ತಾಂತ್ರಿಕ ದೋಷ: ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದ ಸುನಿತಾ ವಿಲಿಯಮ್ಸ್

ಸುದ್ದಿಗಳು News

Posted by vidyamaana on 2024-06-29 11:21:28 |

Share: | | | | |


ತಾಂತ್ರಿಕ ದೋಷ: ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿದ ಸುನಿತಾ ವಿಲಿಯಮ್ಸ್

ವಾಷಿಂಗ್ಟನ್: ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ಅವರ ಸಹಯಾತ್ರಿ ಬಚ್‌ ವಿಲ್ಮೋರ್ ಅವರು ಇನ್ನು ಕೆಲ ದಿನಗಳ ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿಯಲಿದ್ದಾರೆ ಎಂದು ನಾಸಾ ತಿಳಿಸಿದೆ.ಜೂನ್ 5ರಂದು ಸುನಿತಾ ಮತ್ತು ವಿಲ್ಮೋರ್‌ ಅವರಿದ್ದ ಸ್ಟಾರ್‌ಲೈನರ್‌ ನೌಕೆಯನ್ನು ಫ್ಲಾರಿಡಾದ ಕೇಪ್‌ ಕ್ಯಾನವೆರಲ್‌ ಸ್ಪೇಸ್‌ ಫೋರ್ಸ್‌ ಕೇಂದ್ರದಿಂದ ಉಡಾವಣೆ ಮಾಡಲಾಗಿತ್ತು.

ಜೂನ್ 6ರ ಮಧ್ಯಾಹ್ನ 1.34ಕ್ಕೆ ಗಗನನೌಕೆಯನ್ನು ಬಾಹ್ಯಾಕಾಶ ನಿಲ್ದಾಣಕ್ಕೆ ಡಾಕ್‌ (ಕೂಡಿಕೊಳ್ಳುವ ಪ್ರಕ್ರಿಯೆ) ಮಾಡಲಾಗಿತ್ತು. 

ತಾಂತ್ರಿಕ ದೋಷಕ್ಕೆ ಕಾರಣಗಳೇನು ಎಂಬ ಬಗ್ಗೆ ಪರೀಕ್ಷೆಗಳು ನಡೆಯುತ್ತಿದ್ದು, ಗಗನಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದು ನಾಸಾ ತಿಳಿಸಿದೆ. ಆದರೆ, ಗಗನಯಾತ್ರಿಗಳು ಯಾವಾಗ ಭೂಮಿಗೆ ಹಿಂದಿರುಗಲಿದ್ದಾರೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ.

ನಾವು ಭೂಮಿಗೆ ಹಿಂದಿರುಗುವ ಕುರಿತಂತೆ ಆತುರಪಡುತ್ತಿಲ್ಲ ಎಂದು ನಾಸಾದ ವಾಣಿಜ್ಯ ಸಿಬ್ಬಂದಿ ಕಾರ್ಯಕ್ರಮದ ವ್ಯವಸ್ಥಾಪಕ ಸ್ಟೀವ್ ಸ್ಟಿಚ್ ಹೇಳಿದರು.

ಡಾಕಿಂಗ್ ಮಾಡುವ ವೇಳೆ ಥ್ರಸ್ಟರ್‌ನಲ್ಲಿ(ಪ್ಯೊಪಲ್ಷನ್‌ ಮಾಡ್ಯೂಲ್‌ಗೆ ಅಗತ್ಯ ನೂಕುಬಲ ನೀಡಲು ಅಳವಡಿಸಲಾಗಿರುವ ಯಂತ್ರ) ತೊಂದರೆ ಕಾಣಿಸಿಕೊಂಡಿದೆ. ಅಲ್ಲದೇ ಉಡಾವಣೆ ವೇಳೆ ಹೀಲಿಯಂ ಸೋರಿಕೆಯೂ ಆಗಿದೆ. ಇವೆರಡರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಡಾಕಿಂಗ್ ಸಮಯದಲ್ಲಿ ಸಂಭವಿಸಿದ ಪರಿಸ್ಥಿತಿಯ ಬಗ್ಗೆ ತಿಳಿಯಲು ನ್ಯೂ ಮೆಕ್ಸಿಕೋ ಮರುಭೂಮಿಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಬಚ್‌ ಮತ್ತು ಸುನಿತಾ ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿಲ್ಲ ಎಂದು ಸ್ವಿಚ್ ತಿಳಿಸಿದರು.

 Share: | | | | |


ಪುತ್ತೂರು : ತುರ್ತು ಕಾಮಗಾರಿ ನಿಮಿತ್ತ ಇಂದು(ಜೂ 22)ವಿದ್ಯುತ್ ನಿಲುಗಡೆ!!!

Posted by Vidyamaana on 2023-06-21 23:17:59 |

Share: | | | | |


ಪುತ್ತೂರು : ತುರ್ತು ಕಾಮಗಾರಿ ನಿಮಿತ್ತ ಇಂದು(ಜೂ 22)ವಿದ್ಯುತ್ ನಿಲುಗಡೆ!!!

ಪುತ್ತೂರು: 110/33/11 ಕೆವಿ ವುತ್ತೂರು ವಿದ್ಯುತ್ ಉಪಕೇಂದ್ರದಲ್ಲಿ 110ಕೆಪಿ ಮತ್ತು 33ಕೆ.ಎ ಲೈನ್ ಬೇ, ಪರಿವರ್ತಕ ಮತ್ತು 11ಕೆವಿ ಫೀಡರುಗಳ ಪಾಲನಾ ಕಾರ್ಯ ಹಮ್ಮಿಕೊ೦ಡಿರುವುದರಿಂದ ಜೂ.22 (ಗುರುವಾರ) ಪೂರ್ವಾಹ್ನ 10ರಿಂದ ಸಾಯಂಕಾಲ 4 ಗಂಟೆಯವರೆಗೆ 33ಕೆ.ವಿ ಪುತ್ತೂರು-ಕಡಬ-ಸುಬ್ರಹ್ಮಣ, 33ಕೆಪಿ ಪುತ್ತೂರು-ಕುಂಬ-ಬೆಳ್ಳಾರೆ, 33ಕೆ.ಎ ಪುತ್ತೂರು-ಸುಳ್ಯ ಹಾಗೂ 33ಕೆ.ಎ ಪುತ್ತೂರು-ಸವಣೂರು-ನೆಲ್ಯಾಡಿ ವಿದ್ಯುತ್ ಮಾರ್ಗಗಳ ವಿದ್ಯುತ್‌ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಪುತ್ತೂರು ಹಾಗೂ 33/11ಕೆವಿ ಕಡಬ, ನೆಲ್ಯಾಡಿ, ಸವಣೂರು, ಬಿಂದು ಮತ್ತು ಕಂಪ್ಯೂ ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಎಲ್ಲಾ 11ಕೆವಿ ಫೀಡರ್‌ಗಳಿಂದ ಎದ್ಯುತ್‌ ಸರಬರಾಜಾಗುವ ವಿದ್ಯುತ್‌ ಬಳಕೆದಾರರು ಗಮನಿಸಿ ಸಹಕರಿಸಬೇಕೆಂದು ಮೆಸ್ಕಾಂ ಪುತ್ತೂರು ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.

ಮಗನಿಂದ ತಾಯಿ ಕೊಲೆ ಕೇಸ್‌ಗೆ ಬಿಗ್‌ಟ್ವಿಸ್ಟ್‌: ಪೊಲೀಸ್‌ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

Posted by Vidyamaana on 2024-02-06 12:24:15 |

Share: | | | | |


ಮಗನಿಂದ ತಾಯಿ ಕೊಲೆ ಕೇಸ್‌ಗೆ ಬಿಗ್‌ಟ್ವಿಸ್ಟ್‌: ಪೊಲೀಸ್‌ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು :ಕೆ.ಆರ್.ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಕೊಲೆ ಮಗ ಮಾಡಿದಲ್ಲ ಬದಲಿಗೆ ಅಪ್ಪನ ಕೊಲೆಯನ್ನು ತನ್ನ ಮೇಲೆ ಹಾಕಿಕೊಂಡು ಮಗನೇ ಪೊಲೀಸರಿಗೆ ತಾನೇ ಕೊಲೆ ಮಾಡಿದ್ದ ಎನ್ನಲಾಗಿದೆ.ಈ ನಡುವೆ ಫಿಂಗರ್ ಪ್ರಿಂಟ್ ಪತ್ತೆಯಾದ ಹಿನ್ನೆಲೆ ತನಿಖೆ ನಡೆಸಿದ್ದ ಪೊಲೀಸರು ಕೊಲೆಯಲ್ಲಿ ತಂದೆ ಕೊಲೆ ಮಾಡಿದ್ದ ಎನ್ನಲಾಗಿದೆ.ಮಹಿಳೆ ಕೊಲೆಗೆ ಅಕ್ರಮ ಸಂಬಂಧವೇ ಪ್ರಮುಖ ಕಾರಣ ಎನ್ನಲಾಗಿದೆ. ಈ ನಡುವೆ ನೇತ್ರಾಳಿಗೆ ಅಕ್ರಮ ಸಂಬಂಧದ ಜೊತೆಗೆ ಕುಡಿತದ ಚಟ ಇತ್ತು. ಕೆಲವೊಮ್ಮೆ ಎರಡು ಮೂರು ದಿನಗಳ ಕಾಲ ಮನೆಗೆ ಬರ್ತಾ ಇರಲಿಲ್ಲ. ಹೀಗಾಗಿ ಮಗನ ಜೊತೆ ಸೇರಿ ಕೊಲೆ ಮಾಡಲು ನಿರ್ಧಾರ ಮಾಡಿದೆ ಎಂದು ಆರೋಪಿ ಪೊಲೀಸರ ಮುಂದೆ ಹೇಳಿದ್ದಾನೆ ಎನ್ನಲಾಗಿದೆ. ಅಪ್ರಾಪ್ತರು ಜೈಲಿಗೆ ಹೋದರೆ ಶಿಕ್ಷೆ ಕಡಿಮೆ ಇರುತ್ತೆ, ಜೊತೆಗೆ ಅವರೇ ವಿದ್ಯಾಭ್ಯಾಸ ಕೊಡಿಸ್ತಾರೆ ಎಂದು ಅಪ್ಪನನ್ನು ಮಗ ಓಲೈಸಿದ್ದ ಎನ್ನಲಾಗಿದ್ದು, ಈ ಹಿನ್ನಲೆಯಲ್ಲಿ ಮಗ ಪೊಲೀಸರ ಮುಂದೆ ಹೇಳಿದ್ದ ಎನ್ನಲಾಗಿದೆ.

ಪಾರ್ಕಿನ ಬಳಿ ನಿಂತಿದ್ದ ಕಾರು ಶೇಕ್ ಆಗ್ತಿತ್ತು – ಕಾರಿನ ಒಳಗೆ ಏನೋ ನಡೀತಿತ್ತು

Posted by Vidyamaana on 2024-01-26 04:16:30 |

Share: | | | | |


ಪಾರ್ಕಿನ ಬಳಿ ನಿಂತಿದ್ದ ಕಾರು ಶೇಕ್ ಆಗ್ತಿತ್ತು – ಕಾರಿನ ಒಳಗೆ ಏನೋ ನಡೀತಿತ್ತು

ಬೆಂಗಳೂರು : ನಮ್ಮ ರಾಜ್ಯದ ರಾಜಧಾನಿ ಎಷ್ಟೇ ಅಂತಾರಾಷ್ಟ್ರೀಯ ಮಟ್ಟಕ್ಕೆ ಬೆಳೆದರೂ ಫಾರಿನ್‌ ಸಿಟಿಯಾಗಲು ಸಾಧ್ಯವಿಲ್ಲ. ಪಬ್ಲಿಕ್ ಪಾರ್ಕ್‌, ರಸ್ತೆ ಹಾಗೂ ಬಸ್‌ ನಿಲ್ದಾಣದಲ್ಲಿಯೇ ಕಿಸ್ಸಿಂಗ್, ಹಗ್ಗಿಂಗ್, ರೊಮ್ಯಾನ್ಸಿಂಗ್ ಮಾಡುವುದಕ್ಕೆ ಕಡಿವಾಣವಿದೆ. ಆದರೆ, ಇಲ್ಲೊಂದು ಜೋಡಿ ಪಾರ್ಕ್‌ ಪಕ್ಕದ ರಸ್ತೆಯಲ್ಲಿಯೇ ಕಾರು ನಿಲ್ಲಿಸಿ ಮಟ ಮಟ ಮದ್ಯಾಹ್ನವೇ ಕಾಮತೃಷೆ ತೀರಿಸಿಕೊಳ್ಳುತ್ತಿದ್ದಾರೆ.ಇದನ್ನು ನೋಡಿದ ಪೊಲೀಸಪ್ಪ ಬುದ್ಧಿ ಹೇಳಲು ಮುಂದಾದರೆ ಅವರಿಗೆ ಕಾರು ಗುದ್ದಿಸಿ ಪರಾರಿ ಆಗಿರುವ ಘಟನೆ ಜ್ಞಾನಭಾರತಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.


ಹೌದು, ಬೆಂಗಳೂರು ಸೇಫ್‌ ಸಿಟಿ, ಸಂಸ್ಕೃತಿಯೂ ಇರುವಂತಹ ಸಿಟಿ ಎಂದು ನಾವು ನಂಬಿದ್ದೇವೆ. ಇಲ್ಲಿ ಕೆಲವು ವಿದೇಶಗಳಲ್ಲಿರುವಂತೆ ಬಯಲಿನಲ್ಲಿಯೇ ದೈಹಿಕ ಕಾಮನೆಗಳನ್ನು ತೀರಿಸಿಕೊಳ್ಳಲು ಅವಕಾಶವಿಲ್ಲ. ಇಷ್ಟಿದ್ದರೂ ಅಲ್ಲೊಂದು, ಇಲ್ಲೊಂದು ಸಾರ್ವಜನಿಕ ಸ್ಥಳದಲ್ಲಿಯೇ ಕಿಸ್ ಮಾಡುವ ದೃಶ್ಯಗಳು ಕಂಡುಬರುತ್ತಿದೆ. ಇಂಥಹ ಘಟನೆಗಳಿಗೆ ಸಾರ್ವಜನಿಕರು ಹಾಗೂ ಸ್ಥಳೀಯ ಪೊಲೀಸರು ಬುದ್ಧಿ ಹೇಳಿ ಅಂತಹ ಜೋಡಿಗಳನ್ನು ಅಲ್ಲಿಂದ ಕಳಿಸುತ್ತಾರೆ. ಇಂತಹ ದೃಶ್ಯಗಳಿಂದ ಚಿಕ್ಕ ಮಕ್ಕಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ ಎಂಬುದು ನಮ್ಮ ವಾದವಾಗಿದೆ.ಬೆಂಗಳೂರಿನ ಜ್ಞಾನಭಾರತಿ ಪೊಲೀಸ್‌ ಠಾಣೆ ಪಿಎಸ್‌ಐ ಮಹೇಶ್ ಅವರು ಜ.20ರ ಮಧ್ಯಾಹ್ನ 3.30ರ ವೇಳೆಗೆ ಮನೆಗೆ ಬಂದು ಊಟ ಮಾಡಿ ಹೊರಗೆ ಬಂದಾಗ ಪಾರ್ಕಿನ ಬಳಿ ಒಂದು ಕಾರು ನಿಂತುಕೊಂಡು ಅಲುಗಾಡುತ್ತಿತ್ತು. ಇನ್ನು ಅದನ್ನು ಗಮನಿಸದೇ ಮುಂದಕ್ಕೆ ಹೋಗಿ ಹಿಂದಕ್ಕೆ ತಿರುಗಿ ನೋಡಿದರೆ ಯುವಕ ಹಾಗೂ ಯುವತಿ ಇಬ್ಬರೂ ಕಾರಿನ ಹಿಂಬದಿ ಸೀಟಿನಲ್ಲಿ ಕಾಮತೃಷೆ ತೀರಿಸಿಕೊಳ್ಳುವುದು ಕಣ್ಣಿಗೆ ಬಿದ್ದಿದೆ. ಇದೇ ರಸ್ತೆಯಲ್ಲಿ ಶಾಲಾ ಮಕ್ಕಳು, ಮಹಿಳೆಯರು ಅಡ್ಡಾಡುವ ರಸ್ತೆಯಾಗಿದ್ದು, ಅವರಿಗೆ ಮುಜುಗರ ಉಂಟಾಗುವುದನ್ನು ತಪ್ಪಿಸುವ ಉದ್ದೇಶದಿಂದ ಪಿಎಸ್‌ಐ ಮಹೇಶ್ ಅವರು ಕಾರಿನಲ್ಲಿದ್ದವರಿಗೆ ಬುದ್ಧಿ ಹೇಳಲು ಮುಂದಾಗಿದ್ದಾರೆ. ಈ ವೇಳೆ ಕಾರಿನ ನಂಬರ್ ನೋಟ್ ಮಾಡಿಕೊಂಡು ಅವರಿಗೆ ಬುದ್ಧಿ ಹೇಳಬೇಕು ಎನ್ನುವಷ್ಟರಲ್ಲಿ ಯುವಕ ಕಾರನ್ನು ಸ್ಟಾರ್ಟ್‌ ಮಾಡಿದ್ದಾನೆ.ಕಾರು ಸ್ಟಾರ್ಟ್ ಆದ ಕೂಡಲೇ ಪೊಲೀಸಪ್ಪನಿಗೆ ಎಲ್ಲಿಯೂ ಅಕ್ಕ ಪಕ್ಕದಲ್ಲಿ ಸರಿದುಕೊಳ್ಳಲು ಜಾಗವೇ ಇರಲಿಲ್ಲ. ಆದ್ದರಿಂದ ಕಾರಿನಲ್ಲಿದ್ದ ಯುವಕ ನೇರವಾಗಿ ಕಾರನ್ನು ಪಿಎಸ್‌ಐ ಮೇಲೆಯೇ ಹರಿಸಲು ಮುಂದಾಗಿದ್ದಾನೆ. ಈ ವೇಳೆ ಪಿಎಸ್‌ಐ ಮಹೇಶ್ ಕಾರಿನ ಬಾನೆಟ್ ಮೇಲೆ ಬಿದ್ದಿದ್ದಾರೆ. ಹಾಗೆಯೇ ಕಾರನ್ನು ತುಸು ದೂರು ಓಡಿಸಿದ ಯುವಕ ನಂತರ ರಿವರ್ಸ್‌ ಗೇರ್ ಹಾಕಿ ಒಮ್ಮೆಲೆ ಚಲಾಯಿಸಿದ್ದಾನೆ. ಆಗ ಬಾನೆಟ್ ಮೇಲಿಂದ ಪಿಎಸ್‌ಐ ಕೆಳಗೆ ಬಿದ್ದು ತಲೆಗೆ ಗಾಯವಾಗಿ ಮೂರ್ಛೆ ತಪ್ಪಿ ಬಿದ್ದಿದ್ದಾರೆ. ಅಲ್ಲಿದ್ದ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನಂತರವೇ ಅವರಿಗೆ ಎಚ್ಚರವಾಗಿದೆ.ಕಾಮತೃಷೆ ತೀರಿಸಿಕೊಳ್ಳುತ್ತಿದ್ದ ಜೋಡಿಗೆ ಬುದ್ಧಿ ಹೇಳಲು ಮುಂದಾದ ಪಿಎಸ್‌ಐ ಮಹೇಶ್ ಆಸ್ಪತ್ರೆಯಿಂದ ಬಂದು ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಹಿಟ್‌ ಅಂಡ್ ರನ್ ಪ್ರಕರಣವನ್ನು ದಾಖಲಿಸಿದ್ದಾರೆ. ಇನ್ನೂ ಗಾಯಗಳಿಂದ ಪೂರ್ಣ ಪ್ರಮಾಣದಲ್ಲಿ ಚೇತರಿಕೆ ಕಾಣದೇ ವಿಶ್ರಾಂತಿ ಪಡೆಯುತ್ತಿದ್ದಾರೆ. ಇಂತಹ ಘಟನೆಗಳಿಗೆ ಕಡಿವಾಣ ಬೀಳಬೇಕಿದೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಲೋಕ ಅದಾಲತ್‌ -ಮುನಿಸು ಮರೆತು ಒಂದಾದ 33 ಜೋಡಿ!!

Posted by Vidyamaana on 2023-07-10 01:52:26 |

Share: | | | | |


ರಾಷ್ಟ್ರೀಯ ಲೋಕ ಅದಾಲತ್‌ -ಮುನಿಸು ಮರೆತು ಒಂದಾದ 33 ಜೋಡಿ!!

ಮೈಸೂರು: ಕೌಟುಂಬಿಕ ಕಲಹದಿಂದ ಬೇರ್ಪಟ್ಟು ವರ್ಷಾನುಗಟ್ಟಲೆ ಒಬ್ಬರಿಗೊಬ್ಬರು ಮುಖವನ್ನೇ ನೋಡದವರು ಅದಾಲತ್‌ನಲ್ಲಿ ಮುಖಾಮುಖಿಯಾಗಿ ಜೀವನದಲ್ಲಿ ಒಟ್ಟಿಗೆ ಸಾಗುವ ಮನಸ್ಸು ಮಾಡಿದರು…!

ವಿಚ್ಛೇದನ ಕೋರಿದ್ದ ದಂಪತಿಗಳು ನಗರದ ಕೌಟುಂಬಿಕ ನ್ಯಾಯಾಲಯದಲ್ಲಿ ಶನಿವಾರ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ಪರಸ್ಪರ ಸಿಹಿ ತಿನ್ನಿಸಿ ಮತ್ತೆ ಜತೆಯಾದರು.

ಮಗುವಿಗೆ ಸ್ನಾನ ಮಾಡಿಸದಿರುವ ಕಾರಣಕ್ಕೆ ಉಂಟಾದ ಮನಸ್ತಾಪ ದೊಡ್ಡದಾಗಿ ನ್ಯಾಯಾಲಯದ ಮೆಟ್ಟಿಲೇರಿದ್ದ ಪ್ರಕರಣ ಸುಖಾಂತ್ಯ ಕಂಡಿತು. ಹೀಗೆ ಜೀವನದಲ್ಲಿ ಎದುರಾಗುವ ಸಣ್ಣಪುಟ್ಟ ಜಗಳ, ಮನಸ್ತಾಪಗಳನ್ನೇ ದೊಡ್ಡದು ಮಾಡಿಕೊಂಡು ಸಂಸಾರ ಬಂಧನದಿಂದ ದೂರವಾಗಲು ಮುಂದಾಗಿದ್ದ 33 ಜೋಡಿ ಮುನಿಸು ಮರೆತು ಒಂದಾದರು.

ಮಗುವಿಗೆ ಏಕೆ ಸ್ನಾನ ಮಾಡಿಸಿಲ್ಲ ಎಂದು ಗಂಡ ಪತ್ನಿಯನ್ನು ಕೇಳಿದ್ದೇ ತಪ್ಪಾಯ್ತು. ಇಷ್ಟಕ್ಕೇ ಹೆಂಡತಿ ಮುನಿಸಿಕೊಂಡು ವಿಚ್ಛೇದನಕ್ಕೆ ನೋಟಿಸ್ ಕಳುಹಿಸಿದ್ದಳು. ಇದರಿಂದ ಆರು ತಿಂಗಳು ದೂರವಾಗಿದ್ದ ದಂಪತಿ ಮಗುವಿನ ಭವಿಷ್ಯದ ದೃಷ್ಟಿಯಿಂದ ಮತ್ತೆ ಒಂದಾದರು. ಮತ್ತೊಂದು ಪ್ರಕರಣದಲ್ಲಿ ಇಬ್ಬರೂ ಇಂಜಿನಿಯರ್‌ಗಳಾಗಿರುವ ಜೋಡಿ ಕೆಲಸದ ಕಾರಣಕ್ಕೆ ದೂರವಾಗಲು ಬಯಸಿದ್ದರು. ಒಬ್ಬರು ಮೈಸೂರಿನಲ್ಲಿ, ಇನ್ನೊಬ್ಬರು ಬೆಂಗಳೂರಿನಲ್ಲಿ. ಮೈಸೂರು ಬಿಟ್ಟು ಹೋಗಲು ಪತ್ನಿಗೆ ಇಷ್ಟವಿಲ್ಲ, ಬೆಂಗಳೂರಿನಿಂದ ಬರಲು ಪತಿಗೆ ಆಗುತ್ತಿರಲಿಲ್ಲ. ಹೀಗಾಗಿ ವಿಷಯ ಮುನಿಸಿನವರೆಗೂ ಹೋಗಿ ನ್ಯಾಯಾಲಯದ ಮೆಟ್ಟಿಲೇರುವಂತೆ ಮಾಡಿತ್ತು.ಜವಾಬ್ದಾರಿ ಅರಿತು ಸಂಸಾರ ನಡೆಸಿ:

ಅದಾಲತ್‌ನಲ್ಲಿ ಒಂದಾದ ಜೋಡಿಗಳಿಗೆ ಶುಭ ಹಾರೈಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಅದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜಿ.ಎಸ್.ಸಂಗ್ರೇಶಿ ಅವರು, ಗಂಡ-ಹೆಂಡತಿ ತಿಳಿವಳಿಕೆಯಿಂದ, ಜವಾಬ್ದಾರಿ ಅರಿತು ಸಮಾಜಮುಖಿಯಾಗಿ ಸಂಸಾರ ನಡೆಸಬೇಕು. ಜಗಳ, ಕೋಪ, ಮನಸ್ತಾಪಕ್ಕೆ ಜಾಗ ನೀಡದೆ ಹೊಂದಾಣಿಕೆಯಿಂದ ನಡೆದರೆ ಸಂತಸದಿಂದ ಜೀವನ ನಡೆಸಬಹುದು ಎಂದು ಹೇಳಿದರು.

ಸಣ್ಣಪುಟ್ಟ ಕಾರಣಕ್ಕೆ ಗಂಡ-ಹೆಂಡತಿ ದೂರವಾಗಿ ಸಂಸಾರ ಒಡೆದು ಚೂರಾಗಿತ್ತು. ಕುಳಿತು ಮಾತನಾಡಿದರೆ ಸಾಕಷ್ಟು ಸಮಸ್ಯೆಗಳು ಬಗೆಹರಿಲಿವೆ. ಆದರೆ ಕೋಪದಲ್ಲಿ ತಾಳ್ಮೆ ಕಳೆದಕೊಂಡು ವರ್ತಿಸಿದರೆ ಯಾವುದೂ ಸರಿಯಾಗುವುದಿಲ್ಲ. ಇಂದು ಅವರನ್ನು ಒಟ್ಟುಗೂಡಿಸಿದ್ದು, ಗಂಡ-ಹೆಂಡತಿ ಜವಾಬ್ದಾರಿ ಅರಿತು ಸಂಸಾರ ನಡೆಸಬೇಕು. ಒಂದು ಕುಟುಂಬ ಉಳಿಸುವ ಒಳ್ಳೆಯ ಕಾರ್ಯವನ್ನು ನ್ಯಾಯಾಧೀಶರು, ವಕೀಲರು ಮಾಡಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದರು.

ಈ ಬಾರಿಯ ಲೋಕ ಅದಾಲತ್‌ನಲ್ಲಿ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಿ ಮೊದಲ ಸ್ಥಾನ ಪಡೆಯಬೇಕೆಂಬ ಉದ್ದೇಶದಿಂದ ಹೆಚ್ಚು ಚಟುವಟಿಕೆಯಿಂದ ತೊಡಗಿಸಿಕೊಳ್ಳಲಾಗಿತ್ತು. ಅದಾಲತ್‌ನಲ್ಲಿ 87 ಕೌಟುಂಬಿಕ ಪ್ರಕರಣಗಳು ಬಗೆಹರಿದಿದ್ದು, 33 ಜೋಡಿ ವಿಚ್ಛೇದನದ ನಿರ್ಧಾರ ಬದಲಿಸಿ ಒಂದಾಗಿದ್ದಾರೆ. ಜಿಲ್ಲೆಯಾದ್ಯಂತ ಹೆಚ್ಚು ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು. ಪ್ರಿ-ಲಿಟಿಗೇಷನ್ ಪ್ರಕರಣಗಳನ್ನೂ ಹೆಚ್ಚು ಬಗೆಹರಿಸಲಾಗುವುದು ಎಂದರು.

ಕೌಟುಂಬಿಕ ನ್ಯಾಯಾಲಯದ ನ್ಯಾಯಾಧೀಶೆ ವೇಲಾ ಡಿ. ಖೊಡೆ, ನ್ಯಾಯಾಧೀಶರಾದ ರುಡಾಲ್ಫ್ ಪಿರೇರಾ, ಗಿರೀಶ್ ಭಟ್, ವಕೀಲರ ಸಂಘದ ಅಧ್ಯಕ್ಷ ಮಹದೇವಸ್ವಾಮಿ, ಕಾರ್ಯದರ್ಶಿ ಎಸ್.ಉಮೇಶ್ ಇದ್ದರು.

6 ವರ್ಷಗಳ ಪ್ರೀತಿಗೆ ಮದುವೆ ಮುದ್ರೆ ಒತ್ತಿದ ಸಲಿಂಗ ಜೋಡಿ

Posted by Vidyamaana on 2023-09-15 21:51:08 |

Share: | | | | |


6 ವರ್ಷಗಳ ಪ್ರೀತಿಗೆ ಮದುವೆ ಮುದ್ರೆ ಒತ್ತಿದ ಸಲಿಂಗ ಜೋಡಿ


 ಮಹಾರಾಷ್ಟ್ರ :ಪ್ರೀತಿಗೆ ಯಾವುದೇ ಧರ್ಮ, ವಯಸ್ಸು, ಬಣ್ಣ, ಸೌಂದರ್ಯ ಮುಖ್ಯವಲ್ಲ ಅಂತಾ ಹೇಳುವ ಒಂದು ಕಾಲವಿತ್ತು. ಆದರೆ ಇದೀಗ ಪ್ರೀತಿಗೆ ಲಿಂಗವೂ ಮುಖ್ಯವಲ್ಲ ಎನ್ನುವ ಕಾಲಘಟ್ಟದಲ್ಲಿ ನಾವಿದ್ದೇವೆ. ಹೊರದೇಶದಲ್ಲಿ ಆಗುತ್ತಿದ್ದ ಸಲಿಂಗಕಾಮಿಗಳ ಮದುವೆ ಇದೀಗ ನಮ್ಮ ಭಾರತ ದೇಶದಲ್ಲೂ ನಡೆಯುತ್ತಿದೆ. ಅನೇಕ ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದು ಉಂಟು. ಇದಕ್ಕೆ ಉದಾಹರಣೆ ಮಹಾರಾಷ್ಟ್ರದ ಅವಿನಾಶ್ ಹಾಗೂ ವರುಣ್ ದಂಪತಿ.


6 ವರ್ಷಗಳ ಕಾಲ ಪ್ರೀತಿ ಮಾಡಿದ ಇವರು ಕುಟುಂಬದ ಒಪ್ಪಿಗೆ ಮೇರೆಗೆ ಲೋನಾವಳದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟರು.


ತಮ್ಮ ಸಂಬಂಧ ಬಗೆಗೆ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಾಕಿ ವರುಣ ಪೋಸ್ಟ್ ಮಾಡಿದ್ದಾರೆ. 6 ವರ್ಷಗಳ ದೀರ್ಘ ಪ್ರೇಮ ಸಂಬಂಧ ಮುಗ್ಗರಿಸಿದ್ದರಿಂದ ನಾನು ತೀವ್ರ ಬೇಸರದಲ್ಲಿದ್ದೆ. 2021ರಲ್ಲಿ ಪೋಷಕರನ್ನು ನೋಡಲು ಆಗಷ್ಟೇ ಭಾರತಕ್ಕೆ ಬಂದಿದ್ದ ನಾನು ಅವಿನಾಶ್ ಅವರನ್ನು ಭೇಟಿಮಾಡಿದೆ. ನಾನು ಗಂಭೀರವಾಗಿ ಸಂಗಾತಿಯ ಹುಡುಕಾಟದಲ್ಲಿದ್ದೆ.


ನಾನು ಮತ್ತು 37 ವರ್ಷದ ಅವಿನಾಶ್ ಪರಸ್ಪರ ಪ್ರೀತಿಯಲ್ಲಿ ಬಿದ್ದೆವು.ಆದರೆ ನಮ್ಮ ಸಂಬಂಧವನ್ನು ಮೊದಮೊದಲು ಎರಡೂ ಕಡೆಯ ಪೋಷಕರು ಒಪ್ಪಲಿಲ್ಲ. ಕೊನೆಗೆ ಒಪ್ಪಿಕೊಂಡರು. ಸಾಕಷ್ಟು ಕಲ್ಯಾಣಮಂಟಪಗಳು ಬಾಡಿಗೆ ಕೊಡಲು ನಿರಾಕರಿಸಿದವು. ಕೊನೆಗೆ ಲೋನಾವಾಲದಲ್ಲಿ ಸಪ್ತಪದಿಯನ್ನು ತುಳಿದೆವು.

150 ಜನರು ಅತಿಥಿಗಳು ನಮ್ಮ ಮದುವೆಗೆ ಬಂದು ಹಾರೈಸಿದರು. ಪೋಷಕರು ಮನದುಂಬಿ ಹಾರೈಸಿದರು. ಸಿಯಾರಾ (ನಾಯಿ)ಳೊಂದಿಗೆ ನಮ್ಮ ಪುಟ್ಟ ಸಂಸಾರ ನೌಕೆ ಸಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ

ಸುಳ್ಯ :ಹೊಳೆಯಲ್ಲಿ ಮುಳುಗಿ ಪುತ್ತೂರು ಮೂಲದ ಪ್ರವೀಣ್ ಜಿತೀಶ್ ಮೃತ್ಯು.

Posted by Vidyamaana on 2023-02-11 14:36:46 |

Share: | | | | |


ಸುಳ್ಯ :ಹೊಳೆಯಲ್ಲಿ ಮುಳುಗಿ ಪುತ್ತೂರು ಮೂಲದ ಪ್ರವೀಣ್ ಜಿತೀಶ್ ಮೃತ್ಯು.

ಪುತ್ತೂರು:ಸುಳ್ಯದ ಪಯಸ್ವಿನಿ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದ ಕೌಡಿಚ್ಚಾರ್ ಪರಿಸರದ ಆರು ಮಂದಿ ಯುವಕರಲ್ಲಿ ಈಜಲು ಬಾರದ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆ ನಡೆದಿದೆ.

ಕೆಯ್ಯರು ಗ್ರಾಮದ ದೇರ್ಲ ನಾರಾಯಣ ಪಾಟಳಿ-ಗೀತಾ ದಂಪತಿಯ ಕಿರಿಯ ಮಗ ಜಿತೇಶ್(19ವ. ಮತ್ತು ಪಡುವನ್ನೂರು ಗ್ರಾಮದ ಅಂಬಟೆಮೂಲೆ ಕೃಷ್ಣ ನಾಯ್ಕ-ದೇವಕಿ ದಂಪತಿಯ ಏಕೈಕ ಪುತ್ರಪ್ರವೀಣ್(19ವ.)ಮೃತಪಟ್ಟವರು.ಫೆ.11ರಂದು ಸಂಜೆ ಈ ಘಟನೆ ನಡೆದಿದೆ.ಸಂತೋಷ್ ಅಂಬಟೆಮೂಲೆ, ಸತ್ಯಾನಂದ ಚಂದುಕೂಡು, ಯುವರಾಜ ಅಂಬಟೆಮೂಲೆ, ನಿತೀಶ್ ಬಳ್ಳಿಕಾನ, ಜಿತೇಶ್ ದೇರ್ಲ ಮತ್ತು ಪ್ರವೀಣ್ ಅಂಬಟೆಮೂಲೆ ಇವರೆಲ್ಲರೂ ಸೇರಿ ಜತೆಯಾಗಿ ಮೆಷಿನ್ ಮೂಲಕ ಹುಲ್ಲು ಹೆರೆಯುವ ಕೆಲಸಕ್ಕೆ ಹೋಗುವವರಾಗಿದ್ದು ಫೆ.11ರಂದು ಕೆಡ್ಡಸದ ಪ್ರಯುಕ್ತ ಕೆಲಸಕ್ಕೆ ರಜೆ ಮಾಡಿದ್ದರು.ತಾವು ಒಟ್ಟಿಗೆ ಕೆಲಸಕ್ಕೆ ಹೋಗುವ ಕಾರಿನಲ್ಲಿಯೇ ಅವರು ಮಧ್ಯಾಹ್ನ ಜತೆಯಾಗಿ ಕಾರಿನಲ್ಲಿ ಸುಳ್ಯಕ್ಕೆ ಹೋಗಿದ್ದರು.ಸುಳ್ಯದ ಓಡಬಾಯಿಯಲ್ಲಿ ಅಗ್ನಿಶಾಮಕ ಇಲಾಖೆಯ ಸಮೀಪ ಕಾರನ್ನು ನಿಲ್ಲಿಸಿ, ಪಕ್ಕದಲ್ಲೇ ಇರುವ ತೂಗು ಸೇತುವೆಯಿಂದಾಗಿ ದೊಡ್ಡರಿಗೆಹೋಗಿದ್ದರು.ಸತ್ಯಾನಂದ ಚಂದುಕೂಡ್ಲುರವರ ಸಂಬಂಧಿ ಗೋವಿಂದ ನಾಯ್ಕರ ಮನೆ ದೊಡೇರಿಯಲ್ಲಿದ್ದುಈ ಆರು ಜನ ಯುವಕರು ಕೂಡಾ ಅಲ್ಲಿಗೆ ಹೋಗಿ ಮನೆಯವರ ಜತೆ ಮಾತನಾಡಿ, ಅಲ್ಲಿ ಶರಬತ್ತು ಕುಡಿದು ಅಲ್ಲಿಂದ ಹೊರಟು ಬಂದಿದ್ದರು.ಹಾಗೆ ಹೊರಟು ಬಂದ ಅವರು ತೂಗು ಸೇತುವೆಯಲ್ಲಿ ಬಾರದೇ ಪಕ್ಕದಲ್ಲೇ ಇರುವ ಪಯಸ್ವಿನಿ ನದಿಗೆ ಇಳಿದು ಸ್ನಾನ ಮಾಡಲು ಮುಂದಾದರು.ಅವರಲ್ಲಿ ಈಜಲು ತಿಳಿದಿದ್ದ ನಿತೀಶ್‌ರವರು ನೀರಿಗಿಳಿದು ಮುಂದೆ ಹೋಗತೊಡಗಿದಾಗ ಪ್ರವೀಣ ಮತ್ತು ಜಿತೇಶ್ ಅವರೂ ನೀರಿಗಿಳಿದರು.ನಿತೀಶ್‌ರವರು ಹೊಳೆಯ ಬದಿಯಿಂದಾಗಿ ಹೋದರು.ಪ್ರವೀಣ್ ಮತ್ತು ಜಿತೇಶ್‌ರವರು ನೀರು ತುಂಬಿದ ಗುಂಡಿಯ ಮಧ್ಯದಿಂದಾಗಿ ಹೋಗುತ್ತಿದ್ದ ವೇಳೆ ಪ್ರವೀಣ್‌ರವರು ನೀರಿನಲ್ಲಿ ಮುಳುಗಿದರು.ಆತ ಬೊಬ್ಬೆ ಹೊಡೆದಾಗ ಜೊತೆಯಲ್ಲೇ ಇದ್ದ ಜಿತೇಶ್‌ರವರು ಪ್ರವೀಣ್‌ರವರನ್ನು ಎಳೆಯಲು ಮುಂದಾದಾಗ ಇಬ್ಬರೂ ನೀರಿನಲ್ಲಿ ಮುಳುಗಿದರು.ಜತೆಗಿದ್ದ ನಾಲ್ವರು ಯುವಕರೂ ಕೂಡಲೇ ನೀರಿಗೆ ಇಳಿದು ಜಿತೇಶ್ ಮತ್ತು ಪ್ರವೀಣ್ ಅವರನ್ನು ರಕ್ಷಿಸಲು ಪ್ರಯತ್ನಿಸಿದರೂ ಸಾಧ್ಯವಾಗದೆ ದಡದಲ್ಲಿ ನಿಂತು ಜೋರಾಗಿ ಬೊಬ್ಬೆ ಹೊಡೆದರು.ಈ ಬೊಬ್ಬೆ ಕೇಳಿ,ನದಿಯ ಪಕ್ಕದಲ್ಲಿ ಮನೆಯಿರುವ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಕಲಾವತಿ ದೊಡೇರಿಯವರ ಪುತ್ರ ಜಯಪ್ರಕಾಶರು ಓಡಿ ಬಂದರು.ಬೊಬ್ಬೆ ಹೊಡೆಯುತ್ತಿದ್ದ ಯುವಕರಿಂದ ವಿಷಯ ತಿಳಿದು ಜಯಪ್ರಕಾಶರು ನೀರಿಗೆ ಧುಮುಕಿದರು.ಆದರೆ ಆ ವೇಳೆಗಾಗಲೇ ಜಿತೇಶ್ ಮತ್ತು ಪ್ರವೀಣ್ ನೀರಲ್ಲಿ ಪೂರ್ಣವಾಗಿ ಮುಳುಗಿದ್ದು ಜಯಪ್ರಕಾಶರು ಅವರನ್ನು ನೀರಿನಿಂದಮೇಲಕ್ಕೆತ್ತಿದರು.ಆದರೆ ಆ ವೇಳೆಗಾಗಲೇ ಅವರಿಬ್ಬರ ಪ್ರಾಣ ಪಕ್ಷಿ ಹಾರಿಹೋಗಿತ್ತು.ಇಬ್ಬರೂ ಪರಸ್ಪರ ಹಿಡಿದುಕೊಂಡಿದ್ದ ಭಂಗಿಯಲ್ಲೇ ಕೊನೆಯುಸಿರೆಳೆದಿದ್ದರು.ಬಳಿಕ ಮೃತ ದೇಹಗಳನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತರಲಾಯಿತು. ಪೊಲೀಸರು ಬಂದ ಬಳಿಕ ಪೋಸ್ಟ್ ಮಾರ್ಟಂ ನಡೆಸಿ ಮೃತದೇಹಗಳನ್ನು ಯುವಕರ ಮನೆಯವರಿಗೆ ಹಸ್ತಾಂತರಿಸಲಾಯಿತು.


ಮೃತ ಜಿತೇಶ್‌ರವರು ತಂದೆ, ತಾಯಿ, ಅಣ್ಣ ಹಾಗೂ ಸಹೋದರಿಯನ್ನು ಅಗಲಿದ್ದಾರೆ.ಮೃತ ಪ್ರವೀಣ ಅವರು ತಂದೆ,ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ.ಈ ದುರ್ಘಟನೆಯಿಂದಾಗಿ ಎರಡೂ ಮನೆಗಳಲ್ಲಿ ಸ್ಮಶಾನ ಮೌನ ಆವರಿಸಿದೆ.



Leave a Comment: