ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಸುದ್ದಿಗಳು News

Posted by vidyamaana on 2024-07-24 10:52:54 |

Share: | | | | |


ಅಪ್ರಾಪ್ತಗೆ ಲೈಂಗಿಕ ಕಿರುಕುಳ ಆರೋಪ. ಬೆಳಿಯೂರುಕಟ್ಟೆ ನಿವಾಸಿ ಪ್ರಸಾದ್ ಬಂಧನ

ಪುತ್ತೂರು : ಅಪ್ರಾಪ್ತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಬೆಳಿಯೂರುಕಟ್ಟೆ ನಿವಾಸಿಯೋರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದು ಬಂದಿದೆ.

ಬೆಳಿಯೂರುಕಟ್ಟೆ ನಿವಾಸಿ ಅಪ್ರಾಪ್ತೆಗೆ ವಿವಾಹಿತ ಪ್ರಸಾದ್ ಎಂಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿದು ಬಂದಿದೆ.

 Share: | | | | |


ನಿಡ್ಪಳ್ಳಿ ಗ್ರಾಪಂ ಉಪಚುನಾವಣೆಯ ಫಲಿತಾಂಶ ಪ್ರಕಟ

Posted by Vidyamaana on 2023-07-26 04:57:12 |

Share: | | | | |


ನಿಡ್ಪಳ್ಳಿ ಗ್ರಾಪಂ ಉಪಚುನಾವಣೆಯ ಫಲಿತಾಂಶ ಪ್ರಕಟ

ಪುತ್ತೂರು: ನಿಡ್ಪಳ್ಳಿ 1ನೇ ವಾರ್ಡಿನ ಉಪಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಎನ್. ಸತೀಶ್ ಶೆಟ್ಟಿ ಬಾಕಿತ್ತಿಮಾರ್ ಗ್ರಾ.ಪಂ. ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರ ಎರಡನೇ ಸ್ಥಾನ ಪಡೆದುಕೊಂಡಿದ್ದು, ಬಿಜೆಪಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಂಡಿದೆ.

ನಿಡ್ಪಳ್ಳಿಯ ವಾರ್ಡ್ 1ರಲ್ಲಿ ಒಟ್ಟು 607 ಮತದಾರರಿದ್ದು, ಒಟ್ಟು 529 ಮತ ಚಲಾವಣೆಯಾಗಿದೆ. ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಯಾಗಿ ಎನ್. ಸತೀಶ್ ಶೆಟ್ಟಿ ಬಾಕಿತ್ತಿಮಾರ್ ಜಯ ಗಳಿಸಿದ್ದರೆ, ಪುತ್ತಿಲ ಪರಿವಾರ ಬೆಂಬಲಿತ ಅಭ್ಯರ್ಥಿಯಾಗಿ ಜಗನ್ನಾಥ ರೈ ಕೊಳಂಬೆತ್ತಿಮಾರ್ ಎರಡನೇ ಸ್ಥಾನ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿ ಎಂ. ಚಂದ್ರಶೇಖರ್ ಪ್ರಭು ಗೋಳಿತ್ತಡಿ ಮೂರನೇ ಸ್ಥಾನ ಪಡೆದುಕೊಂಡಿದ್ದಾರೆ.

ನಿಡ್ಪಳ್ಳಿ ಗ್ರಾಪಂನ ಚುನಾವಣಾಧಿಕಾರಿಯಾಗಿದ್ದ ತಾ.ಪಂ. ಯೋಜನಾಧಿಕಾರಿ ಸುಕನ್ಯಾ, ಸಹಾಯಕ ಚುನಾವಣಾಧಿಕಾರಿಯಾಗಿದ್ದ ಪಿಡಿಓ ಸಂಧ್ಯಾಲಕ್ಷ್ಮೀ ನೇತೃತ್ವದಲ್ಲಿ ಮತ ಎಣಿಕೆ ಕಾರ್ಯ ನಡೆಯಿತು.

ಪುತ್ತೂರು ಶಾಸಕರ ಇಂದಿನ ಕಾರ್ಯಕ್ರಮ ಜುಲೈ 13

Posted by Vidyamaana on 2024-07-13 06:36:02 |

Share: | | | | |


ಪುತ್ತೂರು ಶಾಸಕರ ಇಂದಿನ ಕಾರ್ಯಕ್ರಮ ಜುಲೈ 13

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಜುಲೈ 13 ರಂದು 

ಬೆಳಿಗ್ಗೆ 10 ಗಂಟೆಗೆ ಮಿನಿ ವಿಧಾನ ಸೌಧ‌ ಮುಂಭಾಗದ‌ ಅಮರಜವಾನ್‌ ಬಳಿ ಕಾಂಗ್ರೆಸ್ ಪಕ್ಷದ ಪ್ರತಿಭಟನಾ ಸಭೆ

10.30 ಕ್ಕೆ ಕೊಟೆಚಾ ಸಭಾಂಹಣದಲ್ಲಿ ಎಲ್ ಎಚ್ ಮಂಜುನಾಥ್ ಅಭಿನಂದನಾ ಕಾರ್ಯಕ್ರಮ

ಮತ ಚಲಾಯಿಸಲು ಮರೆಯದಿರಿ. ಇದು ನಿಮ್ಮ ಹಕ್ಕು!

Posted by Vidyamaana on 2023-05-09 15:03:41 |

Share: | | | | |


ಮತ ಚಲಾಯಿಸಲು ಮರೆಯದಿರಿ. ಇದು ನಿಮ್ಮ ಹಕ್ಕು!

ಪುತ್ತೂರು: ಚುನಾವಣೆಯ ಹೊಸ್ತಿಲಲ್ಲಿ ನಿಂತು, ಸ್ವಾತಂತ್ರ್ಯ ಪೂರ್ವದ ಭಾರತವನ್ನೊಮ್ಮೆ ಮನಸ್ಸಿನಲ್ಲಿ ಕಲ್ಪಿಸಿಕೊಳ್ಳಿ. ನಿಮ್ಮ ಮನಸ್ಸಿನಲ್ಲಿ ಆಗಿನ ಚಿತ್ರಣ ಮೂಡಿದ್ದೇ ಆದರೆ, ಚುನಾವಣೆಯಲ್ಲಿ ಮತ ಚಲಾಯಿಸದಿರಲು ಸಾಧ್ಯವೇ ಇಲ್ಲ.

ಹೌದು, ಚುನಾವಣೆಯ ಮಹತ್ವವೇ ಅಂತದ್ದು. ಪ್ರತಿಯೋರ್ವನ ಅಭಿಪ್ರಾಯವನ್ನು ಸಂಗ್ರಹಿಸಿ, ನಮ್ಮ ನಾಯಕನ ಆಯ್ಕೆ ನಡೆಯುತ್ತದೆ. ಮುಂದಿನ 5 ವರ್ಷ ಆತನೇ ನಮ್ಮ ನೇತಾರ. ಹಾಗಿರುವಾಗ, ನಮ್ಮ ನಾಯಕನ ಬಗ್ಗೆ ನಮಗಿರುವ ಅಭಿಪ್ರಾಯವನ್ನು ನಾವು ಚಲಾಯಿಸಲೇ ಬೇಕು ತಾನೇ? 

     ಹೌದಾದರೆ, ಮರೆಯದಿರಿ ಮೇ 10ರಂದು ಬೆಳಿಗ್ಗೆಯಿಂದ ಸಂಜೆವರೆಗೆ ಮತಗಟ್ಟೆ ನಿಮಗಾಗಿ ಕಾಯುತ್ತಿದೆ. ಅಧಿಕಾರಿಗಳು, ಜನಪ್ರತಿನಿಧಿಗಳು ಮತದಾರ ಪ್ರಭುವಿನ ಆಗಮನಕ್ಕಾಗಿಯೇ ತವಕಿಸುತ್ತಿರುತ್ತಾರೆ. ಮತದಾರ ಪ್ರಭು ತಾನು ರಾಜ ಎನ್ನುವುದನ್ನು ಸಾಬೀತು ಪಡಿಸಬೇಕು. ಯಾವುದೇ ಆಮಿಷ, ಒತ್ತಡಕ್ಕೆ ಒಳಗಾಗದೇ ತನ್ನ ಅಭಿಪ್ರಾಯವನ್ನು ನಿರ್ಭೀತಿಯಿಂದ ಚಲಾಯಿಸಬೇಕು. ಇದು ಸಂವಿಧಾನ ನಮಗೆ ನೀಡಿರುವ ಹಕ್ಕು ಎನ್ನುವುದನ್ನು ಮರೆಯದಿರಿ.

ಮತ ಚಲಾಯಿಸಲು ಮರೆತಿರೋ, ಸಂವಿಧಾನಕ್ಕೆ ಎಸಗಿದ ಅಪಚಾರ ಎನ್ನುವುದನ್ನು ಭಾರತದ ನಾಗರಿಕರು ತಿಳಿದುಕೊಳ್ಳಬೇಕು.

ಡಿಲೀಟ್ ಆದ ಕಾಂಟೆಕ್ಟ್ ಮರಳಿ ಪಡೆಯುವುದು ಹೇಗೆ?: ಇಲ್ಲಿದೆ ಮೂರು ಸಿಂಪಲ್ ಟ್ರಿಕ್

Posted by Vidyamaana on 2024-01-25 15:32:59 |

Share: | | | | |


ಡಿಲೀಟ್ ಆದ ಕಾಂಟೆಕ್ಟ್ ಮರಳಿ ಪಡೆಯುವುದು ಹೇಗೆ?: ಇಲ್ಲಿದೆ ಮೂರು ಸಿಂಪಲ್ ಟ್ರಿಕ್

ಹಲವು ತಂತ್ರಗಳನ್ನು ಬಳಸಿ ಡಿಲೀಟ್ ಆದ ಕಾಂಟೆಕ್ಟ್ ಸಂಖ್ಯೆಯನ್ನು ಮರಳಿ ಪಡೆಯಬಹುದು. ಎಲ್ಲಾ ಕಾಂಟೆಕ್ಟ್ ನಂಬರ್ ಗೂಗಲ್ ಅಕೌಂಟ್​ನಲ್ಲಿ ಲಭ್ಯವಿರುತ್ತವೆ. ನೀವು ಗೂಗಲ್ ಖಾತೆಯ ಮೂಲಕ ಡಿಲೀಟ್ ಆದ ಕಾಂಟೆಕ್ಟ್ ನಂಬರ್ ಅನ್ನು ಮರಳಿ ಪಡೆಯಬಹುದು. ನಾವು ನಮ್ಮ ಸ್ನೇಹಿತರ, ಕುಟುಂಬದವರ ಮೊಬೈಲ್ ಸಂಖ್ಯೆಗಳನ್ನು (Mobile Number) ನೆನಪಿಟ್ಟುಕೊಳ್ಳುವ ಕಾಲವೊಂದಿತ್ತು.ಆದರೆ, ಮೊಬೈಲ್ ತಂತ್ರಜ್ಞಾನವು ಮುಂದುವರೆದ ನಂತರ, ನಾವು ಮೊಬೈಲ್ ಸಂಖ್ಯೆಯನ್ನು ನೆನಪಿಟ್ಟುಕೊಳ್ಳುವುದನ್ನು ಮರೆತುಬಿಟ್ಟಿದ್ದೇವೆ. ಈಗ ಜನರು ತಮ್ಮ ಫೋನ್‌ಗಳಲ್ಲಿ ಕಾಂಟೆಕ್ಟ್ ಅನ್ನು ಸೇವ್ ಮಾಡಿಟ್ಟುಕೊಳ್ಳುತ್ತಾರೆ. ಯಾರಿಗಾದರೂ ಕರೆ ಮಾಡಬೇಕು ಎಂದಿದ್ದರೆ, ಆ ನಂಬರ್ ಅನ್ನು ಡಯಲ್ ಮಾಡುವ ಬದಲು, ಕಾಂಟೆಕ್ಟ್ ಲಿಸ್ಟ್​ಗೆ ಹೋಗಿ ಕರೆ ಮಾಡಿದರೆ ಆಯಿತು. ಆದರೆ, ಇದ್ದಕ್ಕಿದ್ದಂತೆ ಎಲ್ಲಾ ಕಾಂಟೆಕ್ಟ್ ನಂಬರ್ ಡಿಲೀಟ್ ಆಗಿಬಿಟ್ಟರೆ ಏನು ಗತಿ?.


ಇದಕ್ಕೆ ಚಿಂತಿಸುವ ಅಗತ್ಯವಿಲ್ಲ. ಕೆಲವು ತಂತ್ರಗಳನ್ನು ಬಳಸಿ ಡಿಲೀಟ್ ಆದ ಕಾಂಟೆಕ್ಟ್ ಸಂಖ್ಯೆಯನ್ನು ಮರಳಿ ಪಡೆಯಬಹುದು. ಎಲ್ಲಾ ಕಾಂಟೆಕ್ಟ್ ನಂಬರ್ ಗೂಗಲ್ ಅಕೌಂಟ್​ನಲ್ಲಿ ಲಭ್ಯವಿರುತ್ತವೆ. ನೀವು ಗೂಗಲ್ ಖಾತೆಯ ಮೂಲಕ ಡಿಲೀಟ್ ಆದ ಕಾಂಟೆಕ್ಟ್ ನಂಬರ್ ಅನ್ನು ಮರಳಿ ಪಡೆಯಬಹುದು. ಇದಕ್ಕಾಗಿ ನೀವು ಈ ಹಂತಗಳನ್ನು ಅನುಸರಿಸಬೇಕು.


ನಿಮ್ಮ ಫೋನ್‌ನಲ್ಲಿ ಗೂಗಲ್ ಕಾಂಟೆಕ್ಟ್ ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿ.

ಫೋನ್ ನಂಬರ್ ಸೇವ್ ಮಾಡಲು Google ID ಯೊಂದಿಗೆ ಈ ಅಪ್ಲಿಕೇಶನ್‌ಗೆ ಲಾಗಿನ್ ಮಾಡಿ.

ಈಗ ಕೆಳಭಾಗದಲ್ಲಿರುವ ಫಿಕ್ಸ್ & ಮ್ಯಾನೇಜ್ ಐಕಾನ್ ಮೇಲೆ ಟ್ಯಾಪ್ ಮಾಡಿ.

ಈಗ ನೀವು ಕಾಂಟೆಕ್ಟ್ ನಂಬರ್ ಆಮದು ಮಾಡಲು, ರಫ್ತು ಮಾಡಲು ಮತ್ತು ಮರುಸ್ಥಾಪಿಸಲು ಆಯ್ಕೆಗಳನ್ನು ಪಡೆಯುತ್ತೀರಿ.

ಇಲ್ಲಿ ರಿ-ಸ್ಟೋರ್ ಆಯ್ಕೆಯನ್ನು ಟ್ಯಾಪ್ ಮಾಡಿ.

ಈಗ ಡಿಲೀಟ್ ಆದ ಎಲ್ಲಾ ಕಾಂಟೆಕ್ಟ್ ಫೋನ್‌ಗೆ ಹಿಂತಿರುಗುತ್ತವೆ.

ಫೋನ್ ಬ್ಯಾಕಪ್‌ನಿಂದ ಮೊಬೈಲ್ ನಂಬರ್ ಮರಳಿ ಪಡೆಯಿರಿ:


ನಿಮ್ಮ ಫೋನ್‌ನ ಬ್ಯಾಕಪ್ ನೀವು ಮಾಡಿದರೆ, ಡಿಲೀಟ್ ಆದ ಸಂಪರ್ಕ ಸಂಖ್ಯೆಗಳನ್ನು ಮರುಪಡೆಯಬಹುದು. ಇದಕ್ಕಾಗಿ ನೀವು ಈ ಹಂತಗಳನ್ನು ಅನುಸರಿಸಿ.

ನಿಮ್ಮ ಫೋನ್‌ನಲ್ಲಿ ಸೆಟ್ಟಿಂಗ್‌ಗಳನ್ನು ತೆರೆಯಿರಿ.

ಬ್ಯಾಕಪ್ ಮತ್ತು ರಿ-ಸ್ಟೋರ್ ಆಯ್ಕೆಗೆ ಹೋಗಿ.

ಇಲ್ಲಿ ರಿ-ಸ್ಟೋರ್ ಆಯ್ಕೆಯನ್ನು ಟ್ಯಾಪ್ ಮಾಡಿ.

ಕಾಂಟೆಕ್ಸ್ ಆಯ್ಕೆಯನ್ನು ಆರಿಸಿ.

ನಿಮ್ಮ ಡಿಲೀಟ್ ಆದ ಕಾಂಟೆಕ್ಟ್ ನಂಬರ್ ರಿ-ಸ್ಟೋರ್ ಮಾಡಲು ಬಯಸುತ್ತೀರಾ ಅಥವಾ ಬೇಡವೇ ಎಂದು ಕೇಳುವ ಸಂದೇಶವನ್ನು ನೀವು ನೋಡಬಹುದು. ನೀವು ಹೌದು ಎಂದು ಬಯಸಿದರೆ, ನಂತರ ರಿ-ಸ್ಟೋರ್ ಆಯ್ಕೆಯನ್ನು ಟ್ಯಾಪ್ ಮಾಡಿ.ಥರ್ಡ್ ಪಾರ್ಟಿ ಅಪ್ಲಿಕೇಷನ್:


ನೀವು ಗೂಗಲ್ ಖಾತೆ ಅಥವಾ ಫೋನ್ ಬ್ಯಾಕಪ್ ಹೊಂದಿಲ್ಲದಿದ್ದರೆ, ಥರ್ಡ್ ಪಾರ್ಟಿ ಅಪ್ಲಿಕೇಶನ್‌ಗಳನ್ನು ಬಳಸಬಹುದು. ಡಿಲೀಟ್ ಆದ ಕಾಂಟ್ಯಾಕ್ಟ್ ನಂಬರ್ ಗಳನ್ನೂ ಇವುಗಳ ಮೂಲಕ ಹಿಂಪಡೆಯಬಹುದು. ಫೋನ್ ಅನ್ನು ಸ್ಕ್ಯಾನ್ ಮಾಡುವ ಮೂಲಕ ಡಿಲೀಟ್ ಆದ ಕಾಂಟ್ಯಾಕ್ಟ್ ಸಂಖ್ಯೆಗಳನ್ನು ಕಂಡುಹಿಡಿಯುವ ಸೌಲಭ್ಯವನ್ನು ಈ ಅಪ್ಲಿಕೇಶನ್‌ಗಳು ಒದಗಿಸುತ್ತವೆ. ಥರ್ಡ್ ಪಾರ್ಟಿ ಅಪ್ಲಿಕೇಷನ್​ಗಳನ್ನು ಡೌನ್‌ಲೋಡ್ ಮಾಡುವಾಗ, ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇ ಸ್ಟೋರ್ ಮತ್ತು ಆಯಪಲ್ ಆಯಪ್ ಸ್ಟೋರ್‌ನಿಂದ ಮಾತ್ರ ಡೌನ್‌ಲೋಡ್ ಮಾಡಬೇಕು ಎಂಬುದನ್ನು ನೆನಪಿನಲ್ಲಿಡಿ. ಥರ್ಡ್ ಪಾರ್ಟಿ ಅಪ್ಲಿಕೇಷನ್ ಅಪಾಯಕಾರಿಯಾಗಿದೆ.

ದ.ಕ.ಜಿಲ್ಲೆಯಲ್ಲಿ ಮುಂದುವರಿದ ಮಳೆ: ಜು..16ರಂದೂ ಅಂಗನವಾಡಿ,ಶಾಲೆ,ಪ.ಪೂ. ಕಾಲೇಜುಗಳಿಗೆ ರಜೆ

Posted by Vidyamaana on 2024-07-15 22:06:20 |

Share: | | | | |


ದ.ಕ.ಜಿಲ್ಲೆಯಲ್ಲಿ ಮುಂದುವರಿದ ಮಳೆ: ಜು..16ರಂದೂ ಅಂಗನವಾಡಿ,ಶಾಲೆ,ಪ.ಪೂ. ಕಾಲೇಜುಗಳಿಗೆ ರಜೆ

ಮಂಗಳೂರು: ದಕ್ಷಿಣ ಕನ್ನಡದಲ್ಲಿ ರಂದು ರೆಡ್ ಅಲರ್ಟ್ ಘೋಷಣೆ ಮತ್ತು ನಿರಂತರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ನಾಳೆ (ಜು.16)ಎಲ್ಲಾ ಶಾಲೆಗಳು,ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಕಾಣಿಯೂರಿನ ಸೌಮ್ಯ ಪೂಜಾರಿ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Posted by Vidyamaana on 2023-12-13 07:26:47 |

Share: | | | | |


ಕಾಣಿಯೂರಿನ ಸೌಮ್ಯ ಪೂಜಾರಿ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು : ಪಂಜಾಬ್‌ನ ಲ್ಯಾಮ್ರಿನ್ ಟೆಕ್ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ 70ನೇ ಸೀನಿಯರ್ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ.



ಇವರು ಕಾಣಿಯೂರು ಅಬೀರ ರಾಮಣ್ಣ ಪೂಜಾರಿ ಮತ್ತು ಲಲಿತಾ ದಂಪತಿಗಳ ಸುಪುತ್ರಿ ಹಾಗೂ ಪುತ್ತೂರಿನಲ್ಲಿ ಪೊಲೀಸ್ ಇಲಾಖೆಯ ಸಿಬ್ಬಂದಿಯಾಗಿರುವ ಸಂತೋಷ್ ಕುಮಾರ್ ರವರ ಸಹೋದರಿ.


ಇವರು ಕಾಣಿಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಪ್ರಗತಿ ಆಂಗ್ಲಮಾದ್ಯಮ ಶಾಲೆ ಹಾಗೂ ಆಳ್ವಾಸ್ ವಿದ್ಯಾಸಂಸ್ಥೆಯ ಹಿರಿಯ ವಿದ್ಯಾರ್ಥಿನಿಯಾಗಿರುತ್ತಾರೆ.


ಸೌಮ್ಯಾ ರವರು ಪ್ರಸ್ತುತ ಬೆಂಗಳೂರಿನಲ್ಲಿ ಪೊಲೀಸ್ ಇಲಾಖೆಯ ಉದ್ಯೋಗಿಯಾಗಿದ್ದು, ಕರ್ನಾಟಕ ರಾಜ್ಯ ಪೊಲೀಸ್ ಮಹಿಳಾ ಕಬಡ್ಡಿ ತಂಡದ ಸದಸ್ಯೆಯಾಗಿರುತ್ತಾರೆ.

Recent News


Leave a Comment: