ ಪ್ರಭು ಸ್ವೀಟ್ಸ್ & ಚರುಂಬುರಿ ಸಂಸ್ಥೆ ಇದೀಗ ಮತ್ತೊಮ್ಮೆ ಚರುಂಬುರಿ ಹಬ್ಬವನ್ನು ಕೈಗೊಂಡಿದೆ.

ಆ. 12ರಂದು ಸಂಜೆ 6.30ಕ್ಕೆ ಚರುಂಬುರಿ ಹಬ್ಬಕ್ಕೆ ಚಾಲನೆ ಸಿಗಲಿದೆ. ಬಳಿಕ ಆಗಸ್ಟ್ 15ರವರೆಗೆ ಪ್ರತಿದಿನ ಸಂಜೆ 4ರಿಂದ ರಾತ್ರಿ 11 ಗಂಟೆಯವರೆಗೆ ಚರುಂಬುರಿ ಹಬ್ಬ ನಡೆಯಲಿದೆ. ಕೊಂಬೆಟ್ಟು ರಸ್ತೆಯ ಜಿ.ಎಲ್. ಟ್ರೇಡ್ ಸೆಂಟರ್ ಬಿಲ್ಡಿಂಗಿನ ರೂಫ್ ಟಾಪಿನಲ್ಲಿ ಹಬ್ಬ ಮೂಡಿಬರಲಿದೆ.

ಉದ್ಘಾಟನಾ ಸಮಾರಂಭದಲ್ಲಿ ತುಳು ಚಿತ್ರರಂಗ ಹಾಗೂ ರಂಗಭೂಮಿ ನಟ ಸತೀಶ್ ಬಂದಳೆ ಅವರು ಚರುಂಬುರಿ ಹಬ್ಬ ಉದ್ಘಾಟಿಸಲಿದ್ದಾರೆ. ಭಟ್ ಆ್ಯಂಡ್ ಭಟ್ ಯೂಟ್ಯೂಬ್ ವಾಹಿನಿಯ ಸ್ಥಾಪಕ ಸುದರ್ಶನ್ ಭಟ್ ಮುಖ್ಯ ಅತಿಥಿಯಾಗಿರುವರು. ಪುತ್ತೂರಿನ ಡಾ. ಶಿವರಾಮ ಭಟ್ ಕ್ಲಿನಿಕಿನಲ್ಲಿ ಕಾಂಪೌಂಡರ್ ಆಗಿದ್ದು, ಇದೀಗ ತನ್ನ ವೃತ್ತಿಗೆ ನಿವೃತ್ತಿ ಘೋಷಿಸಿರುವ ನರಸಿಂಹ ಭಟ್ ಅವರಿಗೆ ಇದೇ ಸಂದರ್ಭ ಸನ್ಮಾನಿಸಲಾಗುವುದು. 

ಹಿಂದಿನ ಕಾಲದಲ್ಲಿ ಜಾತ್ರೆ ಎಂದರೆ ಚರುಂಬುರಿ. ಜಾತ್ರೆಯ ಗದ್ದೆಯಲ್ಲಿ ಚರುಂಬುರಿ ತಯಾರಿಸುವ ದೃಶ್ಯ ಇಂದಿಗೂ ಎಲ್ಲರ ಸ್ಮೃತಿಪಟಲದಲ್ಲಿ ಸದಾ ಹಸಿರು. ಇದೇ ಚಿತ್ರಣವನ್ನು ಮತ್ತೆ ನಿಮ್ಮ ಮನದಲ್ಲಿ ತುಂಬಿಕೊಡುವ ಪ್ರಯತ್ನ ಚರುಂಬುರಿ ಹಬ್ಬದಲ್ಲಿ ನಡೆಯಲಿದೆ. ಆಗ ಚರುಂಬುರಿ ಮಾಡುತ್ತಿದ್ದ ವಿಧಾನ ಹಾಗೂ ಆಗಿನ ರುಚಿಯ ಚರುಂಬುರಿಯನ್ನು ಈಗಿನ ಜನರಿಗೆ ಒದಗಿಸುವ ಪ್ರಯತ್ನ ಇಲ್ಲಿ ನಡೆಯಲಿದೆ. ನೆಲದ ಮೇಲೆ ಕುಳಿತು, ಗ್ಯಾಸ್ ಲೈಟ್ ಉರಿಸಿ, ಆಧುನಿಕ ರುಚಿವರ್ಧಕ ಬಳಸದೇ ಮಾಡುವ ಚರುಂಬುರಿ ಈ ಬಾರಿಯ ವಿಶೇಷ ಆಕರ್ಷಣೆ. ಇಷ್ಟಲ್ಲದೆ ರೂ. 20ರಿಂದ ರೂ. 50ರ ತನಕ ವಿವಿಧ ಬಗೆಯ ಚರುಂಬುರಿಗಳು ಈ ಹಬ್ಬದಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಮಾಲಕ ರಾಜೇಶ್ ಪ್ರಭು ತಿಳಿಸಿದ್ದಾರೆ.

ಬಂಟರ ಭವನದ ಪ್ರಾಂಗಣದಲ್ಲಿ ಚರುಂಬುರಿ ಹಬ್ಬಕ್ಕೆ ಆಗಮಿಸುವವರಿಗಾಗಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. ಸುಮಾರು 200 ಜನ ಕುಳಿತು ಚರುಂಬುರಿ ಸೇವಿಸುವ ವ್ಯವಸ್ಥೆಯನ್ನು ಜಿ.ಎಲ್. ಟ್ರೇಡ್ ಸೆಂಟರಿ ಮಾಳಿಗೆಯಲ್ಲಿ ಮಾಡಲಾಗಿದೆ.


ಹೊಸ ಪರಿಕಲ್ಪನೆ ಮುಂದಿಟ್ಟಿರುವ ಪ್ರಭು ಚರುಂಭುರಿ

ಈ ಚರುಂಬುರಿ ಹಬ್ಬ ಪರಿಕಲ್ಪನೆಯೇ ಹೊಸದು. ಕಳೆದ ಸುಮಾರು 25 ವರ್ಷಗಳಿಂದ ಚರುಂಬುರಿ ವ್ಯವಹಾರದಲ್ಲಿ ತೊಡಗಿಕೊಂಡಿರುವ ಪ್ರಭು ಚರುಂಬುರಿ, ಆರಂಭದಲ್ಲಿ ಬಂಟ್ವಾಳದ ಸುತ್ತಮುತ್ತ ಚರುಂಬುರಿ ವ್ಯವಹಾರ ಮಾಡಿಕೊಂಡಿದ್ದರು. ಬಳಿಕ ಪುತ್ತೂರಿನ ಶ್ರೀಧರ್ ಭಟ್ ಅವರ ಅಂಗಡಿ ಮುಂಭಾಗದಲ್ಲಿಯೂ ವ್ಯವಹಾರ ನಡೆಸಿಕೊಂಡಿದ್ದರು. ಇದೀಗ ಕಳೆದ ಮೂರು ವರ್ಷಗಳಿಂದ ಕೊಂಬೆಟ್ಟಿನ ಬಂಟರ ಭವನದ ಮುಂಭಾಗದ ಜಿ.ಎಲ್. ಟ್ರೇಡ್ ಸೆಂಟರಿನಲ್ಲಿ ಪ್ರಭು ಚರುಂಬುರಿ ಅಂಗಡಿ ಕಾರ್ಯನಿರ್ವಹಿಸುತ್ತಿದೆ. ಈಗಾಗಲೇ ಒಮ್ಮೆ ಚರುಂಬುರಿ ಹಬ್ಬವನ್ನು ಆಯೋಜಿಸಿದ್ದು, ಗ್ರಾಹಕರಿಂದ ಶಹಬ್ಬಾಸ್ ಗಿರಿ ದೊರಕಿತ್ತು. ಇದೀಗ ಎರಡನೇ ಬಾರಿ ಚರುಂಬುರಿ ಹಬ್ಬವನ್ನು ಪುತ್ತೂರಿನಲ್ಲಿ ಆಯೋಜಿಸಲಾಗುತ್ತಿದೆ.

2000 ರೂಪಾಯಿ ನೋಟ್‌ ಹಿಂಪಡೆದ ಆರ್‌ಬಿಐ

Posted by Vidyamaana on 2023-05-19 14:41:54 |

Share: | | | | |


2000 ರೂಪಾಯಿ ನೋಟ್‌ ಹಿಂಪಡೆದ ಆರ್‌ಬಿಐ

ನವದೆಹಲಿ : (Rs 2000 Currency Note) ಭಾರತೀಯ ರಿಸರ್ವ್‌ ಬ್ಯಾಂಕ್‌ 2000 ರೂಪಾಯಿ ಮುಖ ಬೆಲೆಯ ನೋಟ್‌ ನ್ನು ಹಿಂಪಡೆದಿದೆ. 2000 ರೂಪಾಯಿ ನೋಟಿನ ಚಲಾವಣೆ ಈ ಕ್ಷಣದಿಂದಲೇ ಸ್ಥಗಿತವಾಗಲಿದೆ. ಆದರೆ 2000 ರೂಪಾಯಿ ನೋಟು ಹೊಂದಿದ್ದವರು ಬ್ಯಾಂಕುಗಳಿಗೆ ತೆರಳಿ ಸೆಪ್ಟೆಂಬರ್ 30 2023ರ ಒಳಗಾಗಿ ನೋಟನ್ನು ಬದಲಾಯಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದು ಆರ್‌ಬಿಐ ತಿಳಿಸಿದೆ.2000 ರೂಪಾಯಿಯ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ಭಾರತೀಯ ರಿಸರ್ವ್ ಬ್ಯಾಂಕ್ ನಿರ್ಧರಿಸಿದೆ. ಆದರೆ ಕರೆನ್ಸಿ ನೋಟುಗಳ ಚಲಾವಣೆ ಸೆಪ್ಟೆಂಬರ್ 30 ರವರೆಗೆ ಕಾನೂನುಬದ್ಧವಾಗಿ ಮುಂದುವರಿಯುತ್ತದೆ . ಸೆಪ್ಟೆಂಬರ್ 30, 2023 ರವರೆಗೆ 2,000 ರೂ ನೋಟುಗಳಿಗೆ ಠೇವಣಿ ಮತ್ತು/ಅಥವಾ ವಿನಿಮಯ ಸೌಲಭ್ಯವನ್ನು ಒದಗಿಸುವಂತೆ RBI ಬ್ಯಾಂಕ್‌ಗಳನ್ನು ಕೇಳಿದೆ.ಆದರೆ ಬ್ಯಾಂಕುಗಳು ಯಾವುದೇ ಕಾರಣಕ್ಕೂ ಈ ನೋಟುಗಳನ್ನು ಚಲಾವಣೆ ಮಾಡುವಂತಿಲ್ಲ ಎಂದು ಸ್ಪಷ್ಟವಾಗಿ ಸುತ್ತೋಲೆಯಲ್ಲಿ ತಿಳಿಸಿದ. ಎರಡು ಸಾವಿರ ರೂಪಾಯಿಯ ನೋಟು ಹೊಂದಿದ್ದವರು ಆತಂಕ ಪಡುವ ಅಗತ್ಯವಿಲ್ಲ. ಇನ್ನು ಕಳೆದ ಒಂದು ವರ್ಷಗಳಿಗೂ ಅಧಿಕ ಕಾಲದಿಂದಲೂ ಎರಡು ಸಾವಿರ ರೂಪಾಯಿಯ ನೋಟು ಎಟಿಎಂ, ಬ್ಯಾಂಕ್‌ ಶಾಖೆಗಳಲ್ಲಿಯೂ ಲಭ್ಯವಾಗುತ್ತಿರಲಿಲ್ಲ. ಈ ಹಿನ್ನೆಲೆಯಲ್ಲಿ ಈ ಹಿಂದೆಯೇ ಎರಡು ಸಾವಿರ ರೂಪಾಯಿಯ ನೋಟು ಬ್ಯಾನ್‌ ಆಗುತ್ತದೆ ಎಂಬ ಮಾತುಗಳು ಕೇಳಿಬಂದಿತ್ತು. ಆದರೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಈ ಕುರಿತು ಯಾವುದೇ ಯೋಚನೆಯೂ ಕೇಂದ್ರ ಸರಕಾರದ ಮುಂದಿಲ್ಲ ಎಂದು ತಿಳಿಸಿದ್ದರು.

ಈ ಹಿಂದೆ ದೇಶದಲ್ಲಿ ನೋಟು ಅಮಾನ್ಯೀಕರಣದ ನಂತರ ಎರಡು ಸಾವಿರ ಮುಖಬೆಲೆಯ ನೋಟುಗಳನ್ನು ಆರ್‌ಬಿಐ ಚಲಾವಣೆಗೆ ತಂದಿತ್ತು. ಸುಮಾರು ಆರು ವರ್ಷಗಳ ತರುವಾಯ ಆರ್‌ಬಿಐ ಎರಡು ಸಾವಿರ ಮುಖ ಬೆಲೆಯ ನೋಟುಗಳ ಚಲಾವಣೆಯನ್ನು ರದ್ದು ಮಾಡಿದೆ. ಸಪ್ಟೆಂಬರ್‌ ವರೆಗೂ ನೋಟುಗಳು ಚಲಾವಣೆಯಲ್ಲಿ ಇರಲಿದ್ದು, ನಂತರದಲ್ಲಿ ಸಂಪೂರ್ಣವಾಗಿ ನೋಟುಗಳ ಚಲಾವಣೆ ರದ್ದಾಗಲಿದೆ.

ಜೈನಮುನಿಗಳ ಹತ್ಯೆ ತಪ್ಪತಸ್ಥರಿಗೆ ಕಠಿಣ ಶಿಕ್ಷೆಯಾಗಲಿ ಶಾಸಕ ರೈ

Posted by Vidyamaana on 2023-07-09 14:23:20 |

Share: | | | | |


ಜೈನಮುನಿಗಳ ಹತ್ಯೆ ತಪ್ಪತಸ್ಥರಿಗೆ ಕಠಿಣ ಶಿಕ್ಷೆಯಾಗಲಿ ಶಾಸಕ ರೈ

ಚಿಕ್ಕೋಡಿ: ತಾಲೂಕಿನ ಹಿರೇಕೋಡಿ ಗ್ರಾಮದ ನಂದಿ ಪರ್ವತ ಅಶ್ರಮದ ಕಾಮಕುಮಾರ ನಂದಿ ಮಹಾರಾಜ ಮುನಿಗಳನ್ನು ಹತ್ಯೆ ಮಾಡಿದ ಕೃತ್ಯ ಅತ್ಯಂತ ಖಂಡನೀಯ ಮತ್ತು ಅಮಾನವೀಯತೆಯಿಂದ ಕೂಡಿದ್ದು ಕೊಲೆ ಮಾಡಿದ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಸರಕಾರಕ್ಕೆ ಮನವಿ ಮಾಡಿದ್ದಾರೆ.

ಸರಕಾರ ಈಗಾಗಲೇ ಈ ಕೊಲೆ ಕೃತ್ಯದ ತನಿಖೆಗೆ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಸದಾ ಶಾಂತಿಯನ್ನೇ ಬಯಸುವ ಮತ್ತು ಸಮಾಜದಲ್ಲಿ ಸೋಧರತೆಯ , ಸೌಹಾರ್ಧತೆಯ ಪ್ರತಿಬಿಂಬವಾಗಿರುವ ಜೈನ ಮುನಿಗಳ ಹತ್ಯೆಯನ್ನು ಸಮಾಜ ಸಹಿಸುವುದಿಲ್ಲ. ಶಾಂತಿಪ್ರಿಯ ಸಮುದಾಯದ ಮುನಿಗಳ ಹತ್ಯೆ ಕೃತ್ಯ ಘೋರವಾಗಿದೆ. ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನುಕ್ರಮಕೈಗೊಳ್ಳುವ ಮೂಲಕ ಮೃತ ಮುನಿಗಳ ಆತ್ಮಕ್ಕೆ ಶಾಂತಿ ದೊರೆಯುವಂತೆ ಮಾಡಬೇಕಿದೆ ಎಂದು ಶಾಸಕರು ತಮ್ಮ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ನೆಲಮಂಗಲ: 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಕ್ಲೀನರ್: ಆರೋಪಿ ಆನಂದ್ ಅರೆಸ್ಟ್

Posted by Vidyamaana on 2024-01-12 12:49:05 |

Share: | | | | |


ನೆಲಮಂಗಲ: 9ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಬಸ್ ಕ್ಲೀನರ್: ಆರೋಪಿ ಆನಂದ್  ಅರೆಸ್ಟ್

ನೆಲಮಂಗಲ, ಜ.12: ಶಾಲೆಗೆ ಹೋಗಿ ಬರುತ್ತಿದ್ದ ವಿದ್ಯಾರ್ಥಿನಿ ಮೇಲೆ ಖಾಸಗಿ ಬಸ್​ ಕ್ಲೀನರ್ ಅತ್ಯಾಚಾರ (Rape) ಎಸಗಿದ ಪ್ರಕರಣ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ (Nelamangala) ತಾಲೂಕಿನ ದಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಆರೋಪಿ ದೊಡ್ಡಬಳ್ಳಾಪುರದ ಆನಂದ್​ (24) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ವಾರದ ಹಿಂದೆ ಶಾಲೆಗೆ ಹೋಗಿದ್ದ ಬಾಲಕಿ ನಾಪತ್ತೆಯಾಗಿದ್ದಳು. ಈ ಬಗ್ಗೆ ಪೋಷಕರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಸಿದ್ದರು. ಮೊಬೈಲ್ ಕರೆ ಆಧಾರದ ಮೇಲೆ ಯಲಹಂಕ ಬಳಿ ಬಾಡಿಗೆ ಮನೆಯಲ್ಲಿರಿಸಿದ್ದ 14 ವರ್ಷದ ಬಾಲಕಿಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಸಂತ್ರಸ್ತ ಬಾಲಕಿ ದಾಬಸ್ ಪೇಟೆಯಿಂದ ತ್ಯಾಮಗೊಂಡ್ಲುನಲ್ಲಿರುವ ಶಾಲೆಗೆ ದಿನನಿತ್ಯ ಖಾಸಗಿ ಬಸ್​ನಲ್ಲಿ ಬಾಲಕಿ ಹೋಗಿ ಬರುತ್ತಿದ್ದಳು.ದಿನನಿತ್ಯ ಖಾಸಗಿ ಬಸ್ ದಾಬಸ್ ಪೇಟೆ-ದೊಡ್ಡಬಳ್ಳಾಪುರ ಮಾರ್ಗವಾಗಿ ಬರುತ್ತಿದ್ದ ಬಸ್​ನಲ್ಲಿ ಅರೋಪಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು. 2021ರಲ್ಲಿ ಬ್ಯಾಡರಹಳ್ಳಿ ಠಾಣೆಯಲ್ಲಿ ಇದೇ ರೀತಿ ಪೋಕ್ಸೊ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಅನುಭವಿಸಿ ಜೈಲಿನಿಂದ ಬಿಡುಗಡೆಯಾಗಿದ್ದನು.

ಮೂಡಿಗೆರೆ : ರಸ್ತೆ ಮಧ್ಯ ಹಸುವಿಗೆ ಢಿಕ್ಕಿಯಾದ ಬೈಕ್ ಸವಾರರ ಮೇಲೆ ಹರಿದ ಲಾರಿ

Posted by Vidyamaana on 2023-11-05 04:30:43 |

Share: | | | | |


ಮೂಡಿಗೆರೆ : ರಸ್ತೆ ಮಧ್ಯ ಹಸುವಿಗೆ ಢಿಕ್ಕಿಯಾದ ಬೈಕ್ ಸವಾರರ ಮೇಲೆ ಹರಿದ ಲಾರಿ

ಮೂಡಿಗೆರೆ: ತಾಲೂಕಿನ ಬಿದರಹಳ್ಳಿ ಬಸ್ ಡಿಪೋ ಬಳಿ ಶನಿವಾರ ಭೀಕರ ಅಪಘಾತ ಸಂಭವಿಸಿದ್ದು, ರಸ್ತೆಮಧ್ಯೆ ಕೂತಿದ್ದ ಹಸುವಿಗೆ ಬೈಕ್ ಢಿಕ್ಕಿಯಾಗಿ ಕೆಳಗೆ ಬಿದ್ದ ಬೈಕ್ ಸವಾರರ ಮೇಲೆ ಗ್ಯಾಸ್ ಲಾರಿ ಹರಿದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಿಂಬದಿ ಸವಾರೆ ಗಂಭೀರವಾಗಿ ಗಾಯಗೊಂಡಿದ್ದಾರೆ.



ಲಾರಿ ಚಕ್ರದಡಿಗೆ ಸಿಲುಕಿದ ಪರಿಣಾಮವಾಗಿ ವಿಶ್ವೇಂದ್ರ (43) ಎಂಬ ದುರ್ದೈವಿ ಛಿದ್ರ-ಛಿದ್ರವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ರಾಷ್ಟ್ರೀಯ ಹೆದ್ದಾರಿ 173ರಲ್ಲಿ ಭೀಕರ ಅಪಘಾತ ನಡೆದಿದ್ದು, ಬೈಕ್ ಹಿಂಬದಿ ಸವಾರೆಯಾಗಿದ್ದ ಲಕ್ಷ್ಮೀ ಎಂಬ ಮಹಿಳೆಯ ಕಾಲು ತುಂಡಾಗಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಇಬ್ಬರೂ ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಲ್ಕೆರೆ ಗ್ರಾಮದವರು ಎಂದು ತಿಳಿದು ಬಂದಿದೆ. ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Recent News


Leave a Comment: