ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಸುದ್ದಿಗಳು News

Posted by vidyamaana on 2024-07-23 18:35:28 |

Share: | | | | |


ಶಿರೂರು ಭೂಕುಸಿತ ದುರಂತ : ಪತ್ತೆಯಾಯ್ತು ಎಂಟನೇ ಮೃತದೇಹ

ಕಾರವಾರ: ಶಿರೂರು ಭೂಕುಸಿತ ಸ್ಥಳದಲ್ಲಿ 8 ದಿವಸದ ಬಳಿಕ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಈ ಮೂಲಕ 8ನೇ ಮೃತದೇಹ ಸಿಕ್ಕಂತಾಗಿದೆ. ಈ ನಡುವೆ ಕೇರಳದ ಲಾರಿ ಚಾಲಕ ಅರ್ಜುನ್‌ ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರೆದಿದೆ. 

ಮಂಗಳವಾರ ಬೆಳಗ್ಗೆ ಗುಡ್ಡ ಕುಸಿತದಿಂದ ನಾಪತ್ತೆಯಾಗಿದ್ದ ಮಹಿಳೆ ಸಣ್ಣಿ ಹನ್ಮಂತ ಗೌಡ (57) ಸಾವನ್ನಪ್ಪಿದ್ದು, ಮೃತದೇಹ ದೊರೆತಿದೆ. ಗಂಗಾವಳಿ ನದಿಯ ಗಂಗೆಕೊಳ್ಳ ಸಮೀಪ ಅವರ ಶವ ಪತ್ತೆಯಾಗಿದೆ. ಶಿರೂರು ಗುಡ್ಡ ಕುಸಿತದಿಂದಾಗಿ ಉಳುವರೆ ಗ್ರಾಮದಲ್ಲಿ ಮನೆ ಕುಸಿತವಾಗಿ ಸಣ್ಣಿ ಹನ್ಮಂತ ಗೌಡ ಅವರು ಕಣ್ಮರೆಯಾಗಿದ್ದರು. ಇನ್ನೂ ಅರ್ಜುನ್‌ ಸಹಿತ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಸ್ಥಳದಲ್ಲಿ NDRF, SDRF, ಮಿಲಿಟರಿ ಕಾರ್ಯಪಡೆಯಿಂದ ಶೋಧ ಕಾರ್ಯ ಮುಂದುವರೆದಿದೆ. 

ಕೇರಳ ಮಾಧ್ಯಮಗಳ ಕವರೇಜ್‌ 

ಸದ್ಯ ಕರ್ನಾಟಕದ ಉತ್ತರ ಕನ್ನಡದಲ್ಲಾದ ಭೂಕುಸಿತ ವರದಿಯನ್ನ ಕನ್ನಡಿಗರು ಕೂಡಾ ಮಲಯಾಳಂ ಸುದ್ದಿವಾಹಿನಿಗಳಲ್ಲಿ ವೀಕ್ಷಿಸುವಂತಾಗಿದೆ. ಕೇರಳದ ಪ್ರಮುಖ ರಾಜ್ಯ ಮಟ್ಟದ ವಾಹಿನಿಗಳು ಕಳೆದ 4 ದಿನಗಳಿಂದಲೂ ಉತ್ತರ ಕನ್ನಡದಲ್ಲಿ ಬೀಡುಬಿಟ್ಟಿವೆ. ಅರ್ಜುನ್‌ ಶೋಧ ಕಾರ್ಯಾಚರಣೆಗೆ ಹೆಚ್ಚಿನ ಒತ್ತಡ ಏರುತ್ತಿದೆ. ಜೊತೆಗೆ ಕೇರಳದ ನಾಗರಿಕ ಸುರಕ್ಷತಾ ತಂಡಗಳು ಕೂಡಾ ಕಾರ್ಯಾಚರಣೆ ನಡೆಸುವ ನಿಟ್ಟಿನಲ್ಲಿ ಕೇರಳದಿಂದ ಶಿರೂರಿಗೆ ತಂಡವಾಗಿ ಆಗಮಿಸಿವೆ

 Share: | | | | |


ಖಾಸಗಿ‌ ಬಸ್- ಬೈಕ್ ಡಿಕ್ಕಿ; ಗೋಳ್ತಮಜಲು ನಿವಾಸಿ ಲತೀಶ್ ಮೃತ್ಯು

Posted by Vidyamaana on 2023-07-30 15:16:23 |

Share: | | | | |


ಖಾಸಗಿ‌ ಬಸ್- ಬೈಕ್ ಡಿಕ್ಕಿ;  ಗೋಳ್ತಮಜಲು ನಿವಾಸಿ ಲತೀಶ್ ಮೃತ್ಯು

ಬಂಟ್ವಾಳ: ಖಾಸಗಿ‌ ಬಸ್ ಡಿಕ್ಕಿಯಾಗಿ ಯುವಕನೋರ್ವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಸಂಜೆ ವೇಳೆ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ.ಕಲ್ಲಡ್ಕ ಗೋಳ್ತಮಜಲು ಮುರಬೈಲು ನಿವಾಸಿ ಲತೀಶ್ ( 28) ಮೃತಪಟ್ಟ ಯುವಕ .


ಮಂಗಳೂರಿನಲ್ಲಿ ಮ್ಯಾಕನಿಕ್ ಕೆಲಸ ಮಾಡುತ್ತಿದ್ದ ಈತ, ಇಂದು ರವಿವಾರ ರಜಾದಿನವಾದ ಕಾರಣ ಬೆಳಿಗ್ಗೆ ಪಣೋಲಿಬೈಲು ದೇವಸ್ಥಾನಕ್ಕೆ ಹೋಗಿ ವಾಪಸು ಮನೆಗೆ ಬರುವ ವೇಳೆ ಕಲ್ಲಡ್ಕ ದಲ್ಲಿ ಅಪಘಾತ ನಡೆದಿದೆ .


ಕಲ್ಲಡ್ಕದಿಂದ ವಿಟ್ಲ ರಸ್ತೆಯಲ್ಲಿ ಹೋಗುವ ವೇಳೆ ವಿಟ್ಲದಿಂದ ಅತೀ ವೇಗದಿಂದ ಬರುತ್ತಿದ್ದ ಖಾಸಗಿ‌ ಬಸ್ ಬೈಕ್ ಗೆ ಡಿಕ್ಕಿ ಯಾಗಿದೆ.ಡಿಕ್ಕಿಯ ರಭಸಕ್ಕೆ ಲತೀಶ್ ಗೆ ಗಂಭೀರವಾಗಿ ಗಾಯವಾಗಿತ್ತು.ಈತನನ್ನು ಕೂಡಲೇ ಮಂಗಳೂರು ‌ಖಾಸಗಿ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು.


ಚಿಂತಾಜನಕ ಸ್ಥಿತಿಯಲ್ಲಿದ್ದ ಈತ ಐಸಿಯು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ, ಆದರೆ ಗಂಭೀರ ಸ್ಥಿತಿಯಲ್ಲಿದ್ದ ಲತೀಶ್ ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.


ಟ್ರಾಫಿಕ್ ಎಸ್. ಐ.ಸುತೇಶ್ ಸ್ಥಳಕ್ಕೆ ಬೇಟಿ ನೀಡಿದ್ದು,ಪ್ರಕರಣ ದಾಖಲಾಗಿದೆ.

ವಿಟ್ಲ ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐ.ಜಿ.ಡಾ. ಚಂದ್ರಗುಪ್ತ ಭೇಟಿ

Posted by Vidyamaana on 2023-04-04 12:50:07 |

Share: | | | | |


ವಿಟ್ಲ ಪೊಲೀಸ್ ಠಾಣೆಗೆ ಪಶ್ಚಿಮ ವಲಯ ಐ.ಜಿ.ಡಾ. ಚಂದ್ರಗುಪ್ತ  ಭೇಟಿ

ವಿಟ್ಲ: ಚುನಾವಣಾ ನೀತಿ ಜಾರಿಯಾಗುತ್ತಿದ್ದಂತೆ ತಪಾಸಣಾ ಕೇಂದ್ರಗಳನ್ನು ಅಳವಡಿಸಲಾಗಿದೆ. ಶಾಶ್ವತವಾದ ಚೆಕ್ ಪೋಸ್ಟ್ ಹೊರತಾಗಿ ಬಿಟ್ಟ ರಸ್ತೆಗಳನ್ನು ಸೇರಿಸಿ ಒಳ ಮಾರ್ಗಗಳಿಗೆ ಹೆಚ್ಚುವರಿ ತಪಾಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. ಮುಂದಿನ ಎರಡು ದಿನದಲ್ಲಿ ಪ್ಯಾರಾ ಮಿಲಿಟರಿಯನ್ನು ಕರೆಸಿಕೊಳ್ಳಲಾಗುತ್ತಿದ್ದು, ಅವರಿಂದಲೂ ತಪಸಣಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಪಶ್ಚಿಮ ವಲಯ ಐ.ಜಿ. ಡಾ.ಚಂದ್ರಗುಪ್ತ ಹೇಳಿದರು.

ಚುನಾವಣಾ ಹಿನ್ನಲೆಯಲ್ಲಿ ವಿಟ್ಲ ಠಾಣೆಗೆ ಮಂಗಳವಾರ ಭೇಟಿ ನೀಡಿ ಸಾರ್ವಜನಿಕರ ಸಭೆಯನ್ನು ನಡೆಸಿ, ವಿವಿಧ ಗಡಿ ಭಾಗದ ತಪಾಸಣಾ ಕೇಂದ್ರಗಳನ್ನು ಪರಿಶೀಲನೆ ನಡೆಸಿ ಬಳಿಕ ಮಾಧ್ಯಮಗಳ ಜತೆಗೆ ಮಾತನಾಡಿದರು.ಠಾಣೆ ಅಥವಾ ಹೊರ ಠಾಣೆಯನ್ನು ಸ್ಥಾಪನೆ ಮಾಡಿದ ಮೇಲೆ ಸಾರ್ವಜನಿಕರ ಅನುಕೂಲಕ್ಕೆ

ನಿತ್ಯ ತೆರೆಯಲಾಗುತ್ತದೆ. ನೆಲ್ಲಿಕಟ್ಟೆ ಹಾಗೂ ಆನೆಕಲ್ಲು ಭಾಗದಲ್ಲಿ ಚೆಕ್ ಪೋಸ್ಟ್ ಇದ್ದು, ಸಿಬ್ಬಂದಿಗಳು ಮಾತ್ರ ಕನ್ಯಾನದಲ್ಲಿ ತಪಾಸಣೆ ಮಾಡುವ ಕಾರ್ಯ ಮಾಡಬಾರದು.ಕನ್ಯಾನ ಹೊರ ಠಾಣೆಯ ಸ್ಥಾಪನೆಯ ಉದ್ದೇಶ ಹಾಗೂ ತಪಸಣಾ ಕೇಂದ್ರದ ಪ್ರತ್ಯೇಕ ಸ್ಥಳದಲ್ಲಿ ಸ್ಥಾಪನೆಯಾಗಿರುವ ಬಗ್ಗೆ ಪರಿಶೀಲನೆ ನಡೆಸಿ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು. ದ. ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ ವಿಕ್ರಂ ಅಮಟೆ ಉಪಸ್ಥಿತರಿದ್ದರು 

ಮುಳಿಯ ಜ್ಯುವೆಲ್ಸ್‌ನಿಂದ ಸ್ವಾತಂತ್ರ್ಯ ಹೋರಾಟಗಾರರ ಆನ್‌ಲೈನ್‌ ಛದ್ಮವೇಷ ಸ್ಪರ್ಧೆ

Posted by Vidyamaana on 2024-08-07 06:16:09 |

Share: | | | | |


ಮುಳಿಯ ಜ್ಯುವೆಲ್ಸ್‌ನಿಂದ ಸ್ವಾತಂತ್ರ್ಯ ಹೋರಾಟಗಾರರ ಆನ್‌ಲೈನ್‌ ಛದ್ಮವೇಷ ಸ್ಪರ್ಧೆ

ಪುತ್ತೂರು: ಮುಳಿಯ ಜ್ಯುವೆಲ್ಸ್ ಸ್ವಾತಂತ್ರ್ಯ ದಿನದ ಅಂಗವಾಗಿ ಆ.11ರಂದು ಬೆಳಗ್ಗೆ 10ರಿಂದ ಸ್ವಾತಂತ್ರ್ಯ ಹೋರಾಟಗಾರರು ವಿಡಿಯೋ ಕಾನ್ಫರೆನ್ಸ್ ಮೂಲಕ ಛದ್ಮವೇಷ ಸ್ಪರ್ಧೆಯನ್ನು ಹಾಕಿಕೊಂಡಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನಲೆಯೇನು? ಜಂಬೂಸವಾರಿಯ ಇತಿಹಾಸದ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ

Posted by Vidyamaana on 2023-10-24 06:54:25 |

Share: | | | | |


ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನಲೆಯೇನು? ಜಂಬೂಸವಾರಿಯ ಇತಿಹಾಸದ ಬಗ್ಗೆ ಇಲ್ಲಿದೆ ಸಂಪೂರ್ಣ ವಿವರ

ಮೈಸೂರು : ಮೈಸೂರಿನಲ್ಲಿ ನಾಡಹಬ್ಬ ದಸರಾ ಕಳೆಗಟ್ಟಿದ್ದು, ಇಂದು ಸಂಜೆ 4.40 ಕ್ಕೆ ಜಂಬೂ ಸವಾರಿಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಚಿನ್ನದ ಅಂಬಾರಿಯನ್ನು ಹೊತ್ತು ಅಭಿಮನ್ಯು ಆನೆ ಸತತ ನಾಲ್ಕನೇ ಬಾರಿಗೆ ಹೆಜ್ಜೆ ಹಾಕಲಿದ್ದಾನೆ.ಸಿಎಂ ಸಿದ್ದರಾಮಯ್ಯ ಅವರು ಇಂದು ಸಂಜೆ 4.30-4.46 ರ ಶುಭ ಮೀನ ಲಗ್ನದಲ್ಲಿ ಕೋಟಿ ಆಂಜನೇಯ ದೇಗುಲದ ಬಳಿ ಪೂಜೆ ಸಲ್ಲಿಸದ್ದಲಿದ್ದಾರೆ.ಬಳಿಕ ವಿಶ್ವವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.


ಅರಮನೆಯ ಬಲರಾಮ ದ್ವಾರದಲ್ಲಿ ಇಂದು ಮಧ್ಯಾಹ್ನ 1.46 ರಿಂದ 2.08 ರೊಳಗೆ ನಂದಿಧ್ವಜ ಪೂಜೆ ನೆರವೇರಲಿದೆ. ಸಂಜೆ 4.40 ರಿಂದ 5 ರವರೆಗೆ ಅಂಬಾವಿಲಾಸ ಅರಮನೆಯ ಒಳಾವರಣದಲ್ಲಿ ವಿಜಯದಶಮಿ ಮೆರವಣಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಪೊಲೀಸರು ಜಂಬೂಸವಾರಿ ಮೆರವಣಿಗೆಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ . ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿರುವ 6 ಸಾವಿರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ನಿಯೋಜಿಸಲಾಗಿದೆ. ಈ ಬಾರಿ ಜಂಬೂ ಸವಾರಿಯಲ್ಲಿ ಕಣ್ಮನ ಸೆಳೆಯುವ 40 ಕ್ಕೂ ಹೆಚ್ಚು ಸ್ತಬ್ಧ ಚಿತ್ರಗಳು ಸಾಗಲಿವೆ.

ವಿಶ್ವವಿಖ್ಯಾತ ಜಂಬೂಸವಾರಿಯ ಇತಿಹಾಸ

ನಾಡಹಬ್ಬ ಮೈಸೂರು ದಸರಾ (Mysore dasara) ವಿಶ್ವ ವಿಖ್ಯಾತಿಯನ್ನು ಪಡೆದುಕೊಂಡಿದೆ. ಪ್ರತಿ ನವರಾತ್ರಿ (Navratri Festival) ಹಾಗೂ ವಿಜಯದಶಮಿಯ (Vijay

non

ashami Festival) ಅಷ್ಟೂ ದಿನ ಮೈಸೂರು (Mysore City) ಝಗಮಗಿಸಲಿದೆ. ದಸರೆಯ ಇತಿಹಾಸವನ್ನು ನೋಡುವುದಾದರೆ 1610ರಲ್ಲಿ ಆರಂಭ ಮಾಡಲಾಯಿತು. ಶ್ರೀರಂಗಪಟ್ಟಣದ ಕಾವೇರಿ ನದಿಯ ಉತ್ತರ ದಿಕ್ಕಿನ ಗೌರಿಕಡುವೆಯಲ್ಲಿ ಎಂಬಲ್ಲಿ ದಸರಾಕ್ಕೆ ಚಾಲನೆ ನೀಡಲಾಗಿತ್ತು. ಅಂಬಾರಿ ಹೊರುವ ಪದ್ಧತಿಗೆ ಚಾಲನೆ ಸಿಕ್ಕಿದ್ದೂ ಸಹ ಆಗಿನಿಂದಲೇ ಆಗಿದೆ.


ಮೈಸೂರನ್ನು ಮಹಿಷಾಸುರನಿಂದ ರಕ್ಷಿಸಿ, ಆತನನ್ನು ಸಂಹಾರ ಮಾಡಿದ ದಿನವನ್ನು ವಿಜಯದಶಮಿ ಎಂದು ಆಚರಿಸುತ್ತಾ ಬರಲಾಗಿದ್ದು, ಅಂದು ಜಂಬೂ ಸವಾರಿ ಮೂಲಕ ಆನೆ ಮೇಲೆ 750 ಕೆಜಿ ತೂಕದ ಸ್ವರ್ಣಖಚಿತ ಅಂಬಾರಿಯಲ್ಲಿ ದೇವಿಯ ಪ್ರತಿಮೆಯನ್ನು ಇಟ್ಟು ಅರಮನೆಯಿಂದ ಬನ್ನಿ ಮಂಟಪದವರೆಗೆ ರಾಜ ಬೀದಿಯಲ್ಲಿ ಮೆರವಣಿಗೆ ನಡೆಸಲಾಗುವುದು.ವಿಜಯನಗರ ಸಾಮ್ರಾಜ್ಯದ ಅರಸ ಶ್ರೀಕೃಷ್ಣ ದೇವರಾಯನ ಕಾಲದಲ್ಲಿ ವಿಜಯದಶಮಿಯನ್ನು ಪ್ರಾರಂಭಿಸಲಾಯಿತು. ಈ ವೇಳೆ ಶೌರ್ಯ - ಪರಾಕ್ರಮಗಳ ಪ್ರದರ್ಶನ, ಕಲೆ - ಸಾಹಿತ್ಯಗಳಿಗೆ ವೇದಿಕೆ, ಸಂಗೀತ - ನೃತ್ಯ ಮತ್ತು ಸಂಸ್ಕೃತಿ ಪ್ರದರ್ಶನಕ್ಕೆ ಅವಕಾಶ ಸೇರಿದಂತೆ ಹತ್ತು ದಿನಗಳ ಕಾಲ ಅದ್ಧೂರಿಯಾಗಿ ಆಚರಣೆ ನಡೆಸುತ್ತಾ ಬರಲಾಗಿತ್ತು. ಅವರ ತರುವಾಯ ಮೈಸೂರಿನಲ್ಲಿ ರಾಜಾ ಒಡೆಯರ್‌ ಅವರು ದಸರಾವನ್ನು ಶ್ರೀರಂಗಪಟ್ಟಣದಲ್ಲಿ ಆರಂಭಿಸಿದರು. ಮುಮ್ಮಡಿ ಕೃಷ್ಣರಾಜ ಒಡೆಯರ್‌ ಕಾಲದಲ್ಲಿ ಅಂದರೆ 1799ರಲ್ಲಿ ಒಡೆಯರು ತಮ್ಮ ಕೇಂದ್ರ ಸ್ಥಾನವನ್ನು ಶ್ರೀರಂಗಪಟ್ಟಣದಿಂದ ಮೈಸೂರಿಗೆ ವರ್ಗಾಯಿಸಿಕೊಂಡರು. ನಂತರದ ದಸರಾ ಆಚರಣೆಗಳು ಮೈಸೂರಿನಲ್ಲಿ ಪ್ರಾರಂಭವಾದವು.


ಜಂಬೂ ಸವಾರಿ ಆರಂಭಕ್ಕೆ ಮುನ್ನ ಶುಭ ಕುಂಭ ಲಗ್ನದಲ್ಲಿ ಅರಮನೆಯ ಬಲರಾಮ ದ್ವಾರದಲ್ಲಿ ನಂದಿಧ್ವಜಕ್ಕೆ ಮೊದಲು ಪೂಜೆ ಸಲ್ಲಿಸಲಾಗುತ್ತದೆ.ಚಿನ್ನದ ಅಂಬಾರಿಯಲ್ಲಿ ವಿರಾಜಮಾನಳಾಗಿ ಆಸೀನಳಾಗಿರುವ ತಾಯಿ ಚಾಮುಂಡೇಶ್ವರಿ ದೇವಿ ಮೂರ್ತಿಗೆ ಪುಷ್ಪಾರ್ಚನೆ ಸಲ್ಲಿಸಲಾಗುತ್ತದೆ. ಆ ಬಳಿಕ 24 ಕುಶಾಲ ತೋಪುಗಳ ಗೌರವವನ್ನು ಸಮರ್ಪಣೆ ಮಾಡಲಾಗುತ್ತದೆ. ಅಲ್ಲಿಂದ ಅರಮನೆ ಆವರಣದಲ್ಲಿ ವಿಜಯದಶಮಿಯ ಅತ್ಯಾಕರ್ಷಕ ಮೆರವಣಿಗೆಗೆ ಚಾಲನೆ ದೊರೆಯುತದೆ. ಜಂಬೂಸವಾರಿಯು ಅರಮನೆ ಆವರಣದಿಂದ ಬನ್ನಿ ಮಂಟಪದವರೆಗೆ ನಡೆಯುತ್ತದೆ.


ಅಂಬಾರಿ ಹೊತ್ತ ಬಲರಾಮನ ಜತೆಗೆ ಪೊಲೀಸ್ ಬ್ಯಾಂಡ್‌ನ ಆಕರ್ಷಕ ತಾಳ ವಾದ್ಯ ಕಳೆಗಟ್ಟಲಿದೆ. ಅಲ್ಲದೆ, ಕಂಸಾಳೆ ಕುಣಿತ, ಕಲಾತಂಡಗಳ ನೃತ್ಯ ಪ್ರದರ್ಶನಗಳ ಜತೆಗೆ ಸ್ತಬ್ಧ ಚಿತ್ರಗಳು ಎಲ್ಲರ ಗಮನ ಸೆಳೆಯುತ್ತದೆ. ಇದರ ವೀಕ್ಷಣೆಗೆ ಸಾವಿರಾರು ಸಂಖ್ಯೆಯಲ್ಲಿ ಜನರು ಸೇರಿರುತ್ತಾರೆ.

ಪುತ್ತೂರು ನಗರ ವ್ಯಾಪ್ತಿಯಲ್ಲಿ ಗಾಳಿಮಳೆ

Posted by Vidyamaana on 2024-05-12 18:27:03 |

Share: | | | | |


ಪುತ್ತೂರು ನಗರ ವ್ಯಾಪ್ತಿಯಲ್ಲಿ ಗಾಳಿಮಳೆ

ಪುತ್ತೂರು: ಭಾನುವಾರ ಸಂಜೆ ಪುತಯ್ತೂರು ನಗರ ವ್ಯಾಪ್ತಿಯಲ್ಲಿ ಭಾರೀ ಗಾಳಿಮಳೆ ಬಂದಿದ್ದು ಬಪ್ಪಳಿಗೆಯ ಸಿಂಗಾಣಿ ಎಂಬಲ್ಲಿ ಕಮಲ ಎಂಬವರ ಮನೆಯ ಮಾಡಿನ ಶೀಟು ಗಾಳಿಗೆ ಹಾರಿ ಹೋಗಿದ್ದು, 

ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

Posted by Vidyamaana on 2023-07-18 01:50:33 |

Share: | | | | |


ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ

ಬೆಂಗಳೂರು: ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ನಾಯಕ ಉಮ್ಮನ್ ಚಾಂಡಿ (73) ನಿಧನರಾಗಿದ್ದಾರೆ.


ಕ್ಯಾನ್ಸರ್ ನಿಂದ ಬಳಲುತ್ತಿದ್ದ ಉಮ್ಮನ್ ಚಾಂಡಿ ಇಂದು(ಜುಲೈ 18) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಉಮ್ಮನ್ ಚಾಂಡಿ ನಿಧನಕ್ಕೆ ಕೇರಳ ಹಾಲಿ ಸಿಎಂ ಪಿಣರಾಯಿ ವಿಜಯನ್ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.


ಉಮ್ಮನ್ ಚಾಂಡಿ ಅವರು 1943, ಅಕ್ಟೋಬರ್ 31ರಂದು ಕೇರಳದ ಕೊಟ್ಟಾಯಂ ಜಿಲ್ಲೆಯ ಕುಮಾರಕೋಮ್ ನಲ್ಲಿ ಜನಿಸಿದ್ದು, ಪುತ್ತುಪಲ್ಲಿಯ ಸೇಂಟ್ ಜಾರ್ಜ್ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪೂರ್ಣಗೊಳಿಸಿ ಬಳಿಕ ಕೊಟ್ಟಾಯಂನ ಸಿಎಮ್ಎಸ್ ಕಾಲೇಜು ಮತ್ತು ಚಂಗನಾಸ್ಸೆರಿಯ ಸೇಂಟ್ ಬರ್ಚ್ಮನ್ಸ್ ಕಾಲೇಜಿನಲ್ಲಿ ವ್ಯಾಸಂಗ ಮಾಡಿದ್ದರು. ಎರ್ನಾಕುಲಂನ ಸರ್ಕಾರಿ ಕಾನೂನು ಕಾಲೇಜಿನಿಂದ ಎಲ್ಎಲ್ಬಿ ಪದವಿ ಪೂರೈಸಿದ್ದರು.


ಕೇರಳ ವಿದ್ಯಾರ್ಥಿ ಒಕ್ಕೂಟದ ಮೂಲಕ ತಮ್ಮ ರಾಜಕೀಯ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿ 1967 ರಲ್ಲಿ ಕೇರಳ ವಿದ್ಯಾರ್ಥಿ ಒಕ್ಕೂಟದ ರಾಜ್ಯಾಧ್ಯಕ್ಷರಾದ್ದರು. ಹೀಗೆ ವಿದ್ಯಾರ್ಥಿ ಜೀವನದಲ್ಲಿ ರಾಜಕೀಯದತ್ತ ಆಕರ್ಷಿತರಾದ ಉಮ್ಮನ್ ಚಾಂಡಿ ಅವರು ಕಾಂಗ್ರೆಸ್ ಮೂಲಕ ತಮ್ಮ ರಾಜಕೀಯ ಜೀವನ ಆರಂಭಿಸಿದ್ದ ಉಮ್ಮನ್ ಚಾಂಡಿ 1969 ರಲ್ಲಿ ಯುವ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಾದ್ದರು.

Recent News


Leave a Comment: