ರೌಡಿಯ ಹತ್ಯೆಗೆ ಪ್ರೇಮದ ಬಲೆ: ನಂಬಿಸಿ ಕೊಂದ ಸುಂದರಿ ಮಾಡೆಲ್ ಅಂದರ್‌

ಸುದ್ದಿಗಳು News

Posted by vidyamaana on 2023-09-19 15:27:03 |

Share: | | | | |


ರೌಡಿಯ ಹತ್ಯೆಗೆ ಪ್ರೇಮದ ಬಲೆ: ನಂಬಿಸಿ ಕೊಂದ ಸುಂದರಿ ಮಾಡೆಲ್ ಅಂದರ್‌

ಚೆನ್ನೈ: ಯುವ ರೌಡಿಯೊರ್ವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಪೊಲೀಸರು ಮಿಜೋರಾಂ ಮೂಲದ ಯುವತಿ ಹಾಗೂ ಆಕೆಯ ಗೆಳೆಯನನ್ನು ಬಂಧಿಸಿದ್ದು, ಈ ಕೊಲೆಯ ಹಿಂದೆ ರೋಚಕ ಕಹಾನಿ ಇದೆ. ಚೆನ್ನೈನ 24 ವರ್ಷದ ರೌಡಿ ಸತ್ಯ (Rowdy Satya) ಎಂಬಾತನನ್ನು ಸೆಪ್ಟೆಂಬರ್ 10 ರಂದು ರಾತ್ರಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು.ಚೆನ್ನೈನ ಪುಝಲ್ ಕವಂಕರೈ 15ನೇ ಬೀದಿಯ ನಿವಾಸಿಯಾಗಿದ್ದ ರೌಡಿ ಸತ್ಯನನ್ನು ಚೆನ್ನೈನ ಎಗ್ಮೋರ್‌ನಲ್ಲಿ (Egmore) ಮಾರಾಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈತನ ಹತ್ಯೆಯ ಆರೋಪಿಗಳ ಪತ್ತೆಗೆ ಎಗ್ಮೋರ್ ಇನ್ಸ್ ಪೆಕ್ಟರ್ ತಿರುಮಲ್ ನೇತೃತ್ವದಲ್ಲಿ ವಿಶೇಷ ಪಡೆ ರಚಿಸಲಾಗಿತ್ತು.


ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ವರನ್ನು ಬಂಧಿಸಿ ವಿಚಾರಣೆ ನಡೆದ ಪೊಲೀಸರಿಗೆ ಈ ಪ್ರಕರಣಕ್ಕೂ ಮಿಜೋರಾಂ ಮೂಲದ ಮಾಡೆಲ್‌ (Mizoram model) ಒಬ್ಬಳಿಗೂ ಲಿಂಕ್ ಇರುವ ವಿಚಾರ ತಿಳಿದು ಬಂದಿತು. ಈ ವಿಚಾರ ಬೆನ್ನತಿದ್ದ ಪೊಲೀಸರು ಮಿಜೋರಾಂ ಮೂಲದ ಮಾಡೆಲ್ ಜ್ಯೂಲಿ ಹಾಗೂ ಆತನ ಬಾಯ್‌ಫ್ರೆಂಡ್ ಕಿಶೋರ್ ಎಂಬಾತನನ್ನು ಬಂಧಿಸಿದ್ದು, ಅಲ್ಲೊಂದು ಸಿನಿಮಾವನ್ನು ಮೀರಿಸುವ ರೋಚಕ ಕ್ರೈಂ ಪ್ರೇಮ ಕಹಾನಿ ಬೆಳಕಿಗೆ ಬಂದಿದೆ. ಅಲ್ಲದೇ ಸೇಡು ತೀರಿಸಿಕೊಳ್ಳುವ ಸಲುವಾಗಿ ಈ ಕೊಲೆ ನಡೆದಿದೆ ಎಂದು ತನಿಖೆಯಿಂದ ತಿಳಿದು ಬಂದಿದೆ. 2016ರಲ್ಲಿ ಶಿವರಾಜ್ ಎಂಬ ರೌಡಿಯನ್ನು ಚೆನ್ನೈನ (Chennai) ಬೇಸಿನ್‌ ಬ್ರಿಡ್ಜ್‌ನ (Chennai Basin Bridge) ಬಳಿ ಹತ್ಯೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಶಿವರಾಜ್‌ ಮಿತ್ರರು ತಮ್ಮ ಆಪ್ತನ ಕೊಲೆಗೆ ಸೇಡು ತೀರಿಸಿಕೊಳ್ಳಲು ಮುಂದಾಗಿದ್ದರು. ಶಿವರಾಜ್ (Sivaraj) ಕೊಲೆಯಲ್ಲಿ ಭಾಗಿಯಾಗಿದ್ದ ವಕೀಲ ಅಖಿಲನ್ ಹಾಗೂ ನಾಯಿ ರಮೇಶ್‌ನನ್ನು ಈಗಾಗಲೇ ಮುಗಿಸಿದ್ದ ಈ ತಂಡದ ರೌಡಿ ಸತ್ಯ ಜೈಲಿನಿಂದ ಬಿಡುಗಡೆಯಾಗುವುದಕ್ಕೆ ಕಾಯುತ್ತಿತ್ತು. ಆತ ಬಿಡುಗಡೆಯಾಗುವುದು ತಿಳಿಯುತ್ತಿದ್ದಂತೆ ಈ ಶಿವರಾಜ್‌ ತಂಡ ಆತನನ್ನು ಮುಗಿಸಲು ಪ್ರೇಮದ ಜಾಲವನ್ನು ಹೆಣೆದಿತ್ತು. ರೌಡಿಗಳು ಹೆಣೆದ ಪ್ರೇಮದ ಜಾಲಕ್ಕೆ ಪ್ರೇಯಸಿಯಾದ ಜೂಲಿ


ರೌಡಿ ಸತ್ಯನ ಬಲೆಗೆ ಕೆಡವಲು ಪ್ರೇಮ ಜಾಲ ಹೆಣೆದ ವಿರೋಧಿ ಶಿವರಾಜ್ ಬಣ ಇದಕ್ಕೆ ಮೀಜೋರಾಂ ಮೂಲದ ಜೂಲಿಯನ್ನು ಬಳಸಿಕೊಂಡಿತ್ತು. ಶಿವರಾಜ್ ಬಣದ ಅಣತಿಯಂತೆ ಪ್ರೀತಿಯ ನಾಟಕವಾಡಿ ರೌಡಿ ಸತ್ಯನನ್ನು ಬಲೆಗೆ ಕೆಡವಿದ ಜ್ಯೂಲಿ ಆತನೊಂದಿಗೆ ನಿರಂತರ ಸಂಪರ್ಕದಲ್ಲಿದ್ದಳು. ಫೋನ್ ಹಾಗೂ ಇನ್ಸ್ಟಾಗ್ರಾಮ್‌ನಲ್ಲಿಯೂ ಆತನೊಂದಿಗೆ ಟಚ್‌ನಲ್ಲಿದ್ದ ಜ್ಯೂಲಿ ಆತನನ್ನು ಮನಸಾರೆ ಪ್ರೀತಿಸುವುದಾಗಿ ನಟಿಸುತ್ತಿದ್ದಳು. ಸುಂದರವಾದ ಹೆಣ್ಣೊಬ್ಬಳು ಬಂದು ಪ್ರೇಮಿಸುವೆ ಎಂದು ಹಿಂದೆ ಬಿದ್ದರೆ ಯಾವ ಗಂಡು ತಾನೇ ಬೇಡ ಎನ್ನುತ್ತಾನೆ. ಅದೇ ರೀತಿ ಇಲ್ಲಿ ಜ್ಯೂಲಿಯ ಪ್ರೇಮ ನಿವೇದನೆಗೆ ಕರಗಿದ್ದ ಸತ್ಯ, ಆಕೆ ತನ್ನನ್ನು ಪ್ರೀತಿಸುತ್ತಾಳೆ ಎಂದು ಬಲವಾಗಿ ನಂಬಿದ್ದ. ಇದೇ ಆತ ಮಾಡಿದ ತಪ್ಪು..ಕಳೆದ ಸೆಪ್ಟೆಂಬರ್ 8 ರಂದು ಸತ್ಯನಿಂದ ಕೊಲೆಯಾಗಿದ್ದ ಶಿವರಾಜ್‌ ಹತ್ಯೆಯಾದ ದಿನವಾಗಿದ್ದು, ಅಂದೇ ಶಿವರಾಜ್ ಆಪ್ತರು ಸತ್ಯನ ಹತ್ಯೆಗೆ ಜಾಲ ಹೆಣೆದಿದ್ದರು. ಅಂದು ಜ್ಯೂಲಿ ಸತ್ಯಗೆ ಕರೆ ಮಾಡಿ ಮಾತನಾಡಿದ್ದು, ಇಗ್ಮೋರೆಗೆ ಬರುವಂತೆ ಮನವಿ ಮಾಡಿದ್ದಳು. ಆದರೆ ಸೆಪ್ಟೆಂಬರ್‌ 8 ರಂದು ಬಾರದ ಆತ ಜ್ಯೂಲಿ ಮನವಿಯಂತೆ ಸೆಪ್ಟೆಂಬರ್ 10 ರ ರಾತ್ರಿ ಜ್ಯೂಲಿಯನ್ನು ನೋಡಲು ಇಗ್ಮೋರೆಗೆ ಆಗಮಿಸಿದ್ದ. ಅದು ಕೇವಲ ಫೋನ್‌ನಲ್ಲಿ ಮಾತ್ರ ಸಂಪರ್ಕದಲ್ಲಿದ್ದ ಜ್ಯೂಲಿ ಹಾಗೂ ರೌಡಿ ಸತ್ಯನ ಮೊದಲ ಭೇಟಿ ಅದಾಗಿತ್ತು. ಇದೇ ವೇಳೆ ಸತ್ಯಗೆ ಸ್ಕೆಚ್ ಹಾಕಿದ ಶಿವರಾಜ್ ಬಣ ಅವನ್ನು ಕಟ್ಟಿ ಹಾಕಿ ಬರ್ಬರವಾಗಿ ಕೊಲೆ ಮಾಡಿದ್ದರು. ಸತ್ಯನನ್ನು ಪ್ರೀತಿಸುವ ಕಪಟ ನಾಟಕವಾಡಿ ಆತನ ಹತ್ಯೆಗೆ ಸಹಕರಿಸಿದ ಜ್ಯೂಲಿಯನ್ನು ಹಾಗೂ ಆಕೆಯ ಬಾಯ್‌ಫ್ರೆಂಡ್ ಕಿಶೋರ್ ಸೇರಿದಂತೆ ನಾಲ್ವರನ್ನು ಬಂಧಿಸಿದ್ದು, ಈ ಪ್ರಕರಣದಲ್ಲಿ ಇದುವರೆಗೆ ಒಟ್ಟು 9 ಜನರ ಬಂಧನವಾಗಿದೆ.

 Share: | | | | |


ಶಿವಮೊಗ್ಗ ಗಲಭೆ ಪೀಡಿತ ಪ್ರದೇಶಕ್ಕೆ ಬಿಜೆಪಿ ಸತ್ಯಶೋಧನಾ ತಂಡ ಭೇಟಿ: ನಳಿನ್ ಕುಮಾರ್

Posted by Vidyamaana on 2023-10-04 20:58:11 |

Share: | | | | |


ಶಿವಮೊಗ್ಗ  ಗಲಭೆ ಪೀಡಿತ ಪ್ರದೇಶಕ್ಕೆ ಬಿಜೆಪಿ ಸತ್ಯಶೋಧನಾ ತಂಡ ಭೇಟಿ: ನಳಿನ್ ಕುಮಾರ್

ಬೆಂಗಳೂರು: ಶಿವಮೊಗ್ಗ ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲು ಬಿಜೆಪಿಯು ಪಕ್ಷದ ಹಿರಿಯ ಮುಖಂಡರನ್ನು ಒಳಗೊಂಡ ಸತ್ಯಶೋಧನಾ ಸಮಿತಿಯನ್ನು ರಚಿಸಿದೆ. ಗುರುವಾರ ಶಿವಮೊಗ್ಗದ ಹಿಂಸಾಚಾರ ಪೀಡಿತ ಪ್ರದೇಶಕ್ಕೆ ತಂಡ ಭೇಟಿ ನೀಡಲಿದೆ.


ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದ ಸತ್ಯಶೋಧನಾ ತಂಡದಲ್ಲಿ ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್.ಈಶ್ವರಪ್ಪ, ಸಿ.ಎನ್.ಅಶ್ವಥ್ ನಾರಾಯಣ್, ಮಾಜಿ ಸಚಿವ ಆರಗ ಜನೇಂದ್ರ, ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಎಂ.ಎಲ್.ಸಿ ಎನ್. ರವಿಕುಮಾರ್, ಶಾಸಕ ಚನ್ನಬಸಪ್ಪ, ಎಂಎಲ್ಸಿಗಳಾದ ಎಸ್.ರುದ್ರೇಗೌಡ, ಡಿ ಎಸ್ ಅರುಣ್ ಮತ್ತು ಭಾರತಿ ಶೆಟ್ಟಿ ತಂಡದಲ್ಲಿದ್ದಾರೆ

ಪತಿಯ ಕೊಲೆಗೆ 10 ಸಾವಿರ ರೂಪಾಯಿ ಸುಪಾರಿ ಕೊಟ್ಟ ಪತ್ನಿ

Posted by Vidyamaana on 2023-10-06 07:03:47 |

Share: | | | | |


ಪತಿಯ ಕೊಲೆಗೆ 10 ಸಾವಿರ ರೂಪಾಯಿ ಸುಪಾರಿ ಕೊಟ್ಟ ಪತ್ನಿ

ಕಾರವಾರ: ಗಂಡನ ಸ್ನೇಹಿತನೊಂದಿಗೆ ಸಲುಗೆ ಬೆಳೆಸಿಕೊಂಡಿದ್ದ ಮಹಿಳೆಯೊಬ್ಬಳು ಕೊನೆಗೂ ಅಂದರ್​ ಆಗಿದ್ದಾಳೆ. ಪ್ರಿಯಕರನಿಗೆ ಕೇವಲ 10 ಸಾವಿರ ಸುಪಾರಿ ಕೊಟ್ಟು ತನ್ನ ಗಂಡನನ್ನು ಕುಮಟಾದ ನಿರ್ಜನ ಪ್ರದೇಶದಲ್ಲಿ ಕೊಲೆ ಮಾಡಿಸಿರುವ ಪ್ರಕರಣವನ್ನು ಕುಮಟಾ ಪೊಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.


ಸೆ.30 ರಂದು ಕುಮಟಾ ತಾಲೂಕಿನ ದೇವಿಮನೆ ಘಟ್ಟದ ದೇವಸ್ಥಾನವೊಂದರ ಹಿಂಬದಿ ಪ್ರದೇಶದಲ್ಲಿ ಅಪರಿಚಿತ ಶವವೊಂದು ಪತ್ತೆಯಾದಾಗ, ಕುಮಟಾ ಪೊಲೀಸರು ತೆರಳಿ ಪರಿಶೀಲಿಸಿದ್ದರು. ಸುಮಾರು 35 ರಿಂದ 40 ವರ್ಷದ ಪುರುಷನನ್ನು ಯಾರೋ ಕೊಲೆ ಮಾಡಿ ದೇಹವನ್ನು ಎಸೆದು ಹೋಗಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಸಿಕ್ಕಿತ್ತು.


ಇನ್ನು ಶವದ ಗುರುತಿನ ಪತ್ತೆಗೆ ಕುಮಟಾ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ಪತ್ತೆಗೆ ಮುಂದಾದಾಗ ಯಾವ ಮಾಹಿತಿ ಸಿಕ್ಕಿರಲಿಲ್ಲ. ಆದರೆ ಮೃತ ವ್ಯಕ್ತಿಯ ಕಿಸೆಯಲ್ಲಿ ಮಂಗಳೂರಿನಿಂದ ಶಿರಸಿಗೆ ಕೆಎಸ್ಆರ್ ಟಿಸಿ ಬಸ್​ನಲ್ಲಿ ಪ್ರಯಾಣಿಸಿದ ಟಿಕೆಟ್​ದಿಂದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ನೆರವಾಯಿತು.


ಕೊನೆಗೆ ಕುಮಟಾ ಪೊಲೀಸರು ಬೇರೆ ಜಿಲ್ಲೆಯಲ್ಲಿನ ನಾಪತ್ತೆ ಪ್ರಕರಣಗಳ ಪತ್ತೆಗೆ ಮುಂದಾದಾಗ ಬಾಗಲಕೋಟೆ ಜಿಲ್ಲೆಯ ಹೊಸೂರು ಗ್ರಾಮದ ಬಶೀರಸಾಬ್ ಎಂಬ ವ್ಯಕ್ತಿಯು ನಾಪತ್ತೆಯಾಗಿದ್ದು, ಆತನ ಶವ ಪತ್ತೆಯಾಗಿರುವುದು ಗೊತ್ತಾಗಿತ್ತು. ಪೊಲೀಸರು ಮೃತ ಬಶೀರಸಾಬ್​ನ ಊರಿನಲ್ಲಿ ವಿಚಾರಣೆ ಮಾಡಲು ಮುಂದಾದಾಗ ಆತನಿಗೂ ಮತ್ತು ಆತನ ಪತ್ನಿಗೂ ಆಗಾಗ್ಗೆ ಗಲಾಟೆಯಾಗುತ್ತಿರುವ ಬಗ್ಗೆ ಮಾಹಿತಿ ಸಿಕ್ಕಿತ್ತು


ಈ ಬಗ್ಗೆ ಮೃತ ಬಶೀರಸಾಬ್ ಪತ್ನಿ ರಾಜಮಾಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಹಿಂದೆ ಆಕೆ ಇರುವುದು ಶಂಕೆ ವ್ಯಕ್ತವಾಗಿತ್ತು. ತನ್ನ ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರ ಪರಶುರಾಮ್, ಆತನ ಸ್ನೇಹಿತ ರವಿ ಹಾಗೂ ಆದೇಶ ಕುಂಬಾರ ಸೇರಿಕೊಂಡು ಕೊಲೆ ಮಾಡಿಸಿರುವ ವಿಷಯವನ್ನು ಬಾಯ್ಬಿಟ್ಟಿದ್ದಳು. ನಾಲ್ವರು ಆರೋಪಿಗಳನ್ನು ಬಂಧಿಸಿದ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿ ಜೈಲಿಗೆ ಕಳುಹಿಸಿದ್ದಾರೆ.


ಆರೋಪಿ ರಾಜಮಾಗೆ ಇಬ್ಬರು ಮಕ್ಕಳಿದ್ದು ಪತಿ ಬಶೀರಸಾಬ್ ಜೊತೆ ಚೆನ್ನಾಗಿ ಸಂಸಾರ ನಡೆಸಿಕೊಂಡು ಹೋಗುತ್ತಿದ್ದಳು. ಬಶೀರಸಾಬ್ ಕುರಿ ಕಾಯುವ ಕೆಲಸವನ್ನು ಮಾಡುತ್ತಿದ್ದ. ಕೆಲ ದಿನಗಳ ಹಿಂದೆ ಬಾದಾಮಿ ತಾಲೂಕಿನಲ್ಲಿ ನಡೆದ ಜಾತ್ರೆಯೊಂದರಲ್ಲಿ ಕುರಿ ಮಾರಾಟ ಮಾಡಲು ಬಶೀರಸಾಬ್ ಸಹೋದರ ಖಾಸಿಂ ತೆರಳಿದ್ದ ವೇಳೆ ಆರೋಪಿ ಪರಶುರಾಮನ ಪರಿಚಯ ಆಗಿತ್ತು.


ಖಾಸಿಂ ಪರಿಚಯದ ಮೇಲೆ ಆರೋಪಿ ಪರಶುರಾಮ್ ಬಶೀರಸಾಬ್ ಮನೆಗೆ ಬಂದಾಗ ಆತನ ಹೆಂಡತಿ ರಾಜಮಾಳನ್ನು ಪರಿಚಯ ಮಾಡಿಕೊಂಡಿದ್ದ. ರಾಜಮಾ ಹಾಗೂ ಪರಶುರಾಮ್ ಇಬ್ಬರದ್ದು ಒಂದೇ ಊರಾಗಿದ್ದರಿಂದ ಪರಿಚಯ ನಂತರ ಪ್ರೇಮಕ್ಕೆ ತಿರುಗಿತ್ತು.


ಇಬ್ಬರ ನಡುವೆ ಅನೈತಿಕ ಸಂಬಂಧ ಸಹ ಪ್ರಾರಂಭವಾಗಿ ಈ ವಿಷಯ ಪತಿ ಬಶೀರಸಾಬ್ ಗೆ ಸಹ ತಿಳಿದಿತ್ತು. ಬಶೀರ್ ಸಾಬ್ ಹೆಂಡತಿ ರಾಜಮಾ ಜೊತೆ ಗಲಾಟೆ ಮಾಡಿಕೊಳ್ಳಲು ಪ್ರಾರಂಭ ಮಾಡಿದ್ದನು. ಆತನ ಪತ್ನಿ ರಾಜಮಾ ತನ್ನ ತವರು ಮನೆಗೆ ಬಂದು ಉಳಿದಿದ್ದಳು. ಸೆ.26ರಂದು ಪ್ರಿಯಕರ ಪರಶುರಾಮನನ್ನು ಕರೆಯಿಸಿಕೊಂಡಿದ್ದ ರಾಜಮಾ, 10 ಸಾವಿರ ರೂಪಾಯಿ ಹಣವನ್ನು ನೀಡಿ ತಮ್ಮಿಬ್ಬರ ಸಂಬಂಧಕ್ಕೆ ಅಡ್ಡಿಯಾಗಿರುವ ಪತಿಯನ್ನು ಕೊಲೆ ಮಾಡುವಂತೆ ಸುಪಾರಿ ನೀಡಿದ್ದಳು.


ಪರಶುರಾಮ್ ಬಶೀರಸಾಬ್​ನನ್ನು ಪ್ರವಾಸಕ್ಕೆಂದು ತನ್ನ ಸ್ನೇಹಿತ ರವಿ ಮತ್ತು ಆದೇಶ ಎನ್ನುವವರ ಜೊತೆ ಮಂಗಳೂರಿಗೆ ಕರೆದುಕೊಂಡು ಬಂದಿದ್ದ. ಸೆ.29ರಂದು ಮಂಗಳೂರು ಪ್ರವಾಸ ಮುಗಿಸಿ ವಾಪಸ್ ಬರುವಾಗ ದೇವಿಮನೆ ಘಟ್ಟದಲ್ಲಿ ಬಸ್​​ನಿಂದ ಇಳಿದಿದ್ದರು. ದೇವಸ್ಥಾನದ ಹಿಂದೆ ಕುಡಿಯಲು ನಾಲ್ವರು ಕುಳಿತಿದ್ದು ಬಶೀರಸಾಬ್​ನಿಗೆ ಕುಡಿಸಿದ ನಂತರ ಉಳಿದ ಪರಶುರಾಮ್, ರವಿ ಹಾಗೂ ಆದೇಶ ಮೂರು ಜನ ಸೇರಿ ಬಶೀರಸಾಬ್ ತಲೆಗೆ ಕಟ್ಟಿಗೆಯಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದರು ಎಂದು ಅಪರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಟಿ ಜಯಕುಮಾರ್ ಮಾಹಿತಿ ನೀಡಿದ್ದಾರೆ.


ಕುಮಟಾ ಪೊಲೀಸ್​ ಠಾಣೆ ಸಿಪಿಐ ತಿಮ್ಮಪ್ಪ ನಾಯ್ಕ, ಪಿಎಸ್​​​ಐ ನವೀನ್ ನಾಯ್ಕ ಹಾಗೂ ಸಂಪತ್ ನೇತೃತ್ವದಲ್ಲಿ ಪೊಲೀಸ​ರ ತಂಡ ಕೆಲವೇ ದಿನದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಯಿತು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಪ್ರಶಂಸೆ ವ್ಯಕ್ತಪಡಿಸಿದ್ದಾರೆ

ರಾಜ್ಯದಲ್ಲಿ ತಾಜಾ ಬಿಯರ್ ಪೂರೈಕೆಗೆ ರಾಜ್ಯ ಸರಕಾರ ಚಿಂತನೆ

Posted by Vidyamaana on 2023-09-14 16:04:30 |

Share: | | | | |


ರಾಜ್ಯದಲ್ಲಿ ತಾಜಾ ಬಿಯರ್ ಪೂರೈಕೆಗೆ ರಾಜ್ಯ ಸರಕಾರ ಚಿಂತನೆ

ಬೆಂಗಳೂರು: ಬಿಯರ್ ಪ್ರಿಯರಿಗೆ ಇದು ಸಿಹಿಸುದ್ದಿಆದಾಯವನ್ನು ಹೆಚ್ಚಿಸಲು ಮತ್ತು ಟ್ಯಾಪ್ (ಡ್ರಾಫ್ಟ್) ಬಿಯರ್ಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸುವ ಕ್ರಮದಲ್ಲಿ, ಚಿಲ್ಲರೆ ಮಾರಾಟದ ಬಿಯರ್ (RVB) ಮಳಿಗೆಗಳಿಗೆ ಹೊಸ ಸ್ವತಂತ್ರ ಅಥವಾ ಸ್ಟ್ಯಾಂಡ್ ಅಲೋನ್ ಪರವಾನಗಿಗಳನ್ನು ನೀಡುವ ಕುರಿತು ಸರ್ಕಾರವು ಚಿಂತನೆ ಮಾಡುತ್ತಿದೆ.ಆದರೆ, ಅದರ ಬಗ್ಗೆ ಯಾವುದೇ ಅಧಿಕೃತ ದೃಢೀಕರಣ ಸಿಕ್ಕಿಲ್ಲ. ಡ್ರಾಫ್ಟ್, ಅಥವಾ ಡ್ರಾಫ್ಟ್ ಬಿಯರ್ ಟ್ಯಾಪ್ನಿಂದ ನೇರವಾಗಿ ಗ್ರಾಹಕರಿಗೆ ನೀಡಲಾಗ್ತದೆ.

ಬಾಟಲ್ ಬಿಯರ್ಗೆ ಹೋಲಿಸಿದರೆ ಇದು ತಾಜಾ ಆಗಿದ್ದು, ಗರಿಗರಿಯಾದ ರುಚಿ ಮತ್ತು ಆಹ್ಲಾದಕರ ನೊರೆಯನ್ನು ಹೊಂದಿದೆ. ಈಗಿನಂತೆ, ಆರ್ ವಿಬಿಯನ್ನು ಕ್ಲಬ್ಗಳು (CL4), ಹೋಟೆಲ್ಗಳು ಮತ್ತು ಬೋರ್ಡಿಂಗ್ ಲಾಡ್ಜ್ಗಳು (CL7), ಬಾರ್- ರೆಸ್ಟೋರೆಂಟ್ಗಳು (CL9) ಮತ್ತು ಸ್ಟಾರ್ ಹೋಟೆಲ್ಗಳು (CL-6A) ಗೆ ಲಗತ್ತಿಸಲಾದ ಪರವಾನಗಿಯಾಗಿ ನೀಡಲಾಗುತ್ತದೆ.

ಆರ್ ವಿಬಿಗಾಗಿ ಅಬಕಾರಿ ಪರವಾನಗಿ ಶುಲ್ಕವು 15,000 ರೂಪಾಯಿ ಆಗಿದೆ, ಇದನ್ನು ವಾರ್ಷಿಕವಾಗಿ ಮುಖ್ಯ ಪರವಾನಗಿ ಶುಲ್ಕದೊಂದಿಗೆ ಪರವಾನಗಿದಾರರು ಹೆಚ್ಚುವರಿಯಾಗಿ ಪಾವತಿಸಬೇಕಾಗುತ್ತದೆ. ಪ್ರತಿಯೊಂದು ಪರವಾನಿಗೆ ವರ್ಗಗಳಿಗೆ ಮಳಿಗೆಗಳ ಸ್ಥಳವನ್ನು ಅವಲಂಬಿಸಿ ಪರವಾನಗಿ ಶುಲ್ಕವು ವಿಭಿನ್ನವಾಗಿದೆ. ನಗರ ಪಾಲಿಕೆ ಮಿತಿಯಲ್ಲಿರುವವರು ಅತ್ಯಂತ ದುಬಾರಿಯಾಗಿದೆ. ಸ್ವತಂತ್ರ ಆರ್ ವಿಬಿಗಳಿಗೆ ಪರವಾನಗಿಗಳನ್ನು ನೀಡುವ ಅಭ್ಯಾಸವು ಮೊದಲು ಪ್ರಚಲಿತವಾಗಿದ್ದು, ದಶಕದ ಹಿಂದೆ ನಿಲ್ಲಿಸಲಾಯಿತು.

ಕರ್ನಾಟಕದಲ್ಲಿರುವ 733 ಆರ್ ವಿಬಿ ಪರವಾನಗಿಗಳಲ್ಲಿ 64 ಮಾತ್ರ ಸ್ವತಂತ್ರ ಮಳಿಗೆಗಳಾಗಿವೆ. ಅವುಗಳಲ್ಲಿ ಹೆಚ್ಚಿನವು ಬೆಂಗಳೂರಿನಲ್ಲಿವೆ. “ಬಿಯರ್ ಕುಡಿಯುವವರಲ್ಲಿ ಕೆಗ್ ಅಥವಾ ಟ್ಯಾಪ್ ಬಿಯರ್ಗೆ ದೊಡ್ಡ ಬೇಡಿಕೆಯಿದೆ. ಬೆಂಗಳೂರು, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಮೈಸೂರು, ಕಲಬುರಗಿ, ಶಿವಮೊಗ್ಗ, ತುಮಕೂರು ಮತ್ತು ವಿಜಯಪುರ -- ರಾಜ್ಯದ 11 ನಗರ ಪಾಲಿಕೆಗಳಲ್ಲಿ ಸ್ವತಂತ್ರ, ವಿಶಿಷ್ಟ ಆರ್ವಿಬಿ ಮಳಿಗೆಗಳಿಗೆ ಪರವಾನಗಿ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ.

ವಿಷಯದ ಬಗ್ಗೆ ಸಾರ್ವಜನಿಕ ಅಭಿಪ್ರಾಯ ಚರ್ಚೆಯು ಆರಂಭಿಕ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿವೆ. ಹೊಸ ಸ್ವತಂತ್ರ ಆರ್ ವಿಬಿಗಾಗಿ ಪರವಾನಗಿ ಶುಲ್ಕವು ವಾರ್ಷಿಕವಾಗಿ ಸುಮಾರು 2 ಲಕ್ಷ ರೂಪಾಯಿಗಳಾಗಿರುತ್ತದೆ. ಆರ್ ವಿಬಿಯನ್ನು ಸ್ಥಾಪಿಸಲು ಷರತ್ತುಗಳಿವೆ. ಜನರಿಂದ ಪ್ರತಿಕ್ರಿಯೆಯನ್ನು ಪಡೆಯಲು ಸರ್ಕಾರವು ಸಾರ್ವಜನಿಕ ಸೂಚನೆಯನ್ನು ನೀಡುತ್ತದೆ.

ಸೂಕ್ತ ಪ್ರಕ್ರಿಯೆಯ ನಂತರವೇ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಬೆಂಗಳೂರು, ಭಾರತದ ಅತಿದೊಡ್ಡ ಟ್ಯಾಪ್ ಬಿಯರ್ ಮಾರುಕಟ್ಟೆ: ಉದ್ಯಮದ ಮೂಲಗಳ ಪ್ರಕಾರ, ಬೆಂಗಳೂರು ಟ್ಯಾಪ್ ಬಿಯರ್ಗೆ ಭಾರತದ ಅತಿದೊಡ್ಡ ಮಾರುಕಟ್ಟೆಯಾಗಿದೆ, ಇದರಲ್ಲಿ ಕ್ರಾಫ್ಟ್ ಬಿಯರ್ ನೀಡುವ ಮೈಕ್ರೋಬ್ರೂವರಿಗಳು ಸೇರಿವೆ. ಬೆಂಗಳೂರಿನಲ್ಲಿ 65 ಮೈಕ್ರೋಬ್ರೂವರಿಗಳಿವೆ, ಕೆಲವು ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಮುಚ್ಚಲ್ಪಟ್ಟವು. ನಗರವೊಂದರಲ್ಲೇ ಈಗ ಸುಮಾರು 35 ಹೊಸ ಮೈಕ್ರೋಬ್ರೂವರಿಗಳು ಕಾರ್ಯನಿರ್ವಹಣೆ ಆರಂಭ ಹಂತದಲ್ಲಿವೆ ಎಂದು ಆಹಾರ ಮತ್ತು ಪಾನೀಯ (F & ಬB) ಉದ್ಯಮದ ಮೂಲಗಳು ತಿಳಿಸಿವೆ. ಸದ್ಯಕ್ಕೆ, ಡ್ರಾಫ್ಟ್ ಬಿಯರ್ ವಿಭಾಗದಲ್ಲಿ ಕಿಂಗ್ಫಿಶರ್, ಬಡ್ವೈಸರ್, ಬಿರಾ, ಗೀಸ್ಟ್ ಮತ್ತು ಟಾಯ್ಟ್, ತಮ್ಮ ಸ್ವಂತ ಕ್ರಾಫ್ಟ್ ಬಿಯರ್ ಅನ್ನು ತಯಾರಿಸುವ ಮೈಕ್ರೋಬ್ರೂವರಿಗಳನ್ನು ಹೊಂದಿವ. 16 ರೀತಿಯ ಟ್ಯಾಪ್ ಬಿಯರ್ಗಳು ಲಭ್ಯವಿದ್ದು, ದಿನದಿಂದ ದಿನಕ್ಕೆ ಬೆಳೆಯುತ್ತಿವೆ ಎಂದರು.

ಸುಳ್ಯ : ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಪಕ್ಷದ ಚಟುವಟಿಕೆ ಸ್ಥಗಿತಗೊಳಿಸಲು ನಿರ್ಧಾರ

Posted by Vidyamaana on 2024-02-04 18:30:52 |

Share: | | | | |


ಸುಳ್ಯ : ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರ ಸಭೆ ಪಕ್ಷದ ಚಟುವಟಿಕೆ ಸ್ಥಗಿತಗೊಳಿಸಲು ನಿರ್ಧಾರ

ಸುಳ್ಯ :ಬಿಜೆಪಿ ಮಂಡಲ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ವೆಂಕಟ್ ವಳಲಂಬೆ ಅವರನ್ನು ಅಧ್ಯಕ್ಷರಾಗಿ ನೇಮಕ ಮಾಡಿರುವ ಹಿನ್ನಲೆಯಲ್ಲಿ ಹಾಲಿ ಇರುವ ಮಂಡಲ ಸಮಿತಿ ಹಾಗೂ ಕೋರ್ ಕಮಿಟಿಯಲ್ಲಿ ಅಸಮಾಧಾನ ಸ್ಪೋಟಗೊಂಡಿದ್ದು ಪಕ್ಷದ ಪ್ರಮುಖರು ಸಭೆ ನಡೆಸಿದ್ದಾರೆ.ಕೋರ್ ಕಮಿಟಿ ಶಿಫಾರಸ್ಸು ಮಾಡಿದವರನ್ನು ಅಧ್ಯಕ್ಷರನ್ನಾಗಿ ಮಾಡದಿರುವುದು ಸುಳ್ಯದ ಪ್ರಮುಖರ ಅಸಮಾಧಾನಕ್ಕೆ ಕಾರಣವಾಗಿದ್ದು ಇಂದು ಕ್ಷೇತ್ರದ ಬಿಜೆಪಿ ಪ್ರಮುಖರ ಸಭೆ ಬಿಜೆಪಿ ಮಂಡಲ ಸಮಿತಿ ಕಚೇರಿಯಲ್ಲಿ ನಡೆಯಿತು. ಸಭೆಯಲ್ಲಿ ಕ್ಷೇತ್ರದ ಪ್ರಮುಖರು, ವಿವಿಧ ಸಮಿತಿಗಳ ಪದಾಧಿಕಾರಿಗಳು ಭಾಗವಹಿಸಿದ್ದರು.ಮಂಡಲ ಸಮಿತಿಯಿಂದ ಅಧ್ಯಕ್ಷ ಸ್ಥಾನಕ್ಕೆ ವಿನಯ ಮುಳುಗಾಡು ಅವರ ಹೆಸರನ್ನು ಜಿಲ್ಲಾ ಸಮಿತಿಗೆ ಕಳುಹಿಸಲಾಗಿತ್ತು. ಆದರೆ ಪಟ್ಟಿಯಲ್ಲಿ ಇಲ್ಲದ ವೆಂಕಟ್ ವಳಲಂಬೆಯವರನ್ನು ಅಧ್ಯಕ್ಷರನ್ನಾಗಿ ಮಾಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಬಿಜೆಪಿ ಪಕ್ಷದಲ್ಲಿ ತಲೆದೋರಿರುವ ಭಿನ್ನಮತ ವಿಚಾರ ಪಕ್ಷಕ್ಕೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ

ಮಾದ್ಯಮಗಳನ್ನು ನಾಯಿಗೆ ಹೋಲಿಸಿದ ಅನಂತ್ ಕುಮಾರ್ ಹೆಗಡೆ ವಿರುದ್ಧ ಬಿಜೆಪಿ ಹೈಕಮಾಂಡ್ ಗೆ KUWJ ದೂರು

Posted by Vidyamaana on 2024-03-12 20:36:12 |

Share: | | | | |


ಮಾದ್ಯಮಗಳನ್ನು ನಾಯಿಗೆ ಹೋಲಿಸಿದ ಅನಂತ್ ಕುಮಾರ್ ಹೆಗಡೆ ವಿರುದ್ಧ ಬಿಜೆಪಿ ಹೈಕಮಾಂಡ್ ಗೆ  KUWJ ದೂರು

ಬೆಂಗಳೂರು : ಆನೆ ನಡೆದದ್ದೇ ದಾರಿ. ಮಾಧ್ಯಮದವರು ಏನು ಬರೆದುಕೊಂಡು ಅದು ನಡೆದು ಹೋಗುತ್ತೆ. ನಾಯಿ ಬೊಗಳುತ್ತೆ ಎಂಬುದಾಗಿ ಮಾದ್ಯಮದವರನ್ನು ನಾಯಿಗೆ ಹೋಲಿಕೆ ಮಾಡಿದಂತ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಬಿಜೆಪಿ ಹೈಕಮಾಂಡ್ ಗೆ ದೂರು ನೀಡಿದೆ.ಈ ಕುರಿತಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರಿಗೆ ಪತ್ರದ ಮೂಲಕ ಟ್ವಿಟ್ ಮಾಡಿ ದೂರು ನೀಡಿರುವಂತ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು, ಅದರಲ್ಲಿ ಉತ್ತರ ಕನ್ನಡದ ಸಂಸದ ಅನಂತ ಕುಮಾರ ಹೆಗಡೆ ಅವರು ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಹಿಲ್ಲೂರು ಗ್ರಾಮದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನ್ನಾಡುತ್ತಾ ಆನೆ ಹೋಗಿದ್ದೇ ದಾರಿ ಎಂಬಂತೆ ನಾವು ಇರಬೇಕು. ಮಾಧ್ಯಮಗಳು ಏನು ಬೇಕಾದರೂ ಬರೆದುಕೊಳ್ಳಲಿ. ಆನೆಗಳು ಹೋಗುವಾಗ ನಾಯಿಗಳು ಬೊಗಳುವುದು ಸಹಜ ಎಂದು ಮಾಧ್ಯಮದವರನ್ನು ಹೀಯಾಳಿಸಿರುವುದು ಖಂಡನೀಯ. ಕೂಡಲೇ ಅವರು ಬೇಷರತ್ತಾಗಿ ಬಹಿರಂಗವಾಗಿ ಕ್ಷಮೆ ಯಾಚಿಸಬೇಕು ಎಂದು ಕೆಯುಡಬ್ಲ್ಯು ಜೆ ಆಗ್ರಹಿಸಿದೆ.


ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಮಾಧ್ಯಮಕ್ಕೆ ತನ್ನದೇ ಆದ ಮಹತ್ವದ ಸ್ಥಾನವಿದೆ. ತಮಗೆ ಬೇಕಾದಾಗ ಮಾಧ್ಯಮವನ್ನು ಹೊಗಳುವುದು ಬೇಡವೆನಿಸಿದಾಗ ತೆಗಳುವುದು ಕೆಲ ರಾಜಕಾರಣಿಗಳಿಗೆ ಪರಿಪಾಠವಾಗಿದೆ. ಅನಂತ ಕುಮಾರ ಹೆಗಡೆ ಅವರು ಜವಾಬ್ದಾರಿಯುತ ಸಂಸದರಾಗಿದ್ದು, ಆಗಿಂದ್ದಾಗೆ ಮನಸೋ ಇಚ್ಛೆ ಮಾತನಾಡುತ್ತಿರುವುದಲ್ಲದೆ ಮಾಧ್ಯಮವನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡಿರುವುದನ್ನು ಬಿಜೆಪಿ ಗಂಭೀರವಾಗಿ ಪರಿಗಣಿಸಿ ಕ್ರಮ ಜರುಗಿಸಬೇಕು ಮತ್ತು ನಾಲಿಗೆ ಹಿಡಿತವಿಲ್ಲದ ಇಂತವರನ್ನು ಸಾರ್ವಜನಿಕ ಚುನಾವಣೆಗಳಿಂದ ದೂರ ಇಡಬೇಕು ಎಂದು ಕೆಯುಡಬ್ಲ್ಯು ಜೆ ಒತ್ತಾಯಿಸಿದೆ.

SDPI ಸಾಲ್ಮರ ವಾರ್ಡ್ ಸಮಿತಿ ಯಿಂದ ಮನೆಮನೆಗೆ ತೆರಳಿ ಶಾಫಿ ಬೆಳ್ಳಾರೆ ಪರ ಮತಯಾಚನೆ.

Posted by Vidyamaana on 2023-04-30 10:58:16 |

Share: | | | | |


    SDPI ಸಾಲ್ಮರ ವಾರ್ಡ್ ಸಮಿತಿ ಯಿಂದ  ಮನೆಮನೆಗೆ ತೆರಳಿ ಶಾಫಿ ಬೆಳ್ಳಾರೆ ಪರ ಮತಯಾಚನೆ.

ಪುತ್ತೂರು : ಪುತ್ತೂರು ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ  ಪರವಾಗಿ ಸಾಲ್ಮರ ವಾರ್ಡ್ ನ ಸುಮಾರು 50  ಮನೆಗಳಿಗೆ ತೆರಳಿ  ಮತಯಾಚನೆ ಮಾಡಿದರು.

Recent News


Leave a Comment: