ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಇಂದು (ಆ16) ವಕೀಲರ ಸಂಘದಲ್ಲಿ ಆಟಿದ ಗೌಜಿ

Posted by Vidyamaana on 2023-08-16 02:24:59 |

Share: | | | | |


ಇಂದು (ಆ16) ವಕೀಲರ ಸಂಘದಲ್ಲಿ ಆಟಿದ ಗೌಜಿ

ಪುತ್ತೂರು: ಇಲ್ಲಿನ ವಕೀಲರ ಸಂಘದ ಆಶ್ರಯದಲ್ಲಿ ಆ. 16ರಂದು ಮಧ್ಯಾಹ್ನ 1 ಗಂಟೆಗೆ ಪರಾಶರ ಸಭಾಂಗಣದಲ್ಲಿ ಆಟಿದ ಗೌಜಿ ಕಾರ್ಯಕ್ರಮ ನಡೆಯಲಿದೆ.

ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ, ಎಸಿಜೆಎಂ, ತಾ.ಕಾ.ಸೇ. ಸಮಿತಿ ಅಧ್ಯಕ್ಷ ಗೌಡ ಆರ್.ಪಿ. ಕಾರ್ಯಕ್ರಮ ಉದ್ಘಾಟಿಸುವರು. ವಕೀಲರ ಸಂಘದ ಅಧ್ಯಕ್ಷ ಮನೋಹರ್ ಕೆ.ವಿ. ಅಧ್ಯಕ್ಷತೆ ವಹಿಸುವರು. ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜೆ.ಎಂ.ಎಫ್.ಸಿ. ಪ್ರೀಯಾ ರವಿ ಜೊಗ್ಲೇಕರ್, ಪ್ರಧಾನ ಸಿವಿಲ್ ನ್ಯಾಯಾಧೀಶೆ ಹಾಗೂ ಜೆ.ಎಂ.ಎಫ್.ಸಿ. ಹಾಗೂ ತಾ.ಕಾ.ಸೇ. ಸಮಿತಿ ಸದಸ್ಯ ಕಾರ್ಯದರ್ಶಿ ಅರ್ಚನಾ ಕೆ. ಉಣ್ಣಿತ್ತಾನ್, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಹಾಗೂ ಜೆ.ಎಂ.ಎಫ್.ಸಿ. ಶಿವಣ್ಣ ಎಚ್.ಆರ್., 2ನೇ ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಹಾಗೂ ಜೆ.ಎಂ.ಎಫ್.ಸಿ. ಯೋಗೇಂದ್ರ ಶೆಟ್ಟಿ ಉಪಸ್ಥಿತರಿರುವರು.

ಸುಳ್ಯದ ಹಿರಿಯ ವಕೀಲ ಜಗದೀಶ ಹುದೇರಿ ಅವರು ಆಟಿಯ ಆಶಯ ಭಾಷಣ ಮಾಡಲಿದ್ದಾರೆ. ಬಳಿಕ ಆಟಿ ವಿಶೇಷ ಊಟದ ವ್ಯವಸ್ಥೆ ಇದೆ ಎಂದು ಸಂಘದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿದ್ಯಾಮಾತಾ ಅಕಾಡೆಮಿಯ ಮತ್ತೊಂದು ಸಾಧನೆ – ಆರು ಮಂದಿ ಅಗ್ನಿವೀರರಾಗಿ ಆಯ್ಕೆ

Posted by Vidyamaana on 2023-09-26 21:16:40 |

Share: | | | | |


ವಿದ್ಯಾಮಾತಾ ಅಕಾಡೆಮಿಯ ಮತ್ತೊಂದು ಸಾಧನೆ – ಆರು ಮಂದಿ ಅಗ್ನಿವೀರರಾಗಿ ಆಯ್ಕೆ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರ , ಇಲ್ಲಿನ ಎಪಿಎಂಸಿ ಹಿಂದೂಸ್ಥಾನ್ ಸಂಕೀರ್ಣ ಇಲ್ಲಿ ಕಾರ್ಯಚರಿಸುತ್ತಿರುವ ಹೆಸರಾಂತ ವಿದ್ಯಾ ಮಾತಾ ಅಕಾಡೆಮಿ ಮೂಲಕವೇ ಅತ್ಯುತ್ತಮ ತರಬೇತಿ ಪಡೆದುಕೊಂಡು , ಕೇಂದ್ರ ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಾಗಿರುವ ಅಗ್ನಿಪಥ್ ಮೂಲಕ 2023ರ ಸಾಲಿನ ನೇಮಕಾತಿಯಲ್ಲಿ ಅಕಾಡೆಮಿಯ ಆರು ಅಭ್ಯರ್ಥಿಗಳು ಭಾರತೀಯ ಸೇನೆಗೆ ಆಯ್ಕೆಯಾಗಿದ್ದಾರೆ. ಪ್ರಥಮವಾಗಿ ಲಿಖಿತ ಪರೀಕ್ಷೆ ಬಳಿಕ, ದೈಹಿಕ ಸದೃಢತೆಯ ಪರೀಕ್ಷೆ ನಂತರ, ವೈದ್ಯಕೀಯ ಪರೀಕ್ಷೆಗಳನ್ನೂ ಎದುರಿಸುವಲ್ಲಿ ಎಲ್ಲಾ ಆಭ್ಯರ್ಥಿಗಳು ಸಮರ್ಥರಾಗಿದ್ದಾರೆ. ಇದೀಗ ಈ ಎಲ್ಲಾ ಅಭ್ಯರ್ಥಿಗಳೂ ಕೂಡ ಆಯ್ಕೆಗೊಂಡು ಭಾರತೀಯ ಸೇನೆಗೆ ಕೆಲ ದಿನಗಳಲ್ಲಿ ಸೇರ್ಪಡೆಯಾಗಲಿದ್ದಾರೆ.

ದ.ಕ ಮತ್ತು ಕೊಡುಗು ಈ ಎರಡು ಜಿಲ್ಲೆಯ ಆಯ್ಕೆಯಾದ ಅಭ್ಯರ್ಥಿಗಳಲ್ಲಿ ಪುತ್ತೂರು ತಾಲೂಕಿನ ಕೊಡಿಪ್ಪಾಡಿ ನಿವಾಸಿ ಭವಿಷ್, ಸುಳ್ಯ ತಾಲೂಕಿನ ದೇವಚಳ್ಳ ನಿವಾಸಿಗಳಾದ ಕಾರ್ತಿಕ್ ಸಿ.ಎನ್ ಹಾಗೂ ಅಭಿಷೇಕ್‌ ದೇವಚಳ್ಳ, ಮುರುಳ್ಯ ನಿವಾಸಿ ಸೃಜನ್ ರೈ, ಬಂಟ್ವಾಳ ತಾಲೂಕಿನ ಮಂಚಿ ಗ್ರಾಮ ನಿವಾಸಿ ಅಭಿಷೇಕ್ ಎ ಮತ್ತು ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಬೆಟ್ಟತ್ತೂರು ಗ್ರಾಮ ನಿವಾಸಿ ದರ್ಶನ್ ಸಿವಿ ಆಯ್ಕೆಯಾಗಿರುವಂತಹ ವಿದ್ಯಾರ್ಥಿಗಳು.

ಇವರೆಲ್ಲಾರನ್ನೂ ಸೆ.28ರಂದು ಸುಳ್ಯದಲ್ಲಿ ಶುಭಾರಂಭಗೊಳ್ಳಲಿರುವ ವಿದ್ಯಾಮಾತಾ ಇದರ ನೂತನ ಶಾಖೆಯ ಉದ್ಘಾಟನಾ ಸಮಾರಂಭ ಕಾರ್ಯಕ್ರಮ ವೇಳೆ ಅತಿಥಿಗಳ ಮುಖೇನ, ಸನ್ಮಾನಿಸಲಾಗುವುದು ಎಂದು ವಿದ್ಯಾಮಾತಾ ಅಕಾಡೆಮಿಯ ಅಧ್ಯಕ್ಷರಾದ ಭಾಗ್ಯೇಶ್ ರೈ ತಿಳಿಸಿದ್ದಾರೆ.


ಉದ್ಯೋಗ ಆಕಾಂಕ್ಷಿಗಳಾಗಿರುವ ಯುವ ಜನಾಂಗಕ್ಕೆ ಅಗ್ನಿಪಥ್ ಯೋಜನೆ ಉತ್ತಮ ಅವಕಾಶ. ಅಗ್ನಿವೀರರಾಗುವವರಿಗೆ 6 ತಿಂಗಳ ತರಬೇತಿ ಮೂರುವರೆ ವರ್ಷ ಕರ್ತವ್ಯ ನಿಯೋಜನೆಯಿರುತ್ತದೆ.

ಪ್ರಾರಂಭಿಕ ಹಂತದಲ್ಲಿ 21 ಸಾವಿರ ವೇತನವೂ ಇದೆ. 4 ವರುಷದ ಕರ್ತವ್ಯ ಮುಗಿಸಿ, ಹಿಂತಿರುಗುವ ವೇಳೆ ವೇತನ 22 ಲಕ್ಷ ರೂಪಾಯಿ ಸಿಗುತ್ತೆ.

ಬಳಿಕ ವಿವಿಧ ನೇಮಕಾತಿಯಲ್ಲೂ ವಿಶೇಷ ಮೀಸಲಾತಿ, 25% ಅಭ್ಯರ್ಥಿಗಳನ್ನು ಅವರ ಸೇವೆಯನ್ನು ಅವಲಂಬಿಸಿ ಕರ್ತವ್ಯದಲ್ಲಿ ಮುಂದುವರಿಸುವಿಕೆಯೂ ಇದೆ. ಯುವ ಸಮುದಾಯ ದಾರಿ ತಪ್ಪುತ್ತಿರುವ ಈ ಕಾಲಘಟ್ಟದಲ್ಲಿ, ದೇಶ ಸೇವೆ ಮಾಡುವ ಮೂಲಕ ಯುವ ಜನತೆ ಬದುಕನ್ನು ಭದ್ರವಾಗಿಸಲು ಇದಕ್ಕಿಂತ ಉತ್ತಮ ಯೋಜನೆ ಇನ್ನೊಂದಿಲ್ಲ.

ಭಾಗ್ಯೇಶ್ ರೈ

ಅಧ್ಯಕ್ಷರು ವಿದ್ಯಾಮಾತಾ ಅಕಾಡೆಮಿ.

ಬೀದಿ ಬದಿ ವ್ಯಾಪಾರಸ್ಥರಿಂದ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ : ಈ ದಾಖಲೆಗಳು ಕಡ್ಡಾಯ

Posted by Vidyamaana on 2024-06-13 08:11:33 |

Share: | | | | |


ಬೀದಿ ಬದಿ ವ್ಯಾಪಾರಸ್ಥರಿಂದ ಗುರುತಿನ ಚೀಟಿಗಾಗಿ ಅರ್ಜಿ ಆಹ್ವಾನ : ಈ ದಾಖಲೆಗಳು ಕಡ್ಡಾಯ

ಬೆಂಗಳೂರು : ದೀನ್‍ದಯಾಳ್ ಅಂತ್ಯೋದಯ ಯೋಜನೆ ಮತ್ತು ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿಯಲ್ಲಿ 2024-25 ನೇ ಸಾಲಿನ ಸ್ವಯಂ ಉದ್ಯೋಗ ಕಾರ್ಯಕ್ರಮದ ಉಪ ಘಟಕದ ವ್ಯಕ್ತಿಗತ ಉದ್ದಿಮೆ ಶೀಲತೆ (ಸಾಲ ಮತ್ತು ಸಹಾಯಧನ) ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ ಸಂಘ ಹಾಗೂ ಬೀದಿ ಬದಿ ವ್ಯಾಪಾರಸ್ಥರು ಗುರುತಿನ ಚೀಟಿ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಕೈಗೊಳ್ಳಲು ಆಸಕ್ತಿ ಇರುವ ಸ್ವ-ಸಹಾಯ ಗುಂಪಿನಲ್ಲಿ ಸದಸ್ಯರಿರುವ ಕುಟುಂಬದ ಅರ್ಹ ಫಲಾನುಭವಿಗಳಿಂದ ಗುಂಪು ಉದ್ದಿಮೆ ಶೀಲತೆ (ಸಾಲ ಮತ್ತು ಸಹಾಯಧನ) ಚಟುವಟಿಕೆಗಳಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಮಹಿಳಾ ಸ್ವ-ಸಹಾಯ ಗುಂಪು ಹಾಗೂ ಪ್ರದೇಶ ಮಟ್ಟದ ಒಕ್ಕೂಟವನ್ನು ರಚಿಸಲು ಆಸಕ್ತಿ ಹೊಂದಿದ ಅರ್ಹ ಫಲಾನುಭವಿಗಳು ಅಥವಾ ಗುಂಪುಗಳು ಮತ್ತು ಬೀದಿ ಬದಿ ವ್ಯಾಪಾರಿಗಳು ಗುರುತಿನ ಚೀಟಿಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಬೆಳ್ತಂಗಡಿ ಹೆದ್ದಾರಿ ಬದಿ ಅಂಗಡಿ ಪುಡಿಗೈದ ಕಿಡಿಗೇಡಿಗಳು

Posted by Vidyamaana on 2023-12-03 09:08:40 |

Share: | | | | |


ಬೆಳ್ತಂಗಡಿ ಹೆದ್ದಾರಿ ಬದಿ ಅಂಗಡಿ ಪುಡಿಗೈದ ಕಿಡಿಗೇಡಿಗಳು

ಬೆಳ್ತಂಗಡಿ: ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಕಿಡಿಗೇಡಿ ಗಳು ರಾತ್ರಿ ವೇಳೆ ಧ್ವಂಸಗೊಳಿಸಿದ ಘಟನೆ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಾಗಿದೆ.



ಕೊಕ್ಕಡ ಗ್ರಾಮದ ಮಲ್ಲಿಗೆ ಮಜಲು ನಿವಾಸಿ ಅಬ್ದುಲ್‌ ಅಜೀಜ್‌ ಅವರು ಕಳೆದ ಮೂರು ವರ್ಷಗಳಿಂದ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿ ಇರಿಸಿ ವ್ಯಾಪಾರ ನಡೆಸುತ್ತಿದ್ದರು. ಶುಕ್ರವಾರ ರಾತ್ರಿಯ ವೇಳೆ ಎಂದಿನಂತೆ ಅಂಗಡಿಯನ್ನು ಮುಚ್ಚಿ ಹೋಗಿದ್ದ ಅಬ್ದುಲ್‌ ಅಜೀಜ್‌ ಶನಿವಾರ ಬೆಳಗ್ಗೆ ಬಂದು ನೋಡಿದಾಗ ಅಂಗಡಿಯನ್ನು ಧ್ವಂಸಗೊಳಿಸಿರು ವುದು ಕಂಡು ಬಂದಿದೆ.


ಅಂಗಡಿಯಲ್ಲಿದ್ದ ವಸ್ತುಗಳೆಲ್ಲವನ್ನು ಹೊರಗೆಳೆದು ನಾಶಗೊಳಿಸಲಾಗಿದೆ. ತಂಪು ಪಾನೀಯಗಳ ಬಾಟ್ಲಿಗಳನ್ನು ಒಡೆದು ಹಾಕಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.

ಅವ್ರೇನು ರೇಪಿಸ್ಟ್ ಗಳಾ..ನಾಚಿಕೆಯಾಗ್ಬೇಕು ನಿಮ್ಮ ಜನ್ಮಕ್ಕೆ.. – ಡಿ.ವೈ.ಎಸ್.ಪಿಗೆ ಶಕು ಅಕ್ಕ ಸಖತ್ ತರಾಟೆ

Posted by Vidyamaana on 2023-05-18 05:08:42 |

Share: | | | | |


ಅವ್ರೇನು ರೇಪಿಸ್ಟ್ ಗಳಾ..ನಾಚಿಕೆಯಾಗ್ಬೇಕು ನಿಮ್ಮ ಜನ್ಮಕ್ಕೆ.. – ಡಿ.ವೈ.ಎಸ್.ಪಿಗೆ ಶಕು ಅಕ್ಕ ಸಖತ್ ತರಾಟೆ

ಪುತ್ತೂರು: ಕಟೀಲ್ ಹಾಗೂ ಡಿವಿ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿರುವವರ ಮೇಲೆ ಪುತ್ತೂರು ಪೊಲೀಸ್ ಇಲಾಖೆ ನಡೆಸಿದ ಥರ್ಡ್ ಡಿಗ್ರಿ ಟ್ರಿಟ್ ಮೆಂಟ್ ಗೆ ರಾಜ್ಯವೇ ಬೆಚ್ಚಿ ಬಿದ್ದಿದೆ.


ಮಾಜಿ ಶಾಸಕಿ ಶಕುಂತಲ ಶೆಟ್ಟಿ ಪುತ್ತೂರು ಡಿವೈಎಸ್ಪಿ ಗೆ ಕರೆ ಮಾಡಿ ತೀವ್ರ ತರಾಟೆಗೆ ತೆಗೆದುಕೊಂಡ ಬಗ್ಗೆ ವರದಿಯಾಗಿದೆ. ಇದೊಂದು ರಾಜ್ಯವೇ ತಲೆತಗ್ಗಿಸುವ ವಿಷಯವಾಗಿದೆ ಎಂದರು.  


ದೇಶ ಹಾಗೂ ವಿದೇಶದಿಂದ ಹಲವು ಕರೆಗಳು ನನಗೆ  ಬರುತ್ತಿದ್ದು ಈ ಕೃತ್ಯಕ್ಕೆ ಜನತೆ ಭಯಭೀತರಾಗಿದ್ದಾರೆ ಎಂದು ಅಧಿಕಾರಿಯಲ್ಲಿ ಹೇಳಿದರು. 


ಬ್ಯಾನರ್ ಹಾಕಿ ಚಪ್ಪಲಿ ಹಾರ ಹಾಕಿದ ಕೂಡಲೇ ಅವರೇನು ತಳಮಟ್ಟಕ್ಕೆ ಹೋಗೋದಿಲ್ಲ,  ಹೂವಿನ ಹಾರ ಹಾಕಿದ ಕೂಡಲೇ ಮೇಲ್ಮಟ್ಟಕ್ಕೂ ಹೋಗೊದಿಲ್ಲ.  ಪೊಲೀಸರಿಗೆ ಅಷ್ಟು ಕೈ ತುರಿಸುವುದಿದ್ದರೆ ಎರಡು ಪೆಟ್ಟು ಕೊಟ್ಟು ಕೇಸ್ ದಾಖಲಿಸಬಹುದಿತ್ತು.  ಒತ್ತಡಕ್ಕೆ ಮಣಿದು ಈ ರೀತಿ ವರ್ತಿಸುವುದು ಇಲಾಖೆಗೆ ಶೋಭೆಯಲ್ಲ ಎಂದರು. 


ಅತ್ಯಾಚಾರಿಯೋರ್ವನನ್ನು ಇದಕ್ಕಿಂತ ಕಡೆ ಹಿಂಸಿಸಿದ್ದರೂ ಯಾರೂ ಕೇಳುತ್ತಿರಲಿಲ್ಲ.  ಕೇವಲ ಬ್ಯಾನರ್ ಕಟ್ಟಿದ ಸಣ್ಣ ವಿಷಯಕ್ಕೆ ಈ ರೀತಿ ಹಿಂಸಿಸಿದ್ದು ಪೊಲೀಸ್ ಇಲಾಖೆಯ ಘನತೆಗೆ ತಕ್ಕುದಾದ ಕ್ರಿಯವಲ್ಲ ಎಂದು ಪುತ್ತೂರು ಡಿವೈಎಸ್ಪಿಯನ್ನು ಶಕುಂತಲ ಶೆಟ್ಟಿ  ತರಾಟೆಗೆ ತೆಗೆದುಕೊಂಡರು.

ನೆಲ್ಯಾಡಿ : ಮದುವೆಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಕಂಟೈನರ್ ಮಧ್ಯೆ ಭೀಕರ ಅಪಘಾತ

Posted by Vidyamaana on 2024-04-03 20:41:13 |

Share: | | | | |


ನೆಲ್ಯಾಡಿ : ಮದುವೆಗೆ ತೆರಳುತ್ತಿದ್ದ  ಖಾಸಗಿ ಬಸ್ ಹಾಗೂ ಕಂಟೈನರ್ ಮಧ್ಯೆ ಭೀಕರ ಅಪಘಾತ

ನೆಲ್ಯಾಡಿ : ಖಾಸಗಿ ಬಸ್ ಹಾಗೂ ಕಂಟೈನ‌ರ್ ವಾಹನದ ನಡುವೆ ಅಪಘಾತ ಸಂಭವಿಸಿ ಹಲವರು ಗಂಭೀರ ಗಾಯಗೊಂಡ ಘಟನೆ ಏ.3 ರಂದು ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಉದನೆ ಎಂಬಲ್ಲಿ ನಡೆದಿದೆ.

Recent News


Leave a Comment: