ಕುರಿಯ ; ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬರೆಯುವ ಪುಸ್ತಕ, ಛತ್ರಿ ವಿತರಣೆ

ಸುದ್ದಿಗಳು News

Posted by vidyamaana on 2024-06-26 13:25:21 |

Share: | | | | |


ಕುರಿಯ ; ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬರೆಯುವ ಪುಸ್ತಕ, ಛತ್ರಿ ವಿತರಣೆ

ಪುತ್ತೂರು: ದ.ಕ.ಜಿ.ಪಂ, ಹಿರಿಯ ಪ್ರಾಥಮಿಕ ಶಾಲೆ ಕುರಿಯದಲ್ಲಿ ಜೂ. ೨೧ ರಂದು ೭೭ ಮಂದಿ ವಿದ್ಯಾರ್ಥಿಗಳಿಗೆ ಬರೆಯುವ ಪುಸ್ತಕ, ಛತ್ರಿ ವಿತರಣೆ ಮಾಡಲಾಯಿತು.

ಕೊಡುಗೆ: ಆರ್ಯಾಪು ಗ್ರಾ.ಪಂ ಸದಸ್ಯ  ಬೂಡಿಯಾರ್ ಪುರುಷೋತ್ತಮ ರೈರವರು ತನ್ನ ಸಹೋದರ ಮಾಧವ ರೈಯವರ ೫೦ನೇ ವರ್ಷದ ಪುಣ್ಯ ಸ್ಮರಣಾರ್ಥ ಶಾಲಾ ಮಕ್ಕಳಿಗೆ ಬರೆಯುವ ಪುಸ್ತಕವನ್ನು ಕೊಡುಗೆ ನೀಡಿದರು. ಇದೇ ಸಂಧರ್ಭದಲ್ಲಿ  ಆರ್ಯಾಪು ಗ್ರಾ.ಪಂ, ಸದಸ್ಯ ನಾಗೇಶ್‌ರವರು ಛತ್ರಿ ಕೊಡುಗೆಯಾಗಿ ನೀಡಿದರು.

ಕನ್ನಡ ಮಾಧ್ಯಮ ಕಲಿಕೆಯಿಂದಲೂ ಉನ್ನತ ಸ್ಥಾನ- ಪುರುಷೋತ್ತಮ ರೈ: ಆರ್ಯಾಪು ಗ್ರಾ.ಪಂ, ಸದಸ್ಯ ಬೂಡಿಯಾರ್ ಪುರುಷೋತ್ತಮ ರೈಯವರು ಮಾತನಾಡಿ ಈಗಿನ ಪೋಷಕರಿಗೆ ಇಂಗ್ಲೀಷ್ ಮಾಧ್ಯಮ ಫ್ಯಾಶನ್ ಆಗಿದೆ. ಆದರೆ  ಕನ್ನಡ ಮಾಧ್ಯಮದಲ್ಲಿ ಕಲಿಕೆಯನ್ನು ಮಾಡುವುದರಿಂದಲೂ ಉನ್ನತವಾದ ಸ್ಥಾನವನ್ನು ಪಡೆದವರು ತುಂಬಾ ಮಂದಿ ಇದ್ದಾರೆ. ಈ ನಿಟ್ಟಿನಲ್ಲಿ ಕುರಿಯ ಪ್ರಾಥಮಿಕ ಶಾಲೆಯಲ್ಲಿ ಈ ಬಾರಿ ಒಂದನೆ ತರಗತಿಗೆ ಸೇರ್ಪಡೆಯಾದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿದೆ. ಕುರಿಯ ಶಾಲೆಯಲ್ಲಿ ಉತ್ತಮ ಶಿಕ್ಷಕರು ಇದ್ದಾರೆ. ಶಾಲೆಯ ಅಭಿವೃದ್ಧಿಯಲ್ಲಿ ಪೋಷಕರು ಹೆಚ್ಚು ಮುತುವರ್ಜಿಯನ್ನು ವಹಿಸಿಕೊಳ್ಳಬೇಕು. ನಾನು ಕಳೆದ  ೨೫ ವರ್ಷಗಳಿಂದ ಇಡಬೆಟ್ಟು ಹಾಗೂ ೫ ವರ್ಷಗಳಿಂದ ಕುರಿಯ ಶಾಲಾ ವಿದ್ಯಾರ್ಥಿಗಳಿಗೆ ಪುಸ್ತಕವನ್ನು ಕೊಡುಗೆಯಾಗಿ ನೀಡುತ್ತಿzನೆ. ಪ್ರತಿಯೊಬ್ಬರು ನಮ್ಮ ಊರಿನ ಶಾಲೆಯ  ಮೇಲೆ ಅಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದರು.

ಶಾಲೆ ಹೆಚ್ಚಿನ ಅಭಿವೃದ್ಧಿ ಆಗಬೇಕು-ಅಬ್ದುಲ್‌ಜಬ್ಬಾರ್: ಅಧ್ಯಕ್ಷತೆ ವಹಿಸಿದ್ದ ಕುರಿಯ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಅಬ್ದುಲ್‌ಜಬ್ಬಾರ್‌ರವರು ದಾನಿಗಳಿಗೆ ಕೃತಜ್ಞತೆ ಸಲ್ಲಿಸಿ ಕುರಿಯ ಶಾಲೆಯು ಇನ್ನೂ ಹೆಚ್ಚಿನ ಅಭಿವೃದ್ಧಿ ಆಗಲು ಎಲ್ಲರ ಸಹಕಾರ ಅಗತ್ಯ ಎಂದರು.

ಆರ್ಯಾಪು ಗ್ರಾ.ಪಂ ಸದಸ್ಯಗಳಾದ ನಾಗೇಶ್ ಮತ್ತು ಕಲಾವತಿಯವರು ಸಂದಭೋಚಿತವಾಗಿ ಮಾತನಾಡಿದರು.

ಶಾಲಾ ಪ್ರಭಾರ ಮುಖ್ಯಗುರು ನವೀನ್ ಕುಮಾರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಲಾ ಶಿಕ್ಷಕಿ ದಿವ್ಯಜೋತಿಯವರು ಶಾಲೆಯ ಚಟುವಟಿಕೆಯ ಬಗ್ಗೆ ಮಾತನಾಡಿದರು. ಗೌರವ ಶಿಕ್ಷಕಿ ರಮ್ಯ ವಂದಿಸಿದರು. ಶಿಕ್ಷಕಿ ಕವಿತಾ ಕಾರ್‍ಯಕ್ರಮ ನಿರೂಪಿಸಿದರು.

ಕುರಿಯ ಶಾಲೆ ಮಾದರಿ ಶಾಲೆ

ಗ್ರಾಮೀಣ ಪ್ರದೇಶದಲ್ಲಿ ಇರುವ ಕುರಿಯ ಶಾಲೆಯು ಮಾದರಿ ಶಾಲೆಯಾಗಿದ್ದು, ಈ ಶಾಲೆಯನ್ನು ಇನ್ನೂ ಹೆಚ್ಚಿನ ಅಭಿವೃದ್ಧಿ ಪಡಿಸಬೇಕು. ಗ್ರಾಮೀಣ ಭಾಗದಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಕೃಪಾಂಕ ದೊರೆಯುತ್ತದೆ. ಶಾಲೆಯಲ್ಲಿ ಎಲ್ಲಾ ರೀತಿಯ ಸೌಲಭ್ಯ ಇದೆ. 

ವಿದ್ಯಾರ್ಥಿಗಳ ಬಗ್ಗೆ ಪೋಷಕರು ಹೆಚ್ಚು ಕಾಳಜಿ ವಹಿಸಕೊಳ್ಳಬೇಕು. ನನ್ನ ಸಹೋದರ ಮಾಧವ ರೈರವರ ೫೦ ನೇ ವರ್ಷದ ಪುಣ್ಯ ಸ್ಮರಣಾರ್ಥ ಬರೆಯುವ ಪುಸ್ತಕ ವನ್ನು ಕೊಡುಗೆಯಾಗಿ ನೀಡಿದ್ದೇನೆ

- ಬೂಡಿಯಾರ್ ಪುರುಷೋತ್ತಮ ರೈ

ಸದಸ್ಯರು ಗ್ರಾ.ಪಂ, ಆರ್ಯಾಪು

 Share: | | | | |


ಮಣಿಪುರದಲ್ಲಿ ಕ್ರೈಸ್ತ ಸಮುದಾಯವನ್ನು ಗುರಿಯಾಗಿಸಿ ಹಿಂಸಾಚಾರ ನಡೆಯುತ್ತಿದೆ :ಪುತ್ತೂರು ಕ್ರಿಶ್ಚಿಯನ್ಸ್ ಯೂನಿಯನ್

Posted by Vidyamaana on 2023-07-06 02:40:12 |

Share: | | | | |


ಮಣಿಪುರದಲ್ಲಿ ಕ್ರೈಸ್ತ  ಸಮುದಾಯವನ್ನು ಗುರಿಯಾಗಿಸಿ ಹಿಂಸಾಚಾರ ನಡೆಯುತ್ತಿದೆ :ಪುತ್ತೂರು ಕ್ರಿಶ್ಚಿಯನ್ಸ್ ಯೂನಿಯನ್

ಪುತ್ತೂರು : ಮಣಿಪುರದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದು ವರ್ಷವಾಗುತ್ತಲೇ ಜನಾಂಗೀಯ ಹಿಂಸಾಚಾರ ಮುಗಿಲು ಮುಟ್ಟಿದೆ. ಇಷ್ಟು ದೊಡ್ಡ ಪ್ರಮಾಣದಲ್ಲಿ ಹಿಂಸಾಚಾರ ನಡೆಯುತ್ತಿದ್ದರೂ ದೇಶದ ಪ್ರಧಾನಿಗಳು ಮೌನಕ್ಕೆ ಶರಣಾಗಿದ್ದಾರೆ.


ಅದರೇ ಇದೆ ವೇಳೆ ಕರ್ನಾಟಕ ಚುನಾವಣಾ ಸಂದರ್ಭ ರಾಜ್ಯಕ್ಕೆ ಹಲವು ಬಾರಿ ಭೇಟಿ ನೀಡಿದ ಪ್ರಧಾನಿಗಳು ಮಣಿಪುರಕ್ಕೆ ಬಾರಿಯೂ ಭೇಟಿ ನೀಡಿಲ್ಲ. ಈಶಾನ್ಯ ರಾಜ್ಯದಲ್ಲಿ ಮತ್ತೆ ಶಾಂತಿ ಸುವ್ಯಸ್ಥೆ ನೆಲೆಸುವ ನಿಟ್ಟಿನಲ್ಲಿ ಅಗತ್ಯ ಕ್ರಮವನ್ನು ತಕ್ಷಣ ಕೈಗೊಳ್ಳಬೇಕು ಎಂದು ಪುತ್ತೂರು ಕ್ರಿಶ್ಚಿಯನ್ಸ್ ಯೂನಿಯನ್ ಅಧ್ಯಕ್ಷ ಮೌರೀಸ್ ಮಸ್ಕರೇನಿಯಸ್ ಹೇಳಿದರು.ರಾಜ್ಯದಲ್ಲಿರುವ ಕ್ರೈಸ್ತರನ್ನು ಗುರಿಯಾಗಿಸಿ ದಾಳಿಗಳನ್ನು ನಡೆಸಲಾಗುತ್ತಿದ್ದೂ ಚರ್ಚ್ ಗಳಿಗೆ ಅಗಾಧ ಪ್ರಮಾಣದಲ್ಲಿ ಹಾನಿ ಮಾಡಲಾಗಿದೆ. ಮಣಿಪುರದ ಮೈತೇಯಿ ಬಂಡುಕೋರರು ಪೊಲೀಸ್‌ ಠಾಣೆಗಳಿಗೆ ದಾಳಿ ನಡೆಸಿ ಶಸ್ತ್ರಗಾರದಿಂದ 3500 ಶಸ್ತ್ರಾಸ್ತ್ರಗಳನ್ನು ಕೊಂಡೊಯ್ದ ಗಂಭೀರ ಪ್ರಕರಣ ನಡೆದಿದೆ. ಆದರೆ ಅಲ್ಲಿಗೆ ಇತ್ತೀಚೆಗೆ ಭೇಟಿ ನೀಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಆ ಬಂಡುಕೋರರ ಮೇಲೆ ನಿರ್ಧಾಕ್ಷಿಣ್ಯ ಕ್ರಮೈಗೊಳ್ಳುವುದು ಬಿಟ್ಟೂ ಶಸ್ತ್ರಾಸ್ತ್ರಗಳನ್ನು ವಾಪಾಸು ಮಾಡುವಂತೆ ಬಂಡುಕೋರರಲ್ಲಿ ಮನವಿ ಮಾಡಿದ್ದಾರೆ. ಇದರಿಂದಲೇ ಈ ಬಂಡುಕೋರರ ಹಿಂದೆ ಇರುವ ಶಕ್ತಿ ಯಾವುದು ತಿಳಿಯುತ್ತದೆ ಎಂದು ಬುಧವಾರ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.ಮಣಿಪುರದಲ್ಲಿ ಜನರು ಬೀದಿಯ ಹೆಣವಾಗುತ್ತಿದ್ದರೂ, ಮಾನವ ಹಕ್ಕು ಮತ್ತು ದೇಶದ ಕಾನೂನು ವ್ಯವಸ್ಥೆ ಮೌನವಾಗಿದೆ. ರಾಷ್ಟ್ರಪತಿಗಳು ತಕ್ಷಣ ಮಧ್ಯಪ್ರವೇಶಿಸಿ ಮಣಿಪುರದಲ್ಲಿ ಶಾಂತಿ ನೆಲೆಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು. ತಪ್ಪುತಸ್ಥರಿಗೆ ಶಿಕ್ಷೆ ವಿಧಿಸುವ ಜತೆಗೆ, ಪ್ರಾಣ ಕಳೆದುಕೊಂಡವರಿಗೆ ಹಾಗೂ ಹಾನಿಗೊಳಗಾದವರಿಗೆ ಸೂಕ್ತ ಪರಿಹಾರ


ನೀಡಬೇಕೆಂದು ಆಗ್ರಹಿಸಿದರು.ಪದಾಧಿಕಾರಿಗಳಾದ ವಲರೇಯನ್ ಡಯಾಸ್, ವಾಲ್ಟರ್ ಸೀಕ್ಟೇರ, ವಿಕ್ಟರ್ ಪೈಸ್, ಜೆರೋಮಿಯಾಸ್ ಪೈಸ್, ಕಾನ್ಯೂಟ್ ಮಸ್ಕರೇನಿಯಸ್ ಉಪಸ್ಥಿತರಿದ್ದರು

ಕೆಸರು ನೀರನಲ್ಲಿ ಮುಳುಗಿಸಿ ಸಾಯಿಸಿದಳು ತಾಯಿ

Posted by Vidyamaana on 2023-09-14 11:45:45 |

Share: | | | | |


ಕೆಸರು ನೀರನಲ್ಲಿ ಮುಳುಗಿಸಿ ಸಾಯಿಸಿದಳು ತಾಯಿ

ಮಂಜೇಶ್ವರ: ಒಂದೂವರೆ ತಿಂಗಳ ಹಸುಗೂಸನ್ನು ಮಗುವಿನ ತಾಯಿಯೇ ಕೆಸರು ನೀರಿನಲ್ಲಿ ಮುಳುಗಿಸಿ ಸಾಯಿಸಿರುವ ಹೃದಯವಿದ್ರಾವಕ ಘಟನೆಯೊಂದು ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಪಚ್ಚಂಪಾರೆ ಎಂಬಲ್ಲಿ ನಡೆದಿದೆ.


ಸತ್ಯನಾರಾಯಣ ಮತ್ತು ಸುಮಂಗಲಿ ದಂಪತಿಯ ಒಂದೂವರೆ ತಿಂಗಳ ಹೆಣ್ಣುಮಗುವೇ ಈ ರೀತಿಯಾಗಿ ಸಾವಿಗೀಡಾಗಿದ್ದು, ಕೆಲ ದಿನಗಳ ಹಿಂದೆ ತಾಯಿ ಮತ್ತು ಮಗು ನಾಪತ್ತೆಯಾಗಿದ್ದರು.


ಬಳಿಕ ಮನೆಯವರು ಹುಡುಕಲು ಪ್ರಾರಂಭಿಸಿದಾಗ, ಮನೆಯ ಸ್ವಲ್ಪ ದೂರದಲ್ಲೇ ಸುಮಂಗಲಿ ಪತ್ತೆಯಾಗಿದ್ದಾರೆ. ಆಕೆಯ ಬಳಿ ಮಗುವಿನ ಕುರಿತು ವಿಚಾರಿಸಿದಾಗ, ಮಗುವನ್ನು ಅಲ್ಲೇ ಸ್ವಲ್ಪ ದೂರದಲ್ಲಿದ್ದ ಕೆಸರು ನೀರಿನಲ್ಲಿ ಮುಳುಗಿಸಿ ಸಾಯಿಸಿರುವುದಾಗಿ ಆಕೆ ತಿಳಿಸಿದಾಗ ಎಲ್ಲರಿಗೂ ಶಾಕ್ ಆಗಿತ್ತು.


ಕೂಡಲೇ ಆಕೆ ಹೇಳಿದ ಸ್ಥಳದಲ್ಲಿಹುಡುಕಿದಾಗ ಅಲ್ಲಿ ಶಿಶು ಪತ್ತೆಯಾಗಿದ್ದು ತಕ್ಷಣವೇ ಆ ಮಗುವನ್ನು ಉಪ್ಪಳದ ಮಂಗಲ್ಪಾಡಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟು ಹೊತ್ತಿಗಾಗಲೇ ಆ ಪುಟ್ಟ ಕಂದಮ್ಮ ತನ್ನ ಉಸಿರನ್ನು ನಿಲ್ಲಿಸಿಯಾಗಿತ್ತು!


ಘಟನೆಗೆ ಸಂಬಂಧಿಸಿದಂತೆ ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಕೊಲೆಗಡುಕಿ ಮಹಿಳೆಯನನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ. ಮಹಿಳೆ ಮಾನಸಿಕ ಅಸ್ವಸ್ಥೆಯಂತೆ ವರ್ತಿಸುತ್ತಿದ್ದು, ಮಗುವನ್ನು ಕೊಲೆ ಮಾಡಲು ಬೇರಿನ್ಯಾವುದೇ ಕಾರಣವಿದೆಯೇ ಎಂಬುದರ ಕುರಿತೂ ಸಹ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಹೃದಯಾಘಾತದಿಂದ ನಿಲಿಕಾ ನಿಧನ

Posted by Vidyamaana on 2024-06-27 16:50:11 |

Share: | | | | |


ಹೃದಯಾಘಾತದಿಂದ ನಿಲಿಕಾ ನಿಧನ

ಮಡಿಕೇರಿ: ಎಂದಿನಂತೆ ಇನ್ನೇನು ತನ್ನ ಕರ್ತವ್ಯಕ್ಕೆ ಹೊರಡಬೇಕಾಗಿದ್ದ ಯುವತಿ ಹೃದಯಾಘಾತದಿಂದ ಮನೆಯಲ್ಲಿ ಮೃತಪಟ್ಟ ದಾರುಣ ಘಟನೆ ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ನೆಲಜಿ ಗ್ರಾಮದಲ್ಲಿ ನಡೆದಿದೆ.ನೆಲಜಿ ಗ್ರಾಮದ ಕಾಫಿ ಬೆಳೆಗಾರರಾದ ಪೊನ್ನಪ್ಪ ಅವರ ಮಗಳು ನಿಲಿಕಾ ಪೊನ್ನಪ್ಪ (24) ಮೃತ ಯುವತಿ.

ಪ್ರಕೃತಿ ಸೌಂದರ್ಯವನ್ನು ಸವಿಯುವ ಪ್ರವಾಸಗರೇ – ಇನ್ನೊಬ್ಬರಿಗೆ ಪ್ರಯಾಸ ನೀಡಬೇಡಿ

Posted by Vidyamaana on 2023-07-10 16:41:37 |

Share: | | | | |


ಪ್ರಕೃತಿ ಸೌಂದರ್ಯವನ್ನು ಸವಿಯುವ ಪ್ರವಾಸಗರೇ – ಇನ್ನೊಬ್ಬರಿಗೆ ಪ್ರಯಾಸ ನೀಡಬೇಡಿ

ಚಿಕ್ಕಮಗಳೂರು: ಜಿನುಗು ಮಳೆಯ ನಡುವೆಯೇ ಕಾಫಿನಾಡಿನ ಪ್ರವಾಸಿ ತಾಣಗಳತ್ತ ಪ್ರತಿನಿತ್ಯವೂ ಸಾಗರೋಪಾದಿಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಪ್ರವಾಸಿಗರು ರಸ್ತೆಗಳ ಮಧ್ಯೆ ವಾಹನಗಳನ್ನು ನಿಲ್ಲಿಸಿಕೊಂಡು ಹುಚ್ಚಾಟ ಮೆರೆಯುತ್ತಿದ್ದಾರೆ.

ಚಿಕ್ಕಮಗಳೂರು-ದಕ್ಷಿಣಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿಗರಿಗೆ ಹೇಳೋರಿಲ್ಲ-ಕೇಳೋರಿಲ್ಲ ಎಂಬಂತಾಗಿದ್ದು, ಜಲಪಾತಗಳ ಮೇಲೆ ಹತ್ತುವ ದುಸ್ಸಾಹಸಕ್ಕೂ ಪ್ರವಾಸಿಗರು ಮುಂದಾಗಿದ್ದಾರೆ. ಈ ಭಾಗದಲ್ಲಿ ಮೊದಲೇ ಕಿರಿದಾದ ರಸ್ತೆಗಳು ಇದ್ದು, ವಾಹನ ಸವಾರರಿಗೆ ಇಕ್ಕಟ್ಟು ಆದಂತಾಗಿದೆ. ಇಂತಹದ್ದರಲ್ಲೂ ಕೆಲವರು ರಸ್ತೆ ಮಧ್ಯೆಯೆ ಕಾರ್ಗಳನ್ನು ನಿಲ್ಲಿಸಿ ಪುಂಡಾಟ ಮೆರೆಯುವ ಮೂಲಕ ಇನ್ನುಳಿದ ವಾಹನ ಸವಾರರಿಗೂ ಕಿರಿಕಿರಿ ಆಗುವಂತೆ ಮಾಡುತ್ತಿದ್ದಾರೆ. ದಟ್ಟ ಮಂಜು ಕವಿದ ದಾರಿಯಲ್ಲಿ ವಾಹನ ಪಾರ್ಕಿಂಗ್ ಮಾಡಿ ಡ್ಯಾನ್ಸ್ ಮಾಡುವ ಭರದಲ್ಲಿ ಇನ್ನುಳಿದ ವಾಹನಗಳಿಗೂ ಅಡ್ಡಲಾಗಿ ನಿಲ್ಲುತ್ತಿದ್ದಾರೆ.

ಇದರಿಂದ ಅಪಾಘಾತ, ಟ್ರಾಫಿಕ್ ಜಾಮ್ಗೂ ಆಹ್ವಾನ ನೀಡಿದಂತಾಗಿದೆ. ಅಷ್ಟೇ ಅಲ್ಲದೆ ಜಲಪಾತಗಳ ಮೇಲೆ ಹತ್ತುವ ದುಸ್ಸಾಹಸಕ್ಕೂ ಕೂಡ ಕೆಲವು ಪ್ರವಾಸಿಗರು ಮುಂದಾಗುತ್ತಿದ್ದಾರೆ. ಈ ಹುಚ್ಚಾಟದಿಂದ ಬೇಸತ್ತ ಸ್ಥಳೀಯರು ಜಲಪಾತಗಳ ಬಳಿ ಪೊಲೀಸರು ಬೀಟ್ ಹಾಕುವಂತೆ ಮನವಿ ಮಾಡಿದ್ದಾರೆ.

ಗುರುಪುರ ಪೊಳಲಿ ದ್ವಾರದ ಬಳಿ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಹಲವರಿಗೆ ಗಾಯ

Posted by Vidyamaana on 2024-01-02 21:03:12 |

Share: | | | | |


ಗುರುಪುರ ಪೊಳಲಿ ದ್ವಾರದ ಬಳಿ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ; ಹಲವರಿಗೆ ಗಾಯ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರ ಎಂಬಲ್ಲಿ ಬಸ್ ಪಲ್ಟಿಯಾಗಿ ಹಲವರು ಗಾಯಗೊಂಡ ಘಟನೆ ಮಂಗಳವಾರ ಸಂಜೆ ನಡೆದಿದೆ. ಗುರುಪುರ ಕೈಕಂಬ ಪೊಳಲಿ ದ್ವಾರದ ಬಳಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಬಸ್ಸಿನಲ್ಲಿದ್ದ 20ಕ್ಕೂ ಅಧಿಕ ಮಂದಿಗೆ ಗಾಯಗಳು ಆಗಿವೆ.ನವದುರ್ಗಾ ಹೆಸರಿನ ಖಾಸಗಿ ಬಸ್ ಅಪಘಾತಕ್ಕಿಡಾದ ಬಸ್ಸು ಬಸ್ಸು ಕೈಕಂಬದಿಂದ ಪೊಳಲಿ ಮಾರ್ಗವಾಗಿ ಬಿ ಸಿ ರೋಡ್ ಕಡೆಗೆ ತೆರಳುತ್ತಿತ್ತು. ಆದರೇ ಬಸ್ಸು ಕೈಕಂಬ ಪೊಳಲಿ ದ್ವಾರದ ಬಳಿ ಬರುತ್ತಲೇ ಚಾಲಕನ ಹತೋಟಿ ಕಳಕೊಂಡು ಪಲ್ಟಿಯಾಗಿದೆ ಎನ್ನಲಾಗಿದೆ.ಅಪಘಾತವು ಬಜ್ಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಗಿದೆ. ಎಲ್ಲರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಆಪಾಯದಿಂದ ಪಾರಾಗಿದ್ದಾರೆ.

ಅಧಿಕೃತವಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್, ಧನುಷ್

Posted by Vidyamaana on 2024-04-08 21:59:35 |

Share: | | | | |


 ಅಧಿಕೃತವಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್, ಧನುಷ್

ನವದೆಹಲಿ : ನಿರ್ದೇಶಕಿ ಐಶ್ವರ್ಯಾ ರಜನಿಕಾಂತ್ ಮತ್ತು ನಟ-ನಿರ್ದೇಶಕ ಧನುಷ್ ಇತ್ತೀಚೆಗೆ ಚೆನ್ನೈ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಪರಸ್ಪರ ಒಪ್ಪಿಗೆಯಿಂದ ವಿಚ್ಛೇದನದ ಸೆಕ್ಷನ್ 13 ಬಿ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದೇವೆ ಎಂದು ದಂಪತಿಗೆ ಹತ್ತಿರದ ಮೂಲಗಳು ತಿಳಿಸಿವೆ.ಇಬ್ಬರೂ ಜನವರಿ 2022ರಲ್ಲಿ ಬೇರ್ಪಡುವ ನಿರ್ಧಾರವನ್ನ ಘೋಷಿಸಿದರು. ಆ ಸಮಯದಲ್ಲಿ, ಅವರ ಪ್ರಕಟಣೆಯು ಅವರ ಅನುಯಾಯಿಗಳಿಗೆ ಭಾರಿ ಆಘಾತವನ್ನುಂಟು ಮಾಡಿತು.

Recent News


Leave a Comment: