ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ಸುದ್ದಿಗಳು News

Posted by vidyamaana on 2023-07-14 03:02:36 | Last Updated by Vidyamaana on 2023-09-05 09:08:10

Share: | | | | |


ಚಾಲಕನ ನಿಯಂತ್ರಣ ತಪ್ಪಿ ಮನೆ ಮೇಲೆ ಬಿದ್ದ ಪಿಕಪ್ ವಾಹನ

ವಿಟ್ಲ: ಪರಿಯಲ್ಲಡ್ಕ – ಸಾರಡ್ಕ ರಸ್ತೆಯ ಕೂರೇಲು ಎಂಬಲ್ಲಿ ಪಿಕಪ್ ರಸ್ತೆಯಿಂದ ಮನೆಯ ಮೇಲೆ ಬಿದ್ದಿದ್ದು, ಮನೆಯ ಒಳಗೆ ಮಹಿಳೆ ಸಿಲುಕಿ ಹಾಕಿಕೊಂಡಿದ್ದಾರೆ.ಕೂರೇಲು ಮಧ್ಯದ ಅಂಗಡಿಯ ಸಮೀಪದಲ್ಲಿ ರಸ್ತೆಯಿಂದ ಕೆಳಗಿದ್ದ ಮನೆಗೆ ಜು.14 ರ ಬೆಳಗ್ಗಿನ ಜಾವ ಚಾಲಕ ನಿಯಂತ್ರಣ ತಪ್ಪಿದ ಪಿಕಪ್ ಮನೆಯ ಮೇಲೆ ಬಿದ್ದಿದೆಅಪಘಾತದಿಂದ ಹಂಚಿನ ಮನೆ ಸಂಪೂರ್ಣ ಹಾನಿಯಾಗಿದೆ. ಪಿಕಪ್ ಕೋಳಿ ಸಾಗಟ ನಡೆಸುತಿತ್ತು. ಅಪಘಾತದಿಂದ ನೂರಾರು ಕೋಳಿಗಳು ಸತ್ತಿದೆ. ಅಪಘಾತ ನಡೆದಾಗ ಮನೆಯ ಒಳಗೆ ಮಹಿಳೆ ಮಲಗಿದ್ದರು, ಮಹಿಳೆಗೆ ಗಂಭೀರ ಗಾಯವಾದ ಪರಿಸ್ಥಿಯಲಿದ್ದಾರೆ.ಪಿಕಪ್ ವಾಹನವನ್ನು ತೆರವು ಮಾಡಡೆ, ಮಹಿಳೆಯನ್ನು ಹೊರಗೆ ತೆಗೆಯಲು ಸಾಧ್ಯವಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಸ್ಥಳದಲ್ಲಿ ವಿಟ್ಲ ಪೊಲೀಸರು, ತುರ್ತು ಸೇವಾ ವಾಹನ ಬೀಡು ಬಿಟ್ಟಿದ್ದು, ಕ್ರೇನ್ ಬಳಸಿ ವಾಹನ ಮೇಲೆತ್ತುವ ಕಾರ್ಯಾಚರಣೆ ನಡೆಯುತ್ತಿದೆ.

 Share: | | | | |


ತಂಗಿಯ ಮಕ್ಕಳ ಕಿಡ್ನಾಪ್: ಗಂಡು ಮಗು ಹತ್ಯೆ ಮಾಡಿ ಹೂತು ಹಾಕಿದ ಮಹಿಳೆ

Posted by Vidyamaana on 2023-12-02 04:15:42 |

Share: | | | | |


ತಂಗಿಯ ಮಕ್ಕಳ ಕಿಡ್ನಾಪ್: ಗಂಡು ಮಗು ಹತ್ಯೆ ಮಾಡಿ ಹೂತು ಹಾಕಿದ ಮಹಿಳೆ

ಗುಡಿಬಂಡೆ: ಮಹಿಳೆಯೊಬ್ಬಳು ತಂಗಿಯ ಮಕ್ಕಳನ್ನೇ ಕಿಡ್ನಾಪ್ ಮಾಡಿ ಗಂಡು ಮಗುವನ್ನು ಹತ್ಯೆಗೈದ ಬೆಚ್ಚಿ ಬೀಳುವ ಘಟನೆ ನಡೆದಿದೆ.


ಗುಡಿಬಂಡೆ ಪೊಲೀಸ್ ವೃತ್ತದ ಪೆರೇಸಂದ್ರ ಪೊಲೀಸ್ ಠಾಣೆಯ ವ್ಯಾಪ್ತಿಯ ಮುತ್ತಕದಹಳ್ಳಿ ಗ್ರಾಮದ ನಿವಾಸಿ ಅಂಬಿಕ ಎಂಬಾಕೆ ತನ್ನ ತಂಗಿಯ ಮಗನಾದ ಮಧುಕುಮಾರ್ (6) ಎಂಬಾತನನ್ನು ಕೊಲೆ ಮಾಡಿ, ಮಾವಿನ ತೋಟದಲ್ಲಿ ಹೂತು ಹಾಕಿ, ಮಗಳಾದ ಮನುಶ್ರೀಯನ್ನು ಕಿಡ್ನಾಪ್ ಮಾಡಿದ್ದಾಳೆ.


ಗುರುವಾರ ಅಂಬಿಕಾ ತನ್ನ ತಂಗಿಯಾದ ಅನಿತಾಳ ಇಬ್ಬರು ಮಕ್ಕಳಾದ ಗಂಡು ಮಗ ಮಧುಕುಮಾರ್, ಹೆಣ್ಣು ಮಗಳಾದ ಮನುಶ್ರೀಯನ್ನು ಮನೆಯಿಂದ ಕನಕ ದಾಸರ ಜಯಂತಿ ಹೋಗುವುದಾಗಿ ಹೊರಗಡೆ ಕರೆದುಕೊಂಡು ಬಂದು, ಗ್ರಾಮದ ಪಕ್ಕದ ಮಾವಿನ ತೋಟದಲ್ಲಿ ಮಧುಕುಮಾರ್ ರನ್ನು ಕೊಲೆ ಮಾಡಿ ಹೂತು ಹಾಕಿದ್ದು, ಹೆಣ್ಣು ಮಗಳಾದ ಮನುಶ್ರೀಯನ್ನು ಬೆಂಗಳೂರಿಗೆ ಕರೆದುಕೊಂಡು ಹೋಗಿರುತ್ತಾಳೆ.


ಹೆಣ್ಣು ಮಗಳನ್ನು ಬೆಂಗಳೂರಿನ ಆಟೋದಲ್ಲಿ ಕರೆದುಕೊಂಡು ಹೋಗುವಾಗ ಆಕೆಯ ನಡುವಳಿಕೆ ಹಾಗೂ ಸಂಭಾಷಣೆಯ ಮೇಲೆ ಅಟೋ ಚಾಲಕನಿಗೆ ಅನುಮಾನ ಬಂದಿದ್ದು, ಅಟೋ ಚಾಲಕನ ಸಮಯ ಪ್ರಜ್ಞೆ ಮೆರೆದು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕೆರೆದುಕೊಂಡು ಹೋಗಿದ್ದು, ಪೊಲೀಸ್ ಸಿಬಂದಿಯವರು ಆಕೆಯನ್ನು ವಿಚಾರಣೆ ಮಾಡಿದಾಗ ನಡೆದ ವಿಚಾರವನ್ನು ಅಂಬಿಕಾ ಬಾಯಿ ಬಿಟ್ಟಿರುತ್ತಾಳೆ.ತತ್ ಕ್ಷಣ ಬೆಂಗಳೂರಿನ ಪೊಲೀಸ್ ಸಿಬಂದಿ ಪೆರೇಸಂದ್ರ ಪೊಲೀಸ್ ಠಾಣೆಗೆ ವಿಷಯ ತಿಳಿಸಿದ್ದು, ಅವರು ಆಕೆಯನ್ನು ಗ್ರಾಮಕ್ಕೆ ಕೆರೆತಂದು ವಿಚಾರಣೆ ಮಾಡಿದ ನಂತರ ಕೊಲೆ ಮತ್ತು ಕಿಡ್ನಾಪ್ ಬಗ್ಗೆ ಬಾಯಿ ಬಿಟ್ಟಿರುತ್ತಾಳೆ, ಗುರುವಾರ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕಂಪ್ಲೆಂಟ್ ದಾಖಲಾಗಿತ್ತು.



ತಂಗಿಯ ಮೇಲಿನ ಕೋಪಕ್ಕೆ ಕೊಲೆ ಮಾಡಿರುವುದಾಗಿ ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದ್ದು, ಸ್ಥಳಕ್ಕೆ ಎಸ್.ಪಿ ನಾಗೇಶ್, ಡಿವೈಎಸ್.ಪಿ ಶಿವಕುಮಾರ್, ವೃತ್ತ ನಿರೀಕ್ಷಕ ನಯಾಜ್ ಬೇಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಕ್ರೂರ ಕೃತ್ಯ ಎಸಗಲು ಮೂಲ ಕಾರಣ ಪೊಲೀಸರ ತನಿಖೆಯಿಂದಲೇ ಹೊರ ಬರಬೇಕಾಗಿದೆ.

ಗಾರ್ಡನ್ ಮಾಡುವುದಾಗಿ ಹೇಳಿ ಸ್ಮಶಾನ ಮಾಡಿದ್ದಾರೆ: ಮುಂಡೂರು ಗ್ರಾಮಸ್ಥರಿಂದ ಶಾಸಕರಿಗೆ ದೂರು

Posted by Vidyamaana on 2023-10-16 09:04:25 |

Share: | | | | |


ಗಾರ್ಡನ್ ಮಾಡುವುದಾಗಿ ಹೇಳಿ ಸ್ಮಶಾನ ಮಾಡಿದ್ದಾರೆ: ಮುಂಡೂರು ಗ್ರಾಮಸ್ಥರಿಂದ ಶಾಸಕರಿಗೆ ದೂರು

ಪುತ್ತೂರು: ಮುಂಡೂರು ಗ್ರಾಮದ ಮುಂಡೂರು ಪೇಟೆಯ ಬಳಿ ಜನವಸತಿ ಪ್ರದೇಶದಲ್ಲಿ ಸ್ಮಶಾನವನ್ನು ನಿರ್ಮಾಣ ಮಾಡಿದ್ದು ಅದನ್ನು ತೆರವು ಮಾಡುವಂತೆ ಮುಂಡೂರು ಗ್ರಾಮಸ್ಥರು ಶಾಸಕರನ್ನು ಆಗ್ರಹಿಸಿದ್ದಾರೆ.


ಈ ಬಗ್ಗೆ ಆರೋಪ ಮಾಡಿದ ಗ್ರಾಮಸ್ಥರು ಇಲ್ಲಿ ತುಂಬಾ ಮನೆಗಳಿವೆ, ಮನೆಗಳ ಮಧ್ಯೆ ಸ್ಮಶಾನ ನಿರ್ಮಾಣ ಮಾಡಿದ್ದಾರೆ. ನಾವು ಇಲ್ಲಿ ಗಾರ್ಡನ್ ನಿರ್ಮಾಣ ಮಾಡುತ್ತಿದ್ದೇವೆ ಎಂದು ಗ್ರಾಪಂ ನವರು ತಿಳಿಸಿದ್ದರು, ನಾವು ಅದನ್ನು ಸತ್ಯ ಎಂದು ನಂಬಿದ್ದೆವು ಆದರೆ ಕೊನೇ ಗಳಿಗೆಯಲ್ಲಿ ಅದು ಸ್ಮಶಾನ ಎಂದು ಗೊತ್ತಾದಾಗ ನಾವು ಪ್ರತಿಭಟಿಸಿದ್ದೆವು ಆದರೆ ಏನೂ ಪ್ರಯೋಜನವಾಗಲಿಲ್ಲ, ಜನವಸತಿ ಪ್ರದೇಶದಿಂದ ಸ್ಮಶಾನವನ್ನು ತೆರವು ಮಾಡುವಂತೆ ಸ್ಥಳೀಯರು ಆಗ್ರಹಿಸಿದರು.


ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು ಈಗಾಗಲೇ ಸ್ಮಶಾನದ ಎಲ್ಲಾ ಕಾಮಗಾರಿಗಳೂ ಮುಗಿದಿದೆ ಇನ್ನು ಸ್ಥಳಾಂತರ ಮಾಡುವುದು ಹೇಗೆ? ಇಲ್ಲಿ ಸ್ಮಶಾನ ನಿರ್ಮಾಣ ಮಾಡುತ್ತಿದ್ದಾರೆ ಎಂಬ ವಿಚಾರ ನಿಮ್ಮ ಸ್ಥಳೀಯ ಗ್ರಾಪಂ ಸದಸ್ಯರಿಗೆ ಗೊತ್ತಿರಲೇಬೇಕಿತ್ತು. ಯಾಕೆ ನಿಮ್ಮ ಬಳಿ ಗಾರ್ಡನ್ ಮಾಡುತ್ತಿದ್ದೇವೆ ಎಂದು ಸುಳ್ಳು ಹೇಳಿದ್ದರೋ ಗೊತ್ತಿಲ್ಲ. ಗ್ರಾಪಂ ಗೆ ಎಲ್ಲಾ ವಿಚಾರವೂ ಗೊತ್ತಿದ್ದೇ ಇಲ್ಲಿ ಸ್ಮಶಾನ ಮಾಡಲಾಗಿದೆ ಇನ್ನೇನು ಮಾಡಲು ಸಾಧ್ಯ ಎಂದು ಹೇಳಿದರು. ನಮ್ಮ ಮಕ್ಕಳಿಗೆ ಇಲ್ಲಿನ ಸ್ಮಶಾನದಿಂದ ಭಯದ ವಾತಾವರಣವಿದೆ ದಯವಿಟ್ಟು ಏನಾದರೂ ಮಾಡಿ ಎಂದು ಮಹಿಳೆಯರು ಶಾಸಕರಲ್ಲಿ ವಿನಂತಿಯನ್ನು ಮಾಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಕಾವು ಹೇಮನಾಥ ಶೆಟ್ಟಿ, ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ.? ಇಲ್ಲಿದೆ ಮಾಹಿತಿ

Posted by Vidyamaana on 2024-06-14 10:19:10 |

Share: | | | | |


ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ.? ಇಲ್ಲಿದೆ ಮಾಹಿತಿ

ನವದೆಹಲಿ: ನೀವು ಮನೆ ಖರೀದಿಸಲು ಬಯಸಿದರೆ ಮತ್ತು ಪ್ರಧಾನ್ ಮಂತ್ರಿ ಆವಾಸ್ ಯೋಜನೆಯ  ಲಾಭವನ್ನು ಪಡೆಯಲು ಬಯಸಿದರೆ ಅದು ತುಂಬಾ ಸುಲಭ. ಇದಕ್ಕಾಗಿ ನೀವು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ಸರ್ಕಾರಿ ಯೋಜನೆಯಿಂದ ನೀವು ಅನೇಕ ಪ್ರಯೋಜನಗಳನ್ನು ಪಡೆಯುತ್ತೀರಿ.

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ನಿಮಗೆ ಆಧಾರ್ ಸಂಖ್ಯೆಯೂ ಅತ್ಯಗತ್ಯ. ಅಲ್ಲದೆ ಅರ್ಜಿದಾರನು ಸಂಪೂರ್ಣ ಮಾಹಿತಿಯನ್ನು ನಿಖರವಾಗಿ ನೀಡಬೇಕಾಗುತ್ತದೆ.

ಎಲ್ಲ ಬಡವರಿಗೆ ಕೈಗೆಟುಕುವ ದರದಲ್ಲಿ ವಸತಿ ಒದಗಿಸುವ ಉದ್ದೇಶದಿಂದ ಕೇಂದ್ರ ಸರಕಾರ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಆರಂಭಿಸಿದೆ. ಈ ಯೋಜನೆಯನ್ನು 2015ರ ಜೂನ್‌ 1ರಂದು ಮೊದಲ ಬಾರಿಗೆ ಪರಿಚಯಿಸಲಾಯಿತು. ಈ ಯೋಜನೆಯಡಿ ವಾರ್ಷಿಕ ಶೇ.6.50ರ ಬಡ್ಡಿದರದಲ್ಲಿ ಸಾಲ ಲಭ್ಯವಾಗುತ್ತದೆ.

PMAY ಯೋಜನೆಯಡಿ ಪ್ರಯೋಜನಗಳೇನು?

• PMAY ಯೋಜನೆಯಡಿ, ಎಲ್ಲಾ ಫಲಾನುಭವಿಗಳಿಗೆ ಕೇವಲ ವಾರ್ಷಿಕ ಶೇ. 6.50 ಬಡ್ಡಿದರದಲ್ಲಿ 20 ವರ್ಷಗಳವರೆಗೆ ವಸತಿ ಸಾಲ ನೀಡಲಾಗುತ್ತದೆ.

• ನೆಲ ಮಹಡಿಯಲ್ಲಿರುವ ಮನೆಗಳು ಅಂಗವಿಕಲರಿಗೆ ಮತ್ತು ಹಿರಿಯ ನಾಗರಿಕರಿಗೆ ಮಾತ್ರ ಮೀಸಲಾಗಿದೆ

• ಗೃಹ ನಿರ್ಮಾಣದಲ್ಲಿ ಸುಸ್ಥಿರ, ಪರಿಸರ ಸ್ನೇಹಿ ತಂತ್ರಜ್ಞಾನ ಬಳಸಲಾಗುತ್ತದೆ

• ಈ ಯೋಜನೆಯು ದೇಶದ ಎಲ್ಲಾ ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಅನ್ವಯಿಸುತ್ತದೆ. ಮೂರು ಹಂತಗಳಲ್ಲಿ ನಗರ ಪ್ರದೇಶಗಳಲ್ಲಿ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ

ಫಲಾನುಭವಿಗಳು ಯಾರು?

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳನ್ನು ವಾರ್ಷಿಕ ಆದಾಯದ ಆದಾರದಲ್ಲಿ ಈ ರೀತಿ ವರ್ಗೀಕರಿಸಬಹುದು

• ಮಧ್ಯಮ ಆದಾಯ ಗುಂಪು 1 (MIG1): 6 ಲಕ್ಷದಿಂದ 12 ಲಕ್ಷ ರೂ

• ಮಧ್ಯಮ ಆದಾಯ ಗುಂಪು 2 (MIG2): 12 ಲಕ್ಷದಿಂದ 18 ಲಕ್ಷ ರೂ

• ಕಡಿಮೆ ಆದಾಯದ ಗುಂಪು (ಎಲ್‌ಐಜಿ) : 3 ಲಕ್ಷದಿಂದ 6 ಲಕ್ಷ ರೂ

• ಆರ್ಥಿಕವಾಗಿ ಹಿಂದುಳಿದ ವರ್ಗ (EWS): 3 ಲಕ್ಷದವರೆಗೆ

ಯೋಜನೆಯಲ್ಲಿ ಎರಡು ವಿಧ

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮಹತ್ವದ ಹೆಜ್ಜೆ

Posted by Vidyamaana on 2023-06-14 15:44:21 |

Share: | | | | |


ಏಕರೂಪ ನಾಗರಿಕ ಸಂಹಿತೆ ಜಾರಿಗೆ ಮಹತ್ವದ ಹೆಜ್ಜೆ

ನವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿ ಕುರಿತಂತೆ (Uniform Civil Code) ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆ ಇರಿಸಿದೆ.ಏಕರೂಪ ನಾಗರಿಕ ನೀತಿ ಸಂಹಿತೆ ಜಾರಿ ಕುರಿತು 22ನೇ ಭಾರತೀಯ ಕಾನೂನು ಆಯೋಗವು ಜನರಿಂದ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿದೆ. ದೇಶದ ನಾಗರಿಕರು, ಪ್ರಮುಖ ಧಾರ್ಮಿಕ ಸಂಸ್ಥೆಗಳು ಏಕರೂಪ ನಾಗರಿಕ ಸಂಹಿತೆ ಕುರಿತು 30 ದಿನಗಳಲ್ಲಿ ಅಭಿಪ್ರಾಯ ಸಲ್ಲಿಸಬೇಕು ಎಂದು ಕಾನೂನು ಆಯೋಗ ಸೂಚಿಸಿದೆ.


ದೇಶದ ನ್ಯಾಯಾಲಯಗಳು ಕೂಡ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿವೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕೂಡ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿಯೇ ಸಿದ್ಧ ಎಂದು ಈಗಾಗಲೇ ಹೇಳಿದ್ದಾರೆ. ಇದರ ಬೆನ್ನಲ್ಲೇ, ಕಾನೂನು ಆಯೋಗವು ಸಾರ್ವಜನಿಕರಿಂದ, ಧಾರ್ಮಿಕ ಸಂಸ್ಥೆಗಳಿಂದ ಅಭಿಪ್ರಾಯ ಸಂಗ್ರಹಿಸಲು ಮುಂದಾಗಿರುವುದು ಪ್ರಮುಖ ವಿಷಯವಾಗಿದೆ. ಜನ ಹಾಗೂ ಧಾರ್ಮಿಕ ಸಂಸ್ಥೆಗಳ ಸಹಮತದೊಂದಿಗೆ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಆಯೋಗ ಮುಂದಾಗಿದೆ.

ಏನಿದು ಏಕರೂಪ ನಾಗರಿಕ ಸಂಹಿತೆ?

ಜಾತಿ, ಧರ್ಮ, ಪಂಥಗಳ ಭೇದ-ಭಾವ ಇಲ್ಲದೆ, ದೇಶದ ಎಲ್ಲರಿಗೂ ಒಂದೇ ಕಾನೂನು ಇರಬೇಕು ಎಂಬುದೇ ಏಕರೂಪ ನಾಗರಿಕ ಸಂಹಿತೆಯಾಗಿದೆ. ಸಂವಿಧಾನದ 44ನೇ ವಿಧಿಯು ಕೂಡ ಏಕರೂಪ ನಾಗರಿಕ ಸಂಹಿತೆ ಇರಬೇಕು ಎಂದು ಹೇಳುತ್ತದೆ. ಹಾಗಾಗಿ, ಭಾರತದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಬೇಕು ಎಂದು 2019ರಲ್ಲಿಯೇ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ. ಎಲ್ಲರಿಗೂ ಒಂದೇ ಕಾನೂನು ಜಾರಿಗೆ ಬರುತ್ತದೆ. ಇದಕ್ಕಾಗಿ, ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಬಾರದು ಎಂದು ಹಲವು ಧಾರ್ಮಿಕ ಸಂಸ್ಥೆಗಳು, ರಾಜಕಾರಣಿಗಳ ಒತ್ತಾಯವಾಗಿದೆ.ಜನರು ಹಾಗೂ ಧಾರ್ಮಿಕ ಸಂಸ್ಥೆಗಳ ಅಭಿಪ್ರಾಯ ಪಡೆದುಕೊಂಡೇ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ತೀರ್ಮಾನಿಸಿದ ಕಾರಣ ಸಾಮಾನ್ಯ ಜನರು ಕೂಡ ಸಂಹಿತೆ ಜಾರಿ ಕುರಿತಂತೆ ಅಭಿಪ್ರಾಯ ಸಲ್ಲಿಸಬಹುದಾಗಿದೆ. ಭಾರತೀಯ ಕಾನೂನು ಆಯೋಗದ membersecretary-lci@gov.inಗೆ ಇ-ಮೇಲ್‌ ಮಾಡುವ ಮೂಲಕ ನಿಮ್ಮ ಅಭಿಪ್ರಾಯವನ್ನೂ ದಾಖಲಿಸಬಹುದು. ಅಂದಹಾಗೆ, ನೀವು ಅಭಿಪ್ರಾಯ ತಿಳಿಸಲು 30 ದಿನ ಮಾತ್ರ ಕಾಲಾವಕಾಶವಿದೆ. ಅಧಿಸೂಚನೆ ಹೊರಡಿಸಲಾದ 30 ದಿನಗಳೊಳಗೆ ಅಭಿಪ್ರಾಯ ಸಲ್ಲಿಸಬಹುದು.

ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳಿಗೆ ಉಪ ಚುನಾವಣೆ

Posted by Vidyamaana on 2023-12-05 09:00:22 |

Share: | | | | |


ಪುತ್ತೂರು ನಗರಸಭೆಯ ತೆರವಾದ ಎರಡು ಸ್ಥಾನಗಳಿಗೆ ಉಪ ಚುನಾವಣೆ

ಪುತ್ತೂರು: ಸ್ಥಳೀಯ ಸಂಸ್ಥೆಗಳಲ್ಲಿ ತೆರವಾದ ಸ್ಥಾನಗಳಿಗೆ ಉಪ ಚುನಾವಣೆಗೆ ದಿನಾಂಕ ನಿಗದಿಗೊಳಿಸಲಾಗಿದ್ದು ಪುತ್ತೂರು ನಗರಸಭಾ ಸದಸ್ಯರಿಬ್ಬರ ಮರಣದಿಂದ ತೆರವಾದ ಎರಡು ಸ್ಥಾನಗಳಿಗೆ ಡಿ.27ರಂದು ಮತದಾನ ನಿಗದಿಗೊಳಿಸಿ ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಆದೇಶಿಸಿದ್ದಾರೆ.


ಪುತ್ತೂರು ನಗರಸಭೆಯ ವಾರ್ಡ್ 1 ರಲ್ಲಿ ಬಿಜೆಪಿ ಸದಸ್ಯ ಶಿವರಾಮ ಸಪಲ್ಯ ಹಾಗೂ ವಾರ್ಡ್ 11ರಲ್ಲಿ ಕಾಂಗ್ರೆಸ್ ಸದಸ್ಯ ಶಕ್ತಿ ಸಿನ್ಹಾರವರ ನಿಧನದಿಂದ ತೆರವಾದ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.


ಡಿ.8ರಂದು ಜಿಲ್ಲಾಧಿಕಾರಿಗಳು ಅಧಿಸೂಚನೆ ಪ್ರಕಟಗೊಳಿಸಲಿದ್ದು ಅದೇ ದಿನ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನವಾಗಿದೆ. ಡಿ.16ರಂದು ನಾಮಪತ್ರ ಪರಿಶೀಲನೆ, ಡಿ.18ರಂದು ನಾಮಪತ್ರ ಹಿಂತೆಗೆದುಕೊಳ್ಳಲು ಅಂತಿಮ ದಿನವಾಗಿದೆ. ಡಿ.27ರಂದು ಮತದಾನ ಪ್ರಕ್ರಿಯೆ ನಡೆಯಲಿದ್ದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆಯ ತನಕ ಮತದಾನ ನಡೆಯಲಿದೆ. ಅವಶ್ಯವಿದ್ದರೆ ಡಿ.29ರಂದು ಮರುಮತದಾನ ನಡೆದು ಡಿ.30ರಂದು ಬೆಳಿಗ್ಗೆ 8ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ನಡೆದು ಫಲಿತಾಂಶ ಘೋಷಣೆಯಾಗಲಿದೆ. ನಗರಸಭಾ ವ್ಯಾಪ್ತಿ ಹಾಗೂ ಉಪ ಚುನಾವಣೆ ನಡೆಯುವ ವಾರ್ಡ್‌ಗಳ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಡಿ.8ರಿಂದ

30ರ ತನಕ ಜಾರಿಯಲ್ಲಿರಲಿದೆ.



ಡಿ.8 ಅಧಿಸೂಚನೆ ಪ್ರಕಟ


ಡಿ.15 ನಾಮಪತ್ರ ಸಲ್ಲಿಸಲು ಅಂತಿಮ ದಿನ


ಡಿ.16 ನಾಮಪತ್ರ ಪರಿಶೀಲನೆ


ಡಿ.18 ನಾಮಪತ್ರ ಹಿಂಪಡೆಯಲು ಅಂತಿಮ ದಿನ


ಡಿ.27 ಮತದಾನ

 ಡಿ.30 ಮತ ಎಣಿಕೆ

ಉತ್ತರಾಖಂಡ | ನಿರ್ಮಾಣ ಹಂತದ ಸುರಂಗ ಕುಸಿತ: ಒಳಗಡೆ ಸಿಲುಕಿರುವ ಕಾರ್ಮಿಕರ ಮೊದಲ ದೃಶ್ಯ

Posted by Vidyamaana on 2023-11-21 11:39:31 |

Share: | | | | |


ಉತ್ತರಾಖಂಡ | ನಿರ್ಮಾಣ ಹಂತದ ಸುರಂಗ ಕುಸಿತ: ಒಳಗಡೆ ಸಿಲುಕಿರುವ ಕಾರ್ಮಿಕರ ಮೊದಲ ದೃಶ್ಯ

ಉತ್ತರಕಾಶಿ: ಉತ್ತರಾಖಂಡ ರಾಜ್ಯದ ಉತ್ತರಕಾಶಿಯಲ್ಲಿ ಕುಸಿದ ಬಿದ್ದ ನಿರ್ಮಾಣ ಹಂತದ ಸುರಂಗದ ಒಳಗಡೆ ಸಿಲುಕಿರುವ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆಯಾಗಿದೆ.

💥 ಕ್ಲಿಕ್ ಮಾಡಿ 👉  ಸುರಂಗ ದ ಒಳಗಡೆ ಸಿಲುಕಿರುವ ಕಾರ್ಮಿಕರ CCTV ಮೊದಲ ದೃಶ್ಯ

ಸುರಂಗದ ಮೇಲಿನಿಂದ ರಂಧ್ರ ಕೊರೆದು ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ. ಈ ಮಧ್ಯೆ ಎಂಡೋಸ್ಕೋಪಿಕ್ ಫ್ಲೆಕ್ಸಿ ಕ್ಯಾಮರಾವನ್ನು ಸುರಂಗದೊಳಗೆ ಕಳುಹಿಸಲಾಗಿತ್ತು. ಇದೀಗ ಸುರಂಗದೊಳಗಿನ ದೃಶ್ಯಗಳನ್ನು ಸೆರೆ ಹಿಡಿಯುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದೆ.


ನಿನ್ನೆ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವವರಿಗೆ 6 ಇಂಚಿನ ಪೈಪ್ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಆಹಾರ, ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಈ ಪೈಪ್ ನ ಮೂಲಕ, 8 ದಿನಗಳಿಂದ ಸುರಂಗದ ಒಳಗೆ ಸಿಲುಕಿರುವ 41 ಕಾರ್ಮಿಕರ ದೃಶ್ಯಗಳನ್ನು ಪಡೆಯುವುದಕ್ಕೆ ಸಾಧ್ಯವಾಗಿದೆ.

Recent News


Leave a Comment: