ಕಲ್ಲಡ್ಕ ಮ್ಯೂಸಿಯಂ ವೀಕ್ಷಿಸಿದ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್

ಸುದ್ದಿಗಳು News

Posted by vidyamaana on 2024-06-30 19:51:42 |

Share: | | | | |


ಕಲ್ಲಡ್ಕ ಮ್ಯೂಸಿಯಂ ವೀಕ್ಷಿಸಿದ ದ.ಕ. ಜಿಲ್ಲಾಧಿಕಾರಿ ಮುಲೈ ಮುಗಿಲನ್

ಬಂಟ್ವಾಳ : ತಾಲೂಕಿನ ವಿವಿಧ ಕಡೆಗಳಿಗೆ ತೆರಳಿ ಮಳೆಹಾನಿ ಬಗ್ಗೆ ವೀಕ್ಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರು ಜಿಲ್ಲೆಯಲ್ಲಿಯೇ ಖ್ಯಾತಿ ಪಡೆದಿರುವ ಕಲ್ಲಡ್ಕದ ಯಾಸೀರ್ ಅವರ ಅಪರೂಪದ ವಸ್ತುಗಳ ಸಂಗ್ರಹವಿರುವ ಕಲ್ಲಡ್ಕ ಮ್ಯೂಸಿಯಂಗೆ ಭೇಟಿ ನೀಡಿದರು.ಹಿಂದಿನ ಕಾಲದ ವಸ್ತುಗಳು, ನಾಣ್ಯ, ಪತ್ರಿಕೆಗಳ ಸಂಗ್ರಹವನ್ನು ವೀಕ್ಷಿಸಿ ರೋಮಾಂಚನಗೊಂಡ ಅವರು ಯಾಸೀರ್ ಅವರ ವಸ್ತುಗಳ ಸಂಗ್ರಹಣ ಕೌಶಲ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಅತ್ಯಂತ ಸಾವಕಾಶವಾಗಿ ಪ್ರತಿಯೊಂದು ವಸ್ತುಗಳನ್ನು ಕುತೂಹಲದಿಂದ ವೀಕ್ಷಿಸಿ ಅವುಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಬಳಿಕ ಮೊಡಂಕಾಪುವಿನಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು. ಇಲ್ಲಿನ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಎಲ್ಲರಿಗೂ ಕೈಕುಲುಕಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಮಕ್ಕಳಿಂದ ಅಂಬೇಡ್ಕರ್ ಬಗ್ಗೆ ಹಾಡು ಹಾಡಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಗಮನ ಸೆಳೆದರು. ತಹಸೀಲ್ದಾರ್ ಅರ್ಚನಾ ಭಟ್, ವಿದ್ಯಾರ್ಥಿ ನಿಲಯ ಮೇಲ್ವಿಚಾರಕರು ಜೊತೆಗಿದ್ದರು.

 Share: | | | | |


ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಶೇಖರ್ ಬಂಗೇರ ಮೃತ್ಯು

Posted by Vidyamaana on 2024-03-29 05:51:45 |

Share: | | | | |


ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಶೇಖರ್ ಬಂಗೇರ ಮೃತ್ಯು

ಬೆಳ್ತಂಗಡಿ : ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿ ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ  ಸಾವನ್ನಪ್ಪಿದ ಘಟನೆ ನಡೆದಿದೆ.

ಬೆಳ್ತಂಗಡಿ ನಗರದ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಮಾ.29 ರಂದು ರಾತ್ರಿ ಶೇಖರ್ ಬಂಗೇರ ಹೇರಾಜೆ(65) ಎಂಬವರು ಹೋಟೆಲ್ ನಿಂದ ಪಾರ್ಸಲ್ ತೆಗೆದುಕೊಂಡು ರಸ್ತೆ ದಾಟುತ್ತಿದ್ದ ವೇಳೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ಸಾಗಿಸುವ ವೇಳೆ ಬಂಟ್ವಾಳದಲ್ಲಿ ಸಾವನ್ನಪ್ಪಿದ್ದಾರೆ.



ಶಿಕ್ಷಕಿಯರಿಂದ ಕಳ್ಳತನ ಆರೋಪ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

Posted by Vidyamaana on 2024-03-17 17:23:49 |

Share: | | | | |


ಶಿಕ್ಷಕಿಯರಿಂದ ಕಳ್ಳತನ ಆರೋಪ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ಬಾಗಲಕೋಟೆ:ಶಿಕ್ಷಕಿಯರು ವಿದ್ಯಾರ್ಥಿನಿಯ ವಿರುದ್ಧ ಕಳ್ಳತನ ಆರೋಪ ಮಾಡಿ ವಿದ್ಯಾರ್ಥಿನಿಯ ಸಮವಸ್ತ್ರ ಬಿಚ್ಚಿಸಿ ಅವಮಾನವಾಗಿ ವರ್ತಿಸಿದ್ದ ಸಲುವಾಗಿ ಇದರಿಂದ ಮನನೊಂದು ವಿದ್ಯಾರ್ಥಿನಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.ಬಾಗಲಕೋಟೆ ತಾಲೂಕಿನ ಕದಂಪುರ ಗ್ರಾಮದ ಪ್ರೌಢ ಶಾಲೆಯ ಕನ್ನಡ ಶಿಕ್ಷಕಿ ಜಯಶ್ರೀ ಮಿಶ್ರೀಕೋಟಿ, ಮುಖ್ಯಶಿಕ್ಷಕ ಕೆ.ಹೆಚ್.ಮುಜಾವರ ಹಾಗೂ ಇತರೆ ಶಿಕ್ಷಕರು ಶಾಲೆಯಲ್ಲಿ 2 ಸಾವಿರ ರೂಪಾಯಿ ಕಳೆದುಹೋಗಿದೆ ಅಂಥ ಹೇಳಿ, 8ನೇ ತರಗತಿ ಓದುತ್ತಿದ್ದ ದಿವ್ಯಾ ಬಾರಕೇರ ಎನ್ನುವ ವಿದ್ಯಾರ್ಥಿನಿಯ ಬಳಿಯಲ್ಲಿ ಅಮಾನೀಯವಾಗಿ ವರ್ತನೆ ಮಾಡಿದ್ದಾರೆ ಎನ್ನಲಾಗಿದೆ.ಇದಲ್ಲದೇ ವಿದ್ಯಾರ್ಥಿನಿಯ ಮೇಲೆ ಸಂಶಯ ಪಟ್ಟು ಶಿಕ್ಷಕಿಯರು ವಿದ್ಯಾರ್ಥಿನಿಯ ಸಮವಸ್ತ್ರ ಬಿಚ್ಚಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಈ ನಡುವೆ ಇದರಿಂದ ಮನನೊಂದ ದಿವ್ಯಾ ಬಾರಕೇರ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ. ಸದ್ಯ ಪ್ರಕರಣ ಬಾಗಲಕೋಟೆ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಸಕರ ಇಂದಿನ ಕಾರ್ಯಕ್ರಮ(ಜೂ.5)

Posted by Vidyamaana on 2023-06-04 23:14:37 |

Share: | | | | |


ಶಾಸಕರ ಇಂದಿನ ಕಾರ್ಯಕ್ರಮ(ಜೂ.5)

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಜೂನ್ 5ರಂದು ಬೆಳಿಗ್ಗೆ 9.30ಕ್ಕೆ ಉಪ್ಪಿನಂಗಡಿ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೀಯಳಾಭಿಷೇಕ ನೆರವೇರಿಸಲಿದ್ದಾರೆ.

ನಂತರ 10.30ಕ್ಕೆ ಪುತ್ತೂರು ಬಾಲವನದಲ್ಲಿ ವಿಶ್ವ ಪರಿಸರ ದಿನಾಚರಣೆಯಲ್ಲಿ ಭಾಗಿಯಾಗುವರು.

ಬೆಳಿಗ್ಗೆ 11.15ಕ್ಕೆ ಕುಂಬ್ರ ಕರ್ನಾಟಕ ಇಸ್ಲಾಮಿಕ್ ಅಕಾಡೆಮಿಯಲ್ಲಿ ಶಾಸಕರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದೆ.

ಬ್ಯಾನರ್ ಪ್ರಕರಣ: ಕಾಂಗ್ರೆಸ್ ಪತ್ರಿಕಾಗೋಷ್ಠಿ

Posted by Vidyamaana on 2023-05-16 09:37:41 |

Share: | | | | |


ಬ್ಯಾನರ್ ಪ್ರಕರಣ: ಕಾಂಗ್ರೆಸ್ ಪತ್ರಿಕಾಗೋಷ್ಠಿ

ಪುತ್ತೂರು: ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ ಕೃತ್ಯ ಎಸಗಿದವರು ಯಾರು ಎಂದು ಗೊತ್ತಿದ್ದರೂ, ಬಿಜೆಪಿ ಪ್ರತಿಭಟನಾ ನಾಟಕ ಮಾಡಿದ್ದಾರೆ. ಬಿಜೆಪಿಯಿಂದ ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಆಗಿರುವುದು ಕೈಲಾಗದವರು ಮೈ ಪರಚಿಕೊಂಡಂತೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ ಬಿ ವಿಶ್ವನಾಥ ರೈ ಅವರು ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.

ಇವತ್ತು ಪರಿಸ್ಥಿತಿ ಎನಾಗಿದೆ ಎಂದರೆ ಬಿಜೆಪಿ ವಿಲವಿಲ ಒದ್ದಾಡುತ್ತಿದೆ. ಯಾರಿಗೂ ಚಪ್ಪಲಿ ಹಾಕುವ ದುಸ್ತಿತಿ ನಮ್ಮ ಪಕ್ಷಕ್ಕೆ ಬಂದಿಲ್ಲ. ಮುಂದಿನ ದಿನ ಇಂತಹ ಪ್ರತಿಭಟನೆ ಮಾಡಲು ತಯಾರಾಗಬೇಕೆಂಬ ಬಿಜೆಪಿಯ ನಾಯಕರ ಹೇಳಿಕೆ ನಮಗೆ ಪ್ರಯೋಜನವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಮತ್ತು ಪುತ್ತೂರಿನಲ್ಲಿ ಕಾಂಗ್ರೆಸ್ ಶಾಸಕ ಬಂದಿರುವ ಹಿನ್ನಲೆಯಲ್ಲಿ ಬಿಜೆಪಿ ನಾಯಕರು ಹತಾಶ ಮನೋಭಾವದಿಂದ ಎನೆನೋ ಹೇಳಲು ಹೊರಟ್ಟಿದ್ದಾರೆ. ಬ್ಯಾನರ್ ಹಾಕಿದ ವಿಚಾರದಲ್ಲಿ ತಪ್ಪಿತಸ್ಥರು ಯಾರೆ ಆದರೂ ಪೊಲೀಸರು ಅವರನ್ನು ಹಿಡಿಯಬೇಕು. ನಾವಂತು ಪಕ್ಷದ ವತಿಯಿಂದ ಬ್ಯಾನರ್ ವಿಚಾರದಲ್ಲಿ ಕೈ ಹಾಕಲಿಲ್ಲ ಎಂದರು.

ಬಿಜೆಪಿ ನೀರಿನಿಂದ ಹೊರ ಬಂದ ಮೀನಿನಂತೆ ಚಡಪಡಿಸುತ್ತಿದೆ:

ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ ಅವರು ಮಾತನಾಡಿ ಸಂಜೀವ ಮಠಂದೂರು ಅವರು ಈಗ ಜೋರಾಗಿದ್ದಾರೆ.ಅವರು ಶಾಸಕರಾಗಿದ್ದಾಗ ಜೋರಾಗಿರುತ್ತಿದ್ದರೆ ಅವರಿಗೆ ಶಾಸಕತ್ವದ ಟಿಕೇಟ್ ಸಿಗುತ್ತಿತ್ತು. ಆದರೆ ಈಗ ಅವರು ಬೀದಿಗೆ ಬಂದಿದ್ದಾರೆ. ಇವತ್ತು ಅಧಿಕಾರ ಬಿಟ್ಟು ನೀರಿನಿಂದ ಹೊರ ಬಂದ ಮೀನಿನಂತೆ ಆಗಿದ್ದಾರೆ. ಯಾಕೆಂದರೆ ಬ್ಯಾನರ್ ಹಾಕಿದ ವಿಚಾರದಲ್ಲಿ ಅವರು ಹಿಂದು ಕಾರ್ಯಕರ್ತರಿಗೆ ಧಿಕ್ಕಾರ ಹಾಕಿದ್ದು ಯಾಕೆ ಎಂದ ಅವರು ಬಿಜೆಪಿಯವರು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ, ಟೀಕೆ ಮಾಡುವುದು ಬೇಡ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಮಳ ರಾಮಚಂದ್ರ, ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಬ್ದುಲ್ ಶುಕೂರ್ ಹಾಜಿ, ನಗರ ಕಾಂಗ್ರೆಸ್ ಅಧ್ಯಕ್ಷ ಹೆಚ್ ಮಹಮ್ಮದ್ ಆಲಿ, ಉಪಾಧ್ಯಕ್ಷ ಮೌರಿಸ್ ಮಸ್ಕರೇನಸ್ ಉಪಸ್ಥಿತರಿದ್ದರು.

ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮೇ 10 ರಂದು ಚುನಾವಣೆ, 13 ಕ್ಕೆ ಫಲಿತಾಂ

Posted by Vidyamaana on 2023-03-29 06:57:47 |

Share: | | | | |


ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆಗೆ ಮುಹೂರ್ತ ಫಿಕ್ಸ್‌, ಮೇ 10 ರಂದು ಚುನಾವಣೆ, 13 ಕ್ಕೆ ಫಲಿತಾಂ

ವದೆಹಲಿ: ಹದಿನಾರನೇ ವಿಧಾನಸಭೆ ಕರ್ನಾಟಕ ರಾಜ್ಯ ವಿಧಾನಸಭೆಗೆ ಇಂದು ದಿನಾಂಕವನ್ನು ನಿಗದಿ ಮಾಡಲಾಗಿದೆ. ಒಟ್ಟು ಒಂದೇ ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಗೆ ಬರಲಿದೆಇಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯಕ್ತ ಸುನೀಲ್ ಅರೋರಾ ಅವರು ವೇಳಾಪಟ್ಟಿ ಪ್ರಕಟಿಸಿದರು. 

ಮೊದಲ ಹಂತದ ಚುನಾವಣಾ ಪ್ರಕ್ರಿಯೆ ವಿವರ ಹೀಗಿದೆ

ನಾಮಪತ್ರ ಸಲ್ಲಿಕೆಗೆ ಕೊನೆಯ ದಿನ: 20 ಏಪ್ರಿಲ್‌

ನಾಮಪತ್ರ ಪರಿಶೀಲನೆ ಕೊನೆಯ ದಿನ: 23 ಏಪ್ರಿಲ್‌

ನಾಮಪತ್ರ ವಾಪಸ್‌ ಪಡೆಯಲು ಕೊನೆಯ ದಿನ: ಏಪ್ರಿಲ್‌ 24

ಮತದಾನ ನಡೆಯುವ ದಿನಾಂಕ: 10 ಮೇ

ಮೇ 13 ಕ್ಕೆ ಫಲಿತಾಂಶ

224 ವಿಧಾನಸಭಾ ಕ್ಷೇತ್ರಗಳಿದ್ದು, ಪರಿಶಿಷ್ಟ ಜಾತಿಗೆ 36 ಮತ್ತು ಪರಿಶಿಷ್ಟ ಪಂಗಡಕ್ಕೆ 15 ಕ್ಷೇತ್ರಗಳನ್ನು ಮೀಸಲಿಡಲಾಗಿದೆ. ಒಟ್ಟಾರೆ ರಾಜ್ಯದಲ್ಲಿ 5,21,76,579 ಕೋಟಿ ಮತದಾರರಿದ್ದಾರೆ. ಕರ್ನಾಟಕದಲ್ಲಿ ಒಟ್ಟು ಮತದಾರರ ಸಂಖ್ಯೆ 5,21,73,599 ಇದೆ. ಈ ಪೈಕಿ ಪುರುಷ ಮತದಾರರ ಸಂಖ್ಯೆ - 2,62,42,561 ಹಾಗೂ ಮಹಿಳಾ ಮತದಾರರ ಸಂಖ್ಯೆ 2,59,26,319 ಇದೆ. ರಾಜ್ಯದಲ್ಲಿ ಅಂದಾಜು 4,699 ತೃತೀಯ ಲಿಂಗಿಗಳಿದ್ದು,ಮೊದಲ ಬಾರಿ ಮತದಾನ ಮಾಡುವವರ ಸಂಖ್ಯೆ (18+) - 9,17,241ಇದೆ ಒಟ್ಟು ಮತಗಟ್ಟೆಗಳು -58,282 ಇವೆ ಈ ಪೈಕಿ ನಗರ ಪ್ರದೇಶದಲ್ಲಿ 24,063 ಇವೆ. ಮಹಿಳೆಯರಿಂದ ನಿರ್ವಹಣೆ ಮಾಡುವ ಮತಗಟ್ಟೆಗಳ ಸಂಖ್ಯೆ 1320 ಹಾಗೂ ಗ್ರಾಮೀಣ ಭಾಗದಲ್ಲಿ ಇರುವ ಮತಗಟ್ಟೆಗಳು 34,219 ಹಾಗೂ ಮಾದರಿ ಮತಗಟ್ಟೆಗಳ ಸಂಖ್ಯೆ 240 ಇವೆ.

ಇದೇ ಮೊದಲ ಬಾರಿಗೆ 80 ವರ್ಷ ಅದಕ್ಕಿಂತ ಮೇಲ್ಪಟ್ಟವರು ಹಾಗೂ ವಿಶೇಷ ಚೇತನ ಮತದಾರರಿಗೆ ಮೊದಲ ಬಾರಿಗೆ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ. . ಮತದಾನ ಕೇಂದ್ರಗಳಲ್ಲಿ ಇವರಿಗೆ ವಿಶೇಷ ಸೌಲಭ್ಯ ಒದಗಿಸಲಾಗುವುದು. ರಾಜ್ಯದಲ್ಲಿ 80 ವರ್ಷ ಮೇಲ್ಪಟ್ಟ 12,15,763 ಮಂದಿ ಮತದಾರರಿದ್ದಾರೆ. 16,976 ಮಂದಿ 100 ವರ್ಷ ಮೇಲ್ಪಟ್ಟವರಿದ್ದಾರೆ. 5.55 ಲಕ್ಷ ಅಂಗವಿಕಲರಿದ್ದು, ಈ ಪೈಕಿ ಮತದಾನ ಕೇಂದ್ರಕ್ಕೆ ಬರಲಾಗದೆ ಮನೆಯಲ್ಲೇ ಮತದಾನ ಬಯಸುವವರಿಗೆ ಆಯೋಗ ಸೌಲಭ್ಯ ಕಲ್ಪಿಸಲಿದೆ.

ದೇವಾಲಯದ ಅರ್ಚಕನ ಅಪಹರಿಸಲು ಯತ್ನಿಸಿದ ದುಷ್ಕರ್ಮಿಗಳು ಆಘಾತಕಾರಿ ವಿಡಿಯೋ ನೋಡಿ

Posted by Vidyamaana on 2023-10-22 15:59:15 |

Share: | | | | |


ದೇವಾಲಯದ ಅರ್ಚಕನ ಅಪಹರಿಸಲು ಯತ್ನಿಸಿದ ದುಷ್ಕರ್ಮಿಗಳು  ಆಘಾತಕಾರಿ ವಿಡಿಯೋ ನೋಡಿ

ಲಕ್ನೋ : ಉತ್ತರ ಪ್ರದೇಶದ ರಾಜಧಾನಿ ಲಕ್ನೋದಲ್ಲಿ ಕೆಲವು ಗೂಂಡಾಗಳು ಅರ್ಚಕರೊಬ್ಬರನ್ನ ಥಳಿಸಿ ನಂತರ ದೇವಾಲಯದಿಂದ ಅಪಹರಿಸಲು ಪ್ರಯತ್ನಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.

ದೇವಾಲಯದ ಅರ್ಚಕನ ಅಪಹರಿಸಲು ಯತ್ನಿಸಿದ ದುಷ್ಕರ್ಮಿಗಳು, ಆಘಾತಕಾರಿ ವಿಡಿಯೋ ನೋಡಿ

ಈ ಘಟನೆಯು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದೆ.ನಿಲ್ಲಿಸಿದ್ದ ಕಾರಿನಲ್ಲಿ ಅರ್ಚಕನನ್ನ ಸಾಗಿಸುವುದು ಅವರ ಯೋಜನೆಯಾಗಿತ್ತು. ಆದಾಗ್ಯೂ, ಗದ್ದಲದಿಂದಾಗಿ ಜನಸಂದಣಿ ಜಮಾಯಿಸಿದ ನಂತರ ಗೂಂಡಾಗಳು ಅರ್ಚಕರನ್ನ ಬಿಟ್ಟು ಸ್ಥಳದಿಂದ ಪಲಾಯನ ಮಾಡಬೇಕಾಯಿತು.



Leave a Comment: