ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಸುದ್ದಿಗಳು News

Posted by vidyamaana on 2024-03-23 15:52:34 | Last Updated by Vidyamaana on 2024-03-23 15:52:34

Share: | | | | |


ತುಮಕೂರಿನಲ್ಲಿ ಮೂವರಿದ್ದ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೊಂದು ರೋಚಕ ಟ್ವಿಸ್ಟ್!

ಬೆಳ್ತಂಗಡಿ : ತುಮಕೂರಿನಲ್ಲಿ ಕಾರಿಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ ಕಾರಿನೊಳಗಿದ್ದ ಮೂವರು ಸಾವನ್ನಪ್ಪಿದ ಸಂಬಂಧಿಸಿದಂತೆ ಮೂವರು ಸೇರಿ 50 ಲಕ್ಷ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಕುಟುಂಬ ಸದಸ್ಯರು ಕೋರಾ ಪೊಲೀಸರ ವಿಚಾರಣೆ ವೇಳೆ ಮಾಹಿತಿ ನೀಡಿದ್ದಾರೆ.

*💥Whats App Group ಗೆ ಸೇರಲು ಕ್ಲಿಕ್ ಮಾಡಿ

*ಹಣ ತೆಗೆದುಕೊಂಡು ಹೋದ ವಿಚಾರ*:  ಇನ್ನೂ ಕಾರಿನಲ್ಲಿ ಹೋಗುವಾಗ ಮದಡ್ಕದ ಇಸಾಕ್ ಉಜಿರೆಯಲ್ಲಿದ್ದ ಸ್ವಂತ ಮನೆಯನ್ನು ಮಾರಾಟ ಮಾಡಿದ ಹಣ ಮತ್ತು ಮಗಳ ಚಿನ್ನವನ್ನು ಅಡವಿಟ್ಟು ಸುಮಾರು 35 ಲಕ್ಷ ಹಣವನ್ನು ತೆಗೆದುಕೊಂಡು ಹೋಗಿದ್ದರು ಎಂದು ಇಸಾಕ್ ಪತ್ನಿ ಕೋರಾ ಪೊಲೀಸ್ ಠಾಣೆಯಲ್ಲಿ ಮಾ.23 ರಂದು ಪೊಲೀಸ್ ವಿಚಾರಣೆ ವೇಳೆ ಹೇಳಿಕೆಯನ್ನು ನೀಡಿದ್ದಾರೆ. ಇನ್ನೂ ಶಿರ್ಲಾಲು ಸಿದ್ದಿಕ್ ಮತ್ತು ಟಿ.ಬಿ.ಕ್ರಾಸ್ ಸಾಹುಲ್ ಹಮೀದ್ ಕೂಡ ಸ್ನೇಹಿತರ ಮೂಲಕ ಪಡೆದ ಸುಮಾರು 15 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ತೆಗೆದುಕೊಂಡು ಹೋಗಿದ್ದರು ಎಂದು ಮನೆಯವರು ಹೇಳಿಕೆ ನೀಡಿದ್ದಾರೆ. ಒಟ್ಟು ಮೂವರ ಬಳಿ 50 ಲಕ್ಷಕ್ಕೂ ಮಿಕ್ಕಿ ಹಣ ತುಮಕೂರು ಹೋಗುವಾಗ ಇತ್ತು ಎನ್ನಲಾಗಿದೆ.

ತುಮಕೂರಿಗೆ ಕಳೆದ ಹನ್ನೊಂದು ದಿನದ ಹಿಂದೆ ವ್ಯವಹಾರ ಸಂಬಂಧ ಮದಡ್ಕದ ರಫೀಕ್ ಎಂಬವರ ಮಾಲೀಕತ್ವದ ಎಸ್ ಪ್ರೆಸ್ ಕಾರಿನಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಟಿ.ಬಿ.ಕ್ರಾಸ್ ನಿವಾಸಿ ಆಟೋ ಚಾಲಕ ಸಾಹುಲ್ ಹಮೀದ್(45) , ಕುವೆಟ್ಟು ಗ್ರಾಮದ ಮದಡ್ಕ ನಿವಾಸಿ ಇಸಾಕ್(56) , ಶಿರ್ಲಾಲು ಗ್ರಾಮದ ಸಿದ್ದಿಕ್(34) ಮೂವರು ಬಾಡಿಗೆ ಮಾಡಿಕೊಂಡು ಹೋಗಿದ್ದರು ಎಂದು ಹೇಳಲಾಗಿದೆ.

ಮೂವರು ಕೂಡ ನಕಲಿ ಚಿನ‌್ನದ ದಂಧೆಯ ಆಸೆಗೆ ಬಲಿಯಾಗಿದ್ದಾರೆ ಅನ್ನೋದು ಪ್ರಾಥಮಿಕ ವಿಚಾರಣೆ ವೇಳೆ ಗೊತ್ತಾಗಿದೆ. ನಮ್ಮ ಜಾಗದಲ್ಲಿ ಕೃಷಿ ಮಾಡುವಾಗ ಚಿನ್ನದ ಹಂಡೆ ಸಿಕ್ಕಿದೆ ಕಡಿಮೆ ಚಿನ್ನವನ್ನು ಬೆಲೆಗೆ ನೀಡುತ್ತೇವೆ ಎಂದು ಸುಳ್ಳು ಹೇಳಿ ಮೂವರನ್ನು ಕರೆಸಿ ಹಣ ದೋಚುವ  ಪ್ಲ್ಯಾನ್ ಮಾಡಿ ಕರೆಸಿಕೊಂಡು ಮಾ.21 ರಂದು ರಾತ್ರಿ ನಂತರ ಕೈಕಾಲು ಕಟ್ಟಿ ಹಾಕಿ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿ ನಂತರ ಹಣವನ್ನು ದೋಚಿದ್ದಾರೆ ಎನ್ನಲಾಗಿದೆ. ಇನ್ನೂ ಪ್ರಕರಣ ಸಂಬಂಧ ಪ್ರಮುಖ ರೂವಾರಿ ತುಮಕೂರಿನ ಸ್ವಾಮಿ ಸೇರಿ ಆರು ಜನರನ್ನು ಮೊಬೈಲ್ ಕಾಲ್ ಡಿಟೈಲ್ಸ್ ಮೂಲಕ  ಕಾರ್ಯಾಚರಣೆ ನಡೆಸಿ ಮಾ.22 ರಂದು ರಾತ್ರಿ ವಶಕ್ಕೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಕೋರಾ ಪೊಲೀಸ್ ಠಾಣೆಯಲ್ಲಿ ಮಾ.22 ರಂದು ಸುಮೊಟೋ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬೆಂಕಿಗಾಹುತಿಯಾದ ಕಾರನ್ನು ಕೋರಾ ಪೊಲೀಸ್ ಠಾಣೆಗೆ ತೆಗೆದುಕೊಂಡು ಬಂದಿದ್ದು. ಮೂವರ ಶವ ಸರಕಾರಿ ಆಸ್ಪತ್ರೆಯಲ್ಲಿ ಡಿಎನ್ಎ ಪರೀಕ್ಷೆ ಮಾಡಿದ ಬಳಿಕ ಮುಂದಿನ ಗುರುವಾರ ಅಥವಾ ಶುಕ್ರವಾರ ಮೃತದೇಹವನ್ನು ಗುರುತು ಪತ್ತೆಯಾದ ಬಳಿಕ ಅವರ ಕಟುಂಬ ಸದಸ್ಯರಿಗೆ ನೀಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.


 Share: | | | | |


ಉದ್ಯಮಿ ಪರ್ಲಡ್ಕ ಮೊಹಮ್ಮದ್ ಹಾರೀಸ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Posted by Vidyamaana on 2023-05-28 01:51:41 |

Share: | | | | |


ಉದ್ಯಮಿ ಪರ್ಲಡ್ಕ  ಮೊಹಮ್ಮದ್  ಹಾರೀಸ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

ಪುತ್ತೂರು:ಪರ್ಲಡ್ಕ ನಿವಾಸಿಯಾಗಿದ್ದು ಸೌದಿ ಅರೇಬಿಯಾದಲ್ಲಿ ಉದ್ಯಮಿಯಾಗಿದ್ದ ಮೊಹಮ್ಮದ್ ಹಾರೀಸ್ (43ವ)ರವರು ಮೇ 27ರಂದು ರಾತ್ರಿ ಸೌದಿ ಅರೇಬಿಯಾ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು.


ಪುತ್ತೂರು ನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ, ದರ್ಬೆ ನಿವಾಸಿಯಾಗಿದ್ದ ದಿ.ಮೊಹಮ್ಮದ್ ಹಟ್ಟಾ ಅವರ ಸಹೋದರ, ಸಿಂಡಿಕೇಟ್ ಬ್ಯಾಂಕ್‌ನ ನಿವೃತ್ತ ಉದ್ಯೋಗಿ ಪರ್ಲಡ್ಕದ ಪಿ. ಅಬ್ದುಲ್ಲಾ ಹಾಜಿ ದರ್ಬೆ ಎಂಬವರ ಪುತ್ರ ಮೊಹಮ್ಮದ್ ಹಾರೀಸ್ ಅವರು ಹಲವು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ ಸ್ವಂತ ಉದ್ಯಮ ಮಾಡಿಕೊಂಡು ಪತ್ನಿ ಮಕ್ಕಳು ಸಮೇತರಾಗಿ ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ವಾಸ್ತವ್ಯ ಹೊಂದಿದ್ದರು. ಮೇ 27ರಂದು ರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತದಿಂದ ನಿಧನರಾದರು.ಮೃತರು ತಂದೆ , ತಾಯಿ, ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಮತ್ತು ಓರ್ವ ಸಹೋದರ, ಸಹೋದರಿಯನ್ನು ಅಗಲಿದ್ದಾರೆ.

‘ನೆಲ್ಯಾಡಿ ಧೂಳುಮಯ’ ಹೆದ್ದಾರಿ ಕಾಮಗಾರಿ ಅವಾಂತರ; ಜನರಿಗೆ ಕಾಡುತ್ತಿದೆ ಆರೋಗ್ಯ ಸಮಸ್ಯೆ

Posted by Vidyamaana on 2023-01-12 12:34:12 |

Share: | | | | |


‘ನೆಲ್ಯಾಡಿ ಧೂಳುಮಯ’ ಹೆದ್ದಾರಿ ಕಾಮಗಾರಿ ಅವಾಂತರ; ಜನರಿಗೆ ಕಾಡುತ್ತಿದೆ ಆರೋಗ್ಯ ಸಮಸ್ಯೆ

ನೆಲ್ಯಾಡಿ: ಚತುಷ್ಪಥ ಹೆದ್ದಾರಿ ಕಾಮಗಾರಿಯಿಂದಾಗಿ ನೆಲ್ಯಾಡಿ ಪೇಟೆ ಸಂಪೂರ್ಣ ಧೂಳುಮಯಗೊಂಡಿದೆ. ದೂಳುತಿಂದು ಜನರಲ್ಲಿ ಆರೋಗ್ಯ ಸಮಸ್ಯೆ ಕಾಡಲಾರಂಭಿಸಿದ್ದು ಕೆಮ್ಮು, ಜ್ವರ, ಅಲರ್ಜಿಯಿಂದ ಶಾಲಾ ಮಕ್ಕಳು, ವರ್ತಕರು, ಗ್ರಾಮಸ್ಥರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಈಗ ದಿನದಲ್ಲಿ ಒಂದೆರಡು ಸಲ ನೀರು ಹಾಯಿಸಲಾಗುತ್ತಿದ್ದರೂ ದೂಳಿನ ಸಮಸ್ಯೆಗೆ ಮುಕ್ತಿ ಸಿಗುತ್ತಿಲ್ಲ. ಕನಿಷ್ಠ ನಾಲ್ಕೈದು ಸಲವಾದರೂ ಹೆದ್ದಾರಿಯುದ್ದಕ್ಕೂ ನೀರು ಹಾಕಬೇಕೆಂದು ಸಾರ್ವಜನಿಕರು ಒತ್ತಾಯಿಸುತ್ತಿದ್ದಾರೆ.

ಬೆಳ್ತಂಗಡಿ : ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ ಶರಣು

Posted by Vidyamaana on 2023-08-31 06:26:48 |

Share: | | | | |


ಬೆಳ್ತಂಗಡಿ : ಕಬಡ್ಡಿ ಆಟಗಾರ ಸ್ವರಾಜ್ ಆತ್ಮಹತ್ಯೆ ಶರಣು

ಬೆಳ್ತಂಗಡಿ : ಪುದುವೆಟ್ಟು ಕುಬಲ ನಿವಾಸಿ ಸ್ವರಾಜ್ (24) ರವರು ನೇಣುಬಿಗಿದು ಆತ್ಮಹತ್ಯೆ ಮಾಡಿ ಕೊಂಡ ಘಟನೆ ಆ.31 ರಂದು ಬೆಳಿಗ್ಗೆ ನಡೆದಿದೆ


ಇವರು ಪ್ರಸುತ್ತ ಧರ್ಮಸ್ಥಳದಲ್ಲಿ ವಾಸಾವಾಗಿದ್ದು ಇವರ ಹಳೆಮನೆಯಾದ ಪುದುವೆಟ್ಟುವಿನಲ್ಲಿ ಸ್ನಾನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕಬಡ್ಡಿ ಆಟದಲ್ಲಿ ಅತ್ಯುತ್ತಮ ಆಟಗಾರನಾಗಿದ್ದು , ಉಜಿರೆಯ ಸಾನಿಧ್ಯ ಖಾಸಗಿ ಕಂಪನಿ ಒಂದರಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದರು.ತಂದೆ ಸತೀಶ್, ತಾಯಿ ಸ್ವಾತಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ

ಬೆಂಗಳೂರು: ಸಹಜೀವನ ಸಾಗಿಸುತ್ತಿದ್ದ ಪ್ರೇಮಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Posted by Vidyamaana on 2023-11-07 16:34:52 |

Share: | | | | |


ಬೆಂಗಳೂರು: ಸಹಜೀವನ ಸಾಗಿಸುತ್ತಿದ್ದ ಪ್ರೇಮಿಗಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

ಬೆಂಗಳೂರು: ಕೊತ್ತನೂರು ಠಾಣೆ ವ್ಯಾಪ್ತಿಯ ಅಪಾರ್ಟ್‌ಮೆಂಟ್‌ ಸಮುಚ್ಚಯವೊಂದರ ಫ್ಲ್ಯಾಟ್‌ನಲ್ಲಿ ಬೆಂಕಿ ಹಚ್ಚಿಕೊಂಡು ಸೌಮಿನಿ ದಾಸ್ (20) ಹಾಗೂ ಅಬಿಲ್ ಅಬ್ರಾಹಂ (29) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.


‘ಪಶ್ಚಿಮ ಬಂಗಾಳದ ಸೌಮಿನಿ ದಾಸ್ ಹಾಗೂ ಕೇರಳದ ಅಬಿಲ್, ಪರಸ್ಪರ ಪ್ರೀತಿಸುತ್ತಿದ್ದರೆಂದು ಗೊತ್ತಾಗಿದೆ. ಒಂದೇ ಫ್ಲ್ಯಾಟ್‌ನಲ್ಲಿ ಸಹಜೀವನ ನಡೆಸುತ್ತಿದ್ದ ಇಬ್ಬರೂ ಭಾನುವಾರ ಸಂಜೆ ಬೆಂಕಿ ಹಚ್ಚಿಕೊಂಡು ಮೃತಪಟ್ಟಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.ವಿವಾಹಿತರಾಗಿದ್ದ ಸೌಮಿನಿ, ನರ್ಸಿಂಗ್ ವ್ಯಾಸಂಗ ಮಾಡಲು ನಗರಕ್ಕೆ ಬಂದಿದ್ದರು. ನರ್ಸಿಂಗ್ ಮುಗಿಸಿದ್ದ ಅಬಿಲ್, ಸ್ಥಳೀಯ ಏಜೆನ್ಸಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರಿಗೂ ಪರಸ್ಪರ ಪರಿಚಯವಾಗಿತ್ತು’ ಎಂದು ತಿಳಿಸಿವೆ.


‘ಮೂರು ತಿಂಗಳ ಹಿಂದೆಯಷ್ಟೇ ತಮ್ಮೂರಿಗೆ ಹೋಗಿದ್ದ ಸೌಮಿನಿ, ಪುನಃ ಬೆಂಗಳೂರಿಗೆ ವಾಪಸು ಬಂದಿದ್ದರು. ಇತ್ತೀಚೆಗೆ ಪತಿ ಜೊತೆ ಮಾತನಾಡಿದ್ದ ಅವರು, ‘ಮದುವೆಯಾದ ದಿನದಿಂದಲೂ ನೀನು ನನಗೆ ಕಿರುಕುಳ ನೀಡುತ್ತಿದ್ದಿಯಾ. ನಿನ್ನ ಜೊತೆ ನಾನು ಇರುವುದಿಲ್ಲ. ನನ್ನ ತಂಟೆಗೆ ಬರಬೇಡ. ನಾನು ಊರಿಗೂ ಬರುವುದಿಲ್ಲ’ ಎಂದಿದ್ದರೆಂದು ಹೇಳಲಾಗುತ್ತಿದೆ.’


‘ಸೌಮಿನಿ ಬಗ್ಗೆ ಅನುಮಾನಗೊಂಡಿದ್ದ ಪತಿ, ಅವರ ಬಗ್ಗೆ ವಿಚಾರಿಸಿದ್ದರು. ಅಬಿಲ್ ಜೊತೆ ಸೌಮಿನಿ ಸಹಜೀವನ ನಡೆಸುತ್ತಿದ್ದ ಸಂಗತಿ ಗೊತ್ತಾಗಿತ್ತು. ಈ ಬಗ್ಗೆ ಪತ್ನಿಯನ್ನು ತರಾಟೆಗೆ ತೆಗೆದುಕೊಂಡಿದ್ದರು. ‘ನಮ್ಮ ಪ್ರೀತಿಯ ವಿಷಯ ಬೇರೆಯವರಿಗೆ ಗೊತ್ತಾಗಿದೆ. ನಮ್ಮನ್ನು ಬದುಕಲು ಬಿಡುವುದಿಲ್ಲ’ ಎಂದು ತಿಳಿದ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.


‘ಬೆಂಕಿ ಹಚ್ಚಿಕೊಂಡಿದ್ದ ಸಂದರ್ಭದಲ್ಲಿ ಇಬ್ಬರೂ ಕೂಗಾಡಿದ್ದರು. ಸ್ಥಳೀಯರು ಸಹಾಯಕ್ಕೆ ಹೋಗಿದ್ದರು. ಅಷ್ಟರಲ್ಲೇ ಇಬ್ಬರ ದೇಹ ಬಹುಪಾಲು ಸುಟ್ಟಿತ್ತು. ಸೌಮಿನಿ ದಾಸ್ ಸ್ಥಳದಲ್ಲೇ ಮೃತಪಟ್ಟಿದ್ದರು. ಉಸಿರಾಡುತ್ತಿದ್ದ ಅಬಿಲ್ ಅವರನ್ನು ಸ್ಥಳೀಯರು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಯೇ ಅವರು ಮೃತಪಟ್ಟರು’ ಎಂದು ತಿಳಿಸಿವೆ.

Viral Video : ಬೀದಿಯಲ್ಲಿ ಶುರುವಾಗಿ ಚರಂಡಿಗೆ ತಲುಪಿದ ದಂಪತಿ ಜಗಳ, ಗಂಡನ ಸ್ಥಿತಿ ನೋಡಿ ಅಯ್ಯೋ ಎಂದ ನೆಟ್ಟಿಗರು

Posted by Vidyamaana on 2024-02-24 21:48:55 |

Share: | | | | |


Viral Video : ಬೀದಿಯಲ್ಲಿ ಶುರುವಾಗಿ ಚರಂಡಿಗೆ ತಲುಪಿದ ದಂಪತಿ ಜಗಳ, ಗಂಡನ ಸ್ಥಿತಿ ನೋಡಿ ಅಯ್ಯೋ ಎಂದ ನೆಟ್ಟಿಗರು

ಗಂಡ ಹೆಂಡತಿ ಜಗಳ ಉಂಡು ಮಲಗುವ ತನಕ ಎನ್ನುವ ಗಾದೆ ಮಾತಿದೆ. ಆದರೆ ಇತ್ತೀಚೆಗಿನ ದಿನಗಳಲ್ಲಿ ಗಂಡ ಹೆಂಡಿರ ಜಗಳ ಬೀದಿಗೆ ಬರುವುದೇ ಹೆಚ್ಚು. ನಾಲ್ಕು ಗೋಡೆಗಳ ಮಧ್ಯೆ ಇರಬೇಕಾದ ಮುನಿಸು, ಮನಸ್ತಾಪಗಳು ಬಗೆಹರಿಸಲು ಸಾಧ್ಯವಿಲ್ಲ ಎನ್ನುವ ಮಟ್ಟಿಗೆ ಬೆಳೆದು ಕೆಲವೊಮ್ಮೆ ಡೈವೋರ್ಸ್ ನೀಡುವ ಹಂತದವರೆಗೂ ತಲುಪುತ್ತದೆ.ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಗಂಡ ಹೆಂಡಿರ ಜಗಳವು ಬೀದಿಗೆ ಬಂದಿದ್ದು, ರಸ್ತೆಯಲ್ಲಿ ಇಬ್ಬರೂ ಕಿತ್ತಾಡಿಕೊಂಡಿದ್ದಾರೆ. ಕೊನೆಗೆ ಈ ಜೋಡಿಯು ಜಗಳವಾಡುತ್ತಾ ಚರಂಡಿಗೆ ಬಿದ್ದಿದ್ದು, ಅಲ್ಲಿಯೂ ಇಬ್ಬರೂ ಒಬ್ಬರಿಗೊಬ್ಬರು ಹೊಡೆದಾಡಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಮಾತ್ರ ಶಾಕ್ ಆಗಿದ್ದಾರೆ.

ಯಾವ ಸಂಸಾರದಲ್ಲಿ ಜಗಳವಿರುವುದಿಲ್ಲ ಹೇಳಿ. ಜಗಳವಿದ್ದ ಕಡೆಯಲ್ಲಿ ಪ್ರೀತಿ ಹೆಚ್ಚಿರುತ್ತದೆ ಎನ್ನುವ ಮಾತಿದೆ. ಅತಿಯಾದ ಪ್ರೀತಿ, ಸಣ್ಣ ಪುಟ್ಟ ಮುನಿಸು ಜಗಳವಿದ್ದರೆ ಸಂಸಾರವೆನ್ನುವುದು ನೋಡಲು ಚಂದ. ಆದರೆ ಈ ಜಗಳವನ್ನೇ ದೊಡ್ಡದು ಮಾಡಿದರೆ ನಾಲ್ಕು ಗೋಡೆಗೆ ಸೀಮಿತವಾಗಿರಬೇಕಾದ ಜಗಳವು ಬೀದಿಗೆ ಬರುವುದಂತೂ ಪಕ್ಕಾ. ಇಲ್ಲೊಂದು ಜೋಡಿಯೂ ಸಂಸಾರದಲ್ಲಿನ ಜಗಳವನ್ನು ಮನೆಯಿಂದ ರಸ್ತೆಗೆ ತಂದಿದ್ದು, ಅಷ್ಟೇ ಆಗಿದ್ದರೆ ಏನು ಆಗುತ್ತಿರಲಿಲ್ಲ. ಕೊನೆಗೆ ಇವರಿಬ್ಬರ ಜಗಳವು ಚರಂಡಿಯವರೆಗೂ ತಲುಪಿದೆ. ಗಂಡ ಹೆಂಡಿರ ಜಗಳದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರು ಇವರಿಬ್ಬರೂ ಹೊಡೆದಾಡುವ ರೀತಿ ಕಂಡು ಇದೇನಪ್ಪಾ ಹೀಗೆ ಎನ್ನುತ್ತಿದ್ದಾರೆ.ವಿಡಿಯೋದಲ್ಲಿ ಪತಿ ಪತ್ನಿಯರಿಬ್ಬರೂ ಮನೆಯಿಂದ ಹೊರಗಡೆ ರಸ್ತೆಯಲ್ಲಿ ಜಗಳವನ್ನು ಶುರು ಮಾಡಿದ್ದಾರೆ. ಬೈಕ್‌ನಲ್ಲಿ ತೆರಳುವಾಗ ಬೈಕ್ ಹಾಳಾಗಿದ್ದು, ಇದೇ ಇವರಿಬ್ಬರ ನಡುವಿನ ಜಗಳಕ್ಕೆ ಕಾರಣವಾಗಿರುವಂತೆ ಕಾಣುತ್ತಿದೆ. ಈ ವಿಡಿಯೋದ ಪ್ರಾರಂಭದಲ್ಲಿ ಗಂಡ ಬೈಕ್‌ ಅನ್ನು ತಳ್ಳಿಕೊಂಡು ಹೋಗುತ್ತಿದ್ದಾನೆ. ಹೀಗಿರುವಾಗ ಹೆಂಡತಿಯು ಗಂಡದ ಬೆನ್ನಿಗೆ ಜೋರಾಗಿ ಗುದ್ದುತ್ತಾಳೆ. ಅಲ್ಲಿಂದ ಜಗಳವು ಶುರುವಾಗಿದ್ದು, ಇಬ್ಬರೂ ಕಿತ್ತಾಡಿಕೊಳ್ಳಲು ಶುರು ಮಾಡಿದ್ದಾರೆ. ಹೀಗೆ ಜೋರಾಗಿ ಹೊಡೆದಾಡುತ್ತಲೇ ಇಬ್ಬರೂ ಚರಂಡಿಗೆ ಬಿದ್ದಿದ್ದಾರೆ. ಆದರೆ ಅಲ್ಲಿಯೂ ಜಗಳವೇನು ನಿಂತಿಲ್ಲ. ನಾರುತ್ತಿರುವ ಚರಂಡಿಯ ನೀರಿನಲ್ಲಿಯೂ ಈ ದಂಪತಿಗಳು ಹೊಡೆದಾಡಿಕೊಂಡಿದ್ದಾರೆ.


ವಿಡಿಯೋ ಇಲ್ಲಿದೆ ನೋಡಿ

Viral Video : ಬೀದಿಯಲ್ಲಿ ಶುರುವಾಗಿ ಚರಂಡಿಗೆ ತಲುಪಿದ ದಂಪತಿ ಜಗಳ, ಗಂಡನ ಸ್ಥಿತಿ ನೋಡಿ ಅಯ್ಯೋ ಎಂದ ನೆಟ್ಟಿಗರು


ಮಾಣಿ ಟು ಸಂಪಾಜೆ ಶೀಘ್ರವೇ ಫೋರ್ ವೇ

Posted by Vidyamaana on 2023-11-04 08:34:52 |

Share: | | | | |


ಮಾಣಿ ಟು ಸಂಪಾಜೆ ಶೀಘ್ರವೇ ಫೋರ್ ವೇ

ಪುತ್ತೂರು: ಮಾಣಿ-ಸಂಪಾಜೆ ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ೨೨೦೦ ಕೋಟಿ ರೂ ಪ್ರಸ್ತಾವನೆಯನ್ನು ಸಲ್ಲಿಸಲಾಗಿದ್ದು ಮುಂದಿನ ನಾಲ್ಕು ವರ್ಷದೊಳಗೆ ಹೆದ್ದಾರಿ ಕಾಮಗಾರಿ ಪೂರ್ಣಗೊಳ್ಳಲಿದ್ದು ಈ ಭಾಗದ ಜನತೆಯ ಬಹುವರ್ಷಗಳ ಕನಸು ನನಸಾಗುವ ಕಾಲ ಬಂದಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದ್ದಾರೆ.

ಮಾಣಿಯಿಂದ ಸಂಪಾಜೆ ತನಕ ೭೬ ಕಿ ಮೀ ರಸ್ತೆಯು ಮುಂದಿನ ದಿನಗಳಲ್ಲಿ ಚತುಷ್ಪಥ ರಸ್ತೆಯಾಗಿ ಮೇಲ್ದರ್ಜೆಗೇರಲಿದೆ. ೭೬ ಕಿ ಮಿ ರಸ್ತೆ ಕಾಮಗಾರಿಗೆ ಮೊದಲ ಹಂತದಲ್ಲಿ ೧೧೦೦ ಕೋಟಿ ರೂ ಮತ್ತು ಎರಡನೇ ಹಂತದಲ್ಲಿ ೧೧೦೦ ಕೋಟಿ ರೂ ಒಟ್ಟು ೨೨೦೦ ಕೋಟಿ ರೂ ಗಳ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಲಾಗಿದೆ.

ಕಳೇದ ಕೆಲದಿನಗಳ ಹಿಂದೆ ಚತುಷ್ಪಥ ರಸ್ತೆ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಗೆ ಭೇಟಿ ನೀಡಿ ಹೆದ್ದಾರಿ ಪ್ರಾಧಿಕಾರ ಅಧಿಕಾರಿಗಳ ಜೊತೆ ಶಾಸಕರಾದ ಅಶೋಕ್ ರೈ ಹಾಗೂ ಮಂಗಳೂರು ಸಂಸದ ನಳಿನ್‌ಕುಮಾರ್ ಕಟೀಲ್ ಮಾತುಕತೆ ನಡೆಸಿದ್ದರು. ಮಾತುಕತೆ ವೇಳೆ ಮಾಣಿಯಿಂದ ಪುತ್ತೂರು ವರೆಗೆ ಚತುಷ್ಪಥ ರಸ್ತೆ ಕಾಮಗಾರಿಯ ವಿಚಾರವೂ ಚರ್ಚೆಯಾಗಿತ್ತು. ಆ ಬಳಿಕ ಕೇಂದ್ರ ಹೆದ್ದಾರಿ ಪ್ರಾಧಿಕಾರ ರೀಜನಲ್ ಮೆನೆಜರ್ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿ ಶಾಸಕರು ಮತ್ತು ಸಂಸದರು ಚರ್ಚೆ ನಡೆಸಿದ್ದರು. ಇದೀಗ ಮಾಣಿಯಿಂದ ಸಂಪಾಜೆ ತನಕ ಚತುಷ್ಪಥ ಕಾಮಗಾರಿಗೆ ಹೆದ್ದಾರಿ ಪ್ರಾಧಿಕಾರ ಒಪ್ಪಿಕೊಂಡಿದ್ದು ಇದಕ್ಕೆ ಬೇಕಾದ ಎಲ್ಲಾ ಯೋಜನಾ ವರದಿಯನ್ನು ಸಿದ್ದಪಡಿಸಿಕೊಳ್ಳಲು ಮುಂದಾಗಿದೆ.

ಮಾಣಿಯಿಂದ ಸಂಪಾಜೆ ತನಕ ಭೂ ಒತ್ತುವರಿ ಪ್ರಕ್ರಿಯೆ, ಸೇತುವೆ ಕಾಮಗಾರಿ ಸೇರಿದಂತೆ ರಸ್ತೆ ಅಗಲೀಕರಣಕ್ಕೆ ಬೇಕಾದ ಎಲ್ಲಾ ಯೋಜನೆಗಳನ್ನು ಸಿದ್ದಪಡಿಸಲಾಗುತ್ತಿದ್ದು ಮುಂದಿನ ನಾಲ್ಕು ತಿಂಗಳೊಳಗೆ ಈ ಎಲ್ಲಾ ಪ್ರಕ್ರಿಯೆಗಳು ಪೂರ್ಣಗೊಳ್ಳಲಿದೆ. ಬಳಿಕ ಟೆಂಡರ್ ಪ್ರಕ್ರಿಯೆ ನಡೆಯಲಿದ್ದು ಮುಂದಿನ ನಾಲ್ಕು ವರ್ಷದೊಳಗೆ ಈ ಕಾಮಗಾರಿ ಪೂರ್ಣಗೊಳ್ಳಲಿದ್ದು ಮಾಣಿಯಿಂದ ಸಂಪಾಜೆ ತನಕ ಪೂರ್ಣ ಪ್ರಮಾಣದ ಚತುಷ್ಪಥ ರಸ್ತೆ ನಿರ್ಮಾಣವಾಗಲಿದೆ.


೨ ಫೈಓವರ್ ೧ ಅಂಡರ್‌ಪಾಸ್

ಬೈಪಾಸ್ ಹಾಗೂ ದರ್ಬೆಯ ಬಳಿ ಫ್ಲೈ ಓವರ್ ನಿರ್ಮಾಣವಾಗಲಿದೆ ಮತ್ತು ವಿವೇಕಾನಂದ ವಿದ್ಯಾ ಸಂಸ್ಥೆಯ ಬಳಿ ಅಂಡರ್‌ಪಾಸ್ ನಿರ್ಮಾಣವಾಗಲಿದೆ. ವಿದ್ಯಾರ್ಥಿಗಳ ಹಿತ ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಅಂಡರ್‌ಪಾಸ್ ನಿರ್ಮಾಣ ಮಾಡಲಾಗುತ್ತದೆ. ಉಳಿದಂತೆ ಮಾಣಿಯಿಂದ ಸಂಪಾಜೆ ತನಕ ಅಗತ್ಯ ಇರುವ ಕಡೆಗಳಲ್ಲಿ ಫ್ಲೈ ಓವರ್ ಮತ್ತು ಅಂಡರ್ ಪಾಸ್ ಕಾಮಗಾರಿ ನಡೆಯಲಿದೆ.


ಕಿ ಮೀ ಕಡಿತವಾಗಲಿದೆ

ಮಾಣಿಯಿಂದ ಸಂಪಾಜೆ ತನಕ ಚತುಷ್ಪಥ ರಸ್ತೆ ನಿರ್ಮಾಣವಾದಲ್ಲಿ ರಸ್ತೆಯು ನೇರವಾಗಿ ನಿರ್ಮಾಣವಾಗಲಿರುವ ಕಾರಣ ಕಿ ಮಿ ಅಂತರವೂ ಕಡಿಮೆಯಾಗುವ ಸಾಧ್ಯತೆ ಇದೆ.



ಶಾಸಕನಾಗಿ ಆಯ್ಕೆಯಾದ ಮೊದಲ ದಿನದಂದೇ ಚತುಷ್ಪಥ ರಸ್ತೆಯ ಕನಸು ಕಂಡಿದ್ದೆ. ಆ ಬಳಿಕ ನಾನು ಅದರ ಬಗ್ಗೆ ಮಾಹಿತಿ ಕಲೆ ಹಾಕಲು ಹೆದ್ದಾರಿ ಪ್ರಾಧಿಕಾರದ ದೆಹಲಿ ಮತ್ತು ಬೆಂಗಳೂರು ಕಚೇರಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಚರ್ಚಿಸಿದ್ದೆ. ಇದೀಗ ನಾನು ಮತ್ತು ಸಂಸದ ನಳಿನ್‌ಕುಮಾರ್ ಕಟೀಲ್ ಕಾಮಗಾರಿಗೆ ಪ್ರಸ್ತಾವನೆಯನ್ನು ಕೇಂದ್ರ ಸರಕಾರಕ್ಕೆ ಸಲ್ಲಿಸಿದ್ದೇವೆ. ಪ್ರಸ್ತಾವನೆಗೆ ಕೇಂದ್ರದ ಒಪ್ಪಿಗೆ ದೊರಕಿದ್ದು ಮುಂದೆ ಯೋಜನಾ ವರದಿ ಸಿದ್ದಗೊಂಡ ಬಳಿಕ ಕಾಮಗಾರಿ ಪ್ರಕ್ರಿಯೆ ಪ್ರಾರಂಭಗೊಳ್ಳಲಿದೆ. ಒಟ್ಟು ಎರಡು ಹಂತದಲ್ಲಿ ೨೨೦೦ ಕೋಟಿ ರೂ ಅನುದಾನಕ್ಕೆ ಪ್ರಸ್ತಾವನೆಯನ್ನು ಕಳುಹಿಸಲಾಗಿದ್ದು ಸುಮಾರು ೩೦೦೦ ಕೋಟಿ ರೂ ವೆಚ್ಚದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳ್ಳಲಿದೆ. ಅಭಿವೃದ್ದಿಗಾಗಿ ನಾನು ಮತ್ತು ನಳಿನ್‌ಕುಮಾರ್ ಕಟೀಲ್ ಜೊತೆಯಾಗಿ ಈ ವಿಚಾರದಲ್ಲಿ ಕೆಲಸ ಮಾಡಿದ್ದೇವೆ . ಅಭಿವೃದ್ದಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಜನತೆಯ ಬಹುವರ್ಷಗಳ ಕನಸು ಮತ್ತು ನನ್ನ ಕನಸು ನನಸಾಗಿದ್ದು ಇದು ಬಹಳ ಸಂತೋಷದ ವಿಚಾರವಾಗಿದೆ


ಅಶೋಕ್ ರೈ, ಶಾಸಕರು ಪುತ್ತೂರು



Leave a Comment: