Posted by vidyamaana on 2024-06-28 23:59:46 |
ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿ ಹೊಂದುತ್ತಿದ್ದು, ಜಿಲ್ಲೆಯಾದ್ಯಂತ ಹಲವಾರು ಹೋಂಸ್ಟೇಗಳು ಮತ್ತು ರೆಸಾರ್ಟ್ಗಳು ನಾಯಿಕೊಡೆಗಳಂತೆ ತಲೆ ಎತ್ತಿವೆ. ಇದೀಗ ಕೊಡಗಿನಲ್ಲಿ ಹೊಸ ಟ್ರೆಂಡ್ ಆಗಿ ಪ್ರವಾಸಿಗರನ್ನು ಸೆಳೆಯಲು ಹಲವು ಪ್ರದೇಶಗಳಲ್ಲಿ ಗಾಜಿನ ಸೇತುವೆಗಳನ್ನೂ ನಿರ್ಮಿಸಲಾಗುತ್ತಿದೆ.
ಆದರೆ, ಇತ್ತೀಚೆಗಷ್ಟೇ ಉದ್ಘಾಟನೆಗೊಂಡ ಗ್ಲಾಸ್ ಬ್ರಿಡ್ಜ್ ಅನ್ನು ಸೂಕ್ತ ಅನುಮತಿ ಇಲ್ಲದ ಕಾರಣ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಬಂದ್ ಮಾಡಿದೆ.
ಕೆ ನಿಡುಗಣೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಸುಮಾರು 200 ಮೀಟರ್ ಉದ್ದದ ಗಾಜಿನ ಸೇತುವೆಯು ವಿಶಾಲವಾದ ಹಸಿರು ಮತ್ತು ಪರ್ವತಗಳ ಮಧ್ಯ ನಿರ್ಮಿಸಲಾಗಿದೆ. ಈ ಗಾಜಿನ ಸೇತುವೆಯು ಪ್ರಧಾನ ಪ್ರವಾಸಿ ತಾಣವಾದ ಅಬ್ಬೆ ಜಲಪಾತದ ದಾರಿಯಲ್ಲಿದೆ.
ಈ ಸೇತುವೆಯನ್ನು ನಿರ್ಮಿಸಲು ಖಾಸಗಿಯವರು ಕೋಟಿಗಟ್ಟಲೆ ಹಣವನ್ನು ಖರ್ಚು ಮಾಡಿದರೂ, ಸೇತುವೆಯ ಸುರಕ್ಷತೆಗೆ ಸಂಬಂಧಿಸಿದಂತೆ ಯಾವುದೇ ವೈಜ್ಞಾನಿಕ ಕ್ರಮಗಳನ್ನು ತೆಗೆದುಕೊಳ್ಳಲಾಗಿಲ್ಲ. ಹೀಗಾಗಿ ಅದು ಈಗ ದುರ್ಬಲ ಸ್ಥಿತಿಯಲ್ಲಿದೆ. ಜೌಗು ಪ್ರದೇಶದಲ್ಲಿರುವ ಈ ಗಾಜಿನ ಸೇತುವೆಯ ಕೆಳಗಿನ ಸಡಿಲವಾದ ಮಣ್ಣು ಕ್ರಮೇಣ ಕೆಳಕ್ಕೆ ಜಾರುತ್ತಿರುವುದರಿಂದ ಅಪಾಯದ ಸ್ಥಿತಿ ಎದುರಾಗಿದೆ.
ಘಟನಾ ಸ್ಥಳಕ್ಕೆ ಕೊಡಗು ಡಿಸಿ ವೆಂಕಟ್ ರಾಜ ಅವರು ಭೇಟಿ ನೀಡಿ ಪರಿಶೀಲಿಸಿದ ಬಳಿಕ ಗ್ಲಾಸ್ ಬ್ರಿಡ್ಜ್ ಲಾಕ್ ಮಾಡಿದ್ದು, ಬಂದ್ ಮಾಡುವಂತೆ ಆದೇಶಿಸಿದ್ದಾರೆ. ಇದು ಅಧಿಕೃತ ಗಾಜಿನ ಸೇತುವೆಯಲ್ಲ. ಏಕೆಂದರೆ ಸಂಬಂಧಪಟ್ಟವರು ಯಾವುದೇ ಅಗತ್ಯ ಅನುಮತಿಯನ್ನು ಪಡೆದಿಲ್ಲ. ಈ ಸೇತುವೆಗೆ ಅರಣ್ಯ ಅನುಮತಿ ಇಲ್ಲ. ಸೇತುವೆಯನ್ನು ನಿರ್ಮಿಸುವ ಮುನ್ನ ಮಣ್ಣು ಪರೀಕ್ಷೆ ಸೇರಿದಂತೆ ಯಾವುದೇ ವೈಜ್ಞಾನಿಕ ಕ್ರಮಗಳನ್ನು ಅನುಸರಿಸಿಲ್ಲ. ಗ್ರಾಮ ಪಂಚಾಯಿತಿಯ ಏಕಮಾತ್ರ ನಿರ್ಣಯದ ಮೇರೆಗೆ ಸೇತುವೆಯನ್ನು ನಿರ್ಮಿಸಲಾಗಿದೆ. ಹೀಗಾಗಿ ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಬಂದ್ ಮಾಡಲಾಗುತ್ತಿದೆ ಎಂದು ಡಿಸಿ ವೆಂಕಟ್ ರಾಜ ಅವರು ತಿಳಿಸಿದ್ದಾರೆ.
ಇದೇ ವೇಳೆ ಕೆ.ನಿಡುಗಣೆ ಗ್ರಾ.ಪಂ.ಅಧ್ಯಕ್ಷ ಡೀನ್ ಬೋಪಣ್ಣ ಮಾತನಾಡಿ, ಪಂಚಾಯಿತಿಯೇ ಈ ಗ್ಲಾಸ್ ಬ್ರಿಡ್ಜ್ ಬಂದ್ ಮಾಡುವ ನಿರ್ಧಾರ ಕೈಗೊಂಡಿದೆ. ಈ ಪ್ರದೇಶದಲ್ಲಿ 5 ಇಂಚುಗಳಷ್ಟು ಮಳೆಯಾಗಿದೆ ಮತ್ತು ಗಾಜಿನ ಸೇತುವೆಯ ಪಿಲ್ಲರ್ಗಳನ್ನು ಹಾಕಲಾದ ಸ್ಥಳದಲ್ಲಿ ಮಣ್ಣು ಕೆಳಕ್ಕೆ ಜಾರಿದೆ. ಹೀಗಾಗಿ, ಸಾರ್ವಜನಿಕರವೀಕ್ಷಣೆಗೆ ನಾವು ಸೇತೆವೆಯನ್ನು ಬಂದ್ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.ಗೇಟ್ ಲಾಕ್ ಮಾಡಿರುವುದು
ಅನುಮತಿ ಕುರಿತು ಪ್ರಶ್ನಿಸಿದಾಗ, ಖಾಸಗಿಯವರು ಸಲ್ಲಿಸಿದ ದಾಖಲೆಗಳ ಆಧಾರದ ಮೇಲೆ ಪಂಚಾಯಿತಿ ಅನುಮತಿ ನೀಡಿದೆ.
ಸರ್ವೆ ಸಂಖ್ಯೆ 62 ಮತ್ತು 51/1 ಇಬ್ಬರು ನಿವಾಸಿಗಳ ಒಡೆತನದಲ್ಲಿದೆ ಮತ್ತು ಗಾಜಿನ ಸೇತುವೆಯ ಮಾಲೀಕರು ಸೇತುವೆಯನ್ನು ನಿರ್ಮಿಸಲು ಭೂ ಮಾಲೀಕರೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಎಲ್ಲ ಅಗತ್ಯ ದಾಖಲೆಗಳನ್ನು ಸಲ್ಲಿಸಿದ ನಂತರ ಸುಮಾರು ಎಂಟು ತಿಂಗಳ ಹಿಂದೆ ಸೇತುವೆಗೆ ಪಂಚಾಯಿತಿ ಅನುಮತಿ ನೀಡಿತ್ತು. ಆದರೆ, ಭೂ ಪರಿವರ್ತನೆಯ ದಾಖಲೆ ಸಲ್ಲಿಸಿಲ್ಲ ಮತ್ತು ಸುಮಾರು ಮೂರು ವರ್ಷಗಳಿಂದ ಯಾವುದೇ ಭೂ ಪರಿವರ್ತನೆ ಅರ್ಜಿಗಳಿಗೆ ಅನುಮತಿ ನೀಡಿಲ್ಲ ಎಂದು ಅವರು ವಿವರಿಸಿದರು.
Posted by Vidyamaana on 2024-06-09 09:24:27 |
Endooru: ಹೆಂಡತಿಯೊಂದಿಗೆ ಒಪ್ಪಿಗೆ ಇಲ್ಲದೇ ಪತಿ ನಡೆಸುವ ಯಾವುದೇ ಲೈಂಗಿಕ ಸಂಭೋಗ ಅಥವಾ ಕೃತ್ಯವು ಮದುವೆಯ ಜೀವನೋಪಾಯದ ಸಮಯದಲ್ಲಿ ಅತ್ಯಾಚಾರವಲ್ಲ ಮತ್ತು ಆದ್ದರಿಂದ ಒಪ್ಪಿಗೆ ಮುಖ್ಯವಲ್ಲ ಎಂದು ಮಧ್ಯಪ್ರದೇಶ ಹೈಕೋರ್ಟ್ ಪುನರುಚ್ಚರಿಸಿದೆ.
ತನ್ನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ಆರೋಪಿಸಿ ಪತ್ನಿ ದಾಖಲಿಸಿದ್ದ ಪತಿಯ ವಿರುದ್ಧ ಎಫ್ಐಆರ್ ರದ್ದುಗೊಳಿಸಿದ ನ್ಯಾಯಮೂರ್ತಿ ಪ್ರೇಮ್ ನಾರಾಯಣ್ ಸಿಂಗ್ ಅವರ ಏಕಸದಸ್ಯ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.
ಪತಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದರಿಂದ ಸೋಂಕು ತಗುಲಿದೆ ಎಂದು ಪತ್ನಿ ಹೇಳಿದ್ದಾರೆ. ತನ್ನ ಪತಿ ತನ್ನೊಂದಿಗೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾನೆ, ಇದರ ಪರಿಣಾಮವಾಗಿ ತನಗೆ ಸೋಂಕು ತಗುಲಿದೆ ಎಂದು ಪತ್ನಿ ಆರೋಪಿಸಿದ್ದಾರೆ. 20 ಲಕ್ಷ ರೂ.ಗಳ ವರದಕ್ಷಿಣೆಗಾಗಿ ಪತಿ ಮತ್ತು ಅವನ ಕುಟುಂಬವು ತನ್ನನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ಹಿಂಸಿಸುತ್ತಿದೆ ಎಂದು ಪತ್ನಿ ಆರೋಪಿಸಿದ್ದರು.
Posted by Vidyamaana on 2023-05-16 03:26:05 |
ಪುತ್ತೂರು: ಪುತ್ತಿಲ ಅಭಿಮಾನಿಗಳಿಂದ ನಮ್ಮ ನಡಿಗೆ ಮಹಾಲಿಂಗೇಶ್ವರನ ನಡೆಗೆ ಎನ್ನುವ ಹೆಸರಿನಲ್ಲಿ ಕಾಲ್ನಡಿಗೆ ಜಾಥಾವನ್ನು ಮೇ 21ರಂದು ಸಂಜೆ 4 ಗಂಟೆಗೆ ಆಯೋಜಿಸಲಾಗಿದೆ. ದರ್ಬೆ ವೃತ್ತದಿಂದ ಹೊರಡುವ ಜಾಥಾ ಮುಖ್ಯರಸ್ತೆಯಾಗಿ ಸಂಚರಿಸಿ ಮಹಾಲಿಂಗೇಶ್ವರ ದೇವಳದ ವಠಾರದಲ್ಲಿ ಸಮಾಪನಗೊಳ್ಳಲಿದೆ.
ಕಾಲ್ನಡಿಗೆ ಜಾಥಾದ ಬಳಿಕ ದೇವಸ್ಥಾನದ ವಠಾರದಲ್ಲಿ ಬೃಹತ್ ಕಾರ್ಯಕರ್ತರ ಸಭೆ ಕರೆಯಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಚುನಾವಣೆ ಬಳಿಕ ಪುತ್ತಿಲ ಅಭಿಮಾನಿಗಳು ಎಂಪಿ ಫಾರ್ ಪುತ್ತಿಲ ಅಭಿಯಾನ ಕೈಗೊಂಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೆ ಅರುಣ್ ಕುಮಾರ್ ಪುತ್ತಿಲ ಸ್ಪರ್ಧಿಸಬೇಕು ಎಂಬ ಒತ್ತಾಯ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಪುತ್ತೂರಿಗೆ ಪುತ್ತಿಲ ಘೋಷ ವಾಕ್ಯ ಹತ್ತೂರಿಗೆ ಪುತ್ತಿಲ ಎಂಬುದಾಗಿ ಪರಿವರ್ತನೆಯಾಗಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಮೇ 21ರಂದು ನಡೆಯುವ ಕಾಲ್ನಡಿಗೆ ಜಾಥಾ ಹಾಗೂ ಬೃಹತ್ ಕಾರ್ಯಕರ್ತರ ಸಭೆ ಮಹತ್ವ ಪಡೆದುಕೊಂಡಿದೆ.
ವಿಧಾನಸಭಾ ಚುನಾವಣೆಯಲ್ಲಿ ವೀರೋಚಿತ ಸೋಲು ಅನುಭವಿಸಿರುವ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಚುನಾವಣೆಯ ಬಳಿಕ ತಮ್ಮ ಅಭಿಮಾನಿಗಳ ಸಂಖ್ಯೆಯನ್ನು ಇನ್ನೂ ಹೆಚ್ಚಿಸಿಕೊಂಡಿದ್ದಾರೆ. ಸರ್ವಧರ್ಮೀಯರು ಪುತ್ತಿಲ ಅಭಿಮಾನಿಗಳಾಗಿರುವುದು ಕಾಂಗ್ರೆಸ್ ವಿಜಯೋತ್ಸವದ ವೇಳೆಯೇ ಗಮನಕ್ಕೆ ಬಂದಿತ್ತು.
Posted by Vidyamaana on 2023-11-13 21:40:41 |
ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು 5 ತಿಂಗಳ ಗರ್ಭಿಣಿಯಾಗಿಸಿದ ಪ್ರಕರಣದ ಆರೋಪಿಯನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಧರ್ಮಸ್ಥಳ ಗ್ರಾಮದ ನಿವಾಸಿ ಕೇಶವ ಪೂಜಾರಿ (43) ಬಂಧಿತ.ಆರೋಪಿ ಬಾಲಕಿಯ ಮನೆಯವರಿಗೆ ಪರಿಚಯಸ್ಥನಾಗಿದ್ದ.ಹತ್ತನೇ ತರಗತಿಯ ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ.
ಬಾಲಕಿ ಐದು ತಿಂಗಳ ಗರ್ಭಿಣಿಯಾದಾಗಲೇ ಮನೆಯವರಿಗೆ ಘಟನೆಯ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
Posted by Vidyamaana on 2023-09-02 13:16:53 |
ತನ್ನ ಕಚೇರಿಗೆ ಬರುವವರನ್ನು ವಿಚಾರಿಸಲು, ಅವರ ಸಮಸ್ಯೆ ಆಲಿಸಲು ಕಚೇರಿಯಲ್ಲಿ ಜನ ಇರಬೇಕೆಂಬ ದೂರ ದೃಷ್ಟಿ ಶಾಸಕರಲ್ಲಿತ್ತು ,ಯಾರೇ ಏನೇ ಅಂದರೂ ಶಾಸಕರು ಅದರ ಬಗ್ಗೆ ತಲೆಕೆಡಿಸಿಕೊಳ್ಳಲು ಹೋಗಿಲ್ಲ. ಕಚೇರಿಗೆ ಬರುವ ಬಡವರಿಗೆ ಸೇವೆ ಸಿಗಬೇಕೆಂಬ ಹಂಬಲ ಅವರಲ್ಲಿತ್ತು. ಏಳು ಜನ ಪಿಎ ಗಳನ್ನು ಯಾಕೆ ಇಟ್ಟಿದ್ದಾರೆ ಎಂಬುದು ಕೆಲವರಿಗೆ ಅರ್ಥವಾಗಿರಬಹುದು ಆದರೆ ಕೆಲವರಿಗೆ ಅರ್ಥವಾಗದೆನೂ ಇರಬಹುದು. ಅರ್ಥ ಮಾಡಿಕೊಳ್ಳದೆ ಇರುವುದು ತಪ್ಪು ಎಂದು ಹೇಳಲಾಗದು.
ಶುಕ್ರವಾರ ಮಧ್ಯಾಹ್ನ ಊಟ ಮುಗಿಸಿ ಶಾಸಕರ ಕಚೇರಿ ಕಡೆ ತೆರಳಿದ್ದೆ. ಕಚೇರಿ ಮುಂಬಾಗಿಲ ಬಳಿ ವೃದ್ದೆ ಯೋರ್ವರು ನೆಲದಮೇಲೆ ಕುಳಿತಿದ್ದರು ಪಕ್ಕದಲ್ಲಿ ಪಿಎ ಲಿಂಗಪ್ಪರೂ ಅವರ ಜೊತೆ ಮಾತನಾಡುತ್ತಿದ್ದರೂ ಆ ಕ್ಷಣದಲ್ಲಿ ನಾನೊಂದು ಫೋಟೋ ಕ್ಲಿಕ್ಕಿಸಿದೆ. ಬಳಿಕ ನಾನೂಆ ವೃದ್ದೆತಾಯಿ ಲಿಂಗಪ್ಪರ ಬಳಿ ಹೇಳುತ್ತಿದ್ದ ಸಮಸ್ಯೆಯನ್ನೂ ಆಲಿಸಿದೆ. ಬಳಿಕ ಯಾಕೆ ನೀವು ನೆಲದ ಮೇಲೆ ಕೂತಿದ್ದೀರಿ ಎಂದು ಕೇಳಿಬಿಟ್ಟೆ. ಆಗ ಆ ಮಹಿಳೆ ನನಗೆ ಕುರ್ಚಿ ಮೇಲೆ ಕುಳಿತುಕೊಳ್ಳಲು ಆಗುತ್ತಿಲ್ಲ ಅದಕ್ಕೆ ನೆಲದ ಮೇಲೆ ಕುಳಿತೆ ನಾನು ಕುಳಿತಾಗ ಇವರೂ (ಲಿಂಗಪ್ಪ) ರೂ ಕುಳಿತರು, ನನ್ನಸಮಸ್ಯೆಗೆ ಪರಿಹಾರವನ್ನೂ ಸೂಚಿಸಿದರು ಎಂದು ಹೇಳಿದಾಗ ಶಾಸಕರು ಯಾಕೆ ಕಚೇರಿಯಲ್ಲಿ ಪಿಎ ಗಳನ್ನು ಇಟ್ಟುಕೊಂಡಿದ್ದಾರೆ ಎಂದು ಪ್ರಶ್ನಿಸಿದವರಿಗೆ ಉತ್ತರ ಸಿಕ್ಕಿರಬಹುದು ಎಂದು ಮನಸ್ಸಿನಲ್ಲೇ ಗ್ರಹಿಸಿಕೊಂಡೆ.
Posted by Vidyamaana on 2023-04-30 13:36:11 |
ಪುತ್ತೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರು ದಿ. ಪ್ರವೀಣ್ ನೆಟ್ಟಾರು ರವರ ಮನೆಗೆ ಭೇಟಿ ನೀಡಿದರು.
ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಚುನಾವಣಾ ಪ್ರಚಾರ ಸಭೆಗೆ ಆಗಮಿಸಿದ ಅವರು ಕೊಡಿಯಾಲ ಬೈಲಿನ ಹೆಲಿಪ್ಯಾಡ್ ನಿಂದ ರಸ್ತೆ ಮಾರ್ಗವಾಗಿ ನೆಟ್ಟಾರಿಗೆ ಆಗಮಿಸಿ, ದಿ. ಪ್ರವೀಣ್ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಪ್ರವೀಣ್ ನೆಟ್ಟಾರು ಅವರ ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ, ಪತ್ನಿ ನೂತನ ಅವರಿಗೆ ಸಾಂತ್ವನ ಹೇಳಿದರು.ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ಈಗಾಗಲೇ
ಪಿ.ಎಫ್.ಐ.ಯನ್ನು ನಿಷೇಧಿಸಿದ್ದು, ಪ್ರವೀಣ್ ಕುಟುಂಬದೊಂದಿಗೆಬಿಜೆಪಿ ಸದಾ ಇರಲಿದೆ ಎಂದರು.ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಅಭ್ಯರ್ಥಿ ಭಾಗೀರಥಿ ಮುರುಳ್ಯ ಸೇರಿದಂತೆ ಸುಳ್ಯದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು