ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಸುದ್ದಿಗಳು News

Posted by vidyamaana on 2024-07-03 08:24:56 |

Share: | | | | |


ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

ವರ್ಗಾವಣೆಗೊಂಡ ಕೆಎಎಸ್‌ ಅಧಿಕಾರಿಗಳು

ಡಾ. ಜಗದೀಶ್‌ ಕೆ. ನಾಯಕ್‌

ರಘುನಂದನ್‌ ಎ.ಎನ್‌

ಪ್ರಸನ್ನ ಕುಮಾರ್‌ ವಿ.ಕೆ

ಹುಲ್ಲುಮನಿ ತಿಮ್ಮಣ್ಣ

ವರ್ಗಾವಣೆಗೊಂಡ ಐಪಿಎಸ್‌ ಅಧಿಕಾರಿಗಳು

ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ

ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ

ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ

ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ

ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ

ಸುಮನ್ ಡಿ. ಪೆನ್ನೇಕರ್ -ಎಸ್‌ ಪಿ, ಬಿಎಂಟಿಎಫ್

ಸಿ.ಬಿ. ರಿಷ್ಯಂತ್ -ಎಸ್.ಪಿ

ಚನ್ನಬಸವಣ್ಣ - ಎಐಜಿಪಿ, ಆಡಳಿತ, ಡಿಜಿ ಕಚೇರಿ

ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ

ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ

ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.

ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್

ಪ್ರದೀಪ್‌ ಗುಂಡಿ - ಎಸ್‌ ಪಿ. ಬೀದರ್‌ ಜಿಲ್ಲೆ

ಯತೀಶ್‌ ಎನ್. - ಎಸ್‌ ಪಿ ದಕ್ಷಿಣ ಕನ್ನಡ ಜಿಲ್ಲೆ

ಮಲ್ಲಿಕಾರ್ಜುನ ಬಾಲದಂಡ ಎಸ್‌ ಪಿ ಮಂಡ್ಯ ಜಿಲ್ಲೆ

ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿಲ್ಲೆ

ಬಿ. ನಿಖಿಲ್‌ ಎಸ್‌ ಪಿ ಕೋಲಾರ ಜಿಲ್ಲೆ

 Share: | | | | |


ಪ್ರೀತಿಗೆ ಪೋಷಕರ ನಿರಾಕರಣೆ; ಪ್ರೇಮಿಗಳಿಬ್ಬರು ನೇಣಿಗೆ ಶರಣು

Posted by Vidyamaana on 2024-02-03 18:08:10 |

Share: | | | | |


ಪ್ರೀತಿಗೆ ಪೋಷಕರ ನಿರಾಕರಣೆ; ಪ್ರೇಮಿಗಳಿಬ್ಬರು ನೇಣಿಗೆ ಶರಣು

ಕಲಬುರಗಿ : ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರು ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ. ಶಶಿಕಲಾ (20) ಗೊಲ್ಲಾಳಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು. ಶಶಿಕಲಾ ಮತ್ತು ಗೊಲ್ಲಾಳಪ್ಪ ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ ಆಗಿದ್ದರು.ಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು ಕುಟುಂಬಸ್ಥರು ಮುಂದಾಗಿದ್ದರು. ಅದರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಗ್ರಾಮದ ಯುವಕನ ಜೊತೆ ನಿಶ್ಚಿತಾರ್ಥ ಮಾಡಿಸಿದ್ದರು. ಮುಂದಿನ ತಿಂಗಳು ಮದುವೆ ಕೂಡ ನಿಶ್ಚಯವಾಗಿತ್ತು ಎನ್ನಲಾಗಿದೆ.ಪ್ರೇಯಸಿಗೆ ಮದುವೆ ನಿಶ್ಚಯ ಆಗಿರುವ ವಿಷಯ ತಿಳಿದ ಗೊಲ್ಲಾಳಪ್ಪ ನಿನ್ನೆ ರಾತ್ರಿ ಶಶಿಕಲಾಳನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾನೆ. ನಂತರ ಮಾಗಣಪುರ ಗ್ರಾಮದ ದೇವಸ್ಥಾನದಲ್ಲಿ ಜೋಡಿ ಮದುವೆ ಮಾಡಿಕೊಂಡಿದ್ದಾರೆ. ಬಳಿಕ ಅದೇ ಗ್ರಾಮದ ಹೊರವಾಲಯದ ತೋಟದ ಜಮೀನಿನಲ್ಲಿ ಇಬ್ಬರು ನೇಣಿಗೆ ಶರಣಾಗಿದ್ದಾರೆ. ಪ್ರೇಮಿಗಳಿಬ್ಬರು ನೇಣಿಗೆ ಶರಣಾಗುವ ಮುನ್ನ ತಾವು ಮದುವೆ ಮಾಡಿಕೊಂಡಿರುವುದರ ಬಗ್ಗೆ ಸೆಲ್ಫಿ ಫೋಟೋ ತೆಗೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಎಚ್‌3ಎನ್‌2 ಜತೆಗೆ ಕಾಡುತ್ತಿದೆ ಅಡೆನೋವೈರಸ್ ಭೀತಿ: ಮಕ್ಕಳೇ ಟಾರ್ಗೆಟ್

Posted by Vidyamaana on 2023-03-10 08:14:03 |

Share: | | | | |


ಎಚ್‌3ಎನ್‌2 ಜತೆಗೆ ಕಾಡುತ್ತಿದೆ ಅಡೆನೋವೈರಸ್ ಭೀತಿ: ಮಕ್ಕಳೇ ಟಾರ್ಗೆಟ್

ಪಶ್ಚಿಮ ಬಂಗಾಳ, ಬೆಂಗಳೂರು ಸೇರಿದಂತೆ ಅನೇಕ ಕಡೆಗಳಲ್ಲಿ ಅಡೆನೋವೈರಸ್ ಪ್ರಕರಣಗಳು ಹೆಚ್ಚುತ್ತಿವೆ. ಮುಖ್ಯವಾಗಿ ಮಕ್ಕಳನ್ನು ಕಾಡುವ ಈ ಸೋಂಕು, ಪ್ಲೂ ಪ್ರಕರಣಗಳ ಜತೆಗೆ ಆರೋಗ್ಯ ಕ್ಷೇತ್ರದಲ್ಲಿನ ಆತಂಕವನ್ನು ಹೆಚ್ಚಿಸಿದೆ.

ಭಾರತದ ಅನೇಕ ಭಾಗಗಳಲ್ಲಿ ಎಚ್‌3ಎನ್‌2 ಫ್ಲೂ ಹಾವಳಿ ಹೆಚ್ಚುತ್ತಿದ್ದರೆ, ಇನ್ನೊಂದೆಡೆ ಮಾರಕ ಅಡೆನೋವೈರಸ್ ಪ್ರಕರಣಗಳಲ್ಲಿಯೂ ಗಂಭೀರ ಏರಿಕೆ ಉಂಟಾಗುತ್ತಿದೆ. ಮಕ್ಕಳು ಈ ವೈರಸ್‌ಗೆ ತುತ್ತಾಗುತ್ತಿದ್ದು, ವೈದ್ಯರು ಅಪಾಯದ ಗಂಟೆ ಮೊಳಗಿಸಿದ್ದಾರೆ.

ಮುಖ್ಯವಾಗಿ ಪಶ್ಚಿಮ ಬಂಗಾಳದಲ್ಲಿ ಅಡೆನೋವೈರಸ್ ಭೀತಿ ಹೆಚ್ಚಾಗಿದೆ. ತೀವ್ರ ಉಸಿರಾಟ ಸೋಂಕಿನಿಂದಾಗಿ (ಎಆರ್‌ಐ) ಮಂಗಳವಾರ ಮತ್ತು ಬುಧವಾರದ ನಡುವೆ ಕೋಲ್ಕತಾದ ಮೂರು ಸರ್ಕಾರಿ ಆಸ್ಪತ್ರೆಗಳಲ್ಲಿ ನಾಲ್ಕು ಮಕ್ಕಳು ಕೊನೆಯುಸಿರೆಳೆದಿದ್ದಾರೆ. ಅವರಲ್ಲಿ ಎರಡು ಮಕ್ಕಳಲ್ಲಿ ಅಡೆನೋವೈರಸ್ ಪಾಸಿಟಿವ್ ದೃಢಪಟ್ಟಿದೆ.

ಪಶ್ಚಿಮ ಬಂಗಾಳದಲ್ಲಿ ಕಳೆದ 9 ದಿನಗಳಲ್ಲಿ 36ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿದ್ದಾರೆ. ಆದರೆ ಎರಡು ಮಕ್ಕಳ ಸಾವು ಮಾತ್ರ ಅಡೆನೋವೈರಸ್‌ಗೆ ಸಂಬಂಧಿಸಿದ್ದು ಎಂದು ಸಿಎಂ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ ಕೂಡ ಅಡೆನೋವೈರಸ್ ಪ್ರಕರಣಗಳಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಆದರೆ ಸೋಂಕು ಸ್ವಯಂ ಸೀಮಿತತೆ ಹೊಂದಿರುವುದರಿಂದ ಹೆಚ್ಚು ಕಳವಳ ಪಡುವ ಅಗತ್ಯವಿಲ್ಲ ಎಂದು ತಜ್ಞರು ಹೇಳಿದ್ದಾರೆ.

"ಕಳೆದ ಮೂರು ವಾರಗಳಲ್ಲಿ ಅಡೆನೋವೈರಸ್ ಪ್ರಕರಣಗಳಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಹಿಂದಿನ ಎರಡು ತಿಂಗಳಲ್ಲಿ 21 ಖಚಿತ ಪಾಸಿಟಿವ್ ಪ್ರಕರಣಗಳಿದ್ದವು. ಈಗ ಅಂತಹ ಸೋಂಕು ಹೊಂದಿರಬಹುದಾದ ಸುಮಾರು 30 ಮಕ್ಕಳು ಪ್ರತಿದಿನವೂ ಒಪಿಡಿ ಮತ್ತು ಇಆರ್‌ಗಳಿಗೆ ಬರುತ್ತಿದ್ದಾರೆ. ಫ್ಲೂ ಅಥವಾ ಅಡೆನೋವೈರಸ್ ಲಕ್ಷಣಗಳೊಂದಿಗೆ ದಾಖಲಾದ ಮಕ್ಕಳ ಗಂಟಲಿನ ದ್ರವಗಳನ್ನು ಪರೀಕ್ಷೆ ಮಾಡಲಾಗುತ್ತಿದೆ. ಪ್ರತಿದಿನವೂ ಅಂತಹ 3-4 ಮಕ್ಕಳನ್ನು ದಾಖಲು ಮಾಡಿಕೊಳ್ಳುತ್ತಿದ್ದೇವೆ" ಎಂದು ಬೆಂಗಳೂರಿನ ಸಕ್ರಾ ವರ್ಲ್ಡ್ ಆಸ್ಪತ್ರೆಯ ಶಿಶುವೈದ್ಯ ವಿಭಾಗದ ಹಿರಿಯ ಕನ್ಸಲ್ಟೆಂಟ್ ಡಾ. ರಜತ್ ಅತ್ರೇಯಾ ತಿಳಿಸಿದ್ದಾರೆ.

ರಾಷ್ಟ್ರೀಯ ವೈರಾಣು ಸಂಸ್ಥೆಯ ಪ್ರಕಾರ, ನಗರದಲ್ಲಿ ಈ ವರ್ಷ ಇದುವರೆಗೂ ಕೇವಲ 13 ಅಡೆನೋವೈರಸ್ ಸೋಂಕು ಪ್ರಕರಣಗಳು ವರದಿಯಾಗಿವೆ. ಕರ್ನಾಟಕದ ಒಟ್ಟು ಸೋಂಕಿತರ ಸಂಖ್ಯೆ 37 ಇದೆ. ಖಾಸಗಿ ಆಸ್ಪತ್ರೆಗಳು ಅಡೆನೋವೈರಸ್ ಪ್ರಕರಣಗಳ ಬಗ್ಗೆ ನೀಡುವ ಮಾಹಿತಿ ಸುಧಾರಿಸಬೇಕಿದೆ ಎಂದು ಆರೋಗ್ಯ ಅಧಿಕಾರಿಗಳು ಹೇಳಿದ್ದಾರೆ.

ಫ್ಲೂ ಮತ್ತು ಅಡೆನೋವೈರಸ್ ಲಕ್ಷಣಗಳೇನು?

ಅಡೆನೋವೈರಸ್, ಅಧಿಕ ಅಪಾಯಕಾರಿ ವೈರಸ್ ಆಗಿದೆ. ಅದು ಸಾಮಾನ್ಯವಾದ ಶೀತ, ಶ್ವಾಸನಾಳಗಳ ಒಳ ಪದರ ಉರಿತ ಮತ್ತು ನ್ಯುಮೋನಿಯಾ ಸೇರಿದಂತೆ ವಿವಿಧ ಬಗೆಯ ಅನಾರೋಗ್ಯಗಳನ್ನು ಉಂಟುಮಾಡುತ್ತದೆ. ಅಡೆನೋವೈರಸ್ ಸೋಂಕು ಹೆಚ್ಚಾಗಿ ಜ್ವರ, ಕೆಮ್ಮು, ನೆಗಡಿ ಹಾಗೂ ಪಿಂಕ್ ಐ ಸಮಸ್ಯೆಗಳಂತಹ ಲಕ್ಷಣಗಳನ್ನು ಉಂಟುಮಾಡುತ್ತದೆ. ಆದರೆ ಅದು ಮುಖ್ಯವಾಗಿ, ದುರ್ಬಲ ಪ್ರತಿರಕ್ಷಣಾ ವ್ಯವಸ್ಥೆ ಹೊಂದಿರುವವರಲ್ಲಿ ಬಹಳ ಗಂಭೀರ ಕಾಯಿಲೆಯನ್ನೂ ಉಂಟುಮಾಡಬಹುದು.

ಎಚ್‌3ಎನ್‌2 ಅಥವಾ ಫ್ಲೂ ಎನ್ನುವುದು ಇನ್‌ಫ್ಲೂಯೆಂಜಾ ವೈರಸ್‌ಗಳಿಂದ ಸೃಷ್ಟಿಯಾಗುವ ಉಸಿರಾಟದ ಸಮಸ್ಯೆಯಾಗಿದೆ. ಫ್ಲೂ ಕೂಡ ತೀವ್ರ ಅಪಾಯಕಾರಿ ಮತ್ತು ಸೋಂಕು ತಗುಲಿದ ವ್ಯಕ್ತಿಗಳ ಜತೆಗಿನ ನಿಕಟ ಸಂಪರ್ಕ, ಕಲುಷಿತ ಮೇಲ್ಮೈಗಳು ಅಥವಾ ಗಾಳಿಯಿಂದ ಹರಡುವ ದ್ರವಗಳಿಂದ ಕೂಡ ಹರಡಬಲ್ಲದು. ಜ್ವರ, ಕೆಮ್ಮು, ಗಂಟಲು ನೋವು, ಸ್ನಾಯು ನೋವು ಮತ್ತು ಅಸ್ವಸ್ಥತೆ- ಇವು ಫ್ಲೂ ಲಕ್ಷಣಗಳು. ಇದು ಕೂಡ ನ್ಯುಮೋನಿಯಾ, ಶ್ವಾಸನಾಳಗಳ ಉರಿತ ಹಾಗೂ ಸಾವಿಗೆ ಕೂಡ ಕಾರಣವಾಗಬಹುದು.

ಎರಡರ ನಡುವಿನ ವ್ಯತ್ಯಾಸವೇನು?

ಅಡೆನೋವೈರಸ್ ಮತ್ತು ಇನ್‌ಫ್ಲೂಯೆಂಜಾಗಳು ಉಸಿರಾಟ ಸಂಬಂಧಿ ಕಾಯಿಲೆಗೆ ಕಾರಣವಾಗುವ ಎರಡು ಸಾಮಾನ್ಯ ವೈರಸ್‌ಗಳಾದರೂ, ಇವರೆಡರ ನಡುವೆ ವ್ಯತ್ಯಾಸಗಳಿವೆ. ಇವೆರಡೂ ಉಂಟುಮಾಡಬಹುದಾದ ಅನಾರೋಗ್ಯದ ತೀವ್ರತೆಯೇ ಮುಖ್ಯ ವ್ಯತ್ಯಾಸ. ಎರಡೂ ಸಂಕೀರ್ಣ ಸಮಸ್ಯೆಗಳಿಗೆ ಕಾರಣವಾಗಬಹುದು. ಆದರೆ ಫ್ಲೂ ಸಾಮಾನ್ಯವಾಗಿ ಗಂಭೀರ ಕಾಯಿಲೆ ಮತ್ತು ಆಸ್ಪತ್ರೆ ದಾಖಲಾಗುವಿಕೆಗೆ ಎಡೆಮಾಡಿಕೊಡುತ್ತದೆ. ಚಿಕ್ಕ ಮಕ್ಕಳು, ವೃದ್ಧರು, ಆರೋಗ್ಯ ಸಮಸ್ಯೆ ಹೊಂದಿರುವವರಿಗೆ ಅಪಾಯ ಅಧಿಕ. ಅಡೆನೋವೈರಸ್ ಸಾಧಾರಣದಿಂದ ಮಧ್ಯಮ ಪ್ರಮಾಣದ ಲಕ್ಷಣಗಳನ್ನು ಉಂಟುಮಾಡುತ್ತದೆ.

ಫ್ಲೂಗೆ ಪ್ರಸ್ತುತ ಲಸಿಕೆ ಲಭ್ಯವಿದೆ. ಆದರೆ ಅಡೆನೋವೈರಸ್‌ಗೆ ಲಸಿಕೆ ಇಲ್ಲ. ಫ್ಲೂ ಬರುವ ಸಾಧ್ಯತೆಗಳನ್ನು ತಡೆಗಟ್ಟಲು ಆರು ತಿಂಗಳು ದಾಟಿದ ಮಕ್ಕಳಿಂದ ಎಲ್ಲ ದೊಡ್ಡವರೂ ಪ್ರತಿ ವರ್ಷ ಕೂಡ ಈ ಲಸಿಕೆ ಹಾಕಿಸಿಕೊಳ್ಳಬೇಕು. ಇದರಿಂದ ಫ್ಲೂ ಬಂದರೂ ಅದರ ತೀವ್ರತೆ ಕಡಿಮೆ ಇರುತ್ತದೆ ಎಂದು ಸಲಹೆ ನೀಡಲಾಗಿದೆ. ಅಡೆನೋವೈರಸ್‌ಗೆ ಲಸಿಕೆ ಇಲ್ಲದಿರುವುದರಿಂದ ಕೈಗಳನ್ನು ಚೆನ್ನಾಗಿ ತೊಳೆದುಕೊಳ್ಳುವುದು, ಸೋಂಕಿತರೊಂದಿಗೆ ಸಮೀಪದ ಸಂಪರ್ಕ ಸಾಧಿಸುವುದರಿಂದ ದೂರ ಇರುವುದು ಮುಂತಾದ ಉತ್ತಮ ಅಭ್ಯಾಸಗಳನ್ನು ಕಾಪಾಡಿಕೊಳ್ಳುವುದೇ ಪರಿಹಾರ.

ಬೆಳ್ತಂಗಡಿ : ಸೌಜನ್ಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

Posted by Vidyamaana on 2023-11-07 21:53:20 |

Share: | | | | |


ಬೆಳ್ತಂಗಡಿ : ಸೌಜನ್ಯ ಕೊಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಳ್ತಂಗಡಿ : 11 ವರ್ಷಗಳ ಹಿಂದೆ ಕೊಲೆಯಾದ ಕಾಲೇಜ್ ವಿದ್ಯಾರ್ಥಿ ಸೌಜನ್ಯ ಪ್ರಕರಣ ಆರೋಪಿಗೆ ನಿರ್ದೋಷಿ ಎಂದು ತೀರ್ಪು ನೀಡಿದ ಹಲವು ತಿಂಗಳ ಬಳಿಕ ಇದೀಗ ಸಿಬಿಐ ಅಧಿಕಾರಿಗಳು ಹೈಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.


ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದಲ್ಲಿ ಸಿಬಿಐ ನ್ಯಾಯಾಲಯ ಆರೋಪಿ ಸಂತೋಷ್ ರಾವ್ ಗೆ ಸಾಕ್ಷದಾರ ಕೊರತೆಯಿಂದ ನಿರ್ದೋಷಿ ಎಂದು ತೀರ್ಪು ನೀಡಿದ್ದು ಇದೀಗ ನ.5 ಶನಿವಾರದಂದು ಸಿಬಿಐ ತನಿಖಾಧಿಕಾರಿಗಳು ಹೈ ಕೋರ್ಟ್‌ ಗೆ ಮೇಲ್ಮನವಿ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ. ಇದರ ಬಗ್ಗೆ ಕೆಲವೇ ದಿನಗಳಲ್ಲಿ ಹೈಕೋರ್ಟ್ ಪ್ರಕರಣ ದಾಖಲಿಸಿದ ದಾವೆಯ CC ಹೊರಡಿಸಲಿದೆ.


ಇನ್ನೂ ಸೌಜನ್ಯ ಪ್ರಕರಣದಲ್ಲಿ ನಕಲಿ ಹೋರಾಟ ಮಾಡುವವರಿಗೆ ನಡುಕ ಹುಟ್ಟಿಸಿದೆ. ಈವರೆಗೆ ನಕಲಿ ಹೋರಾಟ ಮಾಡುವವರಿಗೆ ಕರ್ನಾಟಕದಲ್ಲಿ ಇನ್ನೂ ಮುಂದೆ ಹೋರಾಟ ನಿರ್ಬಂಧ ಹೇರಲಾಗುತ್ತೆ ಎನ್ನಲಾಗಿದೆ. ಅದಲ್ಲದೇ ಪ್ರಕರಣ ಯಾವ ರೀತಿಯಲ್ಲಿ ಮುಂದುವರಿಯತ್ತದೆ ಎಂದು ಕಾದು ನೋಡಬೇಕಾಗಿದೆ.

15 ಐಪಿಎಸ್ ಅಧಿಕಾರಿಗಳ ವರ್ಗಾವಣೆ: ದಕ್ಷಿಣ ಕನ್ನಡ ಎಸ್ಪಿಯಾಗಿ ಸಿ ಬಿ ರಿಷ್ಯಂತ್ ನೇಮಕ

Posted by Vidyamaana on 2023-06-20 10:36:15 |

Share: | | | | |


15 ಐಪಿಎಸ್ ಅಧಿಕಾರಿಗಳ ವರ್ಗಾವಣೆ: ದಕ್ಷಿಣ ಕನ್ನಡ ಎಸ್ಪಿಯಾಗಿ ಸಿ ಬಿ ರಿಷ್ಯಂತ್ ನೇಮಕ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ರಚನೆ ಬೆನ್ನಲ್ಲೇ ಪೊಲೀಸ್ ಇಲಾಖೆಗೆ ಭರ್ಜರಿ ಸರ್ಜರಿ ಮಾಡಲಾಗಿದ್ದು 15 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಹೀಗಾಗಿ ದಕ್ಷಿಣ ಕನ್ನಡದ ಪೊಲೀಸ್ ವರಿಷ್ಠಾಧಿಕಾರಿಯಾಗಿ(ಎಸ್‌ಪಿ) ಐಪಿಎಸ್ ಅಧಿಕಾರಿ ಸಿ ಬಿ ರಿಷ್ಯಂತ್ ನೇಮಕ ಮಾಡಲಾಗಿದೆ.ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದ ವಿಕ್ರಮ್ ಅಮತೆ ಅವರು ವೈದ್ಯಕೀಯ ರಜೆಯಲ್ಲಿ ತೆರಳಿದ ಹಿನ್ನಲೆಯಲ್ಲಿ ಸಿ ಬಿ ರಿಷ್ಯಂತ್ ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದರು.

2013ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿದ್ದ ರಿಷ್ಯಂತ್ ಅವರು ಈ ಹಿಂದೆ ದಾವಣಗೆರೆಯ ಎಸ್‌ಪಿಯಾಗಿ ಸೇವೆ ಸಲ್ಲಿಸುತ್ತಿದ್ದರು ವಿಧಾನಸಭೆ ಚುನಾವಣೆಗೆ ಮುನ್ನ ಬೆಂಗಳೂರಿನಲ್ಲಿ ನಿಯೋಜನೆಗೊಂಡಿದ್ದರು.

ಬೆಂಗಳೂರಿನವರಾದ ರಿಷ್ಯಂತ್ ಅವರು ಈ ಹಿಂದೆ ದಕ್ಷಿಣ ಕನ್ನಡ, ಮೈಸೂರು, ಬಾಗಲಕೋಟೆ ಮತ್ತು ದಾವಣಗೆರೆಯ ಎಎಸ್‌ಪಿಯಾಗಿ ಸೇವೆ ಸಲ್ಲಿಸಿದ್ದಾರೆ.

ಬಡಗನ್ನೂರು ಗ್ರಾ.ಪಂ. ಮಾಜಿ ಸದಸ್ಯರ ಮನೆಯಲ್ಲಿ ದರೋಡೆ

Posted by Vidyamaana on 2023-09-07 15:14:22 |

Share: | | | | |


ಬಡಗನ್ನೂರು ಗ್ರಾ.ಪಂ. ಮಾಜಿ ಸದಸ್ಯರ ಮನೆಯಲ್ಲಿ ದರೋಡೆ

ಪುತ್ತೂರು: ಬಡಗನ್ನೂರು ಗ್ರಾಪಂ ಸದಸ್ಯ ಗುರುಪ್ರಸಾದ್ ಅವರ ಮನೆಗೆ ತಡರಾತ್ರಿ ನುಗ್ಗಿದ ಮುಸುಕುಧಾರಿಗಳ ತಂಡ ನಡೆಸಿದ ದರೋಡೆ ಪ್ರಕರಣದ ತನಿಖೆಗಾಗಿ ವಿಶೇಷ ತಂಡ ರಚಿಸಲಾಗುವುದು ಎಂದು ಎಸ್ಪಿ ರಿಷ್ಯಂತ್ ಸಿ.ಬಿ. ತಿಳಿಸಿದ್ದಾರೆ.

ಬಡಗನ್ನೂರು ಗ್ರಾಪಂ ಮಾಜಿ ಸದಸ್ಯ ಗುರುಪ್ರಸಾದ್ ಅವರ ಮನೆ ಪರಿಶೀಲಿಸಿ ಮಾಧ್ಯಮದೊಂದಿಗೆ ಅವರು ಮಾತನಾಡಿದರು.

ತಡರಾತ್ರಿ ಮನೆಯೊಳಗೆ ನುಗ್ಗಿದ ದರೋಡರಕೋರರ ಗುಂಪು, ಗುರುಪ್ರಸಾದ್, ಅವರ ತಾಯಿ ಹಾಗೂ ಮನೆಯವರನ್ನು ಕಟ್ಟಿ ಹಾಕಿದೆ. ಬಳಿಕ ಮೊಬೈಲ್ಗಳನ್ನು ನೀರಿಗೆ ಎಸೆದು, ದರೋಡೆ ನಡೆಸಿದೆ. ದರೋಡೆ ನಡೆಸಿದ ಬಳಿಕ ಬಂಧಮುಕ್ತಗೊಳಿಸಿ ತೆರಳಿದೆ. ಕೃತ್ಯ ಎಸಗಿದವರ ಬಗ್ಗೆ ಸುಳಿವು ಸಿಕ್ಕಿಲ್ಲ. ಹಾಗಾಗಿ ವಿಶೇಷ ತಂಡ ರಚಿಸಲಾಗುವುದು ಎಂದು ತಿಳಿಸಿದರು‌

ರಾತ್ರಿ ಸುಮಾರು 2 ಗಂಟೆ ವೇಳೆಗೆ ಕೃತ್ಯ ಎಸಗಿದ್ದು, 25 ಪವನ್ ಚಿನ್ನಾಭರಣ, 40 ಸಾವಿರ ರೂ. ನಗದು ಕಳವಾಗಿದೆ ಎನ್ನಲಾಗಿದೆ. ಈ ಬಗ್ಗೆ ಎಸ್ಪಿ ಅವರಲ್ಲಿ‌ ಪ್ರಶ್ನಿಸಿದಾಗ, ಇದರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಮುಂದೆ ಸ್ಪಷ್ಟ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಸ್ಥಳಕ್ಕೆ ಐಜಿ, ಎಸ್ಪಿ,ಡಿ ವೈ ಎಸ್ ಪಿ ಸಹಿತ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಶ್ವಾನದಳ, ಬೆರಳಚ್ಚುಗಾರರು ಪೊಲೀಸರೊಂದಿಗೆ ಕೈಜೋಡಿಸಿದ್ದಾರೆ.

ನೈತಿಕ ಪೊಲೀಸ್ ಗಿರಿ ಕಡಿವಾಣ ಹಾಕಿ: ಕಮಿಷನರ್ ಎಸ್ಪಿಗೆ ಸಿ ಎಂ ಖಡಕ್ ಆದೇಶ

Posted by Vidyamaana on 2023-08-02 10:11:10 |

Share: | | | | |


ನೈತಿಕ ಪೊಲೀಸ್ ಗಿರಿ ಕಡಿವಾಣ ಹಾಕಿ: ಕಮಿಷನರ್ ಎಸ್ಪಿಗೆ ಸಿ ಎಂ ಖಡಕ್ ಆದೇಶ

ಪುತ್ತೂರು: ದ ಕ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕಬೇಕು, ಪೊಲೀಸ್ ಗಿರಿ ಮಾಡುವ ದುಷ್ಕರ್ಮಿಗಳ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು,ಇದರಲ್ಲಿ ಯಾವುದೇ ಮುಲಾಜು ಮಾಡುವುದು ಬೇಡ .ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಎಲ್ಲೂ ನೈತಿಕ ಪೊಲೀಸ್ ಗಿರಿ ನಡೆಯಬಾರದು ಎಂದು ಸಿ ಎಂ ಸಿದ್ದರಾಮಯ್ಯ ಮಂಗಳೂರು ಕಮಿಷನರ್ ಮತ್ತು ಎಸ್ಪಿಯವರಿಗೆ ಖಡಕ್ ಆದೇಶ ವನ್ನು ನೀಡಿದ್ದಾರೆ.

ದ ಕ ಜಿಲ್ಲೆಯಲ್ಲಿ ಪದೇ ಪದೇ ಕಿರಾತಕರು ಹಲ್ಲೆ ನಡೆಸುವ ಘಟನೆಗಳು ನಡೆಯುತ್ತಿದೆ ಇದಕ್ಕೆ ಯಾಕೆ ನೀವು ಕಡಿವಾಣ ಹಾಕಿಲ್ಲ ಎಂದು ಏರು‌ಧ್ವನಿಯಲೇ ಇಬ್ಬರನ್ನೂ ಪ್ರಶ್ನಿಸಿದ ಸಿ ಎಂ ಮುಂದೆ ಎಲ್ಲೂ ಇಂತದ್ದಕ್ಕೆ ಅವಕಾಶ ನೀಡಲೇ ಬಾರದು ಎಂದು ಜಿಪಂ ಸಭಾಂಗಣದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಸೂಚನೆ ನೀಡಿದ್ದಾರೆ



Leave a Comment: