KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಸುದ್ದಿಗಳು News

Posted by vidyamaana on 2024-07-24 17:11:55 |

Share: | | | | |


KSRTC ಬಸ್-ಕಾರು ಡಿಕ್ಕಿ, ಕ್ರೈಸ್ಥ ಧರ್ಮಗುರು ಫಾ. ಆಂಥೋಣಿ ಪೀಟರ್ ಮೃತ್ಯು..

ಶಿವಮೊಗ್ಗ : ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕಾರು ಡಿಕ್ಕಿಯಾದ ಪರಿಣಾಮ ಕ್ರೈಸ್ತ ಧರ್ಮಗುರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಸಮೀಪ ಸವಳಂಗ ಚಿನ್ನಿಕಟ್ಟೆ ಬಳಿ ಮಂಗಳವಾರ ಮಧ್ಯಾಹ್ನ ಸಂಭವಿಸಿದೆ.ಕೆಎಸ್‌ಆರ್‌ಟಿಸಿ ಬಸ್ಸು ಹಾನಗಲ್‌ನಿಂದ ಶಿವಮೊಗ್ಗ ಕಡೆಗೆ ಹೋಗುತ್ತಿತ್ತುಎನ್ನಲಾಗಿದೆ.

ಕ್ರೈಸ್ತ ಧರ್ಮಗುರು ಇದ್ದ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು. ಚಿನ್ನಿಕಟ್ಟೆ ಬಳಿ ಕಾರು, ಬಸ್ಸು ಮುಖಾಮುಖಿ ಡಿಕ್ಕಿಯಾಗಿವೆ. ಅಪಘಾತದ ರಭಸಕ್ಕೆ ಕಾರು ರಸ್ತೆ ಪಕ್ಕದ ಜಮೀನಿಗೆ ಉರುಳಿ ಬಿದ್ದಿದ್ದು ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ ಶಿಕಾರಿಪುರ ಧರ್ಮಕೇಂದ್ರದ ಧರ್ಮಗುರು ಆಂಥೋಣಿ ಪೀಟರ್‌ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು ನ್ಯಾಮತಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿದ್ದಾರೆ.

 Share: | | | | |


ಹೇಗಿರಲಿದೆ ಹತ್ತೂರು ಒಡೆಯನ ನೆಲದಲ್ಲಿ ಇಂದು ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವ?

Posted by Vidyamaana on 2023-12-24 07:17:03 |

Share: | | | | |


ಹೇಗಿರಲಿದೆ ಹತ್ತೂರು ಒಡೆಯನ ನೆಲದಲ್ಲಿ ಇಂದು ನಡೆಯಲಿರುವ ಶ್ರೀನಿವಾಸ ಕಲ್ಯಾಣೋತ್ಸವ?

ಶ್ರೀನಿವಾಸ ಕಲ್ಯಾಣೋತ್ಸವದ ಹೈಲೈಟ್ಸ್: 


ಪುತ್ತಿಲ ಪರಿವಾರ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ವತಿಯಿಂದ ಡಿ.24-25 ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ವಿಶೇಷತೆ ಹೀಗಿದೆ. 


 50 ಸಾವಿರ ಶ್ರೀನಿವಾಸ ಕಲ್ಯಾಣ ಲಡ್ಡು ಪ್ರಸಾದ ಸೇವೆ ಸೇರಿದಂತೆ ಅನ್ನದಾನ ಸೇವೆ, ಸರ್ವ ಸೇವೆ, ಫಲಪಂಚಾಮೃತ ಅಭಿಷೇಕ  ಸೇವೆ , ಮಹಾನಿವೇದನಾ ಸೇವೆ , ಸುಪ್ರಭಾತ ಸೇವೆ ಹಾಗೂ ಈಗಾಗಲೇ ನೋಂದಾಣಿಯಾಗಿದೆ.


ಅಂದಾಜು 1.25 ಲಕ್ಷ ಜನ ಎರಡು ದಿನ ಭಾಗವಹಿಸಲಿದ್ದು,  ಬೆಳಿಗ್ಗೆ ಫಲಹಾರ , ಮಧ್ಯಾಹ್ನ ಮತ್ತು ರಾತ್ರಿ ಅನ್ನಸಂತರ್ಪಣೆ ಇರಲಿದೆ. 


ಅದಕ್ಕಾಗಿ ವಿಶೇಷ ಅನ್ನಛತ್ರ ಪೆಂಡಲ್ ನಿರ್ಮಿಸಲಾಗಿದೆ.  


ವಿಶೇಷ ಅತ್ಯಾಕರ್ಷಕ ಹೂವಿನ ಆಲಂಕಾರವಿರಲಿದೆ.


ಮೆರವಣಿಗೆ ಹೇಗಿರಲಿದೆ ಗೊತ್ತೇ ..? 


ಉಪ್ಪಿನಂಗಡಿಯಿಂದ ದೇವರನ್ನು ಬರಮಾಡಿಕೊಂಡು ಬೊಳುವಾರಿನಿಂದ ಪೂರ್ಣಕುಂಭ ಸ್ವಾಗತವಿರಲಿದೆ.  


ದೇವರ ಸ್ವಾಗತ  ಹೇಗಿರಲಿದೆ : 

ಎದುರಿಗೆ ಪೂರ್ಣಕುಂಭ ಸ್ವಾಗತ ತಂಡ  ಅದರ ಹಿಂದೆ ರುದ್ರಪಾರಾಯಣ ತಂಡ ನಂತರ   ವಿಷ್ಣು ಸಹಸ್ರನಾಮ ತಂಡ ಆ ನಂತರ ಭಜನಾ ತಂಡ ಅದರ ಹಿಂದೆ ಶಂಖನಾದ ತಂಡ ಅದರ ಹಿಂದೆ ತೆರೆದ ವಾಹನದಲ್ಲಿ ಶ್ರೀನಿವಾಸ ದೇವರ ಮೂರ್ತಿ ಇರಲಿದೆ.



ಆ ನಂತರ ಚೆಂಡೆ ಅದರ ಹಿಂದೆ ಭಗವಧ್ಬಕ್ತರು ದೇವರ ನಾಮಸ್ಮರಣೆಯೊಂದಿಗೆ ಸಾಗಲಿದ್ದಾರೆ.



ಪುತ್ತೂರು ಪೇಟೆ ಕೇಸರಿಮಯ : ಶ್ರೀನಿವಾಸ ಕಲ್ಯಾಣೋತ್ಸವ ಹಾಗೂ ಸನಾತನ ಸಮಾಗಮದ ಪ್ರಯುಕ್ತ ಪುತ್ತೂರು ಪೇಟೆ ಸಂಪೂರ್ಣ ಕೇಸರಿಮಯವಾಗಿರಲಿದೆ. ಇದಕ್ಕಾಗಿ ಕಾರ್ಯಕರ್ತರ ತಂಡ ರಾತ್ರಿ ಕೆಲಸ ಮಾಡುತ್ತಿದೆ. 


ಸಾವಿರಕ್ಕೂ ಮಿಕ್ಕಿ ಬ್ಯಾನರ್ : 

ಶ್ರೀನಿವಾಸ ದೇವರ ಅತ್ಯಾಕರ್ಷಕ ಪೋಟೋವಿರುವ ಬ್ಯಾನರ್ ಹಾಗೂ ದೊಡ್ಡ ಹೋಲ್ಡಿಂಗ್ಸ್ ಪುತ್ತೂರು ಪೇಟೆಯ ಡಿವೈಡರ್ ನಲ್ಲಿ ಹಾಗೂ ಪೇಟೆಯೆಲ್ಲೆಡೆ ಈಗಾಗಲೇ ಹಾಕಲಾಗಿದೆ.


ಉಪ್ಪಿನಂಗಡಿ, ಕಡಬ, ಸವಣೂರು, ಬೆಳ್ಳಾರೆ,  ಸುಳ್ಯ,  ವಿಟ್ಲ, ಬಂಟ್ವಾಳದಲ್ಲಿ ಈಗಾಗಲೇ ಭಕ್ತಾದಿಗಳು  ಬ್ಯಾನರ್ ಹಾಕಲಾಗಿದೆ.

ದೇವಸ್ಥಾನಗಳಲ್ಲಿ ಅಶೋಕ್ ರೈ ವಿಶೇಷ ಪ್ರಾರ್ಥನೆ

Posted by Vidyamaana on 2023-05-10 04:19:46 |

Share: | | | | |


ದೇವಸ್ಥಾನಗಳಲ್ಲಿ ಅಶೋಕ್ ರೈ ವಿಶೇಷ ಪ್ರಾರ್ಥನೆ

ಪುತ್ತೂರು: ಮತದಾನಕ್ಕೆ ಮೊದಲು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಅವರು ದೇವಸ್ಥಾನಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಮೈಸೂರು ದಸರಾ 2023: ಕೊಡಗಿನ ಪುಂಡಾನೆ ಅಭಿಮನ್ಯು ಈಗ ಗಜಪಡೆಯ ಕ್ಯಾಪ್ಟನ್ ಆಗಿದ್ದೇಗೆ..?

Posted by Vidyamaana on 2023-10-15 09:11:33 |

Share: | | | | |


ಮೈಸೂರು ದಸರಾ 2023: ಕೊಡಗಿನ ಪುಂಡಾನೆ ಅಭಿಮನ್ಯು ಈಗ ಗಜಪಡೆಯ ಕ್ಯಾಪ್ಟನ್ ಆಗಿದ್ದೇಗೆ..?

ಮೈಸೂರು , ಅಕ್ಟೋಬರ್‌ 15: ಇದುವರೆಗೆ ಸಾವಿರಾರು ಸಾಕಾನೆಗಳು ಮೈಸೂರು ದಸರಾದ ಜಂಬೂಸವಾರಿಯಲ್ಲಿ ಪಾಲ್ಗೊಂಡಿದ್ದರೂ ಕೂಡ ಅವುಗಳ ಪೈಕಿ ಕೆಲವೇ ಕೆಲವು ಆನೆಗಳಿಗೆ ಮಾತ್ರ ಚಿನ್ನದ ಅಂಬಾರಿ ಹೊರುವ ಅವಕಾಶ ದೊರೆತಿದ್ದು ಅದರಲ್ಲಿ ಈಗ ಅಂಬಾರಿ ಹೊರುವ ಅಭಿಮನ್ಯು ಕೂಡ ಒಂದಾಗಿದೆ.ಇತಿಹಾಸದ ಪುಟಗಳನ್ನು ಕೆದಕಿದರೆ ಅಂಬಾರಿ ಹೊತ್ತ ಹಲವು ಆನೆಗಳ ಪಟ್ಟಿಗಳು ಸಿಗುತ್ತವೆ. ಜೊತೆಗೆ ಅವುಗಳ ಸಾಮರ್ಥ್ಯದ ಬಗೆಗೂ ಮಾಹಿತಿಗಳು ದೊರೆಯುತ್ತವೆ. ಎಲ್ಲ ಆನೆಗಳಿಗೂ ಅಂಬಾರಿ ಹೊರಲಾಗುವುದಿಲ್ಲ. ಅವು ಅದಕ್ಕೆ ತಕ್ಕಂತ ಮೈಕಟ್ಟು ಹೊಂದಿರಬೇಕು. ಬಲಾಢ್ಯನಾಗಿರಬೇಕು. ಮಾವುತರ ಮಾತುಗಳನ್ನು ಚಾಚುತಪ್ಪದೆ ಪಾಲಿಸುವಂತಿರಬೇಕು.ಇಷ್ಟೇ ಅಲ್ಲದೆ ಇತರೆ ಆನೆಗಳನ್ನು ನಿಯಂತ್ರಿಸುವಂತಿರಬೇಕು. ಸದ್ಯ ಅಂತಹ ಎಲ್ಲ ಗುಣಲಕ್ಷಣಗಳನ್ನು ಹೊಂದಿರುವ ಕಾರಣದಿಂದಲೇ ಅಭಿಮನ್ಯುಗೆ ಕಳೆದ ಮೂರು ವರ್ಷಗಳಿಂದ ಗಜಪಡೆಯ ಕ್ಯಾಪ್ಟನ್ ಆಗಿ ಚಿನ್ನದ ಅಂಬಾರಿ ಹೊರುವ ಜವಬ್ದಾರಿಯನ್ನು ನೀಡಲಾಗಿದೆ. ಕಳೆದ ಮೂರು ವರ್ಷಗಳ ಕಾಲವೂ ಯಶಸ್ವಿಯಾಗಿ ತನ್ನ ಕಾರ್ಯವನ್ನು ನಿರ್ವಹಿಸಿ ಇದೀಗ ನಾಲ್ಕನೇ ವರ್ಷದ ಜವಬ್ದಾರಿ ನಿಭಾಯಿಸಲು ಸಿದ್ದನಾಗಿರುವುದು ಎದ್ದು ಕಾಣಿಸುತ್ತಿದೆ.


ಕೊಡಗಿನಲ್ಲಿ ಸೆರೆ ಸಿಕ್ಕ ಆನೆ


ಈ ಬಾರಿ ಅಭಿಮನ್ಯು ಚಿನ್ನದ ಅಂಬಾರಿ ಹೊರಲು ಬೇಕಾದ ಎಲ್ಲ ಕಠಿಣ ತಾಲೀಮುಗಳು ಮುಗಿಯುತ್ತಾ ಬಂದಿದೆ. ಸದ್ಯ ಮರದ ಅಂಬಾರಿ ಹೊರುವ ಮತ್ತು ಸಿಡಿಮದ್ದಿನ ತಾಲೀಮು ನಡೆಯುತ್ತಿದೆ. ಜಂಬೂಸವಾರಿಗೆ ಇನ್ನು ಹತ್ತು ದಿನಗಳಷ್ಟೆ ಬಾಕಿಯಿದ್ದು ಅಭಿಮನ್ಯು ಸೇರಿದಂತೆ ಗಜಪಡೆ ಸರ್ವ ರೀತಿಯಲ್ಲಿ ಸಜ್ಜಾಗುತ್ತಿದೆ. ಇದೆಲ್ಲದರ ನಡುವೆ ಕ್ಯಾಪ್ಟನ್ ಅಭಿಮನ್ಯು ಬಗ್ಗೆಯೂಹೇಳಲೇ ಬೇಕು.


1977ಕ್ಕೂ ಹಿಂದೆ ಎಲ್ಲ ಆನೆಗಳಂತೆ ಇದು ಕೂಡ ಪುಂಡಾನೆಯಾಗಿತ್ತು. ಕೊಡಗಿನ ಅರಣ್ಯದಲ್ಲಿ ಅಂಡಲೆಯುತ್ತಾ ಪುಂಡಾಟ ನಡೆಸುತ್ತಿತ್ತು. ಹೀಗಾಗಿ ಇದನ್ನು 1977 ರಲ್ಲಿ ಕೊಡಗಿನ ಹೆಬ್ಬಳ್ಳ ಅರಣ್ಯ ಪ್ರದೇಶದಲ್ಲಿ ಸೆರೆಹಿಡಿದು ಪಳಗಿಸಿ ಅಭಿಮನ್ಯು ಎಂದು ನಾಮಕರಣ ಮಾಡಲಾಯಿತು.


ಜವಾಬ್ದಾರಿ ನಿಭಾಯಿಸುವುದರಲ್ಲಿ ಎತ್ತಿದ ಕೈ


ಸದ್ಯ ಅಭಿಮನ್ಯು ವಯಸ್ಸು 58 ಆಗಿದ್ದು ಕಳೆದ 26 ವರ್ಷಗಳಿಂದ ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುತ್ತಿದೆ. 2.74 ಮೀಟರ್ ಎತ್ತರ ಹಾಗೂ 3.51ಮೀಟರ್ ಉದ್ದವನ್ನು ಹೊಂದಿದ್ದು ಈಗ 5,300 ಕೆಜಿಯಷ್ಟು ತೂಕವಿದೆ. ಮುಂದಿನ ಜಂಬೂಸವಾರಿ ವೇಳೆಗೆ ಇನ್ನಷ್ಟು ತೂಕ ಜಾಸ್ತಿಯಾದರೂ ಅಚ್ಚರಿಯಿಲ್ಲ.ವರ್ಷಪೂರ್ತಿ ಕೊಡಗಿನ ಮತ್ತಿಗೋಡು ಶಿಬಿರದಲ್ಲಿರುವ ಅಭಿಮನ್ಯುನನ್ನು ಮಾವುತ ಜೆ.ಎಸ್.ವಸಂತ ಮತ್ತು ಕಾವಾಡಿ ಜೆ.ಕೆ.ರಾಜು ನೋಡಿಕೊಳ್ಳುತ್ತಾರೆ. ಮೊದಲಿಗೆ ಜಂಬೂಸವಾರಿಯಲ್ಲಿ ಮಾಮೂಲಿ ಆನೆಯಾಗಿ ಭಾಗವಹಿಸಿ ಬಳಿಕ ಆರೇಳು ವರ್ಷಗಳ ಕಾಲ ಸಂಗೀತ ಗಾಡಿಯನ್ನು ಎಳೆಯುವ ಜವಾಬ್ದಾರಿ ಹೊತ್ತಿದ್ದ ಈತನಿಗೆ 2020ರಲ್ಲಿ ಅರಣ್ಯಾಧಿಕಾರಿಗಳು ಅಂಬಾರಿ ಹೊರುವ ಜವಾಬ್ದಾರಿ ವಹಿಸಿದ್ದರು. ಅಲ್ಲಿಂದ ಇಲ್ಲಿವರೆಗೆ ಅದನ್ನು ಯಶಸ್ವಿಯಾಗಿ ಪೂರೈಸುತ್ತಾ ಬಂದಿದ್ದಾನೆ.


ಬಲಶಾಲಿ, ಧೈರ್ಯಶಾಲಿ, ಪರಾಕ್ರಮಿ ಅಭಿಮನ್ಯು


ಅಭಿಮನ್ಯು ಬಗ್ಗೆ ಇನ್ನಷ್ಟು ಹೇಳಬೇಕೆಂದರೆ ಈತ ಕಾಡಾನೆ ಸೆರೆ ಹಿಡಿಯುವುದು, ಕಾಡಿಗೆ ಹಿಮ್ಮೆಟ್ಟಿಸುವುದರಲ್ಲಿ ನಿಸ್ಸೀಮ. ಅಷ್ಟೇ ಅಲ್ಲದೆ ಹುಲಿ ಸೆರೆ ಕಾರ್ಯಾಚರಣೆಯಲ್ಲೂ ಈತ ಎತ್ತಿದ ಕೈ. ಇದುವರೆಗೆ ಈತ 200ಕ್ಕೂ ಹೆಚ್ಚು ಪುಂಡಾನೆ ಸೆರೆ ಮತ್ತು 40ಕ್ಕೂ ಹೆಚ್ಚು ಹುಲಿ ಸೆರೆ ಕಾರ್ಯಾಚರಣೆಯಲ್ಲಿಪಾಲ್ಗೊಂಡಿರುವುದು ಆತನ ಕಾರ್ಯವೈಖರಿಗೆ ಸಾಕ್ಷಿಯಾಗಿದೆ.


ಅಭಿಮನ್ಯು ಎಷ್ಟು ಬಲಶಾಲಿಯೋ ಅಷ್ಟೇ ಧೈರ್ಯಶಾಲಿ, ಪರಾಕ್ರಮಿಯೂ ಹೌದು. ಇದಕ್ಕೆ ಉದಾಹರಣೆ ಎಂದರೆ ಕೆಲ ವರ್ಷಗಳ ಹಿಂದೆ ರಾಮನಗರ ಜಿಲ್ಲೆಯ ಮಾಗಡಿಯ ಸಾವನದುರ್ಗ ಅರಣ್ಯದಲ್ಲಿ ಈತನ ಮೇಲೆ ಎರಡು ಕಾಡಾನೆಗಳು ದಾಳಿ ಮಾಡಿದರೂ ಧೃತಿಗೆಡದೆ ಅವುಗಳನ್ನು ಹಿಮ್ಮೆಟ್ಟಿಸಿ ಪರಾಕ್ರಮ ಮೆರೆದಿದ್ದನು. ಮೈಸೂರು ಮಾತ್ರವಲ್ಲದೆ ಶ್ರೀರಂಗಪಟ್ಟಣದಲ್ಲಿ ನಡೆಯುವ ದಸರಾದ ವೇಳೆ ಮೂರು ಬಾರಿ ಅಂಬಾರಿ ಹೊತ್ತಿರುವುದು ವಿಶೇಷವಾಗಿದೆ.


ಜಂಬೂ ಸವಾರಿಯ ಆಕರ್ಷಣೆ


ಒಟ್ಟಾರೆಯಾಗಿ ಹೇಳಬೇಕೆಂದರೆ ಪುಂಡಾನೆಯಾಗಿದ್ದ ಅಭಿಮನ್ಯು ಮೈಸೂರು ದಸರಾದಲ್ಲಿ ಭಾಗವಹಿಸಲು ಆರಂಭಿಸಿದ ಬಳಿಕ ಹಂತಹಂತವಾಗಿ ತನಗೆ ನೀಡಿದಜವಬ್ದಾರಿಯನ್ನು ನಿಷ್ಠೆಯಿಂದ ನಿರ್ವಹಿಸುತ್ತಾ ಇವತ್ತು ದಸರಾ ಜಂಬೂಸವಾರಿಯ ಪ್ರಮುಖ ಆಕರ್ಷಣೆಯಾಗಿ ಚಾಮುಂಡೇಶ್ವರಿ ವಿರಾಜಿತ ಚಿನ್ನದ ಅಂಬಾರಿಯನ್ನು ಹೊತ್ತು ಸಾಗುತ್ತಿರುವುದು ಖುಷಿಯ ವಿಚಾರವಾಗಿದೆ.

ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್; ಸಹಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತ್ಯು

Posted by Vidyamaana on 2023-12-30 12:08:01 |

Share: | | | | |


ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್; ಸಹಸವಾರನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತ್ಯು

ಬಂಟ್ವಾಳ: ಲಾರಿಯೊಂದು ಡಿಕ್ಕಿಯಾಗಿ ದ್ವಿಚಕ್ರವಾಹನ ಸಹಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ.‌‌ಬೈಕ್ ಸಹಸವಾರ ಬೆಂಗ್ರೆ ನಿವಾಸಿ ರಮೀಜ್ (20) ಎಂದು ಗುರುತಿಸಲಾಗಿದೆ.ಓವರ್ ಟೆಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸಹಸವಾರ ಡಾಮರು ರಸ್ತೆಗೆ ಬಿದ್ದಿದ್ದು, ಆತನ ಮೇಲೆ ಲಾರಿ ಹರಿದು ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.


ಡಿಕ್ಕಿ ಹೊಡೆದ ಲಾರಿ ಸಹಿತ ಚಾಲಕ ಪರಾರಿಯಾಗಿದ್ದು, ಬಳಿಕ ಪೊಲೀಸರು ಲಾರಿಯನ್ನು ಪತ್ತೆ ಮಾಡಿದ್ದಾರೆ.ಸ್ನೇಹಿತನ ಜೊತೆ ಅಜಿಲಮೊಗರು ಮಸೀದಿಯಲ್ಲಿ ನಡೆಯುವ ಉರೂಸ್ ಕಾರ್ಯಕ್ರಮಕ್ಕೆ ತೆರಳುವವರು ಎಂದು ಹೇಳಲಾಗಿದೆ.ಬಂಟ್ವಾಳ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಘಟನೆ ಬಳಿಕ ಬಿಸಿರೋಡಿನ ಎನ್.ಜಿ.ಸರ್ಕಲ್ ನಲ್ಲಿ ಕೆಲ ಹೊತ್ತು ಸಂಚಾರ ಅಸ್ತವ್ಯಸ್ತಗೊಂಡಿತ್ತು

ಮೊಬೈಲ್‌ಗ‌ಳಿಗೆ ಅ. 12ರಂದು ಬರಲಿದೆ ಬೀಪ್‌ ಶಬ್ದ- ಭಯ ಬೇಡ

Posted by Vidyamaana on 2023-10-12 01:26:40 |

Share: | | | | |


ಮೊಬೈಲ್‌ಗ‌ಳಿಗೆ ಅ. 12ರಂದು ಬರಲಿದೆ ಬೀಪ್‌ ಶಬ್ದ- ಭಯ ಬೇಡ

ಬೆಂಗಳೂರು: ಮುಂಬರುವ ದಿನದಲ್ಲಿ ಸಂಭವಿಸುವ ವಿಕೋಪಗಳ ಕುರಿತು ಮುನ್ಸೂಚನೆ ನೀಡುವ ನಿಟ್ಟಿನಲ್ಲಿ ಟೆಲಿಕಮ್ಯುನಿಕೇಶನ್‌ ಇಲಾಖೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರದ ಸಹಯೋಗದಲ್ಲಿ ಸಕಾಲಿಕ ಮುನ್ನೆಚ್ಚರಿಕೆ (ವಿಭಿನ್ನ ಧ್ವನಿ ಮತ್ತು ಕಂಪನ) ನೀಡಲು ಮುಂದಾಗಿದೆ. ಅದರ ಭಾಗವಾಗಿ ರಾಜ್ಯದಲ್ಲಿ ಅ. 12ರಂದು ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ.ರಾಜ್ಯದಲ್ಲಿ ದೂರಸಂಪರ್ಕ ಇಲಾಖೆ (ಸಿ-ಡಾಟ್‌) ಸೆಲ್‌ ಬ್ರಾಡ್‌ ಕಾಸ್ಟಿಂಗ್‌ ಮೂಲಕ ಸ್ಮಾರ್ಟ್‌ಫೋನ್‌ ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ನಡೆಯಲಿದೆ. ಈಗಾಗಲೇ ಮೊಬೈಲ್‌ ಬಳಕೆದಾರರಿಗೆ ಸಂದೇಶಗಳು ರವಾನೆಯಾಗಿದೆ. ಫೋನ್‌ ಜೋರಾಗಿ ಎಚ್ಚರಿಕೆಯ ರೀತಿಯ ಬೀಪ್‌ ಶಬ್ದದೊಂದಿಗೆ ಸಂದೇಶ ಫ್ಲಾಶ್‌ ಆಗಲಿದೆ. ಬಳಕೆದಾರರು ಸರಿ ಎಂದು ಒತ್ತುವವರೆಗೂ ಈ ಬೀಪ್‌ ಬರುತ್ತಲೇ ಇರುತ್ತದೆ. ಇದು ಎಚ್ಚರಿಕೆ ಸಂದೇಶವನ್ನು ಓದಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳುವುದು ಇದರ ಉದ್ದೇಶವಾಗಿದೆ. ಆ ಮೂಲಕ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷೆ ನಡೆಯಲಿದೆ.

ಸಂದೇಶದಲ್ಲಿ ಏನಿರಲಿದೆ?

ಸಂದೇಶದಲ್ಲಿ ದೂರಸಂಪರ್ಕ ಇಲಾಖೆಯ ಸೆಲ್‌ ಬ್ರಾಡ್‌ಕಾಸ್ಟಿಂಗ್‌ ಸಿಸ್ಟಮ್‌ ಮೂಲಕ ಕಳುಹಿಸಿದ ಸ್ಯಾಂಪಲ್‌ ಪರೀಕ್ಷಾ ಸಂದೇಶವಾಗಿದ್ದು, ಇದನ್ನು ನಿರ್ಲಕ್ಷಿಸಿ. ನೀವು ಯಾವುದೇ ಪ್ರತಿಕ್ರಿಯೆ ನೀಡುವ ಅಗತ್ಯವಿಲ್ಲ. ಈ ಸಂದೇಶವನ್ನು ರಾಷ್ಟ್ರೀಯ ವಿಪತ್ತು ನಿರ್ವಹಣ ಪ್ರಾಧಿಕಾರವು ಜಾರಿಗೆ ತರುತ್ತಿರುವ ಪ್ಯಾನ್‌ – ಇಂಡಿಯಾ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಪರೀಕ್ಷಿಸುವ ಸಲುವಾಗಿ ಕಳುಹಿಸಲಾಗಿದೆ. ಇದು ಸಾರ್ವಜನಿಕ ಸುರಕ್ಷತೆಯನ್ನು ಹೆಚ್ಚಿಸುವ ಮತ್ತು ತುರ್ತು ಸಂದರ್ಭಗಳಲ್ಲಿ ಸಮಯೋಚಿತ ಎಚ್ಚರಿಕೆಗಳನ್ನು ನೀಡುವ ಗುರಿಯನ್ನು ಹೊಂದಿದೆ ಎನ್ನುವುದಾಗಿ ಉಲ್ಲೇಖವಾಗಲಿದೆ.


ಪ್ರಯೋಜನ ಏನು?

ಭೂಕಂಪ, ಸುನಾಮಿ, ಅಗ್ನಿ ದುರಂತ ಮತ್ತು ಹಠಾತ್‌ ಪ್ರವಾಹ, ಯುದ್ಧಗಳಂತಹ ವಿಪತ್ತುಗಳ ಸಂದರ್ಭಗಳಲ್ಲಿ ವಿಪತ್ತು ನಿರ್ವಹಣ ಪ್ರಾಧಿಕಾರವನ್ನು ಸನ್ನದ್ಧರಾಗಿಸಲು ಹಾಗೂ ಸಾರ್ವಜನಿಕರಿಗೆ ಎಚ್ಚರಿಕೆ ನೀಡಲು ಈ ವ್ಯವಸ್ಥೆ ಸಹಕಾರ ನೀಡಲಿದೆ. ಮುಂದಿನ ದಿನದಲ್ಲಿ ವಿಕೋಪಗಳು ಸಂಭವಿಸಬಹುದಾದ ಸ್ಥಳಗಳಲ್ಲಿನ ಮೊಬೈಲ್‌ ಬಳಕೆದಾರರಿಗೆ ಈ ಫ್ಲಾಶ್‌ ಸಂದೇಶದ ಮೂಲಕ ಎಚ್ಚರಿಸಲಾಗುತ್ತದೆ.


ಬಳಕೆದಾರರಿಗೆ ತುರ್ತು ಎಚ್ಚರಿಕೆ ವ್ಯವಸ್ಥೆಯ ಪರೀಕ್ಷೆ ಅ. 12ರಂದು ರಾಜ್ಯದಲ್ಲಿ ನಡೆಯಲಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಮುಂದಿನ ದಿನದಲ್ಲಿ ವಿಕೋಪವನ್ನು ಮುಂಚಿತವಾಗಿ ಗ್ರಹಿಸಿ, ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಅನುಕೂಲವಾಗಲಿದೆ. ಪ್ರವಾಹಗಳಂತ ವಿಕೋಪ ಘಟಿಸುವ ಮುನ್ಸೂಚನೆ ನೀಡಲಿದೆ.

– ರಾಜಕುಮಾರ್‌, ಸಹಾಯಕ ನಿರ್ದೇಶಕ (ಟೆಕ್ನಾಲಜಿ), ದೂರಸಂಪರ್ಕ ಇಲಾಖೆ.

ಪುತ್ತೂರಿನಲ್ಲಿ ಇಂದು ಬೆಳಿಗ್ಗೆಯಿಂದ ಕರೆಂಟ್ ಕಟ್

Posted by Vidyamaana on 2023-09-12 04:47:25 |

Share: | | | | |


ಪುತ್ತೂರಿನಲ್ಲಿ ಇಂದು ಬೆಳಿಗ್ಗೆಯಿಂದ ಕರೆಂಟ್ ಕಟ್

ಪುತ್ತೂರು: 110/33/11ಕೆವಿ ಮಾಡಾವು ವಿದ್ಯುತ್‌ ಉಪಕೇಂದ್ರದಲ್ಲಿ 110ಕೆ.ವಿ ಮತ್ತು 33 ಕೆ.ವಿ ಲೈನ್ ಬೇ ಯ ಪಾಲನಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.12ರಂದು ಮಂಗಳವಾರ ಪೂರ್ವಾಹ್ನ 10ರಿಂದ ಸಾಯಂಕಾಲ 4 ಗಂಟೆಯವರೆಗೆ 336.0 ಮಾಡಾವು–ಬೆಳ್ಳಾರೆ, 33ಕೆವಿ ಮಾಡಾವು-ಬೆಳ್ಳಾರೆ ಗುತ್ತಿಗಾರು, 33ಕೆವಿ ಮಾಡಾವು-ಕಾವು-ಸುಳ್ಯ ವಿದ್ಯುತ್ ಮಾರ್ಗಗಳ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದ್ದರಿಂದ 110/33/11 ಕೆವಿ ಮಾಡಾವು ಹಾಗೂ 33/11ಕಪ್ ಸುಳ್ಯ, ಕಾವು, ಬೆಳ್ಳಾರೆ ಮತ್ತು ಗುತ್ತಿಗಾರು ವಿದ್ಯುತ್‌ ಉಪಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್‌ಗಳಿಂದ ವಿದ್ಯುತ್‌ ಸರಬರಾಜಾಗುವ ವಿದ್ಯುತ್‌ ಬಳಕೆದಾರರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

Recent News


Leave a Comment: