ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಸುದ್ದಿಗಳು News

Posted by vidyamaana on 2024-07-03 19:28:29 |

Share: | | | | |


ಕಟ್ಟಡ ಕಾರ್ಮಿಕರಿಗೆ ಇ ಕಾರ್ಡು ವಿತರಣೆ-ಕಾರ್ಡು ಮಾಡಿಸಿ ಸವಲತ್ತು ಪಡೆದುಕೊಳ್ಳಿ: ಕಟ್ಟಡ ಕಾರ್ಮಿಕರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು:  ರೈ ಎಸ್ಟೇಟ್ಸ್ ಎಜುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿ ಶಾಸಕ ಅಶೋಕ್ ರೈ ಕಚೇರಿ ಮೂಲಕ ಉಚಿತ ಕಾರ್ಮಿಕ ಇ ಕಾರ್ಡು ಮಾಡಿಸಿಕೊಂಡ ಕಟ್ಟಡ ಕಾರ್ಮಿಕರಿಗೆ ಕಾರ್ಡು ವಿತರಣಾ ಕಾರ್ಯಕ್ರಮ ಶಾಸಕರ ಕಚೇರಿಯಲ್ಲಿ ನಡೆಯಿತು.

ಒಟ್ಟು ೩೪ ಮಂದಿ ಕಾರ್ಮಿಕರಿಗೆ ಕಾರ್ಡು ವಿತರಿಸಲಾಯಿತು. ಕಟ್ಟಡ ಕಾರ್ಮಿಕರು ಶಾಸಕರ ಕಚೇರಿ ಮೂಲಕ ನೋಂದಾವಣೆ ಮಾಡಿಕೊಂಡಿದ್ದರು. ಇ ಕಾರ್ಡು ವಿತರಿಸಿ ಮಾತನಾಡಿದ ಶಾಸಕರು ರಾಜ್ಯ ಸರಕಾರದಿಂದ ಕಾರ್ಮಿಕರಿಗ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತದೆ.ಆಕಸ್ಮಿಕಮರಣಾವಾದರೆ ರೂ ೧ ಲಕ್ಷ ಮತ್ತು ಅಪಘಾತದಲ್ಲಿ ಮರಣಹೊಂದಿದರೆ ೫ ಲಕ್ಷ ಸರಕಾರದಿಂದ ಪರಿಹಾರ ಸಿಗುತ್ತದೆ. ಕಾರ್ಮಿಕರು ತನ್ನ ಕಚೇರಿ ಮೂಲಕವೇ ನೋಂದಣಿ ಮಾಡಿಕೊಳ್ಳಬಹುದು. ಒಟ್ಟು ೩೦೦೦ ಮಂದಿಗೆ ಕಾರ್ಡು ವಿತರಣೆ ಮಾಡಲಾಗಿದೆ.

ಕಟ್ಟಡ ಕಾರ್ಮಿಕ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ಸರಕಾರ ನೀಡುತ್ತಿದೆ. ಕಳೆದ ಸಾಲಿನಲ್ಲಿ ಉತ್ತಮ ಅಂಕಪಡೆದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟ್ಯಾಪ್ ಕೂಡಾ ವಿತರಣೆ ಮಾಡಲಾಗಿದೆ. ಕಟ್ಟಡ ಕಾರ್ಮಿಕರು ಈ ಸೌಲಭ್ಯವನ್ನು ಪಡೆದುಕೊಳ್ಳುವುದರ ಜೊತೆ ಇದುವರೆಗೂ ಕಾರ್ಡು ಮಾಡಿಸದವರು ಶಾಸಕರ ಕಚೇರಿಗೆ ಬಂದು ಉಚಿತವಾಗಿ ಕಾರ್ಡು ಮಾಡಿಸಿಕೊಳ್ಳಬಹುದಾಗಿದೆ ಎಂದು ಶಾಸಕರು ತಿಳಿಸಿದರು.

ಕಾರ್ಯಕ್ರಮದಲ್ಲಿ ಟ್ರಸ್ಟ್‌ನ ಮಾಧ್ಯಮ ಸಂಚಾಲಕ ಕೃಷ್ಣಪ್ರಸಾದ್ ಭಟ್ ಬೊಳ್ಳಾಯಿ ಉಪಸ್ಥಿತರಿದ್ದರು. ಸಿಬಂದಿ ರಚನಾ ಸ್ವಾಗತಿಸಿ ವಂದಿಸಿದರು.

 Share: | | | | |


ರಾಜ್ಯ ಸರ್ಕಾರದಿಂದ ಸುಳ್ಳು ಸುದ್ದಿ ತಡೆಗೆ ಮಹತ್ವದ ಕ್ರಮ IDTU ಕಾರ್ಯ ನಿರ್ವಾಹಣೆಗೆ 5 ಸಂಸ್ಥೆಗಳ ಆಯ್ಕೆ

Posted by Vidyamaana on 2023-12-12 11:56:38 |

Share: | | | | |


ರಾಜ್ಯ ಸರ್ಕಾರದಿಂದ ಸುಳ್ಳು ಸುದ್ದಿ ತಡೆಗೆ ಮಹತ್ವದ ಕ್ರಮ  IDTU ಕಾರ್ಯ ನಿರ್ವಾಹಣೆಗೆ 5 ಸಂಸ್ಥೆಗಳ ಆಯ್ಕೆ

ಬೆಂಗಳೂರು : ರಾಜ್ಯ ಸರ್ಕಾರವು ಸುಳ್ಳು ಸುದ್ದಿ ತಡೆಗೆ ಮಹತ್ವದ ಕ್ರಮ ಕೈಗೊಂಡಿದ್ದು, ಮಾಹಿತಿ ತಿರುಚುವಿಕೆ ಪತ್ತೆ ಘಟಕದ (IDTU) ಕಾರ್ಯ ನಿರ್ವಹಣೆಗೆ ಐದು ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.ರಾಜ್ಯ ಸರ್ಕಾರವು ಇನ್ಫೋ ಮೀಡಿಯಾ ಪ್ರೈವೇಟ್‌ ಲಿಮಿಟೆಡ್‌, ಗೌರಿ ಮೀಡಿಯಾ ಟ್ರಸ್ಟ್‌, ಟೈಲೈಕ್‌ ಟೆಕ್ನಾಲಜಿ ಲಿಮಿಟೆಡ್‌, ನ್ಯೂಸ್‌ ಪ್ಲಸ್‌ ಕಮ್ಯುನಿಕೇಷನ್‌ ಮತ್ತು ಒಡಬ್ಲ್ಯೂ ಡಾಟಾ ಲೀಡ್ಸ್‌ ಸಂಸ್ಥೆಗಳನ್ನು ಸುಳ್ಳು ಸುದ್ದಿ ಪತ್ತೆಗೆ ಆಯ್ಕೆ ಮಾಡಲಾಗಿದೆ.ರಾಜ್ಯ ಸರ್ಕಾರವು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಅಧೀನದಲ್ಲಿ ಪೊಲೀಸ್‌ ಮಹಾನಿರ್ದೇಶಕರ ನೇತೃತ್ವದಲ್ಲಿ ಐಡಿಟಿಯು ಕಾರ್ಯನಿರ್ವಹಿಸಲಿದ್ದು, ಶೀಘ್ರವೇ ಕಾರ್ಯಾಚರಣೆ ಆರಂಭಿಸಲಿದೆ.

ಏಹ್ ಹೀರೋ..ರೈಗಳೇ... ಅಶೋಕ್ ರೈ ಹೆಗಲಿಗೆ ಕೈ ಹಾಕಿ ಭೇಷ್ ಎಂದ ಸಿ ಎಂ ಸಿದ್ಸರಾಮಯ್ಯ

Posted by Vidyamaana on 2024-05-21 14:15:19 |

Share: | | | | |


ಏಹ್ ಹೀರೋ..ರೈಗಳೇ... ಅಶೋಕ್ ರೈ ಹೆಗಲಿಗೆ ಕೈ ಹಾಕಿ ಭೇಷ್ ಎಂದ ಸಿ ಎಂ ಸಿದ್ಸರಾಮಯ್ಯ

ಮಂಗಳೂರು: ಏಹ್..ಹೀರೋ... ರೈ ಗಳೇ ಎಂದು ಹೇಳಿ ಪುತ್ತೂರು‌ಶಾಸಕರಾದ ಅಶೋಕ್ ರೈ ಅವರ ಹೆಗಲ ಮೇಲೆ ಕೈ ಹಾಕಿ ಭೇಷ್ ಎಂದು ಸಿ ಎಂ ಸಿದ್ದರಾಮಯ್ಯ ಅವರು ಅಭಿನಂದಿಸಿದರು.

ಬೆಳ್ತಂಗಡಿ‌ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆಯಲ್ಲಿ‌ಭಾಗವಹಿಸಲು ಆಗಮಿಸಿದ್ದ ಸಿದ್ದರಾಮಯ್ಯ ಅವರನ್ನು ಶಾಸಕರಾದ ಅಶೋಕ್ ರೈ ಯವರು ಸ್ವಾಗತಿಸಿದರು.



ಲೋಕಸಭಾ ಚುನಾವಣೆಗೆ ಬಿಜೆಪಿ ಕೇರಳ ಸಹ ಉಸ್ತುವಾರಿ ಹೊಣೆ ವಹಿಸಿಕೊಂಡ ನಳೀನ್ ಕುಮಾರ್ ಕಟೀಲ್

Posted by Vidyamaana on 2024-03-31 14:29:49 |

Share: | | | | |


ಲೋಕಸಭಾ ಚುನಾವಣೆಗೆ ಬಿಜೆಪಿ ಕೇರಳ ಸಹ ಉಸ್ತುವಾರಿ ಹೊಣೆ ವಹಿಸಿಕೊಂಡ ನಳೀನ್ ಕುಮಾರ್ ಕಟೀಲ್

ಕಾಸರಗೋಡು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕೇರಳ ರಾಜ್ಯದ ಚುನಾವಣಾ ಸಹ-ಉಸ್ತುವಾರಿಯಾಗಿ ನೇಮಕಗೊಂಡಿರುವ ಸಂಸದ ನಳೀನ್ ಕುಮಾರ್ ಕಟೀಲ್ ಜವಾಬ್ದಾರಿಯನ್ನು ವಹಿಸಿಕೊಂಡಿದ್ದಾರೆ.

ಮಂಗಳೂರು: ಕಾರಿನ ಒಳಹೊಕ್ಕ ಅಲ್ಯೂಮಿನಿಯಂ ಪಟ್ಟಿ, ಪವಾಡ ಸದೃಶವಾಗಿ ಚಾಲಕ ಪಾರು

Posted by Vidyamaana on 2023-02-23 03:42:33 |

Share: | | | | |


ಮಂಗಳೂರು: ಕಾರಿನ ಒಳಹೊಕ್ಕ ಅಲ್ಯೂಮಿನಿಯಂ ಪಟ್ಟಿ, ಪವಾಡ ಸದೃಶವಾಗಿ ಚಾಲಕ ಪಾರು

ಮಂಗಳೂರು:ಫೆ 23  ನಂತೂರು ಜಂಕ್ಷನ್‌ನಲ್ಲಿ ಪಿಕ್-ಅಪ್ ವಾಹನದಲ್ಲಿ ಸಾಗಿಸಲಾಗುತ್ತಿದ್ದ ಅಲ್ಯೂಮಿನಿಯಂ ಪಟ್ಟಿಗಳು ಜಾರಿ ಕಾರಿನ ಒಳಗೆ ಹೊಕ್ಕು ಕಾರು ಚಾಲಕ ಪವಾಡ ಸದೃಶವಾಗಿ ಪಾರಾದ ಘಟನೆ ನಗರದ ಬುಧವಾರ ಸಂಜೆ ಸಂಭವಿಸಿದೆ.ಅಲ್ಯೂಮಿನಿಯಂ ಪಟ್ಟಿಗಳನ್ನು ಹೊತ್ತ ಪಿಕ್-ಅಪ್ ಕಾರಿನ ಹಿಂದೆ ಇತ್ತು. ಎರಡೂ ವಾಹನಗಳು ಕೆಪಿಟಿಯಿಂದ ಪಂಪ್‌ವೆಲ್ ಕಡೆಗೆ ಚಲಿಸುತ್ತಿದ್ದವು.ನಂತೂರು ಜಂಕ್ಷನ್‌ನಲ್ಲಿ ಕಾರು ಚಾಲಕ ಬ್ರೇಕ್‌ ಹಾಕಿದಾಗ ಪಿಕ್‌ಅಪ್‌ನಲ್ಲಿದ್ದ ಪಟ್ಟಿಗಳು ಕಾರಿನ ಹಿಂಭಾಗದಿಂದ ಒಳಗೆ ಹೊಕ್ಕಿವೆ. ಕಾರಿನಲ್ಲಿ ಚಾಲಕ ಮಾತ್ರವಿದ್ದರು. ಪಟ್ಟಿಗಳು ಹಿಂಭಾಗದ ಸೀಟುಗಳನ್ನು ದಾಟಿ ಬಂದು ಚಾಲಕನ ಸೀಟಿಗೆ ತಾಗಿ ನಿಂತಿವೆ. ಕಾರಿಗೆ ಹಾನಿಯಾಗಿದೆ. ಪಿಕ್‌ಅಪ್‌ ವಾಹನದ ಚಾಲಕನ ನಿರ್ಲಕ್ಷ್ಯದ ಬಗ್ಗೆ ಸಂಚಾರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದ.ಕ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

Posted by Vidyamaana on 2024-04-22 10:48:39 |

Share: | | | | |


ದ.ಕ ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕೆಲವು ಜಿಲ್ಲೆಗಳಲ್ಲಿ ಆರೆಂಜ್ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಆರೆಂಜ್ ಅಲರ್ಟ್ ಘೊಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಿದೆ

BREAKING:ಬೆಂಗಳೂರು ಕೆಫೆ ಸ್ಫೋಟ:ಮಾಸ್ಕ್ ಟೋಪಿ ಇಲ್ಲದ ಶಂಕಿತನ ಫೋಟೋ ಬಿಡುಗಡೆ

Posted by Vidyamaana on 2024-03-07 12:18:52 |

Share: | | | | |


BREAKING:ಬೆಂಗಳೂರು ಕೆಫೆ ಸ್ಫೋಟ:ಮಾಸ್ಕ್ ಟೋಪಿ ಇಲ್ಲದ ಶಂಕಿತನ ಫೋಟೋ ಬಿಡುಗಡೆ

ಬೆಂಗಳೂರು : ಬೆಂಗಳೂರು ಕೆಫೆ ಸ್ಫೋಟದ ಶಂಕಿತ ವ್ಯಕ್ತಿಯು ಬಸ್ ನಲ್ಲಿ ಪ್ರಯಾಣಿಸುತ್ತಿರುವುದನ್ನು ತೋರಿಸುವ ಚಿತ್ರಗಳು ಹೊರಬಂದಿವೆ. ಪೂರ್ವ ಬೆಂಗಳೂರಿನ ಬ್ರೂಕ್ಫೀಲ್ಡ್ನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ 1 ರಂದು ಸ್ಫೋಟ ಸಂಭವಿಸಿದ್ದು, ಕನಿಷ್ಠ 10 ಜನರು ಗಾಯಗೊಂಡಿದ್ದಾರೆ.ಒಂದು ಚಿತ್ರದಲ್ಲಿ ಶಂಕಿತನು ಟೋಪಿ ಅಥವಾ ಮುಖವಾಡವಿಲ್ಲದೆ ಕಾಣಿಸಿಕೊಂಡಿದ್ದಾನೆ.ಮತ್ತೊಂದು ಫೋಟೋದಲ್ಲಿ ಶಂಕಿತನು ಮಾಸ್ಕ್ ಮತ್ತು ಕ್ಯಾಪ್ ಯೊಂದಿಗೆ ಬಸ್ಸಿನಲ್ಲಿ ಕಾಣಿಸಿಕೊಂಡಿದ್ದಾನೆ.

ಈ ಹಿಂದೆ, ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕೆಫೆಗೆ ಪ್ರವೇಶಿಸುವಾಗ ಕ್ಯಾಪ್, ಮಾಸ್ಕ್ ಮತ್ತು ಕನ್ನಡಕ ಧರಿಸಿದ ಶಂಕಿತ ಬಾಂಬರ್ನ ಚಿತ್ರವನ್ನು ಪೋಸ್ಟ್ ಮಾಡಿತ್ತು.ಏಜೆನ್ಸಿಯು ಫೋನ್ ಸಂಖ್ಯೆಗಳು ಮತ್ತು ಇಮೇಲ್ಗಳನ್ನು ಹಂಚಿಕೊಂಡಿದೆ, ಅಲ್ಲಿ ಜನರು ಪ್ರಮುಖ ಶಂಕಿತ ಅಪರಿಚಿತ ವ್ಯಕ್ತಿಯ ಬಗ್ಗೆ ಮಾಹಿತಿಯನ್ನು ಕಳುಹಿಸಬಹುದು.

ಮಾಹಿತಿದಾರರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ರಾಷ್ಟ್ರೀಯ ತನಿಖಾ ಸಂಸ್ಥೆ ಭರವಸೆ ನೀಡಿದೆ.ಕೆಫೆಯಲ್ಲಿ ಸಂಭವಿಸಿದ ಸ್ಫೋಟದ ತನಿಖೆಯನ್ನು ಈ ವಾರದ ಆರಂಭದಲ್ಲಿ ಎನ್‌ಐಎಗೆ ಹಸ್ತಾಂತರಿಸಲಾಗಿತ್ತು.ಸುಧಾರಿತ ಸ್ಫೋಟಕ ಸಾಧನದಿಂದ (ಐಇಡಿ) ಸ್ಫೋಟ ಸಂಭವಿಸಿದೆ ಎಂದು ಶಂಕಿಸಲಾಗಿದೆ.

ಸ್ಫೋಟದ ನಂತರ, ಕರ್ನಾಟಕ ಪೊಲೀಸರು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ



Leave a Comment: