Posted by vidyamaana on 2024-07-03 11:16:18 |
ಪುತ್ತೂರು : ವಿಶ್ವ ಹಿಂದೂ ಪರಿಷದ್ ನ ಪುತ್ತೂರು ನಗರ ಘಟಕದ ಅಧ್ಯಕ್ಷರಾಗಿ ಎಸ್.ದಾಮೋದರ ಪಾಟಾಳಿಯವರನ್ನು ನೇಮಕ ಮಾಡಲಾಗಿದೆ.ವಿಶ್ವ ಹಿಂದೂ ಪರಿಷದ್ ನ ಜಿಲ್ಲೆಯ ಕಾರ್ಯಾಲಯದಲ್ಲಿ ನಡೆದ ಬೈಠಕ್ ನಲ್ಲಿ ಜಿಲ್ಲಾಧ್ಯಕ್ಷ ಡಾ.ಕೃಷ್ಣ ಪ್ರಸನ್ನ ಘೋಷಿಸಿದರು.
ವಿಶ್ವ ಹಿಂದೂ ಪರಿದ್ ನ ಜಿಲ್ಲಾ ಉಪಾಧ್ಯಕ್ಷ ಸತೀಶ್ ಬಿ.ಎಸ್., ಜಿಲ್ಲಾ ಕಾರ್ಯದರ್ಶಿ ನವೀನ್ ನೆರಿಯ, ಜಿಲ್ಲಾ ಸೇವಾ ಪ್ರಮುಖ್ ಸೀತಾರಾಮ ಭಟ್, ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಮತ್ತಿತರರು ಈ ವೇಳೆ ಉಪಸ್ಥಿತರಿದ್ದರು.
Posted by Vidyamaana on 2023-10-20 12:51:56 |
ಮಂಗಳೂರು : ಇಸ್ರೇಲ್ ಪರ ಪೋಸ್ಟ್ ಹಾಕಿರುವ ಕಾರಣಕ್ಕೆ ಬೆಹ್ರೈನಲ್ಲಿ ಹತ್ತು ವರ್ಷಗಳಿಂದ ವೈದ್ಯರಾಗಿರುವ ಕನ್ನಡಿಗ, ಮಂಗಳೂರು ಮೂಲದ ವೈದ್ಯ ಡಾ.ಸುನಿಲ್ ರಾವ್ ಅವರನ್ನು ಬೆಹ್ರೈನ್ ಪೊಲೀಸರು ಬಂಧಿಸಿದ್ದಾರೆ.
ಇಸ್ರೇಲ್ ದೇಶದ ಪರವಾಗಿ ಡಾ.ಸುನಿಲ್ ರಾವ್ ಹಾಕಿದ್ದ ಟ್ವಿಟರ್ ಪೋಸ್ಟ್ ಜಾಲತಾಣದಲ್ಲಿ ವೈರಲ್ ಆಗಿತ್ತು. ಕೆಲವರು ಈ ಪೋಸ್ಟ್ ಅನ್ನು ಬೆಹ್ರೈನ್ ಆಡಳಿತಕ್ಕೆ ಟ್ಯಾಗ್ ಮಾಡಿ, ಕ್ರಮಕ್ಕೆ ಆಗ್ರಹ ಮಾಡಿದ್ದರು. ಪ್ಯಾಲೆಸ್ತೀನ್ ವಿರೋಧಿಸಿ ಪೋಸ್ಟ್ ಹಾಕಿದ್ದಾರೆಂದು ಆಡಳಿತದ ಗಮನಕ್ಕೆ ತಂದಿದ್ದರು.
ಮಂಗಳೂರಿನ ಕೆಎಂಸಿ ಕಾಲೇಜಿನಲ್ಲಿ ಎಂಡಿ ಮಾಡಿದ್ದ ಡಾ. ಸುನಿಲ್ ರಾವ್, ವಿಶಾಖಪಟ್ಟಣದಲ್ಲಿ ಎಂಬಿಬಿಎಸ್ ಪೂರೈಸಿದ್ದರು. ರಾಯಲ್ ಹಾಸ್ಪಿಟಲ್ ಬೆಹ್ರೈನ್ ಸಂಸ್ಥೆಯಲ್ಲಿ 10 ವರ್ಷಗಳಿಂದ ಇಂಟರ್ನಲ್ ಮೆಡಿಸಿನ್ ವಿಭಾಗದಲ್ಲಿ ಸ್ಪೆಷಲಿಸ್ಟ್ ಆಗಿದ್ದರು. ಬೆಹ್ರೈನ್ ಪೊಲೀಸರು ಬಂಧಿಸಿದ ಬೆನ್ನಲ್ಲೇ ಆಸ್ಪತ್ರೆ ಹುದ್ದೆಯಿಂದ ತೆಗೆದು ಹಾಕಲಾಗಿದೆ. ಭಾರತೀಯ ಮೂಲದ ಡಾ.ಸುನಿಲ್ ರಾವ್ ಬಂಧನ ಆಗಿರುವ ಬಗ್ಗೆ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗಿದೆ. ವೈದ್ಯರ ವಿರುದ್ಧ ಕ್ರಮ ಕೈಗೊಂಡಿರುವುದನ್ನು ಖಂಡಿಸಿದ್ದಾರೆ.
Posted by Vidyamaana on 2024-05-19 10:07:18 |
ಪುತ್ತೂರು : ಪವಿತ್ರ ಇಸ್ಲಾಮಿನ ಧಾರ್ಮಿಕ ಶಿಕ್ಷಣ ನೀಡುವ ಪರಂಪರಾಗತ ವಿದ್ಯಾಭ್ಯಾಸ ಪದ್ಧತಿಯಾದ ಪಳ್ಳಿ ದರ್ಸ್ ಪುತ್ತೂರು ಅನ್ಸಾರುದ್ದೀನ್ ಜಮಾಅತ್ ಸಮಿತಿ ಅಧೀನದ ಬಪ್ಪಳಿಗೆ ಮಸ್ಜಿದುನ್ನೂರು ಮೊಹಲ್ಲಾ ಸಮಿತಿ ಆಶ್ರಯದಲ್ಲಿ ಮೇ 19 ಆದಿತ್ಯವಾರ ಮಗ್ರಿಬ್ ನಮಾಝಿನ ಬಳಿಕ ಉದ್ಘಾಟನೆಗೊಳ್ಳಲಿದೆ.ಬಹು| ಅಸ್ಸಯ್ಯಿದ್ ಅಹ್ಮದ್ ಪೂಕೋಯ ತಂಙಳ್ ರವರು ದರ್ಸ್ ಸಂಪ್ರದಾಯದ ಪಾರಂಪರ್ಯ ಗ್ರಂಥಗಳ ಕರ್ಮ ಶಾಸ್ತ್ರದ ಅಧ್ಯಾಯದ ಭಾಗಗಳನ್ನು ನೂತನವಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಹೇಳಿ ಕೊಡುವ ಮೂಲಕ ದರ್ಸ್ ಗೆ ಚಾಲನೆ ನೀಡಲಿದ್ದಾರೆ.
ದ.ಕ. ಜಿಲ್ಲೆಯ ಪ್ರಖಾಂಡ ವಿದ್ವಾಂಸರುಗಳಲ್ಲೋರ್ವರೂ ಹಿರಿಯ ಮುದರ್ರಿಸರೂ ಬಹು ಇಸ್ಮಾಯಿಲ್ ಫೈಝಿ ಮುದರ್ರಿಸ್ ಸೂರಿಂಜೆಯವರು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ.ತೋಡಾರು ಶಂಸುಲ್ ಉಲಮಾ ಅರೇಬಿಕ್ ಕಾಲೇಜಿನ ಪ್ರಾಂಶುಪಾಲರಾದ ಬಹು ರಫೀಕ್ ಹುದವಿ ಕೋಲಾರ ಸೇರಿದಂತೆ ಹಲವು ಉಲಮಾ ಗಣ್ಯರು ಆಗಮಿಸಲಿದ್ದಾರೆ.
Posted by Vidyamaana on 2023-06-15 06:43:44 |
ಪುತ್ತೂರು : ಈಗಾಗಲೇ ಮಳೆಗಾಲ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಟೆಲಿಫೋನ್, ಕುಡಿಯುವ ನೀರು, ವಿದ್ಯುತ್ ಕೇಬಲ್ ಇನ್ನಿತರ ಕಾಮಗಾರಿಗಳಿಗೆ ರಸ್ತೆ ಅಗೆತ ಮಾಡುವುದನ್ನು ಜೂ.15 ರಿಂದ ನಿಷೇಧಿಸಲಾಗಿದೆ ಎಂದು ಪುತ್ತೂರು ನಗರಸಭೆ ಪೌರಾಯುಕ್ತ ಮಧು ಎಸ್.ಮನೋಹರ್ ಸೂಚನೆ ನೀಡಿದ್ದಾರೆ.
ಮಳೆಗಾಲದಲ್ಲಿ ರಸ್ತೆ ಬದಿಯಲ್ಲಿ ಬೇರೆ ಬೇರೆ ಕಾರಣಗಳಿಗಾಗಿ ಅಗೆಯುವುದು ಸಾಮಾನ್ಯವಾಗಿದ್ದು, ಪರಿಣಾಮ ಸಾರ್ವಜನಿಕರಿಗೆ ತೊಂದರೆ ಉಂಟಾಗಿ ಅಪಘಾತವೂ ಸಂಭವಿಸುವ ಸಾಧ್ಯತೆಯಿದೆ. ಈ ಹಿನ್ನಲೆಯಲ್ಲಿನಿಷೇಧಿಸಲಾಗಿದೆ.
ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಪೌರಾಯುಕ್ತರು ತಿಳಿಸಿದ್ದಾರೆ.
Posted by Vidyamaana on 2023-10-21 09:03:56 |
ಮಂಗಳೂರು: ಮಂಗಳೂರು ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ MDMA ಡ್ರಗ್ಸ್ ಪೂರೈಸುತ್ತಿದ್ದ ಕುಖ್ಯಾತ ಡ್ರಗ್ ಪೆಡ್ಲರ್ ನನ್ನು ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
ಈ ಹಿಂದೆ ಹಲವು ಬಾರಿ ಮಾದಕ ವಸ್ತು ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ತೌಡುಗೋಳಿ ನರಿಂಗಾನ ನಿವಾಸಿ ಅಬ್ದುಲ್ ಅಜೀಜ್ @ ಪೋಕರ್ ಅಜೀಜ್(42) ಬಂಧಿತ ಆರೋಪಿ. ದೇರಳಕಟ್ಟೆ ಪರಿಸರದಲ್ಲಿ ಎಂಡಿಎಂಎ ಮಾದಕ ವಸ್ತು ವಶದಲ್ಲಿರಿಸಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ವಶದಿಂದ ಒಟ್ಟು 26 ಗ್ರಾಂ ತೂಕದ ರೂ. 1,30,000 ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾದಕ ವಸ್ತು ಸಾಗಾಟಕ್ಕೆ ಉಪಯೋಗಿಸಿದ ಕಾರು, ಮೊಬೈಲ್ ಫೋನ್ -2, ಡಿಜಿಟಲ್ ತೂಕದ ಮಾಪನವನ್ನು ವಶಪಡಿಸಲಾಗಿದೆ. ವಶಪಡಿಸಿದ ಸೊತ್ತುಗಳ ಒಟ್ಟು ಮೌಲ್ಯ ರೂ. 6,41,500/-ಆಗಬಹುದು. ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಈತನ ವಿರುದ್ದ ಈ ಹಿಂದೆ ಉಳ್ಳಾಲ, ಕೊಣಾಜೆ ಮತ್ತು ಕಾವೂರು ಪೊಲೀಸ್ ಠಾಣೆಯಲ್ಲಿ ಒಟ್ಟು 7 ಮಾದಕ ವಸ್ತು ಮಾರಾಟ ಪ್ರಕರಣಗಳು ದಾಖಲಾಗಿದೆ. ಈ ಹಿಂದೆ ಜೈಲಿನಲ್ಲಿದ್ದ ಸಮಯ ಕಾರಾಗೃಹ ಸಿಬ್ಬಂದಿಯ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ ಪ್ರಕರಣವೂ ದಾಖಲಾಗಿರುತ್ತದೆ.
Posted by Vidyamaana on 2023-06-09 00:42:09 |
ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರು ಜೂನ್ 9 ರಂದು ಬೆಳಿಗ್ಗೆ 10 ಗಂಟೆಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಹೆಚ್ಚುವರಿ ಡಯಾಲಿಸಿಸ್ ಘಟಕ ಉದ್ಘಾಟನೆ ಕಾರ್ಯಕ್ರಮ ಭಾಗಿ.
ಅಪರಾಹ್ನ ಕಂಬಳಬೆಟ್ಟು ಜನಪ್ರಿಯ ಸೆಂಟ್ರಲ್ ಸ್ಕೂಲ್ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಭಾಗಿಯಾಗುವರು.
Posted by Vidyamaana on 2023-06-02 10:11:01 |
ಬೆಂಗಳೂರು : ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದರು.
ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್ ಯೋಜನೆಯ ಸಂಪೂರ್ಣ ವಿವರ ನೀಡಿದರು.
ಮೊದಲ ಗ್ಯಾರಂಟಿ ಗೃಹಜ್ಯೋತಿ ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು, ಎಲ್ಲರಿಗೂ 200 ಯುನಿಟ್ ವರೆಗೂ ಉಚಿತವಾಗಿ ವಿದ್ಯುತ್ ನೀಡಲಾಗುವುದು. 12 ತಿಂಗಳ ಸರಾಸರಿ ಆಧಾರದಲ್ಲಿ ವಿದ್ಯುತ್ ಬಿಲ್ ಪರಿಗಣೆ ಮಾಡಲಾಗುತ್ತಿದ್ದು, 12 ತಿಂಗಳಲ್ಲಿ ಎಷ್ಟು ಬಳಸುತ್ತಾರೋ ಅದರ ಸರಾಸರಿ ಪಡೆದುಕೊಂಡು 10% ಹೆಚ್ಚು ವಿದ್ಯುತ್ ನೀಡುತ್ತೇವೆ. 12 ತಿಂಗಳ ಆವರೇಜ್ ವಿದ್ಯುತ್ ಬಳಕೆ ಮೇಲೆ 10% ನೀಡುತ್ತೇವೆ. ಸರಾಸರಿ ಬಳಕೆಗೆ 10% ಸೇರಿಸಿ ಹೆಚ್ಚುವರಿ ವಿದ್ಯುತ್ ನೀಡುತ್ತೇವೆ. 200 ಯೂನಿಟ್ ವಿದ್ಯುತ್ ಬಳಕೆಗೆ ಯಾವುದೇ ಶುಲ್ಕ ಇರುವುದಿಲ್ಲ. ಜುಲೈ 1ರಿಂದ ಆಗಸ್ಟ್ 1ರವರೆಗೆ ಬಳಸುವ ವಿದ್ಯುತ್ ಬಳಕೆಗೆ ಬಿಲ್ ಎಂದು ತಿಳಿಸಿದರು.