Posted by vidyamaana on 2024-07-03 10:25:40 |
ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.
ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.
Posted by Vidyamaana on 2024-05-03 08:25:04 |
ಬೆಂಗಳೂರು : ಹಾಸನ ರಾಜಕಾರಣಕ್ಕೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಕುಟುಂಬದ ವಿರುದ್ಧ ತೊಡೆತಟ್ಟಿದ್ದ ಹಾಸನ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕ ಪ್ರೀತಮ್ ಗೌಡ ಅವರು, ಪ್ರಜ್ವಲ್ ರೇವಣ್ಣ ಪ್ರಕರಣ ದೇಶಾದ್ಯಂತ ತೀವ್ರ ಬಿರುಗಾಳಿ ಎಬ್ಬಿಸಿದರೂ ಸಾರ್ವಜನಿಕವಾಗಿ ಕಾಣಿಸಿಕೊಳ್ಳದಿರುವುದು ಚರ್ಚೆಗೆ ಗ್ರಾಸವಾಗಿದೆ.ತಮ್ಮ ವಾಟ್ಸಾಪ್ ನಂಬರ್ನಲ್ಲಿ ಆಗಾಗ ಈ ವಿಚಾರಕ್ಕೆ ಸಂಬಂಧಪಟ್ಟಂತೆ ಸ್ಟೇಟಸ್ ಅಪ್ಡೇಟ್ ಮಾಡುತ್ತಿರುವುದನ್ನು ಬಿಟ್ಟರೆ, ಮಾಧ್ಯಮಗಳಿಗೆ ಹೇಳಿಕೆಯನ್ನೂ ಕೊಟ್ಟಿಲ್ಲ. ಪ್ರೀತಮ್ ಇದ್ದಕ್ಕಿದ್ದಂತೆ ತಟಸ್ಥರಾದಂತೆ ವರ್ತಿಸುತ್ತಿರುವುದು ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
Posted by Vidyamaana on 2023-12-28 14:08:13 |
ನವದೆಹಲಿ : ನಕಲಿ ಲೋನ್ ಅಪ್ಲಿಕೇಶನ್ಗಳು ಮತ್ತು ಬೆಟ್ಟಿಂಗ್ ಅಪ್ಲಿಕೇಶನ್ಗಳ ವಿರುದ್ಧ ಸರ್ಕಾರ ದೊಡ್ಡ ನಿರ್ಧಾರವನ್ನು ತೆಗೆದುಕೊಂಡಿದ್ದು, ಈ ಆಯಪ್ಗಳನ್ನ ನಿಷೇಧಿಸಲಾಗುತ್ತಿದೆ. ಮಂಗಳವಾರ, ಸಚಿವಾಲಯವು ಅಕ್ರಮ ಸಾಲ ಅಪ್ಲಿಕೇಶನ್ಗಳು ಮತ್ತು ಬೆಟ್ಟಿಂಗ್ ಅಪ್ಲಿಕೇಶನ್ಗಳನ್ನ ತೆಗೆದುಹಾಕಲು ಸೂಚನೆಗಳನ್ನ ನೀಡಿದೆ.ನಕಲಿ ಸಾಲ ಅಪ್ಲಿಕೇಶನ್ಗಳ ಜಾಹೀರಾತುಗಳನ್ನ ತಡೆಗಟ್ಟಲು ನಾವು ಕೆಲಸ ಮಾಡುತ್ತಿದ್ದೇವೆ ಎಂದು ಕೇಂದ್ರ ಐಟಿ ಸಚಿವ ರಾಜೀವ್ ಚಂದ್ರಶೇಖರ್ ಹೇಳಿದ್ದಾರೆ. ಅನೇಕ ಪ್ಲಾಟ್ ಫಾರ್ಮ್ಗಳಲ್ಲಿ ಇಂತಹ ನಕಲಿ ಸಾಲ ಅಪ್ಲಿಕೇಶನ್ಗಳ ಜಾಹೀರಾತುಗಳಿವೆ.
ಕೆವೈಸಿ ಪ್ರಕ್ರಿಯೆಯನ್ನು ಬ್ಯಾಂಕುಗಳಿಗೆ ಹೆಚ್ಚು ಸಮಗ್ರಗೊಳಿಸುವಂತೆ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯವು RBI ಒತ್ತಾಯಿಸಿದೆ. ಈ ಪ್ರಸ್ತಾವಿತ KYC ಪ್ರಕ್ರಿಯೆಗೆ ನೋ ಯುವರ್ ಡಿಜಿಟಲ್ ಫೈನಾನ್ಸ್ ಆಯಪ್ (KYDFA) ಎಂದು ಹೆಸರಿಸಲಾಗಿದೆ.
ಇತ್ತೀಚಿನ ದಿನಗಳಲ್ಲಿ, ನಕಲಿ ಸಾಲ ಅಪ್ಲಿಕೇಶನ್ಗಳ ಜಾಲವು ಸಾಕಷ್ಟು ಹರಡಿದೆ. ಇಂತಹ ಆಯಪ್ಗಳಿಗೆ ಬಲಿಯಾಗುವ ಜನರು ಸಾಲದ ಸುಳಿಯಲ್ಲಿ ಸಿಲುಕುವುದು ಮಾತ್ರವಲ್ಲ, ಅನೇಕ ಸಂದರ್ಭಗಳಲ್ಲಿ ಸಂತ್ರಸ್ತರು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದಾರೆ. ಈ ವಿಷಯವು ದೀರ್ಘಕಾಲದಿಂದ ಚರ್ಚೆಯಲ್ಲಿದೆ ಮತ್ತುಇಲ್ಲಿಯವರೆಗೆ ಸರ್ಕಾರವು ಅಂತಹ ಎಲ್ಲಾ ಅಪ್ಲಿಕೇಶನ್ಗಳನ್ನು ನಿಷೇಧಿಸಿದೆ.
ಆದಾಗ್ಯೂ, ಈ ಅಪ್ಲಿಕೇಶನ್ಗಳು ಒಂದಲ್ಲ ಒಂದು ರೂಪದಲ್ಲಿ ಹೊಸ ಹೆಸರಿನೊಂದಿಗೆ ಹಿಂತಿರುಗುತ್ತವೆ. ಅಂತಹ ಅಪ್ಲಿಕೇಶನ್ಗಳಲ್ಲಿ, ಮೊದಲನೆಯದಾಗಿ, ಗ್ರಾಹಕರಿಗೆ ಒಂದು ಕ್ಲಿಕ್ ಮತ್ತು ದಾಖಲೆಗಳಿಲ್ಲದೆ ಸಾಲವನ್ನ ನೀಡಲಾಗುತ್ತದೆ. ಅನೇಕ ಜನರು ಈ ರೀತಿಯ ಸಾಲದ ಬಲೆಗೆ ಬೀಳುತ್ತಾರೆ, ಆದರೆ ಈ ಲೋನ್ ಅಪ್ಲಿಕೇಶನ್ಗಳು ಸ್ಪೈವೇರ್ನಂತೆ ಕಾರ್ಯನಿರ್ವಹಿಸುತ್ತವೆ.
ಜನರು ಹೇಗೆ ಸಿಕ್ಕಿಹಾಕಿಕೊಳ್ಳುತ್ತಾರೆ.?
ಈ ಅಪ್ಲಿಕೇಶನ್ಗಳನ್ನು ಡೌನ್ಲೋಡ್ ಮಾಡಿದ ತಕ್ಷಣ, ಸಾಲ ನೀಡುಗರು ಬಳಕೆದಾರರ ಎಲ್ಲಾ ಫೋಟೋಗಳು ಮತ್ತು ಸಂಪರ್ಕ ವಿವರಗಳಿಗೆ ಪ್ರವೇಶವನ್ನ ಪಡೆಯುತ್ತಾರೆ. ನಂತರ ಅವರ ನಿಜವಾದ ಆಟವು ಸಾಲ ವಸೂಲಾತಿ ಹೆಸರಿನಲ್ಲಿ ಪ್ರಾರಂಭವಾಗುತ್ತದೆ. ಈ ನಕಲಿ ಅಪ್ಲಿಕೇಶನ್ಗಳು ಸಾಧ್ಯವಾದಷ್ಟು ಬೇಗ ಸಾಲವನ್ನು ಪಾವತಿಸುವಂತೆ ಸಂತ್ರಸ್ತರ ಮೇಲೆ ನಿರಂತರವಾಗಿ ಒತ್ತಡಹೇರುತ್ತವೆ. ಅನೇಕ ಬಾರಿ ಅವರ ಫೋಟೋಗಳನ್ನು ಮಾರ್ಫಿಂಗ್ ಮಾಡಲಾಗುತ್ತದೆ ಮತ್ತು ವೈರಲ್ ಮಾಡುವುದಾಗಿ ಬೆದರಿಕೆ ಹಾಕಲಾಗುತ್ತದೆ.
Posted by Vidyamaana on 2023-06-15 15:59:55 |
ಪುತ್ತೂರು: ಪುತ್ತೂರು ನವತೇಜ ಟ್ರಸ್ಟ್, ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಹಾಗೂ ಪುತ್ತೂರು ಜೆಸಿಐ ಸಂಯುಕ್ತ ಆಶ್ರಯದಲ್ಲಿ6ನೇ “ಹಲಸು ಮತ್ತು ಹಣ್ಣುಗಳ ಮೇಳ-2023” ಜೂ.17 ಹಾಗೂ 18 ರಂದು ಪುತ್ತೂರು ಬೈಪಾಸ್ ರಸ್ತೆಯಲ್ಲಿರುವ ಜೈನ ಭವನದಲ್ಲಿ ನಡೆಯಲಿದೆ ಎಂದು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತಪ್ರಸಾದ್ ನೈತ್ತಡ್ಕ ತಿಳಿಸಿದ್ದಾರೆ.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೇಳದಲ್ಲಿ ಸುಮಾರು 30 ಕ್ಕೂ ಅಧಿಕ ಮಿಕ್ಕಿ ಹಲಸಿನ ಉತ್ಪನ್ನಗಳ ಪ್ರದರ್ಶನ ಹಾಗೂ ಮಾರಾಟಗಳ ಮಳಿಗೆಗಳಿವೆ. ಸ್ಥಳದಲ್ಲೇ ತಯಾರಿಸುವ ಹಲವು ಪಾರಂಪರಿಕ ತಿಂಡಿಗಳು ಜೊತೆಗೆ ಹಲಸಿನ ತಳಿಗಳನ್ನು ಅಭಿವೃದ್ಧಿಪಡಿಸಿದ ಪ್ರಸಿದ್ಧ ನರ್ಸರಿಗಳ ಗಿಡಗಳು, ಸ್ಥಳೀಯ ಹಾಗೂ ಅಂತರಾಷ್ಟ್ರೀಯ ಮಟ್ಟದ ವಿವಿಧ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ, ಹಲಸುಗಳನ್ನು ಸುಲಭವಾಗಿ ಕಟ್ಟ ಮಾಡುವ ಮೆಷಿನ್ಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿದೆ ಎಂದು ತಿಳಿಸಿದರುಮೇಳದಲ್ಲಿ ಹಲಸಿನ ಹಣ್ಣಿನಿಂದ ತಯಾರಿಸಿದ ಹಲಸಿನ ಉಂಡ್ಲಕಾಳು, ಚಿಪ್ಸ್ , ಹಪ್ಪಳ, ದೋಸೆ, ಮಂಚೂರಿ, ಕಬಾಬ್, ಮುಳುಕ್ಕ, ಜ್ಯೂಸ್, ಸೊಳೆ ರೊಟ್ಟಿ, ಕೇಕ್, ಹಲ್ವ, ಅತಿರಸ, ಸೇಮಿಗೆ, ಬನ್ಸ್, ಪವಾಲ್, ಪಾಯಸ, ಸೋಂಟೆ, ಕೊಟ್ಟಿಗೆ, ಗೆಣಸಲೆ, ಪೋಡಿ, ಮಾಂಬಳ, ಐಸ್ ಕ್ರೀಂ, ಹಲಸಿನ ಬೀಜದ ಹೋಳಿಗೆ, ಹಣ್ಣಿನ ಹೋಳಿಗೆ ಹೀಗೆ ಹತ್ತು ಹಲಸು ಬಗೆಯ ಖಾದ್ಯಗಳನ್ನು ಸವಿಯುವ ಅವಕಾಶವನ್ನು ಹಲಸು ಪ್ರಿಯರಿಗೆ ಒಂದೇ ಸೂರಿನಡಿ ಒದಗಿಸಲಾಗುವುದು ಎಂದು ಅವರು ತಿಳಿಸಿದರು.ಜೂ.17 ಶನಿವಾರ ಬೆಳಿಗ್ಗೆ 8.30 ಕ್ಕೆ ಮೇಳದಲ್ಲಿ ತೆರೆಯುವ ಮಳಿಗೆಗಳನ್ನು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ ಮುಳಿಯ ಉದ್ಘಾಟಿಸಲಿದ್ದು, 10 ಗಂಟೆಗೆ ಬೆಂಗಳೂರು ಐಐಎಚ್ ಆರ್ ನಿರ್ದೇಶಕ ಡಾ.ಸಂಜಯ ಕುಮಾರ್ ಸಿಂಗ್ ಮೇಳಕ್ಕೆ ಚಾಲನೆ ನೀಡಲಿದ್ದಾರೆ. ಪುತ್ತೂರು ಸುದಾನ ಶಾಲಾ ಸಂಚಾಲಕ ರೆ.ವಿಜಯ ಹಾರ್ವಿನ್ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಬೆಂಗಳೂರು ಐಐಎಚ್ ಆರ್ ಪ್ರಾಜೆಕ್ಟ್ ಕೋಆರ್ಡಿನೇಟರ್ ಡಾ.ಪಿ.ಸಿ.ಪಾಟೇಲ್, ಪುತ್ತೂರು ನ್ಯಾಯವಾದಿ ಫಝ್ಲುಲ್ ರಹಿಮಾನ್, ವಲಯ ಜೆಸಿಐ ಕಾರ್ಯಕ್ರಮ ನಿರ್ದೇಶಕಿ ಜೇಸಿ ಅಕ್ಷತಾ ಗಿರೀಶ್, ರೋಟರಿ ಕ್ಲಬ್ ಪುತ್ತೂರು ಯುವ ನಿಯೋಜಿತ ಅಧ್ಯಕ್ಷ ಪಶುಪತಿ ಶರ್ಮ ಪಾಲ್ಗೊಳ್ಳಲಿದ್ದು, ಪುತ್ತೂರು ಜೆಸಿಐ ಅಧ್ಯಕ್ಷ ಸುಹಾಸ್ ಮರಿಕೆ ಉಪಸ್ಥಿತರಿರುವರು ಎಂದು ತಿಳಿಸಿದರು.
ಬಳಿಕ 11 ಗಂಟೆಗೆ ನಡೆಯುವ ಹಲಸು-ಸಂವಹನ ಸಮಾವೇಶದಲ್ಲಿ ಬೆಂಗಳೂರು ಐಐಎಚ್ ಆರ್ ವಿಜ್ಞಾನಿ ಡಾ.ಕರುಣಾಕರ್, ಬೆಂಗಳೂರು ಮಾ ಇಂಟಿಗ್ರೇಟರ್ಸ್ ನ ಅಶೋಕ್ ಕುಮಾರ್ ಕರಿಕ್ಕಳ, ಭಟ್ & ಭಟ್ ಯೂಟ್ಯೂಬ್ ಚಾನೆಲ್ನ ಸುದರ್ಶನ ಭಟ್ ಬೆದ್ರಾಡಿ, ಬೆಳ್ಳಾರೆ ಕುರಿಯಾಜೆ ಫಾರ್ಮ್ಸ್ ನ ಕುರಿಯಾಜೆ ತಿರುಮಲೇಶ್ವರ ಭಟ್, ಆಲಂಗಾರು ರಾಘವೇಂದ್ರ ನರ್ಸರಿಯ ಕೃಷ್ಣ ಕೆದಿಲಾಯ ಪಾಲ್ಗೊಳ್ಳಲಿದ್ದಾರೆ. ಸಮನ್ವಯಕಾರರಾಗಿ ವೇಣುಗೋಪಾಲ್ ಎಸ್.ಜಿ. ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಜೂ.18 ಭಾನುವಾರ ಸಂಜೆ 4 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪಾಲ್ಗೊಳ್ಳಲಿದ್ದು, ಸಾವಯವ ಕೃಷಿಕ ಎ.ಪಿ.ಸದಾಶಿವ ಮರಿಕೆ ಸಮಾರೋಪ ಭಾಷಣ ಮಾಡುವರು. ಅನಂತಪ್ರಸಾದ್ ಅಧ್ಯಕ್ಷತೆ ವಹಿಸುವರು ಎಂದು ತಿಳಿಸಿದರು.
ಜೇಸಿಐ ಅಧ್ಯಕ್ಷ ಸುಹಾಸ್ ಮರಿಕೆ ಮಾತನಾಡಿ, ಕಾರ್ಯಕ್ರಮದಲ್ಲಿ ಹಲಸಿನ ಹಣ್ಣಿನ ಮೌಲ್ಯವರ್ಧನೆ ಕುರಿತು ಬಹಳಷ್ಟು ಚರ್ಚೆಗಳು ನಡೆಯಲಿವೆ. ಮೇಳದಲ್ಲಿ ಮುಖ್ಯವಾಗಿ ಕಾರ್ಕಳದ ಹಲಸಿನ ವಿವಿಧ ಖಾದ್ಯ ಸಹಿತ ಮಂಚೂರಿ ತಯಾರಿಕೆ ತಂಡ, ರಾಮಚಂದ್ರಾಪುರ ಮಠದಿಂದ ಹಲಸಿನ ಖಾದ್ಯ ತಯಾರಿಸುವ ಮಹಿಳೆಯರ ತಂಡವೊಂದು ಆಗಮಿಸಲಿದೆ. ಮೇಳದಲ್ಲಿ ಹಲಸಿನ ಕುರಿತು ಚಿತ್ರಕಲೆ, ಪ್ರಬಂಧ ಮುಂತಾದ ಹತ್ತು ಹಲವು ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಿ ಸ್ಥಳದಲ್ಲೇ ಬಹುಮಾನ ನೀಡಲಾಗುವುದು. ಒಟ್ಟಾರೆಯಾಗಿ ಹಲಸು ಮನೆ ಮನೆಯಲ್ಲಿ ಬಳಕೆ ಆಗಬೇಕು ಎಂಬ ನಿಟ್ಟಿನಲ್ಲಿ ಮೇಳ ಆಯೋಜಿಸಲಾಗಿದೆ ಎಂದು ತಿಳಿಸಿದರು.
ಸಹಕಾರ ನೀಡುವ ಸಂಸ್ಥೆಗಳು :
ಕಾರ್ಯಕ್ರಮಕ್ಕೆ ಮಂಗಳೂರು ಭಾರತ ಅಟೋಕಾರ್ಸ್ ಪ್ರೈ.ಲಿ., ವಿಟ್ಲ ಪಿಂಗಾರ ರೈತೋತ್ಪಾದನಾ ಸಂಸ್ಥೆ, ಪುತ್ತೂರು ಎಸ್ ಆರ್ ಕೆ. ಲ್ಯಾಡರ್ಸ್, ಸಾಯ ಎಂಟರ್ ಪ್ರೈಸಸ್, ಉಪ್ಪಿನಂಗಡಿ ಅಕ್ಷ ಕಾಟೇಜ್ ಇಂಡಸ್ಟ್ರೀಸ್, ಪುತ್ತೂರು ನವನೀತ ಫಾರ್ಮ್ ನರ್ಸರಿ, ಏಳ್ಮುಡಿ ಮರಿಕೆ ಸಾವಯವ ಮಳಿಗೆ ಹಾಗೂ ಪುತ್ತೂರು ಯುವ ರೋಟರಿ ಕ್ಲಬ್ ಸಹಕಾರ ನೀಡಲಿದೆ.
ಪತ್ರಿಕಾಗೋಷ್ಠಿಯಲ್ಲಿ ನವನೀತ್ ಫಾರ್ಮ್ ನರ್ಸರಿಯ ವೇಣುಗೋಪಾಲ್ ಉಪಸ್ಥಿತರಿದ್ದರು.
Posted by Vidyamaana on 2023-11-21 11:39:31 |
ಉತ್ತರಕಾಶಿ: ಉತ್ತರಾಖಂಡ ರಾಜ್ಯದ ಉತ್ತರಕಾಶಿಯಲ್ಲಿ ಕುಸಿದ ಬಿದ್ದ ನಿರ್ಮಾಣ ಹಂತದ ಸುರಂಗದ ಒಳಗಡೆ ಸಿಲುಕಿರುವ ಕಾರ್ಮಿಕರ ಮೊದಲ ವಿಡಿಯೋ ಬಿಡುಗಡೆಯಾಗಿದೆ.
💥 ಕ್ಲಿಕ್ ಮಾಡಿ 👉 ಸುರಂಗ ದ ಒಳಗಡೆ ಸಿಲುಕಿರುವ ಕಾರ್ಮಿಕರ CCTV ಮೊದಲ ದೃಶ್ಯ
ಸುರಂಗದ ಮೇಲಿನಿಂದ ರಂಧ್ರ ಕೊರೆದು ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಅಧಿಕಾರಿಗಳು ಹರಸಾಹಸ ಮಾಡುತ್ತಿದ್ದಾರೆ. ಈ ಮಧ್ಯೆ ಎಂಡೋಸ್ಕೋಪಿಕ್ ಫ್ಲೆಕ್ಸಿ ಕ್ಯಾಮರಾವನ್ನು ಸುರಂಗದೊಳಗೆ ಕಳುಹಿಸಲಾಗಿತ್ತು. ಇದೀಗ ಸುರಂಗದೊಳಗಿನ ದೃಶ್ಯಗಳನ್ನು ಸೆರೆ ಹಿಡಿಯುವಲ್ಲಿ ರಕ್ಷಣಾ ತಂಡ ಯಶಸ್ವಿಯಾಗಿದೆ.
ನಿನ್ನೆ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವವರಿಗೆ 6 ಇಂಚಿನ ಪೈಪ್ ಮೂಲಕ ಹೆಚ್ಚಿನ ಪ್ರಮಾಣದಲ್ಲಿ ಆಹಾರ, ಆಮ್ಲಜನಕ ಪೂರೈಕೆ ಮಾಡುವುದಕ್ಕಾಗಿ ವ್ಯವಸ್ಥೆ ಮಾಡಲಾಗಿತ್ತು. ಈ ಪೈಪ್ ನ ಮೂಲಕ, 8 ದಿನಗಳಿಂದ ಸುರಂಗದ ಒಳಗೆ ಸಿಲುಕಿರುವ 41 ಕಾರ್ಮಿಕರ ದೃಶ್ಯಗಳನ್ನು ಪಡೆಯುವುದಕ್ಕೆ ಸಾಧ್ಯವಾಗಿದೆ.
Posted by Vidyamaana on 2023-09-06 07:05:24 |
ಪುತ್ತೂರು : ಪಡಿತರ ಚೀಟಿ ತಿದ್ದುಪಡಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಜಿಲ್ಲಾವಾರು ಬದಲಾವಣೆ ಮಾಡಿ ಆಹಾರ ಇಲಾಖೆ ಆದೇಶ ಹೊರಡಿಸಿದೆ.
ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಸಹಿತ ವಿವಿಧ ಜಿಲ್ಲೆಗಳಲ್ಲಿ ಸೆ. 12ರಿಂದ ಸೆ. 14ರ ವರೆಗೆ ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ಮೊದಲು ಸೆ.1 ರಿಂದ ಸೆ. 10ರ ವರೆಗೆ ಪಡಿತರ ಚೀಟಿ ತಿದ್ದುಪಡಿಗೆ ನಿಗದಿಪಡಿಸಿದ್ದ ಆದೇಶವನ್ನು ಇಲಾಖೆ ಹಿಂಪಡೆದಿದೆ. ಪಡಿತರ ಚೀಟಿ ತಿದ್ದುಪಡಿಗೆ ಭರಪೂರ ಅರ್ಜಿ ಸಲ್ಲಿಕೆಯಾಗುತ್ತಿರುವ ಕಾರಣದಿಂದ ಆಹಾರ ಇಲಾಖೆಯ ಸರ್ವ್ರನಲ್ಲಿ ಸಮಸ್ಯೆ ಕಾಣಿಸಿಕೊಂಡಿದೆ 1 ಗಂಟೆಯಲ್ಲಿ ಸುಮಾರು 500ಕ್ಕೂ ಅಧಿಕ ಅರ್ಜಿ ಸಲ್ಲಿಕೆಯಾಗುತ್ತಿರುವ ಕಾರಣದಿಂದ ಸರ್ವರ್ ಸಮಸ್ಯೆ ಎದುರಾಗಿತ್ತು. ಇದರಿಂದಾಗಿ ಜನರು ಪಡಿತರ ಚೀಟಿ ತಿದ್ದುಪಡಿಗೆ ವಿವಿಧ ಕೇಂದ್ರಗಳನ್ನು ಸಂಪರ್ಕಿಸಿದರೂ ತಿದ್ದುಪಡಿ ಆಗುತ್ತಿರಲಿಲ್ಲ. ಈ ಸಮಸ್ಯೆಯನ್ನು ಗಮನಿಸಿದ ಆಹಾರ ಇಲಾಖೆ ಸರ್ವರ್ ನಿಭಾಯಿಸಲು ಇದೀಗ ಜಿಲ್ಲಾವಾರು ದಿನಾಂಕವನ್ನು ನಿಗದಿಪಡಿಸಿದೆ. ಅದರಂತೆ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ ಸಹಿತ ವಿವಿಧ ಜಿಲ್ಲೆಗಳಲ್ಲಿ ಸೆ. 12ರಿಂದ ಸೆ. 14ರ ವರೆಗೆ ಬೆಳಗ್ಗೆ 10ರಿಂದ ಸಂಜೆ 6ರ ವರೆಗೆ ಅವಕಾಶ ಮಾಡಲಾಗಿದೆ.
Posted by Vidyamaana on 2024-02-27 16:39:06 |
ನವದೆಹಲಿ: ಮದುವೆಯಾಗಿ ಮೂರೂ ತಿಂಗಳಿಗೆ ಪತಿ ಪತ್ನಿ ಇಹಲೋಕ ತ್ಯಜಿಸಿದ ಆಘಾತಕಾರಿ ಘಟನೆಯೊಂದು ದೆಹಲಿಯ ಗಾಜಿಯಾಬಾದ್ನಲ್ಲಿ ಸಂಭವಿಸಿದೆ.
ಮದುವೆಯಾಗಿ ಮೂರೇ ತಿಂಗಳಿಗೆ ಪತಿ ಹೃದಯಾಘಾತಗೊಂಡು ಮೃತಪಟ್ಟರೆ ಪತಿಯ ಸಾವಿನ ಸುದ್ದಿ ಕೇಳಿದ ಪತ್ನಿ ಆಘಾತಗೊಂಡು ವಾಸವಿದ್ದ ಏಳು ಅಂತಸ್ಥಿನ ಕಟ್ಟಡದಿಂದ ಜಿಗಿದು ಜೀವ ಕಳೆದುಕೊಂಡಿದ್ದಾಳೆ.
ಏನಿದು ಘಟನೆ:
ಗಾಜಿಯಾಬಾದ್ ನ ಅಭಿಷೇಕ್ ಅಹ್ಲುವಾಲಿಯಾ ಜೊತೆ ಅಂಜಲಿ ಕಳೆದ ವರ್ಷ ನವೆಂಬರ್ ನಲ್ಲಿ ಮದುವೆಯಾಗಿದ್ದರು ಇಬ್ಬರೂ ಜೊತೆಯಾಗಿ ತಿರುಗಾಟ ನಡೆಸಿದ್ದಾರೆ ಅದರಂತೆ ನಿನ್ನೆ (ಸೋಮವಾರ) ದೆಹಲಿಯಲ್ಲಿರುವ ಮೃಗಾಲಯಕ್ಕೆ ಭೇಟಿ ನೀಡಿದ್ದಾರೆ ಈ ವೇಳೆ ಇದ್ದಕಿದ್ದಂತೆ ಅಭಿಷೇಕ್ ಗೆ ಹೃದಯಾಘತವಾಗಿದೆ ಆ ಕೂಡಲೇ ಅಲ್ಲಿದ್ದ ಜನರು ಸೇರಿ ಅಭಿಷೇಕ್ ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಕುರಿತು ಗಾಬರಿಯಾದ ಪತ್ನಿ ಅಂಜಲಿ ತನ್ನ ಸ್ನೇಹಿತರು ಹಾಗೂ ಕುಟುಂಬ ಸದಸ್ಯರಿಗೆ ಪತಿಗೆ ಹೃದಯಾಘಾತವಾದ ವಿಚಾರವನ್ನು ತಿಳಿಸಿದ್ದಾಳೆ.
ಗಂಭೀರ ಸ್ಥಿತಿಯಲ್ಲಿದ್ದ ಅಭಿಷೇಕ್ ಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಸಂಜೆ ಹೊತ್ತಿಗೆ ಚಿಕಿತ್ಸೆ ಫಲಕಾರಿಯಾಗದೆ ಅಭಿಷೇಕ್ ಮೃತಪಟ್ಟಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ಕುಟುಂಬ ಸದಸ್ಯರು ಅಭಿಷೇಕ್ ಮೃತದೇಹವನ್ನು ಗಾಜಿಯಾಬಾದ್ ನಲ್ಲಿರುವ ಫ್ಲಾಟ್ ಗೆ ತಂದಿದ್ದಾರೆ ಈ ವೇಳೆ ಮೃತ ಅಭಿಷೇಕ್ ಜೊತೆಗೆ ಇದ್ದ ಅಂಜಲಿ ಇದ್ದಕಿದ್ದಂತೆ ಎದ್ದು ಕಟ್ಟಡದ ಏಳನೇ ಮಹಡಿಯಿಂದ ಜಿಗಿದಿದ್ದಾಳೆ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರೂ ಇಂದು( ಮಂಗಳವಾರ) ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾಳೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿದೆ.