ಕಲ್ಲಡ್ಕ ಮ್ಯೂಸಿಯಂ ವೀಕ್ಷಿಸಿದ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್

ಸುದ್ದಿಗಳು News

Posted by vidyamaana on 2024-06-30 19:51:42 |

Share: | | | | |


ಕಲ್ಲಡ್ಕ ಮ್ಯೂಸಿಯಂ ವೀಕ್ಷಿಸಿದ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್

ಬಂಟ್ವಾಳ : ತಾಲೂಕಿನ ವಿವಿಧ ಕಡೆಗಳಿಗೆ ತೆರಳಿ ಮಳೆಹಾನಿ ಬಗ್ಗೆ ವೀಕ್ಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಜಿಲ್ಲೆಯಲ್ಲಿಯೇ ಖ್ಯಾತಿ ಪಡೆದಿರುವ ಕಲ್ಲಡ್ಕದ ಯಾಸೀರ್ ಅವರ ಅಪರೂಪದ ವಸ್ತುಗಳ ಸಂಗ್ರಹವಿರುವ ಕಲ್ಲಡ್ಕ ಮ್ಯೂಸಿಯಂಗೆ ಭೇಟಿ ನೀಡಿದರು.ಹಿಂದಿನ ಕಾಲದ ವಸ್ತುಗಳು, ನಾಣ್ಯ, ಪತ್ರಿಕೆಗಳ ಸಂಗ್ರಹವನ್ನು ವೀಕ್ಷಿಸಿ ರೋಮಾಂಚನಗೊಂಡ ಅವರು ಯಾಸೀರ್ ಅವರ ವಸ್ತುಗಳ ಸಂಗ್ರಹಣ ಕೌಶಲ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅತ್ಯಂತ ಸಾವಕಾಶವಾಗಿ ಪ್ರತಿಯೊಂದು ವಸ್ತುಗಳನ್ನು ಕುತೂಹಲದಿಂದ ವೀಕ್ಷಿಸಿ ಅವುಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮೊಡಂಕಾಪುವಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು. ಇಲ್ಲಿನ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಎಲ್ಲರಿಗೂ ಕೈಕುಲುಕಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಮಕ್ಕಳಿಂದ ಅಂಬೇಡ್ಕರ್ ಬಗ್ಗೆ ಹಾಡು ಹಾಡಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಗಮನ ಸೆಳೆದರು. ತಹಸೀಲ್ದಾರ್ ಅರ್ಚನಾ ಭಟ್, ವಿದ್ಯಾರ್ಥಿ ನಿಲಯ ಮೇಲ್ವಿಚಾರಕರು ಜೊತೆಗಿದ್ದರು.

 Share: | | | | |


ಬೆಳ್ತಂಗಡಿ: ಕರಿಮಣಿ ಸರ ಕಳ್ಳತನ-ತಮಿಳುನಾಡು ಮೂಲದ ಇಬ್ಬರು ಕಳ್ಳಿಯರ ಬಂಧನ

Posted by Vidyamaana on 2023-12-21 11:45:36 |

Share: | | | | |


ಬೆಳ್ತಂಗಡಿ: ಕರಿಮಣಿ ಸರ ಕಳ್ಳತನ-ತಮಿಳುನಾಡು ಮೂಲದ ಇಬ್ಬರು ಕಳ್ಳಿಯರ ಬಂಧನ

ಬೆಳ್ತಂಗಡಿ: ಉದ್ಯೋಗಿಯೊಬ್ಬರು ಸರಕಾರಿ ಬಸ್‌ ಹತ್ತುವ ವೇಳೆ ಕರಿಮಣಿ ಸರ ಕಳ್ಳತನ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಮಿಳುನಾಡು ಮೂಲದ ಇಬ್ಬರು ಕಳ್ಳಿಯರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.ತಮಿಳುನಾಡು ತಿರುಪುರ್‌ ಜಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35) ಮತ್ತು ದಿವ್ಯಾ ಯಾನೆ ಕಾಮಾಚಿ (30) ಬಂಧಿತ ಆರೋಪಿಗಳು.


ಡಿ. 12ರಂದು ಸರಕಾರಿ ಉದ್ಯೋಗಿ ವಾರಿಜಾ ಅವರು ಧರಿಸಿದ್ದ 24 ಗ್ರಾಂ ತೂಕದ ಚಿನ್ನದ ಕರಿಮಣಿ ಸರವು ಸರಕಾರಿ ಬಸ್‌ ಹತ್ತುವ ವೇಳೆ ಕಳ್ಳತನವಾಗಿತ್ತು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು.


ವಾರಿಜಾ ಅವರ ದೂರಿನಂತೆ ಪ್ರಕರಣ ದಾಖಲಿಸಿಕೊಂಡ ಬೆಳ್ತಂಗಡಿ ಪೊಲೀಸರು ತನಿಖೆ ನಡೆಸುತ್ತಿದ್ದರು. ಇದೀಗ ಬೆಳ್ತಂಗಡಿ ಉಪ ನಿರೀಕ್ಷಕ ಚಂದ್ರಶೇಖರ್‌ ಮತ್ತು ಅವರ್ ತಂಡ ಖಚಿತ ಮಾಹಿತಿ ಮೇರೆಗೆ ತಮಿಳುನಾಡು ಮೂಲದ ಇಬ್ಬರು ಕಳ್ಳಿಯರನ್ನು ಡಿ. 20ರಂದು ಧರ್ಮಸ್ಥಳ ಕೆಎಸ್ ಆರ್ ಟಿಸಿ ಬಸ್‌ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಬಳಿಕ ವಿಚಾರಣೆ ನಡೆಸಿದಾಗ ಕಳ್ಳತನ ಮಾಡಿದ ಕರಿಮಣಿ ಸರವನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.


ಆರೋಪಿಗಳಿಬ್ಬರ ಮೇಲೆ ಈ ಹಿಂದೆ ಬೆಳ್ತಂಗಡಿ ಸೇರಿದಂತೆ ವಿವಿಧ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿವೆ. ಇನ್ನು ಆರೋಪಿಗಳು ವಿಚಾರಣೆ ವೇಳೆ ಮೂಲ್ಕಿ ಮತ್ತು ಬೆಳ್ತಂಗಡಿಯಲ್ಲಿ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎನ್ನಲಾಗಿದೆ.


ಆರೋಪಿಗಳನ್ನು ಡಿ. 20 ನ್ಯಾಯಾಧೀಶರ ಬಳಿ ಹಾಜರುಪಡಿಸಲಾಗಿದ್ದು, ಅವರಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪುಣಚ : ಆಟೋರಿಕ್ಷಾ ಪಲ್ಟಿ : ಚಾಲಕ ಜಗನ್ನಾಥ್ ಮೃತ್ಯು

Posted by Vidyamaana on 2023-06-13 15:49:27 |

Share: | | | | |


ಪುಣಚ : ಆಟೋರಿಕ್ಷಾ ಪಲ್ಟಿ : ಚಾಲಕ ಜಗನ್ನಾಥ್ ಮೃತ್ಯು

ವಿಟ್ಲ: ಚಲಿಸುತ್ತಿದ್ದ ಆಟೋರಿಕ್ಷಾಕ್ಕೆ ಅಡ್ಡಲಾಗಿ ಬಂದ ದನವನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿ ಆಟೋರಿಕ್ಷಾದಿಂದ ರಸ್ತೆಗೆ ಎಸೆಯಲ್ಪಟ್ಟ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ.

ಜಗನ್ನಾಥ ಪೈಸಾರಿ(57) ಮೃತ ಚಾಲಕ.ಮಂಗಳವಾರ ಮಧ್ಯಾಹ್ನ ಊಟ ಮುಗಿಸಿದ ಬಳಿಕ ಪುಣಚದ ಅಟೋರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಮಣಿಲ ಎಂಬಲ್ಲಿ ದುರ್ಘಟನೆ ಸಂಭವಿಸಿದ್ದು, ಆಟೋರಿಕ್ಷಾ ರಸ್ತೆಗೆ ಪಲ್ಟಿಯಾಗಿ ಬಿದ್ದ ಕಾರಣ, ತಲೆಗೆ ಗಂಭೀರ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರೆನ್ನಲಾಗಿದೆ

.ತುಳು ನಾಟಕ ರಂಗದಲ್ಲಿ ಹಾಸ್ಯ ಅಭಿನಯದ ಮೂಲಕ ಮಿಂಚಿದ್ದ ಅವರು, ಕಳೆದ ಮೂವತ್ತು ವರ್ಷಗಳಿಂದ ಆಟೋರಿಕ್ಷಾ ಚಾಲಕರಾಗಿ’ರಿಕ್ಷಾ ಜಗ್ಗಣ್ಣ’ಎಂದೇ ಗುರುತಿಸಲ್ಪಟ್ಟಿದ್ದರು.

ಮೃತರ ಮನೆಗೆ ಹಲವಾರು ಮಂದಿ ಭೇಟಿ ನೀಡಿ ಸಂತಾಪ ಸೂಚಿಸಿದರು.

ಮೃತರು ಪತ್ನಿ, ಪುತ್ರಿ, ಪುತ್ರ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಅಡ್ಡಾದಿಡ್ಡಿ ವಾಹನ ನಿಲ್ಲಿಸುವ ಸವಾರರೇ ಎಚ್ಚರಿಕೆ!!!

Posted by Vidyamaana on 2023-08-22 16:09:29 |

Share: | | | | |


ಅಡ್ಡಾದಿಡ್ಡಿ ವಾಹನ ನಿಲ್ಲಿಸುವ ಸವಾರರೇ ಎಚ್ಚರಿಕೆ!!!

ಪುತ್ತೂರು: ಪೇಟೆಯಲ್ಲಿ ವಾಹನ ದಟ್ಟಣೆ ಕೈಮೀರಿ ಹೋಗಲು ಒಂದು ಕಾರಣ ಅಡ್ಡಾದಿಡ್ಡಿ ವಾಹನ ನಿಲ್ಲಿಸುವುದೂ. ಇದನ್ನು ನಿಯಂತ್ರಿಸುವಲ್ಲಿ ಟ್ರಾಫಿಕ್ ಪೊಲೀಸರು ಬಿಗು ನಿಲುವು ಕೈಗೊಂಡಿದ್ದು, ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಆಸುಪಾಸು ಕೆಲ ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದಾರೆ.

ಬಸ್ ನಿಲ್ದಾಣ ಮುಂಭಾಗದ ಖಾಸಗಿ ಕಟ್ಟಡದ ಎದುರು ಅಡ್ಡಾದಿಡ್ಡಿ ವಾಹನ ಪಾರ್ಕಿಂಗ್ ಮಾಡುತ್ತಿದ್ದರು. ಇದು ದೊಡ್ಡ ತಲೆನೋವಾಗಿದ್ದು, ದಿನನಿತ್ಯ ಸಂಚಾರ ದಟ್ಟಣೆ ಉದ್ಭವವಾಗುತ್ತಿತ್ತು. ಇದಕ್ಕೆ ಪರಿಹಾರವಾಗಿ, ದ್ವಿಚಕ್ರ ವಾಹನ ನಿಲ್ದಾಣ ಹಾಗೂ ಆಟೋ ರಿಕ್ಷಾಗಳಿಗೆ ಪ್ರತ್ಯೇಕ ಸ್ಥಳವನ್ನು ಪಾರ್ಕಿಂಗಿಗಾಗಿ ನಿಗದಿ ಮಾಡಲಾಗಿದೆ. ಒಂದು ವೇಳೆ ಸಾರ್ವಜನಿಕರು ಇದರಿಂದ ಹೊರಭಾಗದಲ್ಲಿ‌ ತಮ್ಮ ವಾಹನಗಳನ್ನು‌ ಪಾರ್ಕಿಂಗ್ ಮಾಡಿದ್ದೇ ಆದರೆ, ಸಂಚಾರ ಪೊಲೀಸರು ಕ್ರಮ ಕೈಗೊಳ್ಳುವುದು ನಿಶ್ಚಿತ.

ಇದೇ ರೀತಿ ಗಾಂಧೀ ಕಟ್ಟೆ, ನಗರಸಭೆಯ ವಾಣಿಜ್ಯ ಸಂಕೀರ್ಣ ಮೊದಲಾದ ಕಡೆಗಳಲ್ಲೂ ಸುಧಾರಣಾ ಕ್ರಮಗಳನ್ನು ಅಳವಡಿಸಿದ್ದಾರೆ. ಸೂಕ್ತ ಯಲ್ಲೋ ಮಾರ್ಕ್ ಮಾಡಿದ್ದಾರೆ.

ಟ್ರಾಫಿಕ್ ಪಿ.ಎಸ್.ಐ. ಉದಯರವಿ ನೇತೃತ್ವದ ಪೊಲೀಸರ ತಂಡದ ಈ ಕ್ರಮಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

94ಸಿ ಗೆ ಪಿಡಿಒಗಳಿಂದ ದೃಡೀಕರಣ ಪತ್ರ ಕೇಳಬೇಡಿ ಮನೆ ಕಟ್ಟಿಕೊಂಡಿದ್ದಲ್ಲಿ ಅರ್ಜಿಯನ್ನು ಪುರಸ್ಕರಿಸಿ: ತಹಶಿಲ್ದಾರ್ ಗೆ ಶಾಸಕರ ಸೂಚನೆ

Posted by Vidyamaana on 2024-01-29 14:54:31 |

Share: | | | | |


94ಸಿ ಗೆ ಪಿಡಿಒಗಳಿಂದ ದೃಡೀಕರಣ ಪತ್ರ ಕೇಳಬೇಡಿ ಮನೆ ಕಟ್ಟಿಕೊಂಡಿದ್ದಲ್ಲಿ ಅರ್ಜಿಯನ್ನು ಪುರಸ್ಕರಿಸಿ: ತಹಶಿಲ್ದಾರ್ ಗೆ ಶಾಸಕರ ಸೂಚನೆ

ಪುತ್ತೂರು; ಗ್ರಾಮೀಣ ಭಾಗದ ಬಡ‌ವರು ಸರಕಾರಿ ಜಾಗದಲ್ಲಿ‌ಮನೆ ಕಟ್ಟಿಕೊಂಡಿದ್ದರೆ ಅವರಿಗೆ ಹಕ್ಕು ಪತ್ರ ಕೊಡಬೇಕು, 94 ಸಿ ಅರ್ಜಿ ಜೊತೆಗೆ ಗ್ರಾಮದ ಪಿಡಿಒಗಳಿಂದ ದೃಡೀಕರಣ ಪತ್ರ ಬೇಕು ಎಂದು ತಹಶಿಲ್ದಾರ್ ಹೇಳುತ್ತಿದ್ದು ಯಾವುದೇ ಕಾರಣಕ್ಕೂ ಪಿಡಿಒಗಳಿಂದ ದೃಡೀಕರಣ ಪತ್ರ ಕೇಳಬೇಡಿ‌ಎಂದು‌ಶಾಸಕರಾದ ಅಶೋಕ್ ರೈ ತಹಶಿಲ್ದಾರ್ ಗೆ ಸೂಚನೆ ನೀಡಿದರು.

ತಾಪಂ ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ‌ಮಾತನಾಡಿದ ಶಾಸಕರು ಈ ಸೂಚನೆಯನ್ನು ನೀಡಿದ್ದಾರೆ.‌

ಹಕವಾರು 94 ಸಿ ಅರ್ಜಿಗಳು ಪಿಡಿಒ ದೃಡೀಕರಣ ಪತ್ರವಿಲ್ಲದ ಕಾರಣಕ್ಕೆ ವಿಲೇವಾರಿಯಾಗಿಲ್ಲ ಎಂದು ಸಭೆಗೆ ತಹಶಿಲ್ದಾರ್ ತಿಳಿಸಿದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಶಾಸಕರು ಎರಡು ವರ್ಷದ ಹಿಂದೆ ಬಂದ ಪಿಡಿಒಗೆ  ಹತ್ತು ವರ್ಷಗಳಿಂದ ಆ ಮನೆ ಅಲ್ಲಿದೆ ಎಂಬ ಮಾಹಿತಿ ಇರ್ಲಿಕ್ಕಿಲ್ಲ.‌ಅಕ್ಕಪಕ್ಕದ ಮನೆಯವರಲ್ಲಿ ಕೇಳಿ ದೃಡೀಕರಣ ಮಾಡಿ ದೃಡೀಕರಣ ಪತ್ರವಿಲ್ಲದೆ ಬಾಕಿ ಇರುವ ಎಲ್ಲಾ ಅರ್ಜಿಗಳನ್ನು ವಿಲೇವಾರಿ‌ಮಾಡಬೇಕು. ಬಡವರು ಮನೆ ಕಟ್ಟಿರುವ ಜಾಗಕ್ಕೆ ಅರ್ಜಿ ಹಾಕಿದ್ದಾರೆ, ಅವರಿಗೆ ಮನೆ ಕಟ್ಟಿಕೊಂಡ ಜಾಗ ಬಿಟ್ಟು ಬೇರೆ ಜಾಗ ಇಲ್ಲ.‌ಬಡವರಿಗೆ ತೊಂದರೆ ನೀಡುವ ಕೆಲಸವನ್ನು ಯಾರೂ ಮಾಡಬಾರದು. 94 ಸಿ ಯ ಎಷ್ಟು ಅರ್ಜಿ ಯಾವ ಕಾರಣಕ್ಕೆ ಬಾಕಿಯಾಗಿದೆ ಎಂಬುದನ್ನು ನನ್ನ‌ಗಮನಕ್ಕೆ ತರಬೇಕು ಎಂದು‌ಶಾಸಕರು ಸೂಚನೆ ನೀಡಿದರು.

ಮಾತ್ರೆ ಪ್ಯಾಕೆಟ್ ಮೇಲೆ ಕೆಂಪು ಲೈನ್‌ ಏಕೆ? ಇದರ ಅರ್ಥ ಏನು? ನಿಮಗೆ ಗೊತ್ತಾ

Posted by Vidyamaana on 2024-03-13 17:14:47 |

Share: | | | | |


ಮಾತ್ರೆ ಪ್ಯಾಕೆಟ್ ಮೇಲೆ ಕೆಂಪು ಲೈನ್‌ ಏಕೆ? ಇದರ ಅರ್ಥ ಏನು? ನಿಮಗೆ ಗೊತ್ತಾ

ಸಾಮಾನ್ಯವಾಗಿ, ಅನೇಕ ಜನರು ಅನಾರೋಗ್ಯಕ್ಕೆ ಒಳಗಾದಾಗ, ಅವರು ವೈದ್ಯರ ಬಳಿಗೆ ಹೋಗದೆ ನೇರವಾಗಿ ಮೆಡಿಕಲ್ ಸ್ಟೋರ್‌ಗೆ ಹೋಗಿ ಮಾತ್ರೆಗಳನ್ನು ಖರೀದಿಸುತ್ತಾರೆ. ಕೆಲವೊಮ್ಮೆ ಔಷಧಿಯನ್ನು ವೈದ್ಯರಿಗೆ ತೋರಿಸಿದ ನಂತರ ತೆಗೆದುಕೊಳ್ಳಲಾಗುತ್ತದೆ.ನೀವು ನೇರವಾಗಿ ಮೆಡಿಕಲ್ ಸ್ಟೋರ್‌ಗೆ ಹೋಗಿ ನಿಮ್ಮ ಸಮಸ್ಯೆಯನ್ನು ಗುಣಪಡಿಸುವ ಔಷಧಿಯನ್ನು ಪಡೆದರೂ, ಕೆಲವೊಮ್ಮೆ ನೀವು ಗಂಭೀರ ಅಡ್ಡಪರಿಣಾಮಗಳನ್ನು ಅನುಭವಿಸಬೇಕಾಗುತ್ತದೆ. ನೋವು ನಿವಾರಕಗಳು, ಆಯಂಟಿಬಯೋಟಿಕ್‌ಗಳು ಮುಂತಾದ ತಕ್ಷಣದ ನೋವು ನಿವಾರಕ ಮಾತ್ರೆಗಳನ್ನು ಖರೀದಿಸುವಾಗ ಮಾತ್ರೆ ಪ್ಯಾಕೆಟ್‌ನಲ್ಲಿ ಕೆಂಪು ಗೆರೆಗಳನ್ನು ನೀವು ಗಮನಿಸಿರಬಹುದು. ಆದರೆ ಈ ಕೆಂಪು ರೇಖೆ ಏಕೆ ಇರುತ್ತದೆ ಎಂದು ನೀವೂ ಎಂದಾದರೂ ಯೋಚಿಸಿದ್ದೀರಾ..? ಹಾಗಾದರೆ ಇಲ್ಲಿ ತಿಳಿಯಿರಿ..


ಮಾತ್ರೆ ಪ್ಯಾಕೆಟ್‌ನಲ್ಲಿರುವ ಕೆಂಪು ರೇಖೆಯ ಅರ್ಥವೇನು?

ವಾಸ್ತವವಾಗಿ, ಮಾತ್ರೆ ಪ್ಯಾಕೆಟ್‌ನಲ್ಲಿ ಕೆಂಪು ರೇಖೆ ಎಂದರೆ ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಮಾತ್ರೆ ಮಾರಾಟ ಮಾಡಬೇಡಿ ಅಥವಾ ವೈದ್ಯರ ಸಲಹೆಯಿಲ್ಲದೆ ಬಳಸಬೇಡಿ. ಆದ್ದರಿಂದ, ಪ್ರತಿಜೀವಕಗಳ ದುರುಪಯೋಗವನ್ನು ತಡೆಗಟ್ಟಲು, ಔಷಧಿಗಳ ಮೇಲೆ ಕೆಂಪು ರೇಖೆಯನ್ನು ನೀಡಲಾಗುತ್ತದೆ. ಆರೋಗ್ಯ ಸಚಿವಾಲಯವು ತನ್ನ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಅನ್ನು ಹಂಚಿಕೊಂಡಿದೆ.ಔಷಧಿಗಳು, ವಿಶೇಷವಾಗಿ ಪ್ಯಾಕೇಜಿಂಗ್‌ನಲ್ಲಿ ಕೆಂಪು ಲಂಬ ರೇಖೆಯನ್ನು ಹೊಂದಿರುವ ಪ್ರತಿಜೀವಕಗಳನ್ನು ಅರ್ಹ ವೈದ್ಯರನ್ನು ಸಂಪರ್ಕಿಸದೆ ಎಂದಿಗೂ ಸೇವಿಸಬಾರದು. ಜಾಗೃತರಾಗಿರಿ, ಸುರಕ್ಷಿತವಾಗಿರಿಕೆಂಪು ರೇಖೆಯ ಹೊರತಾಗಿ, ಔಷಧದ ಮೇಲೆ ಅನೇಕ ಉಪಯುಕ್ತ ವಿಷಯಗಳನ್ನು ಬರೆಯಲಾಗಿದೆ. ಅವರ ಬಗ್ಗೆ ತಿಳಿದುಕೊಳ್ಳುವುದು ಮುಖ್ಯ. ಕೆಲವು ಔಷಧಿಗಳ ಪ್ಯಾಕೆಟ್ ಮೇಲೆ Rx ಎಂದು ಬರೆಯಲಾಗಿದೆ. ಅಂದರೆ ವೈದ್ಯರ ಸಲಹೆಯಂತೆ ಔಷಧಿಗಳನ್ನು ತೆಗೆದುಕೊಳ್ಳಬೇಕು. ಕೆಲವು ಔಷಧಿಗಳ ಪ್ಯಾಕೆಟ್ ಮೇಲೆ XRx ಎಂದು ಬರೆಯಲಾಗಿದೆ. ಇದರರ್ಥ ಔಷಧಿಯನ್ನು ವೈದ್ಯರು ಮಾತ್ರ ಸೂಚಿಸಬಹುದು. ವೈದ್ಯರು ಈ ಔಷಧಿಯನ್ನು ನೇರವಾಗಿ ರೋಗಿಗೆ ನೀಡಬಹುದು. ವೈದ್ಯರು ಬರೆದ ಪ್ರಿಸ್ಕ್ರಿಪ್ಷನ್ ಇದ್ದರೂ, ರೋಗಿಯು ಅದನ್ನು ಯಾವುದೇ ಮೆಡಿಕಲ್ ಸ್ಟೋರ್‌ನಿಂದ ಖರೀದಿಸಲು ಸಾಧ್ಯವಿಲ್ಲ.

ಬಿಜೆಪಿ ಯುವಮೋರ್ಚಾ ಮುಖಂಡನ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಮದ್ಯ ದಾಸ್ತಾನು ಪತ್ತೆ ; ಮನೆ ಮಾಲೀಕ ರಮೇಶ್ ಪ್ರಭು ಪೊಲೀಸ್ ವಶಕ್ಕೆ

Posted by Vidyamaana on 2024-04-09 17:32:02 |

Share: | | | | |


ಬಿಜೆಪಿ ಯುವಮೋರ್ಚಾ ಮುಖಂಡನ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಮದ್ಯ ದಾಸ್ತಾನು ಪತ್ತೆ ; ಮನೆ ಮಾಲೀಕ ರಮೇಶ್ ಪ್ರಭು ಪೊಲೀಸ್ ವಶಕ್ಕೆ

ಉಡುಪಿ, ಎ.9: ಬಿಜೆಪಿ ಯುವಮೋರ್ಚಾ ಮುಖಂಡನ ಮನೆಗೆ ಅಬಕಾರಿ ಪೊಲೀಸರು ದಾಳಿ ನಡೆಸಿದ್ದು ಲಕ್ಷಾಂತರ ರೂ. ಮೌಲ್ಯದ ಮದ್ಯ ವಶಕ್ಕೆ ಪಡೆದಿದ್ದಾರೆ. 


ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಮಂಗಳೂರು ಮತ್ತು ಉಡುಪಿ ಅಬಕಾರಿ ವಿಭಾಗದ ಆಯುಕ್ತರ ಸೂಚನೆಯಂತೆ ಪೊಲೀಸ್ ಸಿಬಂದಿ ದಾಳಿ ನಡೆಸಿದ್ದಾರೆ. ನಿನ್ನೆ ರಾತ್ರಿ ಬ್ರಹ್ಮಾವರ ಇಂದಿರಾ ನಗರದಲ್ಲಿರುವ ರಮೇಶ ಪ್ರಭು ಎಂಬವರ ಮನೆಗೆ ದಾಳಿ ನಡೆಸಲಾಗಿದ್ದು ಮನೆಯಲ್ಲಿ ಕೂಡಿಟ್ಟಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ.



Leave a Comment: