ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನ ವಿಪಕ್ಷ ನಾಯಕ ಮಾಡುತ್ತಾರೆ ಅಂದುಕೊಂಡಿದ್ದೀರಾ? ಯತ್ನಾಳ್​ ಕಾಲೆಳೆದ ಸಿಎಂ

Posted by Vidyamaana on 2023-07-05 09:09:59 |

Share: | | | | |


ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನ ವಿಪಕ್ಷ ನಾಯಕ ಮಾಡುತ್ತಾರೆ ಅಂದುಕೊಂಡಿದ್ದೀರಾ? ಯತ್ನಾಳ್​ ಕಾಲೆಳೆದ ಸಿಎಂ

ಬೆಂಗಳೂರು: ವಿರೋಧ ಪಕ್ಷದ ನಾಯಕನಿಲ್ಲದೇ ವಿಧಾಸಭೆ ಅಧಿವೇಶನ ನಡೆಯುತ್ತಿದ್ದು, ಇದಕ್ಕೆ ಮಾತಿನಲ್ಲೇ ಆಡಳಿತರೂಢ ಕಾಂಗ್ರೆಸ್ ನಾಯಕರು, ಬಿಜೆಪಿ ಬಗ್ಗೆ ವ್ಯಂಗ್ಯವಾಡುತ್ತಿದ್ದಾರೆ. ಅದರಂತೆ ಇಂದು (ಜುಲೈ 05) ಸದನದಲ್ಲಿ ಎದ್ದೆದ್ದು ಮಾತನಾಡುತ್ತಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ಗೆ ನಿಮ್ಮನ್ನು ವಿಪಕ್ಷ ನಾಯಕನಾಗಿ ಮಾಡುತ್ತಾರೆ ಅಂದುಕೊಂಡಿದ್ದೀರಾ ಎಂದು ಕಾಲೆಳೆದರು. ನಿಲುವಳಿ ಪ್ರಸ್ತಾವ ಮಂಡನೆ ವೇಳೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್, ಕಾಂಗ್ರೆಸ್​ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದ ವೇಳೆ ಮಧ್ಯೆ ಪ್ರವೇಶದ ಸಿಎಂ ಸಿದ್ದರಾಮಯ್ಯ, ನಿಮ್ಮನ್ನು ವಿಪಕ್ಷ‌ ನಾಯಕರಾಗಿ ಮಾಡ್ತಾರೋ ಇಲ್ವೋ ಗೊತ್ತಿಲ್ಲ. ಇಲ್ಲಿ ಎದ್ದೆದ್ದು ನಿಂತು ಮಾತಾಡಿದ್ರೆ ನಿಮ್ಮನ್ನು ವಿಪಕ್ಷ ನಾಯಕ ಮಾಡುತ್ತಾರೆ ಅಂತಾ ಅಂದುಕೊಂಡಿದ್ದೀರಾ? ಎಂದು ಟಾಂಗ್ ಕೊಟ್ಟರು.ಸದನ ಶುರುವಾಗಿ 3 ದಿನ ಆದರೂ ವಿಪಕ್ಷ ನಾಯಕ ಆಯ್ಕೆಯಾಗಿಲ್ಲ. ಇಲ್ಲಿ ಬಂದು ಬುರುಡೆ ಹೊಡೆಯುತ್ತಿದ್ದೀರಿ. ಅಶೋಕ್ ಮಾತಾಡುವುದು ನೋಡಿದರೆ ಮಹಿಳೆಯರಿಗೆ ಫ್ರೀ ಕೊಟ್ಟಿರುವುದನ್ನೇ ವಿರೋಧಿಸುತ್ತಿರುವಂತೆ ಕಾಣುತ್ತಿದೆ ಎಂದು ಶಾಸಕ ಯತ್ನಾಳ್​, ಅಶೋಕ್​ಗೆ ಕಿಚಾಯಿಸಿದರು.ಐದೂ ಗ್ಯಾರಂಟಿ ಪ್ರಸಕ್ತ ಆರ್ಥಿಕ ವರ್ಷದೊಳಗೆ ಜಾರಿ ಮಾಡುತ್ತೇವೆ. ಬಿಜೆಪಿಯವರು ಪ್ರಸ್ತಾಪಿಸಿರುವ ವಿಷಯಗಳು ಗವರ್ನರ್​ ಭಾಷಣದಲ್ಲಿದೆ. ಗವರ್ನರ್​ ಭಾಷಣದ ಮೇಲೆ ಚರ್ಚೆ ವೇಳೆ ಬಿಜೆಪಿಯವರು ಪ್ರಸ್ತಾಪಿಸಲಿ. ಹಾಗಾಗಿ ಬಿಜೆಪಿಯವರ ನಿಲುವಳಿ ಸೂಚನೆ ಮೇಲೆ ಚರ್ಚೆ ಅಗತ್ಯವಿಲ್ಲ ವಿಪಕ್ಷದವರಿಂದ ಈಗ ಚರ್ಚೆ ಬೇಡ. ಪ್ರಾಥಮಿಕ ಪ್ರಸ್ತಾವಕ್ಕಷ್ಟೇ ಅವರನ್ನು ಸೀಮಿತ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಸ್ಪೀಕರ್​ ಯು.ಟಿ.ಖಾದರ್​ಗೆ ಆಗ್ರಹಿಸಿದರು.

ಮಠಂದೂರು ಬಂದು ಪಿಕ್ಕಾಸು ಹಾಕಿ ಹೋಗಿದ್ದಾರೆ ಮಾಜಿ ಶಾಸಕರ ವಿರುದ್ದ ಹಾಲಿ ಶಾಸಕರಲ್ಲಿ ದೂರು

Posted by Vidyamaana on 2023-12-25 21:16:27 |

Share: | | | | |


ಮಠಂದೂರು ಬಂದು ಪಿಕ್ಕಾಸು ಹಾಕಿ ಹೋಗಿದ್ದಾರೆ  ಮಾಜಿ ಶಾಸಕರ ವಿರುದ್ದ ಹಾಲಿ ಶಾಸಕರಲ್ಲಿ ದೂರು

ಪುತ್ತೂರು: ನಮಮ್ಮ ಮನೆಗಳ ಮೇಲೆ ಧರೆ ಕುಸಿದಿದೆ, ಮಳೆ ಬರುವಾಗ ಮಳೆ ನೀರು ಮನೆಯೊಳಗೆ ಬರುತ್ತಿದೆ, ಮಳೆಗಾಲದಲ್ಲಿ ನಮ್ಮ ಮನೆಯೊಳಗೆ ಕುಳಿತುಕೊಳ್ಳಲು ನಮಗೆ ಭಯವಾಗುತ್ತಿದೆ, ಕೆಲವು ವರ್ಷಗಳಿಂದ ಈ ಸಮಸ್ಯೆ ಇದೆ. ಇದರ ಬಗ್ಗೆ ನಾವು ಮಾಜಿ ಶಾಸಕರಾದ ಸಂಜೀವ ಮಠಂದೂರಿಗೆ ಮನವಿ ಮಾಡಿದ್ದೆವು ಅವರು ಬಂದು ಸ್ಥಳ ವಿಕ್ಷಣೆ ಮಾಡಿ ಇಲ್ಲಿ ತಡೆಗೋಡೆ ನಿರ್ಮಾಣ ಮಾಡುವುದಾಗಿ ಪಿಕ್ಕಾಸು ಹಾಕಿ ಹೋಗಿದ್ದಾರೆ ಆ ಬಳಿಕ ಇತ್ತ ಕಡೆ ತಿರುಗಿ ನೋಡಿಲ್ಲ ಎಂದು ಮಾಜಿ ಶಾಸಕರ ವಿರುದ್ದ ಸಂಪ್ಯ ಕಾಲನಿ ನಿವಾಸಿಗಳು ಹಾಲಿ ಶಾಸಕ ಅಶೋಕ್ ರೈಯವರಲ್ಲಿ ದೂರು ನೀಡಿದ ಘಟನೆ ನಡೆದಿದೆ.


ಕಂಬಲ್ದಡ್ಡ ಅಂಗನವಾಗಿ ಕಟ್ಟಡ ಉದ್ಘಾಟನೆಗೆ ತೆರಳಿದ ಶಾಸಕರು ರಸ್ತೆಯಲ್ಲಿ ಬರುವಾಗ ಅಡ್ಡಗಟ್ಟಿದ ಕಾಲನಿ ನಿವಾಸಿಗಳು ನಮ್ಮ ಸಮಸ್ಯೆಯನ್ನು ಬಂದು ನೋಡಿ ಎಂದು ಮನವಿ ಮಾಡಿದರು.ಸ್ಥಳಕ್ಕೆ ತೆರಳಿದಾಗ ಅಲ್ಲಿನ ಅವಸ್ಥೆ ಕಂಡು ಮರುಗಿದ ಶಾಸಕರು ನೀವು ಈ ಹಿಂದೆ ಯಾರಲ್ಲಾದರೂ ಸಮಸ್ಯೆ ಬಗ್ಗೆ ಹೇಳಿಲ್ಲವೇ ಎಂದು ಕೇಳಿದಾಗ ಅಲ್ಲಿದ್ದ ನಿವಾಸಿಗಳು ನಡೆದ ಘಟನೆಯನ್ನು ವಿರಿಸಿದರು. ನಾವು ಕಾಂಗ್ರೆಸ್ಸಿಗೆ ವೋಟು ಹಾಕಿಲ್ಲ ಭರವಸೆಯನ್ನು ನಂಬಿ ನಾವು ಕೆಟ್ಟಿದ್ದೇವೆ ಎಂದು ಸ್ಥಳೀಯರು ಶಾಸಕರಲ್ಲಿ ಹೇಳಿದರು. ನೀವು ದಯಮಾಡಿ ನಮ್ಮ ಸಮಸ್ಯೆಗೆ ಪರಿಹಾರ ಕೊಡಿ ಎಂದು ಕೇಳಿಕೊಂಡರು. ಈ ಬಗ್ಗೆ ಮಾತನಾಡಿದ ಶಾಸಕರು ನಾನು ಅನುದಾನ ಬಿಡುಗಡೆಯಾದರೆ ಮಾತ್ರ ಪಿಕ್ಕಾಸು ಹಾಕುವುದು ಭರವಸೆ ಕೊಟ್ಟು ಪಿಕ್ಕಾಸು ಹಾಕಿ ಹೋಗುವುದಿಲ್ಲ, ನಿಮ್ಮ ಸಮಸ್ಯೆಗೆ ಪರಿಹಾರ ಒದಗಿಸಲು ಸುಮಾರು ೩ ಕೋಟಿ ಅನುದಾನ ಬೇಕು. ನಾನು ಈ ವಿಚಾರವನ್ನು ಸರಕಾರದ ಗಮನಕ್ಕೆ ತಂದು ಮೊದಲ ಆಧ್ಯತೆ ಯಲ್ಲೇ ಪರಿಹರಿಸಲು ಯತ್ನ ಮಾಡುತ್ತೇನೆ, ಸ್ವಲ್ಪ ಕಾಲವಕಾಶ ಬೇಕು ಎಂದು ತಿಳಿಸಿದರು. ಸ್ಥಳೀಯರಾದ ಪದ್ಮ  ಸೇರಿದಂತೆ ಕಾಲನಿ ನಿವಾಸಿಗಳು ಉಪಸ್ತಿತರಿದ್ದರು.

ಉಳ್ಳಾಲ - ಗಾಯಾಳು ಬೈಕ್ ಸವಾರ ತೇಜಸ್ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Posted by Vidyamaana on 2023-06-12 13:02:19 |

Share: | | | | |


ಉಳ್ಳಾಲ - ಗಾಯಾಳು ಬೈಕ್ ಸವಾರ ತೇಜಸ್ ಚಿಕಿತ್ಸೆ ಫಲಕಾರಿಯಾಗದೆ  ಮೃತ್ಯು

ಉಳ್ಳಾಲ : ಬೈಕ್‍ಗೆ ಇನೋವಾ ಕಾರು ಢಿಕ್ಕಿ ಹೊಡೆದು ಪರಾರಿಯಾಗಿದ್ದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಕೋಟೆಕಾರು ಪಟ್ಟಣ ವ್ಯಾಪ್ತಿಯ ಮಾಡೂರು ವೈದ್ಯನಾಥ ದೈವಸ್ಥಾನ ರಸ್ತೆ ನಿವಾಸಿ ತೇಜಸ್ ಕುಲಾಲ್ (28) ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.ಕಳೆದ ಜೂ.4 ರ ಭಾನುವಾರ ತಡರಾತ್ರಿ ತೇಜಸ್ ಸಂಕೋಳಿಗೆಯ ಪೆಟ್ರೋಲ್ ಬಂಕಿಗೆ ಪೆಟ್ರೋಲ್ ತುಂಬಿಸಲು ಬೈಕಲ್ಲಿ ತೆರಳುತ್ತಿದ್ದ ವೇಳೆ ಕೇರಳ ನೋಂದಾವಣಿಯ ಇನ್ನೋವಾ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿತ್ತು.ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ತಲಪಾಡಿ ಟೋಲ್ ಗೇಟ್ ನ ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಮರುದಿನವೇ ಘಟನೆಗೆ ಕಾರಣವಾದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದರು.ಗಂಭೀರ ಗಾಯಗೊಂಡಿದ್ದ ತೇಜಸ್ ನನ್ನು ತಕ್ಷಣಕ್ಕೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದು,ನಂತರ ಮಂಗಳೂರಿನ ಕೆಎಮ್ ಸಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ತಲೆಗೆ ಗಂಭೀರ ಗಾಯವಾಗಿದ್ದ ತೇಜಸ್ ಕೋಮಾ ಸ್ಥಿತಿಯಲ್ಲಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತ ತೇಜಸ್ ಅವಿವಾಹಿತರಾಗಿದ್ದು ಸುಝಕಿ ಕಂಪನಿಯಲ್ಲಿ ಮೆಕ್ಯಾನಿಕ್ ಆಗಿದ್ದರು.ತೇಜಸ್ ಬಜರಂಗದಳ ಮಾಡೂರು ಶಾಖೆಯ ಸಕ್ರಿಯ ಕಾರ್ಯಕರ್ತರಾಗಿದ್ದರು.ಮೃತರು ತಂದೆ ರಾಮ ಕುಲಾಲ್,ತಾಯಿ ರೇವತಿ ಮತ್ತು ಸಹೋದರ ರವೀಂದ್ರ ಅವರನ್ನು ಅಗಲಿದ್ದಾರೆ.

ಕಡೂರು ಶಾಸಕರ ವಿರುದ್ಧ ವಾಟ್ಸಾಪ್ ಸ್ಟೇಟಸ್ : ಮಹಿಳಾ ಪೇದೆ ಅಮಾನತು

Posted by Vidyamaana on 2023-08-12 12:04:39 |

Share: | | | | |


   ಕಡೂರು ಶಾಸಕರ ವಿರುದ್ಧ ವಾಟ್ಸಾಪ್ ಸ್ಟೇಟಸ್  : ಮಹಿಳಾ ಪೇದೆ ಅಮಾನತು

ಚಿಕ್ಕಮಗಳೂರು: ವರ್ಗಾವಣೆ ವಿರೋಧಿಸಿ ಕಡೂರು ಶಾಸಕರ ವಿರುದ್ಧ ವಾಟ್ಸಾಪ್ ಸ್ಟೇಟಸ್ ಹಾಕಿದ್ದ ಪೊಲೀಸ್ ಕಾನ್ಸ್ಟೇಬಲ್ ರನ್ನು ಅಮಾನತು ಮಾಡಲಾಗಿದೆ.

ಕಡೂರು ಪೊಲೀಸ್ ಠಾಣೆಯಲ್ಲಿ ಕೆಲಸ ಮಾಡುತ್ತಿರುವ ಪೇದೆ ಲತಾ ಅವರನ್ನು ತರಿಕೆರೆ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಇದು ದ್ವೇಷದ ವರ್ಗಾವಣೆ ಎಂದು ಶಾಸಕರ ವಿರುದ್ಧ ಅಸಮಾಧಾನಗೊಂಡಿದ್ದಾರೆ. ವರ್ಗಾವಣೆ ವಿರೋಧಿಸಿ ಲತಾ ಸಬ್ ಇನ್ಸ್ ಪೆಕ್ಟರ್ ಜೊತೆಯೂ ಮಾತಿನ ಚಕಮಕಿ ನಡೆಸಿದ್ದರು.


ಇದೀಗ ‘ಕಡೂರು ಎಂಎಲ್ ಎ ಗೆ ನನ್ನ ಧಿಕ್ಕಾರವಿರಲಿ. ನನಗೆ ಏನಾದರು ತೊಂದರೆ ಆದರೆ ಎಂಎಲ್ಎ ಕಾರಣ’ ಎಂದು ವಾಟ್ಸಪ್ ಸ್ಟೇಟಸ್ ನಲ್ಲಿ ಶಾಸಕರ ವಿರುದ್ಧ ಸಮರಕ್ಕಿಳಿದಿದ್ದಾರೆ.


ಇದೀಗ ಚಿಕ್ಕಮಗಳೂರು ಎಸ್ ಪಿ ಅವರು ಮಹಿಳಾ ಪೇದೆ ಲತಾರನ್ನ ಅಮಾನತು ಮಾಡಿದ್ದಾರೆ.

ರಶ್ಮಿಕಾ ಮಂದಣ್ಣ ವೈರಲ್‌ ಡೀಪ್‌ಫೇಕ್‌ ವಿಡಿಯೋ ಅಪಾಯಕಾರಿ ಎಂದ ಕೇಂದ್ರ ಸಚಿವ; ಮೂಲ ವಿಡಿಯೋ ಇಲ್ಲಿದೆ

Posted by Vidyamaana on 2023-11-06 16:37:45 |

Share: | | | | |


ರಶ್ಮಿಕಾ ಮಂದಣ್ಣ ವೈರಲ್‌ ಡೀಪ್‌ಫೇಕ್‌ ವಿಡಿಯೋ ಅಪಾಯಕಾರಿ ಎಂದ ಕೇಂದ್ರ ಸಚಿವ; ಮೂಲ ವಿಡಿಯೋ ಇಲ್ಲಿದೆ

ಹೊಸದಿಲ್ಲಿ: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‌ಫೇಕ್ ವಿಡಿಯೋ (Deepfake video) ಕುರಿತು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ (Union Minister Rajeev Chandrasekhar) ಪ್ರತಿಕ್ರಿಯಿಸಿದ್ದಾರೆ.ʼಇಂಥ ಅಪಾಯಕಾರಿ ಮತ್ತು ಹಾನಿಕಾರಕ ತಪ್ಪು ಮಾಹಿತಿಗಳನ್ನು ಈ ವೇದಿಕೆಗಳ ಮೂಲಕ ಎದುರಿಸಬೇಕಾಗಿದೆʼ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ಕ್ಲಿಕ್ ಮಾಡಿ 

ಮೂಲ ವಿಡಿಯೋ ಇಲ್ಲಿದೆ👇


ʼಎಕ್ಸ್‌ʼನಲ್ಲಿ ಈ ಬಗ್ಗೆ ಟ್ವೀಟ್‌ ಮಾಡಿರುವ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ರಾಜ್ಯ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರವು ಇಂಟರ್ನೆಟ್ ಬಳಸುವ ಎಲ್ಲಾ ಡಿಜಿಟಲ್‌ ನಾಗರಿಕರ ಸುರಕ್ಷತೆ ಮತ್ತು ವಿಶ್ವಾಸವನ್ನು ಖಚಿತಪಡಿಸಿಕೊಳ್ಳಲು ಬದ್ಧವಾಗಿದೆ ಎಂದಿದ್ದಾರೆ.


2023ರ ಏಪ್ರಿಲ್‌ನಲ್ಲಿ ಸೂಚಿಸಲಾದ ಐಟಿ ನಿಯಮಗಳನ್ನು ತಿಳಿಸುತ್ತಾ ಅವರು, ಆನ್‌ಲೈನ್‌ ಪ್ಲಾಟ್‌ಫಾರ್ಮ್‌ಗಳಿಗೆ ಕಾನೂನು ಬಾಧ್ಯತೆಯಿದೆ. ಯಾವುದೇ ಬಳಕೆದಾರರು ಯಾವುದೇ ತಪ್ಪು ಮಾಹಿತಿಯನ್ನು ಪೋಸ್ಟ್ ಮಾಡದಂತೆ ಖಚಿತಪಡಿಸಿಕೊಳ್ಳಬೇಕು. ಮತ್ತು ಯಾವುದೇ ಬಳಕೆದಾರರು ಅಥವಾ ಸರ್ಕಾರ ಈ ಬಗ್ಗೆ ವರದಿ ಮಾಡಿದಾಗ 36 ಗಂಟೆಗಳಲ್ಲಿ ತಪ್ಪು ಮಾಹಿತಿಯನ್ನು ತೆಗೆದುಹಾಕಬೇಕು. ಪ್ಲಾಟ್‌ಫಾರ್ಮ್‌ಗಳು ಇದನ್ನು ಅನುಸರಿಸದಿದ್ದರೆ ನಿಯಮ 7ರ ಪ್ರಕಾರ ಮತ್ತು IPCಯ ನಿಬಂಧನೆಗಳ ಅಡಿಯಲ್ಲಿ ಬಾಧಿತ ವ್ಯಕ್ತಿಯು ಆನ್‌ಲೈನ್‌ ವೇದಿಕೆಗಳನ್ನು ನ್ಯಾಯಾಲಯಕ್ಕೆ ಎಳೆಯಬಹುದು. ಡೀಪ್‌ಫೇಕ್‌ಗಳು ಇತ್ತೀಚಿನ ಹೆಚ್ಚು ಅಪಾಯಕಾರಿ ಮತ್ತು ಹಾನಿಕರವಾದ ತಪ್ಪು ಮಾಹಿತಿ ಮೂಲಗಳಾಗಿವೆ ಎಂದಿದ್ದಾರೆ.


ನಟಿ ರಶ್ಮಿ ಮಂದಣ್ಣ ಅವರಂತೆ ತೋರುವ ವೀಡಿಯೊವನ್ನು ಶೇರ್ ಮಾಡಿದ ಅಭಿಷೇಕ್ ಕುಮಾರ್ ಎಂಬ ಪತ್ರಕರ್ತರಿಗೆ ಕೇಂದ್ರ ಸಚಿವರು ಪ್ರತ್ಯುತ್ತರವಾಗಿ ಟ್ವೀಟ್ ಮಾಡಿದ್ದಾರೆ. ದೇಶದಲ್ಲಿ ಡೀಪ್‌ಫೇಕ್ ಘಟನೆಗಳನ್ನು ಎದುರಿಸಲು ಕಾನೂನು ಮತ್ತು ನಿಯಂತ್ರಕ ಚೌಕಟ್ಟಿನ ತುರ್ತು ಅವಶ್ಯಕತೆ ಇದೆʼʼ ಎಂದಿರುವ ಕುಮಾರ್ ಅವರು ಮೂಲ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಇದು ನಟಿ ಝರಾ ಪಟೇಲ್ ಅವರ ವೀಡಿಯೊ ಆಗಿದ್ದು, ಅಕ್ಟೋಬರ್ 9ರಂದು ಅಪ್‌ಲೋಡ್ ಮಾಡಲಾಗಿತ್ತು. ಅದಕ್ಕೆ ರಶ್ಮಿಕಾ ಮಂದಣ್ಣ ಅವರ ಮುಖವನ್ನು ಜೋಡಿಸಿ ವ್ಯತ್ಯಾಸವೇ ಕಾಣದಂತೆ ವಿಡಿಯೋ ಮಾಡಿ ಪೋಸ್ಟ್‌ ಮಾಡಲಾಗಿದೆ. ಝರಾ ಪಟೇಲ್ ಬ್ರಿಟಿಷ್ ಇಂಡಿಯನ್‌ ಪ್ರಜೆಯಾಗಿದ್ದು, Instagramನಲ್ಲಿ 4.15 ಲಕ್ಷ ಅನುಯಾಯಿಗಳನ್ನು ಹೊಂದಿದ್ದಾರೆ.ಗುಡ್ ಬೈ ಚಿತ್ರದಲ್ಲಿ ಮಂದಣ್ಣನ ತಂದೆಯ ಪಾತ್ರದಲ್ಲಿ ನಟಿಸಿದ್ದ ಸೂಪರ್‌ಸ್ಟಾರ್ ಅಮಿತಾಭ್ ಬಚ್ಚನ್ ಕೂಡ ನಟಿಯ ಬೆಂಬಲಕ್ಕೆ ಬಂದಿದ್ದು, ಈ ಬಗ್ಗೆ ಕಾನೂನು ಕ್ರಮಕ್ಕೆ ಕರೆ ನೀಡಿದ್ದಾರೆ.


ಡೀಪ್‌ಫೇಕ್‌ ಅಂದರೇನು?


ಡೀಪ್‌ಫೇಕ್ ಕೃತಕ ಬುದ್ಧಿಮತ್ತೆಯ ಸಹಾಯದಿಂದ ಮಾಡಿದ ವೀಡಿಯೊಗಳು. ಇವು ನೈಜವಾಗಿಯೇ ಕಾಣಿಸುತ್ತವೆ. ಡೀಪ್‌ಫೇಕ್ ವೀಡಿಯೊದಲ್ಲಿ ಸಾಮಾನ್ಯವಾಗಿ ಬೇರೆ ಬೇರೆ ವ್ಯಕ್ತಿಗಳ ದೇಹ ಮತ್ತು ಮುಖವನ್ನು ಡಿಜಿಟಲ್ ಮ್ಯಾನಿಪುಲೇಟ್ ಮಾಡಿ ಜೋಡಿಸಿ ಒರಿಜಿನಲ್‌ ಆಗಿ ಕಾಣುವಂತೆ ಮಾಡಲಾಗುತ್ತದೆ.

ಗ್ಯಾಂಗ್‌ಸ್ಟರ್‌ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯ

Posted by Vidyamaana on 2024-01-04 15:38:51 |

Share: | | | | |


ಗ್ಯಾಂಗ್‌ಸ್ಟರ್‌ ಕೊಲೆಗೆ ನೆರವು: ಜಾಮೀನಿನ ಮೇಲೆ ಹೊರಗಿದ್ದ ಮಾಜಿ ರೂಪದರ್ಶಿ ಹತ್ಯ

ನವದೆಹಲಿ: ಗ್ಯಾಂಗ್‌ಸ್ಟರ್ ಕೊಲೆ ಪ್ರಕರಣದಲ್ಲಿ ನೆರವಾಗಿದ್ದ ಮಾಜಿ ರೂಪದರ್ಶಿ ದಿವ್ಯಾ ಪಹುಜಾ ಅವರನ್ನು ಮಂಗಳವಾರ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಗ್ಯಾಂಗ್‌ಸ್ಟರ್ ಕೊಲೆ ಆರೋಪಿಯಾಗಿದ್ದ ದಿವ್ಯಾ ಅವರಿಗೆ ಜೂನ್‌ನಲ್ಲಿ ಜಾಮೀನು ಮಂಜೂರಾಗಿತ್ತು. ಐದು ಜನರಿದ್ದ ಗುಂಪೊಂದು ಮಂಗಳವಾರ ರಾತ್ರಿ ದಿವ್ಯಾ ಅವರನ್ನು ಹೋಟೆಲ್‌ ಒಂದಕ್ಕೆ ಕರೆದೊಯ್ದು ತಲೆಗೆ ಗುಂಡು ಹೊಡೆದು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೃತ್ಯದ ನಂತರ ಮೃತ ದೇಹವನ್ನು ಐಷಾರಾಮಿ ಕಾರಿನಲ್ಲಿರಿಸಿ ನಾಶಪಡಿಸುವ ಪ್ರಯತ್ನದಲ್ಲಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.


ಗ್ಯಾಂಗ್‌ಸ್ಟರ್‌ ಸಂದೀಪ್ ಗಡೋಲಿ ಎಂಬಾತನನ್ನು 2016ರ ಫೆ. 7ರಂದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರೂಪದರ್ಶಿ ದಿವ್ಯಾ ಅವರನ್ನು ಪೊಲೀಸರು ಬಂಧಿಸಿದ್ದರು. ಕಳೆದ ಜೂನ್‌ನಲ್ಲಿ ಇವರಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ದಿವ್ಯಾ ಅವರೊಂದಿಗೆ ಅವರ ತಾಯಿ, ಐದು ಜನ ಪೊಲೀಸರೂ ಬಂಧನಕ್ಕೊಳಗಾಗಿದ್ದರು.ಕೊಲೆಯಾದ ಗಡೋಲಿಯನ್ನು ತನ್ನ ಮೋಹದ ಬಲೆಗೆ ಬೀಳಿಸಿಕೊಂಡಿದ್ದ ದಿವ್ಯಾ ಪಹುಜಾ ನಕಲಿ ಎನ್‌ಕೌಂಟರ್‌ಗೆ ಸಹಕರಿಸಿದ್ದರು ಎಂದು ಮುಂಬೈ ಪೊಲೀಸರು ತಮ್ಮ ವರದಿಯಲ್ಲಿ ಹೇಳಿದ್ದಾರೆ.


ಪ್ರಕರಣಕ್ಕೆ ಸಂಬಂಧಿಸಿದಂತೆ ಇಡೀ ಘಟನೆ ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಅಭಿಜಿತ್, ಯುವತಿ ಮತ್ತು ಇನ್ನೊಬ್ಬ ವ್ಯಕ್ತಿ ಜನವರಿ 2 ರಂದು (ಮಂಗಳವಾರ) ಮುಂಜಾನೆ 4 ಗಂಟೆಗೆ ಹೋಟೆಲ್‌ಗೆ ಆಗಮಿಸಿ ಕೊಠಡಿಯೊಂದಕ್ಕೆ ಹೋಗುತ್ತಿರುವ ದೃಶ್ಯವನ್ನು ತೋರಿಸುತ್ತದೆ. ನಂತರ ರಾತ್ರಿ ಅಭಿಜಿತ್ ಮತ್ತು ಇತರರು ದಿವ್ಯಾಳ ದೇಹವನ್ನು ಎಳೆದುಕೊಂಡು ಹೋಗುವುದು ಕೂಡಾ ಸಿಸಿಟಿವಿಯಲ್ಲಿ ಸೆರೆಯಾಗಿದೆ.



Leave a Comment: