ಸೊಳ್ಳೆ ಕಚ್ಚಿದ ಎಷ್ಟು ದಿನದ ನಂತ್ರ ಡೆಂಗ್ಯೂ ಬರುತ್ತೆ.? ತಡೆಯುವುದು ಹೇಗೆ.? ಇಲ್ಲಿದೆ ಮಾಹಿತಿ

ಸುದ್ದಿಗಳು News

Posted by vidyamaana on 2024-07-01 19:31:51 |

Share: | | | | |


ಸೊಳ್ಳೆ ಕಚ್ಚಿದ ಎಷ್ಟು ದಿನದ ನಂತ್ರ ಡೆಂಗ್ಯೂ ಬರುತ್ತೆ.? ತಡೆಯುವುದು ಹೇಗೆ.? ಇಲ್ಲಿದೆ ಮಾಹಿತಿ

ಮಳೆಗಾಲ ಆರಂಭವಾಗಿದ್ದು, ಈ ಋತುವಿನಲ್ಲಿ ಆರೋಗ್ಯದ ಕಡೆ ಗಮನಹರಿಸುವುದು ಅಗತ್ಯವಾಗಿದೆ. ಋತುಮಾನದ ಕಾಯಿಲೆಗಳ ಜೊತೆಗೆ ಡೆಂಗ್ಯೂ ಅಪಾಯವಿದೆ. ಡೆಂಗ್ಯೂ ವಾಸ್ತವವಾಗಿ ಹೆಣ್ಣು ಈಜಿಪ್ಟಿ (ಈಡಿಸ್ ಸೊಳ್ಳೆ) ಸೊಳ್ಳೆಗಳಿಂದ ಹರಡುತ್ತದೆ.

ಈ ಸೊಳ್ಳೆಗಳ ಜೀವಿತಾವಧಿ ಕೇವಲ ಒಂದು ತಿಂಗಳು ಮಾತ್ರ. ಆದ್ರೆ, ಈ ಅವಧಿಯಲ್ಲಿ ಅವು 500 ರಿಂದ 1000 ಸೊಳ್ಳೆಗಳಿಗೆ ಜನ್ಮ ನೀಡುತ್ತವೆ. ಈ ಸೊಳ್ಳೆಗಳು ಕೇವಲ ಮೂರು ಅಡಿ ಮಾತ್ರ ಹಾರಬಲ್ಲವು. ಈ ಕಾರಣಕ್ಕಾಗಿ ಅವು ಕೇವಲ ಮನುಷ್ಯನ ಕೆಳಗಿನ ಅಂಗಗಳನ್ನ ಗುರಿಯಾಗಿಸುತ್ತಾರೆ. ಈ ಸೊಳ್ಳೆಗಳು ಕಚ್ಚಿದರೆ ತೀವ್ರ ಜ್ವರದ ಜೊತೆಗೆ ಅನೇಕ ಸಮಸ್ಯೆಗಳು ಎದುರಾಗುತ್ತವೆ.

ಡೆಂಗ್ಯೂ ಸೊಳ್ಳೆಗಳು ಕೂಲರ್‌, ಹೂವಿನ ಕುಂಡಗಳು, ಹಳೆಯ ಪಾತ್ರೆಗಳು ಅಥವಾ ಮನೆಯ ಛಾವಣಿಗಳು, ಟೈರ್‌ಗಳು, ಗುಂಡಿಗಳು ಇತ್ಯಾದಿಗಳಲ್ಲಿ ತಮ್ಮ ಮೊಟ್ಟೆಗಳನ್ನ ಇಡುತ್ತವೆ. ಡೆಂಗ್ಯೂ ಸೊಳ್ಳೆಗಳು ಒಮ್ಮೆಗೆ 100 ರಿಂದ 300 ಮೊಟ್ಟೆಗಳನ್ನ ಇಡುತ್ತವೆ. 4 ದಿನಗಳ ನಂತರ ಅವು ಸೊಳ್ಳೆಗಳಾಗಿ ರೂಪಾಂತರಗೊಳ್ಳುತ್ತವೆ. ಸೊಳ್ಳೆಗಳು ಹುಟ್ಟಿದ 2 ದಿನಗಳಲ್ಲಿ ಹಾರಲು ಪ್ರಾರಂಭಿಸುತ್ತವೆ.

ಡೆಂಗ್ಯೂ ಸೊಳ್ಳೆ ಕಚ್ಚಿದ ತಕ್ಷಣ ಡೆಂಗ್ಯೂ ಲಕ್ಷಣಗಳು ಕಾಣಿಸುವುದಿಲ್ಲ. ಆದ್ರೆ, ಕೆಲವು ದಿನಗಳ ನಂತರ ಅದರ ಪರಿಣಾಮಗಳು ಕಾಣಿಸಿಕೊಳ್ಳಲು ಪ್ರಾರಂಭಿಸುತ್ತವೆ. ಈಡಿಸ್ ಸೊಳ್ಳೆಗಳು ಕಚ್ಚಿದ 3 ರಿಂದ 5 ದಿನಗಳ ನಂತರ ಡೆಂಗ್ಯೂ ಜ್ವರ ಬರುತ್ತದೆ. ಈ ಸೊಳ್ಳೆಗಳು ಬೆಳಗ್ಗೆ ಮತ್ತು ಸಂಜೆಯ ವೇಳೆಯಲ್ಲಿ ಮಾತ್ರ ಸಂಚರಿಸುತ್ತಿದ್ದು, ಡೆಂಗ್ಯೂ ಸೊಳ್ಳೆಗಳು ಮನೆಗಳ ಮೂಲೆಗಳಲ್ಲಿ ಪರದೆಯ ಹಿಂದೆ, ಸೊಳ್ಳೆಗಳು ಇರುವ ಸ್ಥಳಗಳಲ್ಲಿ ಅಡಗಿಕೊಳ್ಳುತ್ತವೆ.

ಡೆಂಗ್ಯೂ ಜ್ವರದ ಲಕ್ಷಣಗಳು.!

ಡೆಂಗ್ಯೂ ಈಡಿಸ್ ಸೊಳ್ಳೆಯ ಕಚ್ಚುವಿಕೆಯಿಂದ ಉಂಟಾಗುವ ಗಂಭೀರ ಕಾಯಿಲೆಯಾಗಿದ್ದು, ಇದರ ಲಕ್ಷಣಗಳು ಸಾಮಾನ್ಯವಾಗಿ ಜ್ವರದಂತಿರುತ್ತವೆ. ಆದ್ರೆ, ಇದು ತೀವ್ರವಾದ ಹೆಮರಾಜಿಕ್ ಜ್ವರಕ್ಕೆ ಕಾರಣವಾಗಬಹುದು. ಸಕಾಲದಲ್ಲಿ ಚಿಕಿತ್ಸೆ ನೀಡದಿದ್ದರೆ ಜೀವಕ್ಕೆ ಅಪಾಯವಿದೆ ಎನ್ನುತ್ತಾರೆ ವೈದ್ಯರು.

ಲಕ್ಷಣಗಳೇನು.?

ತೀವ್ರವಾದ ಜ್ವರ, ತಲೆನೋವು, ಸ್ನಾಯು ನೋವು, ಚರ್ಮದ ಮೇಲೆ ಕೆಂಪು ಗುಳ್ಳೆಗಳು, ಕಣ್ಣುಗಳ ಕೆಳಗೆ ನೋವು, ಮೊಣಕಾಲು ನೋವು, ಊತ, ಹಲ್ಲು, ಮೂಗು, ಒಸಡುಗಳಿಂದ ರಕ್ತಸ್ರಾವ ಇತ್ಯಾದಿಗಳನ್ನ ಗಮನಿಸಿದರೆ ತಕ್ಷಣವೇ ಎಚ್ಚರಗೊಳ್ಳಿ.

ಡೆಂಗ್ಯೂ ತಡೆಗಟ್ಟುವುದು ಹೇಗೆ.?

* ವಿಶೇಷವಾಗಿ ಮಳೆಗಾಲದಲ್ಲಿ ದೇಹವನ್ನ ಸಂಪೂರ್ಣವಾಗಿ ಮುಚ್ಚುವ ಬಟ್ಟೆಗಳನ್ನ ಧರಿಸಿ.

* ಮಲಗುವಾಗ ಸೊಳ್ಳೆ ಪರದೆಗಳನ್ನ ಬಳಸಿ.

* ಸೊಳ್ಳೆ ಕಡಿತವನ್ನು ತಡೆಯಲು ದೇಹಕ್ಕೆ ಎಣ್ಣೆ ಅಥವಾ ಕ್ರೀಮ್ ಹಚ್ಚಿ.

* ನಿಮ್ಮ ಮನೆ ಮತ್ತು ಸುತ್ತಮುತ್ತ ಕೊಳಕು ನೀರು ಬರುವುದನ್ನ ತಪ್ಪಿಸಿ.

* ಅನಗತ್ಯ ವಸ್ತುಗಳು ಹಾಗೂ ಕೂಲರ್ ಕಾಲಕಾಲಕ್ಕೆ ಸ್ವಚ್ಛಗೊಳಿಸುತ್ತಿರಬೇಕು.

* ಡೆಂಗ್ಯೂ ಲಕ್ಷಣಗಳು ಕಾಣಿಸಿಕೊಂಡರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ.

 Share: | | | | |


ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಪ್ರಚಾರಕ್ಕೆ ಬರಲಿದ್ದಾರೆ ಸಿಎಂ, ಡಿಸಿಎಂ

Posted by Vidyamaana on 2024-03-26 15:02:35 |

Share: | | | | |


ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಪ್ರಚಾರಕ್ಕೆ ಬರಲಿದ್ದಾರೆ ಸಿಎಂ, ಡಿಸಿಎಂ

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಈಗಾಗಲೇ ಕುದ್ರೋಳಿ ದೇವಸ್ಥಾನದ ಮುಂಭಾಗ ಚಾಲನೆ ನೀಡಲಾಗಿದೆ. ಚುನಾವಣಾ ಕಚೇರಿಯೂ ಉದ್ಘಾಟನೆಗೊಂಡಿದೆ. ಮುಂದೆ ಲೋಕಸಭಾ ಕ್ಷೇತ್ರದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು. ಪ್ರಚಾರ ಕಾರ್ಯಕ್ಕೆ ಇನ್ನಷ್ಟು ಶಕ್ತಿ ತುಂಬಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದರು.


ಏಪ್ರಿಲ್ 3ರಂದು ನಾಮಪತ್ರ ಸಲ್ಲಿಕೆ:

ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರ ಪರವಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೂ ತೆರಳಿ ಪ್ರಚಾರ ಕಾರ್ಯ ನಡೆಸಲಾಗುವುದು. ಏ. 11ರಂದು ಸುಳ್ಯ, 12ರಂದು ಮುಲ್ಕಿ, 13ರಂದು ಪುತ್ತೂರು,14ರಂದು ಮಂಗಳೂರು ದಕ್ಷಿಣ, 15ರಂದು ಉಳ್ಳಾಲ, 16ರಂದು ಮಂಗಳೂರು ಉತ್ತರ, 17ರಂದು ಬೆಳ್ತಂಗಡಿ, 18ರಂದು ಬಂಟ್ವಾಳಕ್ಕೆ ಅಭ್ಯರ್ಥಿ ಸಹಿತ ಆಗಮಿಸಿ ಪ್ರಚಾರ ಕಾರ್ಯ ನಡೆಸಲಿದ್ದಾರೆ. ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅವರು ಪುತ್ತೂರಿಗೆ ಆಗಮಿಸಿ, ಕಾರ್ಯಕರ್ತರ ಸಭೆಯಲ್ಲಿ ಮಾತನಾಡಲಿದ್ದಾರೆ ಎಂದರು.

ಏ. 19ರಿಂದ ಎರಡನೇ ಸುತ್ತಿನ ಪ್ರಚಾರ ಕಾರ್ಯ ನಡೆಯಲಿದೆ. ಮಾ. 24ಕ್ಕೆ ಪ್ರಚಾರ ಕಾರ್ಯ ಅಂತ್ಯವಾಗಲಿದ್ದು, 26ರಂದು ಚುನಾವಣೆ ನಡೆಯಲಿದೆ ಎಂದು ವಿವರಿಸಿದರು.


ಒಮ್ಮತದ ಅಭ್ಯರ್ಥಿ:

ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಯಾಗಿ ಹೊಸ ಮುಖಕ್ಕೆ ಅವಕಾಶ ನೀಡಬೇಕು ಎನ್ನುವುದು ಕಾರ್ಯಕರ್ತರ ಅಭಿಲಾಷೆಯಾಗಿತ್ತು. ಅದರಂತೆ ರಾಜಕೀಯದ ಜೊತೆಗೆ ಸಾಮಾಜಿಕ, ಧಾರ್ಮಿಕ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಕ್ರೀಯವಾಗಿರುವ ಪದ್ಮರಾಜ್ ಆರ್. ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಗಿದೆ. ಸಮರ್ಥ ಹಾಗೂ ಉತ್ತಮ ಅಭ್ಯರ್ಥಿಯನ್ನು ನೇಮಕ ಮಾಡಿರುವ ಕಾರಣಕ್ಕೆ ಕಾಂಗ್ರೆಸ್  ವರಿಷ್ಠರಿಗೆ ಅಭಿನಂದನೆ ಸಲ್ಲಿಸಿದರು.


ಗೆಲ್ಲುವ ಅಭ್ಯರ್ಥಿ:

ಚುನಾವಣಾ ಉಸ್ತುವಾರಿ ರಮಾನಾಥ ರೈ ಮಾತನಾಡಿ, ಹೊಸಮುಖದ ಅಗತ್ಯ ಪಕ್ಷಕ್ಕಿತ್ತು. ಇದೀಗ ಈ ಕೊರತೆ ನೀಗಿದ್ದು, ಗೆಲ್ಲುವ ಅಭ್ಯರ್ಥಿಯನ್ನೇ ಪಕ್ಷ ಆಯ್ಕೆ ಮಾಡಿದೆ. ನಾವು ಕಾರ್ಯಕರ್ತರು. ಕಾಂಗ್ರೆಸಿನ ಇತಿಹಾಸವನ್ನು ಮತ್ತೊಮ್ಮೆ ಪುನರ್ ಸ್ಥಾಪಿಸುವಂತೆ ನಾವು ಮಾಡುತ್ತೇವೆ ಎಂದ ಅವರು, ಜಿಲ್ಲೆಯ ಸಮಗ್ರ ಅಭಿವೃದ್ಧಿಯಲ್ಲಿ ಸಿಂಹಪಾಲು ನೀಡಿರುವ ಕಾಂಗ್ರೆಸ್ ನೀಡಿದಂತಹ ಭರವಸೆಯನ್ನು ಈಡೇರಿಸಿದೆ‌. ಗ್ಯಾರೆಂಟಿ ಯೋಜನೆಯೂ ಯಶಸ್ಸು ಕಂಡಿದೆ ಎಂದರು.


ಗೆಲುವಿಗಾಗಿ ಹೋರಾಟ:

ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಹೊಸ ಮುಖಕ್ಕೆ ಅವಕಾಶ ನೀಡುವ ಮೂಲಕ ಪಕ್ಷ ಕಾರ್ಯಕರ್ತರ ಬೇಡಿಕೆಗೆ ಮಣೆ ಹಾಕಿದೆ. ಅಭ್ಯರ್ಥಿ ಪದ್ಮರಾಜ್ ಅವರ ಗೆಲುವಿಗಾಗಿ ಹೋರಾಡುತ್ತೇವೆ ಎಂದರು.


ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿ ಪದ್ಮರಾಜ್ ಆರ್., ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜಾ, ಮಾಜಿ ಶಾಸಕರಾದ ಜೆ.ಆರ್. ಲೋಬೊ, ಶಕುಂತಳಾ ಶೆಟ್ಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮುಡಾ ಅಧ್ಯಕ್ಷ ಸದಾಶಿವ ಉಲ್ಲಾಳ್, ಪ್ರಮುಖರಾದ ಯು.ಕೆ. ಮೋನು, ಶಾಹುಲ್ ಹಮೀದ್ ಉಪಸ್ಥಿತರಿದ್ದರು.

ಹರೀಶ್ ಪೂಂಜ ಭರ್ಜರಿ ಗೆಲುವು

Posted by Vidyamaana on 2023-05-13 23:08:00 |

Share: | | | | |


ಹರೀಶ್ ಪೂಂಜ ಭರ್ಜರಿ ಗೆಲುವು

ಬೆಳ್ತಂಗಡಿ: ಅಭಿವೃದ್ಧಿಯ ಹರಿಕಾರ ಎಂದೇ ಗುರುತಿಸಿಕೊಂಡ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕ ಹರೀಶ್ ಪೂಂಜಾ ಅವರು ಭರ್ಜರಿ ಮತಗಳ ಅಂತರದಿಂದ ಗೆದ್ದು, ಎರಡನೇ ಬಾರಿಗೆ ಜಯ ಪಡೆದುಕೊಂಡಿದ್ದಾರೆ.

ಜಿದ್ದಾಜಿದ್ದಿನ ಪೈಪೋಟಿಯ ನಡುವೆಯೂ 101004 ಮತಗಳನ್ನು ಪಡೆದುಕೊಂಡು, ಎದುರಾಳಿ ಕಾಂಗ್ರೆಸ್ ಅಭ್ಯರ್ಥಿ, ಬೆಸ್ಟ್ ಪೌಂಡೇಶನ್ನ ಅಧ್ಯಕ್ಷ ರಕ್ಷಿತ್ ಶಿವರಾಂ ಅವರನ್ನು ಅಂಚೆಯ ಮತ ಸೇರಿ ಸುಮಾರು 18216 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಬಿಜೆಪಿ ಪಕ್ಷದ ಅಭ್ಯರ್ಥಿ ಹರೀಶ್ ಪೂಂಜ ಅವರು ದ್ವಿತೀಯ ಬಾರಿಗೆ ಶಾಸಕರಾಗಿ ಆಯ್ಕೆಯಾಗುವುದರೊಂದಿಗೆ ಮತ್ತೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರವನ್ನು ಬಿಜೆಪಿ ಪಕ್ಷಕ್ಕೆ ತಂದು ಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಇವರಿಗೆ ತೀವ್ರ ಪ್ರತಿಸ್ಪರ್ಧೆ ನೀಡಿದ್ದ ಕಾಂಗ್ರೆಸ್ ಅಭ್ಯರ್ಥಿ ಹಾಲಿ ರಕ್ಷಿತ್ ಶಿವರಾಂ 82788 ಮತಗಳನ್ನು ಪಡೆದುಕೊಂಡು ಸೋಲು ಅನುಭವಿಸಿದ್ದಾರೆ.

ಜಾತ್ಯಾತೀತ ಜನತಾದಳದಿಂದ ಸ್ಪರ್ಧಿಸಿದ್ದ ಆಶ್ರಫ್ ಆಲಿಕುಂಞಿ ಅವರು ಕೇವಲ 556 ಮತಗಳನ್ನು ಪಡೆದುಕೊಂಡು ಪರಾಜಯಗೊಂಡರೆ, ಪ್ರಥಮ ಬಾರಿ ಬೆಳ್ತಂಗಡಿ ಕ್ಷೇತ್ರದಲ್ಲಿ ಶಾಸಕ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಸ್.ಡಿ.ಪಿ.ಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಬಹಳಷ್ಟು ಹೋರಾಟ ನಡೆಸಿ 2513 ಮತಗಳನ್ನು ಪಡೆದುಕೊಂಡು ಬೆಳ್ತಂಗಡಿ ಕ್ಷೇತ್ರದಲ್ಲಿ ತನ್ನ ಶಕ್ತಿಯನ್ನು ಪ್ರದರ್ಶಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತುಳುವರೆ ಪಕ್ಷದಿಂದ ಸ್ಪರ್ಧಿಸಿದ್ದ ಶೈಲೇಶ್ ಆರ್.ಜೆ 308 ಮತ, ಆಮ್ಆದ್ಮಿ ಪಾರ್ಟಿಯಿಂದ ಸ್ಪರ್ಧಿಸಿದ್ದ ಜನಾರ್ದನ ಬಂಗೇರ 278 ಮತ, ಸರ್ವೋದಯ ಕರ್ನಾಟಕ ಪಕ್ಷದಿಂದ ಸ್ಪರ್ಧಿಸಿದ್ದ ಆದಿತ್ಯ ನಾರಾಯಣ ಕೊಲ್ಲಾಜೆ 454 ಮತ, ಪಕ್ಷೇತರರಾಗಿ ಸ್ಪರ್ಧಿಸಿದ್ದ ಮಹೇಶ್ ಆಟೋ 272 ಮತಗಳನ್ನು ಪಡೆದು ಇಡಗಂಟು ಕಳೆದುಕೊಂಡಿದ್ದಾರೆ. ನೋಟಾಕ್ಕೆ 877 ಮತಗಳು ಬಿದ್ದಿದೆ.

ಪುತ್ತೂರಿನ ಪ್ರಗತಿ ಪಾರಾ ಮೆಡಿಕಲ್ ಕಾಲೇಜು ಮತ್ತು ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ದಾಖಲಾತಿ ಪ್ರಾರಂಭ

Posted by Vidyamaana on 2024-05-01 15:56:14 |

Share: | | | | |


ಪುತ್ತೂರಿನ ಪ್ರಗತಿ ಪಾರಾ ಮೆಡಿಕಲ್ ಕಾಲೇಜು ಮತ್ತು ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ದಾಖಲಾತಿ ಪ್ರಾರಂಭ

ಪುತ್ತೂರು :ಪುತ್ತೂರಿನ ಪ್ರಗತಿ ಪಾರಾ ಮೆಡಿಕಲ್ ಕಾಲೇಜು ಮತ್ತು ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ನಲ್ಲಿ ದಾಖಲಾತಿ ಪ್ರಾರಂಭಗೊಂಡಿದೆ.

ಡಿಪ್ಲೋಮಾ ಇನ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ , ಡಿಪ್ಲೋಮಾ ಇನ್ ಆಪರೇಷನ್ ಮತ್ತು ಅನಸ್ತೇಶಿಯಾ ಟೆಕ್ನಾಲಜಿ, ಡಿಪ್ಲೋಮಾ ಇನ್ ಆಪ್ತಲ್ಮಿಕ್ ಟೆಕ್ನಾಲಜಿ ಹಾಗೂ ಬಿ ಎಸ್ಸಿ  ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ , ಬಿ ಎಸ್ಸಿ ಆಪರೇಷನ್ ಮತ್ತು ಅನಸ್ತೇಶಿಯಾ ಟೆಕ್ನಾಲಜಿ, ಬಿಎಸ್ಸಿ ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ, ಬಿಎಸ್ಸಿ ಎಮರ್ಜೆನ್ಸಿ ಅಂಡ್ ಟ್ರಾಮಾ ಕೇರ್ ಕೋರ್ಸ್ ಗಳಿಗೆ 2024 -25 ನೇ ಸಾಲಿನ ದಾಖಲಾತಿ ಪ್ರಾರಂಭಗೊಂಡಿದೆ.

ಕುಂಬ್ರ: ಬದ್ರಿಯಾನಗರ ಬದ್ರಿಯಾ ಜಮಾತ್ ಕಮಿಟಿ ಮಹಾಸಭೆ

Posted by Vidyamaana on 2023-06-25 11:17:14 |

Share: | | | | |


ಕುಂಬ್ರ: ಬದ್ರಿಯಾನಗರ ಬದ್ರಿಯಾ ಜಮಾತ್ ಕಮಿಟಿ ಮಹಾಸಭೆ

ಪುತ್ತೂರು: ಕುಂಬ ಬದ್ರಿಯಾನಗರ ಬದ್ರಿಯಾ ಜಮಾತ್‌ ಕಮಿಟಿ ಇದರ ಮಹಾಸಭೆಯು ಜೂ.23 ರಂದು ಮಸೀದಿಯ ಸಭಾಂಗಣದಲ್ಲಿ ನಡೆಯಿತು.

ಗೌರವಾಧ್ಯಕ್ಷರಾದ ಕೆ.ಪಿ ಅಹ್ಮದ್‌ ಹಾಜಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.  ಲೆಕ್ಕಪತ್ರ ಮಂಡಿಸಿದರು. ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ಮಗಿರೆ ವರದಿ ವಾಚಿಸಿದರು . ಖತೀಬ್‌ ಇಸ್ಮಾಯಿಲ್ ಸ ಅದಿ ದುವಾ ನೆರವೇರಿಸಿದರು. ಸಭೆಯಲ್ಲಿ ಜಮಾತ್‌ ಅಭಿವೃದ್ಧಿಯ ಬಗ್ಗೆ ಸದಸ್ಯರೊಳಗೆ ಚರ್ಚೆಗಳು ನಡೆದವು. ಸಭೆಯಲ್ಲಿ ಅಧ್ಯಕ್ಷರಾದ ಉಸ್ಮಾನ್ ಮುಸ್ಲಿಯಾರ್, ಮಾಜಿ ಅಧ್ಯಕ್ಷರುಗಳಾದ ಯೂಸುಫ್ ಕಡ್ತಿಮಾರ್, ಹಮೀದ್ ದರ್ಬಾರ್, ಮೂಸಾ ಮುಸ್ಲಿಯಾರ್, ಮಾಜಿ ಕಾರ್ಯದರ್ಶಿ ಅರಬಿಕುಂಞಿ ಮಗಿರೆ,ಇಸ್ಮಾಯಿಲ್ ಕೋಳಿಗದ್ದೆ, ಮಹಮ್ಮದ್ ಮಗಿರೆ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ 2023-24 ನೇ ಸಾಲಿನ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಯಿತು. ಗೌರವಾಧ್ಯಕ್ಷರಾಗಿ ಕೆ ಪಿ ಅಹ್ಮದ್‌ ಹಾಜಿ ಆಕರ್ಷಣ್, ಅಧ್ಯಕ್ಷರಾಗಿ ಉಸ್ಮಾನ್ ಮುಸ್ಲಿಯಾರ್ ಶಾಂತಿನಡಿ, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದಿಕ್ ಕುಂಬ್ರ, ಕಾರ್ಯದರ್ಶಿಯಾಗಿ ಅಬ್ದುಲ್‌ರಹಿಮಾನ್ ಕೊಯಿಲ, ಉಪಾಧ್ಯಕ್ಷರಾಗಿ ಅಬ್ಬಾಸ್ ಬ್ರೆಂಚ್ ,ಹಾಗೂ ಕೋಶಾಧಿಕಾರಿಯಾಗಿ ಇಸ್ಮಾಯಿಲ್ ಬದ್ರಿಯಾನಗರರನ್ನು ನೇಮಿಸಲಾಯಿತು.

ಕಾರ್ಯಕಾರಿ ಸಮಿತಿಗೆ ಸದಸ್ಯರುಗಳಾಗಿ ಯೂಸುಫ್ ಕಡ್ತಿಮಾರ್, ಅರಬಿಕುಂಞ ಮಗಿರೆ ಇಸುಬುಕೊಯಿಲ, ಹಮೀದ್ ಕೊಯಿಲ, ಇಸ್ಮಾಯಿಲ್ ಕೋಳಿಗದ್ದೆ, ಬಶೀರ್ ಕಡ್ತಿಮಾರ್, ಇಬ್ರಾಹಿಂ ಝಹುರಿ ಶಾಂತಿನಡಿ, ಆದಂ ಕುಂಞಿ ಅಡಿಲ್, ಮಹಮ್ಮದ್‌ ಮಗಿರೆ, ಸವಾದ್ ಬದ್ರಿಯಾನಗರ, ಪಳ್ಳಿಚ್ಚ ಕಡ್ತಿಮಾರ್, ಹಾಗೂ ಮೂಸಾ ಮುಸ್ಲಿಯಾರ್ ಶಾಂತಿನಡಿಯವರನ್ನು ಆಯ್ಕೆ ಮಾಡಲಾಯಿತು.

ಪುತ್ತೂರು ನಗರ ವ್ಯಾಪ್ತಿಗೆ ೨೪ ಕೋಟಿ ರೂ ಅನುದಾನ ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರದ ಕಾಮಗಾರಿಗಳು: ಅಶೋಕ್ ರೈ

Posted by Vidyamaana on 2024-01-08 07:54:09 |

Share: | | | | |


ಪುತ್ತೂರು ನಗರ ವ್ಯಾಪ್ತಿಗೆ ೨೪ ಕೋಟಿ ರೂ ಅನುದಾನ  ದೂರ ದೃಷ್ಟಿಯಲ್ಲಿ ನಡೆಯಲಿದೆ ನಗರದ ಕಾಮಗಾರಿಗಳು: ಅಶೋಕ್ ರೈ

ಪುತ್ತೂರು: ಪುತ್ತೂರು ನಗರ ವ್ಯಾಪ್ತಿಯಲ್ಲಿ ರೂ ೨೪ ಕೋಟಿ ರೂ ಕಾಮಗಾರಿ ನಡೆಯಲಿದ್ದು ಇದಕ್ಕಾಗಿ ವಿವಿಧ ಕಡೆಗಳಿಗೆ ಅನುದಾನ ಹಂಚಿಕೆ ಕೆಲಸ ನಡೆದಿದ್ದು ಮುಂದಿನ ದಿನಗಳಲ್ಲಿ ನಗರದಲ್ಲಿ ಹೆಚ್ಚಿನ ಅಭಿವೃದ್ದಿ ಕಾರ್ಯಗಳು ನನಡೆಯಲಿದ್ದು ದೂರ ದೃಷ್ಟಿಯ ಕಾಮಗಾರಿಗಳು ನಡೆಯಲಿದೆ ಎಂದು ಶಾಸಕರಾದ ಅಶೋಕ್ ರೈ ಹೇಳಿದರು.


ಅವರು ಮರೀಲ್ ಬೆದ್ರಾಳ ರಸ್ತೆ ಅಗಲೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.


ಪುತ್ತೂರು ನಗರಕ್ಕೆ ೨೪ ಗಂಟೆಯೂ ಕುಡಿಯುವ ನೀರಿನ ವ್ಯವಸ್ಥೆ ಆಗಲಿದೆ. ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ೧೦೧೦ ಕೋಟಿ ರಊ ಅನುದಾನ ಬಿಡುಗಡೆಯಾಗಿದ್ದು ಮುಂದಿನ ಒಂದೂವರೆ ವರ್ಷದೊಳಗೆ ಗ್ರಾಮೀಣ ಭಾಗದಲ್ಲೂ ದಿನದ ೨೪ ಗಂಠೆ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ಹೇಳಿದರು.


ಕೆಎಂಎಫ್ ಪುತ್ತೂರಿಗೆ ಶಿಫ್ಟ್ ಆಗಲಿದ್ದು ಇದರಿಂದ ಇಲ್ಲಿನ ಸುಮಾರು ೬೦೦ ಮಂದಿಗೆ ಉದ್ಯೋಗ ದೊರೆಯಲಿದೆ. ಯುವಕರಿಗೆ ಉದ್ಯೋಗ ನೀಡುವ ಕೆಲಸವನ್ನು ಮಾಡಬೇಕು. ಪುತ್ತೂರಿನಲ್ಲಿ ಉದ್ಯಮ ಆರಂಭವಾದರೆ ಎಲ್ಲರಿಗೂ ಆದಾಯ ಬರಲಿದೆ. ಆಟೋ ಚಾಲಕರಿಗೆ, ಲರಿ ಚಾಲಕರಿಗೆ ಸೇರಿದಂತೆ ವಿದ್ಯಾವಂತ ನಿರುದ್ಯೋಗಿಗಳಿಗೂ ಉದ್ಯೋಗಕವಾಶ ದೊರೆಯಲಿದೆ. ಪಕ್ಷಾತೀತವಾಗಿ ಪುತ್ತೂರಿನಲ್ಲಿ ಅಭಿವೃದ್ದಿ ಕಾರ್ಯಗಳನ್ನು ನಡೆಸುತ್ತೇನೆ. ಅಭಿವೃದ್ದಿಯಲ್ಲಿ ಯಾವುದೇ ರಾಜಕೀಯ ಖಂಡಿತವಾಗಿಯೂ ಮಾಡುವುದಿಲ್ಲ. ಪುತ್ತೂರಿನ ಜನತೆಯ ಕ್ಷೇಮವೇ ನನ್ನ ಕ್ಷೇಮವಾಗಿದೆ, ನನ್ನ ಕ್ಷೇತ್ರದಲ್ಲಿ ಸೂರು, ನೀರು, ಮತ್ತು ಕರೆಂಟ್ ಇಲ್ಲದೆ ವಂಚಿತರಾಗಿರುವ ಯವುದೇ ಕುಟುಂಬ ಇರಬಾರದು, ಯಾವ ಕುಟುಂಬವೂ ಹಸಿವಿನಿಂದ ಇರಬಾರದು ಎಂಬುದೇ ನನ್ನ ಉದ್ದೇಶವಾಗಿದೆ ಎಂದು ಹೇಳಿದರು.

ಬೆದ್ರಾಳದಿಂದ ಸರ್ವೆತನಕ ಚತುಷ್ಪಥ ರಸ್ತೆ


ಬೆದ್ರಾಳದಿಂದ ಸರ್ವೆ ತನಕ ಚತುಷ್ಪಥ ರಸ್ತೆ ನಿರ್ಮಾಣವಾಗಲಿದೆ ಈ ವಿಚಾರಕ್ಕೆ ಸಂಬಂಧಿಸಿಂದಂತೆ ಈಗಾಗಲೇ ಅನುದಾನಕ್ಕಾಗಿ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ಶಾಸಕರು ಹೇಳಿದರು. ಸರಕಾರ ಐದು ಗ್ಯಾರಂಟಿಯನ್ನು ನೀಡಿ ಪ್ರತೀ ಕುಟುಂಬಕ್ಕೂ ನೆರವಾಗಿದೆ, ಎಲ್ಲರ ಖಾತೆಗೂ ಹಣ ಜಮೆಯಾಗುತ್ತಿದೆ, ಕಾಂಗ್ರೆಸ್ ಸರಕಾರ ಬಂದ ಬಳಿಕ ಜನತೆ ನೆಮ್ಮದಿಯಿಂದ ಇದ್ದಾರೆ. ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಕಾಂಗ್ರೆಸ್ ಸರಕಾರ ಬಂದ ಬಳಿಕ ಕೊಂಚ ನೆಮ್ಮದಿ ದೊರಕಿದೆ. ಮುಂದಿನ ದಿನಗಳಲ್ಲಿ ಅಭಿವೃದ್ದಿಗೂ ಸರಕಾರ ಹೆಚ್ಚಿನ ಅನುದಾನವನ್ನು ನೀಡಲಿದೆ ಎಂದು ಶಾಸಕರು ಹೇಳಿದರು.


ಅಶೋಕ್ ರೈ ಶಾಸಕರಾಗಿದ್ದೇ ನಮ್ಮ ಭಾಗ್ಯ: ಆಲಿ


ಅಶೋಕ್ ರೈ ಶಾಸಕರಾಗಿದ್ದೇ ನಮ್ಮೆಲಲ್ಲರ ಭಾಗ್ಯವಾಗಿದೆ. ಪುತ್ತೂರಿಗೆ ಗಟ್ಸ್ ಇರುವ ಶಾಸಕರು ಬೇಕು ಎಂದು ಜನ ಆಸೆಪಟ್ಟಿದ್ದರು ಅದರಂತೆ ಗಟ್ಸ್ ಇರುವ ಶಸಕರು ನಮಗೆ ಸಿಕ್ಕಿದ್ದಾರೆ. ಈಗಾಗಲೇ ಕೋಟಿಗಟ್ಟಲೆ ಅನುದಾನವನ್ನು ಎಂಟು ತಿಂಗಳಲ್ಲಿ ಕ್ಷೇತ್ರಕ್ಕೆ ತಂದಿದ್ದಾರೆ. ಬಡವರ ಪರ ಅಪಾರ ಕಾಳಜಿ ಇರುವ ಶಾಸಕರು ಇಂದು ಕ್ಷೇತ್ರದ ಬಡವರಿಗಾಗಿ ಸರ್ವಸ್ವವನ್ನೂ ನೀಡುತ್ತಿದ್ದಾರೆ ಎಂಬುದನ್ನು ನಾವು ತಿಳಿದುಕೊಳ್ಳಬೇಕು. ನಗರೋತ್ತಾನ ಯೋಜನೆಯಡಿ ಮರೀಲ್ ಬೆದ್ರಾಳ ರಸ್ತೆಗೆ ರೂ. ೫೦ ಲಕ್ಷ ವನ್ನು ಶಾಸಕರು ಮಂಜೂರು ಮಾಡಿಸುವ ಮೂಲಕ ಇಲ್ಲಿನ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದಾರೆ. ಮುಂದಿನ ದಿನಗಳಲ್ಲಿ ನಗರಸಭಾ ವ್ಯಾಪ್ತಿಯ ಜನರ ಎಲ್ಲಾ ಬೇಡಿಕೆಗಳು ಖಂಡಿತವಾಗಿಯೂ ಈಡೇರಲಿದೆ. ಕುಡಿಯುವ ನೀರು, ದಾರಿ ದೀಪ, ಚರಂಡಿ ಸೇರಿದಂತೆ ಜನತೆಯ ಬಹುಕಾಲದ ಬೇಡಿಕೆಗಳು ಈಡೇರಲಿದೆ ಎಂದು ನಗರ ಕಾಂಗ್ರೆಸ್ ಅಧ್ಯಕ್ಷರಾದ ಎಚ್ ಮಹಮ್ಮದಾಲಿ ಹೇಳಿದರು.

ಸನ್ಮಾನ

ಇದೇ ಸಂದರ್ಭದಲ್ಲಿ ಆರ್ಯಾಪು ಕೃಷಿಪತ್ತಿನ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾದ ಮಹಮ್ಮದಾಲಿ ಹಗೂ ನೂತನ ನಿರ್ದೆಶಕರುಗಳಾಗಿ ಆಯ್ಕೆಯಾದ ರಂಜಿತ್ ಬಂಗೇರ ಹಾಗೂ ತೆರೆಸಾ ಎಂ ಸಿಕ್ವೆರಾ ಅವರನ್ನು ಶಾಸಕರು ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಬನ್ನೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಈಶ್ವರಭಟ್ ಪಂಜಿಗುಡ್ಡೆ, ಕಾಂಗ್ರೆಸ್ ಮುಖಂಡರುಗಳಾದ ಶಿವರಾಮ ಆಳ್ವ ಬಳ್ಳಮಜಲು, ಕೃಷ್ಣಪ್ರಸಾದ್ ಆಳ್ವ, ರೋಶನ್ ರೈ ಬನ್ನೂರು, ಮುಂಡೂರು ವಲಯ ಕಾಂಗ್ರೆಸ್ ಅಧ್ಯಕ್ಷರಾದ ಯಾಕೂಬ್ ಮುಲಾರ್, ರೆಝಾಕ್ ಖಾನ್, ಹೆರಾಲ್ಡ್ ಮಾಡ್ತಾ, ಇಬ್ರಾಹಿಂ ಟಿ ಎಂ, ಲಿಯೋ ಮಾರ‍್ಟಿಸ್,ದಿನೇಶ್, ಬೆನ್ನಿ ಡಿಸೋಜ, ತೆರೆಸಾ ಸಿಕ್ವೆರಾ, ಬೂತ್ ಅಧ್ಯಕ್ಷ ಜೀವನ್ ಮರ್ವಿನ್ ಡೆಲ್ಮೆದಾ, ಆರ್ಯಾಪು ಸೇವಾ ಸಹಕಾರಿ ಸಂಘದ ನಿರ್ದೇಶಕರಾದ  ರಂಜಿತ್ ಬಂಗೇರ, ಮರೀಲ್ ರಿಕ್ಷಾ ಚಾಲಕರ ಸಂಘದ ಪಧಾಧಿಕಾರಿಗಳು ಹಗೂ ಸ್ಥಳೀಯರು ಉಪಸ್ಥಿತರಿದ್ದರು.

ಬಿಪಿಎಲ್ ಕಾರ್ಡ್​ಗೆ ಹೆಚ್ಚಿದ ಬೇಡಿಕೆ

Posted by Vidyamaana on 2023-05-25 04:25:36 |

Share: | | | | |


ಬಿಪಿಎಲ್ ಕಾರ್ಡ್​ಗೆ ಹೆಚ್ಚಿದ ಬೇಡಿಕೆ

ಬೆಂಗಳೂರು :ಕಾಂಗ್ರೆಸ್  ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದ್ದು, ಕಾರ್ಡ್ ಪಡೆಯಲು ಜನ ಮುಗಿಬೀಳುತ್ತಿದ್ದಾರೆ. ಸರ್ಕಾರದ ವಿವಿಧ ಯೋಜನೆ ಫಲಾನುಭವಿ ಗಳಾಗಬೇಕೆಂಬ ಆಸೆಗಣ್ಣಿನಿಂದ ಕಾಯುತ್ತಿರುವ ಜನರಿಗೆ ಸಿಗುತ್ತಿಲ್ಲ ಹೊಸ ಬಿಪಿಎಲ್ ಕಾರ್ಡ್ ಸಿಗುತ್ತಿಲ್ಲ.ಸುಮಾರು 2.88 ಲಕ್ಷ ಬಿಪಿಎಲ್ ಕಾರ್ಡ್ ಅರ್ಜಿಗಳು ವಿಲೇವಾರಿಗಾಗಿ ಕಾಯುತ್ತಿವೆ.

ರಾಜ್ಯದಲ್ಲಿ 2023 ಜನವರಿಯಿಂದ ಮೇ 20ರವರೆಗೆ ತುರ್ತು ಆರೋಗ್ಯ ಸೇವಾ ಸೌಲಭ್ಯಕ್ಕಾಗಿ ಹೊಸ ಪಡಿತರ ಚೀಟಿ ಪಡೆಯಲು ಸುಮಾರು 4.25 ಲಕ್ಷ ಜನ ಅರ್ಜಿ ಸಲ್ಲಿಸಿದ್ದಾರೆ. ಆದರೆ, ಎರಡು ತಿಂಗಳಿಂದ ಸರ್ವರ್, ದಾಖಲೆಗಳ ಸಮಸ್ಯೆ, ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಹೊಸ ಅರ್ಜಿಗಳ ವಿಲೇವಾರಿ, ಹೊಸ ಕಾರ್ಡ್ ವಿತರಣೆ ಕಾರ್ಯ ಸ್ಥಗಿತಗೊಂಡಿದೆ. ಇದರಿಂದಾಗಿ ಅರ್ಜಿ ಸಲ್ಲಿಸಿರುವ ಜನರು ಕಾರ್ಡ್​ಗಳಿಗಾಗಿ ಕಚೇರಿಗಳಿಗೆ ಅಲೆದಾಡುತ್ತಿದ್ದಾರೆ.ರಾಜ್ಯದಲ್ಲಿ ಮೇ 14 ರಿಂದ 20ರ ನಡುವಿನ ಅವಧಿಯಲ್ಲಿ ಹೊಸ ಬಿಪಿಎಲ್ ಕಾರ್ಡ್​ಗಾಗಿ ಬರೋಬ್ಬರಿ 78 ಸಾವಿರ ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ತುರ್ತು ಆರೋಗ್ಯ ಚಿಕಿತ್ಸೆಗಾಗಿ ಸಲ್ಲಿಕೆಯಾಗಿರುವ ಅರ್ಜಿಗಳನ್ನು ಮಾತ್ರ ಮೇ 18ರಿಂದ ವಿಲೇವಾರಿ ಮಾಡಿ ವಿತರಣೆ ಮಾಡಲಾಗುತ್ತಿದೆ. ಇನ್ನುಳಿದ ಹೊಸ ಅರ್ಜಿಗಳ ವಿಲೇವಾರಿ ಸ್ಥಗಿತಗೊಳಿಸಿದೆ. ಹೊಸ ಸರ್ಕಾರದ ಆದೇಶದ ಬಳಿಕ ಮುಂದಿನ ಅರ್ಜಿಗಳ ವಿಲೇವಾರಿ ಪ್ರಕ್ರಿಯೇ ಆರಂಭವಾಗಲಿದೆ.

2023 ಜನವರಿಗೆ ರಾಜ್ಯದಲ್ಲಿ ಬಿಪಿಎಲ್, ಅಂತ್ಯೋದಯ, ಎಪಿಎಲ್ ಸೇರಿ ಸುಮಾರು 5.28 ಕೋಟಿ ಜನರು ರೇಷನ್ ಕಾರ್ಡ್ ಫಲಾನುಭವಿಗಳಾಗಿದ್ದು, ಇವರಲ್ಲಿ ಸುಮಾರು 4.50ಲಕ್ಷಕ್ಕೂ ಅಧಿಕ ಅನರ್ಹ ಬಿಪಿಎಲ್ ಕಾರ್ಡ್​ಗಳನ್ನು ರದ್ದುಪಡಿಸಲಾಗಿದೆ. ಜತೆಗೆ ಹೊಸ ಬಿಪಿಎಲ್ ಕಾರ್ಡ್​ಗಾಗಿ ಸುಮಾರು 4.25 ಲಕ್ಷ ಜನರು ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ ಕೆಲ ಅನರ್ಹಗೊಂಡಿರುವ ಕಾರ್ಡ್​ದಾರರು ಮತ್ತೆ ಅರ್ಜಿ ಸಲ್ಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಲ್ಲ ಹೊಸ ಬಿಪಿಎಲ್ ಅರ್ಜಿಗಳನ್ನು ಮರು ಪರಿಶೀಲನೆ ನಡೆಸಲಾಗುತ್ತಿದೆ. ಸದ್ಯ ಹೊಸದಾಗಿ ಬಿಪಿಎಲ್ ಕಾರ್ಡ್​ಗಳಿಗೆ ಅರ್ಜಿ ಸಲ್ಲಿಸಲು ಯಾವುದೇ ಸಮಸ್ಯೆ ಇಲ್ಲ. ಆದರೆ, ಹೊಸ ಬಿಪಿಎಲ್ ಕಾರ್ಡ್ ಗಳ ವಿತರಣೆ, ಅರ್ಜಿಗಳ ವಿಲೇವಾರಿ ಕೆಲಸ ಬಂದ್ ಆಗಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.ಗ್ಯಾರಂಟಿ ಯೋಜನೆಗಳಿಂದ ಬೇಡಿಕೆ: ಕಾಂಗ್ರೆಸ್​ನ ಐದು ಗ್ಯಾರಂಟಿ ಯೋಜನೆಗಳ ಘೊಷಣೆ ನಂತರ ಮತ್ತು ಚುನಾವಣೆ ಫಲಿತಾಂಶದ ಬಳಿಕ ಬಿಪಿಎಲ್ ಕಾರ್ಡ್​ಗಳಿಗೆ ಬೇಡಿಕೆ ಹೆಚ್ಚಿದೆ. ಅಲ್ಲದೆ, ಪ್ರತಿ ನಿತ್ಯ 8ರಿಂದ 10 ಜನರು ಹೊಸದಾಗಿ ಬಿಪಿಎಲ್ ಕಾರ್ಡ್​ಗಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಇವರಲ್ಲಿ ನಗರ ಪ್ರದೇಶಗಳಲ್ಲಿನ ಜನರೇ ಅಧಿಕ ಸಂಖ್ಯೆಯಲ್ಲಿ ದ್ದಾರೆ. ನೂತನ ಸರ್ಕಾರದ ಸೂಚನೆಯ ಬಳಿಕ ಹೊಸ ಕಾರ್ಡ್ ಗಳ ವಿತರಣೆ, ಅರ್ಜಿಗಳ ವಿಲೇವಾರಿ ಕೆಲಸ ಆರಂಭವಾಗಲಿದೆ ಎಂದು ಆಹಾರ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.



Leave a Comment: