ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಸುದ್ದಿಗಳು News

Posted by vidyamaana on 2024-07-03 13:36:16 |

Share: | | | | |


ವಿವಾಹಿತ ಯುವಕನ ಜತೆ ವಿದ್ಯಾರ್ಥಿನಿ ಲವ್, ಕೆರೆಗೆ ಹಾರಿ ಇಬ್ಬರೂ ಆತ್ಮಹತ್ಯೆ!

ಬೆಂಗಳೂರು (ಜು.3): ಇಲ್ಲಿನ ಹೊರವಲಯದ ನೈಸ್ ರಸ್ತೆ ಸಮೀಪದ ಕೆರೆಗೆ ಹಾರಿ ಯುವ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕಾಲೇಜು ವಿದ್ಯಾರ್ಥಿನಿ ಅಂಜನಾ(20) ಮತ್ತು ಶ್ರೀಕಾಂತ್(25) ಸಾವನ್ನಪ್ಪಿರುವ ದುರ್ದೈವಿಗಳಾಗಿದ್ದಾರೆ. ಜುಲೈ 1ರಂದು ಪ್ರೇಮಿಗಳು ನಾಪತ್ತೆಯಾಗಿದ್ದರು.

ಕಳೆದ ಕೆಲ ವರ್ಷಗಳಿಂದ ಇಬ್ಬರು ಪರಸ್ಪರ ಪ್ರೀತಿಸ್ತಿದ್ದರು. ಆದರೆ ಯುವಜೋಡಿಯ ಪ್ರೀತಿಗೆ ವಿದ್ಯಾರ್ಥಿನಿ ಪೋಷಕರಿಂದ ವಿರೋಧ ವ್ಯಕ್ತವಾಗಿತ್ತು. ವಿದ್ಯಾರ್ಥಿನಿ ತಲಘಟ್ಟಪುರ ಸಮೀಪದ ಅಂಜನಾಪುರ ಬಳಿ ವಾಸವಿದ್ದಳು. ಯುವಕ ಶ್ರೀಕಾಂತ್ ಕೋಣನಕುಂಟೆ ನಿವಾಸಿಯಾಗಿದ್ದ. ಇಬ್ಬರೂ ನಾಪತ್ತೆಯಾಗಿದ್ದರು. ನಾಪತ್ತೆ ಹಿನ್ನಲೆ ಎರಡೂ ಕಡೆಯವರ ಪೋಷಕರು ಕೋಣನಕುಂಟೆ ಮತ್ತು ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ ಇಬ್ಬರೂ ಶವವಾಗಿ ಪತ್ತೆಯಾಗಿದ್ದಾರೆ. ನಮ್ಮ ಸಾವಿಗೆ ನಾವೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಜೋಡಿ ಆತ್ಮಹತ್ಯೆ ಮಾಡಿಕೊಂಡಿದೆ.

ಮದುವೆಯಾಗಿದ್ದ ಶ್ರೀಕಾಂತ್!

ಶ್ರೀಕಾಂತ್ ಗೆ ಬೇರೊಬ್ಬರ ಜೊತೆಗೆ ವಿವಾಹವಾಗಿದೆ. ಆದರೂ ಅಂಜನಾಳನ್ನ ಪ್ರೀತಿ ಮಾಡ್ತಿದ್ದ. ಇಬ್ಬರು ಒಟ್ಟಿಗೆ ಬದುಕಲು ಅವಕಾಶ ಇಲ್ಲ ಎಂದು ಸಾಯೋ ನಿರ್ಧಾರ ಮಾಡಿದ್ದಾರೆ. ಮೊದಲು ಶ್ರೀಕಾಂತ್ ಮೃತದೇಹ ಕೆರೆಯಲ್ಲಿ ಕಾಣಿಸಿದೆ. ಆತನನ್ನ ಮೇಲೆತ್ತಿದ್ದ ನಂತರ ಅಂಜನಾ ಮೃತದೇಹ ಕೂಡ ಮೇಲೆ ಬಂದಿದೆ. ಅಂಜನಾ ಮೃತದೇಹದ ಬಗ್ಗೆ ಪೊಲೀಸರಿಗೂ ಮಾಹಿತಿ ಇರುದಿಲ್ಲ. ಇಬ್ಬರು ಕೈಗೆ ಹಗ್ಗ ಕಟ್ಟಿಕೊಂಡಿದ್ದರಿಂದ ಇಬ್ಬರ ಮೃತದೇಹ ಒಟ್ಟಿಗೆ ಸಿಕ್ಕಿದೆ. ಮೊಬೈಲ್ ನಲ್ಲಿ ವೀಡಿಯೊ ಮಾಡಿರುವ ಯುವತಿ ಅಂಜನಾ ಅದನ್ನ ಆಟೋದಲ್ಲಿ ಬಿಟ್ಟು ಶ್ರೀಕಾಂತ್ ಜೊತೆಗೆ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಮ್ಮ ಸಾವಿಗೆ ಯಾರು ಕಾರಣ ಅಲ್ಲ. ನಾವಿಬ್ಬರು ಒಟ್ಟಿಗೆ ಬದುಕಲು ಆಗಲ್ಲ. ಹಾಗಾಗಿ ಸಾಯ್ತಿದ್ದೇವೆ ಎಂದು ವಿಡಿಯೋ ಮಾಡಿದ್ದಾಳೆ. ಮೊಬೈಲ್ ವಶಕ್ಕೆ ಪಡೆದುಕೊಂಡಿರೊ ತಲಘಟ್ಟಪುರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 Share: | | | | |


ಕೊಡಗು: ಕರ್ನಾಟಕದ 32 ಮೀ. ಉದ್ದದ ಗಾಜಿನ ಸೇತುವೆ ಉದ್ಘಾಟನೆ: ದ.ಭಾರತದ 2ನೇ ಸ್ಕಯ್ ವಾಕ್ ಬ್ರಿಡ್ಜ್

Posted by Vidyamaana on 2023-06-13 02:18:12 |

Share: | | | | |


ಕೊಡಗು: ಕರ್ನಾಟಕದ 32 ಮೀ. ಉದ್ದದ ಗಾಜಿನ ಸೇತುವೆ ಉದ್ಘಾಟನೆ: ದ.ಭಾರತದ 2ನೇ ಸ್ಕಯ್ ವಾಕ್ ಬ್ರಿಡ್ಜ್

ಮಡಿಕೇರಿ ಜೂ.12 : ಮಡಿಕೇರಿ ಹೊರವಲಯದ ಉಡೋತ್ ಮೊಟ್ಟೆಯ ಪಪ್ಪೀಸ್ ಪ್ಲಾಂಟೇಷನ್‌ನಲ್ಲಿ ಸುಮಾರು 32 ಮೀಟರ್ ಉದ್ದದ 2 ಮೀಟರ್ ಅಗಲದ 78 ಅಡಿ ಎತ್ತರದಲ್ಲಿರುವ ಗ್ಲಾಸ್ ಸ್ಕೈ ವಾಕ್ ಬ್ರಿಡ್ಜ್ ಪ್ರವಾಸಿಗರ ಗಮನ ಸೆಳೆಯುತ್ತಿದೆ.

ಸುಮಾರು 5 ಟನ್ ಬಾರ ಹೊರುವ ಸಾಮರ್ಥ್ಯದ ಈ ಸೇತುವೆಯಲ್ಲಿ ಒಮ್ಮೆಗೆ 40-50 ಮಂದಿ ನಿಂತು ಪ್ರಕೃತಿಯ ಸೌಂದರ್ಯ ಸವಿಯಬಹುದು. ಇದು ಕರ್ನಾಟಕದ ಮೊದಲ ಉದ್ದದ ಗ್ಲಾಸ್ ಸೇತುವೆಯಾಗಿದ್ದು, ವಿರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಸಿಎಂ ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.

ನಂತರ ಮಾತನಾಡಿದ ಪೊನ್ನಣ್ಣ, ಕೊಡಗು ಪ್ರಕೃತಿ ದತ್ತವಾದ ನಿಸರ್ಗಕ್ಕೆ ಧಕ್ಕೆಯಾಗದ ವಿಚಾರವನ್ನು ಹೊರತುಪಡಿಸಿ ಅಭಿವೃದ್ಧಿ ಪಡಿಸಬೇಕು ಎಂದರು.

ಈ ಅಪರೂಪದ ಯೋಜನೆಯಿಂದ ಜಿಲ್ಲೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗಲಿದೆ. ಜೊತೆಗೆ ಅವಲಂಬಿತರಿಗೆ ಉದ್ಯೋಗವಕಾಶ ದೊರೆಯಲಿದೆ ಎಂದು ತಿಳಿಸಿದರು.

ಕಾರ್ಯಕ್ರಮ ನಿರೂಪಿಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ತೆನ್ನಿರಾ ಮೈನಾ, ಭಾರತದ ಸ್ಟ್ರಾಟ್ ಲ್ಯಾಂಡ್ ದಕ್ಷಿಣದ ಕಾಶ್ಮೀರ ಎಂದು ಕರೆಸಿಕೊಂಡಿರುವ ಕೊಡಗು ಜಿಲ್ಲೆಯಲ್ಲಿ ಇಂತಹ ಒಂದು ಅದ್ಭುತ ಯೋಜನೆ ಸ್ಥಾಪಿತವಾಗಿರುವುದು ಪ್ರವಾಸೋದ್ಯಮಕ್ಕೆ ಅಶೋದಯಕ ಬೆಳವಣಿಗೆ ಎಂದು ತಿಳಿಸಿದರು.ಟಿಕೆಟ್ ಕೌಂಟರನ್ನು ಮಡಿಕೇರಿ ನಗರಸಭೆ ಮಾಜಿ ಅಧ್ಯಕ್ಷ ಹೆಚ್.ಎಂ.ನಂದಕುಮಾರ್, ಪ್ಲೆಂಟೇಷನ್‌ನ ವಾಕ್ ಪಾಟ್‌ಅನ್ನು ಕೇಕಡ ಗಣಪತಿ ಹಾಗೂ ದೇವಯ್ಯ ಉದ್ಘಾಟಿಸಿದರು. ಫೋಟೋ ಪಾಯಿಂಟನ್ನು ಉದ್ಯಾಮಿ ಗ್ರೀನ್ ಲ್ಯಾಂಡ್ ಶರಿನ್ ಉದ್ಘಾಟಿಸಿದರು.

ಈ ಸಂದರ್ಭ ಓಂಕಾರೇಶ್ವರ ದೇವಾಲಯದ ಮಾಜಿ ಅಧ್ಯಕ್ಷ ಪುಲಿಯಂಡ ಜಗದೀಶ್, ತುಳುವೆರ ಒಕ್ಕೂಟದ ಜಿಲ್ಲಾ ಖಜಾಂಚಿ ಪ್ರಭುರೈ, ಬೆಟ್ಟಗೇರಿ ಗ್ರಾ.ಪಂ ಸದಸ್ಯ ಗೋಪಾಲ, ಪ್ರಮುಖರಾದ ಮುಂಜಂದಿರ ಚಿಕ್ಕು ಕಾರ್ಯಪ್ಪ, ಅಜ್ಜಿಕುಟೀರ ನರೇನ್ ಕಾರ್ಯಪ್ಪ, ಮಿದೇರಿರ ನವೀನ್ ಹಾಜರಿದ್ದರು.

ಬಂಟ್ವಾಳ ಜಮೀಯ್ಯತುಲ್ ಫಲಾಹ್ ರೋಟರಿ ಕ್ಲಬ್ ನಿಂದ ಮೆಹ್ ಫಿಲೇ ಈದ್

Posted by Vidyamaana on 2024-05-15 19:42:42 |

Share: | | | | |


ಬಂಟ್ವಾಳ ಜಮೀಯ್ಯತುಲ್ ಫಲಾಹ್ ರೋಟರಿ ಕ್ಲಬ್ ನಿಂದ ಮೆಹ್ ಫಿಲೇ ಈದ್

ಬಂಟ್ವಾಳ ; ಜಮೀಯ್ಯತುಲ್ ಫಲಾಹ್ ಬಂಟ್ವಾಳ ತಾಲೂಕು ಘಟಕ, ರೋಟರಿ ಕ್ಲಬ್ ಬಂಟ್ವಾಳ, ಉಪ್ಪಿನಂಗಡಿ, ಬಂಟ್ವಾಳ ಟೌನ್ ಹಾಗೂ ವಿಟ್ಲ ಘಟಕದ ಸಹಯೋಗದಲ್ಲಿ ಮೆಹ್ ಫಿಲೇ ಈದ್ ಕಾರ್ಯಕ್ರಮವು ಮೇ 17 ಶುಕ್ರವಾರ ಸಂಜೆ 5.30ಕ್ಕೆ ಮಾಣಿ ಸಮೀಪದ ನೇರಳಕಟ್ಟೆ ಜನಪ್ರಿಯ ಗಾರ್ಡನ್ಸ್ ನಲ್ಲಿ ನಡೆಯಲಿದೆ.

   ಎನ್ನಾರೈ ಉದ್ಯಮಿ, ಸಂಘಟಕ ಝಕರಿಯಾ ಜೋಕಟ್ಟೆ ಅಲ್ ಮುಝೈನ್, ಶಿಕ್ಷಣ ಹರಿಕಾರ, ಸಾಂಸ್ಕೃತಿಕ ಸಂಘಟಕ ಡಾ. ಎಂ. ಮೋಹನ್ ಆಳ್ವ, ಮಂಗಳೂರು ಉದ್ಯಮಿ, ಸೇವಾಕರ್ತೃ ರೋಹನ್ ಮೊಂತೇರೋ ಅವರಿಗೆ ಈದ್ ಅವಾರ್ಡ್ ನೀಡಿ ಗೌರವಿಸಲಾಗುವುದು.

ಬೆಳ್ತಂಗಡಿ : ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಪ್ರಕರಣ

Posted by Vidyamaana on 2023-06-14 10:03:17 |

Share: | | | | |


ಬೆಳ್ತಂಗಡಿ : ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಪ್ರಕರಣ

ಬೆಳ್ತಂಗಡಿ: ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿದ ಪ್ರಕರಣದ ಆರೋಪಿಗಳ ಮಂಗಳೂರು ಜಿಲ್ಲಾ ಕೋರ್ಟ್ ನಲ್ಲಿ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ ರಂಜಿತ್ ಮದ್ದಡ್ಕ(30) ಮತ್ತು ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಯಾಗಿರುವ ಉಮೇಶ್ ಕುಲಾಲ್(35) ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ಮಂಗಳೂರು ಜಿಲ್ಲಾ ನ್ಯಾಯಾಲಯದ ಮುಂದೆ ಜೂನ್ 13 ರಂದು ಹಾಜರುಪಡಿಸಿದ್ದು ನ್ಯಾಯಾಲಯವು ಆರೋಪಿಗಳಿಬ್ಬರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದು. ಇಬ್ಬರು ಆರೋಪಿಗಳನ್ನು ಮಂಗಳೂರು ಸಬ್ ಜೈಲಿಗೆ ಕಳುಹಿಸಲಾಗಿದೆ.ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಬೆಳ್ತಂಗಡಿ ಕಸಬಾ ಗ್ರಾಮದ ರೆಂಕೆದಗುತ್ತು ಕೆಂಬರ್ಜೆಯ ಶೇಖರ ನಾಯ್ಕ ಎಂಬವರ ಪುತ್ರ ಯಶವಂತ ನಾಯ್ಕ (19ವ)ರವರು ನೀಡಿದ ದೂರಿನಂತೆ ಬೆಳ್ತಂಗಡಿ ಮಂಡಲ ಬಿಜೆಪಿ

ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಉಮೇಶ್ ಕುಲಾಲ್, ರಂಜಿತ್ ಮದಡ್ಕ ಮತ್ತಿತರರ ವಿರುದ್ಧ ಮೇ.29 ರಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 504, 506, 323 ಜೊತೆಗೆ 34 ಐಪಿಸಿ ಮತ್ತು ಕಲಂ 3(1)(S) ಎಸ್.ಸಿ/ ಎಸ್.ಟಿ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಪ್ರಾದೇಶಿಕ ಸಾರಿಗೆ ಇಲಾಖೆ, ಪುತ್ತೂರುನಲ್ಲಿ 35ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

Posted by Vidyamaana on 2024-01-23 07:40:41 |

Share: | | | | |


ಪ್ರಾದೇಶಿಕ ಸಾರಿಗೆ ಇಲಾಖೆ, ಪುತ್ತೂರುನಲ್ಲಿ 35ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆ

ಪುತ್ತೂರು.ವಾಹನ ಚಾಲನೆಯ ಸಮಯದಲ್ಲಿ ತಂದೆ ತಾಯಿಯಂದಿರೇ ಪ್ರಮುಖವಾಗಿ ನಿಯಮ ಪಾಲಿಸಬೇಕು. ತಂದೆ-ತಾಯಿ ನಿಯಮ ಉಲ್ಲಂಘಿಸಿದರ ಮಕ್ಕಳು ಅದನ್ನೇ ಪಾಲಿಸುತ್ತಾರೆ. ಹೀಗಾಗಿ ಪ್ರತಿಯೊಬ್ಬರ ತಂದೆ-ತಾಯಿ ಸಂಚಾರಿ ನಿಯಮ ಪಾಲಿಸುವ ಮೂಲಕ ಮಕ್ಕಳಲ್ಲಿ ನಿಯಮ ಪಾಲನೆಯ ಜಾಗೃತಿ ಮೂಡಿಸಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಎನ್‌. ವಿಶ್ವನಾಥ ನಾಯ್ಕ ಹೇಳಿದರು.ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಮತ್ತು ಪೊಲೀಸ್‌ ಇಲಾಖೆ ಪುತ್ತೂರು ಉಪ ವಿಭಾಗ ಇದರ ಜಂಟಿ ಆಶ್ರಯದಲ್ಲಿ ಜ.20ರಂದು ಬನ್ನೂರು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 35ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಮಾಸಾಚರಣೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಚಾಲನ ವೃತ್ತಿಯೂ ಒಂದು ಕಲೆ. ಅದರ ಪ್ರಾವಿಣ್ಯತೆ ಎಲ್ಲರಿಗೂ ಬರುವುದಿಲ್ಲ. ವಾಹನ ಚಾಲನೆಯ ಸಮಯದಲ್ಲಿ ಎಲ್ಲರ ಜೀವ ಚಾಲಕರಲ್ಲಿದ್ದು ತಪ್ಪು ನಿರ್ಧಾರ ಕೈಗೊಳ್ಳಬಾರದು. ಚಾಲನೆಯ ಜೊತೆಗೆ ಸಂಚಾರಿ ನಿಯಮ ಪಾಲಿಸುವುದು ಮುಖ್ಯ ಪ್ರತಿಯೊಬ್ಬ ಚಾಲಕರೂ ತಮ್ಮ ಜವಾಬ್ದಾರಿ ಅರಿತು ಸಂಚಾರಿ ನಿಯಮ ಪಾಲಿಸಬೇಕು. ವಾಹನ ನಿಮ್ಮದಾಗಿರಬಹುದು.ಆದರೆ ರಸ್ತೆ ಎಲ್ಲರಿಗೂ ಸೇರಿದ್ದು ಪಾದಚಾರಿಗಳ ಜೀವಕ್ಕೂ ಬೆಲೆಯಿದೆ. ಕುರುಡರ ಬಗ್ಗೆಯೂ ಜಾಗರೂಕರಾಗಿರಬೇಕು. ಚಾಲನ ವೃತ್ತಿಯಲ್ಲಿ ಕಲಿಯಲು ಸಾಕಷ್ಟಿದೆ. ಕಾನೂನು ಉಲ್ಲಂಘಿಸಿದರೆ ಶಿಕ್ಷೆಯೂ ಇದ್ದು ನಿಯಮ ಉಲ್ಲಂಘಿಸುವ ಚಾಲಕರ ವಿರುದ್ದು ದೂರು ದಾಖಲಾದರೆ ಕನಿಷ್ಠ ಆರು ತಿಂಗಳ ಕಾಲ ಚಾಲನ ಪರವಾನಿಗೆಯನ್ನು ಅಮಾನತು ಮಾಡುವಂತೆ 2019ರಲ್ಲಿ ಸುಪ್ರಿಂ ಕೋಟ್ ಆದೇಶಿಸಿದೆ ಎಂದರು.


ಮುಖ್ಯ ಅತಿಥಿಯಾಗಿದ್ದ ನಗರ ಠಾಣಾ ನಿರೀಕ್ಷಕ ಸುನಿಲ್ ಕುಮಾ‌ರ್ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು ಅಧಿಕವಾಗುತ್ತಿದೆ. ನಿರ್ಲಕ್ಷತನ, ಅತೀ ವೇಗ, ದುಡುಕಿನ ನಿರ್ಧಾರಗಳೇ ಅಪಘಾತಗಳಿಗೆ ಕಾರಣವಾಗುತ್ತಿದೆ. ವಾಹನ ಚಾಲನೆಯ ಸಮಯದಲ್ಲಿ ಪ್ರತಿಯೊಬ್ಬರೂ ಜವಾಬ್ದಾರಿಯುತವಾಗಿ ನಡೆದುಕೊಳ್ಳುವುದು ಮುಖ್ಯ ಸಂಚಾರಿ ನಿಯಮ ಪಾಲಿಸಿಕೊಂಡು ನಮ್ಮ ಜೀವದ ಜೊತೆಗೆ ಇನ್ನೊಬ್ಬರ ಜೀವ ಉಳಿಸುವ ಮೂಲಕ ಪ್ರತಿಯೊಬ್ಬರೂ ರಸ್ತೆ ಸುರಕ್ಷತಾ ನಾಯಕರಾಗಬೇಕು ಎಂದರು.


ಹಿರಿಯ ಮೋಟಾರು ವಾಹನ ನಿರೀಕ್ಷಕ ಆಫ್ಘಾನ್ ಬಿ.ಎಸ್‌.ಮಾತನಾಡಿ, ಪ್ರತಿವರ್ಷ ರಸ್ತೆ ಸುರಕ್ಷತಾ ಸಪ್ತಾಹ ನಡೆಯುತ್ತಿದ್ದು ಈ ವರ್ಷ ಕೇಂದ್ರ ಸರಕಾರದ ಆದೇಶದಂತೆ ಮಾಸಾಚರಣೆ ನಡೆಸಲಾಗುತ್ತಿದೆ ಶೇ.75ರಷ್ಟು ಮಂದಿ ಸಮಚಾರಿ ನಿಯಮಗಳನ್ನು ಪಾಲಿಸುತ್ತಿಲ್ಲ. ಸಂಚಾರಿ ನಿಯಮ ಪಾಲನೆ ಕೆಲಸವಲ್ಲ. ಅದು ಜವಾಬ್ದಾರಿ. ಪ್ರತಿಯೊಬ್ಬರೂ ಸಂಚಾರಿ ನಿಯಮ ಪಾಲಿಸಬೇಕು ಎಂದರು.

ಕೈಪಿಡಿ ಬಿಡುಗಡೆ:

ಸಂಚಾರಿ ನಿಯಮಗಳನ್ನು ಒಳಗೊಂಡ ಕೈಪಿಡಿಯನ್ನು ಕಾರ್ಯಕ್ರಮದಲ್ಲಿ ನಗರ ಠಾಣಾ ನಿರೀಕ್ಷಕ ಸುನೀಲ್ ಕುಮಾ‌ರ್ ಬಿಡುಗಡೆಗೊಳಿಸಿದರು.ಶ್ವೇತಾ ಪ್ರಾರ್ಥಿಸಿದರು. ಕಚೇರಿ ಅಧೀಕ್ಷಕ ದೀಪಕ್ ಕುಮಾರ್ ಸ್ವಾಗತಿಸಿದರು. ಅಧೀಕ್ಷಕರಾದ ಪುರುಷೋತ್ತಮ ಕಾರ್ಯಕ್ರಮ ನಿರೂಪಿಸಿ, ಆಸ್ಕರ್ ಸಂತೋಷ್ ವಂದಿಸಿದರು.

ಬೈಡಲ್ ಮೇಕಪ್ ಸ್ಪರ್ಧೆಯಲ್ಲಿ ಪ್ರತಿಭಾ ದಯಾ ಕುಕ್ಕಾಜೆಗೆ ಪ್ರಶಸ್ತಿ

Posted by Vidyamaana on 2023-02-15 11:58:07 |

Share: | | | | |


ಬೈಡಲ್ ಮೇಕಪ್ ಸ್ಪರ್ಧೆಯಲ್ಲಿ ಪ್ರತಿಭಾ ದಯಾ ಕುಕ್ಕಾಜೆಗೆ ಪ್ರಶಸ್ತಿ

ಪುತ್ತೂರು: ಅಖಿಲ ಭಾರತ ಹೇರ್ & ಬ್ಯೂಟಿ ಅಸೋಸಿಯೇಷನ್ ಮಂಗಳೂರು, ಆರ್‌ಸಿಒ ಪ್ರೊಫೆಷನಲ್, ಒಲಿವಿಯಾ ಮತ್ತು ಸಿವಿ ಪ್ರೊಫೆಷನಲ್‌ಗಳ ಸಹಯೋಗದಲ್ಲಿ ಏರ್ಪಡಿಸಲಾಗಿದ್ದ ಬ್ರೆಡಲ್ ಮೇಕಪ್ ಸ್ಪರ್ಧೆಯಲ್ಲಿ ಪ್ರತಿಭಾ ದಯಾ ಕುಕ್ಕಾಜೆ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂಗಳೂರಿನ ಬೆಂದೂರ್ ವೆಲ್ ನಲ್ಲಿರುವ ಮಾಯಾ ಇಂಟರ್‌ನ್ಯಾಶನಲ್ ಹೋಟೆಲ್‌ನಲ್ಲಿ ನಡೆದ ಈ ಸ್ಪರ್ಧೆಯಲ್ಲಿ ಮಂಗಳೂರು, ಕಾಸರಗೋಡು, ಉಡುಪಿ, ಮಡಿಕೇರಿ, ಕಾರವಾರದಿಂದ 45ಕ್ಕೂ ಹೆಚ್ಚು ಮೇಕಪ್ ಕಲಾವಿದರು ಭಾಗವಹಿಸಿದ್ದರು. ಸ್ಪರ್ಧೆಯ ಪೈಕಿ ಬೆಸ್ಟ್ ಓವರ್ ಆಲ್ ಲುಕ್ ಪ್ರಶಸ್ತಿಯನ್ನು ದಿ ಬ್ಯೂಟಿ ಬ್ಲಾಗ್ ಮಾಲಕಿ ಪ್ರತಿಭಾ ದಯಾ ಕುಕ್ಕಾಜೆಯವರು ತಮ್ಮದಾಗಿಸಿಕೊಂಡರು. ಪ್ರತಿಭಾ ಅವರು ಈ ಹಿಂದೆ 2019ರ ಬೈಡಲ್ ಕಾಂಪಿಟೇಶನ್ ನಲ್ಲಿ ವಿನ್ನರ್ ಆಗಿ ಹೊರ ಹೊಮ್ಮಿದ್ದರು. 2021ರ ಶ್ರೀ ಶಾರದಾ ಮಾತಾ ಫೊಟೋ ಕಂಟೆಸ್ಟ್ ಸ್ಪರ್ಧೆಯಲ್ಲಿ ಪ್ರತಿಭಾ ಅವರ ಶ್ರೀ ಶಾರದೆಯ ಮೇಕಪ್ ಗೆ ಬೆಸ್ಟ್ ಮೇಕಪ್ ಆರ್ಟಿಸ್ಟ್ ಬಹುಮಾನ ಒಲಿದಿತ್ತು. ಸೌಂದರ್ಯ ಲೋಕದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಪ್ರತಿಭಾರವರು ಮಾಣಿಲ ಕುಕ್ಕಾಜೆ ನಿವಾಸಿಯಾಗಿರುವ ಖ್ಯಾತ ಫೊಟೋ ಜರ್ನಲಿಸ್ಟ್, ಡೈಜಿವರ್ಲ್ಡ್ ವಾಹಿನಿಯ ಛಾಯಾಗ್ರಾಹಕ ದಯಾ ಕುಕ್ಕಾಜೆಯವರ ಪತ್ನಿ.

ಮಂಗಳೂರು: ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ ಇಬ್ಬರು ರಿಕ್ಷಾ ಚಾಲಕರು ಮೃತ್ಯು

Posted by Vidyamaana on 2024-06-27 09:54:47 |

Share: | | | | |


ಮಂಗಳೂರು: ವಿದ್ಯುತ್ ತಂತಿ ಕಡಿದು ಬಿದ್ದು ಉಪ್ಪಿನಂಗಡಿ ನಿವಾಸಿ ದೇವರಾಜ್ ಗೌಡ ಸಹಿತ  ಇಬ್ಬರು ರಿಕ್ಷಾ ಚಾಲಕರು ಮೃತ್ಯು

ಮಂಗಳೂರು, ಜೂ 27 ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ನಡೆದಿದೆ.



Leave a Comment: