ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ಸುದ್ದಿಗಳು News

Posted by vidyamaana on 2024-07-24 17:19:41 |

Share: | | | | |


ಶಾಲಾ ಆವರಣದಲ್ಲಿ ಸಾರ್ವಜನಿಕ ಕೃಷ್ಣಾಷ್ಠಮಿ, ಗಣೇಶೋತ್ಸವ, ಹಬ್ಬಗಳ ಆಚರಣೆಗೆ ನಿರ್ಬಂಧ : ಬಿಜೆಪಿ ಆಡಳಿತಾವಧಿಯಲ್ಲೇ ಆದೇಶ

ರಾಜ್ಯದ ಸರಕಾರಿ ಶಾಲೆ ಮತ್ತು ಕಾಲೇಜು ಕ್ಯಾಂಪಸ್‌ ಗಳಲ್ಲಿ ಧಾರ್ಮಿಕ ಆಚರಣೆ ಸೇರಿದಂತೆ ಶೈಕ್ಷಣಿಕೇತರ ಚಟುವಟಿಕೆ ನಡೆಸದಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದ್ದು, ಇದು ಭಾರೀ ಸಂಚಲನವನ್ನೇ ಹುಟ್ಟುಹಾಕಿದೆ. ಇದರಿಂದ ಸಾರ್ವಜನಿಕ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಣೆಯ ಸಂಘಟಕರು ಗೊಂದಲದಲ್ಲಿದ್ದಾರೆ.

ಬೆಂಗಳೂರು ಶಾಲಾ ಶಿಕ್ಷಣ ಇಲಾಖೆ ಆಯುಕ್ತರ ಕಚೇರಿಯಿಂದ 2013ರ ಫೆ.7 ರಂದು ಮತ್ತು 2023ರ ಡಿ.1ರಂದು ರಾಜ್ಯದ ಎಲ್ಲ ಡಿಡಿಪಿಐ ಕಚೇರಿಗಳಿಗೆ ಖಾಸಗಿ ಕಾರ್ಯಕ್ರಮಗಳಿಗೆ ಶಾಲಾ ಕಟ್ಟಡ ಅಥವಾ ಶಾಲಾ ಮೈದಾನ ಅನುಮತಿ ನೀಡಬಾರದೆಂದು ಸುತ್ತೋಲೆ ಬಂದಿತ್ತು. ಈ ಆಧಾರದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಡಿಡಿಪಿಐ ವೆಂಕಟೇಶ್ ಪಟಗಾರ ಅವರು ಜು.16ರಂದು ಜ್ಞಾಪನಾ ಪತ್ರವನ್ನು ಎಲ್ಲ ಬಿಇಒಗಳಿಗೆ ರವಾನಿಸಿದ್ದಾರೆ.

ಜ್ಞಾಪನಾ ಪತ್ರದಲ್ಲಿ ಏನಿದೆ?

ಸರಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳಲ್ಲಿ, ಶಾಲಾ ಮೈದಾನ ಅಥವಾ ಆವರಣವನ್ನು ಶೈಕ್ಷಣಿಕೇತರ ಚಟುವಟಿಕೆ ಅಥವಾ ಉದ್ದೇಶಕ್ಕೆ ಬಳಸಬಾರದು ಮತ್ತು ಅನುಮತಿಯನ್ನು ನೀಡಬಾರದೆಂದು ಸೂಚಿಸಲಾಗಿದೆ. ಈ ಆದೇಶವನ್ನು ಉಲ್ಲಂಘಿಸಿದಲ್ಲಿ ಸಂಬಂಧಿತ ಶಾಲಾ ಮುಖ್ಯಸ್ಥರೇ ಹೊಣೆಯಾಗುತ್ತಾರೆ ಎಂದು ಜ್ಞಾಪನಾ ಪತ್ರದಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ.

ಬಿಜೆಪಿಯಿಂದ ಹೋರಾಟ :

ರಾಜ್ಯಾದ್ಯಂತ ಹಲವು ದಶಕಗಳಿಂದ ಶಾಲೆಯ ಕ್ಯಾಂಪಸ್, ಶಾಲಾ ಕಟ್ಟಡದಲ್ಲಿ ಕೃಷ್ಣಾಷ್ಟಮಿ, ಗಣೇಶೋತ್ಸವ, ಶಾರದೋತ್ಸವ ಆಚರಿಸಿಕೊಂಡು ಬರಲಾಗುತ್ತಿದೆ. ಆದರೆ ಈಗ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರ ರಾಜಕೀಯ ಮಾಡಲು ಹೊರಟಿದ್ದು, ಶಾಲಾ ವಠಾರದಲ್ಲಿ ಧಾರ್ಮಿಕ ಆಚರಣೆ ನಡೆಸದಂತೆ ಆದೇಶ ಹೊರಡಿಸಿದೆ. ಇದು ಖಂಡನೀಯವಾಗಿದ್ದು, ಈ ಹಿಂದೆ ನಿಗದಿತ ಸ್ಥಳದಲ್ಲೇ ಕಾರ್ಯಕ್ರಮ ಆಯೋಜಿಸುತ್ತೇವೆ. ಇದನ್ನು ತಡೆಯಲು ಬಂದರೆ ಸುಮ್ಮನಿರಲ್ಲ ಎಂದು ಬಿಜೆಪಿ ತಾಕೀತು ಮಾಡಿದೆ. ಇದೇ ರೀತಿ ಜಿಲ್ಲಾದ್ಯಂತ ಹೋರಾಟ ನಡೆಯುತ್ತಿದೆ.

ಬಿಜೆಪಿ ಸರಕಾರದಲ್ಲೇ ಆದೇಶ :

2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್ ಶೆಟ್ಟರ್ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು ಆದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಒ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ಈ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದು ಕಾವೇರತೊಡಗಿದೆ.

 Share: | | | | |


ಪುತ್ತೂರು ಅಕ್ರಮ ಸಕ್ರಮ ಸಮಿತಿ ರಚಿಸಿ ಸರಕಾರದ ಆದೇಶ

Posted by Vidyamaana on 2023-09-14 21:54:25 |

Share: | | | | |


ಪುತ್ತೂರು ಅಕ್ರಮ ಸಕ್ರಮ ಸಮಿತಿ ರಚಿಸಿ ಸರಕಾರದ ಆದೇಶ

ಮಂಗಳೂರು: ದ.ಕ. ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರದ ಬಗರ್ ಹುಕುಂ ಸಾಗುವಳಿ ಸಕ್ರಮೀಕರಣ(ಅಕ್ರಮ ಸಕ್ರಮ) ಸಮಿತಿಯನ್ನು ರಚಿಸಿ ಸರಕಾರ ಆದೇಶ ಹೊರಡಿಸಿದೆ.ಸಮಿತಿಯ ಅಧ್ಯಕ್ಷರಾಗಿ ಶಾಸಕ ಅಶೋಕ್ ಕುಮಾರ್ ರೈ, ಸಾಮಾನ್ಯ ಸದಸ್ಯರಾಗಿ ಎಂ ಮಹಮ್ಮದ್ ಬಡಗನ್ನೂರು, ಮಹಿಳಾ ಸದಸ್ಯರಾಗಿ ಶ್ರೀಮತಿ ರೂಪರೇಖಾ ಆಳ್ವ, ಪರಿಶಿಷ್ಟ ಜಾತಿ ಪ್ರವರ್ಗದಿಂದ ರಾಮಣ್ಣ ಪಿಲಿಂಜ, ಸದಸ್ಯ ಕಾರ್ಯದರ್ಶಿಯಾಗಿ ತಾಲೂಕಿನ ತಹಶೀಲ್ದಾರ್ ಅವರನ್ನು ನಾಮನಿರ್ದೇಶನ ಮಾಡಿ ಸರಕಾರ ಆದೇಶ ಹೊರಡಿಸಿದೆ.

ಬಂಟ್ವಾಳ ಕೆರೆ ನೀರಿನಲ್ಲಿ ಮುಳುಗಿ ಶಾಲಾ ವಿದ್ಯಾರ್ಥಿ ಅಝೀಂ ಮೃತ್ಯು

Posted by Vidyamaana on 2023-04-08 23:13:50 |

Share: | | | | |


ಬಂಟ್ವಾಳ ಕೆರೆ ನೀರಿನಲ್ಲಿ ಮುಳುಗಿ ಶಾಲಾ ವಿದ್ಯಾರ್ಥಿ ಅಝೀಂ ಮೃತ್ಯು

ಬಂಟ್ವಾಳ :ಬಿ ಸಿ ರೋಡು ಸಮೀಪದ ಮಿತ್ತಬೈಲು ನಿವಾಸಿ ಶಾಲಾ ಬಾಲಕನೋರ್ವ ಶನಿವಾರ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಏ :8 ರಂದು ವರದಿಯಾಗಿದ್ದು, ಮೃತದೇಹ ಶನಿವಾರ ತಡ ರಾತ್ರಿ ವೇಳೆಗೆ ಪತ್ತೆಯಾಗಿದೆ.

ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ, ಬಿ ಸಿ ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ (13) ಎಂಬಾತನೇ ಮೃತ ಬಾಲಕ. ಶನಿವಾರ ಮಧ್ಯಾಹ್ನದ ವೇಳೆಗೆ ಪಾಣೆಮಂಗಳೂರು ಅಜ್ಜಿ ಮನೆಗೆ ಬಂದಿದ್ದ ಬಾಲಕ ಅಲ್ಲಿ ತನ್ನ ಸ್ನೇಹಿತರೊಂದಿಗೆ ಇದ್ದುದನ್ನು ಆ ಪರಿಸರದ ಮಂದಿ ಗಮನಿಸಿದ್ದರು, ಆದರೆ ಮಧ್ಯಾಹ್ನದ ಬಳಿಕ ಬಾಲಕ ಹಠಾತ್ ಕಾಣೆಯಾಗಿದ್ದ. ಬಾಲಕನನ್ನು ಸಂಪರ್ಕಿಸಲು ಮನೆಮಂದಿ ಸಾಕಷ್ಟು ಪ್ರಯತ್ನಿಸಿದ್ದರೂ ಸಫಲರಾಗಿರಲಿಲ್ಲ ಎನ್ನಲಾಗಿದೆ. ಬಾಲಕನ ಕೈಯಲ್ಲಿದ್ದ ಮೊಬೈಲ್ ರಿಂಗಿಣಿಸುತ್ತಿದ್ದರೂ ಕರೆ ಸ್ವೀಕಾರ ಆಗದ ಹಿನ್ನಲೆಯಲ್ಲಿ ಆತಂಕಗೊಂಡ ಮನೆ ಮಂದಿ ಬಂಟ್ವಾಳ ನಗರ ಠಾಣೆಯಲ್ಲಿ ನಾಪತ್ತೆಯಾದ ಬಗ್ಗೆ ದೂರು ದಾಖಲಿಸಿದ್ದರು. ಪೊಲೀಸರು ಬಾಲಕನ ಕೈಯಲ್ಲಿದ್ದ ಮೊಬೈಲ್ ಟ್ರೇಸ್ ಮಾಡಿದಾಗ ದೊರೆತ ಮಾಹಿತಿಯಂತೆ ಕಳ್ಳಿಗೆ ಗ್ರಾಮದ ಕೆರೆಯ ಬಳಿ ಹುಡುಕಾಟ ನಡೆಸಿದಾಗ ಕೆರೆಯ ಮೇಲ್ಭಾಗದಲ್ಲಿ ಬಾಲಕ ಧರಿಸಿದ್ದ ವಸ್ತ್ರ, ಪಾದರಕ್ಷೆ ಹಾಗೂ ಮೊಬೈಲ್ ಪತ್ತೆಯಾಗಿದೆ. ಬಳಿಕ ಕೆರೆಯಲ್ಲಿ ಹುಡುಕಾಟ ನಡೆಸಿದಾಗ ಬಾಲಕನ ಮೃತದೇಹ ತಡರಾತ್ರಿ ವೇಳೆ ಪತ್ತೆಯಾಗಿದೆ.ಮೃತದೇಹವನ್ನು ನೀರಿನಿಂದ ಮೇಲಕ್ಕೆತ್ತಿ ಬಂಟ್ವಾಳ ಸರಕಾರಿ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಲಾಗಿದೆ.

ರಮ್ಯ ಪೋಯೆರಿಗೆ.. ಸುದ್ದಿ ಫೇಕ್ ಮಾರ್ರೆ – ನಟಿ ರಮ್ಯಾ ಯುರೋಪ್ ನಲ್ಲಿದ್ದಾರೆ

Posted by Vidyamaana on 2023-09-06 14:55:10 |

Share: | | | | |


ರಮ್ಯ ಪೋಯೆರಿಗೆ.. ಸುದ್ದಿ ಫೇಕ್ ಮಾರ್ರೆ  – ನಟಿ ರಮ್ಯಾ ಯುರೋಪ್ ನಲ್ಲಿದ್ದಾರೆ

ಬೆಂಗಳೂರು: ಮೋಹಕ ತಾರೆ ರಮ್ಯಾ ಅಭಿಮಾನಿಗಳು ಬುಧವಾರ (ಸೆ.6 ರಂದು) ಶಾಕ್ ಗೆ ಒಳಗಾಗಿದ್ದಾರೆ. ನಟಿ ರಮ್ಯಾ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎನ್ನುವ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ರಮ್ಯಾ ಇದ್ದಕ್ಕಿದ್ದಂತೆ ಟ್ರೆಂಡ್ ಆಗಿದ್ದಾರೆ.


ಮೋಹಕ ತಾರೆ ರಮ್ಯಾ ಕಳೆದ ಕೆಲ ಸಮಯದಿಂದ ಚಿತ್ರರಂಗದಿಂದ ದೂರವಾಗಿದ್ದಾರೆ. ಇತ್ತೀಚೆಗೆ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರು. ಡಾಲಿ ಧನಂಜಯ ಅವರ ಸಿನಿಮಾದಲ್ಲಿ ರಮ್ಯಾ ಕಾಣಿಸಿಕೊಳ್ಳಲಿದ್ದಾರೆ. ಇದರೊಂದಿಗೆ ತಮ್ಮ ಬ್ಯಾನರ್ ನಡಿಯಲ್ಲಿ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ.


ಈ ನಡುವೆ ಬುಧವಾರ ಅವರು ಹಠಾರ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಮಿಳು ಸೋಶಿಯಲ್ ‌ಮೀಡಿಯಾದ ಕೆಲ ಪೇಜ್ ಗಳಲ್ಲಿ ಸುದ್ದಿ ಹರಿದಾಡಿದೆ.ಇದನ್ನು ಕೇಳಿ ಇತ್ತ ಕರ್ನಾಟಕದಲ್ಲಿ ರಮ್ಯಾ ಅಭಿಮಾನಿಗಳು ಆಘಾತ ವ್ಯಕ್ತಪಡಿಸಿದ್ದರು. ಈ ಸುದ್ದಿ ವೈರಲ್ ಆಗುತ್ತಿದ್ದಂತೆ ಇದಕ್ಕೆ ಸ್ಪಷ್ಟನೆ ಸಿಕ್ಕಿದೆ.


ಇದೊಂದು ಸುಳ್ಳು ಸುದ್ದಿ ರಮ್ಯಾ ಅವರು ಆರಾಮವಾಗಿ ಯೂರೋಪ್ ನಲ್ಲಿದ್ದಾರೆ ಎಂದು ಆಪ್ತ ಮೂಲಗಳಿಂದ ತಿಳಿದುಬಂದಿದೆ.

ಸುಳ್ಳು ಸುದ್ದಿ ಹಬ್ಬಿದ್ದೇಗೆ?:


ಕಾಲಿವುಡ್ ಸಿನಿಮಾರಂಗ ನಟಿ ರಮ್ಯಾ ಎನ್ನುವವರು ನಿಧನರಾಗಿದ್ದಾರೆ. ಇದೇ ಹೆಸರಿನೊಂದಿಗೆ ಕೆಲವರು ಕನ್ನಡದ ನಟಿ ರಮ್ಯಾ ಅವರ ಫೋಟೋವನ್ನು ಬಳಸಿಕೊಂಡು ಅವರು ‌ನಿಧನರಾಗಿದ್ದಾರೆ ಎಂದು ಕೆಲವರು ಟ್ವೀಟ್ ಮಾಡಿದ್ದಾರೆ. ಎಲ್ಲಿಯವರೆಗೆ ಅಂದರೆ ಸಿನಿಮಾರಂಗದ ಟ್ವಿಟರ್ ಪೇಜ್ ಗಳಾದ ಎಸ್ಎಸ್ ಸಂಗೀತ ಮತ್ತು ದಿನಕರನ್ ಅವರು ಕೂಡ ರಮ್ಯಾ ಅವರ ಫೋಟೋ ಹಂಚಿಕೊಂಡಿದ್ದರು.


ಈ ಸುಳ್ಳು ಸುದ್ದಿಯನ್ನು ಹಬ್ಬಿಸಿದ ತಮಿಳು ಮೀಡಿಯಾಗಳ ವಿರುದ್ದ ರಮ್ಯಾ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಮ್ಯಾ ಸದ್ಯ ಸ್ವಿಜರ್ಲ್ಯಾಂಡ್ ನಲ್ಲಿದ್ದಾರೆ.

ಭ್ರಷ್ಟಾಚಾರ ನಿರ್ಮೂಲನೆ-ಸರ್ಕಾರಿ ಮೆಡಿಕಲ್ ಕಾಲೇಜು-ವಿಟ್ಲಕ್ಕೆ ತಾಲೂಕು ಕೇಂದ್ರ : ಪುತ್ತಿಲ ‍ಪ್ರಣಾಳಿಕೆ ಬಿಡುಗಡೆ

Posted by Vidyamaana on 2023-04-26 09:59:06 |

Share: | | | | |


ಭ್ರಷ್ಟಾಚಾರ ನಿರ್ಮೂಲನೆ-ಸರ್ಕಾರಿ ಮೆಡಿಕಲ್ ಕಾಲೇಜು-ವಿಟ್ಲಕ್ಕೆ ತಾಲೂಕು ಕೇಂದ್ರ : ಪುತ್ತಿಲ ‍ಪ್ರಣಾಳಿಕೆ ಬಿಡುಗಡೆ

ಪುತ್ತೂರು: ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ರವರು ಹಿಂದುತ್ವದ ರಕ್ಷಣೆ ಜೊತೆಗೆ ಭ್ರಷ್ಟಾಚಾರ ರಹಿತ, ಜನಸ್ನೇಹಿ ಅಡಳಿತ ನೀಡುವ ಭರವಸೆಯ ಜೊತೆಗೆ 31 ವಿಷಯಾಧಾರಿತ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದರು.

ದರ್ಬೆಯ ಸುಭದ್ರ ಕಲ್ಯಾಣ ಮಂಟಪದ ಬಳಿ ಪ್ರಣಾಳಿಕೆ ಬಿಡುಗಡೆಗೊಳಿಸಲಾಯಿತು.

ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ, ಸುನಿಲ್ ಬೋರ್ಕರ್, ಭಾಸ್ಕರ್ ಆಚಾರ್ಯ ಇಂದಾರು, , ಸೇಡಿಯಾಪು ಜನಾರ್ದನ ಭಟ್, ಡಾ.ಗಣೇಶ್ ಪ್ರಸಾದ್ ಮುದ್ರಾಜೆ, ಪ್ರಸನ್ನ ಕುಮಾರ್ ಮಾರ್ತಾ, ಸ್ನೇಹ ಸಿಲ್ಕ್ ನ ಸತೀಶ್ ಕುಮಾರ್, ನಿವೃತ್ತ ತಹಸೀಲ್ದಾರ್ ಮೋನಪ್ಪ ಪುರುಷ, ನಿವೃತ್ತ ಸೇನಾನಿ ಚಂದಪ್ಪ ಮೂಲ್ಯ, ಕುಶಾಲಪ್ಪ ಗೌಡ ಬಳಕ್ಕ, ರಾಜಶೇಖರ್ ಉದ್ಯಮಿ ಬನ್ನೂರು, ನಗರ ಯುವ ಮೋರ್ಚಾದ ಮಾಜಿ ಅಧ್ಯಕ್ಷ ಪ್ರವೀಣ್ ಭಂಡಾರಿ, ಮರದಮುತ್ತು ಕೌಡಿಚ್ಚಾರ್, ಪಡ್ನೂರು ಶ್ರೀರಾಮ ಯುವಕ ಮಂಡಲದ ಲೋಕೇಶ್, ಅರುಣ್ ಇಂಡಸ್ಟ್ರೀಸ್ ಅರುಣ್ ಕುಮಾರ್ ರೈ ಡಿಂಬ್ರಿ, ಸಾಯಿಲಕ್ಷ್ಮೀ ಇಂಡಸ್ಟ್ರೀಸ್ ಮಾಲಕ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

ಪ್ರಣಾಳಿಕೆ ಸಿದ್ಧಪಡಿಸುವಲ್ಲಿ ಸತೀಶ್ ರೈ ನೀರ್ಪಾಡಿ, ಪ್ರಮೋದ್ ರೈ, ಮನ್ನಥ ಶೆಟ್ಟಿ ಸಹಕರಿಸಿದರು.

ಪ್ರಣಾಳಿಕೆಯಲ್ಲಿ ಏನಿದೇ..!!??

ಪುತ್ತೂರು ವಿಧಾನಸಭಾ ಕ್ಷೇತ್ರದ ಎಲ್ಲಾ ಸರಕಾರಿ ಕಛೇರಿಗಳಲ್ಲಿ ಭ್ರಷ್ಟಾಚಾರ/ ಲಂಚ ರಹಿತ ಜನಸ್ನೇಹಿ ಆಡಳಿತ ವ್ಯವಸ್ಥೆ ಜನ ವಿರೋಧಿ ಕಾನೂನುಗಳ ರದ್ದತಿಗೆ ಕ್ರಮ

ಪುತ್ತೂರನ್ನು ಜಿಲ್ಲಾ ಕೇಂದ್ರವಾಗಿಸಲು ಹಾಗೂ ಸಂಬಂಧಿಸಿದ ಎಲ್ಲಾ ವ್ಯವಸ್ಥೆಗಳ ಸ್ಥಳಾಂತರಕ್ಕೆ ಕ್ರಮ

ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ಹಾಗೂ ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸಲು ಎಲ್ಲಾ ಕ್ರಮ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲು ಕ್ರಮ

ವಿಟ್ಲವನ್ನು ತಾಲೂಕು ಕೇಂದ್ರ ಮಾಡುವ ಸಂಕಲ್ಪ – ಶಾಸಕರ ಕಛೇರಿ ಪ್ರಾರಂಭ ಹಾಗೂ ವಾರದಲ್ಲಿ ಎರಡು ದಿನ ಈ ಕಛೇರಿಯಿಂದ ಕಾರ್ಯ ನಿರ್ವಹಣೆ.

400KV ಉಡುಪಿ – ಕಾಸರಗೋಡು ವಿದ್ಯುತ್ ಮಾರ್ಗವು ರೈತರ ಜಮೀನಿನಲ್ಲಿ ಹಾದು ಹೋಗದಂತೆ ಕ್ರಮ.

ಅಡಿಕೆ, ತೆಂಗು, ರಬ್ಬರ್, ಕೋಕೋ ಮುಂತಾದ ಬೆಳೆಗಳ ಮೌಲ್ಯವರ್ಧನೆ, ರೋಗ ನಿರ್ವಹಣೆ, ಸಂಶೋಧನೆಗೆ ಕ್ರಮ

ವ್ಯವಸ್ಥಿತವಾಗಿ ಕ್ಷೇತ್ರದಾದ್ಯಂತ ಅಣೆಕಟ್ಟುಗಳ ನಿರ್ಮಾಣ, ನಿರ್ವಹಣೆಗೆ ಕ್ರಮ

11E ನಕ್ಷೆ ಶುಲ್ಕ ಕಡಿತ, ಅಕ್ರಮ ಸಕ್ರಮ ಪ್ಲಾಟಿಂಗ್ ಸಮಸ್ಯೆಗೆ ಪರಿಹಾರ, ಅಕ್ರಮ ಸಕ್ರಮ, ಕುಮ್ಕಿ ಹಕ್ಕು 94c, 94CC ಮಂಜೂರಾತಿಗೆ ಕ್ರಮ, ಭೂ ಪರಿವರ್ತನೆ ನಿಯಮ ಸರಳೀಕರಣ ಮತ್ತು ಶೀಘ್ರ ಅನುಮತಿಗೆ ವ್ಯವಸ್ಥೆ

ನಗರ ಪ್ರದೇಶದಲ್ಲಿ ಕಟ್ ಕನ್ವರ್ಷನ್ ಸಮಸ್ಯೆ ಪರಿಹಾರ, ನಿವೇಶನ ರಹಿತರಿಗೆ ಅಪಾರ್ಟ್‌ಮೆಂಟ್‌ ನಿರ್ಮಾಣಕ್ಕೆ ಆದ್ಯತೆ ಹಾಗೂ ಖಾಸಗಿ ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಟ್ರಾಫಿಕ್ ಸಮಸ್ಯೆಗೆ ಪರಿಹಾರ

ಪ್ರಾಕೃತಿಕ ಸಮತೋಲನಕ್ಕೆ ಪರಿಸರ ಸ್ನೇಹಿ ಸಸ್ಯಗಳ ನಾಟಿ ಬಗ್ಗೆ ಕ್ರಮ

ನಗರ ಪ್ರದೇಶಕ್ಕೆ ಸೂಕ್ತ ಒಳಚರಂಡಿ ವ್ಯವಸ್ಥೆ

ಕ್ಷೇತ್ರದಾದ್ಯಂತ ಶುದ್ಧ ಕುಡಿಯುವ ನೀರಿನ ಪೂರೈಕೆಗೆ ಕ್ರಮ

ತುಳುನಾಡಿನ ಕ್ರೀಡೆ, ಕಲೆ, ಸಂಸ್ಕೃತಿ ಪ್ರೋತ್ಸಾಹಕ್ಕೆ ಪ್ರತ್ಯೇಕ ಅಕಾಡೆಮಿ ಸ್ಥಾಪನೆ. ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿಸಲು ಪ್ರಯತ್ನ

ಉಚಿತ ಶಿಕ್ಷಣ ಒದಗಿಸುವ ಸರಕಾರಿ ಶಾಲೆಗಳ ಮತ್ತು ಅಂಗನವಾಡಿ ಕೇಂದ್ರಗಳ ಅಭಿವೃದ್ಧಿಗೆ ಕ್ರಮ

ಕ್ಷೇತ್ರದ ವ್ಯಾಪ್ತಿಯಲ್ಲಿ ಐಟಿ ಹಬ್ ಸ್ಥಾಪಿಸಿ, ತಾಲೂಕು ಕೇಂದ್ರದಲ್ಲಿ ಉದ್ಯೋಗ ಮೇಳ ಯೋಜನೆಗೆ ಕ್ರಮ

ಹೋಬಳಿಗೊಂದು ಕೈಗಾರಿಕಾ ವಲಯ ರಚಿಸಿ, ವಿವಿಧ ಕೈಗಾರಿಕೆಗಳ ಸ್ಥಾಪನೆಗೆ ಆದ್ಯತೆ.

ದೇಶೀಯ ಗೋ ತಳಿಗಳ ಸಂರಕ್ಷಣೆ, ಗೋಶಾಲೆಗಳ ಸ್ಥಾಪನೆ, ಪಶುಪಾಲನೆಗೆ ಪ್ರೋತ್ಸಾಹ.

ಎಂಡೋಸಲ್ಫಾನ್ ಸಂತ್ರಸ್ತರ ಆರೈಕೆ, ಕಲ್ಯಾಣಕ್ಕೆ ಸೂಕ್ತ ಯೋಜನೆ.

.ರಿಕ್ಷಾ/ಟ್ಯಾಕ್ಸಿ ವಾಹನಗಳ ಚಾಲಕ ಮಾಲಕರ ಸಮಸ್ಯೆಗಳಿಗೆ ಪರಿಹಾರ.

ಪುತ್ತೂರು ತಾಲೂಕು ಕೇಂದ್ರದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ.

ಕೋಟಿ ಚೆನ್ನಯ ಥೀಮ್ ಪಾರ್ಕ್ ನಿರ್ಮಾಣ.

ವಿಟ್ಲ ಉಪ್ಪಿನಂಗಡಿಯಲ್ಲಿ ಅಗ್ನಿಶಾಮಕ ಠಾಣೆ ರಚನೆಗೆ ಕ್ರಮ.

ಸುಸಜ್ಜಿತ ಒಳಾಂಗಣ ಮತ್ತು ಹೊರಾಂಗಣ ಕ್ರೀಡಾಂಗಣ ನಿರ್ಮಾಣ ಹಾಗೂ ಕ್ರೀಡಾಳುಗಳ ತರಬೇತಿಗೆ ಸಮರ್ಪಕ ವ್ಯವಸ್ಥೆ.

ಪ್ರವಾಸಿ ತಾಣಗಳ ಅಭಿವೃದ್ಧಿಗೆ ಸೂಕ್ತ ವ್ಯವಸ್ಥೆ.

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಅಡಿಸ್ಥಳ ಮಂಜೂರಾತಿ, ಅಭಿವೃದ್ಧಿಗೆ ಸೂಕ್ತ ಕ್ರಮ.

ದಿ. ಸೌಮ್ಯಭಟ್ ಸ್ಮರಣಾರ್ಥವಾಗಿ ಯುವತಿಯರಿಗೆ ಸ್ವ- ಉದ್ಯೋಗ ತರಬೇತಿ ಕೇಂದ್ರ ಸ್ಥಾಪನೆ.

ದಿ. ಕಾರ್ತಿಕ್ ಮೇರ್ಲ ಸ್ಮರಣಾರ್ಥವಾಗಿ ಸರಕಾರಿ ಐಟಿಐ ಸ್ಥಾಪನೆ.

ದಿ. ಪ್ರವೀಣ್ ನೆಟ್ಟಾರು ಸ್ಮರಣಾರ್ಥವಾಗಿ ಯುವಕರಿಗೆ ಸ್ವ- ಉದ್ಯೋಗ ತರಬೇತಿ ಕೇಂದ್ರ ಸ್ಥಾಪನೆ ಮತ್ತು ಸೈನ್ಯಕ್ಕೆ ಸೇರಲು ಬೇಕಾದ ತರಬೇತಿಗೆ ವ್ಯವಸ್ಥೆ.

ಸರಕಾರದ ವಿವಿಧ ಇಲಾಖೆಗಳಲ್ಲಿ ಹೊರಗುತ್ತಿಗೆ, ಶಿಕ್ಷಣ ಇಲಾಖೆಯಲ್ಲಿ ಅತಿಥಿ ಉಪನ್ಯಾಸಕರು, ಗ್ರಾಮ ಸಹಾಯಕರ ಖಾಯಾಮತಿ ಬಗ್ಗೆ ಕ್ರಮ.

ಯುವಕರ, ಯುವತಿಯರ, ಮಹಿಳೆಯರ, ಶ್ರಮಜೀವಿಗಳ, ರೈತರ, ಹಿರಿಯರ, ಎಲ್ಲಾ ಸಮಸ್ಯೆಗಳಿಗೆ ಸಹಾಯವಾಣಿ (Help Line) ಮೂಲಕ ದಿನದ 24 ಗಂಟೆಯೂ ಸ್ಪಂದನೆ.

ಕಡಬ: ಕೆ ಎಸ್ ಆರ್ ಟಿ ಸಿ ಬಸ್ ಗೆ ದಂತದಿಂದ ತಿವಿದ ಕಾಡಾನೆ - ಬಸ್ ಗೆ ಹಾನಿ

Posted by Vidyamaana on 2023-06-02 00:38:28 |

Share: | | | | |


ಕಡಬ: ಕೆ ಎಸ್ ಆರ್ ಟಿ ಸಿ ಬಸ್ ಗೆ ದಂತದಿಂದ ತಿವಿದ ಕಾಡಾನೆ - ಬಸ್ ಗೆ ಹಾನಿ

ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ  ಬಸ್ ಗೆ ಕಾಡಾನೆಯೊಂದು ದಂತದಿಂದ ತಿವಿದ ಹಿನ್ನೆಲೆಯಲ್ಲಿ ಬಸ್ ಗೆ ಹಾನಿಯಾದ ಘಟನೆ ಸುಬ್ರಹ್ಮಣ್ಯ - ಗುಂಡ್ಯ ರಾಜ್ಯ ಹೆದ್ದಾರಿಯ ಕೆಂಜಾಳ ಸಮೀಪದ ಅನಿಲ ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.ಪುತ್ತೂರಿನಿಂದ ಕಾಣಿಯೂರು ಮಾರ್ಗವಾಗಿ ಸುಬ್ರಹ್ಮಣ್ಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಚಾಲಕ ಅನಿಲ ಎಂಬಲ್ಲಿ ರಸ್ತೆ ಬದಿ ನಿಂತಿದ್ದ ಕಾಡಾನೆಯನ್ನು ಕಂಡು ತಪ್ಪಿಸಲು ಯತ್ನಿಸಿದರಾದರೂ, ಆನೆಯು ಬಸ್ಸಿನ ಎಡಭಾಗಕ್ಕೆ ದಂತದಿಂದ ತಿವಿದಿದೆ. ಚಾಲಕನ ಸಮಯ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು, ಬಸ್ಸಿಗೆ ಹಾನಿಯಾಗಿದೆ. ಸ್ಥಳಕ್ಕೆ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಇದೊಂದು ಹುಚ್ಚು ಶುರುವಾಗಿದೆ

Posted by Vidyamaana on 2023-09-07 11:23:04 |

Share: | | | | |


ಇತ್ತೀಚಿನ ದಿನಗಳಲ್ಲಿ ಇದೊಂದು ಹುಚ್ಚು ಶುರುವಾಗಿದೆ

ಪುತ್ತೂರು: ಹಿಂದೂ ಧರ್ಮದ ಬಗ್ಗೆ ಗೃಹಸಚಿವ ವಿವಾದಾತ್ಮಕ ಜಿ. ಪರಮೇಶ್ವರ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪುತ್ತೂರಿನಲ್ಲಿ ಪ್ರತಿಕ್ರಿಯಿಸಿದ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ‌ ಭಟ್ ಪ್ರತಿಕ್ರಿಯೆ ನೀಡಿದ್ದಾರೆ.


ಇತ್ತೀಚಿನ ದಿನಗಳಲ್ಲಿ ಇದೊಂದು ಹುಚ್ಚು ಶುರುವಾಗಿದೆ. ಸನಾತನ ಧರ್ಮದ ಬಗ್ಗೆ ದೂಷಣೆ ಮಾಡಿದರೆ ಅಲ್ಪಸಂಖ್ಯಾತರ ಮತ ಸಿಗುತ್ತದೆ. ಅಧಿಕಾರಿ ಸಿಗುತ್ತೆ ಅನ್ನುವ ಕಾರಣಕ್ಕೆ ಈ ರೀತಿ ಹೇಳಿಕೆ ನೀಡುತ್ತಾರೆ. ಹಿಂದೂ ಧರ್ಮದ ಹುಟ್ಟು ಗೊತ್ತಿಲ್ಲದ ಪರಮೇಶ್ವರ್ ಅವರ ಹೆಸರನ್ನು ಇಸ್ಮಾಯಿಲ್ ಅಂತ ಯಾಕೆ ಇಟ್ಟುಕೊಂಡಿಲ್ಲ. ಸ್ಟಾಲಿನ್ ಎಂದು ಹೆಸರು ಇಟ್ಟುಕೊಳ್ಳುಬಹುದಿತ್ತಲ್ಲವೇ ಎಂದು ಪ್ರಶ್ನಿಸಿದ್ದಾರೆ.


ಇದ್ದ ದೇವಸ್ಥಾನಕ್ಕೆಲ್ಲಾ ಭೇಟಿ ನೀಡುವ ಪರಮೇಶ್ವರ್ ,ದೇವಸ್ಥಾನದ ಹೊರಗೆ ಬಂದ ಬಳಿಕ ಈ ರೀತಿ ಹೇಳಿಕೆ ನೀಡುತ್ತಾರೆ. ಸನಾತನ ಧರ್ಮದ ಹುಟ್ಟು ಯಾರಿಗೂ ತಿಳಿದಿಲ್ಲ. ಸನಾತನ ಧರ್ಮಕ್ಕೆ ಹುಟ್ಟೂ ಇಲ್ಲ, ನಾಶವೂ ಇಲ್ಲ. ಕ್ರಿಶ್ಚಿಯನ್, ಇಸ್ಲಾಂ ಮತ ಇತ್ತೀಚೆಗೆ ಹುಟ್ಟಿರುವ ಮತಗಳು. ಸನಾತನ ಧರ್ಮ ನಿತ್ಯ ನೂತನವಾದ ಧರ್ಮ.


ಎಲ್ಲಾ ಕಾಲಕ್ಕೂ ,ಎಲ್ಲವನ್ನೂ ಒಪ್ಪಿಕೊಳ್ಳುವ ಧರ್ಮ. ಕಾಲಕ್ಕೆ ತಕ್ಕಂತೆ ತನ್ನಲ್ಲಿ ಬದಲಾವಣೆ ಮಾಡಿಕೊಳ್ಳುವ ಅವಕಾಶವಿರುವ ಧರ್ಮ. ಹಿಂದೆ ಹಿಂದು ಧರ್ಮದಲ್ಲಿದ್ದ ಬಾಲ್ಯವಿವಾಹ, ವರದಕ್ಷಿಣೆ ಮೊದಲಾದ ಪಿಡುಗನ್ನು ತೆಗೆದು ಹಾಕಲಾಗಿದೆ. ಮೂಢನಂಬಿಕೆಯನ್ನು ತೊಡೆದು‌ ಹಾಕುವ ಕೆಲಸವನ್ನು ಮಹಾಪುರುಷರು ಮಾಡಿದ್ದಾರೆ. ಈಗಿರುವ ಕೆಲವು ಆಚಾರಗಳನ್ನೂ ಬದಲಾಯಿಸಲಾಗುತ್ತದೆ.


ಆ ಬದಲಾವಣೆಯನ್ನು ನಾವು ಮಾಡುತ್ತೇವೆ. ಆದರೆ ಇಸ್ಲಾಂ ಮತ್ತು ಕ್ರಿಶ್ಚಿಯನ್ ಮತದಲ್ಲಿ ಈ ಅವಕಾಶವಿಲ್ಲ. ಆ ಕಾರಣಕ್ಕಾಗಿಯೇ ಆ ಮತದ ಜನರೇ ಮತವನ್ನು ಒಪ್ಪಿಕೊಳ್ಳುತ್ತಿಲ್ಲ. ಅಮೇರಿಕಾ ಮತ್ತು ಬ್ರಿಟನ್ ನಲ್ಲಿ ಚರ್ಚುಗಳಿಗೆ ಜನ ಬರುತ್ತಿಲ್ಲ. ಆ ಕಾರಣಕ್ಕಾಗಿ ಅಲ್ಲಿ ಚರ್ಚುಗಳನ್ನು ಹರಾಜಿಗೆ ಇಡುತ್ತಿದ್ದಾರೆ. ಚಂದ್ರನ ಬಗ್ಗೆ ಸನಾತನ ಧರ್ಮದಲ್ಲಿ ಉಲ್ಲೇಖವಿದೆ. ಅಲ್ಲಿನ ಕೃಷ್ಣ ಪರ್ವ, ಶ್ವೇತ ಪರ್ವದ ಉಲ್ಲೇಖವಿದೆ. ಆ ಸತ್ಯ ಇದೀಗ ಚಂದ್ರಯಾನ-3 ಉಡಾವಣೆ ಯಶಸ್ವಿಯಾದಾಗ ಬೆಳಕಿಗೆ ಬಂದಿದೆ. ಸನಾತನ ಧರ್ಮ ಮತ್ತು ವಿಜ್ಞಾನ ಪರಸ್ಪರ ಒಪ್ಪಿಕೊಂಡಿದೆ. ಹಿಂದೂ ಧರ್ಮ ಮತ್ತು ವಿಜ್ಞಾನ ಒಟ್ಟೊಟ್ಟಿಗೆ ಹೋಗುತ್ತದೆ.


ಸನಾತನ ಧರ್ಮದ ಬಗ್ಗೆ ಮಾತನಾಡುವ ಉದಯನಿಧಿ‌ ಸ್ಟಾಲಿನ್ ತಂದೆ ಹಿಂದೂ ಧರ್ಮದ ಸತ್ವ ಒಪ್ಪಿಕೊಂಡಿದ್ದರು. ಅವರ ಕಾರನ್ನು‌ ಅವರ ಮನೆ ಮುಂದೆ ದೇವಸ್ಥಾನಕ್ಕೆ ಮುಖಮಾಡಿ ನಿಲ್ಲಿಸುತ್ತಿದ್ದರು.


ಈಗ ಢೋಂಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಸನಾತನ ಧರ್ಮದ ಬಗ್ಗೆ ಮಾತನಾಡುವವರು ಎಚ್ಚರಿಕೆಯಿಂದ ಮಾತನಾಡಬೇಕು. ಇದರಿಂದ ಅವರ ಮುಂದಿನ ಪೀಳಿಗೆ ಚೆನ್ನಾಗಿ ಇರುತ್ತದೆ ಎಂದು ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.

Recent News


Leave a Comment: