ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ಸುದ್ದಿಗಳು News

Posted by vidyamaana on 2024-07-03 10:25:40 |

Share: | | | | |


ಪೊಲೀಸರಿಂದ ಎಸ್ಕೆಪ್ ಆಗಲು ಹೋಗಿ ನೀರುಪಾಲಾದ ಇಬ್ಬರ ರಕ್ಷಣೆ : ಐವರು ನಾಪತ್ತೆ

ವಿಜಯಪುರ: ಇಸ್ಪೀಟ್ ಆಡುವಾಗ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಎಸ್ಕೇಪ್ ಆಗಲು ಹೋಗಿ ತೆಪ್ಪ ಮಗುಚಿದ ಘಟನೆ ನಿನ್ನೆ ಬಳೂತಿ ಗ್ರಾಮದ ವ್ಯಾಪ್ತಿಯಲ್ಲಿ ನಡೆದಿದೆ. ಅಲ್ಲಿನ ಆಲಮಟ್ಟಿ ಜಲಾಶಯದ ಕೊಲ್ಹಾರ ಬಳಿಯ ಕೃಷ್ಣಾ ನದಿ ಹಿನ್ನೀರು ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಎಂಟು ಜನ ತೆಪ್ಪದಲ್ಲಿ ಕೃಷ್ಣಾ ನದಿಯ ಮೂಲಕ ಎಸ್ಕೇಪ್ ಆಗುವ ವೇಳೆ ದುರಂತ ನಡೆದಿದೆ. ಇನ್ನು, ಮೀನುಗಾರರು ಹಾಗೂ ಸ್ಥಳೀಯರ ನೆರವಿನೊಂದಿಗೆ ಇಬ್ಬರ ರಕ್ಷಣೆ ಮಾಡಲಾಗಿದ್ದು ಇಬ್ಬರ ಇಬ್ಬರ ಮೃತದೇಹ ಸಿಕ್ಕಿದೆ.

ಪುಂಡಲೀಕ ಯಂಕಂಚಿ (35), ಮಹಮ್ಮದ್ ತೈಹದ್ ಚೌಧರಿ(45) ಸಾವನ್ನಪ್ಪಿದ್ದಾರೆ. ಸಚಿನ್ ಕಟಬರ್, ಫಾರೂಕ್ ಅಮದ ರಕ್ಷಣೆ ಮಾಡಲಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಎಂಟು ಜನ ಕೊಲ್ಹಾರ ಪಟ್ಟಣದವರಾಗಿದ್ದು, ನೀರುಪಾಲಾದವರು ದಶರಥ( 58),ಮೈಬೂಬ್ ವಾಲಿಕಾರ (35), ರಫೀಕ್ ಬಾಂಬೆ ,(40), ರಫೀಕ ಜಾಲಗಾರರಿಗಾಗಿ(48) ಹುಡುಕಾಟ ನಡೆಯುತ್ತಿದೆ.

 Share: | | | | |


ಅಳಿಕೆ ಗ್ರಾಮದ ಮುಳಿಯದಲ್ಲಿ ಪ್ರಚಾರ ಸಭೆ

Posted by Vidyamaana on 2023-05-01 05:37:43 |

Share: | | | | |


ಅಳಿಕೆ ಗ್ರಾಮದ ಮುಳಿಯದಲ್ಲಿ ಪ್ರಚಾರ ಸಭೆ

ಪುತ್ತೂರು: ಕಳೆದ 5 ವರ್ಷಗಳಲ್ಲಿ ಬಿಜೆಪಿ ಮಾಡಿದ ಅಭಿವೃದ್ದಿ ಕೆಲಸವನ್ನು ಜನತೆಗೆ ತಿಳಿಸಬೇಕು ಎಂದು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಸವಾಲು ಹಾಕಿದರು. ಅಲ್ಲೊ ಇಲ್ಲೋ ಕೆಲವು ಕಡೆ ರಸ್ತೆಗೆ ಡಾಮಾರು,ಸಿಮೆಂಟ್ ಹಾಕಿದ್ದನ್ನು ಬಿಟ್ಟರೆ ಜನರ ಸಮಸ್ಯೆಗಳಿಗೆ ಸ್ಪಂದಿಸಿದ್ದಾರೆಯೇ . ಅಕ್ರಮ ಸಕ್ರಮ ಕಡತಗಳನ್ನು ಹಣ ಕೊಡದೆ ವಿಲೇವಾರಿ ಮಾಡಿದ್ದಾರ? ಬಡವರ ಕಣ್ಣೀರೊರೆಸುವ ಕೆಲಸವನ್ನು ಬಿಜೆಪಿ ಮಾಡಿಯೇ ಇಲ್ಲ. 40% ಕಮಿಷನ್ ಹೊಡೆಯುವ ಉದ್ದೇಶದಿಂದ ಹೆಚ್ಚು ಅನುದಾನವನ್ನು ರಸ್ತೆಗೆ ಬಳಕೆ ಮಾಡಲಾಗಿದೆ. ಗ್ರಾಪಂ ವ್ಯಾಪ್ತಿಯಲ್ಲಿ ಮನೆ ಮಂಜೂರು ಮಾಡಿಸಿಲ್ಲ. ಸಾವಿರಾರು ಕುಟುಂಬಗಳು ಸರಕಾರದ ವಸತಿ ಯೋಜನೆಯಲ್ಲಿ ಮನೆ ನಿವೇಶನಕ್ಕೆ ಅರ್ಜಿ ಹಾಕಿದರೂ ಬಿಜೆಪಿ ಸರಕಾರ ಮನೆ ನೀಡಿಲ್ಲ ಇದು ಬಡವರಿಗೆ ಮಾಡಿದ ಮಹಾದ್ರೋಹವಾಗಿದೆ ಎಂದು ಹೇಳಿದರು. ಸಭೆಯಲ್ಲಿ  ಕೆಪಿಸಿ ಲಸ ಸದಸ್ಯಎಂ ಎಸ್ ಮಹಮ್ಮದ್, ವಿಟ್ಲ ಉಪ್ಪಿನಂಗಡಿ ಬ್ಲಾಕ್ ಮಾಜಿ ಅಧ್ಯಕ್ಷ ಪ್ರವೀಣ್ಚಂದ್ರ ಆಳ್ವ, ಪೆರುವಾಯಿ ಗ್ರಾಪಂ ಮಾಜಿ ಅಧ್ಯಕ್ಷೆ ಪುಷ್ಪಾ, ಬ್ಲಾಕ್ ಅಧ್ಯಕ್ಷರಾದ ಡಾ.ರಾಜರಾಂ ಕೆ ಬಿ, ವೇದನಾಥ ಸುವರ್ಣ,ಅಳಿಕೆ ಗ್ರಾಪಂ ಉಪಾಧ್ಯಕ್ಷ ಜಗದೀಶ್ ಶೆಟ್ಟಿ, ಅಳಿಕೆ ಗ್ರಾಪಂ ಮಾಜಿ ಅಧ್ಯಕ್ಷ ಪದ್ಮನಾಭ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವ‌ರ್ ಫಂಕ್ಷನ್ ಟೆಸ್ಟ್ ತಪಾಸಣೆ

Posted by Vidyamaana on 2024-04-03 06:51:43 |

Share: | | | | |


ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವ‌ರ್ ಫಂಕ್ಷನ್ ಟೆಸ್ಟ್ ತಪಾಸಣೆ

ಪುತ್ತೂರು:ಇಲ್ಲಿನ ಮಹಮ್ಮಾಯ ದೇವಸ್ಥಾನದ ಬಳಿಯ ಚೇತನಾ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಸಹಯೋಗದೊಂದಿಗೆ ಏ.3 ರಂದು ಫ್ಯಾಟಿ ಲಿವರ್ (ಲಿವರ್ ನ ಕೊಬ್ಬು) ಇರುವವರಿಗೆ ವಿಶೇಷ ಫೈಬ್ರೋ ಸ್ಕಾನ್ ಹಾಗೂ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಯನ್ನು ಬೆಳಿಗ್ಗೆಯಿಂದ ಮಧ್ಯಾಹ್ನದ ವರೆಗೆ ಮಾಡಲಾಗುವುದು.

ಗಮನಿಸಿ : ಗ್ರಾಮಪಂಚಾಯಿತಿಗಳಲ್ಲಿ ಜನನ-ಮರಣ ನೋಂದಣಿ ಮಾಡುವ ಕುರಿತು ಇಲ್ಲಿದೆ ಮಾಹಿತಿ

Posted by Vidyamaana on 2024-07-02 06:38:49 |

Share: | | | | |


ಗಮನಿಸಿ : ಗ್ರಾಮಪಂಚಾಯಿತಿಗಳಲ್ಲಿ ಜನನ-ಮರಣ ನೋಂದಣಿ ಮಾಡುವ ಕುರಿತು ಇಲ್ಲಿದೆ ಮಾಹಿತಿ

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಜನನ, ಮರಣದ ನೋಂದಣಿಯನ್ನು ಇನ್ನು ಮುಂದೆ ಗ್ರಾಮ ಪಂಚಾಯಿತಿಯಲ್ಲೇ ಆರಂಭಿಸುವ ಪ್ರಕ್ರಿಯೆ (ಜುಲೈ 1 ರಿಂದ) ಜಾರಿಗೆ ಬಂದಿದೆ.

ಗ್ರಾಮೀಣ ಪ್ರದೇಶದಲ್ಲಿ ಜನನ, ಮರಣ ನೋಂದಣಿ ವ್ಯವಸ್ಥೆಗೆ ಬಲ ತುಂಬುವ ಜೊತೆಗೆ 30 ದಿನದೊಳಗೆ ನೋಂದಾಯಿಸಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಜನನ, ಮರಣ ಉಪನೋಂದಣಾಧಿಕಾರಿಗಳನ್ನಾಗಿ ಸರ್ಕಾರ ನೇಮಿಸಿದೆ.

ಡಿಪೋ ವ್ಯವಸ್ಥಾಪಕಿಯಿಂದ ಕಿರುಕುಳ ಆರೋಪ: ವಿಷ ಕುಡಿದು KSRTC ನೌಕರ ಅಭಿಷೇಕ್ ಆತ್ಮಹತ್ಯೆಗೆ ಯತ್ನ

Posted by Vidyamaana on 2023-08-30 02:16:35 |

Share: | | | | |


ಡಿಪೋ ವ್ಯವಸ್ಥಾಪಕಿಯಿಂದ ಕಿರುಕುಳ ಆರೋಪ: ವಿಷ ಕುಡಿದು KSRTC ನೌಕರ ಅಭಿಷೇಕ್ ಆತ್ಮಹತ್ಯೆಗೆ ಯತ್ನ

ಕೊಡಗು: ವಿಷ ಕುಡಿದು KSRTC ನೌಕರ ಅಭಿಷೇಕ್ ಎಂಬಾತ​ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ಕೆಎಸ್​ಆರ್​ಟಿಸಿ ಡಿಪೋದಲ್ಲಿ‌ ನಡೆದಿದೆ.


ಅಸ್ವಸ್ಥಗೊಂಡ ನೌಕರ ಅಭಿಷೇಕ್​​ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಡಿಪೋ ವ್ಯವಸ್ಥಾಪಕಿ ಗೀತಾ ವಿರುದ್ಧ ಕಿರುಕುಳ ಆರೋಪ ಕೇಳಿಬಂದಿದೆ. ಈ ಕುರಿತು ಮಡಿಕೇರಿ ಟೌನ್ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.​

ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ

Posted by Vidyamaana on 2024-02-07 14:56:48 |

Share: | | | | |


ರಾಜ್ಯ ಸರ್ಕಾರದ ವಿರುದ್ಧ ವಿಧಾನಸೌಧದ ಎದುರು ಬಿಜೆಪಿ ಪ್ರತಿಭಟನೆ

ಬೆಂಗಳೂರು: ಬರ ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ವಿಧಾನಸೌಧದ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಬಿಜೆಪಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಯಿತು.


ಪ್ರತಿಭಟನೆಯಲ್ಲಿ ಬಿಜೆಪಿ ಶಾಸಕರು, ವಿಧಾನಪರಿಷತ್ ಸದಸ್ಯರು ಭಾಗವಹಿಸಿದರು. ‘ರೈತರಿಗೆ ಬರ ಪರಿಹಾರ ನೀಡದ, ಅಭಿವೃದ್ಧಿ ವಿರೋಧಿ, ಜನ ವಿರೋಧಿ ರಾಜ್ಯ ಸರ್ಕಾರವಿದು. ಶಾಸಕರಿಗೆ ಅನುದಾನ ನೀಡುವ ವಿಚಾರದಲ್ಲೂ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿದರು.

ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಮೂವರು ಆರೋಪಿಗಳ ಬಂಧನ

Posted by Vidyamaana on 2023-07-30 15:47:41 |

Share: | | | | |


ವಿಟ್ಲ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಮೂವರು ಆರೋಪಿಗಳ ಬಂಧನ

ವಿಟ್ಲ: ಅಪ್ರಾಪ್ತ ದಲಿತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆಮೂಡಬಿದರೆ ಮೂಲದ ಪ್ರಸ್ತುತ ಬೆರಿಪದವಿ ನಿವಾಸಿ ಅಕ್ಷಯ್ ದೇವಾಡಿಗ, ಬಾಯಾರು ಗ್ರಾಮದ ಕೊಜಪ್ಪ ನಿವಾಸಿ ಕಮಲಾಕ್ಷ ಬೆಳ್ಳಾಡ, ಬೆರಿಪದವು ನಿವಾಸಿ ಸುಕುಮಾರ ಬೆಳ್ಳಾಡ ಬಂಧಿತರಾಗಿದ್ದಾರೆ.ಅಕ್ಷಯ್ ಬೆರಿಪದವಿನಲ್ಲಿ ಅಣ್ಣನ ಮನೆಯಲ್ಲಿದ್ದು ಕೊಂಡು ಪೈಟಿಂಗ್ ಕೆಲಸ ನಿರ್ವಹಿಸುತ್ತಿದ್ದರೆ, ಕಮಲಾಕ್ಷ ಗಾರೆ ಕೆಲಸ ಹಾಗೂ ಸುಕುಮಾರ ಚಾಲಕ ವೃತ್ತಿಯನ್ನು ನಡೆಸಿಕೊಂಡಿದ್ದರು.ವಿಟ್ಲ ಠಾಣೆಯಲ್ಲಿ ಪೊಕ್ಸ್‌ ಹಾಗೂ ದಲಿತ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಯುವತಿ ನೀಡಿದ ಮಾಹಿತಿಯಂತೆ ಮೂರು ಮಂದಿಯ ಬಂಧನ ಮಾಡಲಾಗಿದೆ



Leave a Comment: