ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ ಸದನದಲ್ಲಿ ತುಳುವಿನಲ್ಲೇ ವಿಚಾರಮಂಡಿಸಿದ ಶಾಸಕ ಅಶೋಕ್ ರೈ

ಸುದ್ದಿಗಳು News

Posted by vidyamaana on 2024-07-24 16:44:22 |

Share: | | | | |


ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಿ ಸದನದಲ್ಲಿ ತುಳುವಿನಲ್ಲೇ ವಿಚಾರಮಂಡಿಸಿದ ಶಾಸಕ ಅಶೋಕ್ ರೈ

ಪುತ್ತೂರು: ತುಳು ಭಾಷೆಯನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಸೇರಿಸಬೇಕು ಎಂದು ಆಗ್ರಹಿಸಿ ಪುತ್ತೂರು ಶಾಸಕರಾದ ಅಶೋಕ್ ರೈಯವರು ತುಳು ಭಾಷೆಯಲ್ಲೇ ವಿಧಾನಸಭಾ ಅಧಿವೇಶನದಲ್ಲಿ ವಿಚಾರವನ್ನು ಮಂಡಿಸಿದ್ದು , ಶಾಸಕರ ಬೇಡಿಕೆಗೆ ಸರಕಾರದಿಂದ ಗಟ್ಟಿ ಭರವಸೆ ದೊರೆತಿದ್ದು ಮುಂದಿನ ದಿನಗಳಲ್ಲಿ ನಿಮ್ಮ ಬೇಡಿಕೆ ಈಡೇರಲಿದೆ ಎಂದು ಸರಕಾರ ಭರವಸೆಯನ್ನು ನೀಡಿದೆ.

ತುಳುವಿಗೆ ೨೦೦೦ ವರ್ಷದ ಇತಿಹಾಸವಿದೆ

ತುಳುಭಾಷೆಗೆ ಎರಡು ಸಾವಿರ ವರ್ಷದ ಇತಿಹಾಸವಿದೆ. ತುಳು ಮಾತನಾಡುವ ಮಂದಿ ವಿಶ್ವದೆಲ್ಲೆಡೆ ಇದ್ದಾರೆ. ತುಳು ಭಾಷೆಗೆ ಮಾನ್ಯತೆ ಸಿಗಬೇಕು ಎಂದು ಅನೇಕ ವರ್ಷಗಳಿಂದ ಹೋರಾಟಗಳು ನಡೆಯುತ್ತಿದೆ. ಎಟಂನೇ ಪರಿಚ್ಚೇಧಕ್ಕೆ ಸೇರ್ಪಡೆ ಮಾಡಬೇಕು ಎಂಬ ಬೇಡಿಕೆ ಇನ್ನೊಂದು ಕಡೆ ಇದೆ ಇದೆಲ್ಲದರ ನಡುವೆ ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂಬ ಆಗ್ರಹವನ್ನು ಶಾಸಕನಾಗಿ ಕಳೆದ ಒಂದು ವರ್ಷದಿಂದ ಮಾಡುತ್ತಿದ್ದೇನೆ.

೧೯೯೪ ರಲ್ಲಿ ವೀರಪ್ಪ ಮೊಯಿಲಿಯವರು ಮುಖ್ಯಮಂತ್ರಿಯಾಗಿದ್ದ ವೇಳೆ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದ್ದಾರೆ, ೨೦೦೭ ರಲ್ಲಿ ಕೇರಳ ಸರಕಾರ ತುಳು ಅಕಾಡೆಮಿಯನ್ನು ಸ್ಥಾಪನೆ ಮಾಡಿದೆ, ಆಕಾಶವಾಣಿಯಲ್ಲಿ ೧೯೭೬ ರಿಂದ ಆಕಾಶವಾಣಿಯಲ್ಲಿ ತುಳು ಕಾರ್ಯಕ್ರಮ ಪ್ರಸಾರವಾಗುತ್ತಿದೆ, ಅಮೇರಿಕಾದಲ್ಲಿ ಸಿಆರ್ ಎಕ್ಸಾಮ್‌ಗೆ ಅರ್ಜಿ ನಮೂನೆಯಲ್ಲೂ ವಿಶ್ವದ ೧೨೨ ಭಾಷೆಯ ಜೊತೆಗೆ ತುಳುವಿಗೆ ಮಾನ್ಯತೆ ನೀಡಲಾಗಿದೆ, ಗೂಗಲ್ ಸಂಸ್ಥೆಯವರು ತರ್ಜುಮೆ ಮಾಡಬಲ್ಲ ಭಾಷೆಗಳ ಪಟ್ಟಿಯಲ್ಲಿ ತುಳುವನ್ನು ಸೇರ್ಪಡೆ ಮಾಡಿದ್ದಾರೆ. ಇಷ್ಟೆಲ್ಲಾ ಇರುವಾಗ ನಮ್ಮ ರಾಜ್ಯದಲ್ಲಿ ತುಳುವನ್ನು ಅದಿಕೃತ ಭಾಷೆಯನ್ನಾಗಿ ಘೋಷಣೆ ಮಾಡಬೇಕು ಎಂದು ಮನವಿ ಮಾಡಿದರು.

ಮೂರು ರಾಜ್ಯಗಳಿಗೆ ಅಧ್ಯಯನ ತಂಡ ಕಳಿಸಿದ್ದೇನೆ

ಬಿಹಾರ, ಪಶ್ಚಿಮಬಂಗಾಳ ಮತ್ತು ಆಂದ್ರಕ್ಕೆ ವಿಶೇಷ ಪ್ರತಿನಿಧಿಯನ್ನು ತನ್ನ ಸ್ವಂತ ಖರ್ಚಿನಲ್ಲಿ ಕಳಿಸಿದ್ದೇನೆ. ಈ ಮೂರು ರಾಜ್ಯಗಳಲ್ಲಿ ಸ್ಥಳೀಯ ಭಾಷೆಯನ್ನು ಎರಡನೇ ಅಧಿಕೃತ ಭಾಷೆಯನ್ನಾಗಿ ಯಾವ ಆಧಾರದಲ್ಲಿ ಘೋಷಣೆ ಮಾಡಿದ್ದಾರೆ ಎಂಬುದನ್ನು ಅಧ್ಯಯನ ನಡೆಲಲಾಗಿದೆ. ಆಂದ್ರದಿಂದ ವರದಿಯನ್ನು ತರಿಸಿದ್ದೇನೆ.. ಈ ವರದಿಯನ್ನು ಸರಕಾರದ ಮುಂದೆ ಇಡಲಿದ್ದು ಅದರ ಆಧಾರದಲ್ಲಿ ಕರ್ನಾಟಕದಲ್ಲಿ ತುಳುವನ್ನು ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡಲು ಸಹಕಾರಿಯಾಗಲಿದೆ ಎಂಬ ಕಾರಣಕ್ಕೆ ನಾನು ಸ್ವಂತ ಖರ್ಚಿನಲ್ಲೇ ಅಧ್ಯಯನ ತಂಡವನ್ನು ಮೂರು ರಾಜ್ಯಗಳಿಗೆ ಕಳಿಸಿದ್ದೇನೆ ಎಂದು ಶಾಸಕ ಅಶೋಕ್ ರೈ ತಿಳಿಸಿದರು.

ವಿಶ್ವದಲ್ಲೇ ತುಳವರಿದ್ದಾರೆ, ತುಳುವರು ಎಲ್ಲರನ್ನೂ ಪ್ರೀತಿಯಿಂದ ಕಾಣುತ್ತಾರೆ.


ನಿಕ್ಲು ಗಲಾಟೆ ಮಲ್ಪೊಡ್ಚಿ ಕುಲ್ಲುಲೆ ಮಾರ್ರೆ

ಪುತ್ತೂರು ಶಾಸಕ ಅಶೋಕ್ ರೈಯವರು ಸದನದಲ್ಲಿ ತುಳು ಭಾಷೆಯಲ್ಲಿ ಮಾತನಾಡುವ ವೇಳೆ ಮಧ್ಯದಲ್ಲಿ ಮಾತನಾಡಿದ ಮಂಗಳೂರು ಶಾಸಕ ವೇದವ್ಯಾಸ ಕಾಮತ್‌ರಲ್ಲಿ ಈರ್ ಬೊಕ್ಕ ಪಾತೆರ‍್ಲೆ , ಇತ್ತೆ ಯಾನ್ ಪಾತರೊಂದುಲ್ಲೆ ಎಂದು ಶಾಸಕ ಅಶೋಕ್ ರೈ ವೇದವ್ಯಾಸ ಕಾಮತರಿಗೆ ಹೇಳಿದಾಗ ಮಧ್ಯಪ್ರವೇಶ ಮಾಡಿದ ಸಭಾಪತಿ ಯು ಟಿ ಖಾದರ್ ನಿಕ್ಲು ಗಲಾಟೆ ಮಲ್ಪೊಡ್ಚಿ ಮಾರ್ರೆ ಈರ್ ಕುಲ್ಲುಲೆ ಎಂದು ಶಾಸಕ ವೇದವ್ಯಾಸ ಕಾಮತರಿಗೆ ಕುಳಿತುಕೊಳ್ಳಲು ಹೇಳಿದರು.

 ಇದೇನು ಮಂಗಳೂರು ಅಧಿವೇಶನವಾ: ಆರ್ ಅಶೋಕ್

ಸದನದಲ್ಲಿ ಶಾಸಕ ಅಶೋಕ್ ರೈ ಮತ್ತು ಸಭಾಪತಿ ಯು ಟಿ ಖಾದರ್ ರವರು ತುಳುವಿನಲ್ಲಿ ಮಾತನಾಡುತ್ತಿದ್ದ ವೇಳೆ ಎದ್ದು ನಿಂತ ವಿರೋಧ ಪಕ್ಷದ ನಾಯಕ ಆರ್ ಆಶೋಕ್ ಇದೇನು ಮಂಗಳೂರು ಅಧಿವೇಶಧನವಾ? ಎಂದು ನಗುತ್ತಲೇ ಹೇಳಿದರು. ಈ ವೇಳೆ ಮಾತನಾಡಿದ ಶಾಸಕ ಅಶೋಕ್ ರೈಯವರು ವಿರೋಧ ಪಕ್ಷದ ನಾಯಕರಾದ ಆರ್ ಆಶೋಕ್ ರವರೇ ನಾವು ತುಳುವಿನಲ್ಲಿ ಮಾತನಾಡಿದ್ದನ್ನು ಕನ್ನಡದಲ್ಲಿ ಹೇಳುತ್ತೇನೆ. ನೀವು ನಮ್ಮ ಹೋರಾಟಕ್ಕೆ , ನಮ್ಮ ಬೇಡಿಕೆಗೆ ಬೆಂಬಲವನ್ನು ನೀಡಬೇಕು, ಇಡೀ ಸದನ ನಮ್ಮ ನಿಲುವಿಗೆ ಬೆಂಬಲ ನೀಡಬೇಕು ಅ ಮೂಲಕ ತುಳು ಭಾಷೆಗೆ ಸರಕಾರದಿಂದ ಮಾನ್ಯತೆ ದೊರೆಯುವಂತಾಗಲಿ ಇದಕ್ಕೆ ಎಲ್ಲರ ಸಹಕಾರವನ್ನು ಕೋರಿದರು. ತುಳುವಿಗೆ ಲಿಪಿ ಇದೆ, ವಿಶ್ವದಲ್ಲೆಡೆ ತುಳು ಮಾತನಾಡುವ ಮಂದಿ ಇದ್ದಾರೆ ಎಂದು ಹೇಳಿದ ಶಾಸಕ ಅಶೋಕ್ ರೈಯವರು ಸಭಾಧ್ಯಕ್ಷೆರೇ ಈರ್ ಸಪೋರ್ಟು ಮಲ್ಪೊಡು, ಈರ್‌ನ ಸಹಕಾರ ಎಂಕ್ಲೆಗ್ ಬೋಡು ಎಂದು ಮನವಿ ಮಾಡಿದರು.

ಅಶೋಕ್ ರೈಗೆ ಅಭಿನಂದನೆ ಸಲ್ಲಿಸಿದ ವೇದವ್ಯಾಸ ಕಾಮತ್

ಸದನದಲ್ಲಿ ಮಾತನಾಡಿದ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ತುಳು ವಿಚಾರದಲ್ಲಿ ಪ್ರಾರಂಭದಿಂದಲೇ ಸರಕರದ ಗಮನಸೆಳೆದ ಪುತ್ತೂರು ಶಾಸಕರಾದ ಅಶೋಕ್ ರೈಯವರಿಗೆ ಅಭಿನಂದನೆ ಸಲ್ಲಿಸುವುದಾಗಿ ಸಭೆಯಲ್ಲಿ ತಿಳಿಸಿದರು.

ನಿಮ್ಮ ಕಾಳಜಿಗೆ ಅಭಿನಂದನೆ; ಸಚಿವ ಖರ್ಗೆ

ತನ್ನ ಸ್ವಂತ ಖರ್ಚಿನಲ್ಲಿ ಅಧ್ಯಯನ ತಂಢವನ್ನು ಮೂರು ರಾಜ್ಯಕ್ಕೆ ಕಳುಹಿಸುವ ಮೂಲಕ ತನ್ನ ಊರಿನ ಮಾತೃಭಾಷೆಯನ್ನು ರಾಜ್ಯದ ಅಧಿಕೃತ ಭಾಷೆಯನ್ನಾಗಿ ಮಡಬೇಕು ಎನ್ನುವ ನಿಮ್ಮ ಕಾಳಜಿಗೆ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಪ್ರಿಯಾಂಕ ಖರ್ಗೆ ಶಾಸಕ ಅಶೋಕ್ ರೈಯವರಿಗೆ ಅಭಿನಂದನೆ ಸಲ್ಲಿಸಿದರು. ಮಾತೃಭಷೆಯ ಮೇಲೆ ಎಲ್ಲರಿಗೂ ಪ್ರೀತಿ ಇರುತ್ತದೆ ಆದರಲ್ಲೂ ಅಶೋಕ್ ರೈಯವರು ಈವಿಚಾರದಲ್ಲಿ ಒಂದು ಹಜ್ಜೆ ಮುಂದೆ ಇದ್ದಾರೆ ಇದು ಅಭಿನಂದನಾರ್ಹ ಎಂದು ಸಚಿವರು ಸಭೆಯಲ್ಲಿ ಹೇಳಿದರು.

 ಖಂಡಿತವಾಗಿಯೂ ಬೇಡಿಕೆ ಈಡೇರಲಿದೆ: ಪ್ರಿಯಾಂಕ ಖರ್ಗೆ

ಡಾ. ಮೋಹನ್ ಆಳ್ವರ ನೇತೃತ್ವದ ಸಮಿತಿಯ ವರದಿಯಲ್ಲಿ ಸಾಧ್ಯವಿದೆ ಎಂಬುದರ ಬಗ್ಗೆ ವರದಿ ನೀಡಲಾಗಿದೆ.. ತನ್ನ ಸ್ವಂತ ಖರ್ಚಿನಲ್ಲಿ ತಂಡವನ್ನು ಕಳುಹಿಸಿ ಅಧ್ಯಯನ ನಡೆಸಿದ ಶಾಸಕ ಅಶೋಕ್ ರೈಯವರ ಕಾಳಜಿಯನ್ನು ಮೆಚ್ಚಲೇಬೇಕು. ತುಳು ಭಾಷೆ, ಅದರ ಸಂಸ್ಕೃತಿ, ಅದರ ಸೌಂದರ್ಯ, ಪ್ರಾಚೀನತೆ, ಎಲ್ಲವೂ ಗೌರವದಿಂದ ಕೂಡಿದೆ. ಸರಕಾರದ ಮುಂದೆ ಈ ಪ್ರಸ್ತಾಪ ಇದೆ. ತುಳುವಿಗೆ ರಾಜ್ಯದಲ್ಲಿ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವಲ್ಲಿ ಸರಕಾರಕ್ಕೆ ಮುತುವರ್ಜಿ ಇದೆ.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರ ಪರವಾಗಿ ಮಾತನಾಡಿದ ಸಚಿವ ಪ್ರಿಯಾಂಕ ಖರ್ಗೆ ಸಭೆಗೆ ತಿಳಿಸಿದರು. ವೈಯುಕ್ತಿಕವಾಗಿಯೂ ಈ ಪ್ರಸ್ತಾಪಕ್ಕೆ ನನ್ನ ಬೆಂಬಲ ಇದೆ ಎಂದು ಸಚಿವರು ಹೇಳಿದರು.

ಸಚಿವರ ಸಭೆ ಕರೆದು ತೀರ್ಮಾನಿಸಿ: ಸಭಾಪತಿ

ಈ ವಿಚಾರದಲ್ಲಿ ಸರಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಸಚಿವರನ್ನೊಳಗೊಂಡಂತೆ ಆ ಭಾಗದ ಶಾಸಕರ ಸಭೆಯನ್ನು ಕರೆದು ತೀರ್ಮಾನ ಕೈಗೊಳ್ಳುವಂತೆ ಸಭಾಪತಿ ಯು ಟಿ ಖಾದರ್ ರವರು ಸಚಿವ ಪ್ರಿಯಾಂಕ ಖರ್ಗೆ ಅವರಿಗೆ ಸೂಚನೆಯನ್ನು ನೀಡಿದರು.

ಎರಡನೇ ಬಾರಿಗೆ ತುಳುವಿನಲ್ಲಿ ಮಾತು

ಶಾಸಕ ಅಶೋಕ್ ರೈಯವರು ತಾನು ಶಾಸಕನಾಗಿ ಮೊದಲ ಅಧಿವೇಶನದಲ್ಲೇ ತುಳುವಿನಲ್ಲಿ ಮಾತನಾಡಿದ್ದರು. ಈ ವಿಚಾರ ಅತೀ ಹೆಚ್ಚು ವೈರಲ್ ಆಗಿತ್ತು. ಅಧಿವೇಶನದ ಇತಿಹಾಸದಲ್ಲೇ ಮೊದಲ ಬಾರಿಗೆ ತುಳುವಿನಲ್ಲಿ ಮಾತನಾಡುವ ಮೂಲಕ ತುಳುವನ್ನು ವಿಶ್ವಕ್ಕೆ ಪರಿಚಯಿಸುವ ಕೆಲಸವನ್ನು ಮಾಡಿದ್ದರು. ಇದೀಗ ಎರಡನೇ ಬಾರಿಗೆ ತುಳುವಿನಲ್ಲಿ ಅಧಿವೇಶನದಲ್ಲಿ ಮಾತನಾಡಿರುವುದು ತುಳು ಭಾಷೆಗೆ ಸಿಕ್ಕ ಮಾನ್ಯತೆ ಎಂದೇ ಹೇಳಬಹುದು

 Share: | | | | |


ಪತಿ ಮೇಲಿನ ಸಿಟ್ಟಿಗೆ ಹೆತ್ತ ಮಗುವನ್ನು ಮೊಸಳೆ ಬಾಯಿಗೆ ಹಾಕಿದ ಪತ್ನಿ

Posted by Vidyamaana on 2024-05-05 12:03:40 |

Share: | | | | |


ಪತಿ ಮೇಲಿನ ಸಿಟ್ಟಿಗೆ ಹೆತ್ತ ಮಗುವನ್ನು ಮೊಸಳೆ ಬಾಯಿಗೆ ಹಾಕಿದ ಪತ್ನಿ

 ಕಾರವಾರ,ಮೇ.5- ಗಂಡ-ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಎಂಬ ಗಾದೆ ಮಾತು ಇಲ್ಲಿ ಅಕ್ಷರಶಃ ನಿಜವಾಗಿದೆ.ದಂಪತಿ ನಡುವಿನ ಜಗಳದಿಂದ ಸಿಟ್ಟಿಗೆದ್ದ ತಾಯಿ ಹೆತ್ತ ಕಂದಮ್ಮನನ್ನು ಮೊಸಳೆ ಬಾಯಿಗೆ ಎಸೆದಿರುವ ಹೃದಯ ವಿದ್ರಾವಕ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಆಲಮಡ್ಡಿಯಲ್ಲಿ ನಡೆದಿದೆ.ವಿನೋದ (6) ಮೊಸಳೆ ಬಾಯಿಗೆ ಸಿಲುಕಿ ಮೃತಪಟ್ಟ ಬಾಲಕ.ಸಾವಿತ್ರಿ ಹಾಗೂ ರವಿಕುಮಾರ್‌ ದಂಪತಿ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ತಾರಕಕ್ಕೇರಿದ್ದು, ಸಿಟ್ಟಿಗೆದ್ದ ಸಾವಿತ್ರಿ ತನ್ನ ಮಗನನ್ನು ಮನೆಯ ಸಮೀಪವಿರುವ ಮೊಸಳೆಗಳಿದ್ದ ನಾಲೆಗೆ ಎಸೆದಿದ್ದಾಳೆ.

ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಗಂಡನ ಕುತ್ತಿಗೆ ಹಿಸುಕಿ ಹತ್ಯೆ

Posted by Vidyamaana on 2024-08-11 14:32:19 |

Share: | | | | |


ಅಕ್ರಮ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜೊತೆ ಸೇರಿ ಪತ್ನಿಯಿಂದಲೇ ಗಂಡನ ಕುತ್ತಿಗೆ ಹಿಸುಕಿ ಹತ್ಯೆ

ಬೆಂಗಳೂರು : ಈ ಅಕ್ರಮ ಸಂಬಂಧ ಒಂದು ರೀತಿಯ ರೋಗವಾಗಿದೆ. ಅದು ಯಾವ ಮಟ್ಟಕ್ಕೆ ಅಂದರೆ ಸ್ವಂತ ಗಂಡನನ್ನೆ ಕೊಲ್ಲವಷ್ಟು. ಅದಕ್ಕೆ ಊದಾರಣೆಯಾಗಿ ಬೆಂಗಳೂರಿನಲ್ಲಿ ನಡೆದಿದೆ. ಗಂಡನ ಕುತ್ತಿಗೆ ಹಿಸುಕಿ ಕೊಂದಿದ್ದ ಹೆಂಡತಿ ಹಾಗೂ ಈಕೆಯ ಪ್ರಿಯಕರನನ್ನು ವೈಟ್ ಫೀಲ್ಡ್ ಠಾಣೆ ಪೊಲೀಸರು ಬಂಧಿದ್ದಾರೆ.ಹಗದೂರು ನಿವಾಸಿ ತೇಜಸ್ವಿನಿ(28) ಮತ್ತು ಈಕೆಯ ಪ್ರಿಯಕರ ಗಜೇಂದ್ರ (36) ಬಂಧಿತರು. ಆರೋಪಿಗಳು ಆ.9ರಂದು ಮಧ್ಯಾಹ್ನ ಮಹೇಶ್ ನನ್ನು (36) ಕೊಲೆಗೈ ದಿದ್ದರು. ಈ ಸಂಬಂಧ ಇಬ್ಬರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬೆಳ್ತಂಗಡಿ : ಮದ್ಯದ ಅಮಲಿನಲ್ಲಿ ಬೈಕ್ ಗೆ ಡಿಕ್ಕಿಹೊಡೆದ ಬೋಲೆರೊ ವಾಹನ: ಬಾಲಕಿ ಅನರ್ಘ್ಯ ಮೃತ್ಯು

Posted by Vidyamaana on 2024-07-28 06:45:09 |

Share: | | | | |


ಬೆಳ್ತಂಗಡಿ : ಮದ್ಯದ ಅಮಲಿನಲ್ಲಿ ಬೈಕ್ ಗೆ ಡಿಕ್ಕಿಹೊಡೆದ ಬೋಲೆರೊ ವಾಹನ: ಬಾಲಕಿ ಅನರ್ಘ್ಯ ಮೃತ್ಯು

ಬೆಳ್ತಂಗಡಿ :ಮದ್ಯದ ಅಮಲಿನಲ್ಲಿ ಬೊಲೆರೋ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಜಾಡೇ ಸೀಟು ಬಳಿ ಈ ಅಪಘಾತ ನಡೆದಿದೆ.

ಬೆಳ್ತಂಗಡಿ ತಾಲೂಕಿನ ಮುಂಜಾಡೇ ಸೀಟು ಬಳಿ ಈ ಒಂದು ಘಟನೆ ನಡೆದಿದೆ ತಲೆ ಮೇಲೆ ಬುಲೆರೋ ವಾಹನ ಹರಿದಿದ್ದರಿಂದ ಅನರ್ಘ್ಯ (13) ಬಾಲಕಿ ಸಾವನ್ನಪ್ಪಿದ್ದಾಳೆ.

ಹಿಂದೂ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ನಿಲ್ಲಿಸದಿದ್ದರೆ ಹಿಂದೂ ಸಮಾಜ ತಕ್ಕ ಉತ್ತರ ನೀಡುವ ಪರಿಸ್ಥಿತಿ ಬರಲಿದೆ

Posted by Vidyamaana on 2024-04-04 18:33:37 |

Share: | | | | |


ಹಿಂದೂ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ನಿಲ್ಲಿಸದಿದ್ದರೆ ಹಿಂದೂ ಸಮಾಜ ತಕ್ಕ ಉತ್ತರ ನೀಡುವ ಪರಿಸ್ಥಿತಿ ಬರಲಿದೆ

ಪುತ್ತೂರು, ಎ.4: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ರಾಜ್ಯ ಸರಕಾರ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ. ಕಳೆದ 2-3 ತಿಂಗಳಿನಿಂದ ಹಿಂದು ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹೇರಿ ಗಡೀಪಾರು ಮಾಡುವ ಕಾರ್ಯಕ್ಕೆ ಕೈಹಾಕಿದೆ. ಇಂಥ ಕೆಲಸವನ್ನು ನಿಲ್ಲಿಸದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಸರಕಾರ ಜವಾಬ್ದಾರಿಯಾಗಲಿದೆ ಎಂದು ಗೋರಕ್ಷಾ ಪ್ರಮುಖ್ ಮುರಳೀಕೃಷ್ಣ ಹಸಂತಡ್ಕ ಎಚ್ಚರಿಕೆ ನೀಡಿದ್ದಾರೆ.


ಗುರುವಾರ ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿಂದೂ ಕಾರ್ಯಕರ್ತರ ಮೇಲಿನ ದಬ್ಬಾಳಿಕೆ ನಿಲ್ಲಿಸದಿದ್ದರೆ ಹಿಂದೂ ಸಮಾಜ ತಕ್ಕ ಉತ್ತರ ನೀಡುವ ಪರಿಸ್ಥಿತಿ ಬರಲಿದೆ. ಈ ರೀತಿ ಧರ್ಮ ರಕ್ಷಣೆ ಜತೆ ಗೋಹತ್ಯೆ, ಲವ್ ಜಿಹಾದಿ ಮಟ್ಟ ಹಾಕುವ ಕೆಲಸವನ್ನಷ್ಟೇ ನಮ್ಮ ಕಾರ್ಯಕರ್ತರು ಮಾಡುತ್ತಿದ್ದು, ಬೇರೆ ಯಾವುದೇ ಚಟುವಟಿಕೆಗಳಲ್ಲಿ ತೊಡಗಿಕೊಂಡಿಲ್ಲ. ಹಾಗಂತ ಗಡಿಪಾರು ಆದೇಶ ಮಾಡುವುದಾದರೆ ಸಾವಿರ ಹಿಂದೂ ಕಾರ್ಯಕರ್ತರ ಪಟ್ಟಿ ನೀಡುತ್ತೇವೆ. ತಾಕತ್ತಿದ್ದರೆ ಎಲ್ಲರನ್ನೂ ಗಡಿಪಾರು ಮಾಡಲಿ ಎಂದು ಸವಾಲೆಸೆದರು.

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ರಿಕ್ಷಾ: ಗಾಯ

Posted by Vidyamaana on 2024-05-10 15:14:17 |

Share: | | | | |


ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ರಿಕ್ಷಾ: ಗಾಯ

ಪುತ್ತೂರು: ಮಿತ್ತೂರು ರೈಲ್ವೇ ಓವರ್ ಬ್ರಿಡ್ಜ್ ಸಮೀಪ ರಿಕ್ಷಾವೊಂದು ಪಲ್ಟಿಯಾಗಿ, ಚಾಲಕ ಗಾಯಗೊಂಡ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಆಟೋ ಚಾಲಕ, ಮಿತ್ತಪಡ್ಪು ಪಾಟ್ರಕೋಡಿ ನಿವಾಸಿ ನೀಲಪ್ಪ ಮೂಲ್ಯ ಗಾಯಗೊಂಡವರು. ರಿಕ್ಷಾದಲ್ಲಿದ್ದ ಇಬ್ಬರು ಸವಾರರು ಪಾರಾಗಿದ್ದಾರೆ.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ – ಪುತ್ತೂರು ಜಿಲ್ಲಾ ಕಾರ್ಯಾಲಯ ‘ಪಂಚವಟಿ’ ಲೋಕಾರ್ಪಣೆ

Posted by Vidyamaana on 2023-01-18 08:56:42 |

Share: | | | | |


ರಾಷ್ಟ್ರೀಯ ಸ್ವಯಂ ಸೇವಕ ಸಂಘದ – ಪುತ್ತೂರು ಜಿಲ್ಲಾ ಕಾರ್ಯಾಲಯ ‘ಪಂಚವಟಿ’ ಲೋಕಾರ್ಪಣೆ

ಪುತ್ತೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಾಲಯ ಆ ಪ್ರದೇಶದ ಸಂಘ ಕಾರ್ಯಕ್ಕೆ ಪ್ರೇರಣೆ ಕೊಡುವ ಕುಂಡಲಿನಿ ಇದ್ದಂತೆ. ಅಲ್ಲಿ ನಡೆಯುವ ಬೈಠೆಕ್, ಸಂವಾದ, ಚಿಂತನೆ ಆ ಪ್ರದೇಶದ ಕಾರ್ಯಕರ್ತರ ಕಾರ್ಯದ ಕುಂಡಲಿನಿಯನ್ನು ಜಾಗೃತಿ ಮಾಡುತ್ತದೆ. ಆ ರೀತಿಯ ಜಾಗೃತಿಯು ಹಿಂದೂ ಸಮಾಜದ ಜಾಗೃತಿಯಾಗಿ ಸಾವಿರಾರು ಕೇಂದ್ರಗಳಾಗಿ ಮೂಡಿದೆ. ಇದರಿಂದಾಗಿ ದೇಶದಲ್ಲಿ ಕಳೆದ 100 ವರ್ಷದಿಂದ ಆದ ಬದಲಾವಣೆ ಇವತ್ತು ನಮ್ಮ ಕಣ್ಣ ಮುಂದಿದೆ. ಇದನ್ನು ನೋಡಿದಾಗ ಸಂಘ ಕಾರ್ಯವು ಕಾರ್ಯಾಲಯದಲ್ಲಲ್ಲ ಸಂಘ ಕಾರ್ಯ ಇರುವುದು ಸಮಾಜದಲ್ಲಿ, ಸಮಾಜದ ಬಂಧುಗಳ ಕುಟುಂಬಗಳ ಹೃದಯ ಮನಸ್ಸುಗಳಲ್ಲಿ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಹ ಸರಕಾರ್ಯವಾಹ ಮುಕುಂದ ಅವರು ಹೇಳಿದರು.

ಅವರು ಜ.14ರಂದು ಇಲ್ಲಿನ ಹಳೆ ಪೊಲೀಸ್ ವಸತಿಗೃಹದ ಬಳಿಯಲ್ಲಿರುವ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲೆಯ ಕಾರ್ಯಾಲಯ ‘ಪಂಚವಟಿ ‘ಇದರ ದ್ವಾರಪೂಜೆಯೊಂದಿಗೆ ನಡೆದ ಪ್ರವೇಶ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜ.16ರಂದು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಲ್ಲಿ ನಡೆದ ಲೋಕಾರ್ಪಣೆ ಸಮಾವೇಶದಲ್ಲಿ ಬೌಧಿಕ್ ನೀಡಿದರು.

Recent News


Leave a Comment: