ಕೊಣಾಜೆ: ಬೋಳಿಯಾರ್ ಅಮಾಯಕ ಮುಸ್ಲಿಮರ ಬಂಧನ ವಿರೋಧಿಸಿ SDPI ಪ್ರತಿಭಟನೆ

ಸುದ್ದಿಗಳು News

Posted by vidyamaana on 2024-06-25 21:01:31 |

Share: | | | | |


ಕೊಣಾಜೆ: ಬೋಳಿಯಾರ್ ಅಮಾಯಕ ಮುಸ್ಲಿಮರ ಬಂಧನ ವಿರೋಧಿಸಿ SDPI ಪ್ರತಿಭಟನೆ

ಕೊಣಾಜೆ: ಬೋಳಿಯಾರಿನಲ್ಲಿ ಅಮಾಯಕ ಮುಸ್ಲಿಮರ ಬಂಧನ ವಿರೋಧಿಸಿ ಎಸ್ ಡಿಪಿಐ ಕೊಣಾಜೆ ಪೊಲೀಸ್ ಠಾಣೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದೆ.

ಮಳೆಯನ್ನು ಲೆಕ್ಕಿಸದೆ ಸೇರಿದ ನೂರಾರು ಜನ ಸೇರಿದ್ದಾರೆ. ಬೋಳಿಯಾರಿನಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಇರಿತ ಪ್ರಕರಣದಲ್ಲಿ ಹದಿನಾರು ಮಂದಿ ಆರೋಪಿಗಳ ಬಂಧನವಾಗಿದ್ದರೂ ಪೊಲೀಸರು ಬೇಟೆ ಮುಂದುವರಿಸಿದ್ದಾರೆ. ಕಣ್ಣು ಮುಚ್ಚಿ ಕುಳಿತ ರಾಜ್ಯ ಸರಕಾರದ ದ್ವಿಮುಖ ದೋರಣೆಯನ್ನು ವಿರೋಧಿಸಿ SDPI ಪ್ರತಿಭಟನೆ ನಡೆಸುತ್ತಿದೆ.

 Share: | | | | |


ಮನೆಯಲ್ಲಿ ಜಿರಳೆ ಕಾಟ ಹೆಚ್ಚಾಗಿದ್ಯಾ..? ಶಾಶ್ವತವಾಗಿ ಮುಕ್ತಿ ಪಡೆಯಲು ಹೀಗೆ ಮಾಡಿ

Posted by Vidyamaana on 2024-02-15 07:24:48 |

Share: | | | | |


ಮನೆಯಲ್ಲಿ ಜಿರಳೆ ಕಾಟ ಹೆಚ್ಚಾಗಿದ್ಯಾ..? ಶಾಶ್ವತವಾಗಿ ಮುಕ್ತಿ ಪಡೆಯಲು ಹೀಗೆ ಮಾಡಿ

ಜಿರಳೆಗಳು ಎಂದರೆ ಎಂತಹ ಧೈರ್ಯವಂತರಿಗೂ ಭಯ. ಮನೆಯಲ್ಲಿ ಜಿರಳೆಗಳು ಹೆಚ್ಚಾದರೆ ಕಾಯಿಲೆ ಕೂಡ ಹೆಚ್ಚಾದಂತೆ ಎಂದು ಹೇಳುತ್ತಾರೆ. ಮನೆಯಲ್ಲಿ ಮಕ್ಕಳು ಮತ್ತು ವಯಸ್ಸಾದವರು ಇದ್ದರೆ ಅವರ ಬಗ್ಗೆ ಎಚ್ಚರಿಕೆ ವಹಿಸಬೇಕು. ಜಿರಳೆಗಳು ಅಡ್ಡಾಡಿದ ಆಹಾರ ಸೇವನೆ ಮಾಡಬಾರದು, ಏಕೆಂದರೆ ಅದರಿಂದ ಹತ್ತಾರು ಕಾಯಿಲೆಗಳು ಬರುವ ಸಾಧ್ಯತೆ ಇರುತ್ತದೆ.ಹೀಗಾಗಿ ಜಿರಳೆಗಳ ನಿವಾರಣೆ ಮಾಡುವುದು ಅತ್ಯಗತ್ಯವಾಗಿದೆ. 


ಬೋರಿಕ್ ಆಸಿಡ್


ಜಿರಳೆಗಳನ್ನು ಕೆರಳಿಸಲು ಅತ್ಯುತ್ತಮ ಪರಿಹಾರಗಳಲ್ಲಿ ಒಂದಾಗಿದೆ. ಬೋರಿಕ್ ಆಸಿಡ್ ಅನ್ನು ಹೆಚ್ಚಿನ ದೈನಂದಿನ ಅಗತ್ಯ ಅಂಗಡಿಗಳಲ್ಲಿ ಮಾರಾಟ ಮಾಡಲಾಗುತ್ತಿದೆ. ನೀವು ಮಾಡಬೇಕಾಗಿರುವುದು ಇಷ್ಟೇ, ಜಿರಳೆ ಸಂಪರ್ಕಕ್ಕೆ ಬರುವ ಮೂಲೆ ಮತ್ತು ಮೂಲೆಯಲ್ಲಿ ಸ್ವಲ್ಪ ಬೋರಿಕ್ ಆಮ್ಲದ ಪುಡಿಯನ್ನು ಹಾಕಿದರೆ ಸಾಕು. 


ಬೇಕಿಂಗ್ ಸೋಡಾ


ಕೂಡ ಜಿರಳೆಯನ್ನು ದೂರ ಮಾಡಲು ಸಹಾಯ ಮಾಡುತ್ತದೆ. ಸಕ್ಕರೆ ಮತ್ತು ಬೇಕಿಂಗ್ ಸೋಡಾಗಳ ಸಂಯೋಜನೆಯು ಜಿರಳೆಗಳ ಸಂತಾನೋತ್ಪತ್ತಿಯನ್ನುತಡೆಗಟ್ಟುವ ಅತ್ಯುತ್ತಮ ಮಾರ್ಗಗಳಲ್ಲಿ ಒಂದಾಗಿದೆ. ನೀವು ಮಾಡಬೇಕಾಗಿರುವುದು ಇಷ್ಟೇ, ಈ ಜಿರಳೆಗಳು ನಿಮ್ಮ ಮನೆಯಲ್ಲಿ ಹಾದು ಹೋಗುವ ಸ್ಥಳವನ್ನು ಕಂಡುಕೊಂಡು ಆ ಜಾಗದಲ್ಲಿ ಇದನ್ನು ಸಿಂಪಡಿಸಿ. 


ಬೇವು


ಭಾರತದಲ್ಲಿ ವಿವಿಧ ಪ್ರದೇಶಗಳಿಗೆ ಬಳಸುವ ಅತ್ಯುತ್ತಮ ಪರಿಹಾರಗಳಲ್ಲಿ ಒಂದಾಗಿದೆ. ಬೇವು, ಪುಡಿಯಾಗಿ ಮತ್ತು ಎಣ್ಣೆಯಾಗಿ ದೊರೆಯುತ್ತದೆ. ಇವು ಜಿರಳೆಗಳನ್ನು ಕೊಲ್ಲಲು ಸಹಾಯ ಸಹಾಯ ಮಾಡುತ್ತದೆ. ಸಣ್ಣ ಪ್ರಮಾಣದ ಬೇವಿನ ಎಣ್ಣೆ ಮತ್ತು ನೀರನ್ನು ಮಿಶ್ರಣ ಮಾಡಬೇಕು ಮತ್ತು ಅದನ್ನು ಸ್ಪ್ರೇ ಬಾಟಲಿಯಲ್ಲಿ ಸಂಗ್ರಹಿಸಬೇಕು, ಜಿರಳೆಗಳು ಓಡಾಡುವ ಜಾಗದಲ್ಲಿ ಸಿಂಪಡಿಸಬೇಕು. 


ಪೆಪ್ಪರ್ ಮಿಂಟ್

ಎಣ್ಣೆಯನ್ನು ಮನೆಯಲ್ಲಿ ಜಿರಳೆಗಳನ್ನು ಕೆರಳಿಸಲು ಬಳಸಬಹುದು. ಸಮಪ್ರಮಾಣದ ಪುದೀನಾ ಎಣ್ಣೆ ಮತ್ತು ನೀರನ್ನು ಸ್ವಲ್ಪ ಉಪ್ಪಿನೊಂದಿಗೆ ಬೆರೆಸಿ ಸ್ಪ್ರೇ ಬಾಟಲಿಯಲ್ಲಿ ಸಂಗ್ರಹಿಸಿ ಮತ್ತು ಜಿರಳೆಗಳ ಮೇಲೆ ಸಿಂಪಡಿಸಿದರೆ ಜಿರಳೆ ಕೂಡಲೇ ಓಡಿ ಹೋಗುತ್ತದೆ. 


ಬೇ ಎಲೆಗಳು


ಅಂದರೆ ಪಲಾವ್ ಎಲೆಗಳು ಪ್ರತಿಯೊಂದು ಮನೆಯಲ್ಲೂ ಕಂಡುಬರುವ ಸಾಮಾನ್ಯ ಪದಾರ್ಥಗಳಲ್ಲಿ ಒಂದಾಗಿದೆ. ನೀವು ಮಾಡಬೇಕಾಗಿರುವುದು ಇಷ್ಟೇ, ಬೇ ಎಲೆಗಳನ್ನು ಪುಡಿಮಾಡುವುದು ಮತ್ತು ಕಪಾಟಿನ ಮೂಲೆಗಳಲ್ಲಿ ಇಡುವುದು, ಇದು ಜಿರಳೆಗಳನ್ನು ನಿವಾರಿಸುತ್ತದೆ. 


ಸೀಮೆ ಎಣ್ಣೆ


ಸಹ ಜಿರಳೆಗಳನ್ನು ದೂರ ಮಾಡಲು ಸಹಾಯ ಮಾಡುತ್ತದೆ. ಅದಕ್ಕಾಗಿ ನೀವು ಜೆರಳೆಗಳು ಹೆಚ್ಚಾಗಿ ಓಡಾಡುವ ಜಾಗದಲ್ಲಿ ಸೀಮೆ ಎಣ್ಣೆಯನ್ನು ಸಿಂಪಡಿಸಿದರೆ ಸಾಕು, ಸೀಮೆಎಣ್ಣೆಯ ಗಾಢ ಪರಿಮಳಕ್ಕೆ ಜಿರಳೆಗಳು ಅಲ್ಲಿಂದ ದೂರ ಓಡುತ್ತವೆ. ಅಲ್ಲದೆ ಜಿರಳೆ ಸಾಯುವ ಸಾಧ್ಯತೆ ಕೂಡ ಹೆಚ್ಚಾಗಿದೆ. 


ಲವಂಗಗಳ ಬಳಕೆ


ಲವಂಗವನ್ನು ಕಿಚನ್ ಡ್ರಾಯರ್‌ಗಳಲ್ಲಿ ಇರಿಸಿದರೂ ಜಿರಲೆಗಳು ಬರುವುದಿಲ್ಲ. ಇದರ ವಾಸನೆಯಿಂದ ಜಿರಳೆಗಳು ಹೊರ ಹೋಗುತ್ತವೆ. ವಾರಕ್ಕೊಮ್ಮೆ ಜಿರಳೆಗಳಿರುವ ಜಾಗದಲ್ಲಿ ಲವಂಗವನ್ನು ಇರಿಸುವುದರಿಂದ ಕೀಟಗಳ ತೊಂದರೆಯನ್ನು ದೂರ ಮಾಡಬಹುದು.

ಮೇ 12: ಮೈಸೂರಲ್ಲಿ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ 11ನೇ ಶಾಖೆ ಉದ್ಘಾಟನೆ

Posted by Vidyamaana on 2024-05-11 22:08:40 |

Share: | | | | |


ಮೇ 12: ಮೈಸೂರಲ್ಲಿ ಸುಲ್ತಾನ್ ಡೈಮಂಡ್ಸ್ ಆ್ಯಂಡ್ ಗೋಲ್ಡ್ 11ನೇ ಶಾಖೆ ಉದ್ಘಾಟನೆ

ಮೈಸೂರು: ಸುಲ್ತಾನ್ ಗೋಲ್ಡ್ ಅಂಡ್ ಡೈಮಂಡ್ ಸಂಸ್ಥೆಯು ತನ್ನ 11ನೇ ಶಾಖೆಯನ್ನು ನಗರದ ಮೀನಾ ಬಜಾರ್ ವೃತ್ತದ ಸಮೀಪ ಸಂತ ಫಿಲೋಮಿನಾ ಚರ್ಚ್ ರಸ್ತೆಯಲ್ಲಿ ತೆರೆಯುತ್ತಿದ್ದು, ಮೇ 12ರಂದು ಬಾಲಿವುಡ್ ನಟಿ ರವೀನಾ ಟಂಡನ್ ಅವರು ಮಳಿಗೆ ಉದ್ಘಾಟಿಸಲಿದ್ದಾರೆ.

ಶಾಸಕರಾದ ತನ್ನೀರ್ ಸೇರ್, ಜಿ.ಟಿ.ದೇವೇಗೌಡ, ಕೆ.ಹರೀಶ್ ಗೌಡ, ಸಂತ ಫಿಲೋಮಿನಾ ಚರ್ಚ್‌ನ ಧರ್ಮದರ್ಶಿ ಸ್ಪ್ಯಾನಿ ಅಡಾ, ಮಿಸ್ ಇಂಡಿಯಾ ಯುನಿವರ್ಸ್ ಖ್ಯಾತಿಯ ಡಾ.ಹೇಮಾಮಾಲಿನಿ ಲಕ್ಷ್ಮಣ್, ವೆಲ್ವಿನ್ ಇಂಡಸ್ಟ್ರೀಸ್‌ನ ಗೌರ್ ನಾಜ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ನೂತನ ಮಳಿಗೆಯ ಉದ್ಘಾಟನೆಯ ಅಂಗವಾಗಿ ಮೇ 31ರವರೆಗೆ ಪ್ರತಿದಿನ

ಕ್ಷೇತ್ರ ಗೆಲ್ಲುವುದಕ್ಕಿಂತ ಅಭ್ಯರ್ಥಿ ಆಯ್ಕೆಯೇ ಜಟಿಲ

Posted by Vidyamaana on 2023-04-10 19:31:37 |

Share: | | | | |


ಕ್ಷೇತ್ರ ಗೆಲ್ಲುವುದಕ್ಕಿಂತ ಅಭ್ಯರ್ಥಿ ಆಯ್ಕೆಯೇ ಜಟಿಲ

ಪುತ್ತೂರು: ಯಾವುದೂ ಅಂದುಕೊಂಡಂತೆ ನಡೆಯುತ್ತಿಲ್ಲ. ಆದ್ದರಿಂದ ಬಿಜೆಪಿ, ಕಾಂಗ್ರೆಸ್ ಪಕ್ಷದೊಳಗಡೆ ಟಿಕೇಟ್ ಪೈಪೋಟಿ ಮುಂದುವರಿದಿದೆ. ವರಿಷ್ಠರಿಗೆ ಕ್ಷೇತ್ರ ಗೆಲ್ಲುವ ಲೆಕ್ಕಾಚಾರವಾದರೆ, ಅಭ್ಯರ್ಥಿಗಳಿಗೆ ಟಿಕೇಟ್ ಪಡೆದುಕೊಳ್ಳುವುದೇ ಪ್ರತಿಷ್ಠೆ ಎಂಬಂತಾಗಿದೆ.

ಪ್ರತಿಸಲ ಚುನಾವಣೆ ಬಂದಾಗಲೂ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವೋ ಗೊಂದಲ. ಆದರೆ ಈ ಬಾರಿ ಆ ಗೊಂದಲ ಬಿಜೆಪಿಗೆ ಶಿಫ್ಟ್!

ಸದ್ಯದ ಬೆಳವಣಿಗೆಗಳನ್ನು ಕಂಡಾಗ, ಬಿಜೆಪಿಯ ಅಭ್ಯರ್ಥಿ ಪಟ್ಟಿಯನ್ನು ಗಮನಿಸಿಕೊಂಡು, ಕಾಂಗ್ರೆಸ್ ಮುಂದೆ ಹೆಜ್ಜೆ ಇಡುವಂತೆ ಕಾಣುತ್ತಿದೆ. ಇದು ಪುತ್ತೂರು ಕ್ಷೇತ್ರಕ್ಕೆ ಹೆಚ್ಚು ಸಮೀಪವರ್ತಿಯಾದ ಹೇಳಿಕೆಯೂ ಹೌದು.

ಸೋಮವಾರ ಸಂಜೆಯ ಹೊತ್ತಿಗೆ ಬಿಜೆಪಿ ಪಟ್ಟಿ ಬಿಡುಗಡೆ ಮಾಡಬೇಕಿತ್ತು. ಆದರೆ ವರಿಷ್ಠರ ನಡುವೆಯೇ ಸ್ಪಷ್ಟ ನಿರ್ಧಾರ ಕೈಗೊಳ್ಳುವುದು ಸಾಧ್ಯವಾಗದ ಹಿನ್ನೆಲೆಯಲ್ಲಿ ಪಟ್ಟಿ ಫೈನಲ್ ಆಗಿಲ್ಲ. ಆದರೆ ಅಂತಿಮ ಪಟ್ಟಿಯಲ್ಲಿ ಪುತ್ತೂರು ಬಿಜೆಪಿ ಅಭ್ಯರ್ಥಿಗಳಾಗಿ ಅರುಣ್ ಕುಮಾರ್ ಪುತ್ತಿಲ ಹಾಗೂ ಕಿಶೋರ್ ಕುಮಾರ್ ಬೊಟ್ಯಾಡಿ ಅವರ ಹೆಸರು ಇದೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ. ಇದನ್ನು ಆಧರಿಸಿಕೊಂಡು ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆಯೇ ಎನ್ನುವುದೇ ಕುತೂಹಲ.

ಕಾಂಗ್ರೆಸಿನಲ್ಲಿ ಅಭ್ಯರ್ಥಿಗಳ ಸಂಖ್ಯೆ 14 ಇದ್ದರೂ, ಅಂತಿಮ ಪಟ್ಟಿಯಲ್ಲಿ ಶಕುಂತಳಾ ಶೆಟ್ಟಿ ಹಾಗೂ ಅಶೋಕ್ ಕುಮಾರ್ ರೈ ಅವರ ಹೆಸರು ಇದೆ. ಇವರಿಬ್ಬರ ಪೈಕಿ ಒಬ್ಬರ ಹೆಸರು ಅಂತಿಮಗೊಳ್ಳುವುದು ಬಹುತೇಕ ಪಕ್ಕಾ ಎನ್ನುವುದೇ ಸದ್ಯದ ಮಾಹಿತಿ.

ಬಿಜೆಪಿಗೆ ಎದುರಾದ ವಿಘ್ನ:

ಚುನಾವಣಾ ಪೂರ್ವ ಸಮೀಕ್ಷೆಗಳು ಕಾಂಗ್ರೆಸ್ ಪರವಾಗಿ ಇರುವುದರಿಂದ, ಬಿಜೆಪಿ ಅಭ್ಯರ್ಥಿಗಳನ್ನು ಅಂತಿಮ ಮಾಡಲು ಹಿಂದೇಟು ಹಾಕುತ್ತಿವೆಯೇ ಎನ್ನುವ ಮಾತು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ. ಪುತ್ತೂರಿನ ಮಟ್ಟಿಗೆ ಹೇಳುವುದಾದರೆ, ಇತ್ತೀಚೆಗಷ್ಟೇ ವೈರಲ್ ಆಗಿರುವ ಫೊಟೋ, ಅಭ್ಯರ್ಥಿ ಅಂತಿಮಕ್ಕೆ ಬಿಸಿ ತುಪ್ಪದಂತಾಗಿದೆ ಎಂದೇ ಹೇಳಬಹುದು. ಅಭಿವೃದ್ದಿಯ ಹರಿಕಾರ ಎಂದೇ ಬಣ್ಣಿಸಿದರೂ, ಕೊನೆ ಕ್ಷಣದಲ್ಲಿ ಎದುರಾದ ವಿಘ್ನವೊಂದು ಹಾಲಿ ಶಾಸಕರ ರಾಜಕೀಯ ಜೀವನಕ್ಕೆ ಹೊಸ ತಿರುವು ನೀಡುವ ಸಾಧ್ಯತೆ ದಟ್ಟವಾಗಿದೆ.

ಬಿಜೆಪಿ ಟಿಕೇಟ್ ಸಂಜೀವ ಮಠಂದೂರು ಕೈತಪ್ಪುವುದು ಬಹುತೇಕ ಸ್ಪಷ್ಟ. ಆದ್ದರಿಂದ ಆ ಸ್ಥಾನಕ್ಕೆ ಅರುಣ್ ಕುಮಾರ್ ಪುತ್ತಿಲ ಹಾಗೂ ಕಿಶೋರ್ ಕುಮಾರ್ ಬೊಟ್ಯಾಡಿ ಹೆಸರು ಪಟ್ಟಿಯಲ್ಲಿ ಕಾಣಸಿಕ್ಕಿದೆ ಎನ್ನುತ್ತವೆ ಮೂಲಗಳು. ಇವರಿಬ್ಬರಲ್ಲಿ ಅಂತಿಮ ಯಾರು ಎನ್ನುವುದೇ ಯಕ್ಷಪ್ರಶ್ನೆ.

ಕಾಂಗ್ರೆಸ್ ಲೆಕ್ಕಾಚಾರ:

ಪುತ್ತೂರಿನಲ್ಲಿ ಕಾಂಗ್ರೆಸ್ ನಡೆ ಇನ್ನೂ ನಿರ್ಧಾರವಾದಂತಿಲ್ಲ. ಬಿಜೆಪಿಯ ಅಭ್ಯರ್ಥಿಯನ್ನು ಆಧರಿಸಿ, ಕಾಂಗ್ರೆಸ್ ಪಟ್ಟಿ ಅಂತಿಮಗೊಳಿಸುವ ಸಾಧ್ಯತೆಯೂ ಇದೆ. ಸಂಜೀವ ಮಠಂದೂರು ಅಭ್ಯರ್ಥಿಯಾದರೆ ಶಕುಂತಳಾ ಶೆಟ್ಟಿ ಅವರನ್ನೇ ಅಭ್ಯರ್ಥಿಯಾಗಿಸುವ ಸಾಧ್ಯತೆ ಇದೆ. ಕಾರಣ, ಮಹಿಳಾ ಹೋರಾಟಗಾರ್ತಿಯಾದ ಶಕುಂತಳಾ ಶೆಟ್ಟಿ, ಫೊಟೋ ವೈರಲ್ ಪ್ರಕರಣವನ್ನು ಸಮರ್ಥವಾಗಿ ಪಕ್ಷಕ್ಕೆ ಲಾಭವಾಗುವಂತೆ ತಿರುಗಿಸಬಲ್ಲರು. ಉಳಿದಂತೆ ಪುತ್ತಿಲ ಅಥವಾ ಬೊಟ್ಯಾಡಿ ಅಭ್ಯರ್ಥಿಯಾದರೆ, ಯಂಗ್ ಕ್ಯಾಂಡಿಡೇಟ್ ಅಶೋಕ್ ಕುಮಾರ್ ರೈ ಅಭ್ಯರ್ಥಿಯಾಗಲೂ ಬಹುದು.

ಕಣಕ್ಕೆ ಕಂಕಣ ಯಾವಾಗ?!:

ಒಟ್ಟಿನಲ್ಲಿ ಅಭ್ಯರ್ಥಿ ಆಯ್ಕೆಯ ಕಸರತ್ತು ಮುಗಿಯದೇ, ಚುನಾವಣಾ ಕಣ ರಂಗು ತುಂಬಿಕೊಳ್ಳುತ್ತಿಲ್ಲ. ಕೆಲ ದಿನಗಳ ಹಿಂದಿನವರೆಗೆ ನಡೆಯುತ್ತಿದ್ದ ಪ್ರಚಾರ ಕಾರ್ಯಗಳು, ಇದೀಗ ಮೆಲ್ಲನೆ ವೇಗ ಕುಂಠಿತಗೊಳ್ಳುವಂತೆ ಮಾಡಿದೆ. ಹಾಗೇ ನೋಡಿದರೆ, ಚುನಾವಣೆಯ ದಿನ ದೌಡಾಯಿಸುತ್ತಾ ಬರುತ್ತಿದೆ, ಬೆರಳೆಣಿಕೆಯ ದಿನಗಳಷ್ಟೇ ಬಾಕಿ. ಅಭ್ಯರ್ಥಿಯ ಗೊಂದಲದಲ್ಲೇ ಇರುವ ಕಾರ್ಯಕರ್ತರು, ಮುಖಂಡರು ಪ್ರಚಾರದೆಡೆಗೆ ಗಮನ ನೀಡುವುದು ಯಾವಾಗ? ರಂಗು ತುಂಬಿಕೊಳ್ಳುವುದು ಯಾವಾಗ? ಪಕ್ಷದ ಪರವಾಗಿ ಕಂಕಣ ಕಟ್ಟಿಕೊಳ್ಳುವವರು ಯಾರು?

ಉತ್ತರ ಪ್ರದೇಶ: ಮತ್ತೊಂದು ಎನ್‌ಕೌಂಟರ್‌:62 ಪ್ರಕರಣಗಳ ಕುಖ್ಯಾತ ದರೋಡೆಕೋರ ಗುಂಡಿಗೆ ಬಲಿ

Posted by Vidyamaana on 2023-05-04 12:35:56 |

Share: | | | | |


ಉತ್ತರ ಪ್ರದೇಶ:  ಮತ್ತೊಂದು ಎನ್‌ಕೌಂಟರ್‌:62 ಪ್ರಕರಣಗಳ  ಕುಖ್ಯಾತ ದರೋಡೆಕೋರ ಗುಂಡಿಗೆ ಬಲಿ

ಮೀರತ್ : ಉತ್ತರಪ್ರದೇಶದಲ್ಲಿ ಗುರುವಾರ ಮತ್ತೊಂದು ಎನ್‌ಕೌಂಟರ್‌ ನಡೆಸಲಾಗಿದ್ದು, ಯುಪಿ ಎಸ್‌ಟಿಎಫ್‌ನೊಂದಿಗಿನ ಎನ್‌ಕೌಂಟರ್‌ನಲ್ಲಿ ಕುಖ್ಯಾತ ದರೋಡೆಕೋರ ಅನಿಲ್ ದುಜಾನಾನನ್ನ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ.ಪ್ರಾಥಮಿಕ ಮಾಹಿತಿಯ ಪ್ರಕಾರ, ಮೀರತ್‌ನ ಭೋಲಾ ಝಲ್‌ನಲ್ಲಿ ಸಕ್ರಿಯವಾಗಿರುವ ಬಗ್ಗೆ ಖಚಿತವಾದ ಮಾಹಿತಿ ಪಡೆದ ನಂತರ ಎಸ್‌ಟಿಎಫ್ ಅನಿಲ್ ದುಜಾನಾನನ್ನು ಸುತ್ತುವರೆದಿದೆ. ಪೊಲೀಸರ ಮೇಲೆ ಗುಂಡು ಹಾರಿಸಿ ತಪ್ಪಿಸಿಕೊಳ್ಳಲು ಯತ್ನಿಸಿದ ವೇಳೆ ಎನ್‌ಕೌಂಟರ್‌ ಮಾಡಲಾಗಿದೆ.ಪಶ್ಚಿಮ ಯುಪಿಯ ಕುಖ್ಯಾತ ಕ್ರಿಮಿನಲ್ ಅನಿಲ್ ದುಜಾನಾನನ್ನು 2021 ರಲ್ಲಿ ದೆಹಲಿ ಪೊಲೀಸರ ಕ್ರೈಂ ಬ್ರಾಂಚ್ ಬಂಧಿಸಿತ್ತು. ದುಜಾನಾ ವಿರುದ್ಧ 18 ಕೊಲೆಗಳು, ಸುಲಿಗೆ, ಲೂಟಿ, ಭೂಕಬಳಿಕೆ ಮತ್ತು ಇತರವು ಸೇರಿದಂತೆ 62 ಪ್ರಕರಣಗಳು ದಾಖಲಾಗಿವೆ. 2012 ರಿಂದ ಜೈಲಿನಲ್ಲಿದ್ದ, ಆದರೆ 2021 ರಲ್ಲಿ ಜಾಮೀನು ಪಡೆದಿದ್ದ. ನಂತರ, ಹಳೆಯ ಪ್ರಕರಣಗಳಲ್ಲಿ ಹಾಜರಾಗದ ಕಾರಣ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಅನ್ನು ಹೊರಡಿಸಿತ್ತು.

2012 ರಲ್ಲಿ ತ್ರಿವಳಿ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ನಂತರ, ಅನಿಲ್ ದುಜಾನಾ ಜೈಲಿನಿಂದ ಇತರ ಅಪರಾಧಿಗಳಾದ ರಣದೀಪ್ ಭಾಟಿ ಮತ್ತು ಅಮಿತ್ ಕಸಾನಾ ಅವರ ಸಹಾಯದಿಂದ ತನ್ನ ಅಪರಾಧ ಸಾಮ್ರಾಜ್ಯವನ್ನು ನಿರ್ವಹಿಸಲು ಪ್ರಾರಂಭಿಸಿದ್ದ. ದುಜಾನಾ ಜೈಲಿನಲ್ಲಿ ಕುಳಿತು ಕೊಲೆ, ಸುಲಿಗೆ ಮತ್ತು ಇತರ ಅಪರಾಧ ಚಟುವಟಿಕೆಗಳನ್ನು ಕಾರ್ಯಗತಗೊಳಿಸಲು ತನ್ನ ಸಹಾಯಕರನ್ನು ಯೋಜಿಸಿ ನಿರ್ದೇಶಿಸುತ್ತಿದ್ದದುಜಾನಾ ಕುಟುಂಬ ಸುಂದರ್ ಭಾಟಿ ಗ್ಯಾಂಗ್‌ನೊಂದಿಗೆ ದೀರ್ಘಕಾಲದ ದ್ವೇಷವನ್ನು ಹೊಂದಿತ್ತು. 2012 ರಲ್ಲಿ, ದುಜಾನಾ ಮತ್ತು ಅವನ ಗ್ಯಾಂಗ್ ಸುಂದರ್ ಭಾಟಿ ಮತ್ತು ಅವನ ನಿಕಟ ಸಹಚರರ ಮೇಲೆ AK-47 ರೈಫಲ್‌ನಿಂದ ದಾಳಿ ಮಾಡಿತ್ತು. ಎರಡು ಪ್ರತಿಸ್ಪರ್ಧಿ ಗ್ಯಾಂಗ್‌ಗಳು ಸರ್ಕಾರಿ ಗುತ್ತಿಗೆಗಳು, ಸ್ಟೀಲ್ ಬಾರ್‌ಗಳ ಕಳ್ಳತನ ಮತ್ತು ಟೋಲ್ ಪ್ಲಾಜಾ ಒಪ್ಪಂದಗಳ ಮೇಲೆ ಆಗಾಗ್ಗೆ ಮುಖಾಮುಖಿಯಾಗುತ್ತಿದ್ದವು. ಭಾಟಿ ಗ್ಯಾಂಗ್‌ನಿಂದ ಬೆದರಿಕೆಯಿಂದಾಗಿ, ಪೊಲೀಸರು ಬುಲೆಟ್ ಪ್ರೂಫ್ ಜಾಕೆಟ್‌ನಲ್ಲಿ ದುನಾನಾನನ್ನು ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದರು.

ರಸ್ತೆ ತಡೆ ಬಂದ್ ಗೆ ಬೆಂಬಲ ಇಲ್ಲ

Posted by Vidyamaana on 2023-08-13 15:47:37 |

Share: | | | | |


ರಸ್ತೆ ತಡೆ ಬಂದ್ ಗೆ ಬೆಂಬಲ ಇಲ್ಲ

ಪುತ್ತೂರು: ಬಂದ್ ಹಾಗೂ ರಸ್ತೆ ತಡೆಗೆ ಬೆಂಬಲ ನೀಡುವುದಿಲ್ಲ ಎಂದು ಪುತ್ತೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ತಿಳಿಸಿದೆ.

ಬಂದ್ ರಸ್ತೆ ತಡೆಗಳಿಂದ ವ್ಯಾಪಾರ ವ್ಯವಹಾರಗಳಿಗೆ ತೊಂದರೆ ಆಗುವುದಲ್ಲದೇ, ನಾಗರಿಕರಿಗೆ ಹಲವಾರು ರೀತಿಯ ಸಮಸ್ಯೆ ಉಂಟಾಗುತ್ತದೆ. ಆದ್ದರಿಂದ ಬಂದ್ ಹಾಗೂ ರಸ್ತೆ ತಡೆಗೆ ಬೆಂಬಲ ನೀಡುವುದಿಲ್ಲ ಎಂದು ತಿಳಿಸಿದೆ.

ಯಾವುದೇ ಧರ್ಮದ ಯುವತಿ ಹಾಗೂ ಯುವಕರ ಮೇಲೆ ಅತ್ಯಾಚಾರ, ದೌರ್ಜನ್ಯ, ಕೊಲೆ ಮುಂದೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಹಾಗೂ ಕಠಿಣ ಕಾನೂನು ಕ್ರಮ ಜಾರಿಯಾಗಬೇಕು. ಈಗಾಗಲೇ ನಡೆದ ಘಟನೆಗಳಿಗೆ ಖಂಡನೆ ಇದೆ. ಆದ್ದರಿಂದ ವರ್ತಕರ ಪರವಾಗಿ ಸರಕಾರಕ್ಕೆ ಅಸಿಸ್ಟೆಂಟ್ ಕಮಿಷನರ್ ಮೂಲಕ ಮನವಿ ಸಲ್ಲಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅರಬ್ಬೀ ಸಮುದ್ರದಲ್ಲಿ ಮತ್ತೆ ಚಂಡಮಾರುತ

Posted by Vidyamaana on 2023-10-16 18:03:52 |

Share: | | | | |


ಅರಬ್ಬೀ ಸಮುದ್ರದಲ್ಲಿ ಮತ್ತೆ ಚಂಡಮಾರುತ

ಮಂಗಳೂರು, ಅ.16: ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಮಾದರಿಯ ವಾತಾವರಣ ಉಂಟಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ.


ಲಕ್ಷದ್ವೀಪ, ನೈರುತ್ಯ ಅರಬ್ಬೀ ಸಮುದ್ರ ಮತ್ತು ಕೇರಳ ಕರಾವಳಿಯ ಮಧ್ಯೆ ಸಮುದ್ರ ಮಟ್ಟದಿಂದ ಮೂರು ಕಿಮೀ ಎತ್ತರದಲ್ಲಿ ಚಂಡಮಾರುತ ಮಾದರಿ ವರ್ತುಲ ಉಂಟಾಗಿದ್ದು, ಇದರಿಂದಾಗಿ ಅರಬ್ಬೀ ಸಮುದ್ರ ಮತ್ತು ಕರ್ನಾಟಕ, ಕೇರಳ ಕರಾವಳಿಯಲ್ಲಿ ಅ.17ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಮಾರುತಗಳು ಉತ್ತರ ಭಾಗದತ್ತ ಚಲಿಸಲಿದೆ ಎಂದು ಮಂಗಳೂರಿನ ಬಂದರು ಪ್ರಾಧಿಕಾರ(ಎನ್ಎಂಪಿಎ) ಕೇಂದ್ರ ಹವಾಮಾನ ಇಲಾಖೆಯ ಮಾಹಿತಿ ಆಧರಿಸಿ ಹೇಳಿಕೆ ಬಿಡುಗಡೆ ಮಾಡಿದೆ.


ಹೀಗಾಗಿ ಎನ್ಎಂಪಿಎ ಬಂದರಿಗೆ ಆಗಮಿಸುವ ಹಡಗು, ಇನ್ನಿತರ ಎಲ್ಲ ರೀತಿಯ ಕಾರ್ಗೋ ಹಡಗುಗಳು ಸೂಕ್ತ ಮುಂಜಾಗ್ರತೆ ವಹಿಸಬೇಕೆಂದು ಸೂಚನೆ ನೀಡಲಾಗಿದೆ. ಅಲ್ಲದೆ, ಕರಾವಳಿಯಲ್ಲಿ ಮೀನುಗಾರಿಕೆ ನಡೆಸದಂತೆ ಮುಂಜಾಗ್ರತೆ ವಹಿಸಬೇಕು. ಎನ್ಎಂಪಿಎಂ ಬಂದರಿನಲ್ಲಿ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತಗೊಳಿಸುವಂತೆ ಸೂಚನೆ ನೀಡಲಾಗಿದೆ.


ಕೇಂದ್ರ ಹವಾಮಾನ ಇಲಾಖೆಯ ಸೂಚನೆಯಲ್ಲಿ ವಾಯು ಮಾರುತಗಳು ಬಂಗಾಳ ಕೊಲ್ಲಿಯಿಂದ ಅರಬ್ಬೀ ಸಮುದ್ರದತ್ತ ಚಲಿಸುತ್ತಿದ್ದು, ದಕ್ಷಿಣ ಭಾರತದ ತಮಿಳುನಾಡು, ಕೇರಳ, ಕರ್ನಾಟಕದ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಬಗ್ಗೆ ತಿಳಿಸಲಾಗಿದೆ.

Recent News


Leave a Comment: