ಎಸ್ ಪಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

ಸುದ್ದಿಗಳು News

Posted by vidyamaana on 2024-07-01 12:44:53 |

Share: | | | | |


ಎಸ್ ಪಿ ಆವರಣದಲ್ಲೇ ಪತ್ನಿಯನ್ನು ಇರಿದು ಕೊಂದ ಪೊಲೀಸ್ ಕಾನ್‌ಸ್ಟೇಬಲ್

ಹಾಸನ: ಪೊಲೀಸ್‌ ಕಾನ್‌ಸ್ಟೇಬಲ್‌ (Police Constable) ಒಬ್ಬ ತನ್ನ ಪತ್ನಿಯನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ (SP) ಕಚೇರಿ ಆವರಣದಲ್ಲೇ ಇರಿದು (Stabbed) ಕೊಂದುಹಾಕಿದ (Murder Case) ಘಟನೆ ಹಾಸನದಲ್ಲಿ ನಡೆದಿದೆ.ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕಾನ್‌ಸ್ಟೇಬಲ್‌, ಪತ್ನಿಗೆ ಚಾಕುವಿನಿಂದ ಇರಿದಿದ್ದಾನೆ.

ಕಳೆದ ನಾಲ್ಕೈದು ದಿನಗಳಿಂದ ಗಂಡ-ಹೆಂಡತಿ ನಡುವೆ ಜಗಳ ನಡೆದಿತ್ತು. ಪೊಲೀಸ್ ಗಂಡನ ವಿರುದ್ಧ ದೂರು ನೀಡಲೆಂದು ಪತ್ನಿ ಮಮತಾ(37) ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಆಗಮಿಸಿದ್ದರು. ಇದೇ ವೇಳೆ, ಹಿಂಬಾಲಿಸಿ ಬಂದಿದ್ದ ಲೋಕನಾಥ್ ಹಾಸನ ಎಸ್ಪಿ ಕಚೇರಿ ಎದುರಲ್ಲೇ ಪತ್ನಿಯ ಎದೆಗೆ ಚಾಕುವಿನಿಂದ ಇರಿದು ಪರಾರಿಯಾಗಲು ಯತ್ನಿಸಿದ್ದಾನೆ.‌

ಮಹಿಳೆಯನ್ನು ಕೂಡಲೇ ಪೊಲೀಸರು ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾಳೆ.‌ ಆರೋಪಿ ಪತಿ ಲೋಕನಾಥ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಾಸನ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 Share: | | | | |


ಸಂಸತ್ತಿನೊಳಗೆ ಹೋಗಲು ವಿಸಿಟರ್ಸ್ ಪಾಸ್ ಪಡೆಯುವುದು ಹೇಗೆ? ಪ್ರೋಟೋಕಾಲ್​​ಗಳು ಹೇಗೆ?

Posted by Vidyamaana on 2023-12-13 20:12:38 |

Share: | | | | |


ಸಂಸತ್ತಿನೊಳಗೆ ಹೋಗಲು ವಿಸಿಟರ್ಸ್ ಪಾಸ್ ಪಡೆಯುವುದು ಹೇಗೆ? ಪ್ರೋಟೋಕಾಲ್​​ಗಳು ಹೇಗೆ?

 ಸಂಸತ್​​​​ ಒಳಗೆ ಬಂದು ಅಶ್ರುವಾಯು ಸಿಡಿಸಿದ ಮೈಸೂರಿನ ವ್ಯಕ್ತಿ ಸೇರಿ ಇಬ್ಬರನ್ನು ಬಂಧಿಸಲಾಗಿದೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಮೈಸೂರು ಸಂಸದ ಪ್ರತಾಪ್​​​ ಸಿಂಹ ಅವರ ಪಿಎ ವಿಸಿಟರ್ಸ್ ಪಾಸ್ ನೀಡಿದ್ದಾರೆ ಎಂದು ಹೇಳಲಾಗಿದೆ. ಆದರೆ ವಿಸಿಟರ್ಸ್ ಪಾಸ್ ಪಡೆಯಬೇಕಾದರೆ ಏನು ಮಾಡಬೇಕು.ಅಲ್ಲಿಯ ಭದ್ರತಾ ಹಂತಗಳು ಹೇಗಿರುತ್ತದೆ ಎಂಬ ಮಾಹಿತಿ ಇಲ್ಲಿದೆ. Parliament security breach) ಉಂಟಾಗಿದ್ದು, ಸಾಗರ್​​ ಶರ್ಮ ಮತ್ತು ಮನೋರಂಜನ್‌​​ ಎಂಬ ಇಬ್ಬರು ಯುವಕರು ಸಂಸತ್​​​ ಅಧಿವೇಶದಲ್ಲಿ ನಿಂತ ಅಶ್ರುವಾಯು ಸಿಡಿಸಿದ ಘಟನೆ ನಡೆದಿದೆ. ಇದೀಗ ಒಟ್ಟು ನಾಲ್ಕು ಜನರನ್ನು ಬಂಧಿಸಿದ್ದಾರೆ. ಬಂಧನವಾಗಿರುವ ನಾಲ್ವರಲ್ಲಿ ಒಬ್ಬ ಮೈಸೂರಿನ ಮನೋಹರ್​​ ಎಂದು ಹೇಳಲಾಗಿದೆ. ಇವರಿಗೆ ಸಂಸತ್​​​ ಒಳಗೆ ಹೋಗಲು ಮೈಸೂರಿನ ಸಂಸದ ಪ್ರತಾಪ್​​​​ ಸಿಂಹ ಅವರ ಪಿಎ ಪಾಸ್​​​ ನೀಡಿದ್ದಾರೆ ಎಂದು ಹೇಳಲಾಗಿದೆ. ಇದೀಗ ಈ ಬಗ್ಗೆ ತನಿಖೆ ನಡೆಯುತ್ತಿದೆ. ಆದರೆ ಈ ವಿಸಿಟರ್ಸ್ ಪಾಸ್ ಎಂದರೇನು? ಸಂಸತ್​​ ಒಳಗೆ ಒಬ್ಬ ಸಾಮಾನ್ಯ ವ್ಯಕ್ತಿ ಹೋಗಬೇಕಾದರೆ ಯಾವೆಲ್ಲ ಕ್ರಮ ಮತ್ತು ಭದ್ರತೆಗಳನ್ನು ಪರಿಶೀಲನೆ ಮಾಡಲಾಗುತ್ತದೆ ಎಂಬುದನ್ನು ಇಲ್ಲಿ ತಿಳಿಯಿರಿ.


ಪಾಸ್​​ ಪಡೆಯುವುದು ಮತ್ತು ಪ್ರೋಟೋಕಾಲ್​​ಗಳು ಹೇಗೆ?


ಸಂಸತ್ತಿನ ಸಂಕೀರ್ಣದೊಳಗೆ ಹೋಗಲು ನೀಡುವ ಗ್ಯಾಲರಿ ಪಾಸ್‌ಗಳ ವಿತರಣೆಯ ನಿಯಂತ್ರಣ ಪ್ರೋಟೋಕಾಲ್​​​​​​ ಹೊಂದಿರುತ್ತದೆ. ಸಂಸತ್ತಿನ ಸದಸ್ಯರು ಮಾತ್ರ ಇದಕ್ಕೆ ಅರ್ಜಿ ಸಲ್ಲಿಸಬಹುದು, ಪತ್ರಕರ್ತರು, ಮಾಧ್ಯಮ ಮಿತ್ರರು ವೀಕ್ಷಕರಾಗಿ ಈ ಪಾಸ್ ಪಡೆಯಬಹುದು​​​ , ಪ್ರತಿ ಪಾಸ್‌ಗೆ ವಿಶಿಷ್ಟ ಐಡಿಯನ್ನು ನಿಗದಿಪಡಿಸಲಾಗಿದೆ. ಈಗಾಗಲೇ ಈ ಪಾಸ್​​​ ಐಡಿಯಲ್ಲೂ ಬೇರೆ ಬೇರೆ ವಿಧಗಳಿವೆ. ಪ್ರೇಕ್ಷಕರ ಗ್ಯಾಲರಿಗೆ ಪಾಸ್​​​​ ಪಡೆಯಬೇಕಾದರೆ ಸಂಸದ ಸಹಿ ಕೂಡ ಇರಬೇಕು. ಒಂದು ಪಾಸ್​​​ನಲ್ಲಿ ಇಬ್ಬರು ಹೋಗಬಹುದು. ಆ ಪಾಸಿನಲ್ಲಿ ಒಬ್ಬ ಮತ್ತು ಪ್ಲಸ್​​​ ಎಂದು ನಮೂದಿಸಿರುತ್ತಾರೆ. ಇನ್ನು ವಿದ್ಯಾರ್ಥಿಗಳು ಈ ಪಾಸ್​​​ ಪಡೆಯಬೇಕಾದರೆ ಶಾಲೆಯಿಂದ ಒಂದು ಪತ್ರವನ್ನು ಪಡೆದು, ಅದಕ್ಕೆ ಸಂಸದರ ಸಹಿ ಇದ್ದು, ನಂತರ ಹೋಗಬಹುದು.


ಭದ್ರತಾ ರಕ್ಷಕರ ಕಾರ್ಯ


ಸಂಸತ್ತಿನ ಒಳಗೆ ಹಲವು ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿರುತ್ತದೆ. ಇದನ್ನು ನೋಡಿಕೊಳ್ಳುವವರು ಜಂಟಿ ಕಾರ್ಯದರ್ಶಿ. ಇದರಲ್ಲಿ ದೆಹಲಿ ಪೊಲೀಸ್, ಸಂಸತ್ತು ರಕ್ಷಕರು ಮತ್ತು ವಿವಿಧ ಮಿತ್ರ ಭದ್ರತಾ ಏಜೆನ್ಸಿಗಳನ್ನು ಒಳಗೊಂಡಿರುತ್ತಾರೆ. ಇನ್ನು ಸಂಸತ್ತಿನಲ್ಲಿ ಭದ್ರತಾ ವ್ಯವಸ್ಥೆಯನ್ನು ಬಹು-ಪದರದಿಂದ ವಿನ್ಯಾಸಗೊಳಿಸಲಾಗಿದೆ. ಅತ್ಯಾಧುನಿಕ ತಂತ್ರಜ್ಞಾನಗಳು ಮತ್ತು ಸಾಂಪ್ರದಾಯಿಕ ಭದ್ರತಾ ಕ್ರಮಗಳನ್ನು ಒಳಗೊಂಡಿದೆ. ಇಲ್ಲಿ ಟೈರ್ ಕಿಲ್ಲರ್‌ಗಳು ಮತ್ತು ರೋಡ್ ಬ್ಲಾಕರ್‌ಗಳನ್ನು ಅಳವಡಿಸಿಕೊಳ್ಳಲಾಗಿದೆ.


ಪ್ರದೇಶವಾರು ಜವಾಬ್ದಾರಿ


ಇನ್ನು ಇಲ್ಲಿ ಪ್ರದೇಶವಾರು ಜವಾಬ್ದಾರಿಗಳನ್ನು ಹೊಂದಿರುತ್ತದೆ. ಭದ್ರತಾ ಅಧಿಕಾರಿ/ಸಹಾಯಕ ನಿರ್ದೇಶಕರು (ಭದ್ರತೆ) ಸಂಸತ್ ಭವನದ ಕಟ್ಟಡದೊಳಗೆ ಹೋಗುವ ವ್ಯಕ್ತಿಗಳ ಪಾಸ್‌ಗಳನ್ನು ಸರಿಯಾಗಿ ಪರಿಶೀಲಿಸುತ್ತಾರೆ ಮತ್ತು ಅವರನ್ನು ಕೂಡ ಪರಿಶೀಲಿಸುತ್ತಾರೆ. ಯಾವುದೇ ಅನುಮಾನ ಬಂದರು ಅವುಗಳನ್ನು ಹಿರಿಯ ಅಧಿಕಾರಿಗಳಿಗೆ ಹೇಳುತ್ತಾರೆ. ಅಲ್ಲಿ ಅನುಮಾನಾಸ್ಪ ವಿಚಾರಗಳು ತಿಳಿದುಬಂದಲ್ಲಿ ತಕ್ಷಣ ಆ ಬಗ್ಗೆ ಕ್ರಮ ತೆಗೆದುಕೊಳ್ಳುತ್ತಾರೆ.


ಸಂಸತ್​​​ ಗ್ಯಾಜೆಟ್‌, ಡೋರ್-ಫ್ರೇಮ್ ಮೆಟಲ್ ಡಿಟೆಕ್ಟರ್‌ ಅಳವಡಿಕೆ


ಭದ್ರತಾ ಶಸ್ತ್ರಾಗಾರವು ಡೋರ್-ಫ್ರೇಮ್ ಮೆಟಲ್ ಡಿಟೆಕ್ಟರ್‌ಗಳು, ಆಧುನಿಕ ಗ್ಯಾಜೆಟ್‌ಗಳು ಮತ್ತು ವಾಹನದ ಪ್ರವೇಶವನ್ನು ನಿಯಂತ್ರಿಸುವ ರೇಡಿಯೋ ಫ್ರೀಕ್ವೆನ್ಸಿ ಟ್ಯಾಗ್‌ಗಳನ್ನು ವ್ಯವಸ್ಥಿತವಾಗಿ ನಿರ್ಮಿಸಲಾಗಿದೆ. ಈ ಮೂಲಕ ಸಂಸತ್ತಿನಲ್ಲಿ ಸಂದರ್ಶಕನನ್ನು ಪರೀಕ್ಷಿಸಲಾಗುತ್ತದೆ ಮತ್ತು ಅವರ ಬ್ಯಾಗ್‌ಗಳನ್ನು ಕನಿಷ್ಠ ಮೂರು ಬಾರಿ ಪರಿಶೀಲಿಸಲಾಗುತ್ತದೆ. ಮೆಟಲ್ ಡಿಟೆಕ್ಟರ್‌ಗಳಲ್ಲಿ ಪರಿಶೀಲಿಸಿದ ನಂತರ ಮತ್ತೆ ಎರಡನೇ ಹಂತದ ಭದ್ರತಾ ತಪಾಸಣೆ ಮಾಡಲಾಗುತ್ತದೆ.ಸಂದರ್ಶಕರ ಗ್ಯಾಲರಿಗೆ ಪ್ರವೇಶಿಸುವ ಮೊದಲು ಮತ್ತೊಂದು ಭದ್ರತಾ ತಪಾಸಣೆ ಮಾಡಲಾಗುತ್ತದೆ.


ಶಸ್ತ್ರಾಸ್ತ್ರ ನಿಷೇಧ


ಸಂಸತ್ತಿನ ಕೆಲವು ಸದಸ್ಯರಿಗೆ ಭದ್ರತಾ ಸಿಬ್ಬಂದಿಗಳನ್ನು ನೀಡಲಾಗಿದೆ. ಆದರೆ ಅವರು ಅಧಿವೇಶನದ ಒಳಗೆ ಬರುವಂತಿಲ್ಲ. ಸಂಸತ್ ಭವನದ ಸಂಕೀರ್ಣದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಪ್ರತಿ ಗೇಟ್‌ನಲ್ಲಿ ನಿಖರವಾದ ತಪಾಸಣೆ ನಂತರವೇ ಭದ್ರತಾ ಸಿಬ್ಬಂದಿಗೆ ಸಂಸತ್ತಿನ ಒಳಗೆ ಬರಬಹುದು


ಭದ್ರತಾ ಗುರುತಿಸುವಿಕೆ ಮತ್ತು ಸಮನ್ವಯ


ಸಂಸತ್ತಿನ ಒಳಗಿನ ಪ್ರವೇಶವು ವಿವಿಧ ಭದ್ರತಾ ಏಜೆನ್ಸಿಗಳ ನಡುವೆ ಗುರುತಿಸುವಿಕೆ ಮತ್ತು ಪರಿಶೀಲನೆ ಹಾಗೂ ಸಮನ್ವಯವನ್ನು ಸಾಧಿಸಲಾಗುತ್ತದೆ.ದೆಹಲಿ ಪೊಲೀಸ್, ಪಾರ್ಲಿಮೆಂಟ್ ಡ್ಯೂಟಿ ಗ್ರೂಪ್, ಇಂಟೆಲಿಜೆನ್ಸ್ ಬ್ಯೂರೋ, ಸ್ಪೆಷಲ್ ಪ್ರೊಟೆಕ್ಷನ್ ಗ್ರೂಪ್ ಮತ್ತು ನ್ಯಾಷನಲ್ ಸೆಕ್ಯುರಿಟಿ ಗಾರ್ಡ್‌ ಸಂಸತ್ತಿನ ಭದ್ರತಾ ಸೇವೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ.

ಉಳ್ಳಾಲ : ಯುವತಿ ಮಾನಭಂಗ ಯತ್ನ - ಉತ್ತರಪ್ರದೇಶ ಮೂಲದ ಕಾರ್ಮಿಕ ರಾಮು ಪೊಲೀಸ್ ವಶಕ್ಕೆ

Posted by Vidyamaana on 2023-06-10 04:04:41 |

Share: | | | | |


ಉಳ್ಳಾಲ : ಯುವತಿ ಮಾನಭಂಗ ಯತ್ನ - ಉತ್ತರಪ್ರದೇಶ ಮೂಲದ ಕಾರ್ಮಿಕ ರಾಮು ಪೊಲೀಸ್ ವಶಕ್ಕೆ

ಉಳ್ಳಾಲ: ಕೆಲಸದಿಂದ ವಾಪಸ್ಸಾಗುತ್ತಿದ್ದ ಯುವತಿ ಮೇಲೆ ಹೊರರಾಜ್ಯದ ಕಾರ್ಮಿಕ ಮಾನಭಂಗಕ್ಕೆ ಯತ್ನಿಸಿದ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಿನತಲಪಾಡಿಯಲ್ಲಿ  ಜೂ 9 ರಂದು ಸಂಜೆ ಸಂಭವಿಸಿದೆ. ಉತ್ತರಪ್ರದೇಶ ಮೂಲದ ರಾಮು ಕೆ. ಎಂಬಾತನನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.ಮಂಗಳೂರಿಗೆ ಕೆಲಸಕ್ಕೆ ತೆರಳಿ ಮನೆಗೆ ವಾಪಸ್ಸಾಗುವ ಸಂದರ್ಭ ದಾರಿಮಧ್ಯೆ ಯುವತಿ ಮೇಲೆ ಲೈಂಗಿಕ ಕಿರುಕುಳ ನೀಡಿ ಆರೋಪಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಘಟನೆಯಿಂದ ಬೆದರಿದ ಯುವತಿ ಬೊಬ್ಬಿಟ್ಟಾಗ ಸ್ಥಳೀಯರು ಓಡಿಬಂದು ಆರೋಪಿಯನ್ನು ಹಿಡಿದು ಥಳಿಸಿದ್ದಾರೆ. ಬಳಿಕ ಉಳ್ಳಾಲ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಆರೋಪಿ ಹಿಡಿದು ಬಂಧಿಸಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾ:17 ರಿಂದ 19 ಪಡುಮಲೆ ಪಮ್ಮಲ ಜುಮ್ಮಾ ಮಸ್ಜಿದ್ ನಲ್ಲಿ ಆಂಡ್ ನೇರ್ಚೆ ಧಾರ್ಮಿಕ ಉಪನ್ಯಾಸ

Posted by Vidyamaana on 2023-03-15 14:45:51 |

Share: | | | | |


ಮಾ:17 ರಿಂದ 19 ಪಡುಮಲೆ ಪಮ್ಮಲ ಜುಮ್ಮಾ ಮಸ್ಜಿದ್ ನಲ್ಲಿ ಆಂಡ್ ನೇರ್ಚೆ ಧಾರ್ಮಿಕ ಉಪನ್ಯಾಸ

ಪುತ್ತೂರು: ಪಡುಮಲೆ (ಪಮ್ಮಲ) ಜುಮ್ಮಾ ಮಸ್ಜಿದ್ ವಠಾರದಲ್ಲಿ ಅಂತ್ಯ ವಿಶ್ರಮ ಹೊಂದಿರುವ ಮಹಾನುಭಾವದ ಹೆಸರಲ್ಲಿ ನಡೆದುಕೊಂಡು ಬರುತ್ತಿರುವ ಆಂಡ್ ನೇರ್ಚೆ ಮೂರು ದಿನಗಳ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಮಾ.17, 18 ಹಾಗೂ 19 ರಂದು ಮೂರು ದಿನಗಳ ಕಾಲ ನಡೆಯಲಿದೆ ಎಂದು ಜಮಾಅತ್ ಕಮಿಟಿ ಅಧ್ಯಕ್ಷ ಮಹಮ್ಮದ್ ಬಡಗನ್ನೂರು ತಿಳಿಸಿದ್ದಾರೆ.

ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪಡುಮಲೆ ಪ್ರದೇಶ ಮಸೀದಿ, ದೇವಸ್ಥಾನ, ದೈವಸ್ಥಾನಗಗಳನ್ನೊಳಗೊಂಡು ಸೌಹಾರ್ದತೆಯಿಂದ ಕಳೆದ ಹಲವಾರು ವರ್ಷಗಳಿಂದ ನಡೆದುಕೊಂಡು ಬರುತ್ತಿದೆ ಎಂದರು.

ಮಾ.17 ರಂದು ಧ್ವಜಾರೋಹಣದೊಂದಿಗೆ ಕಾರ್ಯಕ್ರಮ ಆರಂಭಗೊಳ್ಳಲಿದ್ದು, ಪುತ್ತೂರು ಕೇಂದ್ರ ಜುಮಾ ಮಸೀದಿ ಮುದರ್ರಿಸ್ ಅಸ್ಸಯ್ಯದ್ ಅಹ್ಮದ್ ಪೊಕೋಯ ತಂಙಳ್ ಉದ್ಘಾಟಿಸಿ ಆಶೀರ್ವಚನ ನೀಡುವರು. ಬಹು | ಸಿರಾಜುದ್ದೀನ್ ದಾರಿಮಿ ಕಕ್ಕಾಡ್ ಮುಖ್ಯ ಪ್ರಭಾಷಣ ಮಾಡುವರು. ಮಾ.18 ರಂದು ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಮ್ಮಲ ಜಮಾಅತ್ ಕಮಿಟಿ ಅಧ್ಯಕ್ಷ ಹಾಜಿ ಮಹಮ್ಮದ್ ಬಡಗನ್ನೂರು ವಹಿಸಲಿದ್ದು, ಲುಕ್ಮಾನುಲ್ ಹಕೀಂ ಸಖಾಫಿ ಪುಲ್ಲಾರ ಮುಖ್ಯ ಪ್ರಭಾಷಣ ಮಾಡುವರು. ಮಾ.19 ರಂದು ಸಂಜೆ 5 ಗಂಟೆಗೆ ಸೌಹಾರ್ದ ಸಂಗಮ ನಡೆಯಲಿದ್ದು, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಉಪನಾಯಕ ಯು.ಟಿ.ಖಾದರ್, ಸದಸ್ಯರಾದ ಕೆ.ಹರೀಶ್ ಕುಮಾರ್, ಮಂಜುನಾಥ ಭಂಡಾರಿ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಮತ್ತಿತರ ಧಾರ್ಮಿಕ, ರಾಜಕೀಯ ನಾಯಕರು ಪಾಲ್ಗೊಳ್ಳಲಿದ್ದಾರೆ. 

ರಾತ್ರಿ 8.30 ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸಯ್ಯದ್ ರಶೀದ್ ಅಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ಮಹಾಶೀರ್ವಚನ ನೀಡಲಿದ್ದು, ಪಮ್ಮಲ ಮಸೀದಿ ಖತೀಬ ಶಂಸುದ್ದೀನ್ ದಾರಿಮಿ ಉದ್ಘಾಟಿಸುವರು. ಅಧ್ಯಕ್ಷ ಮಹಮ್ಮದ್ ಬಡಗನ್ನೂರು ಅಧ್ಯಕ್ಷತೆ ವಹಿಸುವರು. ಇ.ಪಿ.ಅಬೂಬಕ್ಕರ್ ಅಲ್ ಖಾಸಿಮಿ ಪತ್ತನಾಪುರಂ ಮುಖ್ಯ ಪ್ರಭಾಷಣ ಮಾಡುವರು. ಸಮಾರೋಪದ ಬಳಿಕ ಅನ್ನದಾನ ಸೇವೆ ನಡೆಯಲಿದೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಮಾಅತ್ ಕಮಿಟಿ ಉಪಾಧ್ಯಕ್ಷ ಪಕ್ರುದ್ದೀನ್ ಹಾಜಿ, ಖತೀಬ ಶಂದುದ್ದೀನ್ ದಾರಿಮಿ, ಕಾರ್ಯದರ್ಶಿ ಅಲಿಕುಂಞಿ ಹಾಜಿ, ಮಾಜಿ ಖಜಾಂಚಿ ಆದಂ ಹಾಜಿ ಉಪಸ್ಥಿತರಿದ್ದರು.

ಬೈಕ್‌-ಕ್ಯಾಂಟರ್‌ ಡಿಕ್ಕಿಗೆ ಯುವತಿ ನಾಲಿಗೆ ಕಟ್! ಸವಾರ ಶಿವರಾಜ್ ಸ್ಪಾಟ್‌ ಡೆತ್‌

Posted by Vidyamaana on 2024-05-27 16:22:03 |

Share: | | | | |


ಬೈಕ್‌-ಕ್ಯಾಂಟರ್‌ ಡಿಕ್ಕಿಗೆ ಯುವತಿ ನಾಲಿಗೆ ಕಟ್! ಸವಾರ ಶಿವರಾಜ್ ಸ್ಪಾಟ್‌ ಡೆತ್‌

ಚಿಕ್ಕಮಗಳೂರು/ಬೆಳಗಾವಿ: ಬೈಕ್-ಕ್ಯಾಂಟರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟರೆ, ಹಿಂಬದಿ ಇದ್ದ ಯುವತಿಯ ನಾಲಿಗೆ ಕಟ್ ಆಗಿದೆ. ಚಿಕ್ಕಮಗಳೂರು ತಾಲೂಕಿನ ಮೂಗ್ತಿಹಳ್ಳಿ ಬಳಿ  ಘಟನೆ ನಡೆದಿದೆ.ಶಿವರಾಜ್ (26) ಮೃತ ದುರ್ದೈವಿ. ಲಾವಣ್ಯ (20) ನಾಲಿಗೆ ಕಳೆದುಕೊಂಡವಳು.

ಪಕ್ಷದ ಹೈಕಮಾಂಡ್ ಮೇಲೆ ವಿ ಸೋಮಣ್ಣ ಬೇಸರ – ರಾಜ್ಯಾಧ್ಯಕ್ಷ ಹುದ್ದೆ ಕೊಡಿ ಎಂದು ಪರೋಕ್ಷ ಸಂದೇಶ

Posted by Vidyamaana on 2023-06-25 12:49:12 |

Share: | | | | |


ಪಕ್ಷದ ಹೈಕಮಾಂಡ್ ಮೇಲೆ ವಿ ಸೋಮಣ್ಣ ಬೇಸರ – ರಾಜ್ಯಾಧ್ಯಕ್ಷ ಹುದ್ದೆ ಕೊಡಿ ಎಂದು ಪರೋಕ್ಷ ಸಂದೇಶ

ಬೆಂಗಳೂರು :ನಾನು ಮನೆಯಲ್ಲಿ ಆರಾಮಾಗಿ ಮಲಗಿದ್ದರೂ ಗೋವಿಂದರಾಜನಗರದಲ್ಲಿ ಗೆಲ್ಲುತ್ತಿದ್ದೆ. ಆದರೆ ಪಕ್ಷ ನೀಡಿದ ಟಾಸ್ಕ್​​ ಪೂರೈಸಲು ಕ್ಷೇತ್ರ ಬಿಟ್ಟು ಹೋದೆ. ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಸ್ಪರ್ಧಿಸಿ, ಈಗ ಸೋತು ನಿರುದ್ಯೋಗಿ ಆಗಿ​​​ ಮನೆಯಲ್ಲಿ ಕುಳಿತಿದ್ದೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ ಬೇಸರ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಅವರು, ತಾನು ಸೋತಿದ್ದುಏಕೆ ಎಂದು ಪದೇ ಪದೇ ಹೇಳುವ ಮೂಲಕ ತಾನೇ ಆ ಹುದ್ದೆಗೆ ಅರ್ಹ ವ್ಯಕ್ತಿ ಎಂದು ಬಿಂಬಿಸಿಕೊಳ್ಳಲು ಯತ್ನಿಸುತ್ತಿದ್ದಾರೆ.

ವಿಧಾನಸಭೆ ಚುನಾವಣೆ ಸೋಲಿಕ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಗೆ ಭಾನುವಾರ ಭೇಟಿ ನೀಡಿದ ಅವರು ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ ಎಂಬುದನ್ನು ನಂಬಿದವನು ನಾನು. ಗೋವಿಂದರಾಜನಗರದಲ್ಲಿ 480 ಕೋಟಿ ರೂ.ಗೂ ಹೆಚ್ಚಿನ ಕೆಲಸ ಮಾಡಿರುವೆ. ಆಸ್ಪತ್ರೆ, ಶಾಲೆ, ಕಾಲೇಜು ಸೇರಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಆದರೆ ಪಕ್ಷದ ತೀರ್ಮಾನಕ್ಕೆ ಬದ್ಧನಾಗಿ ನಡೆದುಕೊಂಡೆ. ಈಗ ಸೋತಿರುವೆ. ಬಿಜೆಪಿಯ ಕಾನೂನು ಪ್ರಕೋಷ್ಠ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳಲು ಪಕ್ಷದ ಕಚೇರಿಗೆ ಆಗಮಿಸಿದ್ದೇನೆ” ಎಂದರು.


ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿ, “ನಾನು ಈಗಾಲೇ ಹೈಕಮಾಂಡ್​​​​​​​ ಬಳಿ ಏನು ಹೇಳಬೇಕೋ ಅದನ್ನು ಹೇಳಿದ್ದೇನೆ. ನನಗೆ ಇತಿಮಿತಿ ಇದೆ. ಫೋರ್ ಸಿಕ್ಸ್ ಎಲ್ಲ ಇಲ್ಲೆ ಹೊಡೆಯುತ್ತೇನೆ ಅಂತ ಹೇಳಿದ್ದೇನೆ. ಈಗ ಬೋಲ್ಡ್ ಕೂಡ ಆಗಿದ್ದೇನೆ. ಪಕ್ಷ ಕೊಡುವ ಸಂದೇಶದ ಪ್ರಕಾರ ಕೆಲಸ ಮಾಡುತ್ತೇನೆ” ಎಂದು ಹೇಳಿದರು.

“ಡಬಲ್ ಸ್ಟ್ಯಾಂಡರ್ಡ್ ನನಗೆ ಇಲ್ಲ. ಎಲ್ಲ ಪಕ್ಷದಲ್ಲಿ ಕೆಲಸ ಮಾಡಿದ್ದೇನೆ. ಬಿಜೆಪಿಗೆ ಬಂದು ಎಂತೆಂತಹ ಸಂದರ್ಭದಲ್ಲೂ ಕೆಲಸ ಮಾಡಿದ್ದೇನೆ. ಈಗಲೂ ಅವಕಾಶ ಕೊಟ್ಟರೆ ಮಾಡುತ್ತೇನೆ” ಎಂದರು.

ನಿನ್ನೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಿಜೆಪಿಯ ಸೋಲಿನ ನೈತಿಕ ಹೊಣೆ ಹೊತ್ತು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿ ನಂತರ ಉಲ್ಟಾ ಹೊಡೆದಿದ್ದರು. ನಾನು ರಾಜೀನಾಮೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದರು.

ರಾಜ್ಯಧ್ಯಕ್ಷ ಸ್ಥಾನಕ್ಕೆ ವಿ ಸೋಮಣ್ಣ, ಸಿಟಿ ರವಿ, ಅಶ್ವತ್ ನಾರಾಯಣ ಹಾಗೂ ಆರ್ ಅಶೋಕ್ ಪ್ರಬಲ ಆಕಾಂಕ್ಷಿಗಳಾಗಿದ್ದಾರೆ. ಈ ನಡುವೆ ಹಾಲಿ ರಾಜ್ಯಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ರಾಜ್ಯಧ್ಯಕ್ಷ ಸ್ಥಾನ ಬಿಟ್ಟುಕೊಡಲು ಸಿದ್ದರಿಲ್ಲ. ಹಾಗಾಗಿ ದಿನೇ ದಿನೇ ಗೊಂದಲ ಹೆಚ್ಚಾಗಿದೆ.

ಇತ್ತೀಚೆಗೆ ವಿ.ಸೋಮಣ್ಣ ಬಹಿರಂಗವಾಗಿ ನಾನು ಆಕಾಂಕ್ಷಿ ಎಂದು ಘೋಷಿಸಿದ್ದರು. ”ಚುನಾವಣಾ ಬಳಿಕ ಎರಡು ಬಾರಿ ದೆಹಲಿಗೆ ಹೋಗಿ ಬಂದಿದ್ದೇನೆ. ಯಾರ ಮೇಲೆ ಏನು ಅಭಿಪ್ರಾಯ ಎಂದು ಹೇಳುವುದಕ್ಕಿಂತ ನನ್ನ 45 ವರ್ಷದ ಅನುಭವ ಹೇಳಿದ್ದೇನೆ. ನನ್ನನ್ನು ರಾಜ್ಯಾಧ್ಯಕ್ಷ ಮಾಡಿ ಎಂದು ಹೇಳಿದ್ದೇನೆ. ಕೇಂದ್ರ ನಾಯಕರಿಗೆ ಪತ್ರ ಬರೆದಿದ್ದೇನೆ. ಅದು ಎಷ್ಟು ಚರ್ಚೆ ಆಗುತ್ತಿದೆ ಎನ್ನುವ ಬಗ್ಗೆ ಗೊತ್ತಿಲ್ಲ” ಎಂದಿದ್ದರು.

”ನಾನು ಬಿಜೆಪಿಗೆ ಬಂದು 15 ವರ್ಷ ಆಯಿತು. ಇಂತಹ ಪರಿಸ್ಥಿತಿಯಲ್ಲಿ ಬಿಜೆಪಿಯನ್ನು ಒಟ್ಟಿಗೆ ನಡೆಸಿಕೊಂಡು ಹೋಗಬೇಕಿದೆ. ಹೈಕಮಾಂಡ್ ನನಗೆ ನೀಡಿದ್ದ ಎಲ್ಲಾ ಟಾಸ್ಕ್ ಮಾಡಿದ್ದೇನೆ ಆದರೆ ಆರ್ ಅಶೋಕ್ ಅವರು ಟಾಸ್ಕ್‌ಅನ್ನು ಸರಿಯಾಗಿ ನಿಭಾಯಿಸಿಲ್ಲ. ಅವರು ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧೆ ಮಾತ್ರ ಮಾಡಿದರು. ಆದರೆ ಪೈಪೋಟಿ ನೀಡುವ ಪ್ರಯತ್ನ ಮಾಡಲಿಲ್ಲ. ಆದರೆ ನಾನು ಸಿದ್ದರಾಮಯ್ಯ ವಿರುದ್ಧ ಸ್ಪರ್ಧೆ ಮಾಡಿ ಪ್ರಬಲ ಪೈಪೋಟಿ ನೀಡಿದ್ದೇನೆ. ನನ್ನ ತವರು ಕ್ಷೇತ್ರ ಬಿಟ್ಟು ಬೇರೆ ಎರಡು ಕಡೆಗಳಲ್ಲಿ ನನಗೆ ಸ್ಪರ್ಧೆ ಮಾಡಲು ಟಾಸ್ಕ್ ಕೊಟ್ಟರು, ನಾನು ಅದಕ್ಕೆ ಒಪ್ಪಿದೆ. ನಾನು ಪಕ್ಷ ಹೇಳಿದಂತೆ ನಡೆದುಕೊಂಡು ಬಂದಿದ್ದೇನೆ ಹಾಗಾಗಿ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಬೇಕು ಎಂದು ನಮ್ಮ ವರಿಷ್ಠರಿಗೆ ಒತ್ತಾಯ ಮಾಡಿದ್ದೇನೆ” ಎಂದು ಸೋಮಣ್ಣ ತಿಳಿಸಿದರು.

”ನಾನು ಕೇವಲ 100 ದಿನ ಮಾತ್ರ ಅವಕಾಶ ಕೇಳಿದ್ದೇನೆ. ಒಬ್ಬ ರಾಜ್ಯಾಧ್ಯಕ್ಷ ಯಾವ ರೀತಿ ಸಂಚಲನವನ್ನು ಮೂಡಿಸಬೇಕು ಎಂದು ತೋರಿಸುತ್ತೇನೆ. ನಾನು ಸ್ವಲ್ಪ ಜೋರಾಗಿ ಮಾತಾಡುತ್ತೇನೆ ಸತ್ಯ ಮಾತಾಡುತ್ತೇನೆ ಗಲಾಟೆ ಮಾಡುತ್ತೇನೆ ನಿಜ. ಆದರೆ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುವಂಥ ಸಾಮರ್ಥ್ಯವಿದೆ. ಅವಕಾಶ ಕೊಟ್ಟರೆ ಎಲ್ಲರ ಮನೆಗೆ ಹೋಗಿ ಪಕ್ಷ ಸಂಘಟನೆ ಮಾಡುತ್ತೇನೆ. ನಮ್ಮಲ್ಲೂ ಕೂಡ ಪ್ರತಿಭೆ ಇದೆ, ಶಕ್ತಿ ಇದೆ, ದೂರದೃಷ್ಟಿ ಚಿಂತನೆ ಇದೆ” ಎಂದು ಹೇಳಿದ್ದಾರೆ.

ಕುಮ್ಕಿ ಭೂಮಿಯನ್ನು ಅಕ್ರಮಸಕ್ರಮದಲ್ಲಿ ಮಂಜೂರಾತಿಗೆ ಅವಕಾಶ ನೀಡಿ: ಅಧಿವೇಶನದಲ್ಲಿ ಸರಕಾರಕ್ಕೆ ಮನವಿ ಮಾಡಿದ ಶಾಸಕ ಅಶೋಕ್ ರೈ

Posted by Vidyamaana on 2024-02-19 19:29:58 |

Share: | | | | |


ಕುಮ್ಕಿ ಭೂಮಿಯನ್ನು ಅಕ್ರಮಸಕ್ರಮದಲ್ಲಿ ಮಂಜೂರಾತಿಗೆ ಅವಕಾಶ ನೀಡಿ: ಅಧಿವೇಶನದಲ್ಲಿ ಸರಕಾರಕ್ಕೆ ಮನವಿ ಮಾಡಿದ ಶಾಸಕ ಅಶೋಕ್ ರೈ

ಪುತ್ತೂರು: ದ ಕ ಹಾಗೂ ಉಡುಪಿ ಜಿಲ್ಲೆಯಲ್ಲಿ ಪಟ್ಟಾ ಕೃಷಿ ಭುಮಿಗೆ ಹೊಂದಿಕೊಂಡು ಸುಮಾರು ೯೦ ಮೀಟರ್ ತನ ಅಥವಾ ನಾಲ್ಕೂವರೆ ಸಂಕೋಲೆ ಜಾಗವನ್ನು ಕುಮ್ಕಿ ಎಂಬ ಕಾರಣಕ್ಕೆ ರೈತರಿಗೆ ಅಕ್ರಮ ಸಕ್ರಮದಲ್ಲಿ ಮಂಜೂರು ಮಾಡಲು ಸಾಧ್ಯವಾಗುತ್ತಿಲ್ಲ, ಈ ಜಾಗವನ್ನು ಅಕ್ರಮ ಸಕ್ರಮದಡಿ ಮಂಜೂರಾತಿ ಮಾಡಲು ಅವಕಾಶ ನೀಡುವಂತೆ ಅಧಿವೇಶನದಲ್ಲಿ ಶಾಸಕರಾದ ಅಶೋಕ್ ರೈ ಸರಕಾರವನ್ನು ಆಗ್ರಹಿಸಿದ್ದಾರೆ.


ಅಧಿವೇಶನದಲ್ಲಿ ಮಾತನಾಡಿದ ಶಾಶಕರು ದ ಕ ಹಾಗೂ ಉಡುಪಿ ಜಿಲ್ಲೆಯ ಕೃಷಿಕರು ತಮ್ಮ ಪಟ್ಟಾ ಜಾಗಕ್ಕೆ ಹೊಂದಿಕೊಂಡಿರುವ ಈ ಜಾಗದಲ್ಲಿ ಹಲವಾರು ವರ್ಷದಿಂದ ಕೃಷಿ ಮಾಡಿಕೊಂಡು ಬಂದಿದ್ದಾರೆ. ಈಗಾಗಲೇ ಈ ಜಾಗದಲ್ಲಿ ಕೃಷಿಯೂ ಇದೆ. ಈ ಜಾಗವನ್ನು ಅಕ್ರಮ ಸಕ್ರಮದಡಿ ಮಂಜೂರಾತಿ ಮಾಡಲು ಕಂದಾಯ ಇಲಾಖೆ ಒಪ್ಪುತ್ತಿಲ್ಲ. ವರ್ಗ ಜಾಗಕ್ಕೆ ತಾಗಿಕೊಂಡಿರುವ ಈ ಜಾಗವನ್ನು ಕುಮ್ಕಿ ಎಂದು ನಮೂದಾಗಿರುವ ಕಾರಣಕ್ಕೆ ಕೃಷಿಕರಿಗೆ ನೀಡಲು ಸಾಧ್ಯವಾಗುತ್ತಿಲ್ಲ. ದಾಖಲೆಯಲ್ಲಿ ಎಲ್ಲೂ ಕುಮ್ಕಿ ಎಂದೂ ನಮೂದಿಸಿಲ್ಲ. ಸರಕಾರಿ ಜಾಗವೆಂದೇ ಈ ಜಾಗದ ದಾಖಲೆ ತೋರಿಸುತ್ತದೆ ಆದರೆ ಕಂದಾಯ ಅಧಿಕಾರಿಗಳು ವರ್ಗ ಜಾಗದಿಂದ ನಾಲ್ಕೂವರೆ ಸಂಕೋಲೆ ಕುಮ್ಕಿ ಜಾಗವಾಗಿದೆ ಎಂದು ಅಕ್ರಮ ಸಕ್ರಮಕ್ಕೆ ಕೃಷಿಕರು ಅರ್ಜಿ ಹಾಕಿದ್ದರೂ ಅದನ್ನು ತಿರಸ್ಕಾರ ಮಾಡುತ್ತಿದ್ದಾರೆ. ಸರಕಾರ ಈ ಬಗ್ಗೆ ಹೊಸ ಕಾನೂನನ್ನೇ ರೂಪಿಸಿ ಕುಮ್ಕಿ ಎಂದು ಕರೆಯಲ್ಪಡುವ ಜಾಗವನ್ನು ಅಕ್ರಮ ಸಕ್ರಮದಡಿ ಮಂಜೂರು ಮಾಡಲು ಅವಕಾಶ ಕಲ್ಪಿಸಬೇಕು ಎಂದು ಹೇಳಿದರು. ೧೯೯೮ ರಲ್ಲಿ ಕುಮ್ಕಿ ಭೂಮಿಯನ್ನು ಅಕ್ರಮ ಸಕ್ರಮದಡಿ ಮಂಜೂರಾತಿಗೆ ಅವಕಾಶ ನೀಡಲಾಗಿತ್ತು. ಸರಕಾರ ಈ ಬಗ್ಗೆ ವಿಶೇಷ ಗಮನಹರಿಸಬೇಕು ಎಂದು ಸಭೆಗೆ ತಿಳಿಸಿದರು.

ಈ ಬಗ್ಗೆ ಆಳವಾದ ಅಧ್ಯಯನ ಮಾಡಬೇಕಿದೆ: ಸಚಿವ ಕೃಷ್ಣ ಬೈರೇಗೌಡ


ಶಾಸಕರಾದ ಅಶೋಕ್ ರೈಯವರು ಹೇಳಿದ ವಿಚಾರದ ಬಗ್ಗೆ ನಾನು ಅಧ್ಯಯನ ನಡೆಸಬೇಕಿದೆ. ಈ ವಿಚಾರದಲ್ಲಿ ಸುಪ್ರಿಂಕೋರ್ಟು ತೀರ್ಪು ಏನಿದೆ ಎಂಬುದನ್ನು ತಿಳಿಯಬೇಕಿದೆ. ಕುಮ್ಕಿ ಭೂಮಿಯ ಬಗ್ಗೆ ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ತಕರಾರು ಇರುವ ಬಗ್ಗೆ ನಾನು ಜಿಲ್ಲೆಗೆ ಭೇಟಿ ನೀಡಿದಾಗ ಹಲವು ಮಂದಿ ಹೇಳಿದ್ದರು. ಕುಮ್ಕಿ ವಿಚಾರದಲ್ಲಿ ಆಳವಾದ ಅಧ್ಯಯನ ನಡೆಸಿ ನಾನು ಆ ಬಳಿಕ ನಿಮ್ಮ ಪ್ರಶ್ನೆಗೆ ಉತ್ತರ ನೀಡಲಿದ್ದೇನೆ. ನಿಮ್ಮ ಪ್ರಶ್ನೆ ಬಹಳ ಉತ್ತಮವಾಗಿಯೇ ಇದೆ ಅದನ್ನು ನಾನು ಪರಿಗಣಿಸಿದ್ದೇನೆ. ಶಾಸಕರು ನೀಡಿದ್ದ ಪ್ರಶ್ನೆಯಲ್ಲಿ ಕುಮ್ಕಿ ಶಬ್ದ ಇಲ್ಲದೇ ಇರುವ ಕಾರಣಕ್ಕೆ ನಾನು ಕುಮ್ಕಿ ವಿಚಾರದಲ್ಲಿ ವಿವರಣೆ ಪಡೆದುಕೊಂಡಿಲ್ಲ. ಈ ವಿಚಾರದಲ್ಲಿ ಏನು ಮಾಡಬಹುದು ಎಂಬುದನ್ನು ನಾನು ಶಾಸಕರಿಗೆ ತಿಳಿಸುತ್ತೇನೆ. ಕಾನೂನಿನ ಮೂಲಕ ಸಾಧ್ಯವಾಗುವುದಿದ್ದರೆ ಸರಕಾರದ ಜೊತೆ ಚರ್ಚೆ ನಡೆಸಿ ಸಮಸ್ಯೆಯನ್ನು ಇತ್ಯರ್ಥ ಪಡಿಸಲು ಯತ್ನ ಮಾಡುವುದಾಗಿ ಸಭೆಗೆ ತಿಳಿಸಿದರು.



Leave a Comment: