Posted by vidyamaana on 2024-06-29 11:21:28 |
ವಾಷಿಂಗ್ಟನ್: ತಾಂತ್ರಿಕ ತೊಂದರೆ ಕಾಣಿಸಿಕೊಂಡ ಹಿನ್ನೆಲೆ ಗಗನಯಾತ್ರಿ ಸುನಿತಾ ವಿಲಿಯಮ್ಸ್ ಮತ್ತು ಅವರ ಸಹಯಾತ್ರಿ ಬಚ್ ವಿಲ್ಮೋರ್ ಅವರು ಇನ್ನು ಕೆಲ ದಿನಗಳ ಕಾಲ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿಯೇ ಉಳಿಯಲಿದ್ದಾರೆ ಎಂದು ನಾಸಾ ತಿಳಿಸಿದೆ.ಜೂನ್ 5ರಂದು ಸುನಿತಾ ಮತ್ತು ವಿಲ್ಮೋರ್ ಅವರಿದ್ದ ಸ್ಟಾರ್ಲೈನರ್ ನೌಕೆಯನ್ನು ಫ್ಲಾರಿಡಾದ ಕೇಪ್ ಕ್ಯಾನವೆರಲ್ ಸ್ಪೇಸ್ ಫೋರ್ಸ್ ಕೇಂದ್ರದಿಂದ ಉಡಾವಣೆ ಮಾಡಲಾಗಿತ್ತು.
ಜೂನ್ 6ರ ಮಧ್ಯಾಹ್ನ 1.34ಕ್ಕೆ ಗಗನನೌಕೆಯನ್ನು ಬಾಹ್ಯಾಕಾಶ ನಿಲ್ದಾಣಕ್ಕೆ ಡಾಕ್ (ಕೂಡಿಕೊಳ್ಳುವ ಪ್ರಕ್ರಿಯೆ) ಮಾಡಲಾಗಿತ್ತು.
ತಾಂತ್ರಿಕ ದೋಷಕ್ಕೆ ಕಾರಣಗಳೇನು ಎಂಬ ಬಗ್ಗೆ ಪರೀಕ್ಷೆಗಳು ನಡೆಯುತ್ತಿದ್ದು, ಗಗನಯಾತ್ರಿಗಳು ಸುರಕ್ಷಿತವಾಗಿದ್ದಾರೆ ಎಂದು ನಾಸಾ ತಿಳಿಸಿದೆ. ಆದರೆ, ಗಗನಯಾತ್ರಿಗಳು ಯಾವಾಗ ಭೂಮಿಗೆ ಹಿಂದಿರುಗಲಿದ್ದಾರೆ ಎಂಬ ಬಗ್ಗೆ ಮಾಹಿತಿ ನೀಡಿಲ್ಲ.
ನಾವು ಭೂಮಿಗೆ ಹಿಂದಿರುಗುವ ಕುರಿತಂತೆ ಆತುರಪಡುತ್ತಿಲ್ಲ ಎಂದು ನಾಸಾದ ವಾಣಿಜ್ಯ ಸಿಬ್ಬಂದಿ ಕಾರ್ಯಕ್ರಮದ ವ್ಯವಸ್ಥಾಪಕ ಸ್ಟೀವ್ ಸ್ಟಿಚ್ ಹೇಳಿದರು.
ಡಾಕಿಂಗ್ ಮಾಡುವ ವೇಳೆ ಥ್ರಸ್ಟರ್ನಲ್ಲಿ(ಪ್ಯೊಪಲ್ಷನ್ ಮಾಡ್ಯೂಲ್ಗೆ ಅಗತ್ಯ ನೂಕುಬಲ ನೀಡಲು ಅಳವಡಿಸಲಾಗಿರುವ ಯಂತ್ರ) ತೊಂದರೆ ಕಾಣಿಸಿಕೊಂಡಿದೆ. ಅಲ್ಲದೇ ಉಡಾವಣೆ ವೇಳೆ ಹೀಲಿಯಂ ಸೋರಿಕೆಯೂ ಆಗಿದೆ. ಇವೆರಡರ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ. ಡಾಕಿಂಗ್ ಸಮಯದಲ್ಲಿ ಸಂಭವಿಸಿದ ಪರಿಸ್ಥಿತಿಯ ಬಗ್ಗೆ ತಿಳಿಯಲು ನ್ಯೂ ಮೆಕ್ಸಿಕೋ ಮರುಭೂಮಿಯಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಬಚ್ ಮತ್ತು ಸುನಿತಾ ಬಾಹ್ಯಾಕಾಶದಲ್ಲಿ ಸಿಲುಕಿಕೊಂಡಿಲ್ಲ ಎಂದು ಸ್ವಿಚ್ ತಿಳಿಸಿದರು.
Posted by Vidyamaana on 2024-03-31 20:24:30 |
ಬೆಂಗಳೂರು : ನಜ್ಮಾ ನಜೀರ್ ಚಿಕ್ಕನೇರಳೆ ಅವರು ನಿನ್ನೆ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಜೆಡಿಎಸ್ ಬಿಟ್ಟು ಕಾಂಗ್ರೆಸ್ ಸೇರಿದ್ದಾರೆ.ಈ ನಡುವೆ ನಜ್ಮಾ ನಜೀರ್ ಚಿಕ್ಕನೇರಳೆ ಸೇರ್ಪಡೆಗೆ ಸಾಮಾಜಿಕ ಜಾಲತಾಣದಲ್ಲಿ ಖುದ್ದು ಕಾಂಗ್ರೆಸ್ನ ಹಲವು ಮಂದಿ ವ್ಯಂಗ್ಯವಾಡುತ್ತಿದ್ದಾರೆ.ಈ ಹಿಂದೆ ನಜ್ಮಾ ನಜೀರ್ ಚಿಕ್ಕನೇರಳೆ ಅವರು ಜೆಡಿಎಸ್ ವಕ್ತರಾಗಿದ್ದ ವೇಳೇಯಲ್ಲಿ ನಜ್ಮಾ ಅವರು ಕೈ ಅನ್ನು ಹಿಗ್ಗಾಮುಗ್ಗ ಜಾಡಿಸಿದ್ದು ಅತಿ ಹೆಚ್ಚು, ಈಗ ಅವರೇ ಕಾಂಗ್ರೆಸ್ಗೆ ಸೇರುತ್ತಿರುವುದು ಅವಕಾಶವಾದಿ ರಾಜಕಾರಣ ಎನ್ನುತ್ತಿದ್ದಾರೆ.
Posted by Vidyamaana on 2024-03-20 22:29:59 |
ನವದೆಹಲಿ : ಮೆಟಾದ ಜನಪ್ರಿಯ ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ಗಳಾದ ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಬುಧವಾರ ಇದ್ದಕ್ಕಿದ್ದಂತೆ ವಿಶ್ವದಾದ್ಯಂತ ಅನೇಕ ಜನರಿಗೆ ಕೆಲಸ ಮಾಡುವುದನ್ನ ನಿಲ್ಲಿಸಿದೆ. ಬಳಕೆದಾರರು ಲಾಗ್ ಇನ್ ಮಾಡಲು ಅಥವಾ ತಮ್ಮ ಇನ್ಸ್ಟಾಗ್ರಾಮ್ ಫೀಡ್ಗಳನ್ನ ತಾಜಾ ಮಾಡಲು ಸಾಧ್ಯವಾಗುತ್ತಿಲ್ಲ.ಕೆಲವರನ್ನ ತಮ್ಮ ಪಾಸ್ ವರ್ಡ್ಗಳನ್ನ ಬದಲಾಯಿಸಲು ಸಹ ಕೇಳಲಾಯಿತು. ಇನ್ಸ್ಟಾಗ್ರಾಮ್ ಮತ್ತು ಫೇಸ್ಬುಕ್ ಸೇರಿದಂತೆ ಹಲವಾರು ಸಾಮಾಜಿಕ ಮಾಧ್ಯಮ ಅಪ್ಲಿಕೇಶನ್ಗಳು ಮತ್ತು ಇತರ ಹಲವಾರು ಪ್ಲಾಟ್ಫಾರ್ಮ್ಗಳು ಭಾರಿ ಸ್ಥಗಿತಗೊಂಡ ಕೆಲವೇ ವಾರಗಳ ನಂತರ ಇದು ಬಂದಿದೆ.
ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ ಸೇರಿದಂತೆ ಎರಡೂ ಮೆಟಾ ಅಪ್ಲಿಕೇಶನ್ಗಳಲ್ಲಿ ಕ್ರ್ಯಾಶ್ಗಳು ಮತ್ತು ಲಾಗಿನ್ ಸಮಸ್ಯೆಗಳನ್ನು ಅನುಭವಿಸುವ ಬಗ್ಗೆ ತಮ್ಮ ಹತಾಶೆಯನ್ನ ವ್ಯಕ್ತಪಡಿಸಲು ಭಾರತ ಮತ್ತು ಪ್ರಪಂಚದಾದ್ಯಂತದ ಜನರು ಮೈಕ್ರೋ-ಬ್ಲಾಗಿಂಗ್ ಪ್ಲಾಟ್ಫಾರ್ಮ್ ಎಕ್ಸ್ ಕಡೆಗೆ ತಿರುಗಿದರು. ಹೆಚ್ಚುವರಿಯಾಗಿ, ಮೆಸೆಂಜರ್ ಅಪ್ಲಿಕೇಶನ್ ಬಳಸುವಾಗ ಕೆಲವು ಬಳಕೆದಾರರು ತೊಂದರೆಗಳನ್ನು ಎದುರಿಸಿದ್ದಾರೆ.ಬಳಕೆದಾರರೊಬ್ಬರು ಎಕ್ಸ್ನಲ್ಲಿ "ಇದು ನಾನು ಮಾತ್ರವೇ ಅಥವಾ ಎಲ್ಲರೂ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಮ್ 🤔 #facebookdown #instagramdown ಸಮಸ್ಯೆಗಳನ್ನ ಎದುರಿಸುತ್ತಿದ್ದಾರೆಯೇ?" ಎಂದು ಪ್ರಶ್ನಿಸಿದ್ದಾರೆ.
Posted by Vidyamaana on 2023-08-07 11:50:52 |
ಬೆಂಗಳೂರು; ಇಂದು ನಿಧನರಾದ ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರ ಪಾರ್ಥಿವ ಶರೀರ ನಾಳೆ ಮುಂಜಾನೆ ಬೆಂಗಳೂರು ತಲುಪಲಿದೆ.
ಸ್ಪಂದನಾ ಮೃತದೇಹವನ್ನು ಬೆಂಗಳೂರಿಗೆ ತರೋದಕ್ಕಾಗಿ ಕುಟುಂಬಸ್ಥರು ಹಾಗೂ ವಿಜಯ್ ರಾಘವೇಂದ್ರ ಸ್ನೇಹಿತರು ಯತ್ನಿಸುತ್ತಿದ್ದಾರೆ. ಇದಕ್ಕಾಗಿ ಥೈಲ್ಯಾಂಡ್ ಸರ್ಕಾರದ ರಾಯಭಾರ ಕಚೇರಿಯಲ್ಲಿ ಕಾನೂನು ಪ್ರಕ್ರಿಯೆಯನ್ನು ವಿಜಯ್ ಸ್ನೇಹಿತರು ನಡೆಸುತ್ತಿದ್ದಾರೆ.
ಈಗಾಗಲೇ ವಿಷಯ ತಿಳಿದು ಸ್ಪಂದನಾ ತಂದೆ ಬಿ ಕೆ ಶಿವರಾಂ ಹಾಗೂ ಸಹೋದರ ರಕ್ಷಿತ್ ಶಿವರಾಂ ಬ್ಯಾಂಕಾಕ್ ನತ್ತ ತೆರಳಿದ್ದಾರೆ ಎ. ನಾಳೆ ಬೆಂಗಳೂರಿಗೆ ಸ್ಪಂದನಾ ಪಾರ್ಥೀವ ಶರೀರವನ್ನು ತರಲಿದ್ದು, ಬುಧವಾರ ಅಂತ್ಯಕ್ರಿಯೆ ನಡೆಸುವ ಸಾಧ್ಯತೆಯಿದೆ.
Posted by Vidyamaana on 2023-10-25 15:40:01 |
ಕೊಚ್ಚಿ : ಕುಡಿದ ಮತ್ತಿನಲ್ಲಿ ಕೊಚ್ಚಿ ಪೊಲೀಸ್ ಠಾಣೆಯಲ್ಲಿ ಗಲಾಟೆ ಮಾಡಿದ ಆರೋಪದ ಮೇಲೆ ಜೈಲರ್ ನಟ ವಿನಾಯಕನ್ ಅವರನ್ನು ಕೇರಳ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.ನಟ ಸಂಜೆ ಎರ್ನಾಕುಲಂ ಟೌನ್ ಉತ್ತರ ಪೊಲೀಸ್ ಠಾಣೆಯಲ್ಲಿ ಕೋಲಾಹಲ ಸೃಷ್ಟಿಸಿದ್ದಾರೆ. ಅವರು ತಮ್ಮ ಅಪಾರ್ಟ್ಮೆಂಟ್ನಲ್ಲಿ ಗಲಾಟೆ ಮಾಡಿದ್ದಕ್ಕಾಗಿ ನೆರೆದಿದ್ದವರು ಪೊಲೀಸರನ್ನು ಕರೆಸಿದರು.ಬಳಿಕ ಪೊಲೀಸ್ ಠಾಣೆಯಲ್ಲಿಯೂ ತೊಂದರೆ ಉಂಟುಮಾಡಿದ್ದಕ್ಕಾಗಿ ಆತನನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಗತ್ಯ ವೈದ್ಯಕೀಯ ಪರೀಕ್ಷೆಗಾಗಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ವಿನಾಯಗನ್ ಅವರನ್ನು ಪೊಲೀಸ್ ಠಾಣೆಯ ಮೂಲೆಯೊಂದರಲ್ಲಿ ನಿಲ್ಲಿಸಿರುವ ಚಿತ್ರ ಹಾಗೂ ವಿನಾಯಗನ್ ಅವರನ್ನು ಆಟೋನಲ್ಲಿ ಕರೆದುಕೊಂಡು ಹೋಗುತ್ತಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
Posted by Vidyamaana on 2023-05-05 08:31:45 |
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ SDPI ಅಭ್ಯರ್ಥಿಗಳ ಪರವಾಗಿ ಚುನಾವಣಾ ಪ್ರಚಾರ ಕೈಗೊಳ್ಳಲು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ರಾಷ್ಟ್ರೀಯ ಅಧ್ಯಕ್ಷರಾದ ಎಂ.ಕೆ ಫೈಝಿಯವರು ಇಂದು ಮಂಗಳೂರಿಗೆ ಆಗಮಿಸಿದರು.
ಬಜಪೆ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಜಿಲ್ಲಾ ಸಮಿತಿಯ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ ಬಜಪೆ ಪಟ್ಟಣದವರೆಗೆ ವಾಹನ ಜಾಥಾ ಮೂಲಕ ಕರೆ ತರಲಾಯಿತು.ಈ ಸಂದರ್ಭದಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ಅಲ್ಫೋನ್ಸ್ ಫ್ರಾಂಕೊ, ರಾಜ್ಯ ಕಾರ್ಯದರ್ಶಿ ಆನಂದ ಮಿತ್ತಬೈಲ್, ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು, ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲ ಜೋಕಟ್ಟೆ, ರಾಜ್ಯ ಚುನಾವಣಾ ಸಹ ಉಸ್ತುವಾರಿ ನವಾಝ್ ಉಳ್ಳಾಲ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಜಮಾಲ್ ಜೋಕಟ್ಟೆ, ಅಶ್ರಫ್ ಅಡ್ಡೂರು, ಜಿಲ್ಲಾ ಕಾರ್ಯದರ್ಶಿ ಸುಹೈಲ್ ಖಾನ್, ಮೂಡಬಿದ್ರೆ ಕ್ಷೇತ್ರಾಧ್ಯಕ್ಷರಾದ ಆಸಿಫ್ ಕೋಟೆಬಾಗಿಲು, ಕಾರ್ಯದರ್ಶಿ ನಿಸಾರ್ ಮರವೂರು ಹಾಗೂ ಇತರ ನಾಯಕರು ಉಪಸ್ಥಿತರಿದ್ದರು
ಇಂದು ಮತ್ತು ನಾಳೆ ಉಳ್ವಾಲ, ಬಂಟ್ವಾಳ, ಮೂಡಬಿದ್ರೆ ಕ್ಷೇತ್ರಗಳಲ್ಲಿ ನಡೆಯುವ ವಿವಿಧ ಚುನಾವಣಾ ಪ್ರಚಾರ ಸಭೆಗಳಲ್ಲಿ ಎಂ.ಕೆ ಫೈಝಿಯವರು ಭಾಗವಹಿಸಲಿದ್ದಾರೆ.
Posted by Vidyamaana on 2024-05-19 12:02:11 |
ಬೆಳಗಾವಿ: ಚಲಿಸುತ್ತಿದ್ದ ರೈಲಿನಲ್ಲಿ ಚಾಕುವಿನಿಂದ ಇರಿದು ಒಬ್ಬ ಸಿಬ್ಬಂದಿಯನ್ನು ಕೊಲೆ ಮಾಡಿ, ನಾಲ್ವರ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಪರಾರಿಯಾದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಹಲ್ಲೆಗೊಳಗಾದ ಸಿಬ್ಬಂದಿ ಆರೋಪಿಯನ್ನು ಗುರುತಿಸಿದ್ದು, ಆತನ ಮುಖದ ರೇಖಾಚಿತ್ರ ಕೂಡ ಸಿದ್ಧಪಡಿಸಲಾಗಿದೆ.
ಪುದುಚೇರಿ- ದಾದರ್ ಎಕ್ಸ್ಪ್ರೆಸ್ ರೈಲು ಗುರುವಾರ ಸಂಜೆ 4ರ ಸುಮಾರಿಗೆ ಖಾನಾಪುರ ತಾಲ್ಲೂಕಿನ ಲೋಂಡಾ ಬಳಿ ಸಂಚರಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ರೈಲು ಖಾನಾಪುರ ನಿಲ್ದಾಣಕ್ಕೆ ಬಂದಾಗ ಆರೋಪಿ ಪರಾರಿಯಾದ. ಎಸ್-8 ಬೋಗಿಯಿಂದ ಇಳಿದುಹೋಗಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಖಾನಾಪುರದಿಂದ ಎಲ್ಲಿಗೆ ಪರಾರಿಯಾಗಿದ್ದಾನೆ ಎಂಬುದರ ತನಿಖೆ ನಡೆದಿದೆ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.