Posted by vidyamaana on 2024-07-01 19:16:06 |
ಬೆಂಗಳೂರು : ಫೇಕ್ ನ್ಯೂಸ್ ಗಳ ಬಗ್ಗೆ ಇಡೀ ಸಮಾಜ ಬಹಳ ಎಚ್ಚರದಿಂದ ಇರಬೇಕು. ಪತ್ರಿಕಾ, ಮಾಧ್ಯಮ ಸಂಘಟನೆಗಳು ಈ ಬಗ್ಗೆ ಗಂಭೀರವಾಗಿ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ಬೆಂಗಳೂರು ಪ್ರೆಸ್ ಕ್ಲಬ್, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ವಾರ್ತಾ ಮತ್ತು ಪ್ರಚಾರ ಇಲಾಖೆ ಸಂಯುಕ್ತಾಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸಾಮಾಜಿಕ ಮಾಧ್ಯಮಗಳ ಮೂಲಕ ಹರಡುವ ಸುಳ್ಳು ಸುದ್ದಿಗಳು ಸಮಾಜಕ್ಕೆ ಅನಾಹುತಕಾರಿ. ಸುಳ್ಳು ಸುದ್ದಿಗಳ ಮೇಲೆ ತೀವ್ರ ನಿಗಾ ಇಡಲು ಪ್ರತೀ ಜಿಲ್ಲೆಗಳಲ್ಲೂ ವಿಶೇಷ ಘಟಕ ಸ್ಥಾಪಿಸಲಾಗಿದ್ದು ಸುಳ್ಳು ಸುದ್ದಿಗಳನ್ನು ಪತ್ತೆ ಹಚ್ಚಲಾಗುತ್ತಿದೆ ಎಂದರು.
ಫೇಕ್ ನ್ಯೂಸ್ ಗಳ ಪತ್ತೆಗೆ, ನಿಯಂತ್ರಣಕ್ಕೆ, ಈ ಬಗ್ಗೆ ಕ್ರಮಕ್ಕಾಗಿ ಎಲ್ಲಾ ಜಿಲ್ಲೆಗಳಲ್ಲಿ Fact check ಘಟಕಗಳನ್ನು ಕ್ರಿಯಾಶೀಲಗೊಳಿಸಲಾಗಿದೆ ಎಂದರು
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಸರ್ಕಾರದ ಕಾರ್ಯದರ್ಶಿ ಕೆ.ವಿ.ತ್ರಿಲೋಕಚಂದ್ರ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ವಾರ್ತಾ ಇಲಾಖೆ ಆಯುಕ್ತರಾದ ಸೂರಳ್ಕರ್ ವಿಕಾಸ್ ಕಿಶೋರ್, ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು, ವಿಧಾನ ಪರಿಷತ್ ಸದಸ್ಯರಾದ ಯು.ಬಿ.ವೆಂಕಟೇಶ್, ಪ್ರೆಸ್ ಕ್ಲಬ್ ಅಧ್ಯಕ್ಷರಾದ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಮಲ್ಲಪ್ಪ ಅವರು ಉಪಸ್ಥಿತರಿದ್ದರು.
ಹಿರಿಯ ಪತ್ರಕರ್ತರಾದ ಕೃಷ್ಣಪ್ರಸಾದ್ ಅವರು ಪ್ರಧಾನ ಭಾಷಣದಲ್ಲಿ ಪತ್ರಿಕೋದ್ಯಮದ ಈ ಕ್ಷಣದ ಸ್ಥಿತಿಗತಿಯನ್ನು ವಿವರಿಸಿದರು.
Posted by Vidyamaana on 2024-07-03 08:24:56 |
ಬೆಂಗಳೂರು : ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಕೆಲಸ ಮಾಡಲಾಗಿದೆ. ನಾಲ್ವರು ಕೆಎಎಸ್ ಅಧಿಕಾರಿ ಹಾಗೂ 25 ಮಂದಿ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ.
ಕರ್ನಾಟಕ ಆಡಳಿತ ಸೇವೆಗೆ ಸೇರಿದ ಈ ಕೆಳಕಂಡ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ / ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.
Posted by Vidyamaana on 2023-04-25 03:40:15 |
ಪುತ್ತೂರು: ಚುನಾವಣಾ ಕಣ ರಂಗು ಪಡೆಯುತ್ತಿದ್ದಂತೆ ಸ್ಟಾರ್ ಪ್ರಚಾರಕರ ದಂಡು ಪುತ್ತೂರಿಗೆ ಆಗಮಿಸುತ್ತಿದೆ.
ಮೇ 6ರಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪುತ್ತೂರಿನ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುವುದು ಪಕ್ಕಾ ಆಗಿದೆ. ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಅವರ ಪರವಾಗಿ ಮತ ಯಾಚಿಸಲಿರುವ ಯೋಗಿ, ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಸಂಚಲನ ಸೃಷ್ಟಿಸಲಿದ್ದಾರೆ.
ರಾಜ್ಯ, ರಾಷ್ಟ್ರದ ರಾಜಕಾರಣ ಪುತ್ತೂರಿನೆಡೆಗೆ ಮುಖ ಮಾಡಿದ್ದು, ಕಣ ರಣಾಂಗಣವಾಗಿದೆ. ವಿಪಕ್ಷ, ಪಕ್ಷೇತರ ಅಭ್ಯರ್ಥಿಗಳ ಪ್ರಚಾರದ ಭರಾಟೆ ಜೋರಾಗುತ್ತಿರುವ ನಡುವೆ ಬಿಜೆಪಿಯೂ ಸ್ಟಾರ್ ಪ್ರಚಾರಕರನ್ನು ಕರೆಸಿಕೊಳ್ಳುತ್ತಿದೆ.
Posted by Vidyamaana on 2024-04-07 13:53:08 |
ಬೆಂಗಳೂರು:ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಿಜೆಪಿ ವತಿಯಿಂದ ಬೆಂಗಳೂರಿನಲ್ಲಿ ನೆಲೆಸಿರುವ ಉಡುಪಿ- ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯ ಮತದಾರರ ಸ್ನೇಹ ಸಮ್ಮಿಲನ ಕಾರ್ಯಕ್ರಮ ನಡೆಯಿತು.
ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಬಿ.ಎಸ್. ಯಡಿಯೂರಪ್ಪ, ಪುಕ್ಕಟೆ ಕಾರ್ಯಕ್ರಮಗಳನ್ನು ಘೋಷಿಸಿ ಇಡೀ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿದ್ದು, ಬಹುಶಃ ಇದನ್ನು ಸುಧಾರಿಸಲು ನಮಗೆ 10 ವರ್ಷ ಬೇಕಾಗಬಹುದು ಮತ, ಇರುವವರು ಹಿಂದಿನ ದಿನವೇ ಬಂದು ಮತ ಚಲಾಯಿಸಿ ಎಂದು ವಿನಂತಿಸಿದರು.
Posted by Vidyamaana on 2023-07-26 07:14:21 |
ಉಡುಪಿ: ನಗರದ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಯುವತಿಯವರ ವಿಡಿಯೋ ಚಿತ್ರೀಕರಿಸಿದ ಘಟನೆಗೆ ಸಂಬಂಧಿಸಿ ತಪ್ಪಿತಸ್ಥ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ
ವಿಡಿಯೋ ಚಿತ್ರೀಕರಿಸಿದ್ದಾರೆ ಎನ್ನಲಾದ ಶಬನಾಝ್, ಅಲ್ಫೀಯಾ ಮತ್ತು ಅಲೀಮಾ ಅವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ ಪಿಎಸ್ಐ ಸುಷ್ಮಾ ಜಿ.ಬಿ ದಾಖಲಿಸಿದ್ದಾರೆ.
ಈ ಸಂಬಂಧ ಕಾಲೇಜು ನಿರ್ದೇಶಕಿ ಪತ್ರಿಕಾಗೋಷ್ಠಿಯಲ್ಲಿ ನಡೆಸಿ ಮೂವರು ವಿದ್ಯಾರ್ಥಿನಿಯರು ತಪ್ಪು ಒಪ್ಪಿಕೊಂಡಿದ್ದಾರೆ. ಮೂವರನ್ನು ಕೂಡಲೇ ಸಸ್ಪೆಂಡ್ ಮಾಡಿದ್ದೇವೆ. ಸಂತ್ರಸ್ತೆ ಯುವತಿ ಭವಿಷ್ಯದ ದೃಷ್ಟಿಯಿಂದ ದೂರು ಕೊಡಲು ಒಪ್ಪಿಲ್ಲ ಎಂದಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿ ಸ್ವಯಂ ಪ್ರೇರಿತವಾಗಿ ದೂರು ನೀಡಬೇಕು, ಹಾಗೂ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಮಗ್ರ ತನಿಖೆಗೆ ಆಗ್ರಹ ವ್ಯಕ್ತವಾಧ ಬೆನ್ನಲ್ಲೇ, ಇದೀಗ ಮಲ್ಪೆ ಠಾಣೆಯಲ್ಲಿ ಎಫ್ ಐಆರ್ ದಾಖಲಿಸಲಾಗಿದೆಈ ಪ್ರಕರಣವನ್ನು ರಾಷ್ಟ್ರೀಯ ಮಹಿಳಾ ಆಯೋಗದ ಮೂಲಕ ತನಿಖೆ ನಡೆಸಲಾಗುವುದು. ಈ ಘಟನೆಯ ಬಗ್ಗೆ ಕೂಲಂಕಷ ತನಿಖೆ ನಡೆಸಲಾಗುವುದು. ಇದು ಅತೀ ಸೂಕ್ಷ್ಮ ವಿಚಾರವಾಗಿದೆ. ಹೆಣ್ಮಕ್ಕಳ ಭವಿಷ್ಯಕ್ಕೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್ ಹೇಳಿದ್ದಾರೆ.
Posted by Vidyamaana on 2023-04-27 07:03:32 |
ಪುತ್ತೂರು: ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದೇ ಬರುತ್ತದೆ, ಯಾರಿಗೂ ಸಂಶಯ ಬೇಡ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ರಾಜ್ಯದ ಜನತೆಗೆ ನೀಡಿದ ನಾಲ್ಕು ಗ್ಯಾರಂಟಿ ಯಓಜನೆಯು ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಜಾರಿಯಾಗುತ್ತದೆ. ಈಗಾಗಲೇ ಕಾರ್ಯಕರ್ತರು ಎಲ್ಲಾ ಮನೆಗಳಿಗೂ ಕಾಂಗ್ರೆಸ್ನ ಗ್ಯಾರಂಟಿ ಕಾರ್ಡು ವಿತರಣೆ ಮಾಡುತ್ತಿದ್ದು ಬಿಜೆಪಿಗರ ಮನೆಗಳಿಗೂ ಕಾರ್ಡು ವಿತರಿಸಿ ಯಾವುದೇ ತಾರತಮ್ಯ ಮಾಡಬೇಡಿ ಎಂದು ಪುತ್ತೂರು ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಹೇಳಿದರು.
Posted by Vidyamaana on 2024-04-20 09:47:56 |
ಹುಬ್ಬಳಿ : ಇಡೀ ರಾಜ್ಯವನ್ನೆ ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿ(Hubballi) ನೇಹಾ ಹತ್ಯೆ ಪ್ರಕರಣ ಜನತೆಯನ್ನು ರೊಚ್ಚಿಗೆಬ್ಬಿಸಿದೆ. ಹಂತಕನ ವಿರುದ್ಧ ಜನ ಕೊತ ಕೊತ ಕುದಿಯುತ್ಯಿದ್ದಾರೆ. ಈ ಬೆನ್ನಲ್ಲೇ ನೇಹಾ ಹಂತಕ ಪಯಾಜ್ ತಂದೆ ಮಾಧ್ಯಮಗಳ ಮುಂದೆ ಮಾತನಾಡಿದ್ದಾರೆ.
ನನ್ನ ಮಗನಿಗೆ ಯಾವುದೇ ಶಿಕ್ಷೆ ನೀಡಿದರೂ ಸ್ವಾಗತಿಸುತ್ತೇನೆ. ಅವನಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿ. ಆ ಶಿಕ್ಷೆ ಹೇಗಿರಬೇಕು ಅಂದ್ರೆ ಮುಂದೆ ಇಂಥ ಕ್ರೂರ ಕೆಲಸಕ್ಕೆ ಯಾರೂ ಕೈ ಹಾಕಬಾರದು. ಅಂಥ ಶಿಕ್ಷೆ ನನ್ನ ಮಗನಿಗೆ ಆಗಬೇಕು ಎಂದು ನೇಹಾ ಹಿರೇಮಠ (Neha Hiremath Murder Case) ಕೊಲೆ ಪ್ರಕರಣದ ಆರೋಪಿ ಫಯಾಜ್ (Fayaz) ತಂದೆ ಬಾಬಾ ಸಾಹೇಬ್ ಸುಬಾನಿ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ.