ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಸುದ್ದಿಗಳು News

Posted by vidyamaana on 2024-07-03 08:24:56 |

Share: | | | | |


ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

ವರ್ಗಾವಣೆಗೊಂಡ ಕೆಎಎಸ್‌ ಅಧಿಕಾರಿಗಳು

ಡಾ. ಜಗದೀಶ್‌ ಕೆ. ನಾಯಕ್‌

ರಘುನಂದನ್‌ ಎ.ಎನ್‌

ಪ್ರಸನ್ನ ಕುಮಾರ್‌ ವಿ.ಕೆ

ಹುಲ್ಲುಮನಿ ತಿಮ್ಮಣ್ಣ

ವರ್ಗಾವಣೆಗೊಂಡ ಐಪಿಎಸ್‌ ಅಧಿಕಾರಿಗಳು

ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ

ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ

ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ

ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ

ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ

ಸುಮನ್ ಡಿ. ಪೆನ್ನೇಕರ್ -ಎಸ್‌ ಪಿ, ಬಿಎಂಟಿಎಫ್

ಸಿ.ಬಿ. ರಿಷ್ಯಂತ್ -ಎಸ್.ಪಿ

ಚನ್ನಬಸವಣ್ಣ - ಎಐಜಿಪಿ, ಆಡಳಿತ, ಡಿಜಿ ಕಚೇರಿ

ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ

ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ

ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.

ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್

ಪ್ರದೀಪ್‌ ಗುಂಡಿ - ಎಸ್‌ ಪಿ. ಬೀದರ್‌ ಜಿಲ್ಲೆ

ಯತೀಶ್‌ ಎನ್. - ಎಸ್‌ ಪಿ ದಕ್ಷಿಣ ಕನ್ನಡ ಜಿಲ್ಲೆ

ಮಲ್ಲಿಕಾರ್ಜುನ ಬಾಲದಂಡ ಎಸ್‌ ಪಿ ಮಂಡ್ಯ ಜಿಲ್ಲೆ

ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿಲ್ಲೆ

ಬಿ. ನಿಖಿಲ್‌ ಎಸ್‌ ಪಿ ಕೋಲಾರ ಜಿಲ್ಲೆ

 Share: | | | | |


HSRP ನಂಬರ್ ಪ್ಲೇಟ್ ಅಳವಡಿಕೆ ದಿನಾಂಕದ ಬಿಗ್‌ ಅಪ್ಡೇಟ್ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

Posted by Vidyamaana on 2024-02-12 06:39:50 |

Share: | | | | |


HSRP ನಂಬರ್ ಪ್ಲೇಟ್ ಅಳವಡಿಕೆ ದಿನಾಂಕದ ಬಿಗ್‌ ಅಪ್ಡೇಟ್ ಕೊಟ್ಟ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು : ಹೈಸೆಕ್ಯೂರಿಟಿ ನಂಬರ್ ಪ್ಲೇಟ್ (High Security number plate-HSRP) ಕುರಿತು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಈಗಾಗಲೇ ಹಲವು ಗಡುವುಗಳನ್ನು ನೀಡಿ ವಿಸ್ತರಿಸಿದೆ. ಫೆಬ್ರವರಿ 17 ಕೊನಯ ದಿನವಾಗಿದೆ. ಆದರೂ, ಜನರು ಕೊನೇ ಅವಧಿಯಲ್ಲಿ ಹೆಚ್ಚೆಚ್ಚು ರಿಜಿಸ್ಟರ್ ಮಾಡಲು ಮುಂದಾಗುತ್ತಿದ್ದು, ಅಪ್ಲೋಡ್ ಸಮಸ್ಯೆಯಾಗಲಿದೆ.ಈಗ ಪುನಃ ದಿನಾಂಕ ವಿಸ್ತರಣೆಗೆ ಒತ್ತಡ ಕೇಳಿ ಬಂದಿದ್ದು, ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.


ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ನಡೆದ ಸಾರಿಗೆ ಇಲಾಖೆ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅನೇಕ ಇಲಾಖೆಗಳನ್ನ ಸಿಎಂ ಸಭೆ ಕರೆದಿದ್ದರು. ಅದೇ ರೀತಿ ಸಾರಿಗೆ ಇಲಾಖೆಯವರು ಕೂಡ ಭಾಗಿಯಾಗಿದ್ದರು. ಆಟೋ ಟ್ಯಾಕ್ಸಿ, ಲಾರಿ ಅಸೋಷಿಯಷನ್ ಅವರು ಎಲ್ಲಾ ಬಂದಿದ್ದರು. ಅವರ ಬೇಡಿಕೆಗಳನ್ನ ಕೂಡ ಇಟ್ಟಿದ್ದಾರೆ. ಜೊತೆಗೆ, ನಮ್ಮ ಸರ್ಕಾರ ಬಂದಮೇಲೆ ಸಾಕಷ್ಟು ಬೇಡಿಕೆ ಈಡೇರಿಸಿದ್ದೇವೆ ಎಂದರು. ಇಂದು ಹೊಸ ಬೇಡಿಕೆಗಳನ್ನೂ ಸಹ ಇಟ್ಟಿದ್ದಾರೆ. ಮುಂದಿನದ್ದು ಬಜೆಟ್ ದಿನ ನೋಡೋಣ ಎಂದು ಹೇಳಿದ್ದೇವೆ ಎಂದು ಹೇಳಿದರು.


ಇನ್ನು ಹೈಸೆಕ್ಯೂರಿಟಿ ನಂಬರ್ ಪ್ಲೇಟ್ ಮಾಡಿಸಲು ಫೆ.17ನೇ ತಾರೀಕು ಲಾಸ್ಟ ಡೇಟ್ ಇದೆ. ಹಿಂದೆ ಒಂದು ಸರಿ ಮುಂದಕ್ಕೆ ಹಾಕಿದ್ದೆವು. ಈಗ ಮತ್ತೆ ಮುಂದಕ್ಕೆ ಹಾಕಿ ಅಂತಾ ಹೇಳ್ತ ಇದಾರೆ. ಇನ್ನು ಒಂದುವಾರ ಸಮಯ ಇದೆ. ಎಲ್ಲಾ ಕೊನೇನಲ್ಲಿ ಅರ್ಜಿ ಹಾಕೋಕೆ ಬರ್ತಾರೆ. ಒತ್ತಡ ಜಾಸ್ತಿ ಆಗಿ ಅಪ್ಲೋಡ್ ಆಗೋಲ್ಲ ಅದೊಂದು ಸಮಸ್ಯೆ ಇದೆ. ಇನ್ನು ಟೈಮ್ ಇದೆ ನೋಡೋಣ ಎಂದುಸಾರಿಗೆ ಸಚೊವ ರಾಮಲಿಂಗಾರೆಡ್ಡಿ ಅವರು ಬಿಗ್ ಅಪ್ಡೇಟ್ ನೀಡಿದರು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಆಡಳಿತಾಧಿಕಾರಿ ಯೇಸುರಾಜ್ ಧರ್ಮದ ಬಗ್ಗೆ ಅಪಪ್ರಚಾರ

Posted by Vidyamaana on 2024-05-03 07:21:29 |

Share: | | | | |


ಕುಕ್ಕೆ ಸುಬ್ರಹ್ಮಣ್ಯಕ್ಕೆ ನೂತನ ಆಡಳಿತಾಧಿಕಾರಿ ಯೇಸುರಾಜ್ ಧರ್ಮದ ಬಗ್ಗೆ ಅಪಪ್ರಚಾರ

ಮಂಗಳೂರು, ಮೇ.2: ರಾಜ್ಯದ ಮುಜರಾಯಿ ಇಲಾಖೆಗೊಳಪಟ್ಟ ಶ್ರೀಮಂತ ದೇಗುಲ ಎಂದು ಹೆಸರಾಗಿರುವ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ಎಸ್.ಜೆ. ಯೇಸುರಾಜ್ ಎಂಬವರನ್ನು ನೇಮಕ ಮಾಡಲಾಗಿತ್ತು. ರಾಮನಗರ ಜಿಲ್ಲಾ ಮುಜರಾಯಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೇಸುರಾಜ್ ಅವರನ್ನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಎಇಓ ಆಗಿ ನೇಮಕ ಮಾಡಿರುವುದು ಚರ್ಚೆಗೂ ಕಾರಣವಾಗಿತ್ತು.


ಯೇಸುರಾಜ್ ಎನ್ನುವ ಹೆಸರಿನ ಕಾರಣಕ್ಕೆ ಅನ್ಯ ಧರ್ಮದವರನ್ನು ಹಿಂದುಗಳ ದೇವಸ್ಥಾನಕ್ಕೆ ನೇಮಕ ಮಾಡಿದ್ದಾರೆಂದು ಹಿಂದು ಸಂಘಟನೆಗಳ ನಾಯಕರು ಆಕ್ಷೇಪಿಸಿದ್ದರು. ಅವರ ಧರ್ಮದ ಹಿನ್ನೆಲೆಯ ಬಗ್ಗೆ ಪ್ರಶ್ನೆಯನ್ನೂ ಮಾಡಿದ್ದರು. ಈ ವಿಚಾರ ಆಕ್ಷೇಪಕ್ಕೆ ಗುರಿಯಾದ ಬೆನ್ನಲ್ಲೇ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಸ್ಪಷ್ಟನೆ ನೀಡಿದ್ದು, ಯೇಸುರಾಜ್ ಅವರ ಹಿನ್ನೆಲೆ, ಗೋತ್ರಗಳ ದಾಖಲೆಯನ್ನು ಟ್ವಿಟರ್ ನಲ್ಲಿ ಬಿಡುಗಡೆ ಮಾಡಿದ್ದಾರೆ.

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿರುವ ವರುಣ ದೇವರ ವಿಗ್ರಹಕ್ಕೆ ಪೂಜೆ

Posted by Vidyamaana on 2023-03-27 07:30:32 |

Share: | | | | |


ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯಲ್ಲಿರುವ ವರುಣ ದೇವರ ವಿಗ್ರಹಕ್ಕೆ ಪೂಜೆ

ಪುತ್ತೂರು : ಇತಿಹಾಸ ಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆರೆಯ ಅಭಿವೃದ್ಧಿ ಕಾರ್ಯ ನಡೆಯುತ್ತಿದ್ದು, ಈ ವೇಳೆ ಕೆರೆಯಲ್ಲಿರುವ ದೇವರ ಕಟ್ಟೆಯ ತಳಭಾಗದಲ್ಲಿರುವ ವರುಣ ದೇವರವಿಗ್ರಹಕ್ಕೆಪೂಜೆಸಲ್ಲಿಸಲಾಯಿತುದೇವಸ್ಥಾನದ ಕೆರೆಯಲ್ಲಿರುವ ದೇವರ ಕಟ್ಟೆಯ ತಳಭಾಗದಲ್ಲಿ ವರುಣ ದೇವರ ವಿಗ್ರಹವಿದ್ದು, ಕೆರೆಯಲ್ಲಿ ಸದಾ ನೀರು ತುಂಬಿರುವುದರಿಂದ ಅದು ಭಕ್ತರಿಗೆ ಕಾಣ ಸಿಗುವುದಿಲ್ಲ.

ಅಭಿವೃದ್ಧಿ ಕಾರ್ಯ ಹಿನ್ನೆಲೆ ಕೆರೆಯ ನೀರನ್ನು ಸ್ವಲ್ಪ ಮಟ್ಟಿಗೆ ತೆಗೆಯಲಾಗಿದ್ದು, ಈ ಹಿನ್ನೆಲೆ ಮಂಟಪದ ತಳಭಾಗದಲ್ಲಿರುವ ವರುಣ ದೇವರ ವಿಗ್ರಹವು ಎಲ್ಲರಿಗೂ ಕಾಣ ಸಿಗುತ್ತಿದೆ.

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ವಾಸ್ತುಶಿಲ್ಪಿ ಜಗನ್ನಿವಾಸ್ ರಾವ್, ಪ್ರಧಾನ ಅರ್ಚಕ ವಸಂತ ಕೆದಿಲಾಯ ರವರು ವಿಗ್ರಹಕ್ಕೆ ಪೂಜೆ ನೆರವೇರಿಸಿದರು.

ಸಂಜೀವ ಮಠಂದೂರಿಗೆ ಪುತ್ತೂರು ಮಂಡಲ ಅಧ್ಯಕ್ಷ ಪಟ್ಟ

Posted by Vidyamaana on 2024-02-05 13:20:13 |

Share: | | | | |


ಸಂಜೀವ ಮಠಂದೂರಿಗೆ ಪುತ್ತೂರು ಮಂಡಲ ಅಧ್ಯಕ್ಷ ಪಟ್ಟ

ಪುತ್ತೂರು: ಪುತ್ತೂರಿನ ಮಾಜಿ ಶಾಸಕ ಸಂಜೀವ


ಮಠಂದೂರು ಅವರನ್ನು ಪುತ್ತೂರು ಮಂಡಲದ ಅಧ್ಯಕ್ಷರನ್ನಾಗಿ ನೇಮಿಸಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪತ್ರವೊಂದು ಹರಿದಾಡುತ್ತಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಅವರ ಸಹಿ ಇರುವ ಭಾರತೀಯ ಜನತಾ ಪಾರ್ಟಿ ದ.ಕ ಜಿಲ್ಲೆ ಲೆಟರ್‌ಹೆಡ್‌ನ ಈ ಪಟ್ಟಿಯಲ್ಲಿ ಸಂಜೀವ ಮಠಂದೂರು ಅವರನ್ನು ಪುತ್ತೂರು ಮಂಡಲ ಅಧ್ಯಕ್ಷರಾಗಿ ನೇಮಿಸಿರುವ ಬಗ್ಗೆ ಮಾಹಿತಿ ನೀಡಲಾಗಿದೆ. ಆದರೆ ಇದು ನಕಲಿ ಪತ್ರ ಎಂದು ಹೇಳಲಾಗಿದೆ. ಈ ಕುರಿತು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ರವರು ಪತ್ರ ಮತ್ತು ಪಟ್ಟಿಯ ಬಗ್ಗೆ ಸ್ಪಷ್ಟನೆ ನೀಡಿದ್ದು ಇದೊಂದು ನಕಲಿ ಪಟ್ಟಿ ಎಂದು ಸ್ಪಷ್ಟಪಡಿಸಿದ್ದಾರೆ.

ಪ್ರಿಯಕರ ನೆರವಿನಿಂದ ಕತಾರ್ ಗೆ ಹಾರಿದ ಚೈತ್ರಾ

Posted by Vidyamaana on 2024-03-02 17:44:12 |

Share: | | | | |


ಪ್ರಿಯಕರ ನೆರವಿನಿಂದ ಕತಾರ್ ಗೆ ಹಾರಿದ ಚೈತ್ರಾ

ಉಳ್ಳಾಲ, ಮಾ.2: ಉಳ್ಳಾಲದ ಮಾಡೂರಿನ ಪಿಜಿ ಯಿಂದ ನಾಪತ್ತೆಯಾಗಿದ್ದ ಪಿ.ಎಚ್.ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ಗಲ್ಫ್ ರಾಷ್ಟ್ರದ ಕತಾರ್ ತೆರಳಿದ್ದಾಳೆ ಎನ್ನಲಾಗುತ್ತಿದ್ದು, ಆಕೆಯ ಪ್ರಿಯಕರ ಶಾರೂಕ್ ನನ್ನ ಉಳ್ಳಾಲ ಪೊಲೀಸರು ಹಿಮಾಚಲ ಪ್ರದೇಶದಲ್ಲಿ ವಶಕ್ಕೆ ಪಡೆದು ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಬಿಟ್ಟು ಕಳಿಸಿದ್ದಾರೆ. 


ಪುತ್ತೂರಿನ ಮುಕ್ವೆ ನಿವಾಸಿ ಚೈತ್ರಾ  ತನ್ನ ಪ್ರಿಯಕರ ಬಂಟ್ವಾಳ ತಾಲೂಕಿನ ನೇರಳಕಟ್ಟೆ ನಿವಾಸಿ ಶಾರೂಕ್ ಶೇಖ್ ನೆರವಿನಲ್ಲಿ ವಿದೇಶಕ್ಕೆ ವಿಸಿಟಿಂಗ್ ವೀಸಾದಲ್ಲಿ ತೆರಳಿದ್ದಾಳೆ ಎಂಬ ಮಾಹಿತಿ ಲಭಿಸಿದೆ. ದೇರಳಕಟ್ಟೆಯ ಖಾಸಗಿ ವಿ.ವಿಯಲ್ಲಿ ಪಿ.ಎಚ್.ಎಡಿ ವ್ಯಾಸಂಗ ಮಾಡುತ್ತಿದ್ದ ಚೈತ್ರಾ ಹೆಬ್ಬಾರ್ ಕಳೆದ ಫೆ.17 ರಂದು ತಾನು ನೆಲೆಸಿದ್ದ ಕೋಟೆಕಾರು ಮಾಡೂರಿನ ಪಿಜಿಯಿಂದ ತನ್ನ ಸ್ಕೂಟರ್ ಸಮೇತ ನಾಪತ್ತೆಯಾಗಿದ್ದಳು. ಫೆ.18 ಕ್ಕೆ ಶಾರೂಕ್ ಶೇಖ್ ಕೂಡಾ ನಾಪತ್ತೆಯಾಗಿದ್ದ. ಚೈತ್ರಾಳ ಸ್ಕೂಟರ್ ಸುರತ್ಕಲ್ ನಲ್ಲಿ ಪತ್ತೆಯಾಗಿದ್ದು ಅಲ್ಲಿಂದ ಬೆಂಗಳೂರಿಗೆ ತೆರಳಿರುವ ಮಾಹಿತಿ ಪೊಲೀಸರಿಗೆ ಲಭಿಸಿತ್ತು.ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾನಾಯಕ್ ಮತ್ತು ಉಳ್ಳಾಲ ಪಿಎಸ್ ಐ ಶೀತಲ್ ಅಲಗೂರ ನೇತೃತ್ವದ ತಂಡ ಚೈತ್ರಾ ಹೆಬ್ಬಾರ್ ಬೆನ್ನು ಬಿದ್ದಿದ್ದು, ಚೈತ್ರಾ ಬೆಂಗಳೂರಿಂದ ಗೋವಾ- ಮುಂಬೈ ಮಾರ್ಗವಾಗಿ ಹಿಮಾಚಲ ಪ್ರದೇಶದ ಮನಾಲಿಗೆ ತೆರಳಿರುವುದಾಗಿ ತಿಳಿದುಬಂದಿದೆ. ಚೈತ್ರಾ ಹೆಬ್ಬಾರ್ 40,000 ರೂಪಾಯಿಗಳನ್ನ ತನ್ನ ಖಾತೆಯಿಂದ ವಿತ್ ಡ್ರಾ ಮಾಡಿ ಹಿಮಾಚಲ ಪ್ರದೇಶದಿಂದ ದೆಹಲಿ ವಿಮಾನ ನಿಲ್ದಾಣದಕ್ಕೆ ತೆರಳಿ ಕತಾರ್ ದೇಶಕ್ಕೆ ಹಾರಿದ್ದಾಳೆ. 


ಚೈತ್ರಾಳ ಪ್ರಿಯಕರ ಶಾರೂಕನ್ನ ಪೊಲೀಸರು ಕಳೆದ ಗುರುವಾರ ಹಿಮಾಚಲ ಪ್ರದೇಶದಲ್ಲಿ ಪತ್ತೆ ಹಚ್ಚಿ ಉಳ್ಳಾಲ ಠಾಣೆಗೆ ಕರೆತಂದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಶಾರೂಕ್ ತಾನು ಚೈತ್ರಾ ಪರಸ್ಪರ ಪ್ರೀತಿಸುತ್ತಿರುವುದಾಗಿ ಹೇಳಿಕೆ ನೀಡಿದ್ದಾನೆ. ಶಾರೂಕನ್ನ ವಿಚಾರಣೆ ನಡೆಸಿದ ಪೊಲೀಸರು ಪ್ರಾಯ ಪ್ರಬುದ್ಧರು ಎನ್ನುವ ಕಾರಣಕ್ಕೆ ಆತನನ್ನ ಬಿಟ್ಟು ಕಳಿಸಿದ್ದಾರೆ.


 ಚೈತ್ರಾ ವಿದೇಶಕ್ಕೆ ಹಾರಲು ಆಕೆಯ ಪ್ರಿಯಕರ ಶಾರೂಕ್ ಶೇಖ್ ಸಹಕರಿಸಿರುವ  ಶಂಕೆ ವ್ಯಕ್ತವಾಗಿದೆ. ಚೈತ್ರಾ ಕತಾರ್ ದೇಶದ ಇಂಡಿಯನ್ ಎಂಬೇಸಿಯಿಂದ ಚೈತ್ರಾ ಉಳ್ಳಾಲ ಪೊಲೀಸರಿಗೆ ಇ-ಮೇಲ್ ಮತ್ತು ವಾಟ್ಸಪ್ ಸಂದೇಶ ಕಳಿಸಿದ್ದು ನಾನು ಪ್ರಬುದ್ಧಳಾಗಿದ್ದೇನೆ. ನನ್ನ ಇಷ್ಟದಲ್ಲಿ ನಾನು ಬಂದಿದ್ದೇನೆ. ನನಗೆ ಪ್ರೀತಿ ಮಾಡುವ ಹಕ್ಕಿಲ್ಲವೇ ಎಂದು ಪ್ರಶ್ನಿಸಿದ್ದಾಳೆ ಎಂದು ಪೊಲೀಸ್ ಮೂಲದಿಂದ ತಿಳಿದುಬಂದಿದೆ.

ಕನ್ನಡಿಗ ಕೆಎಲ್ ರಾಹುಲ್ ವಿರುದ್ಧ ಎಲ್‌ಎಸ್‌ಜಿ ಮಾಲಿಕರ ಅಸಮಾಧಾನ; ರೊಚ್ಚಿಗೆದ್ದ ಫ್ಯಾನ್ಸ್ - ವಿಡಿಯೋ ವೈರಲ್

Posted by Vidyamaana on 2024-05-09 07:17:06 |

Share: | | | | |


ಕನ್ನಡಿಗ ಕೆಎಲ್ ರಾಹುಲ್ ವಿರುದ್ಧ ಎಲ್‌ಎಸ್‌ಜಿ ಮಾಲಿಕರ ಅಸಮಾಧಾನ; ರೊಚ್ಚಿಗೆದ್ದ ಫ್ಯಾನ್ಸ್ - ವಿಡಿಯೋ ವೈರಲ್

ಐಪಿಎಲ್ 2024ರ ಆವೃತ್ತಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ ನಾಯಕತ್ವದ ಲಕ್ನೋ ಸೂಪರ್ ಜೈಂಟ್ಸ್ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಆದರೂ ತಂಡದ ಪ್ಲೇ ಆಫ್ ಕನಸು ಇನ್ನೂ ಜೀವಂತವಾಗಿದೆ. ಬುಧವಾರ ನಡೆದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಲಕ್ನೋ ಸೂಪರ್ ಜೈಂಟ್ಸ್ ತಂಡವು 20 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 164 ರನ್‌ ಕಲೆಹಾಕಿತು. ಈ ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ 9.4 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 165 ರನ್ ಗಳಿಸುವ ಮೂಲಕ 10 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.



Leave a Comment: