Posted by vidyamaana on 2023-11-07 04:42:13 |
ಪುತ್ತೂರು: ಪುತ್ತೂರಿನ ನಗರದಲ್ಲಿ ತಲವಾರ್ ನಲ್ಲಿ ಕಡಿದು ಕಲ್ಲೇಗ ಟೈಗರ್ಸ್ ನ ಪ್ರಮುಖ ನಾಯಕನನ್ನು ಹತ್ಯೆ ಮಾಡಿದ ಘಟನೆ ಇದೀಗ ನಡೆದಿದೆ.
ಟೈಗರ್ಸ್ ನ ಮುಖ್ಯಸ್ಥ ಅಕ್ಷಯ್ ಕಲ್ಲೇಗ ಅವರನ್ನು ಹತ್ಯೆಗೀಡಾದ ಯುವಕ. ಈತ ಪುತ್ತೂರಿನ ನಗರದಲ್ಲಿ ಇದ್ದಾಗ ತಂಡಯೊಂದು ಆಗಮಿಸಿ ಯದ್ವಾತದ್ವ ತಲವಾರ್ ನಲ್ಲಿ ದಾಳಿ ನಡೆಸಿ, ಹತ್ಯೆ ಮಾಡಿದೆ. ಸ್ಥಳಕ್ಕೆ ಆಗಮಿಸಿದ ಪುತ್ತೂರು ನಗರ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Posted by Vidyamaana on 2022-12-15 14:23:48 |
ಪುತ್ತೂರು: ಎನ್ಆರ್ಎಲ್ಎಂ ಯೋಜನೆಯ ವರ್ಕ್ ಶೆಡ್ (ಕಟ್ಟಡ) ನಿರ್ಮಾಣಕ್ಕೆ ಬನ್ನೂರಿನ ಬೀರಿಗದಲ್ಲಿ ಶನಿವಾರ ಶಾಸಕ ಸಂಜೀವ ಮಠಂದೂರು ಅವರು ಶಂಕುಸ್ಥಾಪನೆ ನೆರವೇರಿಸಿದರು.
ಬನ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಚಿಕ್ಕಮುಡ್ನೂರು ಗ್ರಾಮದಲ್ಲಿ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಡೆಯಿತು. ಎನ್ಆರ್ಎಲ್ಎಂ ಯೋಜನೆಯಡಿ ಸಂಜೀವಿನಿ ಒಕ್ಕೂಟ ಈಗಾಗಲೇ ಪುತ್ತೂರು ತಾಲೂಕಿನಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದು, ಹಲವು ಗೃಹೋಪಯೋಗಿ ಉತ್ಪನ್ನಗಳ ತಯಾರಿಕೆ ನಡೆಯುತ್ತಿದೆ. ಇದಕ್ಕೆ ಪೂರಕವಾಗಿ ಬೀರಿಗದಲ್ಲಿ ವರ್ಕ್ ಶೆಡ್ ನಿರ್ಮಾಣ ಕಾಮಗಾರಿ ನಡೆಯಲಿದೆ. ಸುಮಾರು ೧೮.೫ ಲಕ್ಷ ರೂ. ವೆಚ್ಚದಲ್ಲಿ ಯೋಜನೆಯು ಕಾರ್ಯಗತಗೊಳ್ಳಲಿದೆ.
Posted by Vidyamaana on 2024-03-14 04:53:09 |
ಮೈಸೂರು: ಮುಂಬರುವ ಲೋಕಸಭಾ ಚುನಾವಣೆಗೆ ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ನನಗೆ ಭಾರತೀಯ ಜನತಾ ಪಕ್ಷದಿಂದ ಅವಕಾಶ ನೀಡಲಾಗಿದೆ. ನಮ್ಮ ಪೂರ್ವಜರ ಮಹತ್ತರ ಕೊಡುಗೆಗಳಿಂದ ಕರ್ನಾಟಕ ಜನತೆಯ ಬೆಂಬಲ ಮತ್ತು ಭಾವನಾತ್ಮಕ ಸಂಪರ್ಕವು ನಿಸ್ಸಂದೇಹವಾಗಿ ನಮ್ಮೊಟ್ಟಿಗಿದೆ ಎಂದು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.ಟಿಕೆಟ್ ಘೋಷಣೆ ಬಳಿಕ ಫೇಸ್ಬುಕ್ನ ತಮ್ಮ ಖಾತೆಯಲ್ಲಿ ಪೋಸ್ಟ್ ಹಾಕಿರುವ ಅವರು, ಒಂಬತ್ತು ವರ್ಷಗಳಿಂದ ನಾನು ನಮ್ಮ ಕ್ಷೇತ್ರದ ಹಾಗೂ ರಾಜ್ಯದ ಸಾರ್ವಜನಿಕ ಜೀವನದ ಭಾಗವಾಗಿದ್ದೇನೆ. ಅನೇಕ ಪ್ರಜಾಬಾಂಧವರನ್ನು ಭೇಟಿ ಮಾಡುವ ಅವಕಾಶ ಸಿಕ್ಕಿದೆ. ನನ್ನನ್ನು ಮುಕ್ತವಾಗಿ ಒಬ್ಬ ಸ್ನೇಹಿತನಂತೆ ಸ್ವಾಗತಿಸಿ ಆತಿಥ್ಯವನ್ನು ನೀಡಿದ್ದೀರಿ. ಈಗ ಆ ಋಣವನ್ನು ತೀರಿಸಲು ಅವಕಾಶ ಕೇಳುತ್ತಿದ್ದೇನೆ ಎಂದು ಕೋರಿದ್ದಾರೆ.
ನಿಮ್ಮೆಲ್ಲರ ಬೆಂಬಲ ಮತ್ತು ಆಶೀರ್ವಾದದಿಂದ ಮೈಸೂರು ಮತ್ತು ಕೊಡಗಿನ ಸರ್ವಾಂಗೀಣ ಏಳಿಗೆ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡಲು ನಾನು ಆಶಿಸುತ್ತಿದ್ದೇನೆ. ಜನರ ಶುಭ ಹಾರೈಕೆ ಮತ್ತು ಬೆಂಬಲವನ್ನು ಎದುರು ನೋಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಚುನಾವಣೆಯಲ್ಲಿ ಪಕ್ಷವನ್ನು ಪ್ರತಿನಿಧಿಸಲು ತಮ್ಮ ಮೇಲೆ ನಂಬಿಕೆ ಇಟ್ಟ ಪ್ರಧಾನಿ ನರೇಂದ್ರ ಮೋದಿ ಅವರಿಂದಹಿಡಿದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರೆಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.
ಎರಡು ಅವಧಿಯನ್ನು ಯಶಸ್ವಿಯಾಗಿ ಪೂರೈಸಿದ್ದಕ್ಕಾಗಿ ಪ್ರತಾಪ ಸಿಂಹ ಅವರನ್ನು ಅಭಿನಂದಿಸುತ್ತೇನೆ. ಈ ಕ್ಷೇತ್ರದ ಅಭಿವೃದ್ಧಿಗೆ ಅವರ ಬದ್ಧತೆ ನಮ್ಮೆಲ್ಲರ ಭವಿಷ್ಯದ ಆಕಾಂಕ್ಷೆಗಳಿಗೆ ಭದ್ರ ಅಡಿಪಾಯ ಹಾಕಿಕೊಟ್ಟಿದೆ ಎಂದು ಶ್ಲಾಘಿಸಿದ್ದಾರೆ.
Posted by Vidyamaana on 2023-11-15 08:40:42 |
ಬೆಂಗಳೂರು, (ನವೆಂಬರ್ 15): ರಾಜ್ಯ ಬಿಜೆಪಿಗೆ ನೂತನ ಸಾರಥಿಯಾಗಿ ಆಯ್ಕೆಯಾಗಿ ಮಿಂಚಿನ ಸಂಚಲನಕ್ಕೆ ಕಾರಣವಾಗಿರುವ ಬಿವೈ ವಿಜಯೇಂದ್ರ(BY Vijayendra )ಇಂದು(ಬುಧವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬೆಳಗ್ಗೆ 10ಗಂಟೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದೆ. ಅದಕ್ಕೂ ಮೊದಲು ಬೆಳಗ್ಗೆ 9.45ಕ್ಕೆ ಬಿಜೆಪಿ ರಾಜ್ಯ ಕಚೇರಿಯಲ್ಲಿ ಬಿವೈವಿಗೆ ಪೂರ್ಣಕುಂಭ ಸ್ವಾಗತ ನೀಡಲಾಗುತ್ತೆ. ಬಳಿಕ ಗೋಪೂಜೆ ನೆರರೇವರಿಸಲಿದ್ದಾರೆ. ಗಣಪತಿ ಹೋಮದ ಪೂರ್ಣಾಹುತಿ ನಂತರ ವಿಜಯೇಂದ್ರಗೆ ಹಾಲಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ.ರಾತ್ರಿಯೇ ಬಿಜೆಪಿ ಕಚೇರಿಯಲ್ಲಿ ಹೋಮ, ಹವನ
ಬಿಜೆಪಿ ಕಚೇರಿಯಲ್ಲಿ ನಿನ್ನೆ ರಾತ್ರಿಯಿಂದಲೇ ಪೂಜೆ, ಹೋಮ ಹವನಗಳು ನೆರವೇರುತ್ತಿವೆ. ನಿನ್ನೆ ದುರ್ಗಾಹೋಮ, ಗಣಪತಿ ಹೋಮ ನಡೆದಿದೆ. ಇನ್ನು ಮಲ್ಲೇಶ್ವರಂನಲ್ಲಿ ರಸ್ತೆಯುದ್ಧಕ್ಕೂ ಬಿಜೆಪಿ ಬಾವುಟಗಳು ರಾರಾಜಿಸುತ್ತಿವೆ. ಎಲ್ಲೆಲ್ಲೂ ವಿಜಯೇಂದ್ರ ಪೋಸ್ಟರ್ಗಳು ಮಿಂಚುತ್ತಿವೆ. ಅಲ್ಲದೇ ಬಿಜೆಪಿ ಕಚೇರಿ ತಳಿರು ತೋರಣಗಳಿಂದ ಸಿಂಗಾರಗೊಂಡಿದೆ. ಕಮಲಪಾಳಯದಲ್ಲಿ ಹಬ್ಬದ ವಾತಾವರಣವೇ ನಿರ್ಮಾಣವಾಗಿದೆ.ಮೊನ್ನೆ ಮಠಮಾನ್ಯಗಳಿಗೆ ರೌಂಡ್ಸ್ ಹಾಕಿದ್ದ ವಿಜಯೇಂದ್ರ, ನಿನ್ನೆ ಮುಳುಬಾಗಿಲು ತಾಲೂಕಿನಲ್ಲಿರುವ ಕುರುಡುಮಲೆ ವಿನಾಯಕನ ದರ್ಶನ ಪಡೆದಿದ್ದರು, ಅಲ್ಲದೇ ಸಂಜೆ ಬೆಂಗಳೂರಿನ ಮೆಜೆಸ್ಟಿಕ್ನಲ್ಲಿರುವ ಶಕ್ತಿದೇವತೆ ಅಣ್ಣಮ್ಮ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದದ್ದರು.
ವಿಜಯೇಂದ್ರ ಆಯ್ಕೆಯಿಂದಾಗಿ ಯಡಿಯೂರಪ್ಪ ವಿರೋಧಿ ಬಣ ಕೈ ಕೈ ಹಿಸುಕಿಕೊಳ್ಳುವಂತಾಗಿದೆ. ವಿ.ಸೋಮಣ್ಣ, ಬಸನಗೌಡ ಪಾಟೀಲ್ ಯತ್ನಾಳ್ ಮೌನಕ್ಕೆ ಜಾರಿದ್ದಾರೆ. ಹೀಗಾಗಿ ಇಂದಿನ ವಿಜಯೇಂದ್ರ ಪದಗ್ರಹಣ ಕಾರ್ಯಕ್ರಮಕ್ಕೆ ಬಂಡಾಯ ಬಾವುಟದ ಬಿಸಿ ತಟ್ಟಲಿದ್ದು, ಹಲವು ನಾಯಕರು ಗೈರಾಗುವ ಸಾಧ್ಯತೆ ಇದೆ.ಬಿ.ವೈ.ವಿಜಯೇಂದ್ರ ಅವರು ಪಕ್ಷದ ನಾಯಕರಿಗೆ ಖುದ್ದು ಕರೆ ಮಾಡಿ ಪದಗ್ರಹಣ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ರಾಜ್ಯ ಬಿಜೆಪಿ ನಾಯಕರು, ಕೇಂದ್ರ ಸಚಿವರು, ಜಿಲ್ಲಾಧ್ಯಕ್ಷರು ಸೇರಿ ಹಲವರಿಗೆ ವಿಜಯೇಂದ್ರ ಅವರೇ ಕರೆ ಮಾಡಿ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಆದ್ರೆ, ಇಂದಿನ ಪದಗ್ರಹಣ ಕಾರ್ಯಕ್ರಮಕ್ಕೆ ಸಿ.ಟಿ.ರವಿ ಗೈರಾಗಲಿದ್ದು, ಇನ್ನುಳಿದಂತೆ ಅಸಮಾಧಾನಿತರು ಈ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೋ ಇಲ್ಲವೋ ಎನ್ನುವ ಪ್ರಶ್ನೆ ಎದ್ದಿದ್ದು, ಮುಂದೆ ವಿಜಯೇಂದ್ರ ಇದೆಲ್ಲವನ್ನು ಹೇಗೆ ಸರಿದೂಗಿಸಿಕೊಂಡು ಹೋಗುತ್ತಾರೆ ಎನ್ನುವುದೇ ಸದ್ಯದ ಕುತೂಹಲ.
Posted by Vidyamaana on 2023-11-04 16:44:06 |
ಬೆಂಗಳೂರು:ಪುತ್ತೂರು ಶಾಸಕರು ಹಾಗೂ ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷರು ಅಶೋಕ್ ಕುಮಾರ್ ರೈವರು ಇಂದು ಕರ್ನಾಟಕ ಬ್ಯಾಂಕ್ ಕಾರ್ಯನಿರ್ವಾಹಕ ನೀರ್ದೆಶಕರು ಶೇಖರ್ ರಾವ್ ರವರನ್ನು ಭೇಟಿಯಾಗಿ ಬೆಂಗಳೂರು ಕಂಬಳ ನಮ್ಮ ಕಂಬಳ ಕ್ಕೆ ಆಮಂತ್ರಣ ಪತ್ರ ಕೊಟ್ಟು ಆಹ್ವಾನಿಸಲಾಯಿತು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರು ಮುಳಿಯ ಜ್ಯುವೆಲ್ಸ್ ನ ಮುಖ್ಯ ಆಡಳಿತ ನಿರ್ದೇಶಕ ಮುಳಿಯ ಕೇಶವ ಪ್ರಸಾದ್ ಮತ್ತು ಸಚಿನ್ ಶೆಟ್ಟಿ ಉಪಸ್ಥಿತರಿದ್ದರು
Posted by Vidyamaana on 2023-11-15 13:54:05 |
ಶಿವಮೊಗ್ಗ, ನ.15: ಯುವಕನೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ನಡೆದಿದೆ.
ಮಲ್ಲೇಶ್(35) ಕೊಲೆಯಾದ ಯುವಕ. ಹತ್ಯೆ ನಂತರ ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಶಿವಮೊಗ್ಗದ ಕೋಟೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಮುಂದಿನ ಕ್ರಮ ಕೈಗೊಂಡಿದ್ದಾರೆ.
ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್ ಕೂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮಲ್ಲೇಶ್ ಕೊಲೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ
Posted by Vidyamaana on 2023-09-21 17:40:20 |
ಪುತ್ತೂರು :- ಸರಕಾರಿ ಪ್ರಥಮ ದರ್ಜೆ ಕಾಲೇಜು ನೆಲ್ಲಿಕಟ್ಟೆಯಲ್ಲಿ ವ್ಯಾಸಂಗ ಮಾಡಿದ ಹಳೇ ವಿದ್ಯಾರ್ಥಿಗಳು (2009-12 ಬ್ಯಾಚ್) ರಚಿಸಿದ ಚೋಕೊಲೇಟ್ ಬಾಯ್ಸ್ ಗ್ರೂಪಿನ ಅಧೀನದಲ್ಲಿ ಸಾಮಾಜಿಕ ಸೇವಾ ಉದ್ದೇಶದೊಂದಿಗೆ ಅಲ್ ರಬೀಹ್ ಹೆಲ್ಪಿಂಗ್ ಹ್ಯಾಂಡ್ಸ್ ನೂತನ ಸಮಿತಿಯನ್ನು ರಚಿಸಲಾಯಿತು.
ಸಮಾಜದಲ್ಲಿನ ಅಸಾಹಯಕ ರೋಗಿಗಳಿಗೆ ಹಾಗೂ ಅರ್ಹ ಅಶಕ್ತ ಫಲಾನುಭವಿಗಳಿಗೆ ನೆರವಾಗುವ ಉತ್ತಮ ಉದ್ದೇಶವಿಟ್ಟುಕೊಂಡು ವಿದ್ಯಾರ್ಥಿ ಜೀವನದಲ್ಲೇ ಒಟ್ಟಿಗೆ ಇದ್ದಂತಹ ಸ್ನೇಹಿತರು ರಚಿಸಿದ ಈ ಸಂಘಟನೆಯ ಧ್ಯೇಯ ಸೇವೆ ಮಾತ್ರ ಎಂದು ನೂತನವಾಗಿ ಆಯ್ಕೆಯಾದ ಅಧ್ಯಕ್ಷರಾದ ಜನಾಬ್ ಸಿದ್ದೀಕ್ ಗಡಿಪ್ಪಿಲ ಹೇಳಿದರು.
2023-24 ರ ನೂತನ ಸಮಿತಿಯ ಅಧ್ಯಕ್ಷರಾಗಿ ಸಿದ್ದೀಕ್ ಗಡಿಪ್ಪಿಲ ,ಪ್ರಧಾನ ಕಾರ್ಯದರ್ಶಿಯಾಗಿ ನಝೀರ್ ಪರ್ಪುಂಜ ,ಉಪಾಧ್ಯಕ್ಷರಾಗಿ ಅಝೀರ್ ಕಲ್ಲಡ್ಕ ,ಕೋಶಾಧಿಕಾರಿಯಾಗಿ ರಿಯಾಝ್ ಪುರುಷರಕಟ್ಟೆ ಹಾಗೂ ಜೊತೆ ಕಾರ್ಯದರ್ಶಿಯಾಗಿ ಫಿರೋಝ್ ಪಾಲ್ತಾಡ್ ಆಯ್ಕೆಗೊಂಡರು.
ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಉಸ್ಮಾನ್ ಪೇರಮುಗೇರು,ಆಸಿಫ್ ಅಬುಧಾಬಿ ,ಆರಿಸ್ ಸವಣೂರು ,ಶಹೀರ್ ದುಬೈ,ರಝಾಕ್ ಸಾಲ್ಮರ,ನವಾಝ್ ಕಡಬ ,ನೌಶಾದ್ ಕಟ್ಟತ್ತಾರ್ ,ಸಾದಿಕ್ ಅರಿಯಡ್ಕ ,ಇರ್ಷಾದ್ ಕಾವು ಮತ್ತು ಸಮದ್ ಸವಣೂರು ಆಯ್ಕೆಗೊಂಡರು.
ಪದಾಧಿಕಾರಿಗಳು ಆಯ್ಕೆ ಪ್ರಕ್ರಿಯನ್ನು ಆಸಿಫ್ ಅಬುದಾಬಿ ಹಾಗೂ ರಝಾಕ್ ಸಾಲ್ಮರ ನಿರ್ವಹಿಸಿದರು.