Posted by vidyamaana on 2024-07-03 16:20:08 |
ಮಂಗಳೂರು : ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತದಿಂದ ಮಣ್ಣಿನ ಅಡಿಯಲ್ಲಿ ಇಬ್ಬರು ಕಾರ್ಮಿಕರು ಸಿಲುಕಿದ್ದರು. ಇದೀಗ ಮಣ್ಣಿನ ಅಡಿ ಸಿಲುಕಿದ್ದ ಕಾರ್ಮಿಕರ ಪೈಕಿ ಒಬ್ಬನನ್ನು ರಕ್ಷಣೆ ಮಾಡಲಾಗಿದೆ.ಹೌದು ಇಂದು ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು
ಈ ವೇಳೆ 20 ಅಡಿ ಅಡಿ ಆಳದಲ್ಲಿ ಇಬ್ಬರು ಕಾರ್ಮಿಕರು ಇದ್ದು ತಕ್ಷಣ ಮಣ್ಣು ಕುಸಿತವಾಗಿದೆ. ಇವಳೇ ಇಬ್ಬರು ಕಾರ್ಮಿಕರು ಮಣ್ಣಿನ ಆಡಿ ಸಿಕ್ಕಿದ್ದಾರೆ ತಕ್ಷಣ ಘಟನಾ ಸ್ಥಳಕ್ಕೆ ಎಸ್ಡಿಆರ್ಎಫ್ ತಂಡ ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಒಬ್ಬನನ್ನು ರಕ್ಷಣೆ ಮಾಡಿದ್ದಾರೆ.
ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಕಾರ್ಯಾಚರಣೆ ಮುಂದುವರೆದಿದ್ದು ಈ ವೇಳೆ ಮಳೆ ಕಾರ್ಯಾಚರಣೆಗೆ ಅಡ್ಡಿ ಪಡಿಸುತ್ತಿದೆ. ಜೋರಾದ ಮಳೆಯಿಂದ ಇದೀಗ ಕಾರ್ಯಾಚರಣೆಗೆ ತೊಂದರೆ ಉಂಟಾಗುತ್ತಿದೆ. ರಕ್ಷಿತ ಕಾರ್ಮಿಕನನ್ನು ತಕ್ಷಣ ಆಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಡನಾಸ್ ತಳಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಮುಲ್ಲೈ ಮುಗಿಲನ್ ಹಾಗೂ ಇತರೆ ಅಧಿಕಾರಿಗಳು ಸ್ಥಳದಲ್ಲಿ ಇದ್ದಾರೆ.
Posted by Vidyamaana on 2023-09-30 09:35:38 |
ಪುತ್ತೂರು: ಪಡುವನ್ನೂರು ಗ್ರಾಮದ ಕುದ್ಕಾಡಿಯಲ್ಲಿ ನಡೆದ ದರೋಡೆ ಪ್ರಕರಣವನ್ನು ಭೇದಿಸಿರುವ ಪುತ್ತೂರು ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಈ ಪೈಕಿ ಒಬ್ಬಾತ ಜೈಲಿನಲ್ಲಿದ್ದು ಪೆರೋಲ್ ಮೇಲೆ ಹೊರಗೆ ಬಂದಿರುವಾಗಲೇ ಕೃತ್ಯ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ದರೋಡೆ ಕೃತ್ಯದಲ್ಲಿ ಆರು ಮಂದಿಯನ್ನು ಬಂಧಿಸಿರುವ ಬಗ್ಗೆ ಎಸ್ಪಿ ರಿಷ್ಯಂತ್, ಸುದ್ದಿಗೋಷ್ಟಿ ನಡೆಸಿ ವಿವರ ನೀಡಿದ್ದಾರೆ. ಕಾಸರಗೋಡು ಜಿಲ್ಲೆಯ ಕುಖ್ಯಾತ ದರೋಡೆ ಗ್ಯಾಂಗ್ ಕೃತ್ಯದಲ್ಲಿ ಭಾಗಿಯಾಗಿದ್ದನ್ನು ಎಸ್ಪಿ ದೃಢಪಡಿಸಿದ್ದಾರೆ. ಸನಾಲ್, ಕಿರಣ್, ವಸಂತ್, ಫೈಜಲ್, ಸುಧೀರ್, ಅಬ್ದುಲ್ ನಿಸಾರ್ ಬಂಧಿತ ಆರೋಪಿಗಳು. ಇವರ ಪೈಕಿ ಸನಾಲ್ ಕೆವಿ ಕಾಸರಗೋಡು ಜಿಲ್ಲೆಯಲ್ಲಿ ಕುಖ್ಯಾತ ದರೋಡೆಕೋರನಾಗಿದ್ದು, 15ಕ್ಕೂ ಹೆಚ್ಚು ಕೇಸುಗಳನ್ನು ಹೊಂದಿದ್ದಾನೆ. ಹಿಂದೊಮ್ಮೆ ಜೈಲಿನಿಂದ ತಪ್ಪಿಸಿಕೊಂಡು ಹೋಗಿದ್ದ ಪ್ರಕರಣವೂ ಈತನ ಮೇಲಿದೆ. ನಾಲ್ಕು ಪ್ರಕರಣಗಳಲ್ಲಿ ಕೇರಳದ ಜೈಲಿನಲ್ಲಿ 9 ವರ್ಷಗಳ ಶಿಕ್ಷೆ ಅನುಭವಿಸಿದ್ದ.
ಎಲ್ಲರೂ ಕ್ರಿಮಿನಲ್ ಹಿನ್ನೆಲೆಯವರಾಗಿದ್ದು ಕಿರಣ್ ಮತ್ತು ಫೈಜಲ್ ತಲಾ ಮೂರು ಪ್ರಕರಣ ಹೊಂದಿದ್ದಾರೆ. ಸುಧೀರ್ ಮೇಲೆ ವಿಟ್ಲ ಮತ್ತು ಪುತ್ತೂರಿನಲ್ಲಿ ಕೇಸು ಇದೆ. ಕಾಸರಗೋಡು ಗಡಿಭಾಗ ಇಚ್ಲಂಗೋಡು ಗ್ರಾಮದ ಪಜ್ಜಂಬಳ ರವಿ 12 ವರ್ಷಗಳ ಹಿಂದಿನ ಪೆರ್ಲದ ಜಬ್ಬಾರ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ. ಕೇರಳದ ಜೈಲಿನಲ್ಲಿದ್ದ ರವಿ ಇತ್ತೀಚೆಗೆ 15 ದಿನಗಳ ಜಾಮೀನಿನಲ್ಲಿ ಜೈಲಿನಿಂದ ಹೊರಬಂದಿದ್ದ. ಈ ವೇಳೆ, ದರೋಡೆ ತಂಡದ ಜೊತೆ ಸೇರಿ ಕೃತ್ಯಕ್ಕೆ ಕೈಜೋಡಿಸಿದ್ದು, ಆನಂತರ ಮತ್ತೆ ಜೈಲಿಗೆ ಹೋಗಿದ್ದಾನೆ. ಕುದ್ಕಾಡಿಯ ಗುರುಪ್ರಸಾದ್ ಅವರ ಪರಿಚಯ ಹೊಂದಿದ್ದ ವಿಟ್ಲ ಪೆರುವಾಯಿ ನಿವಾಸಿ ಸುಧೀರ್, ದರೋಡೆ ತಂಡಕ್ಕೆ ಮಾಹಿತಿ ನೀಡಿ, ಅಲ್ಲಿ ಸಾಕಷ್ಟು ಬಂಗಾರ, ನಗದು ಇರಬಹುದು ಎಂದು ಹೇಳಿದ್ದ. ಆದರೆ ಮನೆಯಲ್ಲಿ ತಡಕಾಡಿದ್ದ ದರೋಡೆ ತಂಡಕ್ಕೆ ನಿರೀಕ್ಷೆ ಮಾಡಿದಷ್ಟು ಚಿನ್ನಾಭರಣ ಸಿಕ್ಕಿರಲಿಲ್ಲ. ಸುಧೀರ್ ಈ ಹಿಂದೆ ವಿಟ್ಲದಲ್ಲಿ ಕಾಳು ಮೆಣಸು ದರೋಡೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕುದ್ಕಾಡಿ ಗುರುಪ್ರಸಾದ್ ರೈ ಅವರಿಗೆ ಸಂಬಂಧಿಕರ ಮೂಲಕ ಪರಿಚಯ ಆಗಿದ್ದ. ಹೀಗಾಗಿ ಉಂಡ ಮನೆಗೇ ದ್ರೋಹ ಬಗೆದಿರುವುದು ಈಗ ಬಯಲಾಗಿದೆ.
ಪದೇ ಪದೇ ಕೃತ್ಯದಲ್ಲಿ ತೊಡಗುತ್ತಿದ್ದುದರಿಂದ ಇವರಿಗೆ ಸಾಕ್ಷ್ಯ ನಾಶದ ಬಗ್ಗೆ ತಿಳಿದಿತ್ತು. ದರೋಡೆ ಕೃತ್ಯ ನಡೆಸಿದ ವೇಳೆ ಮೊಬೈಲ್ ಬಳಕೆ ಮಾಡಿರಲಿಲ್ಲ. ಅಲ್ಲದೆ, ಮನೆಮಂದಿಯ ಮೊಬೈಲನ್ನೂ ತೆಗೆದು ನೀರಿಗೆ ಹಾಕಿದ್ದರು. ಅಲ್ಲದೆ, ತಾವು ಬಳಸಿದ್ದ ಪರಿಕರಗಳನ್ನು ಯಾವುದನ್ನೂ ಬಿಡದೆ ಒಯ್ದಿದ್ದರು. ಎಲ್ಲರೂ ಮುಸುಕು ಹಾಕಿದ್ದರಿಂದ ಮನೆಯವರಿಗೂ ಗುರುತು ಹಚ್ಚಲು ಆಗಿರಲಿಲ್ಲ. ಹೀಗಾಗಿ ಪ್ರಕರಣ ಭೇದಿಸುವುದು ತುಂಬ ಸವಾಲಾಗಿತ್ತು. ತಾಂತ್ರಿಕ ಸಾಕ್ಷ್ಯಗಳನ್ನು ಆಧರಿಸಿ ಪೊಲೀಸರು ಪ್ರಕರಣ ಪತ್ತೆಹಚ್ಚಿದ್ದು, ಉತ್ತಮ ಕೆಲಸ ಮಾಡಿದ್ದಕ್ಕಾಗಿ ಪೊಲೀಸ್ ತಂಡಕ್ಕೆ ಬಹುಮಾನ ನೀಡುತ್ತೇನೆ ಎಂದು ಎಸ್ಪಿ ರಿಷ್ಯಂತ್ ತಿಳಿಸಿದ್ದಾರೆ.
ಕೃತ್ಯದ ಬಳಿಕ ಗುರುಪ್ರಸಾದ್ ಮತ್ತು ಅವರ ತಾಯಿಯನ್ನು ಹಗ್ಗದಿಂದ ಬಿಡಿಸಿ, ಕುಡಿಯಲು ನೀರು ಕೊಟ್ಟಿದ್ದರು. ವೃದ್ಧ ತಾಯಿಯ ಕಾಲು ಮುಟ್ಟಿ ನಮಸ್ಕರಿಸಿ ತೆರಳಿದ್ದರು. ಇದರಿಂದ ಮನೆಯವರ ಬಗ್ಗೆ ತಿಳಿದವರೇ ಕೃತ್ಯ ಎಸಗಿದ್ದಾರೆಂಬ ಅನುಮಾನ ಪೊಲೀಸರಲ್ಲಿತ್ತು. ಕೂಲಿ ಕೆಲಸಕ್ಕೆ ಬರುತ್ತಿದ್ದವರ ಬಗ್ಗೆಯೂ ಅನುಮಾನಗಳಿದ್ದವು. ಸುಳಿವು ಸಿಗದೇ ಇದ್ದಾಗ ದರೋಡೆ ಕೃತ್ಯದಲ್ಲಿ ನಿರತರಾಗಿರುವ ಕಾಸರಗೋಡಿನ ಕುಖ್ಯಾತ ಕ್ರಿಮಿನಲ್ ಗಳನ್ನು ಗುರಿಯಾಗಿಸಿ ತನಿಖೆ ನಡೆಸಿದಾಗ, ಕೃತ್ಯ ಬೆಳಕಿಗೆ ಬಂದಿತ್ತು. ಸೆ.6ರಂದು ನಸುಕಿನ ವೇಳೆಗೆ ಪಡುವನ್ನೂರು ಗ್ರಾಮದ ಕುದ್ಕಾಡಿಯ ಕಾಂಗ್ರೆಸ್ ಮುಖಂಡ ಗುರುಪ್ರಸಾದ್ ರೈ ಮನೆಯಲ್ಲಿ ದರೋಡೆ ಕೃತ್ಯ ನಡೆದಿತ್ತು.
ಪ್ರಕರಣದ ತನಿಖೆಗಾಗಿ ಸರ್ಕಲ್ ಇನ್ಸ್ ಪೆಕ್ಟರ್ ರವಿ ಬಿಎಸ್ ನೇತೃತ್ವದಲ್ಲಿ ಅಪರಾಧ ಪತ್ತೆಯಲ್ಲಿ ಪಳಗಿದ್ದ ಸಿಬಂದಿಯನ್ನು ಒಳಗೊಂಡ ನಾಲ್ಕು ತಂಡಗಳನ್ನು ರಚಿಸಲಾಗಿತ್ತು. ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ., ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಸ್ .ಎಂ. ಇವರುಗಳ ನಿರ್ದೇಶನದಂತೆ ಮತ್ತು ಪುತ್ತೂರು ಉಪ-ವಿಭಾಗದ ಪೊಲೀಸ್ ಉಪ ಅಧೀಕ್ಷಕ ಡಾ. ಗಾನ ಪಿ, ಕುಮಾರ್ ರವರ ಮಾರ್ಗದರ್ಶನದ ಮೇರೆಗೆ ವಿಶೇಷ ಪತ್ತೆ ತಂಡದ ಅತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್. ರವರ ನೇತೃತ್ವದಲ್ಲಿ ಪುತ್ತೂರು ಸಂಚಾರ ಪೊಲೀಸ್ ಪಿಎಸ್ಐ ಉದಯರವಿ ಎಂ ವೈ, ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್ಐ ಧನಂಜಯ ಬಿ.ಸಿ., ಉಪ್ಪಿನಂಗಡಿ ಠಾಣಾ ಪಿಎಸ್ಐ ರುಕ್ಮ ನಾಯ್ಕ್, ಉಪ್ಪಿನಂಗಡಿ ಠಾಣಾ ಹೆಚ್.ಸಿ. ಹರೀಶ್ಚಂದ್ರ, ವೇಣೂರು ಠಾಣಾ ಹೆಚ್.ಸಿ. ಪ್ರವೀಣ್ ಮೂರುಗೋಳಿ, ವಿಟ್ಲ ಪೊಲೀಸ್ ಠಾಣಾ ಹೆಚ್ ಸಿ ಉದಯ ರೈ, ಪುತ್ತೂರು ಗ್ರಾಮಾಂತರ ವೃತ್ತ ಕಛೇರಿಯ ಹೆಚ್ ಸಿ ಅಬ್ದುಲ್ ಸಲೀಂ, ಪಿಸಿ, ಜಗದೀಶ್ ಅತ್ತಾಜೆ, ಎ.ಹೆಚ್.ಸಿ ಹರೀಶ್, ಪುತ್ತೂರು ಗ್ರಾಮಾಂತರ ಠಾಣಾ ಎಎಸ್ಐ ಮುರುಗೇಶ್, ಹೆಚ್.ಸಿ ಪ್ರವೀಣ್ ರೈ, ಹೆಚ್.ಸಿ ಅದ್ರಾಮ್, ಹೆಚ್.ಸಿ ಬಾಲಕೃಷ್ಣ, ಹೆಚ್.ಸಿ ಹರೀಶ್, ಹೆಚ್.ಸಿ ಪ್ರಶಾಂತ್, ಪಿಸಿ ಮುನಿಯ ನಾಯ್ಕ, ಪುತ್ತೂರು ಸಂಚಾರ ಠಾಣಾ ಹೆಚ್.ಸಿ ಪ್ರಶಾಂತ್ ರೈ, ಪುತ್ತೂರು ನಗರ ಠಾಣಾ ಪಿಸಿ ವಿನಾಯಕ ಎಸ್ ಬಾರ್ಕಿ, ಪಿಸಿ ಶರಣಪ್ಪ ಪಾಟೀಲ್, ಬಂಟ್ವಾಳ ಸಂಚಾರ ಠಾಣಾ ಪಿಸಿ ವಿವೇಕ್, ಪಿಸಿ ಕುಮಾರ್ ಕೆ, ಜಿಲ್ಲಾ ಗಣಕಯಂತ್ರ ವಿಭಾಗದ ಎಹೆಚ್ ಸಂಪತ್ ಕುಮಾರ್, ಸಿಪಿಸಿ ದಿವಾಕರ್, ವಾಹನ ಚಾಲಕ ಪ್ರವೀಣ್ ಹಾಗೂ ಪುತ್ತೂರು ಗ್ರಾಮಾಂತರ ಠಾಣೆಯ ಎಲ್ಲಾ ಅಧಿಕಾರಿ & ಸಿಬ್ಬಂದಿಗಳು ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದಾರೆ.
Posted by Vidyamaana on 2024-01-31 20:32:27 |
ಬೆಂಗಳೂರು :ಇತ್ತೀಚೆಗೆ ನಮ್ಮೂರ ಹೋಟೆಲ್ನಲ್ಲಿ ನಿಂತಿದ್ದ ಯುವತಿಗೆ ಅಲ್ಲೇ ಇದ್ದ ಯುವಕನೋರ್ವ ಯುವತಿಯ ಹಿಂದಿನ ಭಾಗಕ್ಕೆ ಬೇಕಂತಲೇ ಟಚ್ ಮಾಡಿ ಕೀಟಲೆ ಮಾಡಿ ಅಲ್ಲಿಂದ ಎಸ್ಕೇಪ್ ಆಗಿದ್ದ. ಈ ಕುರಿತು ಯುವತಿಯ ಪೋಷಕರು ನೀಡಿದ ದೂರಿಯನನ್ವಯ ವಿಜಯನಗರ ಪೊಲೀಸರು ಕೇಸು ದಾಖಲಿಸಿದ್ದು, ಇದೀಗ ಆರೋಪಿ ಚಂದನ್ ಎಂಬಾತನನ್ನು ಬಂಧಿಸಿದ್ದಾರೆ.
ಡಿ.30 ರಂದು ಸಂಜೆ 7.30ರ ಸುಮಾರಿಗೆ ಸ್ನೇಹಿತೆಯೊಂದಿಗೆ ನಮ್ಮೂರ ಹೋಟೆಲ್ಗೆ ತಿಂಡಿ ತಿನ್ನಲೆಂದು ಯುವತಿ ಬಂದಿದ್ದು, ಆಕೆಯನ್ನು ಕಂಡ ಯುವಕ ಬೇಕೆಂತಲೇ ಆಕೆಯ ಸೊಂಟದ ಹಿಂಭಾಗ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದ. ಕೂಡಲೇ ಯುವತಿ ತರಾಟೆ ತೆಗೆದುಕೊಂಡಾಗ ಅಲ್ಲಿಂದ ಓಡಿ ಹೋಗಿದ್ದ. ಈ ಘಟನೆ ಸಂಬಂಧ ವೀಡಿಯೋ ಜ.18 ರಂದು ವೈರಲ್ ಆಗಿತ್ತು. ಯುವತಿ ಪೋಷಕರು ಪೊಲೀಸರಿಗೆ ಈ ಕುರಿತು ದೂರು ನೀಡಿದ್ದು, ತನಿಖೆ ಕೈಗೊಂಡ ಪೊಲೀಸರು ಸಿಸಿಟಿವಿ ದೃಶ್ಯಾವಳಿ ಆಧಾರದ ಮೇಲೆ ಕಾಮುಕ ಚಂದನ್ನನ್ನು ಬಂಧಿಸಿದ್ದಾರೆ.
ಗ್ಯಾಸ್ ಸಿಲಿಂಡರ್ ಡೆಲಿವರಿ ಕೆಲಸ ಮಾಡುವ ವೃತ್ತಿ ಮಾಡಿಕೊಂಡಿದ್ದ ಆರೋಪಿ ಚಂದನ್, ಹಂಪಿನಗರ ನಿವಾಸಿ. ಘಟನೆ ನಡೆದ ದಿನ ಸ್ನೇಹಿತರೊಂದಿಗೆ ಸಿನಿಮಾ ನೋಡಿಕೊಂಡು ಬಂದ ಚಂದನ್ ಭರ್ಜರಿ ಪಾರ್ಟಿ, ಕಂಠ ಪೂರ್ತಿ ಕುಡಿದು ಊಟಕ್ಕೆ ಎಂದು ವಿಜಯನಗರ ಹೋಟೆಲ್ಗೆ ಬಂದಿದ್ದ. ಊಟ ಮುಗಿಸಿ ಹೋಟೆಲ್ ಹೊರಗೆ ಚಂದನ್ ಗ್ಯಾಂಗ್ ಮಾತಾಡಿಕೊಂಡು ನಿಂತಿದ್ದರು.
ಈ ಸಂದರ್ಭದಲ್ಲಿ ಯುವತಿ ಅಲ್ಲಿಗೆ ಬಂದಿದ್ದಾಳೆ. ಇದನ್ನು ಕಂಡ ಸ್ನೇಹಿತನೋರ್ವ ಆಕೆಯನ್ನು ಮುಟ್ಟಿದರೆ ಐದು ಸಾವಿರ ಕೊಡುತ್ತೀನಿ ಎಂದು ಚಂದನ್ಗೆ ಹೇಳಿದ್ದಾನೆ. ಅಷ್ಟಕ್ಕೇ ಚಂದನ್ ಕುಡಿದ ಅಮಲಿನಲ್ಲಿ ಹಿಂಬದಿಯಿಂದ ಹೋಗಿ ಯುವತಿಗೆ ಮುಟ್ಟಿ ಅನುಚಿತವಾಗಿ ವರ್ತನೆ ಮಾಡಿ ಕಾಲ್ಕಿತ್ತಿದ್ದ. ನಂತರ ಯುವತಿ ತನ್ನ ಪೋಷಕರಿಗೆ ವಿಷಯ ತಿಳಿಸಿದ್ದು, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಳು. ಇದೀಗ ಪೊಲೀಸರು ಆರೋಪಿ ಚಂದನ್ನನ್ನು ಬಂಧಿಸಿ ಜೈಲಿಗೆ ಕಳಿಸಿದ್ದಾರೆ.
Posted by Vidyamaana on 2023-11-29 11:38:52 |
ಕುಂದಾಪುರ: ಇಲ್ಲಿನ ಶೇಡಿಮನೆ ಗ್ರಾಮದ ಪಾಟ್ಲಮಕ್ಕಿಯಲ್ಲಿನ ನಾರಾಯಣ ಪೂಜಾರಿ (70) ಅವರು ಮೃತಪಟ್ಟ ಸುದ್ದಿ ಕೇಳಿ
ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಬೈಕಿನಲ್ಲಿ ಆಗಮಿಸುತ್ತಿದ್ದ ಮೊಮ್ಮಗ ಅಪಘಾತದಲ್ಲಿ ಮೃತಪಟ್ಟ ಘಟನೆ ಸೋಮವಾರ ಸಂಭವಿಸಿದೆ. ಮಾನಂಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಆಜ್ರಿ ಗ್ರಾಮದ ಚೌಕುಳಮಕ್ಕಿ ನಿವಾಸಿ ಚೆನ್ನ ಪೂಜಾರಿ ಹಾಗೂ ಇಂದಿರಾ ಅವರ ಏಕೈಕ ಪುತ್ರ ನಿತೀಶ್ ಪೂಜಾರಿ (20) ಮೃತ ಯುವಕ.
ಚಾಮರಾಜನಗರದ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ 2ನೆ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದು ತಾಯಿ ಮನೆಯಲ್ಲಿ ಅಜ್ಜ ಮೃತಪಟ್ಟ ಸುದ್ದಿ ಕೇಳಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಆಗಮಿಸುವುದಾಗಿ ಹೇಳಿದ್ದ. ಅವಸರದಲ್ಲಿ ಊರಿಗೆ ಬರುವುದು ಬೇಡ ಎಂದು ಮನೆಯವರು ಹೇಳಿದ್ದರೂ ಎತ್ತಿ ಆಡಿಸಿದ ಅಜ್ಜನ ಮೇಲಿನ ಮೋಹದಿಂದ ತನ್ನ ಬೈಕಿನಲ್ಲಿ ಕುಂದಾಪುರಕ್ಕೆ ಹೊರಟಿದ್ದರು.
ರಸ್ತೆಗೆ ಬಿದ್ದು ಸಾವು
ಈ ಸಂದರ್ಭ ಚಾಮರಾಜನಗರ ತಾಲೂಕಿನ ಪಣ್ಯದಹಂಡಿ ಬಳಿ ರಸ್ತೆ ಮಧ್ಯದ ಹಂಪ್ ಅನ್ನು ಗಮನಿಸದೇ ಅಕಸ್ಮಾತ್ತಾಗಿ ರಸ್ತೆಗೆ ಬಿದ್ದು ಮೃತಪಟ್ಟಿದ್ದರು.
ಚಾಮರಾಜನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಳಿಕ ಯುವಕನ ಮೃತದೇಹವನ್ನು ತಂದು ಶೇಡಿ ಮನೆಯಲ್ಲಿ (ತಾಯಿಯ ತಂದೆ ಮನೆ)ಅಜ್ಜ ಮೊಮ್ಮಗನ ಶವಸಂಸ್ಕಾರವನ್ನು ಜತೆಯಾಗಿ ನಡೆಸಲಾಯಿತು.
Posted by Vidyamaana on 2023-07-09 05:57:26 |
ಮಂಗಳೂರು: ಕಾರ್ಮಿಕನನ್ನು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಮಾಡಿರುವ ಘಟನೆ ನಗರದ ಮುಳಿಹಿತ್ಲುವಿನಲ್ಲಿ ನಡೆದಿದೆ.
ಉತ್ತರ ಭಾರತ ಮೂಲದ ಗಜ್ಞಾನ್ ಅಲಿಯಾಸ್ ಜಗು ಎಂಬ ಕಾರ್ಮಿಕನನ್ನು ಮಶುಪಾ ಜನರಲ್ ಸ್ಟೋರ್ ಮಾಲೀಕ ತೌಸಿಫ್ ಹುಸೈನ್ ಎಂಬಾತ ಕೊಲೆ ಮಾಡಿರುವುದಾಗಿ ಹೇಳಲಾಗಿದೆ.
ಬೆಂಕಿ ಹಚ್ಚಿ ಕೊಂದ ಬಳಿಕ ಆರೋಪಿ ವಿದ್ಯುತ್ ಶಾಕ್ ಎಂದು ಪೊಲೀಸ್ ದೂರು ನೀಡಿದ್ದಾನೆ. ಶನಿವಾರ ಬೆಳಗ್ಗೆ 7.30 ಕ್ಕೆ ಕೃತ್ಯ ಎಸಗಿದ್ದು, ಬಳಿಕ ಮಧ್ಯಾಹ್ನ 1.30 ಕ್ಕೆ ವೆನ್ಲಾಕ್ ಆಸ್ಪತ್ರೆಗೆ ರವಾನೆ ಮಾಡಿ ವಿದ್ಯುತ್ ಶಾಕ್ ನಿಂದ ಘಟನೆ ಅಂತಾ ತಿರುಚಲು ಯತ್ನಿಸಿದ್ದಾನೆ.
ಆದರೆ ಪೊಲೀಸರ ಅನುಮಾನದಿಂದ ವಿಚಾರಿಸಿದಾಗ ಕೃತ್ಯ ಬಯಲಾಗಿದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಆರೋಪಿ ತೌಸಿಫ್ ಹುಸೈನ್ ಅನ್ನು ಪೊಲೀಸರು ಬಂಧಿಸಿದ್ದಾರೆ.
Posted by Vidyamaana on 2024-02-15 13:02:04 |
ಬಂಟ್ವಾಳ : ಚಲಿಸುತ್ತಿರುವ ರೈಲಿನಿಂದ ಯುವತಿಯೋರ್ವಳು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ.ಸಿ.ರೋಡ್ ಸಮೀಪದ ಕೈಕುಂಜೆ ಎಂಬಲ್ಲಿ ಗುರುವಾರ ಬೆಳಿಗ್ಗೆ 6. 30 ರ ವೇಳೆಗೆ ನಡೆದಿದೆ.
ಈಕೆ ತುಮಕೂರು ಜಿಲ್ಲೆಯ ನಯನ್ ಎಂ.ಜಿ.(27) ಆಗಿರಬಹುದು ಎಂದು ಅವಳ ಬ್ಯಾಗ್ ನಲ್ಲಿ ಸಿಕ್ಕಿರುವ ಆಧಾರ್ ಕಾರ್ಡ್ ನ ಮಾಹಿತಿಯಂತೆ ಅಂದಾಜಿಸಲಾಗಿದೆ.
ಆಧಾರ್ ಕಾರ್ಡ್ ನಲ್ಲಿ c/o ಎಮ್. ಗೋವಿಂದರಾಜು ಪಡಸಾಲೆಹಟ್ಟಿ, ಮಿಡಿಗೇಶಿ, ಮಧುಗಿರಿ ತಾಲೂಕು ತುಮಕೂರು ಜಿಲ್ಲೆ ಹೊಸಕರೆ ಎಂಬ ವಿಳಾಸವಿದ್ದು ಆಕೆ ಕಣ್ಣೂರು-ಬೆಂಗಳೂರು- ಮಂಗಳೂರು ರೈಲಿನಲ್ಲಿ ಬಂದಿದ್ದಾಳೆ.
ಅವಳು ಕುಳಿತು ಕೊಂಡಿದ್ದ ಸೀಟಿನಲ್ಲಿದ್ದ ಬ್ಯಾಗ್ ನ್ನು ರೈಲ್ವೆ ಸಿಬ್ಬಂದಿಗಳು ಬಿ.ಸಿ.ರೋಡಿನ ಕಚೇರಿಗೆ ನೀಡಿ ವಿಚಾರ ತಿಳಿಸಿದ್ದಾರೆ.
ಆಕೆಯ ಸ್ಪಷ್ಟ ವಿಳಾಸ ಮತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಯೇ ಅಥವಾ ಆಕಸ್ಮಿಕವಾಗಿ ಕೈತಪ್ಪಿ ಬಿದ್ದಿರಬಹುದೇ ಎಂದು ಇನ್ನೂ ಖಚಿತಗೊಂಡಿಲ್ಲ.
ರೈಲಿನಲ್ಲಿದ್ದ ಪ್ರಯಾಣಿಕರು ರೈಲಿನಿಂದ ಹಾರಿದ ಬಗ್ಗೆ ಮಾಹಿತಿ ನೀಡಿದ್ದಾರೆ. ನದಿಯಲ್ಲಿ ತೇಲಾಡುವ ಸ್ಥಿತಿಯಲ್ಲಿದ್ದ ಮಹಿಳೆಯ ಮೃತದೇಹವನ್ನು ಗೂಡಿನಬಳಿಯ ಮಹಮ್ಮದ್ ಮಮ್ಮು ನೇತ್ರತ್ವದ ಜೀವರಕ್ಷಕ ತಂಡದ ಇರ್ಶಾದ್ ಡ್ರೀಮ್ಸ್, ಮನ್ಸೂರ್ ವಝೀರ್ ಅವರು ಮೇಲಕ್ಕೆತ್ತಿದ್ದಾರೆ. ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
ರೈಲ್ವೇ ಪೊಲೀಸರು ಹಾಗೂ ಬಂಟ್ವಾಳ ನಗರ ಪೋಲೀಸ್ ಠಾಣೆಯ ಸಹಾಯಕ ಉಪ ನಿರೀಕ್ಷಕ
ದೇವಪ್ಪ, ಸಿಬ್ಬಂದಿ ವಿಜಯ ಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
Posted by Vidyamaana on 2024-05-02 20:17:25 |
ಪುತ್ತೂರು: ಮಂಗಳೂರಿಗೆ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸಿಗೆ ನ್ಯಾನೋ ಕಾರು ಡಿಕ್ಕಿ ಹೊಡೆದಿದ್ದು, ನ್ಯಾನೋ ಕಾರಿಗೆ ಮಂಗಳೂರಿನಿಂದ ಬರುತ್ತಿದ್ದ ಮತ್ತೊಂದು ಕಾರು ಢಿಕ್ಕಿಯಾದ ಘಟನೆ ಕಬಕದಲ್ಲಿ ನಡೆದಿದೆ.
ಘಟನೆಯಿಂದ ಮಂಗಳೂರು - ಪುತ್ತೂರು ಹಾಗೂ ಪುತ್ತೂರು - ವಿಟ್ಲ ರಸ್ತೆಯಲ್ಲಿ ಟ್ರಾಫಿಕ್ ದಟ್ಟಣೆ ಉಂಟಾಯಿತು.