ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಸುದ್ದಿಗಳು News

Posted by vidyamaana on 2024-06-30 19:50:01 |

Share: | | | | |


ಕುತ್ತಾರು ಮದನಿ ನಗರ ದುರಂತ ಪ್ರಕರಣ: ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ; ಶೀಘ್ರ ಪರಿಹಾರ ಒದಗಿಸಲು ಸೂಚನೆ

ಮಂಗಳೂರು , ಜೂ. 30: ಕುತ್ತಾರು ಮದನಿ ನಗರದಲ್ಲಿ ಇತೀಚೆಗೆ ಪಕ್ಕದ ಮನೆಯ ಗೋಡೆ ಮನೆಯೊಂದರ ಮೇಲೆ ಕುಸಿದು ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಪ್ರಕರಣದ ಘಟನಾ ಸ್ಥಳಕ್ಕೆ ರವಿವಾರ ಸಂಸದ ಕ್ಯಾ. ಬ್ರಿಜೇಶ್ ಚೌಟ ಭೇಟಿ ನೀಡಿ ಪರಿಶೀಲಿಸಿದರು.

ಸಂತ್ರಸ್ತರಿಗೆ ಶೀಘ್ರ ಪರಿಹಾರವನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಅವರು ಇದೇ ಸಂದರ್ಭ, ಉಳ್ಳಾಲ- ಸೋಮೇಶ್ವರ ಭಾಗದ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.

ಕಡಲ್ಕೊರೆತ ತೀವ್ರಗೊಂಡಿರುವ ಉಚ್ಚಿಲ, ಮೊಗವೀರಪಟ್ನ, ಬಟ್ಟಂಪಾಡಿ, ಸೀಗ್ರೌಂಡ್ ಪ್ರದೇಶಕ್ಕೆ ಭೇಟಿ ನೀಡಿದರು. 


ಸಮುದ್ರತೀರದ ಮನೆಗಳಲ್ಲಿ ವಾಸವಾಗಿರುವವರು ಎಚ್ಚರಿಕೆ ವಹಿಸುವಂತೆ ಸೂಚಿಸಿದ ಸಂಸದ ಕ್ಯಾ. ಬ್ರಿಜೇಶ್, ಅಪಾಯದಂಚಿನಲ್ಲಿ ಇರುವ ಮನೆಮಂದಿಗೆ ತಾತ್ಕಾಲಿಕ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು.

ಉಳ್ಳಾಲ ತಾಲೂಕು ತಹಶಿಲ್ದಾರರಾದ ಪ್ರದೀಪ್ ಕುರುಡೇಕರ್, ಬಂದರು ಇಲಾಖೆಯ ಇಂಜಿನಿಯರ್ ಪ್ರವೀಣ್, ಉಳ್ಳಾಲ ತಾಲೂಕು ಕಂದಾಯ ನಿರೀಕ್ಷಕರು ಪ್ರಮೋದ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸಂತೋಷ್ ಬೋಳಿಯಾರ್ ಮೊದಲಾದವರು ಉಪಸ್ಥಿತರಿದ್ದರು.

 Share: | | | | |


ಮೋದಿ ಸಂಪುಟಕ್ಕೆ HDK? ಊಹಾಪೋಹದ ಬೆನ್ನಲ್ಲೇ ಎಚ್‌ಡಿಡಿ ಭೇಟಿಯಾದ ಕೇಂದ್ರ ಸಚಿವ

Posted by Vidyamaana on 2024-01-08 11:06:36 |

Share: | | | | |


ಮೋದಿ ಸಂಪುಟಕ್ಕೆ HDK? ಊಹಾಪೋಹದ ಬೆನ್ನಲ್ಲೇ ಎಚ್‌ಡಿಡಿ ಭೇಟಿಯಾದ ಕೇಂದ್ರ ಸಚಿವ

ಬೆಂಗಳೂರು : ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ ದಟ್ಟವಾಗಿದೆ.ಈ ಎಲ್ಲಾ ಬೆಳವಣಿಗೆಗಳ ಬೆನ್ನಲ್ಲೇ ಕೇಂದ್ರ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್‌ ಮುಂಡಾ ಅವರು ಇಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ, ಎಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.


ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಕುಮಾರಸ್ವಾಮಿ, ಕೇಂದ್ರ ಸರ್ಕಾರದ ಕೃಷಿ ಮತ್ತು ಬುಡಕಟ್ಟು ವ್ಯವಹಾರಗಳ ಖಾತೆ ಸಚಿವ ಅರ್ಜುನ್‌ ಮುಂಡಾ ಅವರು ಎಚ್‌.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಅತ್ಯಂತ ಪ್ರೀತಿ ವಿಶ್ವಾಸದಿಂದ ಗೌರವಿಸಲಾಯಿತು ಎಂದು ತಿಳಿಸಿದ್ದಾರೆ.


ಇದೇ ವೇಳೆ ಕಾಡುಗೊಲ್ಲ ಸಮುದಾಯವನ್ನು ಎಸ್‌ಟಿ ವರ್ಗಕ್ಕೆ ಸೇರಿಸುವುದು, ರಾಜ್ಯದ ತೆಂಗು ಬೆಳೆಗಾರರಿಂದ ಕೊಬ್ಬರಿ ಖರೀದಿ ಹಾಗೂ ರಾಜ್ಯ ಎದುರಿಸುತ್ತಿರುವ ಬರ ಪರಿಸ್ಥಿತಿಯ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು ಎಂದು ಕುಮಾರಸ್ವಾಮಿ ಹೇಳಿದ್ದಾರೆ.


ಎಚ್‌ಡಿಕೆ ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ


ಎನ್‌ಡಿಎ ಮೈತ್ರಿಕೂಟದ ಭಾಗವಾಗಿರುವ ಜೆಡಿಎಸ್‌ಗೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವ ಮೂಲಕ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಇರಾದೆ ಬಿಜೆಪಿ ವರಿಷ್ಠರದ್ದಾಗಿದೆ. ರಾಮಮಂದಿರ ಉದ್ಘಾಟನೆ ಬಳಿಕ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು, ಐವರು ಹೊಸದಾಗಿ ಸೇರ್ಪಡೆಯಾಗಲಿದ್ದಾರೆ. ಇದೇ ವೇಳೆ ಕುಮಾರಸ್ವಾಮಿ ಅವರು ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟಕ್ಕೆ ಸೇರುವ ಸಾಧ್ಯತೆ ದಟ್ಟವಾಗಿದೆ ಎಂದು ಮೂಲಗಳು ಹೇಳಿವೆ.


ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಸಚಿವ ನರೇಂದ್ರ ಸಿಂಗ್ ತೋಮರ್, ಗೆದ್ದ ಬಳಿಕ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆ ಬಳಿಕ, ಸಂಪುಟ ದರ್ಜೆಯ ಖಾತೆ ಖಾಲಿ ಇದೆ. ಕೃಷಿ ಖಾತೆಯ ಬಗ್ಗೆ ಕುಮಾರಸ್ವಾಮಿ ಒಲವು ಹೊಂದಿದ್ದು, ಸಂಪುಟಕ್ಕೆ ಸೇರಿದರೆ ಅದೇ ಖಾತೆ ಸಿಗುವ ಸಂಭವ ಇದೆ ಎಂಬ ಚರ್ಚೆಯೂ ನಡೆದಿದೆ. ಕೃಷಿ ಖಾತೆ ರಾಜ್ಯ ಸಚಿವರಾಗಿ ರಾಜ್ಯದವರೇ ಆದ ಶೋಭಾ ಕರಂದ್ಲಾಜೆ ಅವರು ಕಾರ್ಯನಿರ್ವಹಿಸುತ್ತಿದ್ದಾರೆ. ಕುಮಾರಸ್ವಾಮಿ ಕೃಷಿ ಸಚಿವರಾದರೆ, ಶೋಭಾ ಖಾತೆ ಬದಲಾಗುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಪುತ್ತೂರು- ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ-ಪೈವಳಿಕೆ ಮೂಲದ ನಾಲ್ವರಿಗೆ ಗಂಭೀರ ಗಾಯ

Posted by Vidyamaana on 2024-03-10 20:33:46 |

Share: | | | | |


ಪುತ್ತೂರು- ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಡಿಕ್ಕಿ-ಪೈವಳಿಕೆ ಮೂಲದ ನಾಲ್ವರಿಗೆ ಗಂಭೀರ ಗಾಯ

ಪುತ್ತೂರು ಮಾ 10: ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಸ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ.


ಗುಲಾಬಿ (55), ಕೃಷ್ಣಪ್ಪ ನಾಯ್ಕ (60) ಇಬ್ಬರಿಗೆ ಗಂಭೀರ ಗಾಯ, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ ಒಂದೇ ಕುಟುಂಬದ ನಿವಾಸಿಗಳು ಕಾರಿನಲ್ಲಿ ಬರುತ್ತಿದ್ದ ವೇಳೆ ಎದುರಿಗೆ ವೇಗವಾಗಿ ಬಂದ ಬೈಕ್ ಸೈಡ್ ಕೋಡುವ ಸಂದರ್ಭ ಕಾರು ರಸ್ತೆ ಬದಿ ನಿಲ್ಲಿಸಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.ಗಂಭೀರ ಗಾಯಗೊಂಡ ದಂಪತಿಯನ್ನ ಸರ್ಕಾರಿ ಆಸ್ಪತ್ರೆಗೆ ತಂದು ಬಳಿಕ ಹೆಚ್ಚಿನ ಚಿಕಿತ್ಸೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಶಿಫ್ಟ್ ಮಾಡಾಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರಿ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.

ಶಾಸಕರ ಐಶಾರಾಮಿ ಕಚೇರಿಗೆ ನಗರಸಭೆಯ ತೆರಿಗೆ ಹಣ ವಿನಿಯೋಗ ಖಂಡನೀಯ

Posted by Vidyamaana on 2023-08-30 02:07:54 |

Share: | | | | |


ಶಾಸಕರ ಐಶಾರಾಮಿ ಕಚೇರಿಗೆ ನಗರಸಭೆಯ ತೆರಿಗೆ ಹಣ ವಿನಿಯೋಗ ಖಂಡನೀಯ

ಪುತ್ತೂರು: ಪುತ್ತೂರಿನಲ್ಲಿ ಶಾಸಕರ ಕಚೇರಿ ಲೋಕಾರ್ಪಣೆ ಆಗಿದೆ. ಇದಕ್ಕೆ ನಾವೆಲ್ಲ ಸಂತೋಷ ಪಡಬೇಕು. ಆದರೆ ಆ ಕಚೇರಿಗೆ ನಗರಸಭೆಯ ತೆರಿಗೆ ಹಣವನ್ನು ವಿನಿಯೋಗಿಸಿದ್ದು ಖಂಡನೀಯ. ಪುತ್ತೂರು ನಗರಸಭೆಯ ರೂ. 31ಲಕ್ಷ ವೆಚ್ಚ ಮಾಡಿ ಶಾಸಕರ ಐಶಾರಾಮಿ ಕಚೇರಿ ನಿರ್ಮಾಣ ಆಗಿದೆ. ಈ ಹಣವನ್ನು ನಗರಸಭೆಗೆ ಜಿಲ್ಲಾಧಿಕಾರಿಗಳು ಹಿಂದಿರುಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನ ಬಿಜೆಪಿ ನೇತೃತ್ವದಲ್ಲಿ ನಗರಸಭೆ ಸದಸ್ಯರೊಂದಿಗೆ ಪುತ್ತೂರು ನಗರಸಭೆಯ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಎಚ್ಚರಿಕೆ ನೀಡಿದ್ದಾರೆ.


ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ಶಾಸಕ ಅಶೋಕ್ ರೈ ಅವರ ಕಚೇರಿ ಮಾಡಲು ಅನುದಾನ ಎಲ್ಲಿಂದ ಬಂತು ಎಂಬುದನ್ನು ಯಾರು ನೋಡಿರಿಲ್ಲ. ಪುತ್ತೂರಿನ ಇತಿಹಾಸದಲ್ಲಿ ಶಾಸಕರಾಗಿದ್ದ ಸದಾನಂದ ಗೌಡ, ಶಕುಂತಳಾ ಶೆಟ್ಟಿ, ಮಲ್ಲಿಕಾಪ್ರಸಾದ್, ನಾನು ಕೂಡಾ ಸೇರಿದಂತೆ ಯಾರು ಕೂಡಾ ಐಶಾರಾಮದ ಕಚೇರಿ ಮಾಡಿಲ್ಲ. ಜನಾಮಾನ್ಯರ ತೆರಿಗೆ ಹಣದಲ್ಲಿ ಕಚೇರಿ ಮಾಡದೆ ತಾಲೂಕು ಪಂಚಾಯತ್, ತಾಲೂಕು ಆಡಳಿತ ಸೌಧದಲ್ಲೇ ಕಚೇರಿ ಮಾಡಿದ್ದೆವು. ಜನಸಾಮಾನ್ಯರಿಗೆ ಸುಲಭವಾಗಿ ಶಾಸಕರು ಸಿಗಬೇಕೆಂಬ ನಿಟ್ಟಿನಲ್ಲಿ ಎಲ್ಲಾ ಕಡೆ ಸರಕಾರಿ ಕಚೇರಿಯಲ್ಲೇ ಮಾಡಲಾಗಿತ್ತು. ಆದರೆ ಪುತ್ತೂರು ಶಾಸಕರು ತಮ್ಮ ಕಚೇರಿಗೆ ನಗರಸಭೆಯ ರೂ. 31ಲಕ್ಷವನ್ನು ವಿನಿಯೋಗಿಸಿದ್ದಾರೆ. ಪುತ್ತೂರು ನಗರಸಭೆಯ ಜನರ ತೆರಿಗೆ ಹಣದಲ್ಲಿ ಈ ಕಚೇರಿಗೆವಿನಿಯೋಗ ಮಾಡುವ ಕೆಲಸದ ಬದಲು ಅದು ಪುತ್ತೂರಿನ ಅಭಿವೃದ್ಧಿಗೆ ವಿನಿಯೋಗ ಆಗಬೇಕಾಗಿತ್ತು. ನಗರಸಭೆಯ ಸದಸ್ಯರಿಗೆ ಅನುದಾನ ಹಂಚಿಕೆ ಮಾಡಿದಲ್ಲಿ ಅವರು ತಮ್ಮ ತಮ್ಮ ವಾರ್ಡ್‌ಗಳ ಅಭಿವೃದ್ಧಿಗೆ ವಿನಿಯೋಗಿಸುತ್ತಿದ್ದರು. ಆದರೆ ಇಲ್ಲಿ ಶಾಸಕರು ಸೂಚನೆ ಕೊಟ್ಟು ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿಗಳು ನಗರಸಭೆಯ ಜನಪ್ರತಿನಿಧಿಗಳ ಗಮನಕ್ಕೂ ತಾರದೆ ನಿರ್ಣಯ ಮಾಡಿ ಅನುದಾನವನ್ನು ಶಾಸಕರ ಕಚೇರಿಗೆ ವಿನಿಯೋಗಿಸಲು ನೀಡಿರುವುದು ಖಂಡನೀಯ. ಈ ನಡುವೆ ಪುಡಾ ಕಚೇರಿನ್ನು ಖಾಸಗಿ ಕಟ್ಟಡಕ್ಕೆ ವರ್ಗಾವಣೆ ಮಾಡುವ ಮೂಲಕ ನಗರಸಭೆಗೆ ಪುಡಾದ ಬಾಡಿಗೆಯಿಂದ ಬರುವ ಅನುದಾನವು ಕಡಿತವಾಗಿದೆ. ಇದೀಗ ಪುಡಾವು ಹೆಚ್ಚುವರಿ ರೂ. 16ಸಾವಿರ ಬಾಡಿಗೆ ಕೊಡಬೇಕಾಗಿ ಬಂದಿದೆ. ಒಂದು ಶಾಸಕರ ಕಚೇರಿಗಾಗಿ ಎಷ್ಟು ಖರ್ಚನ್ನು ಸರಕಾರದ ಖಜಾನೆಯಿಂದ ಖರ್ಚು ಮಾಡುತ್ತಾರೆ ಎಂಬುದು ಜನಸಾಮಾನ್ಯರು ಯೋಚನೆ ಮಾಡಬೇಕು. ಭ್ರಷ್ಟಾಚಾರದ ಬಗ್ಗೆ ನಾವು ಮಾತನಾಡುತ್ತೇವೆ. ಆದರೆ ಎಲ್ಲಿಂದ ಭ್ರಷ್ಟಾಚಾರ ಆಗುತ್ತಿದೆ. ಎಲ್ಲಿ ಸರಕಾರದ ಹಣ ಪೋಲಾಗುತ್ತಿದೆ. ಇದನ್ನು ಯೋಚನೆ ಮಾಡಬೇಕು. ಅದಕ್ಕಾಗಿ ಪುತ್ತೂರು ನಗರಸಭೆಯ ಜನರು ತೆರಿಗೆ ರೂಪದಲ್ಲಿ ನಗರಸಭೆಗೆ ಕಟ್ಟಿದ ಹಣವನ್ನು ಮತ್ತೆ ನಗರಭೆಗೆ ಜಿಲ್ಲಾಧಿಕಾರಿಯವರು ಕೊಡಿಸಬೇಕು. ಆ ಹಣದಿಂದ ನಗರಸಭೆಯ ಸದಸ್ಯರು ತಮ್ಮ ತಮ್ಮ ವಾರ್ಡ್‌ಗಳಲ್ಲಿ ಅಭಿವೃದ್ಧಿ ಮಾಡಬಹುದು. ಇಲ್ಲವಾದಲ್ಲಿ ಮುಂದಿನ ದಿನ ಬಿಜೆಪಿಯಿಂದ ನಗರಸಭೆಯ ಮುಂದೆ ಪ್ರತಿಭಟನೆ ಅನಿವಾರ್ಯವಾಗಬಹುದು ಎಂದು ಅವರುಎಚ್ಚರಿಕೆ ನೀಡಿದರು. ಇದೇ ಸಂದರ್ಭದಲ್ಲಿ ನಾನು ಶಾಸಕನಾಗಿದ್ದ ಸಂದರ್ಭ ಲೋಕೋಪಯೋಗಿ ಇಲಾಖೆಯವರು ನೇರ ಸರಕಾರದಿಂದ ನೀಡಿದ ರೂ. 3ಲಕ್ಷದಲ್ಲಿ ನನ್ನ ಕಚೇರಿ ನಿರ್ಮಾಣ ಆಗಿದೆ ಎಂದರು. ಆದರೆ ಈಗಿನ ಶಾಸಕರು ಒಂದು ಕಚೇರಿಗಾಗಿ ಇಷ್ಟೊಂದು ಹೊರೆ ಭರಿಸುವುದು ಅಗತ್ಯವಿತ್ತಾ ಎಂದು ಪ್ರಶ್ನಿಸಿದರು

 ಬಿಜೆಪಿ ನಗರ ಮಂಡಲದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಪುರುಷೋತ್ತಮ ಮುಂಗ್ಲಿಮನೆ, ಯುವರಾಜ್ ಪೆರಿಯತ್ತೋಡಿ, ಜಯಶ್ರೀ ಎಸ್.ಶೆಟ್ಟಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಬಾಲಚಂದ್ರ, ಸದಸ್ಯೆ ಗೌರಿ ಬನ್ನೂರು ಉಪಸ್ಥಿತರಿದ್ದರು.

ದೀಪಾವಳಿ ಸೀರೆ ವಿತರಣಾ ಕಾರ್ಯಕ್ರಮ; ಕೊಂಬೆಟ್ಟು ಕ್ರೀಡಾಂಗಣ ವೀಕ್ಷಿಸಿದ ಶಾಸಕರು

Posted by Vidyamaana on 2023-10-19 16:36:35 |

Share: | | | | |


ದೀಪಾವಳಿ ಸೀರೆ ವಿತರಣಾ ಕಾರ್ಯಕ್ರಮ; ಕೊಂಬೆಟ್ಟು ಕ್ರೀಡಾಂಗಣ ವೀಕ್ಷಿಸಿದ ಶಾಸಕರು

ಪುತ್ತೂರು:ನ.13 ರಂದು ದೀಪಾವಳಿ ಪ್ರಯುಕ್ತ ನಡೆಯಲಿರುವ ಬೃಹತ್ ಸೀರೆ ವಿತರಣಾ ಕಾರ್ಯಕ್ರಮವು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು , ಸಮಾವೇಶ ನಡೆಯಲಿರುವ ಕೊಂಬೆಟ್ಟು ಕ್ರೀಡಾಂಗಣಕ್ಕೆ ಭೇಟಿ ನೀಡಿದ ಶಾಸಕರು ಸ್ಥಳ ವೀಕ್ಷಣೆ ಮಾಡಿದರು. ಸುಮಾರು 50 ಸಾವಿರಕ್ಕೂ‌ಮಿಕ್ಕಿ ಜನ ಸೇರುವ ನಿರೀಕ್ಷೆ ಇದ್ದು ಕೈಗೊಂಡಿರುವ ಸಿದ್ದತೆಗಳನ್ನು ಶಾಸಕರು ಪರಿಶೀಲನೆ ಮಾಡಿದರು.

ಕೆಪಿಸಿಸಿ ಸಂಯೋಜಕರಾದ ಕಾವು ಹೇಮನಾಥ ಶೆಟ್ಟಿ,ಕೋಡಿಂಬಾಡಿ ಗ್ರಾಪಂ ಉಪಾಧ್ಯಕ್ಷರಾದ ಜಯಪ್ರಕಾಶ್ ಬದಿನಾರ್,ರೈ ಟ್ರಸ್ಟ್ ನ ಮುಖ್ಯಸ್ಥರಾದ ನಿಹಾಲ್ ಶೆಟ್ಟಿ, ನಿವೃತ್ತ ಶಿಕ್ಷಕ ದಯಾನಂದ ರೈ ಕೊರ್ಮಂಡ,ಎನ್ ಎಸ್ ಯು ಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಾಯಬ್ಬೆ, ಯುವ ಕಾಂಗ್ರೆಸ್ ನ ಹನೀಫ್ ಪುಂಚತ್ತಾರ್, ಇಂಜಿನಿಯರ್ ಸಂತೋಷ್ ಶೆಟ್ಡಿ, ರವಿಪ್ರಸಾದ್ ಶೆಟ್ಟಿ ಬನ್ನೂರು, ಯೋಗೀಶ್ ಸಾಮಾನಿ, ಟ್ರಸ್ಟ್ ನ ಪ್ರಮುಖರಾದ ಕೃಷ್ಣಪ್ರಸಾದ್ ಭಟ್ ಬೊಳ್ಳಮೆ ,ದಾಮೋದರ್ ಕೋಡಿಂಬಾಡಿ ಮತ್ತಿತರರು ಉಪಸ್ಥಿತರಿದ್ದರು.

ಸಾಮೂಹಿಕ ಪ್ರಾರ್ಥನೆಗೂ., ಸಂಘಟನೆಯ ಹೆಸರು ಉಲ್ಲೇಖಿಸಿ ಬಂದಿರುವ ವರದಿಗೂ ಸಂಬಂಧವಿಲ್ಲ ಹಿಂ.ಜಾ.ವೇ ಪ್ರಾಂತ ಸಂಯೋಜಕ ದೊ ಕೇಶವಮೂರ್ತಿ ಸ್ಪಷ್ಟನೆ

Posted by Vidyamaana on 2024-02-03 04:46:16 |

Share: | | | | |


ಸಾಮೂಹಿಕ ಪ್ರಾರ್ಥನೆಗೂ., ಸಂಘಟನೆಯ ಹೆಸರು ಉಲ್ಲೇಖಿಸಿ ಬಂದಿರುವ ವರದಿಗೂ ಸಂಬಂಧವಿಲ್ಲ ಹಿಂ.ಜಾ.ವೇ ಪ್ರಾಂತ ಸಂಯೋಜಕ ದೊ ಕೇಶವಮೂರ್ತಿ ಸ್ಪಷ್ಟನೆ

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಫೆ.1 ರಂದು ನಡೆದ ಸಾಮೂಹಿಕ ಪ್ರಾರ್ಥನೆಗೂ ಸಂಘಟನೆಯ ಹೆಸರನ್ನು ಉಲ್ಲೇಖಿಸಿ ಪತ್ರಿಕಾ ಮಾಧ್ಯಮಗಳಲ್ಲಿ ಬಂದಿರುವ ವರದಿಗಳಿಗೂ ಸಂಬಂಧವಿಲ್ಲ ಎಂದು ಹಿಂ.ಜಾ.ವೇ ಪ್ರಾಂತ ಸಂಯೋಜಕ ದೊ ಕೇಶವಮೂರ್ತಿ ಸ್ಪಷ್ಟನೆ ನೀಡಿದ್ದಾರೆಂದು ಪುತ್ತೂರು ಜಿಲ್ಲಾ ಸಂಯೋಜಕ ಮೋಹನ್ ದಾಸ್ ಕಾಣಿಯೂರು ತಿಳಿಸಿದ್ದಾರೆ.


ಅಭಿಮಾನಿ ಬಳಗದ ಹೆಸರಿನಲ್ಲಿ ಹಿಂದೂ ಜಾಗರಣ ವೇದಿಕೆಯ ನೇತೃತ್ವದಲ್ಲಿ ಕೆಲವೊಂದು ಸಭೆಗಳು ನಡೆದಿದೆ ಅನ್ನೋದು ಪತ್ರಿಕೆ-ಮಾಧ್ಯಮಗಳಲ್ಲಿ ಬಂದಿರುತ್ತದೆ. ಈ ಸಭೆಗೂ ಸಂಘಟನೆಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಸಂಘಟನೆಯು ಸ್ಪಷ್ಟಪಡಿಸುತ್ತಿದೆ. ಮತ್ತು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆದ ಸಾಮೂಹಿಕ ಪ್ರಾರ್ಥನೆಗೂ ಸಂಘಟನೆಯ ಹೆಸರನ್ನು ಉಲ್ಲೇಖಿಸಿ ಪತ್ರಿಕಾ-ಮಾಧ್ಯಮಗಳಲ್ಲಿ ವರದಿಗಳು ಬಂದಿರುವುದು ಸಂಘಟನೆಯ ಗಮನಕ್ಕೆ ಬಂದಿರುವುದರಿಂದ ಈ ಕಾರ್ಯಕ್ರಮಕ್ಕೂ ಸಂಘಟನೆಗೂ ಯಾವುದೇ ರೀತಿಯ ಸಂಬಂಧ ಇರುವುದಿಲ್ಲ.


ಅದೇ ರೀತಿ ಈಗಾಗಲೇ ಜಾಗರಣಾ ವೇದಿಕೆಯ ಹೊಸ ಸಂಘಟನಾ ವ್ಯವಸ್ಥೆಯಲ್ಲಿ ಪ್ರಾಂತ, ಜಿಲ್ಲೆ, ತಾಲೂಕು ಸಮಿತಿಗಳನ್ನು ರಚಿಸಲಾಗಿದೆ. (ಈ ಹಿಂದೆ ಇದ್ದ ವಲಯ, ಘಟಕಗಳನ್ನು ವಿಸರ್ಜಿಸಲಾಗಿದೆ) ಹಿಂದೂ ಜಾಗರಣ ವೇದಿಕೆಯು ಒಂದು ಆಂದೋಲನಾತ್ಮಕ ರೂಪದಲ್ಲಿ ಜಾಗೃತ, ಸಂಘಟಿತ, ಸುರಕ್ಷಿತ ಹಿಂದೂ ಸಮಾಜದ ನಿರ್ಮಾಣದ ಕಾರ್ಯಕ್ಕಾಗಿ ಕೆಲಸ ಮಾಡುತ್ತಿರುವ ಸಂಘಟನೆಯಾಗಿರುತ್ತದೆ. ಕಾರ್ಯ ಮತ್ತು ಆಯಾಮಗಳ ಮೂಲಕ ಸಂಘಟನೆಯು ಹೊಸ ಸಂಘಟನಾ ವ್ಯವಸ್ಥೆಯಲ್ಲಿ ಕಾರ್ಯ ಚಟುವಟಿಕೆಯನ್ನು ಈಗಾಗಲೇ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

Viral Video : ಬೀದಿಯಲ್ಲಿ ಶುರುವಾಗಿ ಚರಂಡಿಗೆ ತಲುಪಿದ ದಂಪತಿ ಜಗಳ, ಗಂಡನ ಸ್ಥಿತಿ ನೋಡಿ ಅಯ್ಯೋ ಎಂದ ನೆಟ್ಟಿಗರು

Posted by Vidyamaana on 2024-02-24 21:48:55 |

Share: | | | | |


Viral Video : ಬೀದಿಯಲ್ಲಿ ಶುರುವಾಗಿ ಚರಂಡಿಗೆ ತಲುಪಿದ ದಂಪತಿ ಜಗಳ, ಗಂಡನ ಸ್ಥಿತಿ ನೋಡಿ ಅಯ್ಯೋ ಎಂದ ನೆಟ್ಟಿಗರು

ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುವ ಗಾದೆ ಮಾತಿದೆ. ಆದರೆ ಇತ್ತೀಚೆಗಿನ ದಿನಗಳಲ್ಲಿ ಗಂಡ ಹೆಂಡಿರ ಜಗಳ ಬೀದಿಗೆ ಬರುವುದೇ ಹೆಚ್ಚು. ನಾಲ್ಕು ಗೋಡೆಗಳ ಮಧ್ಯೆ ಇರಬೇಕಾದ ಮುನಿಸು, ಮನಸ್ತಾಪಗಳು ಬಗೆಹರಿಸಲು ಸಾಧ್ಯವಿಲ್ಲ ಎನ್ನುವ ಮಟ್ಟಿಗೆ ಬೆಳೆದು ಕೆಲವೊಮ್ಮೆ ಡೈವೋರ್ಸ್ ನೀಡುವ ಹಂತದವರೆಗೂ ತಲುಪುತ್ತದೆ.ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಗಂಡ ಹೆಂಡಿರ ಜಗಳವು ಬೀದಿಗೆ ಬಂದಿದ್ದು, ರಸ್ತೆಯಲ್ಲಿ ಇಬ್ಬರೂ ಕಿತ್ತಾಡಿಕೊಂಡಿದ್ದಾರೆ. ಕೊನೆಗೆ ಈ ಜೋಡಿಯು ಜಗಳವಾಡುತ್ತಾ ಚರಂಡಿಗೆ ಬಿದ್ದಿದ್ದು, ಅಲ್ಲಿಯೂ ಇಬ್ಬರೂ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಮಾತ್ರ ಶಾಕ್ ಆಗಿದ್ದಾರೆ.

ಯಾವ ಸಂಸಾರದಲ್ಲಿ ಜಗಳವಿರುವುದಿಲ್ಲ ಹೇಳಿ. ಜಗಳವಿದ್ದ ಕಡೆಯಲ್ಲಿ ಪ್ರೀತಿ ಹೆಚ್ಚಿರುತ್ತದೆ ಎನ್ನುವ ಮಾತಿದೆ. ಅತಿಯಾದ ಪ್ರೀತಿ, ಸಣ್ಣ ಪುಟ್ಟ ಮುನಿಸು ಜಗಳವಿದ್ದರೆ ಸಂಸಾರವೆನ್ನುವುದು ನೋಡಲು ಚಂದ. ಆದರೆ ಈ ಜಗಳವನ್ನೇ ದೊಡ್ಡದು ಮಾಡಿದರೆ ನಾಲ್ಕು ಗೋಡೆಗೆ ಸೀಮಿತವಾಗಿರಬೇಕಾದ ಜಗಳವು ಬೀದಿಗೆ ಬರುವುದಂತೂ ಪಕ್ಕಾ. ಇಲ್ಲೊಂದು ಜೋಡಿಯೂ ಸಂಸಾರದಲ್ಲಿನ ಜಗಳವನ್ನು ಮನೆಯಿಂದ ರಸ್ತೆಗೆ ತಂದಿದ್ದು, ಅಷ್ಟೇ ಆಗಿದ್ದರೆ ಏನು ಆಗುತ್ತಿರಲಿಲ್ಲ. ಕೊನೆಗೆ ಇವರಿಬ್ಬರ ಜಗಳವು ಚರಂಡಿಯವರೆಗೂ ತಲುಪಿದೆ. ಗಂಡ ಹೆಂಡಿರ ಜಗಳದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಇವರಿಬ್ಬರೂ ಹೊಡೆದಾಡುವ ರೀತಿ ಕಂಡು ಇದೇನಪ್ಪಾ ಹೀಗೆ ಎನ್ನುತ್ತಿದ್ದಾರೆ.ವಿಡಿಯೋದಲ್ಲಿ ಪತಿ ಪತ್ನಿಯರಿಬ್ಬರೂ ಮನೆಯಿಂದ ಹೊರಗಡೆ ರಸ್ತೆಯಲ್ಲಿ ಜಗಳವನ್ನು ಶುರು ಮಾಡಿದ್ದಾರೆ. ಬೈಕ್‌ನಲ್ಲಿ ತೆರಳುವಾಗ ಬೈಕ್ ಹಾಳಾಗಿದ್ದು, ಇದೇ ಇವರಿಬ್ಬರ ನಡುವಿನ ಜಗಳಕ್ಕೆ ಕಾರಣವಾಗಿರುವಂತೆ ಕಾಣುತ್ತಿದೆ. ಈ ವಿಡಿಯೋದ ಪ್ರಾರಂಭದಲ್ಲಿ ಗಂಡ ಬೈಕ್‌ ಅನ್ನು ತಳ್ಳಿಕೊಂಡು ಹೋಗುತ್ತಿದ್ದಾನೆ. ಹೀಗಿರುವಾಗ ಹೆಂಡತಿಯು ಗಂಡದ ಬೆನ್ನಿಗೆ ಜೋರಾಗಿ ಗುದ್ದುತ್ತಾಳೆ. ಅಲ್ಲಿಂದ ಜಗಳವು ಶುರುವಾಗಿದ್ದು, ಇಬ್ಬರೂ ಕಿತ್ತಾಡಿಕೊಳ್ಳಲು ಶುರು ಮಾಡಿದ್ದಾರೆ. ಹೀಗೆ ಜೋರಾಗಿ ಹೊಡೆದಾಡುತ್ತಲೇ ಇಬ್ಬರೂ ಚರಂಡಿಗೆ ಬಿದ್ದಿದ್ದಾರೆ. ಆದರೆ ಅಲ್ಲಿಯೂ ಜಗಳವೇನು ನಿಂತಿಲ್ಲ. ನಾರುತ್ತಿರುವ ಚರಂಡಿಯ ನೀರಿನಲ್ಲಿಯೂ ಈ ದಂಪತಿಗಳು ಹೊಡೆದಾಡಿಕೊಂಡಿದ್ದಾರೆ.


ವಿಡಿಯೋ ಇಲ್ಲಿದೆ ನೋಡಿ

Viral Video : ಬೀದಿಯಲ್ಲಿ ಶುರುವಾಗಿ ಚರಂಡಿಗೆ ತಲುಪಿದ ದಂಪತಿ ಜಗಳ, ಗಂಡನ ಸ್ಥಿತಿ ನೋಡಿ ಅಯ್ಯೋ ಎಂದ ನೆಟ್ಟಿಗರು




Leave a Comment: