ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ಸುದ್ದಿಗಳು News

Posted by vidyamaana on 2024-07-24 16:52:02 |

Share: | | | | |


ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ

ವದೆಹಲಿ : ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದರು.


ಈ ಹಿಂದೆ ಮಂಗಳೂರು- ಸುಬ್ರಹ್ಮಣ್ಯ ನಡುವೆ ಮೀಟರ್ ಗೇಜ್ ಹಳಿ ಇದ್ದಾಗ ಪ್ಯಾಸೆಂಜರ್ ರೈಲು ಓಡಾಟ ಇತ್ತು. ಬ್ರಾಡ್ ಗೇಜ್ ಹಳಿ ಮಾಡುವ ಸಲುವಾಗಿ 2005ರಲ್ಲಿ ಈ ರೈಲಿನ ಸಂಚಾರವನ್ನು ನಿಲ್ಲಿಸಲಾಗಿತ್ತು. ಆನಂತರ, ಬ್ರಾಡ್ ಗೇಜ್ ಹಳಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂದು ಓಡುತ್ತಿದ್ದ ಪ್ಯಾಸೆಂಜರ್ ರೈಲು ಮಂಗಳೂರಿನಿಂದ ಕಬಕ- ಪುತ್ತೂರು ನಡುವೆ ಓಡಾಟ ನಡೆಸುತ್ತಿದ್ದು, ಅದನ್ನು ಸುಬ್ರಹ್ಮಣ್ಯದವರೆಗೆ ವಿಸ್ತರಣೆ ಮಾಡಬೇಕು.

ಮಂಗಳೂರು – ಸುಬ್ರಹ್ಮಣ್ಯ ಮಧ್ಯೆ ರೈಲು ಓಡಾಟವಾದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆ, ಕಾಲೇಜಿಗೆ ಹೋಗುವವರಿಗೆ ಉಪಯೋಗವಾಗಲಿದೆ. ಗ್ರಾಮಾಂತರ ಪ್ರದೇಶವಾದ ಸುಳ್ಯದಿಂದ ಮಂಗಳೂರಿಗೆ ಪ್ರತಿದಿನ ಓಡಾಟ ಮಾಡುವವರಿದ್ದಾರೆ. ಅವರಿಗೂ ಉಪಯುಕ್ತ ಆಗಲಿದೆ. ಇದು ಸೌತ್ ವೆಸ್ಟರ್ನ್ ರೈಲ್ವೇ ವಿಭಾಗದಲ್ಲಿದ್ದು, ನಮ್ಮ ಜಿಲ್ಲೆಯ ಒಳಗೆ ಸಂಚರಿಸುವ ಏಕೈಕ ಪ್ಯಾಸೆಂಜರ್ ರೈಲಾಗಿದೆ.


ಜನಸಾಮಾನ್ಯರ ಹಿತದೃಷ್ಟಿಯಿಂದ ಈ ರೈಲನ್ನು ಸುಬ್ರಹ್ಮಣ್ಯದವರೆಗೂ ವಿಸ್ತರಣೆ ಮಾಡಬೇಕು ಎಂದು ರೈಲ್ವೇ ಸಚಿವರನ್ನು ಮನವಿ ಮಾಡಿದ್ದಾರೆ. ಇದಕ್ಕುತ್ತರಿಸಿದ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್, ಸೇನೆಯಿಂದ ನಿವೃತ್ತಿ ಪಡೆದು ಸಂಸದರಾಗಿರುವ ಕ್ಯಾಪ್ಟನ್ ಬ್ರಿಜೇಶ್ ಚೌಟ ಬಗ್ಗೆ ಗೌರವ ಹೊಂದಿದ್ದು, ರೈಲ್ವೇ ವಿಚಾರಗಳ ಬಗ್ಗೆ ಯಾವುದೇ ಮನವಿಯಿದ್ದರೂ ನನ್ನ ಕಚೇರಿಗೆ ಬಂದು ವೈಯಕ್ತಿಕವಾಗಿ ಚರ್ಚಿಸಬಹುದು. ಪರಿಹರಿಸಲು ಮುಕ್ತನಿದ್ದೇನೆ ಎಂದು ಹೇಳಿದರು.

 Share: | | | | |


ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾದ್ರೆ ಖಡಕ್ ಕ್ರಮ : ದಂಡ ಕಟ್ಟಿದ ಮೇಲೆಯೇ ಸಿಗೋದು ಜಾಮೀನು..!

Posted by Vidyamaana on 2024-02-05 07:32:42 |

Share: | | | | |


ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ ಹಾನಿಯಾದ್ರೆ ಖಡಕ್ ಕ್ರಮ : ದಂಡ ಕಟ್ಟಿದ ಮೇಲೆಯೇ ಸಿಗೋದು ಜಾಮೀನು..!

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳು ಅಥವಾ ಸಾರ್ವಜನಿಕ ಸ್ಥಳಗಳಲ್ಲಿ ಸಾರ್ವಜನಿಕ / ಖಾಸಗಿ ಆಸ್ತಿಗಳಿಗೆ ಉಂಟಾದ ಹಾನಿಯ ಮಾರುಕಟ್ಟೆ ಮೌಲ್ಯಕ್ಕೆ ಸಮಾನವಾದ ಭಾರಿ ದಂಡವನ್ನು ವಿಧಿಸುವ ಗುರಿಯನ್ನು ಹೊಂದಿರುವ ಅಸ್ತಿತ್ವದಲ್ಲಿರುವ ಕಾನೂನುಗಳಿಗೆ ತಿದ್ದುಪಡಿಗಳನ್ನು ಕಾನೂನು ಆಯೋಗ ಶುಕ್ರವಾರ ಸರ್ಕಾರಕ್ಕೆ ಶಿಫಾರಸು ಮಾಡಿದೆ.ಜಾಮೀನು ಪಡೆಯುವ ಷರತ್ತಾಗಿ ಹಾನಿಗೊಳಗಾದ ಸಾರ್ವಜನಿಕ ಆಸ್ತಿಯ ಅಂದಾಜು ಮೌಲ್ಯವನ್ನು ಠೇವಣಿ ಇಡುವಂತೆ ಅಪರಾಧಿಗಳಿಗೆ ಸೂಚಿಸುವುದರಿಂದ ಅಂತಹ ಕೃತ್ಯಗಳನ್ನು ತಡೆಯಬಹುದು ಎಂದು ಕಾನೂನು ಆಯೋಗ ಹೇಳಿದೆ.


ಕಾನೂನು ಸಮಿತಿಯ ವರದಿ ಮಹತ್ವದ್ದಾಗಿದೆ, ವಿಶೇಷವಾಗಿ ವಿರೋಧ ಪಕ್ಷಗಳು ಮತ್ತು ಗುಂಪುಗಳು ಆಗಾಗ್ಗೆ ಪ್ರತಿಭಟನೆಗಳಿಗೆ ಕರೆ ನೀಡುತ್ತಿರುವುದರಿಂದ ರಾಷ್ಟ್ರ ರಾಜಧಾನಿಯಲ್ಲಿ ಪದೇ ಪದೇ ಅಡಚಣೆ ಉಂಟಾಗುತ್ತಿವೆ.

ಪ್ರತಿಭಟನೆ, ಗುಂಪು ಗಲಾಟೆಯಂತಹ ಸಂದರ್ಭದಲ್ಲಿ ಸಾರ್ವಜನಿಕ / ಖಾಸಗಿ ಆಸ್ತಿಗಳಿಗೆ ಹಾನಿ ಉಂಟುಮಾಡುವುದು ಮತ್ತು ಸಾರ್ವಜನಿಕರಿಗೆ ಅನಾನುಕೂಲತೆಯನ್ನುಂಟುಮಾಡುವುದನ್ನು ಗಮನಿಸಿದ ಕಾನೂನು ಆಯೋಗವು ಕಾನೂನುಗಳಿಗೆ ತಿದ್ದುಪಡಿಗಳನ್ನು ಶಿಫಾರಸು ಮಾಡಿದೆ,ಅಂತಹ ಸಂಘಟನೆಯ ಜವಾಬ್ದಾರಿಯುತ ಪದಾಧಿಕಾರಿಗಳನ್ನು “ಅಪರಾಧಕ್ಕೆ ಪ್ರಚೋದನೆ ನೀಡಿದ ಅಪರಾಧಕ್ಕಾಗಿ ತಪ್ಪಿತಸ್ಥರೆಂದು ಪರಿಗಣಿಸಿ ದಂಡ ವಿಧಿಸಲಾಗುತ್ತದೆ.


ದಂಡವು ಹಾನಿಗೊಳಗಾದ ಸಾರ್ವಜನಿಕ ಆಸ್ತಿಯ ಮಾರುಕಟ್ಟೆ ಮೌಲ್ಯಕ್ಕೆ ಸಮನಾದ ಮೊತ್ತವನ್ನು ಒಳಗೊಂಡಿರುತ್ತದೆ ಅಥವಾ ಹಾನಿಗೊಳಗಾದ ಆಸ್ತಿಯ ಮೌಲ್ಯವನ್ನು ಹಣದ ದೃಷ್ಟಿಯಿಂದ ನಿರ್ಣಯಿಸಲು ಸಮರ್ಥವಾಗಿಲ್ಲದಿದ್ದರೆ, ಪ್ರಕರಣದ ವಾಸ್ತವಾಂಶಗಳು ಮತ್ತು ಸಂದರ್ಭಗಳನ್ನು ಗಣನೆಗೆ ತೆಗೆದುಕೊಂಡು ನ್ಯಾಯಾಲಯವು ನಿಗದಿಪಡಿಸಬಹುದಾದ ಮೊತ್ತವನ್ನು ಒಳಗೊಂಡಿರುತ್ತದೆ” ಎಂದು ಕಾನೂನು ಸಮಿತಿ ಹೇಳಿದೆ. ಈ ಉದ್ದೇಶಕ್ಕಾಗಿ, ಕೇರಳ ಖಾಸಗಿ ಆಸ್ತಿಗೆ ಹಾನಿ ತಡೆಗಟ್ಟುವ ಮತ್ತು ಪರಿಹಾರ ಪಾವತಿ ಕಾಯ್ದೆಯಂತಹ ಪ್ರತ್ಯೇಕ ಕಾನೂನನ್ನು ಸರ್ಕಾರ ತರಬಹುದು ಎಂದು ಸಮಿತಿ ಹೇಳಿದೆ.ಮಾನವ ಹಕ್ಕುಗಳ ಗುಂಪುಗಳು ಮತ್ತು ರಾಜಕೀಯ ಪಕ್ಷಗಳು ತಮ್ಮ ಹಕ್ಕನ್ನು ಸಂಯಮದಿಂದ ಮತ್ತು ಎಲ್ಲಾ ಸಮಯದಲ್ಲೂ ಶಾಂತಿಯುತವಾಗಿ ಚಲಾಯಿಸುವ ಅಗತ್ಯವಿದೆ ಎಂಬ ಅಂಶವನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಆಯೋಗ ಎಚ್ಚರಿಸಿದೆ.ಈ ನಿಟ್ಟಿನಲ್ಲಿ, ಸಾರ್ವಜನಿಕ ಆಸ್ತಿಯ ಮೇಲೆ ನಿರ್ದೇಶಿಸಲಾದ ವಿಧ್ವಂಸಕ ಕೃತ್ಯಗಳನ್ನು ಅಪರಾಧೀಕರಿಸುವ ಗುರಿಯನ್ನು ಹೊಂದಿರುವ ‘ಸಾರ್ವಜನಿಕ ಆಸ್ತಿಗೆ ಹಾನಿ ತಡೆಗಟ್ಟುವ ಕಾಯ್ದೆ 1984’ ನ್ನು ಉಲ್ಲೇಖಿಸಿದೆ..

ಪುತ್ತೂರು: ಲಾರಿ ಟಯರ್ ಜೋಡಣೆ ವೇಳೆ ಅಪಘಾತ- ಟಯರ್‌ ಸಮೇತ ಎಸೆಯಲ್ಪಟ್ಟ ಕರಾಯ ಜನತಾ ಕಾಲೋನಿ ರಶೀದ್ ಗಂಭೀರ

Posted by Vidyamaana on 2024-07-22 23:30:36 |

Share: | | | | |


ಪುತ್ತೂರು: ಲಾರಿ ಟಯರ್ ಜೋಡಣೆ ವೇಳೆ ಅಪಘಾತ- ಟಯರ್‌ ಸಮೇತ ಎಸೆಯಲ್ಪಟ್ಟ   ಕರಾಯ ಜನತಾ ಕಾಲೋನಿ ರಶೀದ್ ಗಂಭೀರ

ಪುತ್ತೂರು: ಲಾರಿಯೊಂದರ ಟಯರ್ ಜೋಡಣೆ ವೇಳೆ ಟಯ‌ರ್ ರಿಂಗ್ ಚಿಮ್ಮಿ ಟಯರ್ ಸಮೇತ ಎಸೆಯಲ್ಪಟ್ಟ ಕಾರ್ಮಿಕರೊಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ಪರ್ಲಡ್ಕ ಗೋಳಿಕಟ್ಟೆ ಮಸೀದಿ ಬಳಿ ಜು.22ರಂದು ರಾತ್ರಿ ನಡೆದಿದೆ.

ಸಾಮಾಜಿಕ ಜಾಲತಾಣದಲ್ಲಿ ಕಾಮಗಾರಿಗಳ ವಿವರ ಕೊಡಿ ; ಬಿಜೆಪಿ ಕಾರ್ಯಕರ್ತನ ಮನೆಗೆ ಚೆಂಡೆ – ಬ್ಯಾಂಡ್ ನೊಂದಿಗೆ ತೆರಳಿ ಬ್ಯಾನರ್ ಪ್ರದರ್ಶನ : ಅಕ್ರಮ ಪ್ರವೇಶ - ನಿಂದನೆ ಪ್ರಕರಣ ದಾಖಲು

Posted by Vidyamaana on 2024-03-18 10:13:07 |

Share: | | | | |


ಸಾಮಾಜಿಕ ಜಾಲತಾಣದಲ್ಲಿ ಕಾಮಗಾರಿಗಳ ವಿವರ ಕೊಡಿ ; ಬಿಜೆಪಿ ಕಾರ್ಯಕರ್ತನ ಮನೆಗೆ ಚೆಂಡೆ – ಬ್ಯಾಂಡ್ ನೊಂದಿಗೆ ತೆರಳಿ ಬ್ಯಾನರ್ ಪ್ರದರ್ಶನ  : ಅಕ್ರಮ ಪ್ರವೇಶ - ನಿಂದನೆ ಪ್ರಕರಣ ದಾಖಲು

ಪುತ್ತೂರು: ವಿಧಾನಸಭಾ ಕ್ಷೇತ್ರದಲ್ಲಿ ಅಶೋಕ್‌ ಕುಮಾ‌ರ್ ರೈಯವರು ಶಾಸಕರಾದ 10 ತಿಂಗಳಿನಲ್ಲಿ ಅಭಿವೃದ್ಧಿಯ ಪರ್ವವನ್ನೇ ನಡೆಸಿದ್ದಾರೆ... ಸುಮಾರು 1474.29 ಕೋಟಿ ರೂಪಾಯಿಗಳ ದಾಖಲೆಯ ಅನುದಾನವನ್ನು ಪುತ್ತೂರು ಕ್ಷೇತ್ರಕ್ಕೆ ಬಿಡುಗಡೆ ಮಾಡಿಸಿದ್ದಾರೆ.... ಈ ಅಭಿವೃದ್ಧಿ ಕಾರ್ಯಗಳಿಗೆ ವಿರೋಧ ವ್ಯಕ್ತಪಡಿಸುವ ರೀತಿಯಾಗಿ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಪುತ್ತೂರಿನ ತಾರೀತ್ತಡಿ ನಿವಾಸಿ ಜಯಾನಂದ ಬಂಗೇರ ವ್ಯಂಗ್ಯರೀತಿಯಲ್ಲಿ ಬರಹಗಳನ್ನು ಬರೆದು ಅನುದಾನ ಬಿಡುಗಡೆ ಆಗಿಲ್ಲ....ಕಾಮಗಾರಿಗಳ ವಿವರ ಕೊಡಿ ಎಂಬುದಾಗಿ ಪೋಸ್ಟು ಗಳನ್ನು ಹಾಕುತ್ತಿದ್ದ.ಇದನ್ನು ಗಮನಿಸಿದ ಶಾಸಕರ ಅಭಿಮಾನಿ ಬಳಗದ ಸದಸ್ಯರು ಬ್ಯಾಂಡ್ ಮೂಲಕ ಜಯಾನಂದರ ಮನೆಗೆ ತೆರಳಿ ಕಾಮಗಾರಿಗಳ ವಿವರದ ಪ್ಲೆಕ್ಸ್ ಅನ್ನು ಓದಿಸಿ ಇನ್ನು ಮುಂದೆ ಅಪಪ್ರಚಾರ ಮಾಡಬಾರದು ಎಂಬುದಾಗಿ ಎಚ್ಚರಿಕೆ ನೀಡಿದ್ದರು.

ಚೆಂಡೆ – ಬ್ಯಾಂಡ್ ನೊಂದಿಗೆ ತೆರಳಿ ಬ್ಯಾನರ್ ಪ್ರದರ್ಶನ  : ಅಕ್ರಮ ಪ್ರವೇಶ - ನಿಂದನೆ ಪ್ರಕರಣ ದಾಖಲು

ಸಾಮಾಜಿಕ ಜಾಲತಾಣದ ಬರವಣಿಗೆ ವಿಚಾರದಲ್ಲಿ 15 ಅಧಿಕ ಜನರು ಮನೆಯೊಳಗೆ ಅಕ್ರಮ ಪ್ರವೇಶ ಮಾಡಿ ಅವಾಚ್ಯವಾಗಿ ನಿಂಧಿಸಿ ಜೀವ ಬೆದರಿಕೆ ಹಾಕಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಜ್ವಲ್ ರೈ, ಸನತ್ ರೈ ಸಹಿತ 15 ಮಂದಿಯ ಮೇಲೆ ಪ್ರಕರಣದಾಖಲಾಗಿದೆ. ಬಿಜೆಪಿ ಸಾಮಾಜಿಕ ಜಾಲತಾಣ ಪ್ರಕೋಷ್ಠದ ಜಿಲ್ಲಾ ಸದಸ್ಯ ತಾರಿಗುಣ್ಣ ನಿವಾಸಿ ಜಯಾನಂದ ಕೆ. (41) ದೂರು ನೀಡಿದ್ದಾರೆ.


ಕಾಂಗ್ರೆಸ್‌ ಸರ್ಕಾರದ ಯೋಜನೆಗಳನ್ನು ಬರೆದಿರುವ ಬ್ಯಾನ‌ರ್ ಪ್ರದರ್ಶಿಸಿಕೊಂಡು ಚೆಂಡೆಗಳನ್ನು ಜೋರಾಗಿ ಬಡಿಯುತ್ತಾ ಅಕ್ರಮವಾಗಿ ಪ್ರವೇಶ ಮಾಡಿ ತನಗೆ, ತಾಯಿಗೆ, ಪತ್ನಿ, ಮಕ್ಕಳಿಗೆ ಅವಾಚ್ಯವಾಗಿ ನಿಂಧಿಸಿದ್ದಾರೆ. ಗೋಡೆಗೆ ಕಾಲಿನಿಂದ ಒದ್ದು ಅಸಭ್ಯವಾಗಿ ವರ್ತನೆ ತೋರಿದ್ದಲ್ಲದೆ, ನೀನು ಬಾರಿ ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬಗ್ಗೆ ಬರೆಯುತ್ತಿಯಾ ಎಂದು ಗದರಿಸಿ, ನಿನ್ನನ್ನು ನೋಡಿಕೊಳ್ಳುವುದಾಗಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಹೇಳಲಾಗಿದೆ.

non

er id="mvp-main-he

non

-wrap" class="left relative" style="margin: 0px; p

non

ding: 0px; border: 0px; vertical-align: baseline; position: relative; float: left; width: 360px;">
non

er>

ಸೌದಿ ಅರೇಬಿಯಾದಲ್ಲಿ‌ ಭಾರೀ ಮಳೆ: ಪ್ರವಾಹಕ್ಕೆ ಸಿಲುಕಿ 9 ಮಂದಿ ಮೃತ್ಯು

Posted by Vidyamaana on 2024-08-13 05:31:58 |

Share: | | | | |


ಸೌದಿ ಅರೇಬಿಯಾದಲ್ಲಿ‌ ಭಾರೀ ಮಳೆ: ಪ್ರವಾಹಕ್ಕೆ ಸಿಲುಕಿ 9 ಮಂದಿ ಮೃತ್ಯು

ಜೆದ್ದಾ: ಸೌದಿ ಅರೇಬಿಯಾದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಪ್ರವಾಹಕ್ಕೆ ಸಿಲುಕಿ 9 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ನೈಋತ್ಯ ಪ್ರದೇಶದ ಜೀಝಾನ್ ನಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹದಲ್ಲಿ ಇಬ್ಬರು ಮಕ್ಕಳು ಮುಳುಗಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ

ಶಕ್ತಿಯೋಜನೆ: ಬಸ್‌ಗೆ ನಮಸ್ಕರಿಸಿ ಗಮನ ಸೆಳೆದಿದ್ದ ಮಹಿಳೆಯನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

Posted by Vidyamaana on 2023-09-04 07:15:05 |

Share: | | | | |


ಶಕ್ತಿಯೋಜನೆ: ಬಸ್‌ಗೆ ನಮಸ್ಕರಿಸಿ ಗಮನ ಸೆಳೆದಿದ್ದ ಮಹಿಳೆಯನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿದ 5 ಗ್ಯಾರಂಟಿಗಳಲ್ಲಿ ಒಂದಾದ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸಿರುವ ‘ಶಕ್ತಿಯೋಜನೆ’ ಜಾರಿಯಾದ ದಿನದಂದು ಮಹಿಳೆಯೊಬ್ಬರು ಬಸ್‌ ಗೆ ನಮಸ್ಕರಿಸಿ ಬಸ್​​ ಏರಿದ್ದರು. ಆ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿತ್ತು.


ಇದೀಗ ಆ ಮಹಿಳೆಯು ಕನ್ನಡದ ಖಾಸಗಿ ವಾಹಿನಿಯೊಂದರ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ”ಶಕ್ತಿ ಯೋಜನೆ ಜಾರಿಯಾದ ದಿನ ಅತ್ಯಂತ ಸಂತಸದಿಂದ ಸರ್ಕಾರಿ ಬಸ್ಸಿನ ಮೆಟ್ಟಿಲುಗಳಿಗೆ ನಮಸ್ಕರಿಸಿ ಪ್ರಯಾಣ ಬೆಳೆಸಿದ್ದ ಬೆಳಗಾವಿ ಜಿಲ್ಲೆಯ ಸಂಗೊಳ್ಳಿಯ ಸಂಗವ್ವ ಅವರನ್ನು ಇಂದು ಕಲರ್ಸ್ ಕನ್ನಡದ ಅನುಬಂಧ ಅವಾರ್ಡ್ ಕಾರ್ಯಕ್ರಮದಲ್ಲಿ ಭೇಟಿಯಾದದ್ದು ನನ್ನಲ್ಲಿ ಅಚ್ಚರಿ ಮತ್ತು ಖುಷಿಯ ಜೊತೆಗೆ ಸಾರ್ಥಕ್ಯದ ಭಾವ ಮೂಡಿಸಿತು” ಎಂದಿದ್ದಾರೆ.


ಮಹಿಳೆಯರ ಸಬಲೀಕರಣಕ್ಕೆ ನಾವು ಬೆಂಬಲವಾಗಿ ನಿಲ್ಲಬೇಕು ಎನ್ನುವ ಕಾಳಜಿಯಿಂದ ಜಾರಿಗೆ ತಂದಿರುವ ಶಕ್ತಿ ಯೋಜನೆಯ ಮೊದಲ ದಿನವೇ ಸಂಗವ್ವ ಅವರಿಂದ ದೊರೆತ ಪ್ರತಿಕ್ರಿಯೆ ಕಂಡು ನಮ್ಮ ಯೋಜನೆ ನೂರಕ್ಕೆ ನೂರರಷ್ಟು ಯಶಸ್ವಿಯಾಗಲಿದೆ ಎಂಬ ಭರವಸೆ ನನ್ನಲ್ಲಿ ಮೂಡಿತ್ತು. ಈ ದಿನ ಇಂಥದ್ದೊಂದು ಭೇಟಿಯ ಅವಕಾಶ ಕಲ್ಪಿಸಿದ ಕಲರ್ಸ್‌ ಕನ್ನಡ ವಾಹಿನಿಗೆ ಧನ್ಯವಾದಗಳು ಎಂದು ಹೇಳಿದ್ದಾರೆ.

ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಇಲ್ಯಾಸ್ ತುಂಬೆ

Posted by Vidyamaana on 2023-03-16 16:35:24 |

Share: | | | | |


ಚುನಾವಣಾ  ಕಣದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಇಲ್ಯಾಸ್ ತುಂಬೆ

ಬಂಟ್ವಾಳ: ಕಳೆದ ಬಾರಿ ರಾಜಕೀಯ ಪ್ರಬುದ್ಧತೆಯ ಕೊರತೆಯಿಂದ ಕಾಂಗ್ರೆಸ್ ಪಕ್ಷವನ್ನು ನಂಬಿ ಸೋತಿದ್ದೇವೆ, ಈ ಬಾರಿ ಅಂತಹ ಮಹಾ ತಪ್ಪು ಮಾಡುವುದಿಲ್ಲ, 2023 ರ ವಿಧಾನಸಭಾ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಎಸ್. ಡಿ.ಪಿ.ಐ.ಪಕ್ಷದ ಅಭ್ಯರ್ಥಿ ಇಲ್ಯಾಸ್ ತುಂಬೆ ತಿಳಿಸಿದ್ದಾರೆ.ಬಿಸಿರೋಡಿನ ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ನ ಹಿರಿಯ ಪ್ರಭಾವಿ ನಾಯಕರ ವಿನಂತಿಯಂತೆ ಎರಡು ಶರತ್ತಿನ ಮೇಲೆ ಒಪ್ಪಂದ ವಾಗಿತ್ತು. ಮೂರು ಕ್ಷೇತ್ರದಲ್ಲಿ ಮಾತ್ರ ಎಸ್.ಡಿ.ಪಿ.ಐ ಅಭ್ಯರ್ಥಿಗಳು ಸ್ಪರ್ಧೆ ಮಾಡುವುದು, ಉಳಿದ ಎಲ್ಲಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆ ಸಹಕಾರ ನೀಡುವ ಒಪ್ಪಂದವಾಗಿತ್ತು. ಆದರೆ ಚುನಾವಣೆಯ ಸಂದರ್ಭದಲ್ಲಿ ಅವರು ನೀಡಿದ ಮಾತನ್ನು ಪಾಲಿಸಿಲ್ಲ, ಅದೇ ನಾಯಕನ ಸೂಚನೆಯಂತೆ ಗೇಮ್ ಪ್ಲಾನ್ ನಂತೆ ಕಾಂಗ್ರೇಸಿಗರು ಬಿಜೆಪಿಗೆ ಸೇರಿ ಬಿಜೆಪಿ ಅಧಿಕಾರಕ್ಕೆ ಬರುವಂತಾಯಿತು. ಇದು ಕಾಂಗ್ರೆಸ್ ವಿಶ್ವಾಸ ದ್ರೋಹದ ಕೆಲಸ ಎಂದು ಟೀಕಿಸಿದರು.ಇನ್ನು ಕಳೆದ ಬಾರಿ ಪಕ್ಷದ ತಪ್ಪು ನಿರ್ಧಾರದಿಂದ ಪಕ್ಷದ ಸಂಘಟನೆಗೆ ಬಲಬಾದ ಹೊಡೆದ ಬಿದ್ದಿದೆ. ಹೀಗಾಗಿ ಈ ಬಾರಿ ಅಂತಹ ತಪ್ಪು ಮರುಕಳಿಸದಂತೆ ಮತ್ತು ತಲಮಟ್ಟದಿಂದ ಪಕ್ಷ ಸಂಘಟನೆಗೆ ವಿಶೇಷ ಒತ್ತು ನೀಡಲಾಗಿದೆ ಎಂದು ಅವರು ತಿಳಿಸಿದರು.

Recent News


Leave a Comment: