Posted by vidyamaana on 2024-07-03 19:44:44 |
ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಯವರು ಬುಧವಾರದಂದು ಬೆಂಗಳೂರಿನಲ್ಲಿ ಸಿ ಎಂನಿವಾಸದಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪುತ್ತೂರಿಗೆಮೆಡಿಕಲ್ ಕಾಲೇಜು ಮತ್ತು ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಮನವಿ ಮಾಡಿದರು.
ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ ಶಾಸಕರು ಪುತ್ತೂರಿಗೆ ಮೆಡಿಕಲ್ ಕಾಲೇಜು ಬೇಡಿಕೆಯನ್ನು ನೆನಪಿಸಿದರು. ಬಜೆಟ್ ನಲ್ಲಿ ಈ ಬಾರಿ ಅನುಮೋದನೆಯಾಗಬೇಕು ಮತ್ತು ತನ್ನ ಕ್ಷೇತ್ರದ ಜನರ ಬಹುಕಾಲದ ಬೇಡಿಕೆಯಾದ ಮೆಡಿಕಲ್ ಕಾಲೇಜನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು. ಕಳೆದ ಬಜೆಟ್ ನಲ್ಲಿ ಅನುಮೋದನೆಯಾಗಬಹುದು ಎಂಬ ನಿರೀಕ್ಷೆ ಇತ್ತು ಆದರೆ ಗ್ಯಾರಂಟಿ ಯೋಜನೆಗೆ ಬಜೆಟ್ ನಲ್ಲಿ ಹೆಚ್ಚು ಅನುದಾನ ಇರಿಸಿದ ಕಾರಣ ನಾನು ಹೆಚ್ಚು ಒತ್ತಡ ಹಾಕಿರಲಿಲ್ಲ. ಮೆಡಿಕಲ್ ಕಾಲೇಜು ಆಗಬೇಕುಎಂಬುದು ನನ್ನ ಮತ್ತು ನನ್ನ ಕ್ಷೇತ್ರದ ಜನರ ಕನಸಾಗಿದೆ ಅದನ್ನು ನನಸುಮಾಡಿಕೊಡಬೇಕು ಎಂದು ಸಿ ಎಂ ಅವರಲ್ಲಿ ಶಾಸಕರು ವಿನಂತಿಸಿದರು.
ಕಾಲೇಜುನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದೆ ಎಂದೂ ಶಾಸಕರು ಸಿಎಂ ಅವರಲ್ಲಿ ತಿಳಿಸಿದರು.
ಹೆಚ್ಚುಅನುದಾನ ಕೊಡಿ
ನನ್ನ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ದಿ ಕೆಲಸಗಳು ಆಗಬೇಕಿದೆ. ರಸ್ತೆ, ಸರಕಾರಿ ಕಟ್ಟಡಗಳು, ಶಾಲಾ ,ಕಾಲೇಜು ಕಟ್ಟಡಗಳು, ತಡೆಗೋಡೆ ,ಬೃಹತ್ ಅಣೆಕಟ್ಟುಗಳು ಸೇರಿದಂತೆ ಕ್ಷೇತ್ರದ ಜನರಿಂದ ದಿನದಿಂದ ದಿನಕ್ಕೆ ಕಾಮಗಾರಿಯ ಬೇಡಿಕೆಗಳು ಬರುತ್ತಿದ್ದು ಈಗ ಬರುತ್ತಿರುವ ಅನುದಾನವನ್ನು ಹೆಚ್ಚು ಪ್ರಮಾಣದಲ್ಲಿ ಹಂಚಿಕೆ ಮಾಡಲು ಸಾಧ್ಯವಾಗುತ್ತಿಲ್ಲ. ಅನೇಕ ವರ್ಷಗಳಿಂದ ಇರುವ ಕೆಲವೊಂದು ಕಾಮಗಾರಿ ಬೇಡಿಕೆಗಳಿಗೆ ಅನುದಾನವನ್ನುನೀಡಬೇಕಿದೆ ಈ ಕಾರಣಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಹೆಚ್ಚು ಅನುದಾನ ನೀಡುವಂತೆ ಶಾಸಕರುಮನವಿ ಸಲ್ಲಿಸಿದರು.
Posted by Vidyamaana on 2023-12-27 14:43:49 |
ಚಿಕ್ಕಬಳ್ಳಾಪುರ: ಶೈಕ್ಷಣಿಕ ಅಧ್ಯಯನ ಪ್ರವಾಸಕ್ಕೆ ತೆರಳಿದ್ದ ವೇಳೆ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿಯೊಬ್ಬರು ತನ್ನ ಮಗ ವಯಸ್ಸಿನ ಅಪ್ರಾಪ್ತ ಬಾಲಕನೊಂದಿಗೆ ಅಸಭ್ಯವಾಗಿ ವರ್ತಿಸಿರುವುದಲ್ಲದೇ ಆತನೊಂದಿಗೆ ರೊಮ್ಯಾಟಿಕ್ ಆಗಿ ವರ್ತಿಸಿ ವಿಡಿಯೋ ಹಾಗೂ ಚಿತ್ರಗಳನ್ನು ತನ್ನ ಮೊಬೈಲ್ನಲ್ಲಿ ಸೆರೆ ಹಿಡಿದಿರುವ ಘಟನೆ ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರಗಮಲ್ಲ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆದಿದೆ.
ಇತ್ತೀಚೆಗೆ ಶಾಲೆಯಿಂದ ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ವೇಳೆ ಶಾಲಾ ಬಾಲಕನೊಂದಿಗೆ ಮುಖ್ಯ ಶಿಕ್ಷಕಿ ಈ ರೀತಿ ವರ್ತಿಸಿದ್ದು, ಇದೀಗ ಆ ಪೋಟೋಗಳು ಸೋರಿಕೆ ಆಗಿ ವಿದ್ಯಾರ್ಥಿ ಪೋಷಕರ ಆಕ್ರೋಶಕ್ಕೆ ಕಾರಣವಾಗಿದೆ.ಶಾಲೆಯ ಮುಖ್ಯ ಶಿಕ್ಷಕಿ ಈ ರೀತಿ ತಾನೊಬ್ಬ ಗುರು ಎಂಬುದನ್ನು ಮರೆತು ಶಾಲೆಯ ವಿದ್ಯಾರ್ಥಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ . ಈ ವೇಳೆ ಬಾಲಕನೊಂದಿಗೆ ವಿವಿಧ ಭಂಗಿಗಳಲ್ಲಿ ಪೋಟೋ ತೆಗೆಸಿಕೊಂಡಿರುವ ಶಿಕ್ಷಕಿ, ವಿದ್ಯಾರ್ಥಿ ಕೂಡ ಶಿಕ್ಷಕಿಯರನ್ನು ಮುದ್ದಾಡಿದ್ದು, ಶಿಕ್ಷಕಿ ಕೂಡ ಬಾಲಕನಿಗೆ ಕಿಸ್ ಕೊಟ್ಟಿರುವ ಫೋಟೋಗಳು ಈಗ ಎಲ್ಲೆಡೆ ವೈರಲ್ ಆಗಿದೆ.ಶಿಕ್ಷಕಿಯ ವರ್ತನೆ ಬಗ್ಗೆ ಪೋಷಕರು ಕಿಡಿಕಾರಿದ್ದಾರೆ.
ಅಲ್ಲದೇ ಬುಧವಾರ ಬೆಳಗ್ಗೆ ಈ ವಿಷಯ ತಿಳಿಯುತ್ತಿದ್ದಂತೆ ವಿದ್ಯಾರ್ಥಿ ಪೋಷಕರು ಕೂಡ ಶಾಲೆ ಬಳಿ ತೆರಳಿ ಶಿಕ್ಷಕಿ ವಿರುದ್ದ ಆಕ್ರೋಶಕ್ಕೆ ವ್ಯಕ್ತಪಡಿಸಿದ್ದಾರೆ. ಇನ್ನೂ ಘಟನೆಯ ಬಗ್ಗೆ ಶಾಲೆ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಗಮನಕ್ಕೆ ತಂದಿದ್ದಾರೆ.
Posted by Vidyamaana on 2024-03-24 13:14:15 |
ಕಾರವಾರ: ಬರೋಬ್ಬರಿ ನಾಲ್ಕೂವರೆ ವರ್ಷಗಳ ಕಾಲ ಯಾರ ಸಂಪರ್ಕಕ್ಕೂ ಬಾರದೆ ಸೈಲೆಂಟ್ ಆಗಿದ್ದ ಉತ್ತರ ಕನ್ನಡ (Uttara Kann
non
a) ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde), ಲೋಕಸಭೆ ಚುನಾವಣೆಗೆ (Lok Sabha Election) ಕೆಲವೇ ತಿಂಗಳು ಬಾಕಿ ಇರುವಂತೆ ಮತ್ತೆ ಆಕ್ಟಿವ್ ಆಗಿದ್ದರು. ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದು ಆರಂಭಿಸಿದ್ದ ಅನಂತಕುಮಾರ್ ಹೆಗಡೆ ಇದೀಗ ಮತ್ತೆ ಯಾರ ಸಂಪರ್ಕಕ್ಕೂ ಸಿಗದೆ ಮನೆ ಸೇರಿದ್ದಾರೆ.ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದ ಅನಂತಕುಮಾರ್ ಹೆಗಡೆ, ವಿವಾದಾತ್ಮಕ ಹೇಳಿಕೆಗಳ ಮೂಲಕ ಕಾರ್ಯಕರ್ತರನ್ನು ಸೆಳೆಯುವ ಪ್ರಯತ್ನಕ್ಕೆ ಕೈ ಹಾಕಿದ್ದರು. ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಕರ್ನಾಟಕದಿಂದ ಯಾರ ಹೆಸರು ಕೂಡ ಘೋಷಣೆ ಆಗಿರಲಿಲ್ಲ. ಯಾವಾಗ ಬಿಜೆಪಿ 2ನೇ ಪಟ್ಟಿ ಬಿಡುಗಡೆಯಾಯ್ತೋ ಅಂದಿನಿಂದ ಅನಂತಕುಮಾರ್ ಹೆಗಡೆ ಸೈಲೆಂಟ್ ಆಗಿದ್ದಾರೆ.ಈ ಬಾರಿ ಅನಂತಕುಮಾರ ಹೆಗಡೆ ಅವರಿಗೆ ಟಿಕೆಟ್ ಕೈತಪ್ಪಲಿದೆ ಎಂದು ಹೇಳಲಾಗುತ್ತಿದೆ. ಹೀಗಿದ್ದರೂ ನಾಲ್ಕೂವರೆ ವರ್ಷಗಳ ನಂತರ ಸಾರ್ವಜನಿಕ ರಂಗಕ್ಕೆ ಎಂಟ್ರಿಕೊಟ್ಟ ಹೆಗಡೆ ಟಿಕೆಟ್ ಸಿಗುವ ವಿಶ್ವಾಸದಲ್ಲಿದ್ದರು. ಇದೇ ವಿಶ್ವಾಸದಲ್ಲಿ ಕಾರ್ಯಕರ್ತರ ಸಭೆಗಳನ್ನು ನಿರಂತರವಾಗಿ ನಡೆಸುತ್ತಾ ಬಂದಿದ್ದರು. ಆದರೆ, ಎರಡನೇ ಪಟ್ಟಿಯಲ್ಲಿ ತನ್ನ ಹೆಸರು ಘೋಷಣೆ ಆಗದಿರುವುದನ್ನು ಕಂಡ ಹೆಗಡೆ, ಟಿಕೆಟ್ ಕೈ ತಪ್ಪುವ ಸಾಧ್ಯತೆ ಹಿನ್ನೆಲೆ ಮತ್ತೆ ಯಾರ ಕೈಗೂ ಸಿಗದೆ ಶಿರಸಿ ಪಟ್ಟಣದಲ್ಲಿರುವ ತನ್ನ ನಿವಾಸದಲ್ಲಿದಲ್ಲೇ ಕುಳಿತುಕೊಂಡಿದ್ದಾರೆ.ಶಿರಸಿಯಲ್ಲಿದ್ದರೂ ಯಾವೊಬ್ಬ ಕಾರ್ಯಕರ್ತನನ್ನೂ ಹೆಗಡೆ ಭೇಟಿ ಆಗುತ್ತಿಲ್ಲ. ಮತ್ತೊಮ್ಮೆ ಮೋದಿ ಘೋಷಣೆಯಡಿ ಪ್ರಚಾರ ಆರಂಭಿಸಿದ್ದ ಹೆಗಡೆ, 2ನೇ ಪಟ್ಟಿ ಬಿಡುಗಡೆ ಬಳಿಕ ಒಂದೇ ಒಂದು ಸಭೆಯನ್ನೂ ಮಾಡಿಲ್ಲ.ಯಾರೇ ನಿಂತ್ರೂ ಎಲ್ರೂ ಒಗ್ಗಟ್ಟಾಗಿ ಮತ್ತೆ ಮೋದಿಯನ್ನ ಪ್ರಧಾನಿ ಮಾಡಬೇಕು. ಈಗ ನಾವು ಯಾವುದೇ ಕಾರಣಕ್ಕೂ ವಿರಮಿಸಬಾರದೆಂದು ಕಾರ್ಯಕರ್ತರಿಗೆ ಹೇಳಿದ್ದ ಅನಂತಕುಮಾರ್ ಹೆಗಡೆಯೇ ಇದೀಗ ಕಾರ್ಯಕರ್ತರ ಸಂಪರ್ಕಕ್ಕೆ ಸಿಗದೆ ಮನೆಯಲ್ಲೇ ವಿರಮಿಸಿದ್ದಾರೆ.
Posted by Vidyamaana on 2023-08-29 09:47:48 |
ಬಂಟ್ವಾಳ: ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದ ಸಂದರ್ಭದಲ್ಲಿ ಈ ದೃಶ್ಯವನ್ನು ಅಪರಿಚಿತ ವ್ಯಕ್ತಿಯೊಬ್ಬ ಮೊಬೈಲ್ ನಲ್ಲಿ ಚಿತ್ರೀಕರಣ ಮಾಡಿ ಬಳಿಕ ಅಲ್ಲಿಂದ ಎಸ್ಕೇಪ್ ಆಗಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿನ ಹಂಚಿನ ಮನೆಯೊಳಗೆ ಬಚ್ಚಲು ಕೋಣೆಯಲ್ಲಿ ರಾತ್ರಿ ವೇಳೆ ಯುವತಿಯೋರ್ವಳು ಸ್ನಾನ ಮಾಡುತ್ತಿರುವ ವೇಳೆ ಅಪರಿಚಿತ ವ್ಯಕ್ತಿಯೋರ್ವ ಗೋಡೆಯ ಕಿಂಡಿ ನಡುವಿನಿಂದ ಮೊಬೈಲ್ ಮೂಲಕ ಸ್ನಾನದ ದೃಶ್ಯಗಳನ್ನು ರೆಕಾರ್ಡ್ ಮಾಡುತ್ತಿದ್ದ.
ಇದನ್ನು ಗಮನಿಸಿದ ಯುವತಿ ಜೋರಾಗಿ ಬೊಬ್ಬೆ ಹಾಕಿದ್ದು, ತಕ್ಷಣವೇ ಅಪರಿಚಿತ ಆರೋಪಿ ಅಲ್ಲಿಂದ ಕಾಲ್ಕಿತ್ತಿದ್ದಾನೆ.
ಯುವತಿಯ ಬೊಬ್ಬೆ ಕೇಳಿ ಇವಳ ತಾಯಿ ಹಾಗೂ ನೆರೆಮನೆಯವರು ಓಡಿ ಬಂದು ವಿಷಯ ಕೇಳಿ, ಓಡಿಹೋದ ವ್ಯಕ್ತಿಯ ಹುಡುಕಾಟ ನಡೆಸಿದ್ದಾರೆ ಆದರೆ, ಅಂದು ಆತನ ಪತ್ತೆಯಾಗಿರಲಿಲ್ಲ.
ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಆರೋಪಿ ವಶಕ್ಕೆ
ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿದ ಆರೋಪಿ ಜಗದೀಪ್ ಆಚಾರ್ಯ ಎಂಬಾತನನ್ನು ಬಂಟ್ವಾಳ ನಗರ ಪೋಲೀಸ್ ಠಾಣೆಯ ಎಸ್.ಐ. ರಾಮಕೃಷ್ಣ ನೇತೃತ್ವದ ತಂಡ ವಶಕ್ಕೆ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಗ್ರಾರ್ ನಿವಾಸಿಯಾಗಿರುವ ಆರೋಪಿಯನ್ನುಇದೀಗ ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.
ಘಟನೆ ಕುರಿತು ಪ್ರಕರಣ ದಾಖಲಾದ ಬೆನ್ನಲ್ಲೆ ಪೋಲೀಸರು ಆರೋಪಿಯ ಪತ್ತೆಗೆ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಬಳಿಕ, ಸಂಶಯದ ಮೇಲೆ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಈತ ಸತ್ಯ ಬಾಯಿಬಿಟ್ಟಿದ್ದಾನೆ ಎಂಬುದು ತಿಳಿದು ಬಂದಿದೆ.
Posted by Vidyamaana on 2023-04-26 09:59:06 |
ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಹಿಂದುತ್ವದ ರಕ್ಷಣೆ ಜೊತೆಗೆ ಭ್ರಷ್ಟಾಚಾರ ರಹಿತ, ಜನಸ್ನೇಹಿ ಅಡಳಿತ ನೀಡುವ ಭರವಸೆಯ ಜೊತೆಗೆ 31 ವಿಷಯಾಧಾರಿತ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು.
ದರ್ಬೆಯ ಸುಭದ್ರ ಕಲ್ಯಾಣ ಮಂಟಪದ ಬಳಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು.
ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಸುನಿಲ್ ಬೋರ್ಕರ್, ಭಾಸ್ಕರ್ ಆಚಾರ್ಯ ಇಂದಾರು, , ಸೇಡಿಯಾಪು ಜನಾರ್ದನ ಭಟ್, ಡಾ.ಗಣೇಶ್ ಪ್ರಸಾದ್ ಮುದ್ರಾಜೆ, ಪ್ರಸನ್ನ ಕುಮಾರ್ ಮಾರ್ತಾ, ಸ್ನೇಹ ಸಿಲ್ಕ್ ನ ಸತೀಶ್ ಕುಮಾರ್, ನಿವೃತ್ತ ತಹಸೀಲ್ದಾರ್ ಮೋನಪ್ಪ ಪುರುಷ, ನಿವೃತ್ತ ಸೇನಾನಿ ಚಂದಪ್ಪ ಮೂಲ್ಯ, ಕುಶಾಲಪ್ಪ ಗೌಡ ಬಳಕ್ಕ, ರಾಜಶೇಖರ್ ಉದ್ಯಮಿ ಬನ್ನೂರು, ನಗರ ಯುವ ಮೋರ್ಚಾದ ಮಾಜಿ ಅಧ್ಯಕ್ಷ ಪ್ರವೀಣ್ ಭಂಡಾರಿ, ಮರದಮುತ್ತು ಕೌಡಿಚ್ಚಾರ್, ಪಡ್ನೂರು ಶ್ರೀರಾಮ ಯುವಕ ಮಂಡಲದ ಲೋಕೇಶ್, ಅರುಣ್ ಇಂಡಸ್ಟ್ರೀಸ್ ಅರುಣ್ ಕುಮಾರ್ ರೈ ಡಿಂಬ್ರಿ, ಸಾಯಿಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.
ಪ್ರಣಾಳಿಕೆ ಸಿದ್ಧಪಡಿಸುವಲ್ಲಿ ಸತೀಶ್ ರೈ ನೀರ್ಪಾಡಿ, ಪ್ರಮೋದ್ ರೈ, ಮನ್ನಥ ಶೆಟ್ಟಿ ಸಹಕರಿಸಿದರು.
ಪ್ರಣಾಳಿಕೆಯಲ್ಲಿ ಏನಿದೇ..!!??
ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಕಛೇರಿಗಳಲ್ಲಿ ಭ್ರಷ್ಟಾಚಾರ/ ಲಂಚ ರಹಿತ ಜನಸ್ನೇಹಿ ಆಡಳಿತ ವ್ಯವಸ್ಥೆ ಜನ ವಿರೋಧಿ ಕಾನೂನುಗಳ ರದ್ದತಿಗೆ ಕ್ರಮ
ಪುತ್ತೂರನ್ನು ಜಿಲ್ಲಾ ಕೇಂದ್ರವಾಗಿಸಲು ಹಾಗೂ ಸಂಬಂಧಿಸಿದ ಎಲ್ಲಾ ವ್ಯವಸ್ಥೆಗಳ ಸ್ಥಳಾಂತರಕ್ಕೆ ಕ್ರಮ
ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಹಾಗೂ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಎಲ್ಲಾ ಕ್ರಮ.
ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲು ಕ್ರಮ
ವಿಟ್ಲವನ್ನು ತಾಲೂಕು ಕೇಂದ್ರ ಮಾಡುವ ಸಂಕಲ್ಪ – ಶಾಸಕರ ಕಛೇರಿ ಪ್ರಾರಂಭ ಹಾಗೂ ವಾರದಲ್ಲಿ ಎರಡು ದಿನ ಈ ಕಛೇರಿಯಿಂದ ಕಾರ್ಯ ನಿರ್ವಹಣೆ.
400KV ಉಡುಪಿ – ಕಾಸರಗೋಡು ವಿದ್ಯುತ್ ಮಾರ್ಗವು ರೈತರ ಜಮೀನಿನಲ್ಲಿ ಹಾದು ಹೋಗದಂತೆ ಕ್ರಮ.
ಅಡಿಕೆ, ತೆಂಗು, ರಬ್ಬರ್, ಕೋಕೋ ಮುಂತಾದ ಬೆಳೆಗಳ ಮೌಲ್ಯವರ್ಧನೆ, ರೋಗ ನಿರ್ವಹಣೆ, ಸಂಶೋಧನೆಗೆ ಕ್ರಮ
ವ್ಯವಸ್ಥಿತವಾಗಿ ಕ್ಷೇತ್ರದಾದ್ಯಂತ ಅಣೆಕಟ್ಟುಗಳ ನಿರ್ಮಾಣ, ನಿರ್ವಹಣೆಗೆ ಕ್ರಮ
11E ನಕ್ಷೆ ಶುಲ್ಕ ಕಡಿತ, ಅಕ್ರಮ ಸಕ್ರಮ ಪ್ಲಾಟಿಂಗ್ ಸಮಸ್ಯೆಗೆ ಪರಿಹಾರ, ಅಕ್ರಮ ಸಕ್ರಮ, ಕುಮ್ಕಿ ಹಕ್ಕು 94c, 94CC ಮಂಜೂರಾತಿಗೆ ಕ್ರಮ, ಭೂ ಪರಿವರ್ತನೆ ನಿಯಮ ಸರಳೀಕರಣ ಮತ್ತು ಶೀಘ್ರ ಅನುಮತಿಗೆ ವ್ಯವಸ್ಥೆ
ನಗರ ಪ್ರದೇಶದಲ್ಲಿ ಕಟ್ ಕನ್ವರ್ಷನ್ ಸಮಸ್ಯೆ ಪರಿಹಾರ, ನಿವೇಶನ ರಹಿತರಿಗೆ ಅಪಾರ್ಟ್ಮೆಂಟ್ ನಿರ್ಮಾಣಕ್ಕೆ ಆದ್ಯತೆ ಹಾಗೂ ಖಾಸಗಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಟ್ರಾಫಿಕ್ ಸಮಸ್ಯೆಗೆ ಪರಿಹಾರ
ಪ್ರಾಕೃತಿಕ ಸಮತೋಲನಕ್ಕೆ ಪರಿಸರ ಸ್ನೇಹಿ ಸಸ್ಯಗಳ ನಾಟಿ ಬಗ್ಗೆ ಕ್ರಮ
ನಗರ ಪ್ರದೇಶಕ್ಕೆ ಸೂಕ್ತ ಒಳಚರಂಡಿ ವ್ಯವಸ್ಥೆ
ಕ್ಷೇತ್ರದಾದ್ಯಂತ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಕ್ರಮ
ತುಳುನಾಡಿನ ಕ್ರೀಡೆ, ಕಲೆ, ಸಂಸ್ಕೃತಿ ಪ್ರೋತ್ಸಾಹಕ್ಕೆ ಪ್ರತ್ಯೇಕ ಅಕಾಡೆಮಿ ಸ್ಥಾಪನೆ. ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸಲು ಪ್ರಯತ್ನ
ಉಚಿತ ಶಿಕ್ಷಣ ಒದಗಿಸುವ ಸರಕಾರಿ ಶಾಲೆಗಳ ಮತ್ತು ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಕ್ರಮ
ಕ್ಷೇತ್ರದ ವ್ಯಾಪ್ತಿಯಲ್ಲಿ ಐಟಿ ಹಬ್ ಸ್ಥಾಪಿಸಿ, ತಾಲೂಕು ಕೇಂದ್ರದಲ್ಲಿ ಉದ್ಯೋಗ ಮೇಳ ಯೋಜನೆಗೆ ಕ್ರಮ
ಹೋಬಳಿಗೊಂದು ಕೈಗಾರಿಕಾ ವಲಯ ರಚಿಸಿ, ವಿವಿಧ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ.
ದೇಶೀಯ ಗೋ ತಳಿಗಳ ಸಂರಕ್ಷಣೆ, ಗೋಶಾಲೆಗಳ ಸ್ಥಾಪನೆ, ಪಶುಪಾಲನೆಗೆ ಪ್ರೋತ್ಸಾಹ.
ಎಂಡೋಸಲ್ಫಾನ್ ಸಂತ್ರಸ್ತರ ಆರೈಕೆ, ಕಲ್ಯಾಣಕ್ಕೆ ಸೂಕ್ತ ಯೋಜನೆ.
.ರಿಕ್ಷಾ/ಟ್ಯಾಕ್ಸಿ ವಾಹನಗಳ ಚಾಲಕ ಮಾಲಕರ ಸಮಸ್ಯೆಗಳಿಗೆ ಪರಿಹಾರ.
ಪುತ್ತೂರು ತಾಲೂಕು ಕೇಂದ್ರದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ.
ಕೋಟಿ ಚೆನ್ನಯ ಥೀಮ್ ಪಾರ್ಕ್ ನಿರ್ಮಾಣ.
ವಿಟ್ಲ ಉಪ್ಪಿನಂಗಡಿಯಲ್ಲಿ ಅಗ್ನಿಶಾಮಕ ಠಾಣೆ ರಚನೆಗೆ ಕ್ರಮ.
ಸುಸಜ್ಜಿತ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಾಣ ಹಾಗೂ ಕ್ರೀಡಾಳುಗಳ ತರಬೇತಿಗೆ ಸಮರ್ಪಕ ವ್ಯವಸ್ಥೆ.
ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸೂಕ್ತ ವ್ಯವಸ್ಥೆ.
ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಡಿಸ್ಥಳ ಮಂಜೂರಾತಿ, ಅಭಿವೃದ್ಧಿಗೆ ಸೂಕ್ತ ಕ್ರಮ.
ದಿ. ಸೌಮ್ಯಭಟ್ ಸ್ಮರಣಾರ್ಥವಾಗಿ ಯುವತಿಯರಿಗೆ ಸ್ವ- ಉದ್ಯೋಗ ತರಬೇತಿ ಕೇಂದ್ರ ಸ್ಥಾಪನೆ.
ದಿ. ಕಾರ್ತಿಕ್ ಮೇರ್ಲ ಸ್ಮರಣಾರ್ಥವಾಗಿ ಸರಕಾರಿ ಐಟಿಐ ಸ್ಥಾಪನೆ.
ದಿ. ಪ್ರವೀಣ್ ನೆಟ್ಟಾರು ಸ್ಮರಣಾರ್ಥವಾಗಿ ಯುವಕರಿಗೆ ಸ್ವ- ಉದ್ಯೋಗ ತರಬೇತಿ ಕೇಂದ್ರ ಸ್ಥಾಪನೆ ಮತ್ತು ಸೈನ್ಯಕ್ಕೆ ಸೇರಲು ಬೇಕಾದ ತರಬೇತಿಗೆ ವ್ಯವಸ್ಥೆ.
ಸರಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ, ಶಿಕ್ಷಣ ಇಲಾಖೆಯಲ್ಲಿ ಅತಿಥಿ ಉಪನ್ಯಾಸಕರು, ಗ್ರಾಮ ಸಹಾಯಕರ ಖಾಯಾಮತಿ ಬಗ್ಗೆ ಕ್ರಮ.
ಯುವಕರ, ಯುವತಿಯರ, ಮಹಿಳೆಯರ, ಶ್ರಮಜೀವಿಗಳ, ರೈತರ, ಹಿರಿಯರ, ಎಲ್ಲಾ ಸಮಸ್ಯೆಗಳಿಗೆ ಸಹಾಯವಾಣಿ (Help Line) ಮೂಲಕ ದಿನದ 24 ಗಂಟೆಯೂ ಸ್ಪಂದನೆ.
Posted by Vidyamaana on 2023-10-25 06:59:17 |
ಮೈಸೂರು: ವಿಜಯದಶಮಿಯ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಯನ್ನು ಲಕ್ಷಾಂತರ ಜನರು ವೀಕ್ಷಿಸಿದರು. ನಾಡದೇವತೆ ಚಾಮುಂಡೇಶ್ವರಿ ವಿರಾಜಮಾನಳಾಗಿದ್ದ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಅರಮನೆ ಆವರಣದಿಂದ ಬನ್ನಿಮಂಟಪ ದವರೆಗೂ ಅಭಿಮನ್ಯು ಆನೆ ಯಶಸ್ವಿಯಾಗಿ ಹೊತ್ತು ಸಾಗಿತು. ಇತರ 14 ಗಜಪಡೆಗಳು ಅಭಿಮನ್ಯುವಿಗೆ ಸಾಥ್ ನೀಡಿದವು. ಕರ್ನಾಟಕದ ಅಶ್ವದಳ ಪೊಲೀಸರ ನೇತೃತ್ವದಲ್ಲಿ ಮೆರವಣಿಗೆ ನಡೆಯಿತು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ. ಮಹದೇವಪ್ಪ,ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಚಾಮುಂಡೇಶ್ವರಿ ದೇವಿಗೆ ಪೂಜೆ ಸಲ್ಲಿಸಿದರು. ಇದಕ್ಕೂ ಮುನ್ನ ಮುಖ್ಯಮಂತ್ರಿಗಳು ನಂದಿಧ್ವಜ ಪೂಜೆಯಲ್ಲಿ ಪಾಲ್ಗೊಳ್ಳುವುದರೊಂದಿಗೆ ಕಲಾತಂಡಗಳು, ಸ್ತಬ್ಧಚಿತ್ರಗಳ ಮರವಣಿಗೆ ಆರಂಭವಾಯಿತು.
ಅರಮನೆ ಮುಂಭಾಗದಿಂದ ನಡೆದ ಮೆರವಣಿಗೆಯಲ್ಲಿ ರಾಜ್ಯದ 31 ಜಿಲ್ಲೆಗಳು ಮತ್ತು ವಿವಿಧ ಪ್ರಮುಖ ಸರ್ಕಾರಿ ಇಲಾಖೆಗಳ ಭವ್ಯವಾದ ಸ್ತಬ್ಧಚಿತ್ರಗಳು ಆಕರ್ಷಣೀಯವಾಗಿದ್ದವು. ಬಳ್ಳಾರಿ ಜಿಲ್ಲೆ ಹಕ್ಕಿ-ಪಿಕ್ಕಿ ಬುಡಕಟ್ಟು ಜನಾಂಗದ ಸಾಂಸ್ಕೃತಿಕ ಅಂಶಗಳನ್ನು ಪ್ರದರ್ಶಿಸಿದರೆ, ಬೆಳಗಾವಿ ಜಿಲ್ಲೆ ಐತಿಹಾಸಿಕ ಮಹಾಲಿಂಗೇಶ್ವರ ದೇವಸ್ಥಾನದ ಮಾದರಿಯನ್ನು ಪ್ರದರ್ಶಿಸಿತು.
ಬೆಂಗಳೂರು ನಗರ ಜಿಲ್ಲೆ ಇಸ್ರೋದ ಚಂದ್ರಯಾನ-3 ಸಾಧನೆಯನ್ನು ಪ್ರದರ್ಶಿಸಿತು. ಕೋಲಾರ ಗಾರುಡಿ ನೃತ್ಯವನ್ನು ಪ್ರಸ್ತುತಪಡಿಸಿದರೆ, ಬೀದರ್ ವಿಶಿಷ್ಟ ವನ್ಯಜೀವಿಗಳ ಮೇಲೆ ಕೇಂದ್ರೀಕರಿಸಿತು ಮತ್ತು ಚಾಮರಾಜನಗರ ಪ್ರಸಿದ್ಧ ಮಲೆ ಮಹದೇಶ್ವರ ದೇವಸ್ಥಾನದ ಮಾದರಿಯನ್ನು ಪ್ರದರ್ಶಿಸಿತು.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಉತ್ಪತ್ತಿಯಾಗುವ ವೈವಿಧ್ಯಮಯ ಸಸ್ಯ ಮತ್ತು ಪ್ರಾಣಿಗಳ ಜೊತೆಗೆ ಸುಗಂಧಭರಿತ ಕಾಫಿಯ ಪ್ರದರ್ಶನವನ್ನು ರಚಿಸಿತು. ಈ 10 ದಿನಗಳಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆಗೆ ಕುಸ್ತಿ ಕೂಡ ಪ್ರಮುಖ ಆಕರ್ಷಣೆಗಳಲ್ಲಿ ಒಂದಾಗಿದೆ. ಮೆರವಣಿಗೆಯು ಅರಮನೆಯಿಂದ ಬನ್ನಿಮಂಟಪಕ್ಕೆ ತಲುಪುತ್ತಿದ್ದಂತೆ ಉತ್ಸವ ಮುಕ್ತಾಯವಾಯಿತು.
ದಸರಾ ಮಹೋತ್ಸವದ ಗ್ರ್ಯಾಂಡ್ ಫಿನಾಲೆ ವೀಕ್ಷಿಸಲು ಸಾವಿರಾರು ಜನರು ನೆರೆದಿದ್ದರು. ಪ್ರಪಂಚದಾದ್ಯಂತದ ಜನರು ಈ ಭವ್ಯವಾದ ದೃಶ್ಯಗಳನ್ನು ವೀಕ್ಷಿಸಲು ಮೈಸೂರಿಗೆ ಭೇಟಿ ನೀಡಿದರು. ಚಾಮುಂಡೇಶ್ವರಿ ದೇವಿಯು ಮಹಿಷಾಸುರನನ್ನು ಕೊಂದಿದ್ದರಿಂದ ಕೆಟ್ಟದ್ದರ ಮೇಲೆ ಒಳ್ಳೆಯದು ವಿಜಯ ಎಂಬುದರ ಸಂಕೇತವಾಗಿ ವಿಜಯದಶಮಿ ಅಥವಾ ದಸರಾವನ್ನು ಆಚರಿಸಲಾಗುತ್ತದೆ.
Posted by Vidyamaana on 2023-04-13 03:58:39 |
ಸುಳ್ಯ; ಇಲ್ಲಿನ ಅಜ್ಜಾವರ ಗ್ರಾಮದ ತುದಿಯಡ್ಕ ಎಂಬಲ್ಲಿ ತೋಟವೊಂದರ ಕೆರೆಗೆ ನಿನ್ನೆ ರಾತ್ರಿ ನಾಲ್ಕು ಕಾಡಾನೆಗಳು ಬಿದ್ದಿವೆ. ಕೆರೆಯಿಂದ ಮೇಲೆ ಬರಲಾರದೇ ಕಾಡಾನೆಗಳು ಪರದಾಡುತ್ತಿವೆ.
ಇಲ್ಲಿನ ತುದಿಯಡ್ಕ ಎಂಬಲ್ಲಿನ ಸಂತೋಷ್ ಎಂಬವರ ತೋಟದ ಕೆರೆಗೆ ಬಿದ್ದ ಎರಡು ದೊಡ್ಡ ಮತ್ತೆರಡು ಮರಿಯಾನೆಗಳು ಮೇಲೆ ಬರಲಾಗದೇ ಪರದಾಡುತ್ತಿವೆ.
ಇತ್ತ ಆನೆಗಳನ್ನು ಕೆರೆಯಿಂದ ಕಾಡಾನೆಗಳನ್ನು ಮೇಲಕ್ಕೆತ್ತಲು, ಅರಣ್ಯ ಇಲಾಖಾ ಸಿಬ್ಬಂದಿ ಶ್ರಮಿಸುತ್ತಿದ್ದು, ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.