Posted by vidyamaana on 2024-07-03 18:55:10 | Last Updated by Vidyamaana on 2024-07-03 18:55:10
ಬೆಂಗಳೂರು : ಕಾಲೇಜು ವಿದ್ಯಾರ್ಥಿಯೊಬ್ಬ ಸೆಕ್ಯೂರಿಟಿ ಗಾರ್ಡ್ ಓರ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿಯಲ್ಲಿ ನಡೆದಿದೆ.
ಅಮೃತಹಳ್ಳಿಯ ಸಿಂಧಿ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಜೈಕಿಸನ್ ರಾಯ್ ಕೊಲೆಯಾದ ಸೆಕ್ಯೂರಿಟಿ ಗಾರ್ಡ್. ಭಾರ್ಗವ್ ಎಂಬ ವಿದ್ಯಾರ್ಥಿ ಚಾಕುವಿನಿಂದ ಇರಿದು ಸೆಕ್ಯೂರಿಟಿ ಗಾರ್ಡ್ ನನ್ನು ಹತ್ಯೆ ಮಾಡಿದ್ದಾನೆ.
ಸ್ಥಳದಲ್ಲೇ ಸೆಕ್ಯೂರಿಟಿ ಗಾರ್ಡ್ ಮೃತಪಟ್ಟಿದ್ದಾರೆ.
ಕೊಲೆಗೆ ಕಾರಣವೇನು?
ಇಂದು ಸಿಂಧಿ ಕಾಲೇಜಿನಲ್ಲಿ ಕಾರ್ಯಕ್ರಮ ಇತ್ತು. ಈ ವೇಳೆ ಆರೋಪಿ ವಿದ್ಯಾರ್ಥಿ ಭಾರ್ಗವ್, ಕಾಲೇಜಿಗೆ ಕುಡಿದು ಬಂದಿದ್ದಾನೆ. ಈ ಹಿನ್ನಲೆ ಸೆಕ್ಯೂರಿಟಿಗಾರ್ಡ್, ಭಾರ್ಗವ್ನನ್ನು ಕಾಲೇಜಿನ ಒಳಗೆ ಬಿಡಲು ನಿರಾಕರಿಸಿದ್ದಾರೆ. ಇದರಿಂದ ಸೆಕ್ಯೂರಿಟಿ ಗಾರ್ಡ್ ಹಾಗೂ ವಿದ್ಯಾರ್ಥಿ ಮಧ್ಯೆ ಗಲಾಟೆ ಆಗಿದೆ. ಬಳಿಕ ಅಂಗಡಿಗೆ ಹೋಗಿ ಚಾಕು ಖರೀದಿಸಿದ್ದ ಭಾರ್ಗವ್, ನೇರವಾಗಿ ಬಂದು ಸೆಕ್ಯೂರಿಟಿ ಗಾರ್ಡ್ ಎದೆಗೆ ಐದಾರು ಬಾರಿ ಇರಿದಿದ್ದಾನೆ. ಅದು ಹೃದಯಕ್ಕೆ ಹೊಕ್ಕು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದ.
Posted by Vidyamaana on 2024-02-20 22:31:18 |
ಪುತ್ತೂರು: ಇಲ್ಲಿನ ಮೊಯಿದೀನ್ ಬಿಲ್ಡಿಂಗಿನಲ್ಲಿರುವ ಆಶೀರ್ವಾದ ಗಿಪ್ಟ್ ಸ್ಕೀಂ ಕಚೇರಿಯಲ್ಲಿ ಅತಿಥಿಗಳ ಸಮ್ಮುಖದಲ್ಲಿ ಮೊದಲ ಕಂತಿನ ಉಚಿತ ಡ್ರಾ ಫೆ. 15ರಂದು ನಡೆಯಿತು.
ಎರಡು ಬಂಪರ್ ಡ್ರಾದಲ್ಲಿ ಆ್ಯಕ್ಸಸ್ 125 ಅನ್ನು ಅಕ್ಷತಾ ಸುಳ್ಯ (ನಂ. 3091) ಹಾಗೂ 1 ಲಕ್ಷ ರೂ.ವನ್ನು ದಯಾನಂದ ಕಾಸರಗೋಡು (ನಂ. 2326) ಪಡೆದುಕೊಂಡರು.
ಉಳಿದಂತೆ ಅದೃಷ್ಟವಂತ 50 ಜನರು ಆಕರ್ಷಕ ಗಿಫ್ಟ್ ಆಗಿ ಚಿನ್ನದ ಕಾಯ್ನ್ ವಿಜೇತರಾಗಿದ್ದಾರೆ ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.
ಸ್ಕೀಮಿಗೆ ಸೇರಲು ಅವಕಾಶ ಇದ್ದು ಹೆಚ್ಚಿನ ವಿವರಗಳಿಗಾಗಿ ಈ ನಂಬರನ್ನು ಸಂಪರ್ಕಿಸಿ
https://chat.whatsapp.com/JKb4VrhBUhl0vSlIV1zvlK
Posted by Vidyamaana on 2024-02-02 14:12:03 |
ಮಂಗಳೂರು, ಫೆ.2: ನರೇಂದ್ರ ಮೋದಿಯವರ ವಿಕಸಿತ ಭಾರತದ ಪರಿಕಲ್ಪನೆಯನ್ನು ಮುಂದಿಟ್ಟುಕೊಂಡು 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ದೇಶವನ್ನಾಗಿಸುವ ನಿಟ್ಟಿನಲ್ಲಿ ವಿತ್ತ ಮಂತ್ರಿಗಳಾದ ನಿರ್ಮಲಾ ಸೀತಾರಮನ್ ಮಂಡಿಸಿದ ದೂರದೃಷ್ಟಿಯ, ಪ್ರಗತಿಶೀಲ ಮತ್ತು ವಿತ್ತೀಯ ಶಿಸ್ತಿನ ಮಧ್ಯಂತರ ಬಜೆಟ್ 2024ನ್ನು ಅತ್ಯಂತ ಸಂತೋಷದಿಂದ ಸ್ವಾಗತಿಸುತ್ತೇನೆ. ವಿಕಸಿತ ಭಾರತದ 4 ಸ್ತಂಭಗಳಾದ ಯುವಜನತೆ, ಬಡವರು, ಮಹಿಳೆಯರು ಮತ್ತು ರೈತರನ್ನು ಸಶಕ್ತಗೊಳಿಸುವ ಮೂಲಕ 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವ ಭರವಸೆಯನ್ನು ಈ ಬಜೆಟ್ ನೀಡುತ್ತದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾ. ಬೃಜೇಶ್ ಚೌಟ ಹೇಳಿದ್ದಾರೆ.
ಈ ಬಜೆಟ್ನಲ್ಲಿ ವಿತ್ತೀಯ ಕೊರತೆಯನ್ನು ನಿಯಂತ್ರಣದಲ್ಲಿಟ್ಟು ಬಂಡವಾಳ ವೆಚ್ಚಕ್ಕೆ ಐತಿಹಾಸಿಕ ಗರಿಷ್ಠ 11,11,111 ಕೋಟಿ ರೂಪಾಯಿಗಳನ್ನು ನೀಡುವ ಮೂಲಕ ಭಾರತದ ಆಧುನಿಕ ಮೂಲಸೌಕರ್ಯ ನಿರ್ಮಾಣದೊಂದಿಗೆ ಯುವಜನತೆಗೆ ಹೊಸ ಉದ್ಯೋಗಾವಕಾಶಗಳನ್ನು ಕಲ್ಪಿಸಲಿದೆ. ಸ್ಕಿಲ್ ಇಂಡಿಯಾ ಮಿಷನ್ ಯೋಜನೆಯಡಿ 1.4 ಕೋಟಿ ಯುವಕರಿಗೆ ತರಬೇತಿ ನೀಡಲಾಗಿದ್ದು, ಪುನರ್ ಕೌಶಲ್ಯ ಯೋಜನೆಯಡಿ 54 ಲಕ್ಷ ಯುವಕರಿಗೆ ತರಬೇತಿ ನೀಡಲಾಗಿದೆ. ದೇಶದಲ್ಲಿ 3,000 ಐಟಿಐ, 7 ಐಐಟಿ, 16 ಐಐಐಟಿಎಸ್, 7 ಐಐಎಂಎಸ್, 15 ಎಐಐಎಂಎಸ್ ಅನ್ನು ನಿರ್ಮಿಸಿರುವ ಕಾರ್ಯ ಶ್ಲಾಘನೀಯ.
ಮೀನುಗಾರಿಕೆಗೆ ಹೊಸ ಸಚಿವಾಲಯ ಸ್ಥಾಪನೆ, ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮೂಲಕ ಬಡ, ಮಧ್ಯಮ ವರ್ಗದವರ ಅಭಿವೃದ್ಧಿ ಹಾಗೂ ಈ ಯೋಜನೆಯಡಿಯಲ್ಲಿ ಮೀನುಗಾರರ ಆರ್ಥಿಕತೆಯ ಅಭಿವೃದ್ಧಿ ಜೊತೆಗೆ 55 ಲಕ್ಷ ಉದ್ಯೋಗ ಸೃಷ್ಟಿಯಿಂದ ಕರಾವಳಿ ರಾಜ್ಯಗಳ ಅಭಿವೃದ್ಧಿಯ ಜೊತೆಗೆ ನಮ್ಮ ಕರಾವಳಿ ಕರ್ನಾಟಕಕ್ಕೆ ವಿಶೇಷ ಕೊಡುಗೆಯಾಗಲಿದೆ.
ರೂ. 6.21 ಲಕ್ಷ ಕೋಟಿಯ ರಕ್ಷಣಾ ಕ್ಷೇತ್ರದ ಅನುದಾನ ನಮ್ಮ ಸೇನೆಗೆ ಇನ್ನಷ್ಟು ಬಲ ನೀಡಲಿದ್ದು, ಗಡಿ ರಕ್ಷಣೆ ಹಾಗೂ ಸೇನೆಯ ಸೌಕರ್ಯಗಳ ಆಧುನೀಕರಣಕ್ಕೆ ನೆರವಾಗಲಿದೆ. ಇದು ಹೆಚ್ಚಿನ ಭದ್ರತೆಗೆ ಇನ್ನಷ್ಟು ಪ್ರೋತ್ಸಾಹ ನೀಡಲಿದೆ. ಉತ್ಪಾದನೆಯ ವಿಷಯದಲ್ಲಿ ದೇಶವನ್ನು ಸ್ವತಂತ್ರಗೊಳಿಸುವ ಗುರಿಯೊಂದಿಗೆ ರಕ್ಷಣಾ ವಲಯದಲ್ಲಿ ಆತ್ಮ ನಿರ್ಭರತೆಯನ್ನು ಸಾಧಿಸಲಿದೆ.
ದೇಶದ ಹಲವು ನಗರಗಳಲ್ಲಿ ಮೆಟ್ರೋ ರೈಲು ಮಾರ್ಗ ವಿಸ್ತರಣೆಗೆ ಅನುದಾನ, ಭವಿಷ್ಯದ ಸಾರಿಗೆ ಎಂದೇ ಬಿಂಬಿತವಾಗಿರುವ ಎಲೆಕ್ಟ್ರಿಕ್ ವಾಹನ ಉತ್ಪಾದನೆ ಹಾಗೂ ಚಾರ್ಜಿಂಗ್ ಸ್ಟೇಷನ್ ಹೆಚ್ಚಳಕ್ಕೆ ಆದ್ಯತೆ, 40 ಸಾವಿರ ಹಳೆಯ ರೀತಿಯ ರೈಲ್ವೆ ಬೋಗಿಗಳನ್ನು ವಂದೇ ಭಾರತ್ ಬೋಗಿಗಳಾಗಿ ಪರಿವರ್ತನೆ, ಉಡಾನ್ ಯೋಜನೆಗೆ 517 ಹೊಸ ಮಾರ್ಗ ರೂಪಿಸುವ ಮೂಲಕ ಸಣ್ಣ ನಗರಗಳಿಗೂ ವಿಮಾನಯಾನ ಸೇವೆ ಒದಗಿಸುವ ಯೋಜನೆ ಅತ್ಯಂತ ಸ್ವಾಗತಾರ್ಹ ಬೆಳವಣಿಗೆ.
ರಾಜ್ಯಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಬಡ್ಡಿರಹಿತ ಸಾಲ ನೀಡುವ ಮೂಲಕ ಪ್ರವಾಸೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದಂತಾಗಿದೆ. ಡೈರಿ ಉದ್ಯಮದಲ್ಲಿ ತೊಡಗಿರುವ ಕೃಷಿಕರಿಗೆ ನೆರವು, ರಾಸುಗಳಲ್ಲಿ ಕಂಡು ಬರುವ ಕಾಲು ಬಾಯಿ ರೋಗ ತಡೆಗೆ ಕ್ರಮ, ಪಿಎಂ ಫಸಲ್ ಬೀಮಾ ಯೋಜನೆಯಡಿ 4 ಕೋಟಿ ಕೃಷಿಕರಿಗೆ ಬೆಳೆ ವಿಮೆ, ಕೊಯ್ಲಿನ ನಂತರ ಕೃಷಿ ಉತ್ಪನ್ನಗಳ ಮಾರಾಟ ಹಾಗೂ ಸಂಸ್ಕರಣೆಗೆ ಖಾಸಗಿ ಹಾಗೂ ಸಾರ್ವಜನಿಕ ವಲಯದ ಸಹಭಾಗಿತ್ವದ ಪರಿಕಲ್ಪನೆ ಶ್ಲಾಘನೀಯ ನಡೆ.
ದೇಶದ ಎಲ್ಲ ಜಿಲ್ಲೆಗಳಲ್ಲೂ ಆಸ್ಪತ್ರೆ ಸ್ಥಾಪನೆ, 9 ರಿಂದ 14 ವರ್ಷದೊಳಗಿನ ಬಾಲಕಿಯರಿಗೆ ಗರ್ಭಕಂಠದ ಕ್ಯಾನ್ಸರ್ಗೆ ಲಸಿಕೆ ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ವಿಸ್ತರಣೆಯ ಮೂಲಕ ಆರೋಗ್ಯ ರಕ್ಷೆ ಒದಗಿಸಲಾಗಿದೆ. ಮಧ್ಯಂತರ ಬಜೆಟ್ ಚುನಾವಣಾ ಪೂರ್ವ ಘೋಷಣೆಗಳ ಬಜೆಟ್ ಆಗದೆ ಜನಸಾಮಾನ್ಯರ ಜೀವನ ಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ “ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್, ಸಬ್ ಕಾ ವಿಶ್ವಾಸ್” ಎನ್ನುವ ದೂರ ದೃಷ್ಟಿಯ ಘೋಷಣೆಯನ್ನು ಸಕಾರಗೊಳಿಸುವ ವಿಕಸಿತ ಭಾರತಕ್ಕೆ ಮುನ್ನುಡಿ ಬರೆದ ಅತ್ಯಂತ ಸ್ವಾಗತರ್ಹ ಬಜೆಟ್ ಇದಾಗಿದೆ ಎಂದು ಕ್ಯಾ. ಬೃಜೇಶ್ ಚೌಟ ತಿಳಿಸಿದ್ದಾರೆ.
Posted by Vidyamaana on 2024-02-21 04:36:15 |
ಪುತ್ತೂರು: ಬನ್ನೂರು ಆನೆಮಜಲು ದೈಯ್ಯೆರೆ ಮಾಡ ನಡಿಮಾರ್ ಬಾವದಕೆರೆ ಶ್ರೀ ನಾಗಸನ್ನಿಧಿ, ಶ್ರೀ ಇಷ್ಟದೇವತೆ, ರಕ್ತೇಶ್ವರಿ, ಅಣ್ಣಪ್ಪ ಪಂಜುರ್ಲಿ ಸಾನಿಧ್ಯದಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ವಿವಿಧ ವೈದಿಕ ಕಾರ್ಯಕ್ರಮಗಳೊಂದಿಗೆ ಫೆ.21 ಹಾಗೂ 22 ರಂದು ನಡೆಯಲಿದೆ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ವಿಶ್ವನಾಥ ಗೌಡ ಅಯೋಧ್ಯಾನಗರ ಮತ್ತು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎ.ವಿ.ನಾರಾಯಣ,ತಿಳಿಸಿದ್ದಾರೆ.
ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಬ್ರಹ್ಮಕಲಶೋತ್ಸವದ ಅಂಗವಾಗಿ ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿಗಳ ನೇತೃತ್ವದಲ್ಲಿ ಫೆ.21 ಬುಧವಾರ ಬೆಳಿಗ್ಗೆ 11 ಕ್ಕೆ ಹಸಿರುವಾಣಿ ಸಮರ್ಪಣೆ, ಸಂಜೆ 7 ರಿಂದ ಪುಣ್ಯಾಹವಾಚನ, ಸ್ಥಳಶುದ್ಧಿ, ಪ್ರಾಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತುಹೋಮ, ವಾಸ್ತುಬಲಿ, ವಾಸ್ತು ಪುಣ್ಯಾಹಾಂತ ನಡೆದು ಬಳಿಕ ಅನ್ನಸಂತರ್ಪಣೆ ಜರಗಲಿದೆ. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸಂಜೆ 6.30 ರಿಂದ ಗುಡ್ಡಪ್ಪ ಗೌಡ ಬಲ್ಯ ತಂಡದಿಂದ ತಾಳಮದ್ದಳೆ ಪ್ರದರ್ಶನಗೊಳ್ಳಲಿದೆ ಎಂದು ಹೇಳಿದರು.
ಫೆ.22 ಗುರುವಾರ ಬೆಳಿಗ್ಗೆ 7 ರಿಂದ ಗಣಪತಿ ಹೋಮ, ನಾಗತಂಬಿಲ, ಬ್ರಹ್ಮಕಲಶ ಪೂಜೆ, 11.33 ರ ವೃಷಭಲಗ್ನ ಸುಮುಹೂರ್ತದಲ್ಲಿ ಪ್ರತಿಷ್ಠೆ, ಬ್ರಹ್ಮಕಲಶಾಭಿಷೇಕ ನಡೆದು ಬಳಿಕ ಮಹಾಪೂಜೆ, ನಿತ್ಯನೈಮಿತ್ಯಾದಿಗಳ ನಿರ್ಣಯ, ಪ್ರಸಾದ ವಿತರಣೆ ನಡೆದು ಬಳಿಕ ಅನ್ನಸಂತ್ರಪಣೆ ಜರಗಲಿದೆ. ಸಾಂಸ್ಕೃತಿ ಕಾರ್ಯಕ್ರಮಗಳ ಅಂಗವಾಗಿ ಬೆಳಿಗ್ಗೆ 8 ರಿಂದ ವಿವಿಧ ಭಜನಾ ತಂಡದಿಂದ ಭಜನೆ, ಮಧ್ಯಾಹ್ನ 2 ರಿಂದ ಹರಿದಾಸ ಮಂಡ್ಯ ಮಧುಸೂದನ್ ತಂಡದಿಂದ ಹರಿಕಥಾ ಕಾಲಕ್ಷೇಪ ‘ಗಿರಿಜಾ ಕಲ್ಯಾಣ’, ಸಂಜೆ 4 ರಿಂದ ಪುತ್ತೂರು ಜಗದೀಶ್ ಆಚಾರ್ಯ ತಂಡದಿಂದ ‘ಸಂಗೀತ ಗಾನ ಸಂಭ್ರಮ’ ನಡೆಯಲಿದೆ ಎಂದು ಅವರು ತಿಳಿಸಿದರು.
ಸಂಜೆ 6.30 ರಿಂದ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಶಾಸಕ ಸಂಜೀವ ಮಠಂದೂರು ವಹಿಸಲಿದ್ದು, ಬ್ರಹ್ಮಶ್ರೀ ಕುಂಟಾರು ರವೀಶ ತಂತ್ರಿ ಧಾರ್ಮಿಕ ಉಪನ್ಯಾಸ ನೀಡುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಅಶೋಕ್ ಕುಮಾರ್ ರೈ ಬ್ರಹ್ಮಕಲಶೋತ್ಸವ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಸುರೇಶ್ ಪೂಂಜಾ ಪಾಳ್ಗೊಳ್ಳುವರು. ಅತಿಥಿಗಳಾಗಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯಸವ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ರಾಜಶೇಖರ ಜೈನ್, ವಕೀಲರ ಸಂಘದ ಅಧ್ಯಕ್ಷ ಕೆ.ವಿ.ಮನೋಹರ್, ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್, ಕುಂಟ್ಯಾನ ಶ್ರೀ ಸದಾಶಿವ ದೇವಸ್ಥಾನದ ಅಧ್ಯಕ್ಷ ರಾಮಣ್ಣ ಗೌಡ ಹಲಂಗ, ಬನ್ನೂರು ಗ್ರಾಪಂ ಅಧ್ಯಕ್ಷೆ ಸ್ಮಿತಾ ಎನ್., ನಗರಸಭೆ ಸದಸ್ಯರಾದ ಗೌರಿ ಬನ್ನೂರು, ಮೋಹಿನಿ ವಿಶ್ವನಾಥ ಗೌಡ ಪಾಲ್ಗೊಳ್ಳಲಿದ್ದಾರೆ ಎಂದು ಅವರು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಮೌನೀಶ್ ಎನ್., ಬ್ರಹ್ಮಕಲಶೋತ್ಸವ ಸಮಿತಿ ಖಜಾಂಚಿ ರಮೇಶ್ ಗೌಡ ನೀರ್ಪಾಜೆ, ಪ್ರಧಾನ ಕಾರ್ಯದರ್ಶಿ ರತ್ನಾಕರ ರೈ ಕೆಳಗಿನಮನೆ ಉಪಸ್ಥಿತರಿದ್ದರು.
Posted by Vidyamaana on 2023-08-27 15:50:25 |
ಪುತ್ತೂರು : ಶಾಸಕರಾದ ಅಶೋಕ್ ಕುಮಾರ್ ರೈಯವರ ಬಹುನಿರೀಕ್ಷಿತ ಕಚೇರಿ ಆ.28ರಂದು ಉದ್ಘಾಟನೆಗೊಳ್ಳ ಲಿದೆ. ಶಾಸಕರ ಅಧಿಕೃತ ಕಚೇರಿ ಮಿನಿ ವಿಧಾನಸೌಧದ ಬಳಿ ಇರುವ ಹಳೆಯ ಪುರಸಭಾ ಕಚೇರಿ (ಪುಡಾಕಚೇರಿ)ಯಲ್ಲಿ ಉದ್ಘಾಟನೆ ಗೊಳ್ಳಲಿದ್ದು ಹಲವಾರು ಮಂದಿ ಗಣ್ಯರು ಭಾಗವಹಿಸಲಿ ದ್ದಾರೆ.
ವಿಶಾಲ ಸ್ಥಳಾವಕಾಶವನ್ನು ಹೊಂದಿರುವ ಕಚೇರಿಯಲ್ಲಿ ಶಾಸಕರನ್ನು ಭೇಟಿಯಾಗಲು ಬರುವವರಿಗೆ, ಅಥವಾ ಕ ಚೇರಿಗೆ ಬರುವ ಸಾರ್ವಜನಿಕರಿಗೆ ಎಲ್ಲಾ ಸೌಕರ್ಯಗಳ ನ್ನೊಳನ್ನು ಈ ಕಚೇರಿ ಹೊಂದಿದೆ. ಪಾರ್ಕಿಂಗ್ ವ್ಯವಸ್ಥೆ ಯೂ ಸಾಕಷ್ಟಿದೆ. ವಿಧಾನಸಭಾ ಅಧ್ಯಕ್ಷರಾದ ಯು ಟಿ ಖಾದರ್, ಮಾಜಿ ಸಚಿವ ಬಿ ರಮಾನಾಥ ರೈ, ಮಾಜಿ ಶಾ ಸಕಿ ಶಕುಂತಳಾ ಶೆಟ್ಟಿ ಸೇರಿದಂತೆ ಪ್ರಮುಖ ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ. ಕಚೇರಿ ಉದ್ಘಾಟನೆ ಬಳಿಕ ಸುಮಾರು 160 ಕುಟುಂಬಗ ಳಿಗೆ ಶಾಸಕರು ಹಕ್ಕುಪತ್ರ ವಿತರಿಸಲಿದ್ದಾರೆ ಎಂದು ತಿಳಿ ದು ಬಂದಿದೆ.ಸಾರ್ವಜನಿಕರಿಗೆ ತ್ವರಿತಗತಿಯ ಸೇವೆ ನೀಡುವುದು ಈ ಕಚೇರಿಯ ಉದ್ದೇಶವಾಗಿದ್ದು ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಾರ್ವಜನಿಕರು ಈ ಕಚೇರಿಗೆ ಬಂದರೆ ಶಾಸಕರನ್ನು ಭೇಟಿಯಾಗಬಹುದು. ಕಚೇರಿಯಲ್ಲಿ ಸಾರ್ವಜನಿಕರಿಗೆ ಎಲ್ಲಾ ರೀತಿಯ ಅರ್ಜಿಗಳನ್ನು ಸ್ವೀಕರಿಸಲು ಪ್ರತ್ಯೇಕ ಕೌಂಟರ್ಗಳನ್ನು ತೆರೆಯಲಾಗಿದೆ. ಯಾವುದೇ ಇಲಾಖೆಗಳಿಗೆ ಅರ್ಜಿ ಸಲ್ಲಿಸಲು ಅಥವಾ ಯಾವುದೆ ಇಲಾಖೆಯಲ್ಲಿ ಕೆಲಸ ಕಾರ್ಯಗಳು ನಡೆಯದೆ ಇದ್ದಲ್ಲಿ ಶಾಸಕರ ಕಚೇರಿಯಲ್ಲಿರುವ ಆಯಾ ಇಲಾಖೆಗೆ ಸಂಬಂ ಧಿಸಿದ ಸಿಬಂದಿಗಳನ್ನು ಭೇಟಿಯಾಗಿ ಮಾತನಾಡಬಹುದಾಗಿದೆ.
ನನ್ನ ವಿಧಾನಸಭಾ ಕ್ಷೇತ್ರದ ಸಾರ್ವಜನಿಕರಿಗೆ ಅನುಕೂ ಲವಾಗಲೆಂದು ಮಿನಿ ವಿಧಾನಸೌಧದ ಬಳಿಯೇ ಹೊಸ ಕಚೇರಿಯನ್ನು ತೆರೆದಿದ್ದು ಸಾರ್ವಜನಿಕರ ಸೇವೆಗೆ ಸಿಬಂ ದಿಗಳನ್ನು ನೇಮಕ ಮಾಡಿದ್ದೇನೆ. ಯಾವುದೇ ಸಮಸ್ಯೆಗ ಳಿದ್ದರೂ, ತೊಂದರೆಗೊಳಗಾದವರು ಶಾಸಕರ ಕಚೇರಿಗೆ ಬಂದು ತಿಳಿಸಬಹುದು. ದೂರು, ಮನವಿ ಇದ್ದರೂ ಕೊಡಬಹುದು. ಕ್ಷೇತ್ರದ ಎಲ್ಲರಿಗೂ ನನ್ನ ಕಚೇರಿಗೆ ಮುಕ್ತವಾಗಿ ಬರಲು ಅವಕಾಶ ಇದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
Posted by Vidyamaana on 2023-06-10 14:43:06 |
ಪುತ್ತೂರು: ನನ್ನ ಎರಡು ಕಾಲುಗಳು ಬಲಹೀನವಾಗಿದೆ. ವಿಕಲಚೇತನರಿಗೆ ಅಥವಾ ನಡೆದಾಡಲು ಸಾಧ್ಯವಾಗದ ಚೇತನರಿಗೆ ಸರಕಾರದಿಂದ ನಾಲ್ಕು ಚಕ್ರದ ಸ್ಕೂಟರ್ ನೀಡುತ್ತಾರೆ. ನನಗು ಒಂದು ಸ್ಕೂಟರ್ ಕೊಡಿ ಎಂದು ಕಳೆದ ನಾಲ್ಕು ವರ್ಷಗಳಿಂದ ಸಾಸಕರಿಗೆ ಮನವಿ ಮಾಡುತ್ತಿದ್ದೇನೆ ಸ್ಕೂಟರ್ ಕೊಟ್ಟಿಲ್ಲ. ನೀವು ನನಗೊಂದು ಸ್ಕೂಟರ್ ಕೊಡಿಸಿ ಎಂದು ವಿಕಲಚೇತನ ಯುವಕ ಅಜ್ಜಿನಡ್ಕದ ಕೃಷ್ಣಪ್ಪ ಎಂಬವರು ಶಾಸಕರಾದ ಅಶೋಕ್ ರೈ ದೂರಿನ ಜೊತೆ ಮನವಿಯನ್ನು ಸಲ್ಲಿಸಿದ್ದಾರೆ.
ಸುಧಾನ ಶಾಲೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ ಕೃಷ್ಣಪ್ಪರು ಕಾರ್ಯಕ್ರಮ ಮುಗಿಯುತ್ತಿದ್ದಂತೆಯೇ ವೇದಿಕೆಗೆ ಅವರನ್ನು ಸಂಬಂಧಿಕರು ಎತ್ತಿಕೊಂಡು ಬಂದರು. ಇವರ ಸ್ಥಿತಿಯನ್ನು ಕಂಡು ಶಾಸಕರೇ ಅವರನ್ನು ಕುರ್ಚಿಯ ಮೇಲೆ ಕೂರಿಸಿದರು. ಬಳಿಕ ಅವರ ಅರ್ಜಿಯನ್ನುನ ಸ್ವೀಕರಿಸಿದ ಶಾಸಕರು ನಿಮಗೆ ಏನು ಬೇಕು ಎಂದು ಕೇಳಿದ್ದಾರೆ. ಆ ವೇಳೆ ತನ್ನ ಸಮಸ್ಯೆಯನ್ನು ಕೃಷ್ಣಪ್ಪರು ಶಾಸಕರ ಬಳಿ ತೋಡಿಕೊಂಡರು. ನಿಮ್ಮ ಬೇಡಿಕೆಯನ್ನು ಈಡೇರಿಸುತ್ತೇನೆ ಎಂದು ಶಾಸಕರು ಭರವಸೆ ನೀಡಿದಾಗ ಕೃಷ್ಣಪ್ಪರು ಶಾಸಕರಿಗೆ ಕೃತಜ್ಞತೆ ಸಲ್ಲಿಸಿದರು.
Posted by Vidyamaana on 2023-05-28 01:51:41 |
ಪುತ್ತೂರು:ಪರ್ಲಡ್ಕ ನಿವಾಸಿಯಾಗಿದ್ದು ಸೌದಿ ಅರೇಬಿಯಾದಲ್ಲಿ ಉದ್ಯಮಿಯಾಗಿದ್ದ ಮೊಹಮ್ಮದ್ ಹಾರೀಸ್ (43ವ)ರವರು ಮೇ 27ರಂದು ರಾತ್ರಿ ಸೌದಿ ಅರೇಬಿಯಾ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.
ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ, ದರ್ಬೆ ನಿವಾಸಿಯಾಗಿದ್ದ ದಿ.ಮೊಹಮ್ಮದ್ ಹಟ್ಟಾ ಅವರ ಸಹೋದರ, ಸಿಂಡಿಕೇಟ್ ಬ್ಯಾಂಕ್ನ ನಿವೃತ್ತ ಉದ್ಯೋಗಿ ಪರ್ಲಡ್ಕದ ಪಿ. ಅಬ್ದುಲ್ಲಾ ಹಾಜಿ ದರ್ಬೆ ಎಂಬವರ ಪುತ್ರ ಮೊಹಮ್ಮದ್ ಹಾರೀಸ್ ಅವರು ಹಲವು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಸ್ವಂತ ಉದ್ಯಮ ಮಾಡಿಕೊಂಡು ಪತ್ನಿ ಮಕ್ಕಳು ಸಮೇತರಾಗಿ ಸೌದಿ ಅರೇಬಿಯಾದ ಜುಬೈಲ್ನಲ್ಲಿ ವಾಸ್ತವ್ಯ ಹೊಂದಿದ್ದರು. ಮೇ 27ರಂದು ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತದಿಂದ ನಿಧನರಾದರು.ಮೃತರು ತಂದೆ , ತಾಯಿ, ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಮತ್ತು ಓರ್ವ ಸಹೋದರ, ಸಹೋದರಿಯನ್ನು ಅಗಲಿದ್ದಾರೆ.