ಕಲ್ಲಡ್ಕ ಮ್ಯೂಸಿಯಂ ವೀಕ್ಷಿಸಿದ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್

ಸುದ್ದಿಗಳು News

Posted by vidyamaana on 2024-06-30 19:51:42 |

Share: | | | | |


ಕಲ್ಲಡ್ಕ ಮ್ಯೂಸಿಯಂ ವೀಕ್ಷಿಸಿದ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್

ಬಂಟ್ವಾಳ : ತಾಲೂಕಿನ ವಿವಿಧ ಕಡೆಗಳಿಗೆ ತೆರಳಿ ಮಳೆಹಾನಿ ಬಗ್ಗೆ ವೀಕ್ಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಜಿಲ್ಲೆಯಲ್ಲಿಯೇ ಖ್ಯಾತಿ ಪಡೆದಿರುವ ಕಲ್ಲಡ್ಕದ ಯಾಸೀರ್ ಅವರ ಅಪರೂಪದ ವಸ್ತುಗಳ ಸಂಗ್ರಹವಿರುವ ಕಲ್ಲಡ್ಕ ಮ್ಯೂಸಿಯಂಗೆ ಭೇಟಿ ನೀಡಿದರು.ಹಿಂದಿನ ಕಾಲದ ವಸ್ತುಗಳು, ನಾಣ್ಯ, ಪತ್ರಿಕೆಗಳ ಸಂಗ್ರಹವನ್ನು ವೀಕ್ಷಿಸಿ ರೋಮಾಂಚನಗೊಂಡ ಅವರು ಯಾಸೀರ್ ಅವರ ವಸ್ತುಗಳ ಸಂಗ್ರಹಣ ಕೌಶಲ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅತ್ಯಂತ ಸಾವಕಾಶವಾಗಿ ಪ್ರತಿಯೊಂದು ವಸ್ತುಗಳನ್ನು ಕುತೂಹಲದಿಂದ ವೀಕ್ಷಿಸಿ ಅವುಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮೊಡಂಕಾಪುವಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು. ಇಲ್ಲಿನ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಎಲ್ಲರಿಗೂ ಕೈಕುಲುಕಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಮಕ್ಕಳಿಂದ ಅಂಬೇಡ್ಕರ್ ಬಗ್ಗೆ ಹಾಡು ಹಾಡಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಗಮನ ಸೆಳೆದರು. ತಹಸೀಲ್ದಾರ್ ಅರ್ಚನಾ ಭಟ್, ವಿದ್ಯಾರ್ಥಿ ನಿಲಯ ಮೇಲ್ವಿಚಾರಕರು ಜೊತೆಗಿದ್ದರು.

 Share: | | | | |


ಇಂದು (ಸೆ 09) ವಿಶ್ವಹಿಂದೂ ಪರಿಷದ್‌ ಸ್ಥಾಪನಾ ದಿನಾಚರಣೆ-: ಪುತ್ತೂರಿನಲ್ಲಿ 13ನೇ ವರ್ಷದ ಮೊಸರು ಕುಡಿಕೆ - ಶೋಭಾಯಾತ್ರೆ

Posted by Vidyamaana on 2023-09-09 10:48:09 |

Share: | | | | |


ಇಂದು (ಸೆ 09) ವಿಶ್ವಹಿಂದೂ ಪರಿಷದ್‌ ಸ್ಥಾಪನಾ ದಿನಾಚರಣೆ-: ಪುತ್ತೂರಿನಲ್ಲಿ 13ನೇ ವರ್ಷದ ಮೊಸರು ಕುಡಿಕೆ - ಶೋಭಾಯಾತ್ರೆ

ಪುತ್ತೂರು: ವಿಶ್ವಹಿಂದೂ ಪರಿಷದ್‌ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ ಮತ್ತು ಪುತ್ತೂರು ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಸೆ.9ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 13ನೇ ವರ್ಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ ನಡೆಯಲಿದೆ.ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಬೆಳಗ್ಗಿನಿಂದಲೇ ವಿವಿಧ ಆಟೋಟ ಸ್ಪರ್ಧೆ ನಡೆಯಲಿದ್ದು, ಸಂಜೆ ವೈಭವದ ಶೋಭಾಯಾತ್ರೆಯೊಂದಿಗೆ ಅಟ್ಟಿ ಮಡಿಕೆ ಒಡೆಯುವ ಸಾಹಸ ಪ್ರದರ್ಶನ ನಡೆಯಲಿದೆ. ಇದೇ ಸಂದರ್ಭದಲ್ಲಿ ಧಾರ್ಮಿಕ ಸಭೆಯು ನಡೆಯಲಿದೆ.ಶೋಭಾಯಾತ್ರೆ ಉದ್ಘಾಟನೆ:


ಮೊಸರುಕುಡಿಕೆ ಉತ್ಸವದ ಶೋಭಾಯಾತ್ರೆಯನ್ನು ಡಾ. ಎಂ.ಕೆ.ಪ್ರಸಾದ್ ಅವರು ಉದ್ಘಾಟಿಸಲಿದ್ದಾರೆ. ಬಜರಂಗದಳ ಮಂಗಳೂರು ವಿಭಾಗದ ಸಹ ಸಂಯೋಜಕ ಪುನಿತ್ ಅತ್ತಾವರ ಅವರು ಧ್ವಜ ಹಸ್ತಾಂತರ ಮಾಡುವ ಮೂಲಕ ಶೋಭಾಯಾತ್ರೆಗೆ ಚಾಲನೆ ದೊರಕಲಿದೆ. ಶೋಭಾಯಾತ್ರೆಯು ಬೊಳುವಾರು ಓಂ ಶ್ರೀ ಶಕ್ತಿ ಅಂಜನೇಯ ಮಂತ್ರಾಲಯದ ಬಳಿಯಿಂದ ಆರಂಭಂಗೊಂಡು ಮುಖ್ಯರಸ್ತೆಯಾಗಿ ಅಂಚೆಕಚೇರಿ ಬಳಿಯಿಂದ ದೇವಸ್ಥಾನದ ಗದ್ದೆಗೆ ಸಾಗಿ ಸಭಾ ಕಾರ್ಯಕ್ರಮ ಮುಗಿದ ಬಳಿಕ ಅದೇ ರಸ್ತೆಯಾಗಿ ಸಾಗಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಹಾದು ಕಲ್ಲಾರೆಯ ತನಕ ಸಾಗಿ ಅಲ್ಲಿಂದ ಹಿಂದಿರುಗಿ ಅರುಣಾ ಚಿತ್ರಮಂದಿರ ಬಳಿಯಿಂದ ಎಪಿಎಂಸಿ ರಸ್ತೆಯ ಮೂಲಕ ಆದರ್ಶ ಆಸ್ಪತ್ರೆಯ ಬಳಿಯಿಂದ ತೆರಳಿ ಮಹಾಲಿಂಗೇಶ್ವರ ದೇವರ ಗದ್ದೆಯಲ್ಲಿ ಸಮಾಪನೆಗೊಳ್ಳಲಿದೆ.ಧಾರ್ಮಿಕ ಸಭೆ:


ಸಂಜೆ ಬೊಳುವಾರಿನಿಂದ ಹೊರಟ ಶೋಭಾಯಾತ್ರೆಯು ದೇವಳದ ಗದ್ದೆಗೆ ಬಂದ ಬಳಿಕ ಧಾರ್ಮಿಕ ಸಭೆ ನಡೆಯಲಿದೆ. ವಿಶ್ವಹಿಂದೂ ಪರಿಷದ್‌ನ ಕರ್ನಾಟಕ ಪ್ರಾಂತ ಸಹಕಾರ್ಯದರ್ಶಿ ಶರಣ್ ಪಂಪ್‌ವೆಲ್ ದಿಕ್ಕೂಚಿ ಭಾಷಣ ಮಾಡಲಿದ್ದಾರೆ. ವಿಶ್ವಹಿಂದು ಪರಿಷದ್ ಪುತ್ತೂರು ಜಿಲ್ಲೆ ಕಾರ್ಯದರ್ಶಿ ನವೀನ್ ನೆರಿಯ, ನ್ಯಾಯವಾದಿ ಅರುಣ್‌ಶ್ಯಾಮ್, ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಮೆಸ್ಕಾಂ ಮಾಜಿ ನಿರ್ದೇಶಕರಾಗಿರುವ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿ ಅಧ್ಯಕ್ಷ ಕಿಶೋರ್ ಕುಮಾರ್ ಬೊಟ್ಯಾಟಿ ತಿಳಿಸಿದ್ದಾರೆ.ಸೆ.9ಕ್ಕೆ ವಿವಿಧ ಸ್ಪರ್ಧೆಗಳು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಬೆಳಿಗ್ಗೆ ಗಂಟೆ 10 ರಿಂದ 11 ವರ್ಷದಿಂದ 16 ವರ್ಷದ ಒಳಗಿನ ಮಕ್ಕಳಿಗೆ ಭಾರತಮಾತೆಯ ಚಿತ್ರಬಿಡಿಸುವ, ಜಾನಪದ ಗೀತೆ, ಸ್ಮರಣಶಕ್ತಿ ಅಡ್ಡಕಂಬ, ಗುಂಡೆಸೆತ, ಮಡಿಕೆ ಒಡೆಯುವುದು, ದೇಶಭಕ್ತಿಗೀತೆ, ಭಗವದ್ಗೀತೆ ಕಂಠಪಾಠ ಸ್ಪರ್ಧೆ, ಮಹಿಳೆಯರಿಗೆ ಸಂಗೀತ ಕುರ್ಚಿ, ಮಡಿಕೆ ಒಡೆಯುವುದು, ಸಂಗೀತ ಸ್ಪರ್ಧೆ, ರಂಗವಲ್ಲಿ, ಗುಂಡೆಸೆತ, ಹಗ್ಗಜಗ್ಗಾಟ ಸ್ಪರ್ಧೆಗಳು ನಡೆಯಲಿದೆ. ಪುರುಷರಿಗೆ ಉದ್ದಕಂಬ ಸ್ಪರ್ಧೆ ನಡೆಯಲಿದೆ.

ಪುತ್ತೂರು : ಮಹಿಳಾ ಠಾಣೆಯ ಬಳಿ ಯುವತಿಗೆ ಚಾಕು ಇರಿತ :ವಿಟ್ಲ ಮೂಲದ ಗೌರಿ ಯುವತಿ ಗಂಭೀರ.

Posted by Vidyamaana on 2023-08-24 09:13:15 |

Share: | | | | |


ಪುತ್ತೂರು : ಮಹಿಳಾ ಠಾಣೆಯ ಬಳಿ ಯುವತಿಗೆ ಚಾಕು ಇರಿತ :ವಿಟ್ಲ ಮೂಲದ ಗೌರಿ ಯುವತಿ ಗಂಭೀರ.

ಪುತ್ತೂರು : ಯುವತಿಯೋರ್ವಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಹಿಂಭಾಗದಲ್ಲಿ ನಡೆದ ಬಗ್ಗೆ ವರದಿಯಾಗಿದೆಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಹಿಂಭಾಗದ ಮಹಿಳಾ ಪೊಲೀಸ್ ಠಾಣೆಯ ಬಳಿ ಯುವಕನೋರ್ವ ಯುವತಿಯ ಕುತ್ತಿಗೆಗೆ ಚಾಕು ಇರಿದು ಕೊಲೆ ಯತ್ನ ನಡೆಸಿದ್ದು, ಗಂಭೀರ ಗಾಯಗೊಂಡ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲ ಮೂಲದ ಗೌರಿ (20) ಎನ್ನಲಾಗುತ್ತಿದ್ದು, ಕೊಲೆಗೆ ಯತ್ನಿಸಿದ ಯುವಕ ಪರಾರಿಯಾಗಿದ್ದಾನೆ ಎಂದು ವರದಿಯಾಗಿದೆ.

ಮೈಮೇಲೆ ಪ್ರೇತ ಬರುವ ನೆಪ: 3 ತಿಂಗಳಿನಿಂದ ಕತ್ತಲ ಕೋಣೆಯಲ್ಲಿ ದಿಗ್ಭಂಧನವಾಗಿದ್ದ ಮಹಿಳೆಯ ರಕ್ಷಣೆ

Posted by Vidyamaana on 2024-01-04 11:36:22 |

Share: | | | | |


ಮೈಮೇಲೆ ಪ್ರೇತ ಬರುವ ನೆಪ: 3 ತಿಂಗಳಿನಿಂದ ಕತ್ತಲ ಕೋಣೆಯಲ್ಲಿ ದಿಗ್ಭಂಧನವಾಗಿದ್ದ ಮಹಿಳೆಯ ರಕ್ಷಣೆ

ಪುತ್ತೂರು: ನಗರದ ಹೊರವಲಯದ ಕೆಮ್ಮಿಂಜೆ ಗ್ರಾಮದ ಇಡಬೆಟ್ಟು ಸಮೀಪದ ಕರೆಜ್ಜ ಎಂಬಲ್ಲಿ ಕೊಠಡಿಯೊಂದರಲ್ಲಿ ದಿಗ್ಭಂಧನದಲ್ಲಿರಿಸಿದ್ದ ವಿವಾಹಿತ ಮಹಿಳೆಯೊಬ್ಬರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು ಪೊಲೀಸರ ಸಹಕಾರದೊಂದಿಗೆ ರಕ್ಷಿಸಿದ್ದಾರೆ. ಮಹಿಳೆಯನ್ನು ಚಿಕಿತ್ಸೆಗಾಗಿ ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಶ್ರೀಪತಿ ಹೆಬ್ಬಾರ್ ಎಂಬುವರ ಪತ್ನಿಯನ್ನು ಮನೆಯ ಪಕ್ಕದ ಸಿಮೆಂಟ್ ಶೀಟ್ ಅಳವಡಿಸಿದ ಕಿಟಕಿ, ವಿದ್ಯುತ್ ಬೆಳಕಿನ ವ್ಯವಸ್ಥೆ ಇಲ್ಲದ ಕೋಣೆಯಲ್ಲಿ ಕಳೆದ 3 ತಿಂಗಳಿನಿಂದ ದಿಗ್ಬಂಧನದಲ್ಲಿರಿಸಿರುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅನಾಮಧೇಯ ಕರೆ ಬಂದಿತ್ತು.

ಈ ಹಿನ್ನೆಲೆಯಲ್ಲಿ ಮೇಲ್ವಿಚಾರಕರ ತಂಡ ಅಲ್ಲಿಗೆ ಭೇಟಿ ನೀಡಿ ಪರಿಶೀಲಿಸಿದಾಗ ಮಹಿಳೆ ಎದ್ದು ನಡೆಯಲಾರದ ಮತ್ತು ಸರಿಯಾಗಿ ಮಾತನಾಡಲಾಗದ ಸ್ಥಿತಿಯಲ್ಲಿದ್ದರು. ಆಸ್ಪತ್ರೆಗೆ ದಾಖಲಿಸುವುದಾಗಿ ತಿಳಿಸಿದಾಗ ನಿರಾಕರಿಸಿದ್ದರು. ಬಳಿಕ ಅಧಿಕಾರಿಗಳು ಸ್ಥಳೀಯರ ನೆರವಿನೊಂದಿಗೆ ಮಹಿಳೆಯನ್ನು ರಕ್ಷಿಸಿ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು.ಶ್ರೀಪತಿ ಹೆಬ್ಬಾರ್ ಅವರ ಮನೆಯಲ್ಲಿದ್ದ ಅವರ ಸಹೋದರಿಯನ್ನು ಅಧಿಕಾರಿಗಳು ವಿಚಾರಿಸಿದಾಗ ಆಕೆಗೆ ಪ್ರೇತ ಮೈಮೇಲೆ ಬರುವ ಕಾರಣಕ್ಕಾಗಿ ದಿಗ್ಭಂಧನದಲ್ಲಿಸಿರುವುದಾಗಿ ತಿಳಿಸಿದ್ದರು. ಅಧಿಕಾರಿಗಳು ಶ್ರೀಪತಿ ಹೆಬ್ಬಾರ್​​ ಅವರನ್ನು ಮೊಬೈಲ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದ್ದರೂ, ಅವರು ಕರೆ ಸ್ವೀಕರಿಸಿಲ್ಲ ಎಂಬ ಮಾಹಿತಿ ಲಭಿಸಿದೆ.


ದಿಗ್ಭಂಧನದಲ್ಲಿದ್ದ ಮಹಿಳೆಯ ಗಂಡ ಮತ್ತು ಆತನ ಸಹೋದರಿ ಇದೇ ಮನೆಯಲ್ಲಿ ವಾಸವಾಗಿದ್ದು, ಮಹಿಳೆಯನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂಡಿಹಾಕಿರುವ ಬಗ್ಗೆ ಕೂಲಂಕುಷ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.,ಪ್ರೇತ ಮೈಮೇಲೆ ಬರುವ ನೆಪ?: ಅಡುಗೆ ವೃತ್ತಿ ಮಾಡುತ್ತಿದ್ದ ಶ್ರೀಪತಿ ಹೆಬ್ಬಾರ್​ ಅವರು ಬಂಟ್ವಾಳ ತಾಲೂಕಿನ ವಿಟ್ಲ ಮೂಲದ ಮಹಿಳೆಯನ್ನುಅಂತರ್ಜಾತಿ ವಿವಾಹವಾಗಿದ್ದರು. ಈ ಅವರ ಮೈಮೇಲೆ ಪ್ರೇತ ಬರುತ್ತದೆ ಎಂಬ ಕಾರಣದ ಹಿನ್ನೆಲೆಯಲ್ಲಿ ಮನೆಯ ಪಕ್ಕದ ಗೂಡಿನಂತಿರುವ ಕೊಠಡಿಯಲ್ಲಿ ಕೂಡಿ ಹಾಕಿ ದಿನವೊಂದಕ್ಕೆ ಒಂದು ಬಾರಿ ಮಾತ್ರ ಹಾಲು ಬಳಸದ ಚಹಾ ಮತ್ತು ಬಿಸ್ಕೆಟ್​ ಮಾತ್ರ ನೀಡಲಾಗುತ್ತಿತ್ತು. ಕಳೆದ ಮೂರು ತಿಂಗಳಿನಿಂದ ಈ ರೀತಿ ದಿಗ್ಭಂಧನದಲ್ಲಿರಿಸಲಾಗಿತ್ತು. ಸುದೀರ್ಘ ಸಮಯದಿಂದ ಸ್ನಾನ ಮಾಡಿಸದ ರೀತಿ, ತೀರಾ ಅಶಕ್ತರಾಗಿದ್ದರು ಎಂಬ ಮಾಹಿತಿ ಅಧಿಕಾರಿಗಳಿಗೆ ವಿಚಾರಣೆಯ ವೇಳೆ ದೊರಕಿದೆ.

ಮೋದಿ ರೀತಿಯ ಜಾಗತಿಕ ನಾಯಕ ಹುಟ್ಟುವುದಕ್ಕೆ ಸಾಧ್ಯವಿಲ್ಲ:ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ

Posted by Vidyamaana on 2024-04-03 16:35:43 |

Share: | | | | |


ಮೋದಿ ರೀತಿಯ ಜಾಗತಿಕ ನಾಯಕ ಹುಟ್ಟುವುದಕ್ಕೆ ಸಾಧ್ಯವಿಲ್ಲ:ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮೈಸೂರು ಸಂಸದ ಪ್ರತಾಪ್ ಸಿಂಹ


ಈ ಬಾರಿ ದಕ್ಷಿಣ ಕನ್ನಡದಲ್ಲಿ ಮೂರುವರೆ ಲಕ್ಷಕ್ಕೂ ಅಧಿಕ ಮತಗಳ ಅಂತರದ ಗೆಲುವು : ಸಂಸದ ನಳಿನ್ ಕುಮಾರ್ ಕಟೀಲ್| ಪುತ್ತೂರು ಬಿಜೆಪಿ ಕಾರ್ಯಕರ್ತರ ಸಭೆ

ಪುತ್ತೂರು: ಜಗತ್ತಿನಲ್ಲಿ ಶ್ರೇಷ್ಠ ಭಾರತವನ್ನು ನಿರ್ಮಾಣ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಜಗತ್ತಿನ ನಾಯಕರಾಗಿ ಹೊರಹೊಮ್ಮಿದ್ದು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ 400 ಕ್ಕೂ ಅಧಿಕ ಸ್ಥಾನಗಳನ್ನು ಪಡೆಯುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಲಿದ್ದಾರೆ ಎಂದು ಸಂಸದ, ರಾಜಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.

ಮಂಗಳವಾರ ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಸ್ವಾಮಿ ಕಲಾಮಂದಿರದಲ್ಲಿ ಪುತ್ತೂರು ಬಿಜೆಪಿ ವಿಧಾನಸಭಾ ವತಿಯಿಂದ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

ದೇಶದಲ್ಲಿ ಪರಿವರ್ತನೆಯ ಗಾಳಿ ಬೀಸುತ್ತಿದ್ದು, ಭಾರತೀಯ ಜನತಾ ಪಾರ್ಟಿಯ ಕನಸುಗಳು ನನಸಾಗುವ ಕಾಲಘಟ್ಟದಲ್ಲಿದ್ದು, ಮುಂದಿನ ಪ್ರಧಾನಿಯಾಗಿ ನರೇಂದ್ರ ಮೋದಿ ಶತಸಿದ್ಧ ಎಂದು ಹೇಳಿದ ಅವರು, ಕಳೆದ ಬಾರಿ 2.70 ಲಕ್ಷ ಮತಗಳಿಂದ ಸಂಸದನಾಗಿ ನಾನು ಆಯ್ಕೆಯಾಗಿದ್ದು, ಈ ಬಾರಿ ದಕ್ಷಿಣ ಕನ್ನಡದಲ್ಲಿ ಮೂರುವರೆ ಲಕ್ಷಕ್ಕೂ ಅಧಿಕ ಮತಗಳ ಜತೆಗೆ ಪುತ್ತೂರಿನಲ್ಲಿ 70 ಸಾವಿರ ಮತಗಳ ಅಂತರದಲ್ಲಿ ಬ್ರಿಜೇಶ್ ಚೌಟರನ್ನು ಗೆಲ್ಲಿಸಿಕೊಡುವ ಪ್ರಯತ್ನವನ್ನು ನಾವೆಲ್ಲರೂ ಒಟ್ಟಾಗಿ ಮಾಡೋಣ ಎಂದರು.


ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ

Posted by Vidyamaana on 2023-04-15 09:05:56 |

Share: | | | | |


ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ

ಪುತ್ತೂರು : ವಿಧಾನ ಸಭಾ ಚುನಾವಣಾ ದಿನಾಂಕ ಈಗಾಗಲೇ ಘೋಷಣೆಯಾಗಿದ್ದು, ಪುತ್ತೂರಿನ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಬಹಳ ಕುತೂಹಲಕಾರಿಯಾಗಿತ್ತು. ಮೊದಲ ಮತ್ತು ಎರಡನೇ ಪಟ್ಟಿಯಲ್ಲಿ ಅಭ್ಯರ್ಥಿಗಳ ಹೆಸರನ್ನು ಬಹಿರಂಗಗೊಳಿಸದ ಕೈ ಪಾಳಯ ಮೂರನೇ ಪಟ್ಟಿಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಪ್ರಕಟಿಸಿದೆ.

ಈ ಬಾರಿಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಾಮಾಜಿಕ, ಧಾರ್ಮಿಕ ಮುಂದಾಳು ಅಶೋಕ್ ಕುಮಾರ್ ರೈ ಯವರ ಹೆಸರು ಪ್ರಕಟಗೊಂಡಿದೆ.

ಇನ್ಸ್ಟಾಗ್ರಾಮ್ ಮೂಲಕ ಪರಿಚಯ

Posted by Vidyamaana on 2023-06-29 11:23:59 |

Share: | | | | |


ಇನ್ಸ್ಟಾಗ್ರಾಮ್ ಮೂಲಕ ಪರಿಚಯ

ಮಂಗಳೂರು : ಇನ್​ಸ್ಟಾಗ್ರಾಂನಲ್ಲಿ ಯುವತಿಯನ್ನು ಪರಿಚಯಮಾಡಿಕೊಂಡು ಬಳಿಕ ಪ್ರೀತಿ ಪ್ರೇಮದ ಹೆಸರಿನಲ್ಲಿ ದೈಹಿಕ ಸಂಪರ್ಕ ಬೆಳೆಸಿ ಮೋಸ ಮಾಡಲು ಯತ್ನಿಸಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ವ್ಯಕ್ತಿಯು ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಕಡಬ ಮೂಲದ ವ್ಯಕ್ತಿ ಅನೀಶ್​ ರೆಹಮಾನ್​ ಎಂದು ಗುರುತಿಸಲಾಗಿದೆ. ಈತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಅನೀಶ್​ ಇನ್​ಸ್ಟಾಗ್ರಾಂ ಮೂಲಕ ಯುವತಿಯ ಸ್ನೇಹ ಬೆಳೆಸಿದ್ದ ಎನ್ನಲಾಗಿದೆ. ಈ ಸ್ನೇಹ ಪ್ರೇಮಕ್ಕೂ ತಿರುಗಿತ್ತು. ಆಕೆಯನ್ನು ಭೇಟಿ ಕೂಡ ಮಾಡಿದ್ದ ಅನೀಶ್​ ಮದುವೆಯಾಗುತ್ತೇನೆ ಎಂದು ನಂಬಿಸಿದ್ದಾರೆ. ಹೋಟೆಲ್​​​ನಲ್ಲಿ ಯುವತಿಯೊಂದಿಗೆ ರೂಮ್​ ಮಾಡಿದ್ದ ಈ ಪಾಪಿ ನಿರಂತರ 20 ದಿನಗಳ ಕಾಲ ಆಕೆಯೊಂದಿಗೆ ದೈಹಿಕ ಸಂಪರ್ಕ ಹೊಂದಿದ್ದ ಎನ್ನಲಾಗಿದೆ.ಆದರೆ ಅನೀಶ್​ ತನಗೆ ಮೋಸ ಮಾಡಿದ್ದಾನೆ ಎಂದು ತಿಳಿಯುತ್ತಿದ್ದಂತೆಯೇ ಯುವತಿಯು ಪೊಲೀಸ್​ ಠಾಣೆಗೆ ಬಂದು ದೂರು ನೀಡಿದ್ದಾಳೆ. ಬಂಧಿತ ಅನೀಶ್​ ವಿರುದ್ಧ ಐಪಿಸಿ ಸೆಕ್ಷನ್​ 506, 417 ಹಾಗೂ 376ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಂದಹಾಗೆ ಬಂಧಿತ ಅನೀಶ್​ ರೆಹಮಾನ್​ ಈ ಹಿಂದೆ ಕಾವೂರು ಪೊಲೀಸ್​ ಠಾಣೆಯಲ್ಲಿ ಗಾಂಜಾ ಸೇವನೆ ಪ್ರಕರಣ ಅಡಿಯಲ್ಲಿ ಅರೆಸ್ಟ್​ ಆಗಿದ್ದ ಅನ್ನೋದು ತನಿಖೆ ವೇಳೆ ತಿಳಿದು ಬಂದಿದೆ.



Leave a Comment: