ಮೂರೇ ತಿಂಗಳಲ್ಲಿ ಫಲಿಸಿದ ಕೋರಿಕೆ – ಕೊರಗಜ್ಜನ ಸನ್ನಿಧಿಗೆ ಬಂದು ಆ ನಟಿ ತೀರಿಸಿದ್ರು ಹರಕೆ

ಸುದ್ದಿಗಳು News

Posted by vidyamaana on 2023-08-09 12:32:22 |

Share: | | | | |


ಮೂರೇ ತಿಂಗಳಲ್ಲಿ ಫಲಿಸಿದ ಕೋರಿಕೆ – ಕೊರಗಜ್ಜನ ಸನ್ನಿಧಿಗೆ ಬಂದು ಆ ನಟಿ ತೀರಿಸಿದ್ರು ಹರಕೆ

ಮಂಗಳೂರು: ತುಳುನಾಡಿನ ಕಾರಣಿಕದ ಶಕ್ತಿ ಕೊರಗಜ್ಜನ ಕಾರಣಿಕ ಮತ್ತೊಮ್ಮೆ ಸಾಬೀತುಗೊಂಡಿದೆ. ಇಲ್ಲಿನ ಕುತ್ತಾರು ಕೊರಗಜ್ಜನ ಆದಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿ ಹೋಗಿದ್ದ ಮೂರೇ ತಿಂಗಳಿನಲ್ಲಿ ತಮ್ಮ ಬೇಡಿಕೆ ಈಡೇರಿದ ಕಾರಣದಿಂದ ಸ್ಯಾಂಡಲ್ ವುಡ್ ನ ಖ್ಯಾತ ನಟಿ  ಮಾಲಾಶ್ರೀ ಇದೀಗ ಕುತ್ತಾರಿಗೆ ಕುಟುಂಬ ಸಮೇತ ಆಗಮಿಸಿ ತಮ್ಮ ಹರಕೆ ತೀರಿಸಿದ್ದಾರೆ.


ಆ.09ರ ಬುಧವಾರದಂದು ಕುತ್ತಾರಿನಲ್ಲಿರುವ ಕೊರಗಜ್ಜನ ಆದಿ ಕ್ಷೇತ್ರಕ್ಕೆ ತಮ್ಮ ಮಗಳು ಅನನ್ಯಾಳೊಂದಿಗೆ ಆಗಮಿಸಿದ ಮಾಲಾಶ್ರಿ ಅವರು ಇಲ್ಲಿ ಕೊರಗಜ್ಜನಿಗೆ ಹೇಳಿಕೊಂಡಿದ್ದ ಹರಕೆಯನ್ನು ತೀರಿಸಿದರು.


ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಕಳೆದ ಮೂರು ತಿಂಗಳ ಹಿಂದೆಯಷ್ಟೇ ಕೊರಗಜ್ಜನ ಕಟ್ಟೆಗೆ ಬಂದು ಬೇಡಿಕೊಂಡಿದ್ದೆವು. ಆ ಬಳಿಕ ನಮ್ಮ ಕೋರಿಕೆ ಪವಾಡ ಸದೃಶವಾಗಿ ಈಡೇರಿತ್ತು. ಈ ಕ್ಷೇತ್ರದ ಶಕ್ತಿ ಅಪಾರವಾದುದು..’ ಎಂದು ಮಾಲಾಶ್ರೀ ಹೇಳಿದ್ದಾರೆ.


ನಮ್ಮ ಬೇಡಿಕೆಯನ್ನು ಕೊರಗಜ್ಜ ಈಡೇರಿಸಿದ ಕಾರಣ ಹರಕೆ ತೀರಿಸಿ ಆಶೀರ್ವಾದ ಪಡೆದುಕೊಳ್ಳುವ ಉದ್ದೇಶದಿಂದ ಕುಟುಂಬ ಹಾಗೂ ಸ್ನೇಹಿತರ ಜೊತೆ ನಾನಿಲ್ಲಿ ಬಂದಿದ್ದೇನೆ, ಮುಂದೆಯೂ ಬರುತ್ತೇನೆ ಎಂದು ಮಾಲಾಶ್ರಿ ಅವರು ಇದೇ ಸಂದರ್ಭದಲ್ಲಿ ಹೇಳಿದರು.

 Share: | | | | |


ವಿದ್ಯಾರ್ಥಿಸ್ನೇಹಿ ಸಿಎಂ ಎಂದು ಪತ್ರ ಬರೆದು ಧನ್ಯವಾದ ತಿಳಿಸಿದ್ದ ಧಾರವಾಡ ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

Posted by Vidyamaana on 2023-09-09 15:59:26 |

Share: | | | | |


ವಿದ್ಯಾರ್ಥಿಸ್ನೇಹಿ ಸಿಎಂ ಎಂದು ಪತ್ರ ಬರೆದು ಧನ್ಯವಾದ ತಿಳಿಸಿದ್ದ ಧಾರವಾಡ ವಿದ್ಯಾರ್ಥಿನಿಯನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ,  ರಾಜ್ಯ ಸರಕಾರದ(State Government) ಮೊಟ್ಟೆ, ಹಾಲು ವಿತರಣೆ ಯೋಜನೆ ಬಗ್ಗೆ ಶ್ಲಾಘಿಸಿ ವಿದ್ಯಾರ್ಥಿಸ್ನೇಹಿ ಸಿಎಂ ಎಂದು ಪತ್ರ ಬರೆದಿದ್ದ ಆಶಾ ನೆಹರು ಪಾಟೀಲ್ ಎಂಬ ವಿದ್ಯಾರ್ಥಿನಿಯನ್ನು ಸಿಎಂ ಸಿದ್ದರಾಮಯ್ಯ(Siddaramaiah) ಭೇಟಿ ಮಾಡಿದ್ದಾರೆ. ಇಂದು ಧಾರವಾಡ ಜಿಲ್ಲೆಗೆ ಸಿಎಂ ಭೇಟಿ ಹಿನ್ನೆಲೆ ವಿಮಾನ ನಿಲ್ದಾಣಕ್ಕೆ ಆಶಾ ಕೂಡ ಆಗಮಿಸಿದ್ದರು. ಈ ವೇಳೆ ಸಿಎಂ ಸಿದ್ದರಾಮಯ್ಯನವರು ಆಶಾಗೆ ಶೇಕ್ ಹ್ಯಾಂಡ್ ನೀಡಿ ಅಭಿನಂದಿಸಿದ್ದರು. 9, 10ನೇ ತರಗತಿ ವಿದ್ಯಾರ್ಥಿಗಳಿಗೆ ಸಿಎಂ ಸಿದ್ದರಾಮಯ್ಯನವರು ಮೊಟ್ಟೆ, ಬಾಳೆಹಣ್ಣು, ಚಿಕ್ಕಿ ನೀಡುವ ಯೋಜನೆ ವಿಸ್ತರಣೆ ಮಾಡಿದ್ದರು. ಇದರಿಂದ ಸಂತಸಗೊಂಡು ಸಿಎಂ ಸಿದ್ದರಾಮಯ್ಯರಿಗೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಮಳಲಿ ಪ್ರೌಢಶಾಲೆಯ 9 ನೇ ತರಗತಿ ವಿದ್ಯಾರ್ಥಿನಿ ಆಶಾ ನೆಹರು ಪಾಟೀಲ್ ಪತ್ರ ಬರೆದು ಸಿಎಂಗೆ ಅಭಿನಂದನೆ ಸಲ್ಲಿಸಿದ್ದರು. ಜೊತೆಗೆ ಅವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಅಂತ ಮನವಿ ಮಾಡಿದ್ದರು. ಆಶಾಳ ಪತ್ರವನ್ನು ಟ್ವಿಟರ್ ನಲ್ಲಿ ಹಂಚಿಕೊಂಡು ಸಿದ್ದರಾಮಯ್ಯನವರು ಅಭಿನಂದನೆ ತಿಳಿಸಿದ್ದರು.2021ರಲ್ಲಿ ಸರ್ಕಾರ ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿನ ಒಂದರಿಂದ ಎಂಟನೇ ತರಗತಿಯವರೆಗಿನ ಶಾಲೆ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಣೆ ಮಾಡುತ್ತಿತ್ತು. ಬಳಿಕ ಸರ್ಕಾರ ಒಂದು ಸಮೀಕ್ಷೆಯನ್ನು ಮಾಡಿದ ಮೇಲೆ ಶೇಕಡಾ 70 ರಷ್ಟು ಮಕ್ಕಳು ಮೊಟ್ಟೆ ಬೇಕು ಎಂದು ತಿಳಿಸಿದ್ದರು. ಇದಾದ ಮೇಲೆ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಾರದ ಎರಡು ದಿನ ಮೊಟ್ಟೆ ವಿತರಣೆ ಮಾಡಲು ಸೂಚಿಸಲಾಯಿತು.ಬಳಿಕ ಪೋಷಕರು ಒಂಭತ್ತು ಮತ್ತು ಹತ್ತನೇ ತರಗತಿ ವಿದ್ಯಾರ್ಥಿಗಳಿಗೂ ಮೊಟ್ಟೆ ನೀಡುವಂತೆ ಮನವಿ ಮಾಡಿತ್ತು. ಅದರಂತೆ ಸರ್ಕಾರ ಒಂದರಿಂದ ಹತ್ತನೇ ತರಗತಿಯವರೆಗೂ ಮೊಟ್ಟೆ ವಿತರಣೆ ವಿಸ್ತರಿಸಿತು. ಇದೀಗ ಸರ್ಕಾರದ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಧಾರವಾಡ ವಿದ್ಯಾರ್ಥಿನಿ ಆಶಾ ಸಿಎಂ ಸಿದ್ದರಾಮಯ್ಯರಿಗೆ ಅಭಿನಂದನೆ ತಿಳಿಸಿದ್ದಳು. ಸದ್ಯ ಇಂದು ಧಾರವಾಡ ಭೇಟಿ ವೇಳೆ ಸಿಎಂ ಸಿದ್ದರಾಮಯ್ಯನವರು ವಿಮಾನ ನಿಲ್ದಾಣದಲ್ಲಿ ಆಶಾಳಿಗೆ ಶೇಕ್ ಹ್ಯಾಂಡ್ ನೀಡಿ ಅಭಿನಂದಿಸಿದರು.

ದುರಂತ ಅಂತ್ಯ ಕಂಡ ಲವ್​ ಮ್ಯಾರೇಜ್​: ಮೊದಲ ರಾತ್ರಿಯಂದೇ ಪತ್ನಿಯ ಮದ್ವೆ ಸೀರೆಗೆ ಕೊರಳೊಡ್ಡಿದ ಯುವಕ

Posted by Vidyamaana on 2023-09-22 07:36:36 |

Share: | | | | |


ದುರಂತ ಅಂತ್ಯ ಕಂಡ ಲವ್​ ಮ್ಯಾರೇಜ್​: ಮೊದಲ ರಾತ್ರಿಯಂದೇ ಪತ್ನಿಯ ಮದ್ವೆ ಸೀರೆಗೆ ಕೊರಳೊಡ್ಡಿದ ಯುವಕ

ಚೆನ್ನೈ: ಮದುವೆಯಾದ ಎರಡೇ ದಿನದಲ್ಲಿ 27 ವರ್ಷದ ಯುವಕನೊಬ್ಬ ಪತ್ನಿಯ ಮದುವೆ ಸೀರೆಗೆ ಕೊರಳೊಡ್ಡಿರುವ ಆಘಾತಕಾರಿ ಘಟನೆ ಚೆನ್ನೈನ ಚೆಂಗಲ್ಪಟ್ಟು ಏರಿಯಾದಲ್ಲಿ ಬುಧವಾರ ನಡೆದಿದೆ.ಮೃತ ವ್ಯಕ್ತಿಯನ್ನು ಸರವಣನ್​ ಎಂದು ಗುರುತಿಸಲಾಗಿದೆ. ಈತ ಓಚೇರಿ ನಿವಾಸಿಯಾಗಿದ್ದು, ಸುಂಗುವಚತಿರಂನಲ್ಲಿರುವ ಸ್ಯಾಮ್​ಸಂಗ್​ ಮೊಬೈಲ್​ ತಯಾರಿಕಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ.ಬಾಲ್ಯದಿಂದಲೇ ಸ್ನೇಹಿತೆಯಾಗಿ ಶ್ವೇತಾ ಎಂಬಾಕೆಯನ್ನು ಕೆಲವು ವರ್ಷಗಳಿಂದ ಪ್ರೀತಿಸಿ, ಮನೆಯವರ ಒಪ್ಪಿಗೆ ಪಡೆದು ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದರು.


ಮದುವೆಯನ್ನು ಎರಡೂ ಕುಟುಂಬದವರು ಅದ್ಧೂರಿಯಾಗಿ ಏರ್ಪಡಿಸಿದ್ದರು. ಮಂಗಳವಾರ (ಸೆ.19) ನವ ದಂಪತಿ ತಮ್ಮ ಮದುವೆಯ ನಂತರ ಮೊದಲ ಬಾರಿಗೆ ದಿಮ್ಮಾವರಂಗೆ ಬಂದರು ಮತ್ತು ಆ ದಿನ ಅವರ ಮೊದಲ ರಾತ್ರಿಯಾಗಿತ್ತು.


ರಾತ್ರಿ 9 ಗಂಟೆಗೆ ದಂಪತಿ ತಮ್ಮ ಕೋಣೆಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬುಧವಾರ ಬೆಳಗ್ಗೆ 5 ಗಂಟೆ ಸುಮಾರಿಗೆ ಶ್ವೇತಾಳ ಕಿರುಚಾಟ ಕೇಳಿ ಮನೆಯವರು ಬೆಚ್ಚಿಬಿದ್ದಿದ್ದಾರೆ. ಶ್ವೇತಾ ಕೋಣೆಯಿಂದ ಹೊರಗೆ ಓಡಿ ಪ್ರಜ್ಞೆ ತಪ್ಪಿ ಬಿದ್ದಳು. ಆಕೆಯ ಪಾಲಕರು ಕೊಠಡಿಯೊಳಗೆ ಹೋಗಿ ನೋಡಿದಾಗ ಶ್ವೇತಾಳಮುಹೂರ್ತದ ಸೀರೆಯನ್ನು ಬಳಸಿ ಸರವಣನ್ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ.


ಚೆಂಗಲ್ಪಟ್ಟು ತಾಲೂಕು ಪೊಲೀಸರ ತಂಡ ಆತನ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಚೆಂಗಲ್ಪಟ್ಟು ಜಿಎಚ್‌ಗೆ ಕಳುಹಿಸಿದೆ.ಮಂಗಳವಾರ ರಾತ್ರಿ ಸರವಣನ್ ತನ್ನ ಪಾಲಕರೊಂದಿಗೆ ದೂರವಾಣಿಯಲ್ಲಿ ಮಾತನಾಡಿ, ಹನಿಮೂನ್‌ ಪ್ರವಾಸಕ್ಕಾಗಿ ಯೋಜಿಸಿರುವ ಸ್ಥಳಗಳ ಬಗ್ಗೆ ತಿಳಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ. ಬುಧವಾರದಿಂದಲೇ ಹನಿಮೂನ್​ ಪ್ರವಾಸ ಆರಂಭಿಸಬೇಕಾಗಿತ್ತು. ಅಷ್ಟರಲ್ಲಿ ಈ ದುರ್ಘಟನೆ ನಡೆದಿದೆ. ಮಂಗಳವಾರ ಮೊದಲ ರಾತ್ರಿ ಸರವಣನ್​ ಮುಖದಲ್ಲಿ ಯಾವುದೇ ಆತಂಕ ಅಥವಾ ದುಃಖದ ಲಕ್ಷಣಗಳು ಇರಲಿಲ್ಲ ಎಂದು ಪಾಲಕರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.


ಸರವಣನ್​ ಸಾವು ತುಂಬಾ ನಿಗೂಢವಾಗಿದೆ. ಚೆಂಗಲಪಟ್ಟು ತಾಲೂಕು ಪೊಲೀಸರು ಅನುಮಾನಾಸ್ಪದ ಸಾವಿನ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಶ್ವೇತಾ ಮತ್ತು ಆಕೆಯ ಪೋಷಕರನ್ನು ವಿಚಾರಣೆ ನಡೆಸುತ್ತಿದ್ದಾರೆ

ಕರ್ನಾಟಕ ವಿಧಾನಪರಿಷತ್ ವಿಪಕ್ಷನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಕ

Posted by Vidyamaana on 2023-12-25 15:13:31 |

Share: | | | | |


ಕರ್ನಾಟಕ ವಿಧಾನಪರಿಷತ್ ವಿಪಕ್ಷನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಕ

ಬೆಂಗಳೂರು : ರಾಜ್ಯ ಬಿಜೆಪಿಯಲ್ಲಿ ಮಹತ್ವದ ಬದಲಾವಣೆ ಎನ್ನುವಂತೆ ಇದೀಗ ವಿಧಾನ ಪರಿಷತ್ ವಿಪಕ್ಷ ನಾಯಕರನ್ನಾಗಿ ಕೋಟಾ ಶ್ರೀನಿವಾಸ ಪೂಜಾರಿ ನೇಮಿಸಲಾಗಿದೆ. ಅಲ್ಲದೇ ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕರನ್ನಾಗಿ ಅರವಿಂದ್ ಬೆಲ್ಲದ್ ನೇಮಕ ಮಾಡಲಾಗಿದೆ.ಈ ಕುರಿತಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಆದೇಶ ಹೊರಡಿಸಿದ್ದು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದಂತ ಜೆಪಿ ನಡ್ಡಾ ಅವರ ಸೂಚನೆಯ ಮೇರೆಗೆ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ವಿವಿಧ ಜವಾಬ್ದಾರಿಗಳಿಗೆ ನಿಯುಕ್ತಿಗೊಳಿಸಲಾಗಿದೆ ಎಂದಿದ್ದಾರೆ.ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಕೋಟಾ ಶ್ರೀನಿವಾಸ ಪೂಜಾರಿ, ವಿರೋಧ ಪಕ್ಷದ ಉಪನಾಯಕರಾಗಿ ಸುನೀಲ್ ವಲ್ಯಾಪುರೆ ಹಾಗೂ ಮುಖ್ಯ ಸಚೇತಕರಾಗಿ ಎನ್.ರವಿಕುಮಾರ್ ನೇಮಕ ಮಾಡಲಾಗಿದೆ.


ಇನ್ನೂ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಅರವಿಂದ್ ಬೆಲ್ಲದ್, ಮುಖ್ಯ ಸಚೇತಕರಾಗಿ ದೊಡ್ಡನಗೌಡ ಜಿ ಪಾಟೀಲ್ ಅವರನ್ನು ನೇಮಕ ಮಾಡಿ ಆದೇಶಿಸಲಾಗಿದೆ.

ಭೀಕರ ಅಪಘಾತದಲ್ಲಿ ಲಾಸ್ಯ ನಂದಿತಾ ದುರ್ಮರಣ; 10 ದಿನಗಳ ಹಿಂದೆ ನಡೆದ ಅವಘಡದಲ್ಲಿ ಪಾರಾಗಿದ್ದರು!

Posted by Vidyamaana on 2024-02-24 11:39:31 |

Share: | | | | |


ಭೀಕರ ಅಪಘಾತದಲ್ಲಿ ಲಾಸ್ಯ ನಂದಿತಾ ದುರ್ಮರಣ; 10 ದಿನಗಳ ಹಿಂದೆ ನಡೆದ ಅವಘಡದಲ್ಲಿ ಪಾರಾಗಿದ್ದರು!

ಹೈದರಾಬಾದ್ ಫೆಬ್ರುವರಿ 24: ಹೈದರಾಬಾದ್​​ (Hyderab

non

)ನಲ್ಲಿ ಎಸ್‌ಯುವಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ತೆಲಂಗಾಣ ಶಾಸಕಿ ಲಾಸ್ಯ ನಂದಿತಾ (Lasya Nanditha) ಸಾವಿಗೀಡಾಗಿದ್ದಾರೆ. 37ರ ಹರೆಯದ ಭಾರತ್ ರಾಷ್ಟ್ರ ಸಮಿತಿ (ಬಿಆರ್‌ಎಸ್) ಶಾಸಕಿ, 10 ದಿನಗಳ ಹಿಂದೆಯಷ್ಟೇ ನರ್ಕಟ್‌ಪಲ್ಲಿಯಲ್ಲಿ ಅಪಘಾತದಲ್ಲಿ ಬದುಕುಳಿದಿದ್ದರು. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಭಾಷಣ ಮಾಡುತ್ತಿದ್ದ ರ‍್ಯಾಲಿಗೆ ತೆರಳುತ್ತಿದ್ದ ವೇಳೆ ಪಾನಮತ್ತ ಚಾಲಕನೊಬ್ಬ ಆಕೆಯ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಈ ಅಪಘಾತದಲ್ಲಿ ಆಕೆಯ ಹೋಮ್ ಗಾರ್ಡ್ ಸಾವಿಗೀಡಾಗಿದ್ದು, ಆಕೆಗೆ ಸಣ್ಣಪುಟ್ಟ ಗಾಯಗಳಾಗಿತ್ತು.ಹೈದರಾಬಾದ್‌ನ ಹೊರ ವರ್ತುಲ ರಸ್ತೆಯಲ್ಲಿ ಆಕೆಯ ವಾಹನ ಮಾರುತಿ ಎಕ್ಸ್‌ಎಲ್ 6 ಚಾಲಕನ ನಿಯಂತ್ರಣ ತಪ್ಪಿ ಲೋಹದ ಡಿವೈಡರ್‌ಗೆ ಡಿಕ್ಕಿ ಹೊಡೆದು ಶುಕ್ರವಾರ ಭೀಕರ ಅಪಘಾತ ಸಂಭವಿಸಿದೆ. ಲಾಸ್ಯ ನಂದಿತಾ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶುಕ್ರವಾರ ಮುಂಜಾನೆ 5.30ಕ್ಕೆ ಈ ಘಟನೆ ನಡೆದಿದೆ.

ಎರಡೂ ಅಪಘಾತಗಳ ಕುರಿತು ಸದ್ಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


37 ವರ್ಷ ವಯಸ್ಸಿನ ಸಿಕಂದರಾಬಾದ್ ಕಂಟೋನ್ಮೆಂಟ್ (SC) ಶಾಸಕರಾಗಿದ್ದ ಲಾಸ್ಯ ಅವರನ್ನು ಅಪಘಾತ ಸ್ಥಳದಿಂದ ಆಸ್ಪತ್ರೆಗೆ ಸಾಗಿಸಲಾಗಿತ್ತು. ಅಲ್ಲಿಗೆ ಬರುವಾಗಲೇ ಶಾಸಕಿ ಕೊನೆಯುಸಿರೆಳೆದಿರುವುದಾಗಿ ವೈದ್ಯರು ಘೋಷಿಸಿದ್ದಾರೆ. 1986 ರಲ್ಲಿ ಹೈದರಾಬಾದ್‌ನಲ್ಲಿ ಜನಿಸಿದ ಲಾಸ್ಯ ನಂದಿತಾ ಸುಮಾರು ಒಂದು ದಶಕದ ಹಿಂದೆ ರಾಜಕೀಯಕ್ಕೆ ಕಾಲಿಟ್ಟರು. 2023 ರ ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲಿ ಸಿಕಂದರಾಬಾದ್ ಕಂಟೋನ್ಮೆಂಟ್‌ನಿಂದ ಶಾಸಕರಾಗಿ ಆಯ್ಕೆಯಾಗುವ ಮೊದಲು ಅವರು ಕವಾಡಿಗುಡ ವಾರ್ಡ್‌ನಲ್ಲಿ ಕಾರ್ಪೊರೇಟರ್ ಆಗಿ ಸೇವೆ ಸಲ್ಲಿಸಿದ್ದರು.


ತೆಲಂಗಾಣ ಮುಖ್ಯಮಂತ್ರಿ, ಬಿಆರ್‌ಎಸ್ ಮುಖ್ಯಸ್ಥ ಕೆ ಚಂದ್ರಶೇಖರ್ ರಾವ್, ರಾಜ್ಯ ಬಿಜೆಪಿ ಅಧ್ಯಕ್ಷ ಜಿ ಕಿಶನ್ ರೆಡ್ಡಿ ಮತ್ತು ತೆಲಂಗಾಣದ ಹಲವಾರು ಸಚಿವರು ಮತ್ತು ಮುಖಂಡರು ಯುವ ಶಾಸಕರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.


ಲಾಸ್ಯ ನಂದಿತಾ ಅವರ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿದ ರೇವಂತ್ ರೆಡ್ಡಿ, ಆಕೆಯ ತಂದೆ ಜಿ ಸಾಯಣ್ಣ ಅವರೊಂದಿಗಿನ ನಿಕಟ ಒಡನಾಟವನ್ನು ಸ್ಮರಿಸಿದರು. ಕಳೆದ ವರ್ಷ ಫೆಬ್ರವರಿಯಲ್ಲಿ ಸಾಯಣ್ಣ ಮೃತಪಟ್ಟಿದ್ದು ಅದೇ ತಿಂಗಳಲ್ಲಿ (ಒಂದು ವರ್ಷದ ಅವಧಿಯಲ್ಲಿ) ಲಾಸ್ಯ ನಂದಿತಾ ಸಾವಿಗೀಡಾಗಿದ್ದಾರೆ.

ಮಾ.7 ಪುತ್ತೂರಿನಲ್ಲಿ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಪುತ್ತೂರು ಸಮಾವೇಶ

Posted by Vidyamaana on 2024-03-06 22:32:01 |

Share: | | | | |


ಮಾ.7 ಪುತ್ತೂರಿನಲ್ಲಿ ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಯ ಫಲಾನುಭವಿಗಳ ಪುತ್ತೂರು ಸಮಾವೇಶ

ಪುತ್ತೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿಯ ಐದು ಗ್ಯಾರಂಟಿ ಯೋಜನೆಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಫಲಾನುಭವಿಗಳ ಸಮಾವೇಶವು ಮಾ.7ರಂದು ಕಿಲ್ಲೆಮೈದಾನದಲ್ಲಿ ನಡೆಯಲಿದೆ ಎಂದು ಶಾಸಕ ಅಶೋಕ್‌ ಕುಮಾರ್ ರೈ ಶಾಸಕರ ಕಚೇರಿಯಲ್ಲಿ ಮಾ.4ರಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.


ರಾಜ್ಯ ಸರಕಾರ ಆಯೋಜಿಸುವ ಫಲಾನುಭವಿಗಳ ಸಮಾವೇಶವು ಇಡೀ ರಾಜ್ಯದಾದ್ಯಂತ ಎಲ್ಲಾ ವಿಧಾನ ಸಭಾ ಕ್ಷೇತ್ರಗಳಲ್ಲಿಯೂ ನಡೆಯಲಿದೆ. ದ.ಕ ಜಿಲ್ಲೆಯಲ್ಲಿ ಮಾ.5ರಿಂದ ಪ್ರಾರಂಭಗೊಂಡು ಮಾ.10ರ ತನಕ ನಡೆಯಲಿದೆ. ಪುತ್ತೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಆಗಮಿಸಲಿದ್ದಾರೆ. ರಾಜ್ಯದ ವಿವಿಧ ಮಂತ್ರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ರವರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದ್ದು ಅವರೂ ಭಾಗವಹಿಸುವ ಸಾಧ್ಯತೆಗಳಿವೆ. ಸಮಾವೇಶವು ಬೆಳಿಗ್ಗೆ 11 ಗಂಟೆಗೆ ಆರಂಭವಾಗಲಿದೆ.

ಪುತ್ತೂರು ವಿಧಾನ ಸಭಾ ಕ್ಷೇತ್ರದ ಅಂಗನವಾಡಿ ಕಾರ್ಯಕರ್ತೆಯ ಮೂಲಕ ಮೂಲೆ ಮೂಲೆಗಳಿಂದ ಫಲಾನುಭವಿಗಳು ಆಗಮಿಸಲಿದ್ದು ಸಮಾವೇಶದಲ್ಲಿ ಸುಮಾರು 20,000 ಮಂದಿ ಸೇರುವ ನಿರೀಕ್ಷೆಯಿದೆ.5 ಗ್ಯಾರಂಟಿ ಯೋಜನೆಗಳಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಶಕ್ತಿ ಯೋಜನೆಯ ಮೂಲಕ 81.90ಲಕ್ಷ ಮಂದಿ ಪ್ರಯಾಣಿಸಿದ್ದಾರೆ. ಇದರ ಒಟ್ಟು ಮೊತ್ತ ರೂ.17.88ಕೋಟಿ ಆಗಿದ್ದು ಅದನ್ನು ಸರಕಾರದಿಂದ ಸಾರಿಗೆ ನಿಗಮಕ್ಕೆ ಪಾವತಿಸಲಾಗಿದೆ. ಗೃಹಲಕ್ಷ್ಮೀ ಯೋಜನೆಯಲ್ಲಿ 59,727 ಮಂದಿ, ಗೃಹಜ್ಯೋತಿಯಲ್ಲಿ 30,000 ಮಂದಿ, ಅನ್ನಭಾಗ್ಯದಲ್ಲಿ 24,948 ಮಂದಿ, ಅಂತ್ಯೋದಯದಲ್ಲಿ 2,944 ಹಾಗೂ ಇತ್ತೀಚೆಗೆ ಆರಂಭಗೊಂಡಿರುವ ಯುವನಿಧಿಯಲ್ಲಿ 356 ಮಂದಿ ಫಲಾನುಭವಿಗಳು ಪ್ರಯೋಜನ ಪಡೆದುಕೊಂಡಿದ್ದಾರೆ.

ಗೃಹಲಕ್ಷ್ಮೀ ಯೋಜನೆಯಲ್ಲಿ ಶೇ.98 ಮಂದಿ ಪ್ರಯೋಜನ ಪಡೆದುಕೊಂಡಿದ್ದಾರೆ. ತಾಂತ್ರಿಕ ತೊಂದರೆಗಳಿಂದ ಕೆಲವು ಮಂದಿಗೆ ಬಾಕಿಯಿದೆ. ಫಲಾನುಭವಿಗಳ ಸಮಾವೇಶದಲ್ಲಿ ವಿವಿಧ ಗ್ಯಾರಂಟಿ ಯೋಜನೆಗಳಿಗೆ ಪ್ರತ್ಯೇಕ ಕೌಂಟರ್‌ಗಳನ್ನು ತೆರೆಯಾಗುತ್ತಿದ್ದು ಫಲಾನುಭವಿಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ವಿಚಾರ ವಿಮರ್ಶೆ ಮಾಡಲಾಗುವುದು ಎಂದರು.

ಮಂಗಳೂರು: ನ.16 ರಂದು ಸಿಟಿ ಗೋಲ್ಡ್ ಆ್ಯಂಡ್ ಡೈಮಂಡ್ ನ ಬೆಳ್ಳಿ ಹಬ್ಬದ ಲೋಗೋ ಬಿಡುಗಡೆ

Posted by Vidyamaana on 2023-11-15 13:38:06 |

Share: | | | | |


ಮಂಗಳೂರು: ನ.16 ರಂದು ಸಿಟಿ ಗೋಲ್ಡ್ ಆ್ಯಂಡ್ ಡೈಮಂಡ್ ನ ಬೆಳ್ಳಿ ಹಬ್ಬದ ಲೋಗೋ ಬಿಡುಗಡೆ

ಮಂಗಳೂರು: 25ನೇ ವಾರ್ಷಿಕೋತ್ಸವದ ಪ್ರಯುಕ್ತ ನ.16ರಿಂದ 26ರವರೆಗೆ ನಗರದ ಕಂಕನಾಡಿಯಲ್ಲಿರುವ ಚಿನ್ನಾಭರಣ ಮಳಿಗೆಯಾದ ಸಿಟಿಗೋಲ್ಡ್ ಆ್ಯಂಡ್ ಡೈಮಂಡ್ಸ್ನಲ್ಲಿ ಆ್ಯಂಟಿಕ್ ಫೆಸ್ಟ್ ನಡೆಯಲಿದೆ.


ನ.16ರ ಸಂಜೆ 4ಕ್ಕೆ ಸಂಸ್ಥೆಯ ಬೆಳ್ಳಿಹಬ್ಬದ ಲೋಗೋ ಅನಾವರಣಗೊಳ್ಳಲಿದೆ. ಆ್ಯಂಟಿಕ್ ಫೆಸ್ಟ್ ಕಾರ್ಯಕ್ರಮವನ್ನು ತುಳು ಚಿತ್ರ ನಟ ಹಾಗು ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಉದ್ಘಾಟಿಸಲಿದ್ದಾರೆ. ಅತಿಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ರಾಮಯ್ಯ, ಉಳ್ಳಾಲ ಸೈಯದ್ ಮದನಿ ದರ್ಗಾ ಮತ್ತು ಕೇಂದ್ರ ಜುಮ್ಮಾ ಮಸೀದಿಯ ಅಧ್ಯಕ್ಷ ಬಿ.ಜಿ. ಹನೀಫ್ ಹಾಜಿ ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಚಾರ್ಮಾಡಿ ಹಸನಬ್ಬ, ಮೀಫ್ ಸಂಸ್ಥೆಯ ಪರವಾಗಿ ಅಧ್ಯಕ್ಷ ಮೂಸಬ್ಬ ಬ್ಯಾರಿ ಹಾಗು ದ.ಕ. ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರವಿ ಪೊಸವಣಿಕೆ ಅವರನ್ನು ಸನ್ಮಾನಿಸಲಾಗುವುದು.

ಸಿಟಿ ಗೋಲ್ಡ್ ಸಂಸ್ಥೆಯ 25ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರಿಗೆ ಚಿನ್ನಾಭರಣ ಖರೀದಿಯ ಮೇಕಿಂಗ್ ಚಾರ್ಜ್ ಮೇಲೆ ಶೇ.55ರಷ್ಟು ಹಾಗೂ ವಜ್ರಾಭರಣ ಖರೀದಿಯ ವಜ್ರದ ಮೌಲ್ಯದ ಮೇಲೆ ಶೇ 30ರಷ್ಟು ವಿನಾಯಿತಿ ನೀಡಲಾಗುವುದು.

ಪ್ರತಿ ಖರೀದಿಯ ಗ್ರಾಹಕರಿಗೆ ಸ್ಕ್ರ್ಯಾಚ್ ಆ್ಯಂಡ್ ವಿನ್ ಕೂಪನ್ ವಿತರಿಸಲಾಗುವುದು. ವಿಜೇತರಿಗೆ ಚಿನ್ನದ ನಾಣ್ಯ ಹಾಗು ಇತರೆ ಉಡುಗೊರೆಗಳು ನೀಡಲಾಗುವುದು. ಮದುವೆ ಖರೀದಿಯಲ್ಲಿನ ಪ್ರತಿ ಗ್ರಾಹಕರಿಗೂ ಕೂಪನ್ ವಿತರಿಸಲಾಗುವುದು. ವಿಜೇತ 5 ಜೋಡಿ ನವ ದಂಪತಿಗೆ ಮಲೇಷ್ಯಾ ಪ್ರವಾಸ ಕೈಗೊಳ್ಳುವ ಅವಕಾಶ ದೊರೆಯಲಿದೆ.

Recent News


Leave a Comment: