Posted by vidyamaana on 2023-06-29 12:19:28 |
ಪುತ್ತೂರು: ಹೊಸ ಉದ್ಯಮವೊಂದರ ಉದ್ಘಾಟನಾ ಕಾರ್ಯಕ್ರಮ ಮುಗಿಸಿ ಹಿಂದಿರುಗಿ ಬರುವಾಗ ಅರುಣ್ ಕುಮಾರ್ ಪುತ್ತಿಲ ಹೆರಿಗೆಗೆ ದಾಖಲಾಗಿದ್ದ ಗರ್ಭಿಣಿ ಮೃತಪಟ್ಟ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಕಾರ್ಯಕ್ರಮ ಮುಗಿಸಿ ಬರುವಾಗ ರಸ್ತೆಯಲ್ಲಿ ಜನ ಸೇರಿದ್ದನ್ನು ನೋಡಿ ವಿಚಾರಿಸಿದಾಗ ಮೃತಪಟ್ಟ ಬಗ್ಗೆ ತಿಳಿದುಬಂದಿದ್ದು, ನಂತರ ಮನೆಗೆ ತೆರಳಿ ಸಾಂತ್ವನ ಹೇಳಿದರು.
ಶೇಕಮಲೆ ಬೊಳ್ಳಾಡಿ ಇಬ್ರಾಹಿಂ ಎಂಬವರ ಪತ್ನಿ 9 ತಿಂಗಳ ಗರ್ಭಿಣಿ ಹಸೀನಾ (29) ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಾಗಿದ್ದರು. ಜೂ.28 ರಂದು ಹೆರಿಗೆ ಸಂದರ್ಭ ಹೃದಯಾಘಾತದಿಂದ ನಿಧನರಾದರು.
ಹೆರಿಗೆಯಲ್ಲಿ ಮಗು ಜೀವಂತವಾಗಿದ್ದು, ಎಜೆ ಆಸ್ಪತ್ರೆಯ ವೈದ್ಯರಿಗೆ ಕರೆ ಮಾಡಿ ಅರುಣ್ ಪುತ್ತಿಲರು ಮಗುವಿನ ಆರೋಗ್ಯ ವಿಚಾರಿಸಿದರು.
ಈ ಹಿಂದೆಯೂ ಅಪಘಾತ ನಡೆದ ಸಂದರ್ಭ ಧರ್ಮ ನೋಡದೆ ತನ್ನದೇ ಕಾರಿನಲ್ಲಿ ರಕ್ತದ ಮಡುವಿನಲ್ಲಿದ್ದ ಗಾಯಳುಗಳನ್ನು ಹಾಕಿಕೊಂಡು ಹೋದ ಉದಾಹರಣೆಯೂ ಇದೆ. ಅವರ ಕಾರಿನಲ್ಲಿ ಅಪಘಾತಗೊಂಡ ಮುಸ್ಲಿಂ ಮಗುವೊಂದು ಮೃತಪಟ್ಟಿದೆ.
ಮೊನ್ನೆಯಷ್ಟೇ ಮಂಗಳೂರಿನಿಂದ ಬರುತಿದ್ದಾಗ ರಸ್ತೆ ಬದಿಯ ಚರಂಡಿಗೆ ಬಿದ್ದಿದ್ದ ಕಾರನ್ನು ಮೇಲೆತ್ತಲು ಸಹಾಯ ಮಾಡಿದ್ದರು.
Posted by Vidyamaana on 2023-09-23 13:10:28 |
ಪುತ್ತೂರು : ವಿಜಯ ಸಾಮ್ರಾಟ್ ಪುತ್ತೂರು ಇದರ ಆಶ್ರಯದಲ್ಲಿ ಸಹಜ್ ರೈ ಬಳಜ್ಜ ನೇತೃತ್ವದಲ್ಲಿ ಪುತ್ತೂರುದ ಪಿಲಿಗೊಬ್ಬು ಕಾರ್ಯಕ್ರಮ ಅ.22 ರಂದು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ದ.ಕ ಜಿಲ್ಲೆಯ ಆಹ್ವಾನಿತ ಹತ್ತು ತಂಡಗಳ ಪಿಲಿಗೊಬ್ಬು ಸ್ಪರ್ಧೆಯು ನಡೆಯಲಿದ್ದು, ಈ ಸ್ಪರ್ಧೆಯ ಯಶಸ್ವಿಗೆ ದರ್ಬೆ ಶ್ರೀರಾಮ ಸೌಧದಲ್ಲಿ ಸಮಿತಿಯನ್ನು ರಚಿಸಲಾಯಿತು.
ಶ್ರೀರಾಮ ಸೌಧದ ಮಾಲಕ ಹಾಗೂ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್, ಕಾರ್ಯಾಧ್ಯಕ್ಷರಾಗಿ ಸುಜಿತ್ ರೈ ಪಾಲ್ತಾಡ್, ಸಂಚಾಲಕರಾಗಿ ನಾಗರಾಜ್ ನಡುವಡ್ಕ ಪ್ರಧಾನ ಕಾರ್ಯದರ್ಶಿಯಾಗಿ ಶರತ್ ಆಳ್ವ ಕೂರೇಲು, ಉಪಾಧ್ಯಕ್ಷರುಗಳಾಗಿ ಸಂದೀಪ್ ರೈ ನಂಜೆ ಹಾಗೂ ದೇವಿಪ್ರಕಾಶ್ ಭಂಡಾರಿ, ಕಾರ್ಯದರ್ಶಿಗಳಾಗಿ ಸುರೇಶ್ ಪಿದಪಟ್ಲ ಹಾಗೂ ಶರತ್ ಕುಮಾರ್ ಮಾಡಾವು, ಜೊತೆ ಕಾರ್ಯದರ್ಶಿಯಾಗಿ ಶಂಕರ್ ಭಟ್, ಈಶಾನ್ಯ, ಕೋಶಾಧಿಕಾರಿಯಾಗಿ ರಾಜೇಶ್ ಕೆ. ಗೌಡ ಹಾಗೂ ಅಶೋಕ್ ಅಡೂರು, ಸಂಘಟನಾ ಕಾರ್ಯದರ್ಶಿಗಳಾಗಿ ಅರುಣ್ ರೈ ಹಾಗೂ ಉದಯ್ ಪಾಟಾಳಿ ಬೆಳ್ಳಾರೆ.
ಕಾರ್ಯಕಾರಿ ಸಮಿತಿ ಸದಸ್ಯರಾಗಿ ದಯಾನಂದ ಶೆಟ್ಟಿ ಉಜೈಮಾರ್, ಪ್ರೀತಂಶೆಟ್ಟಿ ಪೆರ್ನೆ, ಆದರ್ಶ್ ಶೆಟ್ಟಿ ಉಪ್ಪಿನಂಗಡಿ, ಪ್ರಮೀತ್ ರಾಜ್ ಕಟ್ಟತ್ತಾರು, ವಿನಯ ರೈ ಕೋರಿಕ್ಕಾರು, ಆನಂದ ತೆಂಕಿಲ, ದಿನೇಶ್ ವಾಸುಕಿ, ಚಂದ್ರಶೇಖರ ರೈ ಸಣಂಗಲ, ಸತೀಶ್ ರೈ ದೇವಿನಗರ, ಕಿಶೋರ್ ಕೊಳಿಗೆ, ಆದೇಶ್ ಶೆಟ್ಟಿ ಉಪ್ಪಿನಂಗಡಿ, ಸಚಿನ್ ಶೆಟ್ಟಿ ನರಿಮೊಗರು, ಸಾಯಿರಾಂ ಬಾಳಿಲ, ಸುಬ್ಬು ಸಂಟ್ಯಾರ್, ವಸಂತ ಕುಮಾರ್ ಪುತ್ತೂರು, ಸತೀಶ್ ಬಲಮುರಿ, ಪ್ರದೀಪ್ ರೈ ಕರ್ನೂರ್, ಪ್ರಶಾಂತ್ ಸವಣೂರು, ಯಶು ಸಂಪ್ಯ, ಯತೀಶ್ ಕುರಿಯ, ಪುನೀತ್ ಕೆಯ್ಯರು, ಹರ್ಷಕುಮಾರ್ ಪುತ್ತೂರು, ಚರಣ್ ರೈ ಮಠ, ಸಚಿನ್ ಸವಣೂರು, ಪವನ್ ಶೆಟ್ಟಿ, ಪ್ರಗತ್ ಶೆಟ್ಟಿ ಆಯ್ಕೆಯಾಗಿದ್ದಾರೆ.
Posted by Vidyamaana on 2024-04-04 18:54:47 |
ಬೆಳ್ತಂಗಡಿ: ಡಿಸೇಲ್ ಪೈಪ್ ಲೈನ್ ಕೊರೆದು 9 ಲಕ್ಷ ರೂ ಮೌಲ್ಯದ ಡಿಸೇಲ್ ಕಳ್ಳತನ ಮಾಡಿದ ಘಟನೆ ಪುದುವೆಟ್ಟು ಗ್ರಾಮದ ಆಲಡ್ಕದಲ್ಲಿ ನಡೆದಿದ್ದ ಪ್ರಕರಣ ಸಂಬಂಧ ಐದು ಜನ ಆರೋಪಿಗಳನ್ನು ಬಂಧಿಸುವಲ್ಲಿ ಧರ್ಮಸ್ಥಳ ಪೊಲೀಸರು ಯಶಸ್ವಿಯಾಗಿದ್ದಾರೆ.
*ಐದು ಜನ ಅರೋಪಿಗಳ ಬಂಧನ:*
Posted by Vidyamaana on 2023-09-28 22:20:38 |
ಪುತ್ತೂರು: ಪುತ್ತೂರು ತಾಲೂಕಿನಾದ್ಯಂತ ಈದ್ ಮಿಲಾದ್ ಹಬ್ಬವನ್ನು ಸಂಭ್ರಮದಿಂದ ಸೆ 28 ಗುರುವಾರದಂದು ಮುಸ್ಲಿಂ ಬಾಂಧವರು ಆಚರಿಸಿದರು.
ಬೆಳಿಗ್ಗೆ ಮುಸ್ಲಿಂ ಬಾಂಧವರು ಪ್ರಾರ್ಥನಾ ಮಂದಿರಗಳಿಗೆ ತೆರಳಿ ಪರಸ್ಪರ ಶುಭಾಶಯ ಕೋರಿದರು.
ಈದ್ ಮಿಲಾದ್ ಅಂಗವಾಗಿ ತಾ ದ.ಕ. ಜಿಲ್ಲಾ ಯುವಜನ ಪರಿಷತ್ ಪುತ್ತೂರು ತಾಲೂಕು ಹಾಗೂ ಈದ್ ಮಿಲಾದ್ ಸಮಿತಿ ವತಿಯಿಂದ 31ನೇ ವರ್ಷದ ಬೃಹತ್ ಮಿಲಾದ್ ಸಮಾವೇಶ ಹಾಗೂ ಬುರ್ಧಾ ಮಜ್ಜಿಸ್ ಗುರುವಾರ ನಗರದ ಕಿಲ್ಲೆ ಮೈದಾನದಲ್ಲಿ ಹಮ್ಮಿಕೊಂಡಿತು.ಸಂಜೆ ಕಬಕ ವೃತ್ತದಲ್ಲಿ ಜಾಥಾ ಕ್ಕೆ ಕಬಕ ಟೈಲರ್ ಇಸ್ಮಾಯಿಲ್ ಸಾಹೇಬ್ ಚಾಲನೆ ನೀಡಿದರು. ಈಸ್ಟರ್ನ್ ಗ್ರೂಪ್ ಮಾಲಕ ಜ.ಕಲಂದರ್ ಧ್ವಜ ಸ್ವೀಕಾರ ಮಾಡಿದರು. ಬಳಿಕ ಹೊರಟ ಬೃಹತ್ ವಾಹನ ಜಾಥಾ ಮುಖ್ಯರಸ್ತೆಯಾಗಿ ಬೊಳುವಾರು, ದರ್ಬೆಯಿಂದಾಗಿ ಸಂಜೆ ಕಿಲ್ಲೆ ಮೈದಾನಕ್ಕೆ ತೆರಳಿ ಸಮಾಪನ ಗೊಂಡಿತು.
ಸಂಜೆ ಕಿಲ್ಲೆ ಮೈದಾನದಲ್ಲಿ ನಡೆದ ಸಮಾವೇಶವನ್ನು ಬಹು ಎಂ.ಎಂ. ಮಹ್ ರೂಫ್ ಸುಲ್ತಾನಿ ಅಲ್ಪುರ್ಖಾನಿ ಆತೂರು ಉದ್ಘಾಟಿದರು. ಕೇಂದ್ರ ಜುಮ್ಮಾ ಮಸೀದಿ ಮುದಗ್ರಿಸ್ ಬಹು.ಅಸ್ಸಯ್ಯದ್ ಅಹ್ಮದ್ ಪೊಕೋಯ ತಂಙಳ್ ದುವಾಶೀರ್ವಚನ ನೀಡಿದರು. ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಕಮಿಟಿ ಅಧ್ಯಕ್ಷ ಎಲ್.ಟಿ.ಅಬ್ದುಲ್ ರಝಾಕ್ ಹಾಜಿ ಅಧ್ಯಕ್ಷತೆ ವಹಿಸಿದ್ದರು. ಬಹು.ಆಶಿಕ್ ದಾರಿಮಿ ಅಲಂಪುಝ ಪ್ರಭಾಷಣ ಮಾಡಿದರು. ರಾತ್ರಿ ಬಹು. ಫಕ್ರೆ ಆಲಂ ಮುಂಬೈಯವರಿಂದ ನಾತೇ ಶರೀಫ್ ನಡೆಯಿತು. ಸಭಾ ಕಾರ್ಯಕ್ರಮದ ಬಳಿಕ ರಾತ್ರಿ ಅನ್ನದಾನ ನಡೆಯಿತು. ನೂರಾರು ಮಂದಿ ಮುಸ್ಲಿಂ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರುಸಮಾರಂಭದಲ್ಲಿ ತಾಲೂಕು ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಕಲ್ಲೇಗ, ತಾಲೂಕು ಮುಸ್ಲಿಂ ಸಂಯುಕ್ತ ಜಮಾಅತ್ ಅಧ್ಯಕ್ಷ ಕೆ.ಪಿ.ಮಹಮ್ಮದ್ ಹಾಜಿ, ಉದ್ಯಮಿ ರಿಯಾಝ್, ಈದ್ ಮಿಲಾದ್ ಸಮಿತಿ ಅಧ್ಯಕ್ಷ ಬಶೀರ್ ಪರ್ಲಡ್ಕ, ಪ್ರಧಾನ ಕಾರ್ಯದರ್ಶಿ ಇಫಾಝ್ ಬನ್ನೂರು, ಮುಸ್ಲಿಂ ಯುವಜನ ಪರಿಷತ್ ಕೋಶಾಧಿಕಾರಿ, ನ್ಯಾಯವಾದಿ ಶಾಕಿರ್ ಹಾಜಿ, ನೌಷದ್ ಹಾಜಿ ಬೊಳ್ವಾರ್, ಹಸೈನಾರ್ ಬನಾರಿ, ಅಶ್ರಫ್ ಬಾವ, ಧಾರ್ಮಿಕ ಮುಖಂಡರು ಉಪಸ್ಥಿತರಿದ್ದರು.
Posted by Vidyamaana on 2023-08-08 15:38:54 |
ಕಡಬ :ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ತೆರಳಿದ ಪರಿಣಾಮ ಬೈಕ್ ಸವಾರರೊಬ್ಬರು ಗಂಭೀರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ - ಹೆದ್ದಾರಿಯ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಗಂಭೀರ ಗಾಯಗೊಂಡ ಚಿದಾನಂದ ಎಂಬವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ವಾಹನದ ಪತ್ತೆಗೆ ಬಲೆ ಬೀಸಲಾಗಿದೆ. ಕಡಬ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
Posted by Vidyamaana on 2024-01-10 20:27:54 |
ಹಾವೇರಿ: ಮುಸ್ಲಿಂ ವಿವಾಹಿತ ಮಹಿಳೆಯೊಂದಿಗೆ ಸಿಕ್ಕಿಬಿದ್ದ ಹಿಂದು ವ್ಯಕ್ತಿ ಮೇಲೆ ಯುವಕರ ಗುಂಪು ಹಲ್ಲೆ ಮಾಡಿರುವ ಘಟನೆ (Assault Case) ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿ ನಡೆದಿದೆ. ತಮ್ಮ ಕೋಮಿನ ಮಹಿಳೆಯೊಂದಿಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಯುವಕರ ಗುಂಪು, ಹೋಟೆಲ್ಗೆ ನುಗ್ಗಿ ಪುರುಷನ ಜತೆಗೆ ಮಹಿಳೆಯನ್ನೂ ಹಿಗ್ಗಾಮುಗ್ಗಾ ಥಳಿಸಿದೆ.
ಹಾನಗಲ್ 4ನೇ ಕ್ರಾಸ್ ಬಳಿಯ ಖಾಸಗಿ ಹೊಟೇಲ್ನಲ್ಲಿ ಮುಸ್ಲಿಂ ವಿವಾಹಿತ ಮಹಿಳೆಯೊಂದಿಗೆ ವ್ಯಕ್ತಿ ಇರುವ ಬಗ್ಗೆ ಮಾಹಿತಿ ಪಡೆದು ಯುವಕರ ಗುಂಪು ತೆರಳಿದೆ. ಬಾಗಿಲು ಬಡಿದು ರೂಮಲ್ಲಿ ನೀರು ಬರುತ್ತಿದ್ದೆಯೇ ಚೆಕ್ ಮಾಡಬೇಕು ಎಂದು ಹೇಳಿದ್ದಾರೆ. ಈ ವೇಳೆ ನೀರು ಬರುತ್ತಿದೆ, ಏನೂ ಸಮಸ್ಯೆ ಇಲ್ಲ ಎಂದು ಮಹಿಳೆ ಜತೆಗಿದ್ದ ವ್ಯಕ್ತಿ ಹೇಳಿದ್ದಾನೆ. ಬಾಗಿಲು ಓಪನ್ ಮಾಡಿದ್ದೇ ತಡ, ರೊಚ್ಚಿಗೆದ್ದ ಯುವಕರ ಗುಂಪು, ವ್ಯಕ್ತಿ ಹಾಗೂ ಮಹಿಳೆ ಇಬ್ಬರ ಮೇಲೂ ಹಲ್ಲೆ ನಡೆಸಿದ್ದಾರೆ.ಬುರ್ಖಾ ಹಾಕಿಕೊಂಡು ಬಂದು ಮಲಗಿದ್ದೀಯಾ? ಎಂದು ಮಹಿಳೆಯನ್ನು ಥಳಿಸಿದ ಯುವಕರು, ನಿನಗೆ ನಮ್ ಹುಡುಗೀನೇ ಬೇಕಾ ಎಂದು ಆ ವ್ಯಕ್ತಿಗೂ ಹೊಡೆದಿದ್ದಾರೆ. ಈ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಘಟನೆ ಸಂಬಂಧ ಒಬ್ಬ ಯುವಕನನ್ನು ಹಾನಗಲ್ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಮಹಿಳೆ ಮೇಲೆ ಮತ್ತೇನಾದರೂ ದೌರ್ಜನ್ಯ ನಡೆದಿದೆಯಾ ಎಂಬ ಬಗ್ಗೆ ತನಿಖೆ ಮಾಹಿತಿ ಪಡೆಯುತ್ತಿದ್ದಾರೆ. ಸದ್ಯ ಹಲ್ಲೆಗೊಳಗಾದ ಮಹಿಳೆಯನ್ನು ವೈದ್ಯಕೀಯ ತಪಾಸಣೆಗಾಗಿ ಹಾನಗಲ್ ತಾಲೂಕು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
Posted by Vidyamaana on 2024-04-07 10:56:51 |
ಗಳೂರು : ಭಾರತದಂತಹ ಪ್ರಜಾಪ್ರಭುತ್ವದಲ್ಲಿ ಮತದಾನ ಕೇವಲ ಹಕ್ಕು ಮಾತ್ರವಲ್ಲ, ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಇದು ರಾಷ್ಟ್ರದ ಭವಿಷ್ಯವನ್ನು ರೂಪಿಸುವ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಅಧಿಕಾರವಾಗಿದೆ.ನೀವು ಭಾರತದಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದರೆ ಮತ್ತು ಇನ್ನೂ ನೋಂದಾಯಿಸದಿದ್ದರೆ, ಪ್ರಜಾಪ್ರಭುತ್ವ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವ ಹಾದಿಯಲ್ಲಿ ನಿಮ್ಮನ್ನು ಪ್ರಾರಂಭಿಸಲು ಸರಳ ಮಾರ್ಗದರ್ಶಿ ಇಲ್ಲಿದೆ.
ಆನ್ಲೈನ್ ಮತ್ತು ಆಫ್ಲೈನ್ ಎರಡರಲ್ಲೂ ಭಾರತದಲ್ಲಿ ಮತ ಚಲಾಯಿಸಲು ನೋಂದಾಯಿಸುವುದು ಹೇಗೆ ಎಂಬುದರ ಸರಳ ವಿವರಣೆ ಇಲ್ಲಿದೆ:
ಆನ್ ಲೈನ್ ನೋಂದಣಿ ಪ್ರಕ್ರಿಯೆ:
ರಾಷ್ಟ್ರೀಯ ಮತದಾರರ ಸೇವಾ ಪೋರ್ಟಲ್ (https://voters.eci.gov.in/) ಅಧಿಕೃತ ವೆಬ್ಸೈಟ್ಗೆ ಹೋಗಿ ಮತ್ತು ಫಾರ್ಮ್ 6 ಅನ್ನು ಡೌನ್ಲೋಡ್ ಮಾಡಿ.
ಫಾರ್ಮ್ ಅನ್ನು ಭರ್ತಿ ಮಾಡಿ ಮತ್ತು ಅದನ್ನು ನಿಮ್ಮ ಪ್ರದೇಶದ ಚುನಾವಣಾ ನೋಂದಣಿ ಅಧಿಕಾರಿಗೆ (ಇಆರ್ಒ) ಸಲ್ಲಿಸಿ.
ನಿಮ್ಮ ಅರ್ಜಿಯನ್ನು ಪರಿಶೀಲಿಸಲಾಗುತ್ತದೆ, ಮತ್ತು ಎಲ್ಲವೂ ಸರಿಯಾಗಿದ್ದರೆ, ನಿಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಲಾಗುತ್ತದೆ. ಮತದಾರರಲ್ಲಿ ಮೂರು ವಿಧಗಳಿವೆ: ಸಾಮಾನ್ಯ ಮತದಾರರು, ಸಾಗರೋತ್ತರ ಮತದಾರರು (ಎನ್ಆರ್ಐ) ಮತ್ತು ಸೇವಾ