ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಸುದ್ದಿಗಳು News

Posted by vidyamaana on 2024-07-01 19:16:06 |

Share: | | | | |


ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕ ಆರಂಭ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.

ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸಾಮಾಜಿಕ‌ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.

ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.

ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.

 Share: | | | | |


ಇಂದು ಪುತ್ತೂರಿನಲ್ಲಿ ಅಣ್ಣಾಮಲೈ ರೋಡ್ ಶೋ

Posted by Vidyamaana on 2024-04-23 08:34:43 |

Share: | | | | |


ಇಂದು ಪುತ್ತೂರಿನಲ್ಲಿ ಅಣ್ಣಾಮಲೈ ರೋಡ್ ಶೋ

ಪುತ್ತೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಬಿಜೆಪಿ ಅಭ್ಯರ್ಥಿ ಕ್ಯಾ|ಬ್ರಿಜೇಶ್ ಚೌಟ ಅವರ ಪರವಾಗಿ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಅವರು ಏ.23ಕ್ಕೆ ಪುತ್ತೂರಿನಲ್ಲಿ ರೋಡ್ ಶೋ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಅಣ್ಣಾಮಲೈ ಅವರು ಬೆಳಿಗ್ಗೆ ಗಂಟೆ 8.30ಕ್ಕೆ ಆಗಮಿಸಿ ಬೆಳಿಗ್ಗೆ 10.30ಕ್ಕೆ ಪುತ್ತೂರು ದರ್ಬೆ ವೃತ್ತದಿಂದ ಬಸ್ ನಿಲ್ದಾಣದ ತನಕ ರೋಡ್ ಶೋ ನಡೆಸಲಿದ್ದಾರೆ. ಪುತ್ತೂರು ಬಸ್‌ನಿಲ್ದಾಣದ ಬಳಿ ಅವರು ಚುನಾವಣಾ ಮತಯಾಚನೆ ಮತ್ತು ಭಾಷಣ ಮಾಡಲಿದ್ದಾರೆ. ಪುತ್ತೂರಿನ ಎಲ್ಲಾ 221 ಬೂತ್‌ ಗಳಿಂದ ಕಾರ್ಯಕರ್ತರು ಭಾಗವಹಿಸಲಿದ್ದಾರೆ.ಮಧ್ಯಾಹ್ನ ಗಂಟೆ 12.30ರ ತನಕ ಈ ಕಾರ್ಯಕ್ರಮ ನಡೆಯಲಿದೆ.

ಕುದ್ಕಾಡಿ ಮನೆ ದರೋಡೆ ಪ್ರಕರಣ – ಖದೀಮರು ಅದೆಷ್ಟು ಚಾಣಾಕ್ಷರಾಗಿದ್ರು ಗೊತ್ತಾ?

Posted by Vidyamaana on 2023-09-30 09:35:38 |

Share: | | | | |


ಕುದ್ಕಾಡಿ ಮನೆ ದರೋಡೆ ಪ್ರಕರಣ – ಖದೀಮರು ಅದೆಷ್ಟು ಚಾಣಾಕ್ಷರಾಗಿದ್ರು ಗೊತ್ತಾ?

ಪುತ್ತೂರು: ಪಡುವನ್ನೂರು ಗ್ರಾಮದ ಕುದ್ಕಾಡಿಯಲ್ಲಿ ನಡೆದ ದರೋಡೆ ಪ್ರಕರಣವನ್ನು ಭೇದಿಸಿರುವ ಪುತ್ತೂರು ಪೊಲೀಸರು ಆರು ಮಂದಿಯನ್ನು ಬಂಧಿಸಿದ್ದಾರೆ. ಈ ಪೈಕಿ ಒಬ್ಬಾತ ಜೈಲಿನಲ್ಲಿದ್ದು ಪೆರೋಲ್ ಮೇಲೆ ಹೊರಗೆ ಬಂದಿರುವಾಗಲೇ ಕೃತ್ಯ ನಡೆಸಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.


ದರೋಡೆ ಕೃತ್ಯದಲ್ಲಿ ಆರು ಮಂದಿಯನ್ನು ಬಂಧಿಸಿರುವ ಬಗ್ಗೆ ಎಸ್ಪಿ ರಿಷ್ಯಂತ್, ಸುದ್ದಿಗೋಷ್ಟಿ ನಡೆಸಿ ವಿವರ ನೀಡಿದ್ದಾರೆ. ಕಾಸರಗೋಡು ಜಿಲ್ಲೆಯ ಕುಖ್ಯಾತ ದರೋಡೆ ಗ್ಯಾಂಗ್ ಕೃತ್ಯದಲ್ಲಿ ಭಾಗಿಯಾಗಿದ್ದನ್ನು ಎಸ್ಪಿ ದೃಢಪಡಿಸಿದ್ದಾರೆ. ಸನಾಲ್, ಕಿರಣ್, ವಸಂತ್, ಫೈಜಲ್, ಸುಧೀರ್, ಅಬ್ದುಲ್ ನಿಸಾರ್ ಬಂಧಿತ ಆರೋಪಿಗಳು. ಇವರ ಪೈಕಿ ಸನಾಲ್ ಕೆವಿ ಕಾಸರಗೋಡು ಜಿಲ್ಲೆಯಲ್ಲಿ ಕುಖ್ಯಾತ ದರೋಡೆಕೋರನಾಗಿದ್ದು, 15ಕ್ಕೂ ಹೆಚ್ಚು ಕೇಸುಗಳನ್ನು ಹೊಂದಿದ್ದಾನೆ. ಹಿಂದೊಮ್ಮೆ ಜೈಲಿನಿಂದ ತಪ್ಪಿಸಿಕೊಂಡು ಹೋಗಿದ್ದ ಪ್ರಕರಣವೂ ಈತನ ಮೇಲಿದೆ. ನಾಲ್ಕು ಪ್ರಕರಣಗಳಲ್ಲಿ ಕೇರಳದ ಜೈಲಿನಲ್ಲಿ 9 ವರ್ಷಗಳ ಶಿಕ್ಷೆ ಅನುಭವಿಸಿದ್ದ.

ಎಲ್ಲರೂ ಕ್ರಿಮಿನಲ್ ಹಿನ್ನೆಲೆಯವರಾಗಿದ್ದು ಕಿರಣ್ ಮತ್ತು ಫೈಜಲ್ ತಲಾ ಮೂರು ಪ್ರಕರಣ ಹೊಂದಿದ್ದಾರೆ. ಸುಧೀರ್ ಮೇಲೆ ವಿಟ್ಲ ಮತ್ತು ಪುತ್ತೂರಿನಲ್ಲಿ ಕೇಸು ಇದೆ. ಕಾಸರಗೋಡು ಗಡಿಭಾಗ ಇಚ್ಲಂಗೋಡು ಗ್ರಾಮದ ಪಜ್ಜಂಬಳ ರವಿ 12 ವರ್ಷಗಳ ಹಿಂದಿನ ಪೆರ್ಲದ ಜಬ್ಬಾರ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿದ್ದ. ಕೇರಳದ ಜೈಲಿನಲ್ಲಿದ್ದ ರವಿ ಇತ್ತೀಚೆಗೆ 15 ದಿನಗಳ ಜಾಮೀನಿನಲ್ಲಿ ಜೈಲಿನಿಂದ ಹೊರಬಂದಿದ್ದ. ಈ ವೇಳೆ, ದರೋಡೆ ತಂಡದ ಜೊತೆ ಸೇರಿ ಕೃತ್ಯಕ್ಕೆ ಕೈಜೋಡಿಸಿದ್ದು, ಆನಂತರ ಮತ್ತೆ ಜೈಲಿಗೆ ಹೋಗಿದ್ದಾನೆ. ಕುದ್ಕಾಡಿಯ ಗುರುಪ್ರಸಾದ್ ಅವರ ಪರಿಚಯ ಹೊಂದಿದ್ದ ವಿಟ್ಲ ಪೆರುವಾಯಿ ನಿವಾಸಿ ಸುಧೀರ್, ದರೋಡೆ ತಂಡಕ್ಕೆ ಮಾಹಿತಿ ನೀಡಿ, ಅಲ್ಲಿ ಸಾಕಷ್ಟು ಬಂಗಾರ, ನಗದು ಇರಬಹುದು ಎಂದು ಹೇಳಿದ್ದ. ಆದರೆ ಮನೆಯಲ್ಲಿ ತಡಕಾಡಿದ್ದ ದರೋಡೆ ತಂಡಕ್ಕೆ ನಿರೀಕ್ಷೆ ಮಾಡಿದಷ್ಟು ಚಿನ್ನಾಭರಣ ಸಿಕ್ಕಿರಲಿಲ್ಲ. ಸುಧೀರ್ ಈ ಹಿಂದೆ ವಿಟ್ಲದಲ್ಲಿ ಕಾಳು ಮೆಣಸು ದರೋಡೆ ಪ್ರಕರಣದಲ್ಲಿ ಆರೋಪಿಯಾಗಿದ್ದು, ಕುದ್ಕಾಡಿ ಗುರುಪ್ರಸಾದ್ ರೈ ಅವರಿಗೆ ಸಂಬಂಧಿಕರ ಮೂಲಕ ಪರಿಚಯ ಆಗಿದ್ದ. ಹೀಗಾಗಿ ಉಂಡ ಮನೆಗೇ ದ್ರೋಹ ಬಗೆದಿರುವುದು ಈಗ ಬಯಲಾಗಿದೆ.

ಪದೇ ಪದೇ ಕೃತ್ಯದಲ್ಲಿ ತೊಡಗುತ್ತಿದ್ದುದರಿಂದ ಇವರಿಗೆ ಸಾಕ್ಷ್ಯ ನಾಶದ ಬಗ್ಗೆ ತಿಳಿದಿತ್ತು. ದರೋಡೆ ಕೃತ್ಯ ನಡೆಸಿದ ವೇಳೆ ಮೊಬೈಲ್ ಬಳಕೆ ಮಾಡಿರಲಿಲ್ಲ. ಅಲ್ಲದೆ, ಮನೆಮಂದಿಯ ಮೊಬೈಲನ್ನೂ ತೆಗೆದು ನೀರಿಗೆ ಹಾಕಿದ್ದರು. ಅಲ್ಲದೆ, ತಾವು ಬಳಸಿದ್ದ ಪರಿಕರಗಳನ್ನು ಯಾವುದನ್ನೂ ಬಿಡದೆ ಒಯ್ದಿದ್ದರು. ಎಲ್ಲರೂ ಮುಸುಕು ಹಾಕಿದ್ದರಿಂದ ಮನೆಯವರಿಗೂ ಗುರುತು ಹಚ್ಚಲು ಆಗಿರಲಿಲ್ಲ. ಹೀಗಾಗಿ ಪ್ರಕರಣ ಭೇದಿಸುವುದು ತುಂಬ ಸವಾಲಾಗಿತ್ತು. ತಾಂತ್ರಿಕ ಸಾಕ್ಷ್ಯಗಳನ್ನು ಆಧರಿಸಿ ಪೊಲೀಸರು ಪ್ರಕರಣ ಪತ್ತೆಹಚ್ಚಿದ್ದು, ಉತ್ತಮ ಕೆಲಸ ಮಾಡಿದ್ದಕ್ಕಾಗಿ ಪೊಲೀಸ್ ತಂಡಕ್ಕೆ ಬಹುಮಾನ ನೀಡುತ್ತೇನೆ ಎಂದು ಎಸ್ಪಿ ರಿಷ್ಯಂತ್ ತಿಳಿಸಿದ್ದಾರೆ.


ಕೃತ್ಯದ ಬಳಿಕ ಗುರುಪ್ರಸಾದ್ ಮತ್ತು ಅವರ ತಾಯಿಯನ್ನು ಹಗ್ಗದಿಂದ ಬಿಡಿಸಿ, ಕುಡಿಯಲು ನೀರು ಕೊಟ್ಟಿದ್ದರು. ವೃದ್ಧ ತಾಯಿಯ ಕಾಲು ಮುಟ್ಟಿ ನಮಸ್ಕರಿಸಿ ತೆರಳಿದ್ದರು. ಇದರಿಂದ ಮನೆಯವರ ಬಗ್ಗೆ ತಿಳಿದವರೇ ಕೃತ್ಯ ಎಸಗಿದ್ದಾರೆಂಬ ಅನುಮಾನ ಪೊಲೀಸರಲ್ಲಿತ್ತು. ಕೂಲಿ ಕೆಲಸಕ್ಕೆ ಬರುತ್ತಿದ್ದವರ ಬಗ್ಗೆಯೂ ಅನುಮಾನಗಳಿದ್ದವು. ಸುಳಿವು ಸಿಗದೇ ಇದ್ದಾಗ ದರೋಡೆ ಕೃತ್ಯದಲ್ಲಿ ನಿರತರಾಗಿರುವ ಕಾಸರಗೋಡಿನ ಕುಖ್ಯಾತ ಕ್ರಿಮಿನಲ್ ಗಳನ್ನು ಗುರಿಯಾಗಿಸಿ ತನಿಖೆ ನಡೆಸಿದಾಗ, ಕೃತ್ಯ ಬೆಳಕಿಗೆ ಬಂದಿತ್ತು. ಸೆ.6ರಂದು ನಸುಕಿನ ವೇಳೆಗೆ ಪಡುವನ್ನೂರು ಗ್ರಾಮದ ಕುದ್ಕಾಡಿಯ ಕಾಂಗ್ರೆಸ್ ಮುಖಂಡ ಗುರುಪ್ರಸಾದ್ ರೈ ಮನೆಯಲ್ಲಿ ದರೋಡೆ ಕೃತ್ಯ ನಡೆದಿತ್ತು.


ಪ್ರಕರಣದ ತನಿಖೆಗಾಗಿ ಸರ್ಕಲ್ ಇನ್ಸ್ ಪೆಕ್ಟರ್ ರವಿ ಬಿಎಸ್ ನೇತೃತ್ವದಲ್ಲಿ ಅಪರಾಧ ಪತ್ತೆಯಲ್ಲಿ ಪಳಗಿದ್ದ ಸಿಬಂದಿಯನ್ನು ಒಳಗೊಂಡ ನಾಲ್ಕು ತಂಡಗಳನ್ನು ರಚಿಸಲಾಗಿತ್ತು. ಪೊಲೀಸ್ ಅಧೀಕ್ಷಕ ರಿಷ್ಯಂತ್ ಸಿ.ಬಿ., ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎಸ್‌ .ಎಂ. ಇವರುಗಳ ನಿರ್ದೇಶನದಂತೆ ಮತ್ತು ಪುತ್ತೂರು ಉಪ-ವಿಭಾಗದ ಪೊಲೀಸ್ ಉಪ ಅಧೀಕ್ಷಕ ಡಾ. ಗಾನ ಪಿ, ಕುಮಾರ್ ರವರ ಮಾರ್ಗದರ್ಶನದ ಮೇರೆಗೆ ವಿಶೇಷ ಪತ್ತೆ ತಂಡದ ಅತ್ತೂರು ಗ್ರಾಮಾಂತರ ವೃತ್ತ ನಿರೀಕ್ಷಕ ರವಿ ಬಿ.ಎಸ್. ರವರ ನೇತೃತ್ವದಲ್ಲಿ ಪುತ್ತೂರು ಸಂಚಾರ ಪೊಲೀಸ್ ಪಿಎಸ್‌ಐ ಉದಯರವಿ ಎಂ ವೈ, ಪುತ್ತೂರು ಗ್ರಾಮಾಂತರ ಠಾಣಾ ಪಿಎಸ್‌ಐ ಧನಂಜಯ ಬಿ.ಸಿ., ಉಪ್ಪಿನಂಗಡಿ ಠಾಣಾ ಪಿಎಸ್‌ಐ ರುಕ್ಮ ನಾಯ್ಕ್, ಉಪ್ಪಿನಂಗಡಿ ಠಾಣಾ ಹೆಚ್.ಸಿ. ಹರೀಶ್ಚಂದ್ರ, ವೇಣೂರು ಠಾಣಾ ಹೆಚ್.ಸಿ. ಪ್ರವೀಣ್ ಮೂರುಗೋಳಿ, ವಿಟ್ಲ ಪೊಲೀಸ್ ಠಾಣಾ ಹೆಚ್ ಸಿ ಉದಯ ರೈ, ಪುತ್ತೂರು ಗ್ರಾಮಾಂತರ ವೃತ್ತ ಕಛೇರಿಯ ಹೆಚ್ ಸಿ ಅಬ್ದುಲ್ ಸಲೀಂ, ಪಿಸಿ, ಜಗದೀಶ್ ಅತ್ತಾಜೆ, ಎ.ಹೆಚ್.ಸಿ ಹರೀಶ್, ಪುತ್ತೂರು ಗ್ರಾಮಾಂತರ ಠಾಣಾ ಎಎಸ್‌ಐ ಮುರುಗೇಶ್, ಹೆಚ್.ಸಿ ಪ್ರವೀಣ್ ರೈ, ಹೆಚ್.ಸಿ ಅದ್ರಾಮ್, ಹೆಚ್.ಸಿ ಬಾಲಕೃಷ್ಣ, ಹೆಚ್.ಸಿ ಹರೀಶ್, ಹೆಚ್.ಸಿ ಪ್ರಶಾಂತ್, ಪಿಸಿ ಮುನಿಯ ನಾಯ್ಕ, ಪುತ್ತೂರು ಸಂಚಾರ ಠಾಣಾ ಹೆಚ್.ಸಿ ಪ್ರಶಾಂತ್ ರೈ, ಪುತ್ತೂರು ನಗರ ಠಾಣಾ ಪಿಸಿ ವಿನಾಯಕ ಎಸ್ ಬಾರ್ಕಿ, ಪಿಸಿ ಶರಣಪ್ಪ ಪಾಟೀಲ್, ಬಂಟ್ವಾಳ ಸಂಚಾರ ಠಾಣಾ ಪಿಸಿ ವಿವೇಕ್, ಪಿಸಿ ಕುಮಾರ್ ಕೆ, ಜಿಲ್ಲಾ ಗಣಕಯಂತ್ರ ವಿಭಾಗದ ಎಹೆಚ್‌ ಸಂಪತ್‌ ಕುಮಾರ್, ಸಿಪಿಸಿ ದಿವಾಕರ್, ವಾಹನ ಚಾಲಕ ಪ್ರವೀಣ್ ಹಾಗೂ ಪುತ್ತೂರು ಗ್ರಾಮಾಂತರ ಠಾಣೆಯ ಎಲ್ಲಾ ಅಧಿಕಾರಿ & ಸಿಬ್ಬಂದಿಗಳು ಈ ಕಾರ್ಯಚರಣೆಯಲ್ಲಿ ಪಾಲ್ಗೊಂಡಿದ್ದಾರೆ.

ಫಾಝಿಲ್ ಮಸೂದ್ ಜಲೀಲ್ ದೀಪಕ್ ರಾವ್ ಕುಟುಂಬಗಳಿಗೆ ಸರಕಾರದಿಂದ ತಲಾ 25 ಲಕ್ಷ ರೂ. ಪರಿಹಾರ: ಆದೇಶ

Posted by Vidyamaana on 2023-06-16 17:01:20 |

Share: | | | | |


ಫಾಝಿಲ್ ಮಸೂದ್ ಜಲೀಲ್ ದೀಪಕ್ ರಾವ್ ಕುಟುಂಬಗಳಿಗೆ ಸರಕಾರದಿಂದ ತಲಾ 25 ಲಕ್ಷ ರೂ. ಪರಿಹಾರ: ಆದೇಶ

ಮಂಗಳೂರು, ಜೂ.16: ದ.ಕ.ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ನಾಲ್ಕು ಮಂದಿಯ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ.

ಕಳೆದ ವರ್ಷದ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಕೊಲೆಗೈದಿದ್ದರು ಎಂದು ಪ್ರಕರಣ ದಾಖಲಾಗಿತ್ತು.

ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡು ವಂತೆ ಒಳಾಡಳಿತ ಇಲಾಖೆಯನ್ನು ಕೋರಿದ ಮೇರೆಗೆ ಈ ಪರಿಹಾರ ಘೋಷಿಸಲಾಗಿದ್ದು, ಜೂ.19ರಂದು ಪರಿಹಾರದ ಧನದ ಚೆಕ್ ಪಡೆಯುವಂತೆ ಸೂಚಿಸಲಾಗಿದೆ

ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿ ಅಸ್ಮಾ ಬಾನು ನಾಪತ್ತೆ

Posted by Vidyamaana on 2023-05-20 08:03:28 |

Share: | | | | |


ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿ ಅಸ್ಮಾ ಬಾನು ನಾಪತ್ತೆ

ಮಂಗಳೂರು: ಇಲ್ಲಿನ ಆಸ್ಪತ್ರೆಯೊಂದರಲ್ಲಿ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೋರ್ವಳು ನಾಪತ್ತೆಯಾದ ಘಟನೆ ಸೋಮವಾರ ನಡೆದಿದೆ.

ಕೊಲಾಸೋ ಆಸ್ಪತ್ರೆಯ ಪ್ರಥಮ ವರ್ಷದ ವಿದ್ಯಾರ್ಥಿನಿ ಅಸ್ಮಾ ಬಾನು(18) ಎಂದು ಗುರುತಿಸಲಾಗಿದೆ.

    ಅಸ್ಮಾ ಬಾನು ಅವರು ಮೇ 15ರಂದು ಬೆಳಗ್ಗೆ ಮನೆಯಿಂದ ಕೊಲಾಸೋ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ತೆರಳಿದ್ದರು. ಅನಂತರ ಮನೆಗೆ ಬರಲಿಲ್ಲ. ಕನ್ನಡ, ಇಂಗ್ಲಿಷ್, ಹಿಂದಿ ಭಾಷೆ ಮಾತನಾಡಬಲ್ಲರು. ಅಸ್ಮಾ ತಂದೆ ಮಹಮ್ಮದ್ ಖಾಲಿಕ್ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಕಾಣೆಯಾದವರ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 0824-2220520 ಅಥವಾ ಜಿಲ್ಲಾ ಕಂಟ್ರೋಲ್ ರೂಂ 2220800, 2220801 ಅನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

ನಾರಾಯಣ ನೇತ್ರಾಲಯ ಮುಖ್ಯಸ್ಥ - ಖ್ಯಾತ ನೇತ್ರ ತಜ್ಞ ಡಾ.ಕೆ ಭುಜಂಗ ಶೆಟ್ಟಿ ವಿಧಿವಶ

Posted by Vidyamaana on 2023-05-19 23:14:36 |

Share: | | | | |


ನಾರಾಯಣ ನೇತ್ರಾಲಯ ಮುಖ್ಯಸ್ಥ - ಖ್ಯಾತ ನೇತ್ರ ತಜ್ಞ ಡಾ.ಕೆ ಭುಜಂಗ ಶೆಟ್ಟಿ ವಿಧಿವಶ

ಬೆಂಗಳೂರು : ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ.ಕೆ. ಭುಜಂಗ ಶೆಟ್ಟಿ (69) ಅವರು ಶುಕ್ರವಾರ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.ಇಂದು ಆಸ್ಪತ್ರೆಗೆ ತೆರಳಿ ರೋಗಿಗಳಿಗೆ ಚಿಕಿತ್ಸೆ ನೀಡಿದ್ದ ಡಾ.ಭುಜಂಗ ಶೆಟ್ಟಿ ಅವರಿಗೆ ಸಂಜೆ ಮನೆಯಲ್ಲಿ ತೀವ್ರ ಹೃದಯಾಘಾತವಾಗಿದೆ. ಕೂಡಲೇ ಯಶವಂತಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.ಡಾ.ಭುಜಂಗ ಶೆಟ್ಟಿ ನಿಪುಣ ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸಕರಾಗಿದ್ದರು. 1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ ಅವರು 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದ ರೆಸಿಡೆನ್ಸಿ ಮಾಡಿದ್ದರು. ಅವರು ಎಂಬತ್ತರ ದಶಕದಲ್ಲಿ ಸಣ್ಣ ಕ್ಲಿನಿಕ್‌ನಲ್ಲಿ ನೇತ್ರಶಾಸ್ತ್ರವನ್ನು ಪ್ರಾರಂಭಿಸಿದರು. ನಾರಾಯಣ ನೇತ್ರಾಲಯವನ್ನು ಕರ್ನಾಟಕದ ಅತಿದೊಡ್ಡ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆಯಾಗಿ ಪರಿವರ್ತಿಸಿ ದ್ದರು.

ಚಂದ್ರಯಾನ-3ರ ಲಾಂಚ್ ಪ್ಯಾಡ್ ನಿರ್ಮಿಸಿದ್ದ ಟೆಕ್ನಿಷಿಯನ್ ಗಳ ಬದುಕು ಕ್ರ್ಯಾಶ್ ಲ್ಯಾಂಡಿಂಗ್!

Posted by Vidyamaana on 2023-09-20 12:23:59 |

Share: | | | | |


ಚಂದ್ರಯಾನ-3ರ ಲಾಂಚ್ ಪ್ಯಾಡ್ ನಿರ್ಮಿಸಿದ್ದ ಟೆಕ್ನಿಷಿಯನ್ ಗಳ ಬದುಕು ಕ್ರ್ಯಾಶ್ ಲ್ಯಾಂಡಿಂಗ್!

ನವದೆಹಲಿ: ಚಂದ್ರಯಾನ -3ರ ಯೋಜನೆಯಲ್ಲಿ ತನ್ನ ಸೇವೆ ನೀಡಿದ್ದ ಟೆಕ್ನಿಶಿಯನ್‌ ಒಬ್ಬರಿಗೆ ಸೂಕ್ತ ಸಂಬಳ ಸಿಗದೆ  ರಸ್ತೆಬದಿ ಇಡ್ಲಿ ಮಾರುವ ಸ್ಥಿತಿಗೆ ತಲುಪಿದ್ದಾರೆ ಎಂದು ವರದಿ ಮಾಡಿದ್ದ ʼಬಿಬಿಸಿʼ ಸುದ್ದಿಯನ್ನು ಪತ್ರಿಕಾ ಮಾಹಿತಿ ಬ್ಯೂರೋ ಫ್ಯಾಕ್ಟ್‌ ಚೆಕ್‌ ಮಾಡಿದೆ.



ಯಾವ ಸುದ್ದಿಯಿದು?


ಇಸ್ರೋ ಚಂದ್ರಯಾನ-3ರ ಯಶಸ್ಸಿನಲ್ಲಿ  ತಂತ್ರಜ್ಞರಾಗಿ ಕೆಲಸ ಮಾಡಿದ್ದ ಮಧ್ಯಪ್ರದೇಶದ ಹರ್ದಾ ಜಿಲ್ಲೆಯ ದೀಪಕ್ ಕುಮಾರ್ ಉಪ್ರಾರಿಯಾ ಅವರಿಂದು ಜೀವನ ಸಾಗಿಸಲು ರಸ್ತೆಬದಿಯಲ್ಲಿ ಇಡ್ಲಿ ಮಾರುವ ಸ್ಥಿತಿಗೆ ತಲುಪಿದ್ದಾರೆ ಎಂದು ವರದಿ ತಿಳಿಸಿತ್ತು.


ಯಾರು ಈ ದೀಪಕ್ ಕುಮಾರ್?: 


ಉಪ್ರಾರಿಯಾ ಅವರು ಮಧ್ಯಪ್ರದೇಶದ ಹರ್ದಾ ಜಿಲ್ಲೆಯವರು. 2012ರಲ್ಲಿ ಖಾಸಗಿ ಕಂಪನಿಯೊಂದರ ಕೆಲಸ ಬಿಟ್ಟು ₹ 8,000 ಸಂಬಳಕ್ಕೆ ಎಚ್‌ಇಸಿ(ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್) ಕಂಪನಿಗೆ ಸೇರಿದ್ದರು ಎಂದು ವರದಿಯಲ್ಲಿ ಹೇಳಲಾಗಿತ್ತು.ಸರ್ಕಾರಿ ಕಂಪೆನಿಯಾದ ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್ ಇಸ್ರೋದ ಚಂದ್ರಯಾನ-3ರ  ಉಡಾವಣಾ ಪ್ಯಾಡ್ ನಿರ್ಮಿಸಿದೆ. ಈ ಲಾಂಚ್‌ ಪ್ಯಾಡ್‌ ನಿರ್ಮಿಸಲು ಸುಮಾರು 2,800 ಟೆಕ್ನಿಶಿಯನ್‌ ಗಳು ಹಗಲು ಇರುಳು ಶ್ರಮವಹಿಸಿದ್ದಾರೆ. ಇದರಲ್ಲಿ ದೀಪಕ್ ಕುಮಾರ್ ಅವರು ಕೂಡ ಒಬ್ಬರಾಗಿದ್ದರು ಎಂದು ʼಬಿಬಿಸಿ ಹಿಂದಿʼ ಫೋಟೋ ಸಹಿತ ವರದಿ ಮಾಡಿತ್ತು.



“ಇಸ್ರೋ ಲಾಂಚ್‌ಪ್ಯಾಡ್ ನಿರ್ಮಿಸುತ್ತಿರುವ ಎಚ್‌ಇಸಿ ಜನರು ಟೀ, ಇಡ್ಲಿ ಮಾರುತ್ತಿದ್ದಾರೆ, 18 ತಿಂಗಳಿಂದ ಸಂಬಳ ಬಂದಿಲ್ಲ: ಗ್ರೌಂಡ್ ರಿಪೋರ್ಟ್” ಹೆಡ್‌ ಲೈನ್‌ ಹಾಕಿ ವರದಿ ಮಾಡಿತ್ತು. ಈ ಕುರಿತು ಪತ್ರಿಕಾ ಮಾಹಿತಿ ಬ್ಯೂರೋ ಫ್ಯಾಕ್ಟ್‌ ಚೆಕ್ ಮಾಡಿದ್ದು, ಈ ಸುದ್ದಿಯ ಹೆಡ್‌ ಲೈನ್‌ ಗೊಂದಲಮಯವಾಗಿದೆʼ ಎಂದಿದೆ.‌


ಹೆವಿ ಇಂಜಿನಿಯರಿಂಗ್ ಕಾರ್ಪೊರೇಷನ್ ಲಿಮಿಟೆಡ್ ಗೆ ಚಂದ್ರಯಾನ-3ರ ಯಾವುದೇ ಘಟಕಗಳ ತಯಾರಿಕೆಯನ್ನು ವಹಿಸಿಕೊಟ್ಟಿಲ್ಲ.


2003 ಮತ್ತು 2010 ರ ನಡುವೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಗೆ ಕೆಲವು ಮೂಲಸೌಕರ್ಯಗಳನ್ನು ಎಚ್‌ಇಸಿ ಪೂರೈಸಿದೆ ಎಂದು ಸರ್ಕಾರದ ಪಿಐಬಿ ಫ್ಯಾಕ್ಟ್‌ ಚೆಕ್‌ ಮಾಡಿ ಟ್ವೀಟ್‌ ಮಾಡಿದೆ.


ಕಂಪನಿಗಳ ಕಾಯಿದೆಯಡಿ ನೋಂದಾಯಿಸಲಾದ ಎಚ್‌ಇಸಿ, ಪ್ರತ್ಯೇಕ ಕಾನೂನು ಘಟಕವಾಗಿದೆ ಮತ್ತು BHEL ನಂತಹ ತನ್ನದೇ ಆದ ಸಂಪನ್ಮೂಲಗಳನ್ನು ಅದು ಉತ್ಪಾದಿಸುತ್ತದೆ ಎಂದು ಈ ಸಂಬಂಧ  ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಹಿರಿಯ ಸಲಹೆಗಾರ ಕಾಂಚನ್ ಗುಪ್ತಾ ಟ್ವೀಟ್‌ ಮಾಡಿದ್ದಾರೆ.


ಸಂಸತ್ತಿನಲ್ಲಿ ಬೃಹತ್ ಕೈಗಾರಿಕೆಗಳ ರಾಜ್ಯ ಸಚಿವ ಕ್ರಿಶನ್ ಪಾಲ್ ಗುರ್ಜರ್ ಚಂದ್ರಯಾನ -3ಕ್ಕೆ ಸಂಬಂಧಿಸಿದ ಯಾವುದೇ ಕೆಲಸವನ್ನು ಎಚ್‌ಇಸಿಗೆ ನಿಯೋಜಿಸಿಲ್ಲ ಎಂದಿರುವ ದಾಖಲೆಗಳ ಸ್ಕ್ರೀನ್‌ ಶಾಟ್‌ ಗಳನ್ನು ಕಾಂಚನ್ ಗುಪ್ತಾ ಹಂಚಿಕೊಂಡಿದ್ದಾರೆ.



Leave a Comment: