ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಸುದ್ದಿಗಳು News

Posted by vidyamaana on 2024-07-03 08:24:56 |

Share: | | | | |


ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ

ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.

ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

ವರ್ಗಾವಣೆಗೊಂಡ ಕೆಎಎಸ್‌ ಅಧಿಕಾರಿಗಳು

ಡಾ. ಜಗದೀಶ್‌ ಕೆ. ನಾಯಕ್‌

ರಘುನಂದನ್‌ ಎ.ಎನ್‌

ಪ್ರಸನ್ನ ಕುಮಾರ್‌ ವಿ.ಕೆ

ಹುಲ್ಲುಮನಿ ತಿಮ್ಮಣ್ಣ

ವರ್ಗಾವಣೆಗೊಂಡ ಐಪಿಎಸ್‌ ಅಧಿಕಾರಿಗಳು

ಬಿ. ರಮೇಶ -ಡಿಐಜಿಪಿ, ಪೂರ್ವ ವಲಯ, ದಾವಣಗೆರೆ

ಎನ್. ವಿಷ್ಣು ವರ್ಧನ್ -ಎಸ್.ಪಿ. ಮೈಸೂರು ಜಿಲ್ಲೆ

ಸೀಮಾ ಲಾಟ್ಕರ್ -ಪೊಲೀಸ್ ಆಯುಕ್ತರು, ಮೈಸೂರು ನಗರ

ರೇಣುಕಾ ಸುಕುಮಾರ -ಎಐಜಿಪಿ ಬೆಂಗಳೂರು ಡಿಜಿ ಕಚೇರಿ

ಸಿ.ಕೆ. ಬಾಬಾ -ಎಸ್.ಪಿ. ಬೆಂಗಳೂರು ಗ್ರಾಮಾಂತರ

ಸುಮನ್ ಡಿ. ಪೆನ್ನೇಕರ್ -ಎಸ್‌ ಪಿ, ಬಿಎಂಟಿಎಫ್

ಸಿ.ಬಿ. ರಿಷ್ಯಂತ್ -ಎಸ್.ಪಿ

ಚನ್ನಬಸವಣ್ಣ - ಎಐಜಿಪಿ, ಆಡಳಿತ, ಡಿಜಿ ಕಚೇರಿ

ಲಾಬೂ ರಾಮ್ -ಐಜಿಪಿ ಕೇಂದ್ರ ವಲಯ

ರವಿಕಾಂತೇಗೌಡ -ಐಜಿಪಿ ಕೇಂದ್ರ ಕಚೇರಿ- ಒಂದು ಬೆಂಗಳೂರು ಡಿಜಿ ಕಚೇರಿ

ಕೆ. ತ್ಯಾಗರಾಜನ್ -ಐಜಿಪಿ, ಐ.ಎಸ್.ಡಿ.

ಎನ್. ಶಶಿಕುಮಾರ್ -ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್

ಪ್ರದೀಪ್‌ ಗುಂಡಿ - ಎಸ್‌ ಪಿ. ಬೀದರ್‌ ಜಿಲ್ಲೆ

ಯತೀಶ್‌ ಎನ್. - ಎಸ್‌ ಪಿ ದಕ್ಷಿಣ ಕನ್ನಡ ಜಿಲ್ಲೆ

ಮಲ್ಲಿಕಾರ್ಜುನ ಬಾಲದಂಡ ಎಸ್‌ ಪಿ ಮಂಡ್ಯ ಜಿಲ್ಲೆ

ಡಾ.ಟಿ. ಕವಿತಾ ಎಸ್.ಪಿ. ಚಾಮರಾಜನಗರ ಜಿಲ್ಲೆ

ಬಿ. ನಿಖಿಲ್‌ ಎಸ್‌ ಪಿ ಕೋಲಾರ ಜಿಲ್ಲೆ

 Share: | | | | |


ಕಮಲ ಬಿಟ್ಟು ಡಿವಿಎಸ್ ಕೈ ಹಿಡಿಯೋದು ಫಿಕ್ಸ್

Posted by Vidyamaana on 2024-03-19 16:51:09 |

Share: | | | | |


ಕಮಲ ಬಿಟ್ಟು ಡಿವಿಎಸ್ ಕೈ ಹಿಡಿಯೋದು ಫಿಕ್ಸ್

ಬೆಂಗಳೂರು, ಮಾ.19: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೈತಪ್ಪಿದ ಹಿನ್ನೆಲೆ ಅಸಮಾಧಾನಗೊಂಡಿರುವ ಡಿವಿ ಸದಾನಂದಗೌಡ(DV S

non

ananda Gowda) ಅವರು ಕಾಂಗ್ರೆಸ್ (Congress) ಸೇರುತ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್ ಸಂಪರ್ಕದಲ್ಲಿರುವುದನ್ನು ಗೌಡ್ರು ಹೇಳಿದ್ದಾರೆ. ಇಂದು ಒಕ್ಕಲಿಗರ ಸಂಘದೊಂದಿಗೆ ಸಭೆ ನಡೆಸಿದ ಸದಾನಂದಗೌಡ, ಸುದೀರ್ಘ ಚರ್ಚೆ ನಡೆಸಿದ್ದಾರೆ. ಅಲ್ಲದೆ, ಸದಾನಂದ ಗೌಡ ಅವರ ನಿರ್ಧಾರಕ್ಕೆ ನಮ್ಮ ಬೆಂಬಲ ಇದೆ ಎಂದು ಸಂಘದ ಅಧ್ಯಕ್ಷರು ಘೋಷಿಸಿದ್ದಾರೆ.

ನಾಳೆ ಸುದ್ದಿಗೋಷ್ಠಿ ನಡೆಸಿ ಎಲ್ಲಾ ವಿಚಾರಗಳನ್ನು ಹೇಳುತ್ತೇನೆ ಎಂದು ಹೇಳಿದ ಸದಾನಂದಗೌಡ, ಒಕ್ಕಲಿಗರ ಸಂಘದ ಅಧ್ಯಕ್ಷರು, ನಿರ್ದೇಶಕರ ಜತೆ ಸಭೆ ನಡೆಸಿದ್ದೇನೆ. ಒಂದಷ್ಟು ವಿಚಾರಗಳನ್ನು ಸಭೆಯಲ್ಲಿ ಪ್ರಸ್ತಾಪ ಮಾಡಲಾಗಿದೆ. ಈಗ ಯಾವುದನ್ನೂ ನಾನು ಹೇಳುವುದಿಲ್ಲ. ಎಲ್ಲವನ್ನೂ ನಾಳೆ ಹೇಳುತ್ತೇನೆ ಎಂದರು.ಸದಾನಂದಗೌಡ ನಿರ್ಧಾರಕ್ಕೆ ಒಕ್ಕಲಿಗರ ಸಂಘದ ಬೆಂಬಲ

ಸಭೆ ಬಳಿಕ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಹನುಮಂತಯ್ಯ, ಸದಾನಂದಗೌಡರು ಏನೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲವಿದೆ. ನಾಳೆ ಅವರೇ ಸುದ್ದಿಗೋಷ್ಠಿ ಮಾಡಿ ಎಲ್ಲಾ ಹೇಳುತ್ತಾರೆ ಎಂದರು.ಒಕ್ಕಲಿಗ ಸಮುದಾಯಕ್ಕೆ ಮೂರು ಪಕ್ಷಗಳಲ್ಲೂ ಅನ್ಯಾಯ ಆಗಿದೆ. ಬಿಜೆಪಿಯಲ್ಲಿ ಲಿಂಗಾಯತ ಸಮುದಾಯಕ್ಕೆ 8 ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯದ ಇಬ್ಬರಿಗೆ ಮಾತ್ರ ಟಿಕೆಟ್ ಕೊಡಲಾಗಿದೆ. ಒಕ್ಕಲಿಗ ಸಮುದಾಯಕ್ಕೂ ಎಂಟು ಕಡೆ ಟಿಕೆಟ್ ಕೊಡಬೇಕು. ಬಿಜೆಪಿಯಲ್ಲಿ ಸಿ.ಟಿ.ರವಿ, ಪ್ರತಾಪ್ ​ಸಿಂಹಗೆ ಟಿಕೆಟ್ ಕೊಟ್ಟಿಲ್ಲ. ನಮ್ಮ ಸಮುದಾಯಕ್ಕೆ ಅನ್ಯಾಯವಾದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಕೈರೋ:ಮಸೀದಿಗೆ ಭೇಟಿ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

Posted by Vidyamaana on 2023-06-27 07:44:29 |

Share: | | | | |


ಕೈರೋ:ಮಸೀದಿಗೆ ಭೇಟಿ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ

ಕೈರೋ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಬೊಹ್ರಾ ಸಮುದಾಯದಿಂದ ಪುನಃಸ್ಥಾಪಿಸಲಾದ ಕೈರೋದಲ್ಲಿರುವ ಈಜಿಪ್ಟ್​ನ 11ನೇ ಶತಮಾನದ ಐತಿಹಾಸಿಕ ಅಲ್​-ಹಕೀಮ್​​ ಮಸೀದಿಗೆ ಭೇಟಿ ನೀಡಿದ್ದಾರೆ.ಅಮೆರಿಕದಿಂದ ನೇರವಾಗಿ ಈಜಿಪ್ಟ್‌ಗೆ 2 ದಿನ ಪ್ರವಾಸಕ್ಕೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸಾವಿರ ವರ್ಷ ಹಳೆಯದಾದ ಅಲ್‌-ಹಕೀಮ್‌ ಮಸೀದಿಗೆ ಭೇಟಿ ನೀಡಿದರು. ಈ ಕುರಿತಾದ ಕೆಲವು ಫೋಟೋ ಹಾಗೂ ವಿಡಿಯೋಗಳು ಸೋಶಿಯಲ್​​ ಮೀಡಿಯಾದಲ್ಲಿ ಹರಿದಾಡುತ್ತಿವೆಸಾವಿರಾರು ವರ್ಷಗಳಷ್ಟು ಹಳೆಯದಾದ ಅಲ್​​-ಹಕೀಮ್​​​ ಕೈರೋದಲ್ಲಿನ ನಾಲ್ಕನೇ ಅತ್ಯಂತ ಹಳೆಯ ಮಸೀದಿಯಾಗಿದೆ. ಮಸೀದಿಯು 13,560 ಚದರ ಮೀಟರ್‌ಗಳಷ್ಟು ವಿಸ್ತೀರ್ಣವನ್ನು ಹೊಂದಿದೆ, ಸಾಂಪ್ರದಾಯಿಕ ಕೇಂದ್ರ ಪ್ರಾಂಗಣವು 5,000 ಚದರ ಮೀಟರ್‌ಗಳನ್ನು ಆಕ್ರಮಿಸಿಕೊಂಡಿದೆಈಜಿಪ್ಟ್‌ಗೆ ಅವರ ರಾಜ್ಯ ಭೇಟಿಯ ಎರಡನೇ ದಿನದಂದು, ಮೋದಿಯವರಿಗೆ ಮಸೀದಿಯ ಸುತ್ತಲೂ ತೋರಿಸಲಾಯಿತು. 1012 ರಲ್ಲಿ ನಿರ್ಮಿಸಲಾದ ಮಸೀದಿಯ ಗೋಡೆಗಳು ಮತ್ತು ದ್ವಾರಗಳ ಮೇಲಿನ ಕೆತ್ತನೆ ನೋಡಿ ಪ್ರಧಾನಿ ಶ್ಲಾಘನೆ ವ್ಯಕ್ತಪಡಿಸಿದರುಭಾರತದಲ್ಲಿ ನೆಲೆಸಿರುವ ಬೋಹ್ರಾ ಸಮುದಾಯವು ಫಾತಿಮಿಡ್‌ಗಳಿಂದ ಹುಟ್ಟಿಕೊಂಡಿದೆ. ಅವರು 1970ರಿಂದ ಮಸೀದಿಯನ್ನು ನವೀಕರಿಸಿದರು ಮತ್ತು ಅಂದಿನಿಂದ ಅದನ್ನು ನಿರ್ವಹಿಸುತ್ತಿದ್ದಾರೆ. ಹಲವು ವರ್ಷಗಳಿಂದ ಗುಜರಾತ್‌ನಲ್ಲಿರುವ ಬೊಹ್ರಾ ಸಮುದಾಯದೊಂದಿಗೆ ಪ್ರಧಾನಿಯವರು ನಿಕಟ ಬಾಂಧವ್ಯವನ್ನು ಹೊಂದಿದ್ದಾರೆ. ಬೊಹ್ರಾ ಸಮುದಾಯದ ಪ್ರಮುಖ ಧಾರ್ಮಿಕ ಕ್ಷೇತ್ರಕ್ಕೆ ಮತ್ತೊಮ್ಮೆ ಭೇಟಿ ನೀಡುವ ಸಂದರ್ಭವಾಗಿದೆ ಎಂದು ಈಜಿಪ್ಟ್‌ನಲ್ಲಿರುವ ಭಾರತದ ರಾಯಭಾರಿ ಅಜಿತ್ ಗುಪ್ತೆ ಹೇಳಿದ್ದಾರೆ.  ಐತಿಹಾಸಿಕ ಮಸೀದಿಗೆ 16 ನೇ ಫಾತಿಮಿದ್ ಖಲೀಫ್ ಅಲ್-ಹಕೀಮ್ ಬೈ-ಅಮ್ರ್ ಅಲ್ಲಾ ಅವರ ಹೆಸರನ್ನು ಇಡಲಾಗಿದೆ ಮತ್ತು ದಾವೂದಿ ಬೊಹ್ರಾ ಸಮುದಾಯಕ್ಕೆ ಪ್ರಮುಖ ಧಾರ್ಮಿಕ ಮತ್ತು ಸಾಂಸ್ಕೃತಿಕ ತಾಣವಾಗಿದೆ.

ಮುಕ್ರಂಪಾಡಿ ಬಾಲಕಿಯರ ಸ.ಪ.ಪೂ.ಕಾಲೇಜಿನ ವಾರ್ಷಿಕೋತ್ಸವ

Posted by Vidyamaana on 2022-11-17 12:35:37 |

Share: | | | | |


ಮುಕ್ರಂಪಾಡಿ ಬಾಲಕಿಯರ ಸ.ಪ.ಪೂ.ಕಾಲೇಜಿನ ವಾರ್ಷಿಕೋತ್ಸವ

ಪುತ್ತೂರು: ಮುಕ್ರಂಪಾಡಿ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ವಾರ್ಷಿಕೋತ್ಸವ ನಡೆಯಿತು.

ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಹರಿಣಾಕ್ಷ ಕೆ. ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಕಾಲೇಜು ಅಭಿವೃದ್ಧಿ ಸದಸ್ಯ ಹಾಗೂ ಉದ್ಯಮಿ ವಿ.ಕೆ ಜೈನ್ ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿನಿಯರಿಗೆ ಕಲಿಕೆಯೊಂದಿಗೆ ಒಳ್ಳೆಯ ಗುಣಗಳನ್ನು ಮೈಗೊಡಿಸಿಕೊಳ್ಳಬೇಕೆಂದು ಹೇಳಿದರು.

ನಿವೃತ್ತ ಪ್ರಾಧ್ಯಾಪಕ ವಿಷ್ಣು ಭಟ್ ಮಾತನಾಡಿ, ಸಾಂಪ್ರದಾಯಿಕ ಆಚರಣೆಗಳ, ನೈತಿಕ ನೈರ್ಮಲ್ಯಗಳನ್ನು ವಿದ್ಯಾರ್ಥಿಗಳೆಲ್ಲರೂ ಅಳವಡಿಸಿಕೊಂಡು ಭವ್ಯ ಭಾರತವನ್ನು ಕಟ್ಟಬೇಕೆಂದು ಕರೆ ನೀಡಿದರು.

ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಕಾರ್ಯಧ್ಯಕ್ಷೆ ದೀಕ್ಷಾ ಪೈ ಮತ್ತು ಸದಸ್ಯ ಚಂದ್ರಕಾಂತ ನಾಯಕ್ ಉಪಸ್ಥಿತರಿದ್ದರು.

ಪ್ರಾಂಶುಪಾಲೆ ಪ್ರಮೀಳ ಜೆಸ್ಸಿ ಕ್ರಾಸ್ತಾ ವರದಿ ವಾಚಿಸಿದರು. ಭೂಮಿಕ ಪ್ರಾರ್ಥಿಸಿದರು. ಉಪನ್ಯಾಸಕಿ ಚಿತ್ರಲೇಖಾ ಕೆ. ಸ್ವಾಗತಿಸಿದರು. ಅಶೋಕ ಪಿ. ವಂದಿಸಿದರು ಶೋಭಾ ಕೆ. ಕಾರ್ಯಕ್ರಮ ನಿರೂಪಿಸಿದರು. ಜಯಲಕ್ಷ್ಮೀ ಕೆ, ಗ್ರೀಷ್ಮಾ, ಧನ್ಯಶ್ರೀ ಪಿ. ಮತ್ತು ದಾಮೋದರ ವಿಜೇತರ ಪಟ್ಟಿ ವಾಚಿಸಿದರು. ಭೋಜರಾಜ ಆಚಾರಿ ಕೆ.ರವರು ದತ್ತಿ ನಿಧಿ ನಗದು ಬಹುಮಾನ ಪಡೆದ ವಿದ್ಯಾರ್ಥಿನಿಯರ ಪಟ್ಟಿ ವಾಚಿಸಿದರು.

ಕಾರ್ಕಳ: ಶಾಲಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗೆ ಹೊಡೆದ ಆರೋಪ; ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-09-07 11:46:29 |

Share: | | | | |


ಕಾರ್ಕಳ: ಶಾಲಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗೆ ಹೊಡೆದ ಆರೋಪ; ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲು

ಕಾರ್ಕಳ: ಶಾಲಾ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಗೆ ಪ್ರಾಂಶುಪಾಲರು ಹೊಡೆದಿದ್ದಾರೆ ಎಂದು ಪ್ರಿನ್ಸ್ ಪಾಲ್ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ.


ಮೈಸೂರು ಮೂಲದ ವೆರೋನಿಕಾ ಎಂಬವರ ಮಕ್ಕಳಾದ ಆಯಂಟೋನಿ ಜೀವನ್ ಹಾಗೂ ಮರಿಯನ್ ಕೆವಿನ್ ಎಂಬವರು ಈದು ಗ್ರಾಮದ ಬೊಟ್ಟು ಗುರುಕುಲ ಸೆಂಟ್ರಲ್ ಸ್ಕೂಲ್‌ನಲ್ಲಿ ಓದುತ್ತಿದ್ದಾರೆ. ಇವರಿಬ್ಬರು ಶಾಲಾ ಹಾಸ್ಟೆಲ್ ನಲ್ಲಿ ಉಳಿದುಕೊಂಡಿದ್ದರು.ಸೆ.2ರಂದು ಶಾಲಾ ಪ್ರಾಂಶುಪಾಲ ರೋಹಿತ್, ಹಾಸ್ಟೆಲ್‌ನ ಕೊಠಡಿಯಲ್ಲಿ ಬೆಡ್ ಮೇಲೆ ಗಲಾಟೆ ಮಾಡಿದ ಕಾರಣಕ್ಕಾಗಿ 7ನೇ ತರಗತಿಯ ವಿದ್ಯಾರ್ಥಿ ಮರಿಯನ್ ಕೆವಿನ್‌ಗೆ ಬೆತ್ತದಿಂದ ಹೊಡೆದು ಹಲ್ಲೆ ಮಾಡಿರುವುದಾಗಿ ದೂರಲಾಗಿದೆ.ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಎಚ್ಚರ.! ಇನ್ಮುಂದೆ ವಕೀಲ ರ ಮೇಲೆ ಹಲ್ಲೆ ಮಾಡಿದ್ರೆ ಜೈಲು ಶಿಕ್ಷೆ ಫಿಕ್ಸ್

Posted by Vidyamaana on 2024-06-13 17:25:59 |

Share: | | | | |


ಎಚ್ಚರ.! ಇನ್ಮುಂದೆ ವಕೀಲ ರ ಮೇಲೆ ಹಲ್ಲೆ ಮಾಡಿದ್ರೆ ಜೈಲು ಶಿಕ್ಷೆ  ಫಿಕ್ಸ್

ಬೆಂಗಳೂರು : ರಾಜ್ಯ ಸರ್ಕಾರದಿಂದ ವಕೀಲರಿಗೆ ಭದ್ರತೆ ನೀಡುವ ಸಂಬಂಧ ಮಹತ್ವದ ಕ್ರಮ ವಹಿಸಿದೆ. ಇದಕ್ಕಾಗಿ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ-2023 ಜಾರಿಗೊಳಿಸಿದೆ. ಒಂದು ವೇಳೆ ವಕೀಲರ ಮೇಲೆ ಹಲ್ಲೆ ಮಾಡಿದ್ರೆ ಈ ನಿಯಮದಡಿ ಜೈಲು ಶಿಕ್ಷೆ ಫಿಕ್ಸ್ ಆಗಿದೆ.

ರಾಜ್ಯದಲ್ಲಿ ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಅಧಿನಿಯಮ - 2023 ಜಾರಿ ಮಾಡಲಾಗಿದೆ. ಈ ನಿಯಮವನ್ನು ರಾಜ್ಯ ಸರ್ಕಾರ ಕರ್ನಾಟಕದಲ್ಲಿ ಜಾರಿಗೊಳಿಸಿದೆ.

ಇಕ್ಬಾಲ್ ಅನ್ಸಾರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ

Posted by Vidyamaana on 2024-01-06 04:42:27 |

Share: | | | | |


ಇಕ್ಬಾಲ್  ಅನ್ಸಾರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ

ಅಯೋಧ್ಯೆ: ರಾಮಜನ್ಮಭೂಮಿ-ಬಾಬರಿ ಮಸೀದಿ ಪ್ರಕರಣದ ಮೊಕದ್ದಮೆ ಹೂಡಿದ್ದ ಇಕ್ಬಾಲ್ ಅನ್ಸಾರಿ ಶುಕ್ರವಾರ ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೆ ಆಹ್ವಾನವನ್ನು ಸ್ವೀಕರಿಸಿದ್ದು, ಈ ಮಹಾಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ.ಇದು ಅಯೋಧ್ಯೆ ನಗರಿ, ಇದು ಧರ್ಮದ ನಗರ, ಹಿಂದೂ ಮತ್ತು ಮುಸ್ಲಿಂ ಸಮುದಾಯದ ದೇವತೆಗಳು ಇಲ್ಲಿ ಇದ್ದಾರೆ. ಅಯೋಧ್ಯೆಯ ಹಿಂದೂಗಳು ಮತ್ತು ಮುಸ್ಲಿಮರಲ್ಲಿ ಸಹೋದರತೆ ಮತ್ತು ಏಕತೆ ಇದೆ ಮತ್ತು ಯಾವುದೇ ಅಶಾಂತಿ ಇಲ್ಲ. ದೇವಸ್ಥಾನ, ಮಸೀದಿ, ಗುರುದ್ವಾರ ಎಂಬ ಭೇದಭಾವವಿಲ್ಲ. ಅಯೋಧ್ಯೆಗೆ ಬರುವವರಲ್ಲಿ ಸೌಹಾರ್ದತೆಯ ಭಾವನೆ ಇದೆ’ ಎಂದು ಆಹ್ವಾನ ಸ್ವೀಕರಿಸಿದ ಕೂಡಲೇ ಪಿಟಿಐಗೆ ಹೇಳಿಕೆ ನೀಡಿದ್ದಾರೆ.ರಾಮ್ ಪಥ್ ಬಳಿಯ ಕೋಟ್ಯ ಪಂಜಿತೋಲದಲ್ಲಿರುವ ನಿವಾಸದಲ್ಲಿ ಆಮಂತ್ರಣ ಪತ್ರಿಕೆಯನ್ನು ಹಸ್ತಾಂತರಿಸಲಾಯಿತು ಎಂದು ಅವರ ಪುತ್ರಿ ಶಮಾ ಪರ್ವೀನ್ ಪಿಟಿಐಗೆ ತಿಳಿಸಿದ್ದಾರೆ.


ಜನವರಿ 22 ರಂದು ‘ಪ್ರಾಣ ಪ್ರತಿಷ್ಠಾಪನೆಯ ಸಂದರ್ಭದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಭಕ್ತರು ದೇವಾಲಯ ಪಟ್ಟಣಕ್ಕೆ ಬರುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ, ಆಹ್ವಾನಿತರ ಪಟ್ಟಿಯಲ್ಲಿ ಭಾರತ ಮತ್ತು ವಿದೇಶಗಳಿಂದ ಸುಮಾರು 7,000 ಅತಿಥಿಗಳು ಸೇರಿದ್ದಾರೆ.ಅನ್ಸಾರಿ ಅವರು ಪಿಟಿಐಗೆ ನೀಡಿದ ಸಂದರ್ಶನದಲ್ಲಿ ರಾಮ ಮಂದಿರ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ನ 2019ರ ತೀರ್ಪನ್ನು ಮುಸ್ಲಿಂ ಸಮುದಾಯ ಗೌರವಿಸುತ್ತದೆ ಎಂದು ಹೇಳಿದ್ದರು.



ಅನ್ಸಾರಿಯವರ ತಂದೆ ಹಾಶಿಮ್ ಅನ್ಸಾರಿ ಅವರು 2016 ರಲ್ಲಿ 90 ರ ಹರೆಯದಲ್ಲಿ ನಿಧನ ಹೊಂದಿದ್ದು ಕೊನೆಯವರೆಗೂ ಅಯೋಧ್ಯೆ ಪ್ರಕರಣದ ಪ್ರಮುಖ ದಾವೆದಾರರಲ್ಲಿ ಒಬ್ಬರಾಗಿದ್ದರು.



Leave a Comment: