ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಸುದ್ದಿಗಳು News

Posted by vidyamaana on 2024-07-03 11:16:18 |

Share: | | | | |


ವಿ.ಹಿಂ.ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿ ನೇಮಕ

ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.

ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.

 Share: | | | | |


ಕೋಳಿ ಅಂಕ ಕಾನೂನು ಬಾಹಿರ – ಅನುಮತಿ ಕೇಳ್ಕೊಂಡು ಠಾಣೆಗೆ ಬರ್ಬೇಡಿ ಖಡಕ್ ಸೂಚನೆ ಕೊಟ್ರು SP ರಿಷ್ಯಂತ್

Posted by Vidyamaana on 2024-01-30 16:36:27 |

Share: | | | | |


ಕೋಳಿ ಅಂಕ ಕಾನೂನು ಬಾಹಿರ – ಅನುಮತಿ ಕೇಳ್ಕೊಂಡು ಠಾಣೆಗೆ ಬರ್ಬೇಡಿ ಖಡಕ್ ಸೂಚನೆ ಕೊಟ್ರು SP ರಿಷ್ಯಂತ್

ಮಂಗಳೂರು: ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಎಂದು ದ.ಕ. ಎಸ್ ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ.


ಸುದ್ದಿಗೋಷ್ಠಿ ನಡೆಸಿದ ಅವರು ಕೋಳಿ ಅಂಕ ನಡೆಸಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಹಾಗಾಗಿ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ

ಅಂತಾರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ಹತ್ಯೆ: ಗೆಳತಿ ಮತ್ತು ಆಕೆಯ ಪ್ರಿಯಕರ ಬಂಧನ

Posted by Vidyamaana on 2024-04-01 04:49:58 |

Share: | | | | |


ಅಂತಾರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ಹತ್ಯೆ: ಗೆಳತಿ ಮತ್ತು ಆಕೆಯ ಪ್ರಿಯಕರ ಬಂಧನ

ರಾಂಚಿ: ಅಂತಾರಾಷ್ಟ್ರೀಯ ಪ್ಯಾರಾ ಬ್ಯಾಡ್ಮಿಂಟನ್ ಆಟಗಾರ ಪ್ರಶಾಂತ್ ಕುಮಾರ್ ಸಿನ್ಹಾರನ್ನು ಹತ್ಯೆ ಮಾಡಿದ ಆರೋಪದ ಮೇಲೆ ಮಾಜಿ ಗೆಳತಿ ಕಾಜಲ್ ಮತ್ತು ಆಕೆಯ ಪ್ರಿಯಕರನನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಶಾಂತ್ ಕುಮಾರ್ ಸಿನ್ಹಾ ಹತ್ಯೆ ಮಾಡಿ ಬಳಿಕ ಶವವನ್ನು ಜಾರ್ಖಂಡ್‌ನ ಹಜಾರಿಬಾಗ್‌ನ ಛದ್ವಾ ಸೇತುವೆಯ ಕೆಳಗೆ ಎಸೆಯಲಾಗಿತ್ತು.



ಶ್ರೀನಿವಾಸ ಕಲ್ಯಾಣೋತ್ಸವ : ಡಿ.22 ರಂದು ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರ ವಿತರಣೆ

Posted by Vidyamaana on 2023-12-22 10:19:49 |

Share: | | | | |


ಶ್ರೀನಿವಾಸ ಕಲ್ಯಾಣೋತ್ಸವ : ಡಿ.22 ರಂದು ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರ ವಿತರಣೆ

ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ  ಡಿ.24 ಮತ್ತು 25 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಆಮಂತ್ರಣ ಪತ್ರ ವಿತರಣೆ ಡಿ.22ರಂದು ಪುತ್ತೂರು ಪೇಟೆಯಲ್ಲಿ ಜರಗಲಿದೆ. 


ಡಿ.22 ಶುಕ್ರವಾರದಂದು ಸಂಜೆ 4.30 ಕ್ಕೆ ದರ್ಬೆ ವೃತ್ತದಿಂದ ಪುತ್ತೂರು ಪೇಟೆಯಲ್ಲಿ ಆಮಂತ್ರಣ ವಿತರಣೆ ಜರುಗಲಿದೆ. 


ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಬಂಧುಗಳು ಆಮಂತ್ರಣ ಪತ್ರ ವಿತರಣೆಯಲ್ಲಿ ಪಾಲ್ಗೊಳ್ಳುವಂತೆ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.

ಬಿಗ್ ಬಾಸ್‌ನಲ್ಲಿ ಪ್ರತಾಪ್ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ಬೋಳಿಸಿದ ಕಡಬದ ಯುವಕ

Posted by Vidyamaana on 2024-01-30 07:25:20 |

Share: | | | | |


ಬಿಗ್ ಬಾಸ್‌ನಲ್ಲಿ ಪ್ರತಾಪ್ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ಬೋಳಿಸಿದ ಕಡಬದ ಯುವಕ

ಕಡಬ: ಬಿಗ್ ಬಾಸ್ ಸೀಸನ್ 10 ರಲ್ಲಿ ಡ್ರೋಣ್ ಪ್ರತಾಪ್ ಸೋತಿದ್ದಕ್ಕೆ ಕಡಬದ ಯುವಕ ಝೈನುಲ್ ಆಬಿದ್ ಎಂಬ ಯುವಕ ಅರ್ಧ ಗಡ್ಡ, ಮೀಸೆ ತೆಗೆದು ವೈರಲ್ ಆಗಿದ್ದಾನೆ.ಕಡಬ ತಾಲೂಕಿನ ಬಂಟ್ರ ಗ್ರಾಮದ ಪಾಲೆತ್ತಡ್ಕ ನಿವಾಸಿ ಝೈನುಲ್ ಆಬಿದ್, ಈ ಸಲದ ಬಿಗ್ ಬಾಸ್ ಸೀಸನ್‌ನಲ್ಲಿ ಡ್ರೋಣ್ ಪ್ರತಾಪ್ ವಿನ್ನರ್ ಆಗಿ ಹೊರಬರಲಿದ್ದಾರೆ. ಪ್ರತಾಪ್ ಏನಾದರೂ ಸೋತರೆ ಅರ್ಧ ಗಡ್ಡ, ಮೀಸೆ ತೆಗೆಯುವುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ಚಾಲೆಂಜ್ ಹಾಕಿ ವೀಡಿಯೋ ಷೇರ್ ಮಾಡಿದ್ದನು. ಜೊತೆಗೆ ಹಾಗಾದರೆ ಹಸಿ ಮೆಣಸಿನಕಾಯಿ ತಿನ್ನುವುದಾಗಿಯೂ ಮತ್ತೊಂದು ವೀಡಿಯೋ ಹರಿಯಬಿಟ್ಟಿದ್ದನು.


ಕೊನೆಗೂ ಬಿಗ್ ಬಾಸ್‌ನಲ್ಲಿ ಕಾರ್ತಿಕ್ ವಿನ್ನರ್ ಆಗಿ ಹೊರ ಬಂದಿದ್ದು, ಪ್ರತಾಪ್ ರನ್ನರ್ ಅಪ್ ಅಷ್ಟೇ ಆಗಿದ್ದಾರೆ. ಫಲಿತಾಂಶ ಹೊರ ಬರುತ್ತಲೇ ಆಬಿದ್ ತಾನು ಹಾಕಿದ ಚಾಲೆಂಜ್‌ನಂತೆ ಅರ್ಧ ಗಡ್ಡ ಮೀಸೆ ಬೋಳಿಸಿಕೊಂಡು ಹಸಿ ಮೆಣಸಿನಕಾಯಿ ತಿಂದು ವೀಡಿಯೋ ಮಾಡಿ ಅಪ್ಲೋಡ್ ಮಾಡಿದ್ದಾನೆ. ವೀಡಿಯೋ ವೈರಲ್ ಆಗಿದೆ.

ಬೆಳ್ತಂಗಡಿ : ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ-2023

Posted by Vidyamaana on 2023-09-16 20:07:30 |

Share: | | | | |


ಬೆಳ್ತಂಗಡಿ : ದ.ಕ ಜಿಲ್ಲಾ ನಾಯಕರ ಉಪಸ್ಥಿತಿಯಲ್ಲಿ ಎಸ್‌ಡಿಪಿಐ ಕುವೆಟ್ಟು ಬ್ಲಾಕ್ ಸಮಾಗಮ-2023

ಬೆಳ್ತಂಗಡಿ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಸಮಿತಿ ಕೈಗೊಂಡ ಅಭಿಯಾನವಾದ ಬ್ಲಾಕ್ ಸಮಾಗಮದ ಅಂಗವಾಗಿ ಎಸ್‌ಡಿಪಿಐ ಜಿಲ್ಲಾ ನಿಯೋಗದ ತಂಡ ಕುವೆಟ್ಟು ಬ್ಲಾಕ್ ಸಮಿತಿ ಹಾಗೂ ಬೂತ್ ಸಮಿತಿಗಳ ಪದಾಧಿಕಾರಿಗಳನ್ನು ಭೇಟಿಯಾಗಿ ಮುಕ್ತ ಚರ್ಚೆಯನ್ನು ನಡೆಸಿದರು.

         ಮುಖ್ಯ ಅತಿಥಿಗಳಾಗಿ ಎಸ್‌ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಲ್ಫೋನ್ಸ್ ಫ್ರಾಂಕೋ, ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು, ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಆಗಮಿಸಿದ್ದರು.

        ರಾಷ್ಟ್ರೀಯ ಕಾರ್ಯದರ್ಶಿಗಳಾದ ಅಲ್ಫೋನ್ಸ್ ಫ್ರಾಂಕೋ ಪಕ್ಷದ ಕಾರ್ಯ ಚಟುವಟಿಕೆ ಮತ್ತು ಮುಂದಿನ ಯೋಜನೆಗಳ ಬಗ್ಗೆ ವಿವರಿಸಿ ಮಾತನಾಡಿ, ಎಲ್ಲಾ  ಪದಾಧಿಕಾರಿಗಳು, ನಾಯಕರು ಪಕ್ಷದ ಪ್ರತಿಯೊಂದು ಚಟುವಟಿಕೆಗಳಲ್ಲಿ ಭಾಗವಹಿಸಿ ಪಕ್ಷವನ್ನು ಇನ್ನಷ್ಟು ಬಲಿಷ್ಟಗೊಳಿಸಲು ಕರೆ ನೀಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶ್ರಫ್ ಅಡ್ಡೂರು ಅವರು ಸಮಾರೋಪ ಭಾಷಣ ಮಾಡಿದರು.

ಜಿಲ್ಲಾ ಕಾರ್ಯದರ್ಶಿ ಅಕ್ಬರ್ ಬೆಳ್ತಂಗಡಿ ಅವರು ಪಕ್ಷದ ಮುಂದಿನ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

        ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ನವಾಝ್ ಕಟ್ಟೆ, ಕಾರ್ಯದರ್ಶಿಗಳಾದ ಅಶ್ಫಾಕ್ ಪುಂಜಾಲಕಟ್ಟೆ, ನಿಸಾರ್ ಕುದ್ರಡ್ಕ, ಕ್ಷೇತ್ರ ಸಮಿತಿ ಪದಾಧಿಕಾರಿಗಳು, ಕುವೆಟ್ಟು ಬ್ಲಾಕ್ ಸಮಿತಿ ಪದಾಧಿಕಾರಿಗಳು, ಗ್ರಾಮ ಸಮಿತಿ ಪದಾಧಿಕಾರಿಗಳು ಹಾಗೂ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

     ಕುವೆಟ್ಟು ಬ್ಲಾಕ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ರೌಫ್ ಪುಂಜಾಲಕಟ್ಟೆ ಸ್ವಾಗತಿಸಿ,

ಜೊತೆ ಕಾರ್ಯದರ್ಶಿ ಆಸೀಫ್ ಬಂಗೇರುಕಟ್ಟೆ ಧನ್ಯವಾದಗೈದರು.

ಜಾರಿಯಾಯ್ತು ಕಾಂಗ್ರೆಸ್ ಗ್ಯಾರಂಟಿ - ವೈರಲ್ ಆಯ್ತು ಬಿಜೆಪಿಗೆ ಟಾಂಗ್ ನೀಡಿದ ಕೈ ಟ್ವೀಟ್

Posted by Vidyamaana on 2023-06-02 12:05:08 |

Share: | | | | |


ಜಾರಿಯಾಯ್ತು ಕಾಂಗ್ರೆಸ್ ಗ್ಯಾರಂಟಿ - ವೈರಲ್ ಆಯ್ತು ಬಿಜೆಪಿಗೆ ಟಾಂಗ್ ನೀಡಿದ ಕೈ ಟ್ವೀಟ್

ಬೆಂಗಳೂರು: ಕಾಂಗ್ರೆಸ್‌ ಪಕ್ಷವು ಪ್ರಣಾಳಿಕೆಯಲ್ಲಿ ಘೋಷಿಸಿದ ಎಲ್ಲ 5 ಗ್ಯಾರಂಟಿ ಯೋಜನೆಗಳನ್ನು ಸಹ ಪ್ರಸಕ್ತ ಆರ್ಥಿಕ ವರ್ಷದಲ್ಲಿಯೇ ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.


ಇದರ ಬೆನ್ನಲ್ಲೇ ಮಾಜಿ ಸಿಎಂ ಬೊಮ್ಮಾಯಿ ಸೇರಿ ವಿಪಕ್ಷ ಬಿಜೆಪಿ ನಾಯಕರನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯ ಸರಕಾರದ ಉಚಿತ ಯೋಜನೆಗಳನ್ನು ಎಲ್ಲರಿಗೂ ತಲುಪಲಿದೆ ಎಂದು ತಿಳಿಸಿದೆ. 


ನಳಿನ್ ಕುಮಾರ್ ಕಟೀಲ್ ಅವರೇ, ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!, ಬೊಮ್ಮಾಯಿ ಅವರೇ, ನಿಮ್ಮ ಮನೆಗೂ ಫ್ರೀ!, ಶೋಭಾ ಅವರೇ, ನಿಮಗೂ ಪ್ರಯಾಣ ಫ್ರೀ! ಸಿಟಿ ರವಿ ಅವರೇ, ನಿಮ್ಮ ಮನೆಯವರಿಗೂ ₹2000 ಫ್ರೀ ಎಂದು ಕಾಂಗ್ರೆಸ್  ಕುಟುಕಿದೆ. 


ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)! ಇದು ನಮ್ಮ ಗ್ಯಾರಂಟಿ. ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ ಎಂದು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.



Leave a Comment: