ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಸುದ್ದಿಗಳು News

Posted by vidyamaana on 2024-07-24 08:25:31 | Last Updated by Vidyamaana on 2024-07-24 08:25:31

Share: | | | | |


ಪುತ್ತೂರು: ಲಾರಿ - ಸ್ಕೂಟರ್ ನಡುವೆ ಭೀಕರ ಅಪಘಾತ :ಮಿತ್ತೂರು ನಿವಾಸಿ ಶಿವರಾಮ ನಾಯ್ಕ ಮೃತ್ಯು

ಪುತ್ತೂರು: ನೆಹರುನಗರ ಮಂಜಲ್ಪಡ್ಪು ಬಳಿಯ ಮಂಗಲ ಸ್ಟೋರ್ಸ್ ಮುಂಭಾಗ ಜು.23 ರಂದು  ಲಾರಿ ಮತ್ತು ತ್ರಿವೀಲ್ಡರ್ ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಮಿತ್ತೂರು ಏಮಾಜೆಯ ವಿಕಲಚೇತನ ಶಿವರಾಮ ನಾಯ್ಕ (50ವ) ಎಂಬವರು ಮೃತಪಟ್ಟ ಬಗ್ಗೆ ವರದಿಯಾಗಿದೆ

ಮಂಗಳೂರು ಕಡೆ ಹೋಗುತ್ತಿದ್ದ ಲಾರಿ ವೊಂದು ವಿಕಲಚೇತನ ಶಿವರಾಮ ಅವರು ಚಲಾಯಿಸುತ್ತಿದ್ದ ತ್ರಿವೀಲ್ಡ‌ರ್ ಸ್ಕೂಟರ್ ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ತೀವ್ರ ಗಾಯಗೊಂಡ ಸವಾರ ಮೃತ ಪಟ್ಟಿದ್ದಾರೆಂದು ತಿಳಿದು ಬಂದಿದೆ.

 Share: | | | | |


ಶ್ರೀ ದೇವತಾ ಸಮಿತಿಯಿಂದ 66ನೇ ವರ್ಷದ ಮಹಾಗಣೇಶೋತ್ಸವ

Posted by Vidyamaana on 2023-09-20 15:01:24 |

Share: | | | | |


ಶ್ರೀ ದೇವತಾ ಸಮಿತಿಯಿಂದ 66ನೇ ವರ್ಷದ ಮಹಾಗಣೇಶೋತ್ಸವ


ಪುತ್ತೂರು: ಪುತ್ತೂರು ಕಿಲ್ಲೆ ಮೈದಾನದಲ್ಲಿ ಸರ್ವಜಾತಿ ಧರ್ಮ ಪಕ್ಷದವರು ಒಟ್ಟಾಗಿ ಆಚರಿಸಿಕೊಂಡು ಬರುತ್ತಿರುವ ಶ್ರೀ ಮಹಾಗಣೇಶೋತ್ಸವ ಬಹುಶಃ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಥಮವಾಗಿದೆ. ಇಂತಹ ಸೌಹಾರ್ದತೆಯ ಸಂಕೇತವಾಗಿ ಆಚರಿಸಿಕೊಂಡು ಬರುತ್ತಿರುವ ಈ ಮಹಾಗಣಪತಿ ಉತ್ಸವ ವರ್ಷದಿಂದ ವರ್ಷಕ್ಕೆ ಯಶಸ್ವಿಯಾಗಿ ಮುನ್ನಡೆಯಲಿ ಎಂದು ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಹೇಳಿದರು.

ಶ್ರೀ ದೇವತಾ ಸಮಿತಿ ಪುತ್ತೂರು ಇದರ ಆಶಯದಲ್ಲಿ ಪುತ್ತೂರು ಕಿಲ್ಲೆ ಮೈದಾನದಲ್ಲಿ 66ನೇ ವರ್ಷದ ಶ್ರೀ ಮಹಾ ಗಣೇಶೋತ್ಸವದ ಉದ್ಘಾಟನೆಯನ್ನು ನೆರವೇರಿಸಿ ಅವರು ಮಾತನಾಡಿದರು. ಮಲ್ಯರವರ ನಿಧನದ ಬಳಿಕ ಕಿಲ್ಲೆ ಮೈದಾನದ ಗಣೇಶೋತ್ಸವದ ನೇತೃತ್ವವನ್ನು ವಹಿಸಿಕೊಂಡಿದ್ದ ನೆಲ್ಲಿಕಟ್ಟೆ ಸುಧಾಕರ್ ಶೆಟ್ಟಿ ಅವರು ಕಳೆದ 44 ವರ್ಷಗಳಿಂದ ನೇತೃತ್ವ ವಹಿಸಿ ಸರ್ವರನ್ನು ಒಗ್ಗೂಡಿಸಿಕೊಂಡು ಬಹಳ ವಿಜ್ರಂಭಣೆಯಿಂದ ಅದ್ದೂರಿಯಾಗಿ ಮಹಾ ಗಣಪತಿ ಉತ್ಸವವನ್ನು ಆಚರಿಸಿಕೊಂಡು ಬರುವ ಮೂಲಕ ಎಲ್ಲರ ಪ್ರೀತಿ ವಿಶ್ವಾಸಕ್ಕೆ ಪಾತ್ರರಾಗಿದ್ದರು.ಕೆಲ ದಿನಗಳ ಹಿಂದೆ ಅವರು ವಿಧಿ ವಶರಾಗಿದ್ದು, ಮುಂದೆ ಈ ಗಣೇಶೋತ್ಸವದ ನೇತೃತ್ವವನ್ನು ವಹಿಸಿಕೊಳ್ಳುವವರು ಈ ಕಾರಣಿಕ ಗಣೇಶೋತ್ಸವವನ್ನು ಮತ್ತಷ್ಟು ಯಶಸ್ಸಿನೆಡೆಗೆ ಕೊಂಡೊಯ್ಯುವ ಮೂಲಕ ಸುಧಾಕರ ಶೆಟ್ಟಿಯವರ ಅಗಲುವಿಕೆಯ ವೇದನೆ ನಿವಾರಣೆಯಾಗುವಂತಾಗಬೇಕೆಂದರು.



ಮಾಜಿ ಪುರಸಭಾ ಅಧ್ಯಕ್ಷ ಸೂತ್ರಬೆಟ್ಟು ಜಗನ್ನಾಥ ರೈ ಅವರು ಮಾತನಾಡಿ, ಪುತ್ತೂರುನಲ್ಲಿ 66 ವರ್ಷಗಳ ಹಿಂದೆ ಮಲ್ಯರವರು ನೆಲ್ಲಿಕಟ್ಟೆ ಎಲಿಮೆಂಟರಿ ಶಾಲೆಯಲ್ಲಿ ಗಣೇಶೋತ್ಸವವನ್ನು ಪ್ರಾರಂಭಿಸಿ, ಬಹಳಷ್ಟು ಕಷ್ಟಕಾಲದಲ್ಲಿಯೂ ಸಂಪ್ರದಾಯದ ಪ್ರಕಾರ ಗಣೇಶೋತ್ಸವ ನಡೆಸಿಕೊಂಡು ಬಂದಿದ್ದರು.ಅವರ ಬಳಿಕ ಓರ್ವ ನಿಷ್ಠಾವಂತ, ಪ್ರಾಮಾಣಿಕ ವ್ಯಕ್ತಿ ನೆಲ್ಲಿಕಟ್ಟೆ ಸುಧಾಕರ್ ಶೆಟ್ಟಿಯವರ ಕೈಗೆ ಈ ಗಣೇಶೋತ್ಸವದ ನೇತೃತ್ವವನ್ನು ವಹಿಸಲಾಯಿತು.ಆರಂಭದ ಸಮಯದಲ್ಲಿ ಗಣೇಶೋತ್ಸವ ನಡೆಸಲು ಹಣದ ಅಡಚಣೆ ಇದ್ದರೂ ಸುಧಾಕರ್ ಶೆಟ್ಟಿಯವರು ಎಲ್ಲರನ್ನೂ ಸೇರಿಸಿಕೊಂಡು ಬಹಳ ಕಷ್ಟದಲ್ಲಿ ಗಣೇಶೋತ್ಸವವನ್ನು ಯಶಸ್ವಿಯಾಗಿ ಆಚರಿಸಿಕೊಂಡು ಬಂದಿದ್ದು ಕಳೆದ ಕೆಲವು ವರ್ಷಗಳಿಂದ ಬಹಳ ವಿಜ್ರಂಭಣೆಯಿಂದ ಅದ್ದೂರಿಯಾಗಿ ನಡೆಯುತ್ತಿದೆ ಎಂದರು.



ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ನಿರಂಜನ ರೈ ಮಠಂತಬೆಟ್ಟುರವರು ಮಾತನಾಡಿ ಕಿಲ್ಲೆಮೈದಾನದ ಮಹಾ ಗಣೇಶೋತ್ಸವದ ರೂವಾರಿ ಸುಧಾಕರ್ ಶೆಟ್ಟಿ ಅವರು ಇದೀಗ ನಮ್ಮನ್ನಗಲಿದ್ದಾರೆ.ಅವರು ನಮ್ಮೊಡನೆ ಇಲ್ಲದಿದ್ದರೂ ಅವರ ಪ್ರಾಮಾಣಿಕತೆ ನಿಷ್ಠೆ ಸ್ಪೂರ್ತಿದಾಯಕ.ಎಲ್ಲರೊಂದಿಗೆ ಅನ್ಯೋನ್ಯತೆ, ಜಾತಿ ಮತ ಭೇದವಿಲ್ಲದೆ ಎಲ್ಲರೊಂದಿಗಿದ್ದ ಅವರ ಪ್ರೀತಿ ವಿಶ್ವಾಸ ಮುಂದಿನ ದಿನಗಳಲ್ಲಿ ಗಣೇಶೋತ್ಸವದ ಯಶಸ್ಸಿಗೆ ನಾಂದಿಯಾಗಲಿದೆ ಎಂದು ಹೇಳಿದರು.



ಕಾರ್ಯಕ್ರಮ ನಿರ್ವಹಿಸಿ ಮಾತನಾಡಿದ ಡಾ|ರಾಜೇಶ್ ಬೆಜ್ಜಂಗಳರವರು ಮಾತನಾಡಿ ಸುಧಾಕರ್ ಶೆಟ್ಟಿ ಅವರ ಸಮರ್ಥ ನಾಯಕತ್ವದ ಮೂಲಕ ಎಲ್ಲಾ ವರ್ಗದ ಜನರ ಪ್ರೀತಿ ವಿಶ್ವಾಸ ಗಳಿಸಿ ಕಿಲ್ಲೆ ಮೈದಾನದ ಮಹಾಗಣಪತಿ ಉತ್ಸವವನ್ನು ಅದ್ದೂರಿಯಾಗಿ ನಡೆಸಿಕೊಂಡು ಬರಲು ಸಹಕಾರಿಯಾಗಿದೆ ಎಂದು ಹೇಳಿದರಲ್ಲದೆ ಸುಧಾಕರ ಶೆಟ್ಟಿಯವರನ್ನು ಕಳೆದುಕೊಂಡ ದುಃಖದ ನಡುವೆಯೂ ನಾವು ಈ ಕಾರ್ಯಕ್ರಮ ಆಯೋಜಿಸಿದ್ದೇವೆ.ಅವರ ಆಶಯದಂತೆ ಈ ಮಹಾಗಣೇಶೋತ್ಸವ ಯಶಸ್ವಿಯಾಗಿ ಮುನ್ನಡೆಯಲಿದೆ ಎಂದು ಹೇಳಿದರು.

ಪುತ್ತೂರು ಕೋಟಿ ಚೆನ್ನಯ ಕಂಬಳ ಸಮಿತಿಯ ಅಧ್ಯಕ್ಷ ಎನ್.ಚಂದ್ರಹಾಸ ಶೆಟ್ಟಿ, ದೇವತಾ ಸಮಿತಿಯ ಹಿರಿಯ ಸದಸ್ಯ ಬಿ.ಕಿಟ್ಟಣ್ಣ ಗೌಡ ಬಪ್ಪಳಿಗೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನಿವೃತ್ತ ಅಧ್ಯಾಪಕ ಸುರೇಶ್ ಶೆಟ್ಟಿ ಸ್ವಾಗತಿಸಿದರು.ಶ್ರೀ ದೇವತಾ ಸಮಿತಿಯ ಪದಾಧಿಕಾರಿಗಳಾದ ದಿನೇಶ್ ಪಿ.ವಿ., ಸುದೇಶ್ ಕುಮಾರ್, ದೇವಿಪ್ರಸಾದ್, ಕೃಷ್ಣ ನಾಯಕ, ಗಣೇಶ್ ಶೆಟ್ಟಿ ನೆಲ್ಲಿಕಟ್ಟೆ ಮೊದಲಾದವರು ಅತಿಥಿಗಳಿಗೆ ಹೂಗುಚ್ಚ ನೀಡಿ ಸಹಕರಿಸಿದರು.



ಮೌನ ಪ್ರಾರ್ಥನೆ: ಶ್ರೀ ದೇವತಾ ಸಮಿತಿಯ ಅಧ್ಯಕ್ಷರಾಗಿದ್ದು ಶ್ರೀ ಮಹಾಗಣೇಶೋತ್ಸವವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬರುತ್ತಿದ್ದು ಕೆಲ ದಿನಗಳ ಹಿಂದೆ ಅಗಲಿದ ಎನ್.ಸುಧಾಕರ್ ಶೆಟ್ಟಿ, ಸಮಿತಿ ಸದಸ್ಯರಾಗಿದ್ದ ಪ್ರಭಾಕರ ಶೆಟ್ಟಿ ನೆಲ್ಲಿಕಟ್ಟೆ, ಮುಂಗ್ಲಿಮನೆ ಚಂದ್ರಶೇಖರ ಗೌಡರವರಿಗೆ ಮೌನ ಪ್ರಾರ್ಥನೆ ಸಲ್ಲಿಸಿ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಬೆಂಗಳೂರು ಕಂಬಳದಿಂದ ಹಿಂತಿರುಗುತ್ತಿದ್ದ ಕಾರು ಅಪಘಾತ ; ಮಂಗಳೂರಿನ ಇಬ್ಬರು ಯುವಕರು ದಾರುಣ ಮೃತ್ಯು

Posted by Vidyamaana on 2023-11-26 22:43:34 |

Share: | | | | |


ಬೆಂಗಳೂರು ಕಂಬಳದಿಂದ ಹಿಂತಿರುಗುತ್ತಿದ್ದ ಕಾರು ಅಪಘಾತ ; ಮಂಗಳೂರಿನ ಇಬ್ಬರು ಯುವಕರು ದಾರುಣ ಮೃತ್ಯು

ತುಮಕೂರು, ನ.26: ಬೆಂಗಳೂರಿನಲ್ಲಿ ಕಂಬಳ ಮುಗಿಸಿ ಹಿಂತಿರುಗುತ್ತಿದ್ದ ಕಾರಿಗೆ ತುಮಕೂರು ಜಿಲ್ಲೆಯ ಕುಣಿಗಲ್ ನಲ್ಲಿ ಲಾರಿ ಡಿಕ್ಕಿಯಾಗಿದ್ದು ಜವರಾಯನ ಅಟ್ಟಹಾಸಕ್ಕೆ ಮಂಗಳೂರು ಮೂಲದ ಇಬ್ಬರು ಯುವಕರು ಪ್ರಾಣ ತೆತ್ತಿದ್ದಾರೆ. 


ಬೋರ್ವೆಲ್ ಲಾರಿ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಸ್ಥಳದಲ್ಲೇ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ, ಮೂರು ಮಂದಿ ಗಂಭೀರ ಗಾಯಗೊಂಡಿದ್ದಾರೆ. ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.  ಕುಣಿಗಲ್ ತಾಲ್ಲೂಕಿನ ಚಿಗಣಿ ಪಾಳ್ಯ ಬಳಿ ಘಟನೆ ನಡೆದಿದೆ. 






ಮಂಗಳೂರಿನ ಬಜಪೆ ಗ್ರಾಮದ ಪೆರಾರ ನಿವಾಸಿ ಕಿಶನ್ ಶೆಟ್ಟಿ(20), ಭಟ್ರಕೆರೆ ವಾಸಿ ಫೀಲಿಪ್ ನೇರಿ(32) ಮೃತ ದುರ್ದೈವಿಗಳು.‌ ಶನಿವಾರ ರಾತ್ರಿ ಬೆಂಗಳೂರಿನಲ್ಲಿ ಕಂಬಳ‌ ನೋಡಿ ಮಂಗಳೂರಿಗೆ ವಾಪಸ್ ತೆರುಳುತ್ತಿದ್ದಾಗ ಅಪಘಾತ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಯುವಕರು ತೀವ್ರ ಗಾಯಗೊಂಡಿದ್ದು ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ‌ಲಾರಿ ಹಾಗೂ ಚಾಲಕ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪಘಾತದ ತೀವ್ರತೆಗೆ ಕಾರು ಜಜ್ಜಿ ಹೋಗಿದ್ದು ಪೊಲೀಸರು ಹರಸಾಹಸಪಟ್ಟು ತೆರವು ಮಾಡಿದ್ದಾರೆ. ಕುಣಿಗಲ್ ‌ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಅಂತಃಕರಣ ಶುದ್ದಿಯಾಗಿಟ್ಟುಕೊಳ್ಳುವ ಮೌಲ್ಯ ಅಡಗಿರುವ ಕೃತಿ; ಡಿ ಯದುಪತಿ ಗೌಡ

Posted by Vidyamaana on 2023-10-16 09:27:16 |

Share: | | | | |


ಅಂತಃಕರಣ  ಶುದ್ದಿಯಾಗಿಟ್ಟುಕೊಳ್ಳುವ ಮೌಲ್ಯ ಅಡಗಿರುವ ಕೃತಿ; ಡಿ ಯದುಪತಿ ಗೌಡ

ಬೆಳ್ತಂಗಡಿ; ಜಾಗತೀಕರಣ, ಉದಾರೀಕರಣ, ಆಧುನೀಕರಣ, ಸಂಸ್ಕೃತೀಕರಣ, ಮೊಬೈಲೀಕರಣ  ಇವೆಲ್ಲದರ ಮಧ್ಯೆ ನಮ್ಮ ಅಂತಃಕರಣ ಮೌಲ್ಯ ಹೇಗೆ ಶುದ್ದಿಯಾಗಿಟ್ಟುಕೊಳ್ಳುವುದು ಎಂಬುದರ ಕುರಿತಾಗಿ

ವಿದ್ಯಾರ್ಥಿಗಳು, ಪೋಷಕರು ಓದಬೇಕಾದ ಕೃತಿಯಾಗಿ ಮೌಲ್ಯ  ಹುಡುಕಾಟದಲ್ಲಿ ಕೃತಿ ಹೊರಬಂದಿದೆ ಎಂದು ಕಸಾಪ ಬೆಳ್ತಂಗಡಿ ಘಟಕದ ಅಧ್ಯಕ್ಷ ಡಿ‌ ಯದುಪತಿ ಗೌಡ ಹೇಳಿದರು.

ವಾಣಿ ಕಾಲೇಜಿನ ಆವರಣದಲ್ಲಿ ಅ.14 ರಂದು, ಮಾಮರ ಪ್ರಕಾಶನ ಮೈಸೂರು‌ ಅವರು ಹೊರ ತಂದಿರುವ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ಅವರ ಬರಹಗಳ ಸಂಕಲ "ಮೌಲ್ಯಗಳ ಹುಡುಕಾಟದಲ್ಲಿ" ಕೃತಿ ಬಿಡುಗಡೆಗೊಳಿಸಿ ಅವರು ಮಾತನಾಡುತ್ತಿದ್ದರು. 


ಈ ಪುಸ್ತಕದಲ್ಲಿ 62 ಲೇಖನಗಳಿದ್ದು, ತನ್ನ ಶಿಕ್ಷಕ ವೃತ್ತಿಬದುಕಿನ ಅನುಭವ ಮತ್ತು ಬೇರೆ ಬೇರೆ ಮನಸ್ಥಿತಿಯ ವಿದ್ಯಾರ್ಥಿಗಳ ಒಡನಾಟದ ಅನುಭವದಿಂದ ಈ ಬರಹಗಳು ಅವರ ಮೂಲಕ ಹೊರ ಬಂದಿದೆ. ಸಾಮಾಜಿಕ ಮೌಲ್ಯ ಎಂದರೇನು ಎಂಬುದನ್ನು ಪ್ರಶ್ನಿಸುವ ದಿನಮಾನದಲ್ಲಿ ಶಿಕ್ಷಣ ಅಂದರೆ ಓದು ಮಾತ್ರ ಅಲ್ಲ. ಅದರ ಆಚೆಗೆ ಬದುಕು ಇದೆ. ಸಮಾಜದ ವ್ಯಕ್ತಿಗಳು ಮತ್ತು ವ್ಯವಸ್ಥೆಯೊಂದಿಗೆ ಹೊಂದಾಣಿಕೆ ಮಾಡಿಕೊಂಡುಹೋಗಬೇಕಾದ ಮೌಲ್ಯವನ್ನು ಈ ಬರಹಗಳು ಎಚ್ಚರಿಸುತ್ತವೆ. ವ್ಯಕ್ತಿ ವ್ಯಕ್ತಿ ಗಳ ನಡುವಿನ ಸಂಬಂಧ ಇಲ್ಲದ ಶಿಕ್ಷಣ ಮೌಲ್ಯವಿಲ್ಲದ್ದು. ಹಿಂದಿನ ಕಾಲದಲ್ಲಿ ಬಡತನದ ಮಧ್ಯೆಯೂ ಹಿರಿಯರ ಜೀವನದಲ್ಲಿ ನೈತಿಕತೆ, ಜೀವನ ಮೌಲ್ಯ ಉಳಿದುಕೊಂಡಿದ್ದರು ಎಂದವರು ವಿವರಿಸಿದರು.

ಮುಖ್ಯ ಅತಿಥಿಯಾಗಿದ್ದ ಬಂಟ್ವಾಳದ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ‌ದ ಅಧ್ಯಕ್ಷ ಡಾ. ತುಕಾರಾಮ ಪೂಜಾರಿ ಮಾತನಾಡಿ, ಮನುಷ್ಯನ ಮನಸ್ಸು ಮತ್ತು ಆಲೋಚನೆಗಳು ನಿರ್ಮಲವಾಗಿದ್ದರೆ ಬಾಹ್ಯವಾಗಿ ಮತ್ತು ಆಂತರಿಕವಾಗಿ ನಮ್ಮ ಯೌವ್ವನವನ್ನು ಕಾಪಾಡಿಕೊಳ್ಳಬಹುದು. ನಮ್ಮ ನಡೆ ನುಡಿಯಲ್ಲಿ ಯಾವುದಾದರೊಂದು ಅಧ್ಯಾಪಕನ ಪ್ರಭಾವ ಇದ್ದೇ ಇರುತ್ತದೆ. ಈಗಿನ ದಿನಮಾನಗಳಲ್ಲಿ ನಾವು ಹೋಗುವ ದಾರಿಯಲ್ಲಿ ಎಡವಿದ್ದೇವೆ ಎಂದೆನಿಸುತ್ತದೆ. ಆಧುನಿಕ ಶಿಕ್ಷಣದ ಶೈಲಿ ಬದಲಾದರೂ ಸ್ಥಿತಿ ಅದೇ ಎಂಬುದು ಮುಖ್ಯ. ಯಾಕೂಬ್ ಅವರ ಈ ಕೃತಿಯಲ್ಲಿ ಭಾವ ಕೇಂದ್ರಿತವಾಗಿ ವಿಚಾರವನ್ನು ಮಂಡಿಸುವ ಶೈಲಿಯ ಬರಹಗಳು ಅಡಗಿವೆ. ಇದು ಸಮಾಜಕ್ಕೆ ಪ್ರಯೋಜನಕಾರಿಯಾಗಲಿದೆ ಎಂದರು.

ಪುಸ್ತಕಕ್ಕೆ ಮುನ್ನುಡಿ‌ ಬರೆದ ಹಿರಿಯ ಸಾಹಿತಿ ಅರವಿಂದ ಚೊಕ್ಕಾಡಿ ಮಾತನಾಡಿ ಲೇಖಕ ಯಾವತ್ತೂ ತೀರ್ಪುಗಾರ ಅಲ್ಲ. ತನ್ನ ಒಳಶೋಧದ ಪರಿಣಾಮಗಳನ್ನು ಹೇಳುವವನು ಅಷ್ಟೇ. ಆತನ ಅನುಭವಗಳು ಸಹೃದಯನ ಓದಿನ‌ ಪರಿಣಾಮವಾಗಿ ಅವನ ಅನುಭವವಾಗಿ ಅವನು ಕಂಡುಕೊಳ್ಳುವ ಸತ್ಯವೇ ಅವರವರ ಮೌಲ್ಯವಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್ ಬೆಳ್ತಂಗಡಿ ಘಟಕ್ ಅಧ್ಯಕ್ಷ ಉಮೇಶ್ ಶೆಟ್ಟಿ ಉಜಿರೆ ಅವರು ಮಾತನಾಡಿ, ಲಯನ್ಸ್ ಕ್ಲಬ್ ಸೇವಾ ಚಟುವಟಿಕೆಗೆ ಹೆಸರಾದ ಅಂತಾರಾಷ್ಟ್ರೀಯ ಸಂಸ್ಥೆ. ಇದೀಗ ಸಾಹಿತ್ಯಿಕ ಸೇವೆಗೂ ಮುಂದಡಿಇಟ್ಟಿದೆ. ಮೌಲ್ಯಗಳ ಬಗ್ಗೆ ಬರೆದ ಈ‌ಕೃತಿ ಹೊರತರಲು ವೇದಿಕೆ ಒದಗಿಸಿರುವುದು ನಮ್ಮ ಜವಾಬ್ದಾರಿ ಕೂಡ ಎಂದರು. 

ಲೇಖಕ ಯಾಕೂಬ್ ಎಸ್ ಕೊಯ್ಯೂರು ಅವರು ಪ್ರತಿಕ್ರಿಯಿಸಿ, ನನ್ನ ಅನುಭವ ಮತ್ತು ಆಲೋಚನೆಗಳಿಗೆ ಅಕ್ಷರ ರೂಪ ನೀಡಿ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸುತ್ತಿದ್ದೆ. ಜನರ ಪ್ರತಿಕ್ರಿಯೆ, ಹಿರಿಯರ ಸಲಹೆಯ ಮೂಲಕ ಅದಕ್ಕೆ ಈಗ ಪುಸ್ತಕದ ರೂಪ ಬಂದಿದೆ ಎಂದರು.


ಕಾರ್ಯಕ್ರಮ ಸಂಯೋಜಕ ಅಶ್ರಫ್ ಆಲಿಕುಂಞಿ ಮುಂಡಾಜೆ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.

ಅಬ್ದುಲ್ ಖಾದರ್ ನಾವೂರು ಕಾರ್ಯಕ್ರಮ ನಿರೂಪಿಸಿದರು. ಅಝರ್ ವಂದಿಸಿದರು. ಸಹಸಂಯೋಜಕರಾದ ಹರೀಶ್‌ ಹೆಗ್ಡೆ, ಹರ್ಷದ್, ಹೆರಾಲ್ಡ್ ಪಿಂಟೋ, ಶಾಹುಲ್ ಹಮೀದ್ ಸಹಕರಿಸಿದರು. ಸಂಘಟಕರ ಕಡೆಯಿಂದ ಯಾಕೂಬ್ ಎಸ್ ಕೊಯ್ಯೂರು ಅವರನ್ನು ಗೌರವಿಸಲಾಯಿತು. ಸಮಾರಂಭದಲ್ಲಿ ವಿವಿಧ ಸಂಘ ಸಂಸ್ಥೆಗಳ ಆಯ್ದ ಪ್ರತನಿಧಿಗಳು ಭಾಗಿಯಾಗಿದ್ದರು.

123 ಸ್ಥಾನ ಬರದಿದ್ದರೆ ಪಕ್ಷ ವಿಸರ್ಜಿಸುತ್ತೇವೆ ಎಂದಿದ್ದ ಕುಮಾರಸ್ವಾಮಿ

Posted by Vidyamaana on 2023-07-14 16:02:32 |

Share: | | | | |


123 ಸ್ಥಾನ ಬರದಿದ್ದರೆ ಪಕ್ಷ ವಿಸರ್ಜಿಸುತ್ತೇವೆ ಎಂದಿದ್ದ ಕುಮಾರಸ್ವಾಮಿ

ಬೆಂಗಳೂರು: ಕರ್ನಾಟಕ ವಿಧಾನಮಂಡಲ ಮುಂಗಾರು ಜಂಟಿ ಅಧಿವೇಶನ ಮುಂದುವರಿದಿದೆ. ವಿಧಾನ ಪರಿಷತ್​​ನಲ್ಲಿ ರಾಜ್ಯಪಾಲರ ಭಾಷಣದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು.  


5 ಚುನಾವಣೆಗಳ ಪೈಕಿ 2 ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದ ಸಿದ್ದರಾಮಯ್ಯ ಕಾಂಗ್ರೆಸ್​​ ಚುನಾವಣೆ ವೇಳೆ 5 ಗ್ಯಾರಂಟಿ ಘೋಷಣೆ ಮಾಡಿದ್ದೆವು. ಜನ ನಮ್ಮ ಪಕ್ಷವನ್ನು ನಂಬುತ್ತಾರೆ ನಿಮ್ಮನ್ನು ನಂಬಲ್ಲ. ಜೆಡಿಎಸ್​ ಕೂಡ ಪಂಚರತ್ನ ಘೋಷಣೆ ಮಾಡಿತ್ತು. ಹೆಚ್ ​ಡಿ ಕುಮಾರಸ್ವಾಮಿ 123 ಸ್ಥಾನ ಬರದಿದ್ದರೆ ಪಕ್ಷ ವಿಸರ್ಜಿಸುತ್ತೇವೆ ಎಂದಿದ್ದರು ಎಂದು ಸಿದ್ದರಾಮಯ್ಯ ಹೇಳಿದರು.

 ಜೆಡಿಎಸ್ (JDS)​​ ಶೇಕಡಾವಾರು ಮತ ಶೇ.19ರಿಂದ ಶೇ.13ಕ್ಕೆ ಕುಸಿದಿದೆ. 2005ರವರೆಗೆ ನಾನು ಜೆಡಿಎಸ್​ನಲ್ಲೇ ಇದ್ದೆ. ನಾನು ಜೆಡಿಎಸ್​ ಬಿಡಲಿಲ್ಲ, ನನ್ನನ್ನು ಪಕ್ಷದಿಂದ ಉಚ್ಚಾಟಿಸಿದರು. ಪಕ್ಷ ವಿರೋಧಿ ಚಟುವಟಿಕೆ ಆರೋಪದಡಿ ನನ್ನನ್ನು ಉಚ್ಚಾಟಿಸಿದರು. ಕಾಂಗ್ರೆಸ್​​ ಪಕ್ಷದಿಂದ 2 ಬಾರಿ ಸಿಎಂ ಆಗುವ ಅವಕಾಶ ಸಿಕ್ಕಿದೆ. ಕಾಂಗ್ರೆಸ್​ಗೆ ನಾನು ಚಿರಋಣಿ ಆಗಿರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಪ್ರೀತಿಗೆ ಪೋಷಕರ ನಿರಾಕರಣೆ; ಪ್ರೇಮಿಗಳಿಬ್ಬರು ನೇಣಿಗೆ ಶರಣು

Posted by Vidyamaana on 2024-02-03 18:08:10 |

Share: | | | | |


ಪ್ರೀತಿಗೆ ಪೋಷಕರ ನಿರಾಕರಣೆ; ಪ್ರೇಮಿಗಳಿಬ್ಬರು ನೇಣಿಗೆ ಶರಣು

ಕಲಬುರಗಿ : ಅಣ್ಣ-ತಂಗಿ ವರಸೆಯ ಪ್ರೀತಿಗೆ ಪೋಷಕರು ನಿರಾಕರಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಯಡ್ರಾಮಿ ತಾಲೂಕಿನ ಮಾಗಣಗೇರೆ ಗ್ರಾಮದಲ್ಲಿ ನಡೆದಿದೆ. ಶಶಿಕಲಾ (20) ಗೊಲ್ಲಾಳಪ್ಪ (24) ನೇಣಿಗೆ ಶರಣಾದ ಪ್ರೇಮಿಗಳು. ಶಶಿಕಲಾ ಮತ್ತು ಗೊಲ್ಲಾಳಪ್ಪ ಇಬ್ಬರು ಕೂಡ ವರಸೆಯಲ್ಲಿ ಅಣ್ಣ ತಂಗಿ ಆಗಿದ್ದರು.ಗೊಲ್ಲಾಳಪ್ಪ ಪ್ರೀತಿಯನ್ನು ನಿರಾಕರಿಸಿ ಶಶಿಕಲಾಗೆ ಬೇರೆ ಮದುವೆ ಮಾಡಲು ಕುಟುಂಬಸ್ಥರು ಮುಂದಾಗಿದ್ದರು. ಅದರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಗ್ರಾಮದ ಯುವಕನ ಜೊತೆ ನಿಶ್ಚಿತಾರ್ಥ ಮಾಡಿಸಿದ್ದರು. ಮುಂದಿನ ತಿಂಗಳು ಮದುವೆ ಕೂಡ ನಿಶ್ಚಯವಾಗಿತ್ತು ಎನ್ನಲಾಗಿದೆ.ಪ್ರೇಯಸಿಗೆ ಮದುವೆ ನಿಶ್ಚಯ ಆಗಿರುವ ವಿಷಯ ತಿಳಿದ ಗೊಲ್ಲಾಳಪ್ಪ ನಿನ್ನೆ ರಾತ್ರಿ ಶಶಿಕಲಾಳನ್ನು ಮನೆಯಿಂದ ಕರೆದುಕೊಂಡು ಹೋಗಿದ್ದಾನೆ. ನಂತರ ಮಾಗಣಪುರ ಗ್ರಾಮದ ದೇವಸ್ಥಾನದಲ್ಲಿ ಜೋಡಿ ಮದುವೆ ಮಾಡಿಕೊಂಡಿದ್ದಾರೆ. ಬಳಿಕ ಅದೇ ಗ್ರಾಮದ ಹೊರವಾಲಯದ ತೋಟದ ಜಮೀನಿನಲ್ಲಿ ಇಬ್ಬರು ನೇಣಿಗೆ ಶರಣಾಗಿದ್ದಾರೆ. ಪ್ರೇಮಿಗಳಿಬ್ಬರು ನೇಣಿಗೆ ಶರಣಾಗುವ ಮುನ್ನ ತಾವು ಮದುವೆ ಮಾಡಿಕೊಂಡಿರುವುದರ ಬಗ್ಗೆ ಸೆಲ್ಫಿ ಫೋಟೋ ತೆಗೆದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಯಡ್ರಾಮಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಂಗಳೂರು: ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲು

Posted by Vidyamaana on 2023-10-19 08:51:43 |

Share: | | | | |


ಮಂಗಳೂರು: ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ವಿಶ್ವ ಹಿಂದೂ ಪರಿಷತ್ನ ದ.ಕ. ಜಿಲ್ಲಾ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ವಿರುದ್ಧ ಪ್ರಕರಣ ದಾಖಲಾಗಿದೆ. ನಗರದ ಶ್ರೀ ಮಂಗಳಾದೇವಿ ದೇವಸ್ಥಾನದ ಜಾತ್ರೆಯ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿದೆ. ಪಾಂಡೇಶ್ವರ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.


ಅ.16ರಂದು ಶರಣ್ ಪಂಪ್ವೆಲ್ ತನ್ನ ಬೆಂಬಲಿಗರೊಂದಿಗೆ ಶ್ರೀ ಮಂಗಳಾದೇವಿ ದೇವಸ್ಥಾನ ವಠಾರದಲ್ಲಿರುವ ಹಿಂದೂ ವ್ಯಾಪಾರಿಗಳ ಅಂಗಡಿಗಳ ಮೇಲೆ ಕೇಸರಿ ಧ್ವಜಗಳನ್ನು ಹಾಕಿ, ಭಕ್ತರು ತಮಗೆ ಬೇಕಾದ ಅಗತ್ಯ ಸಾಮಗ್ರಿಗಳನ್ನು ಹಿಂದೂ ವ್ಯಾಪಾರಿಗಳ ಅಂಗಡಿಗಳಿಂದ ಮಾತ್ರ ಪಡೆದುಕೊಳ್ಳುವಂತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದನು. ಈ ಕೃತ್ಯವು ಕೋಮು ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡಿರುವುದಾಗಿದೆ. ಅದರಂತೆ ದಕ್ಷಿಣ ಪೊಲೀಸ್ ಠಾಣೆಯ ಕಾನೂನು ಸುವ್ಯವಸ್ಥೆ ವಿಭಾಗದ ಎಸ್ಸೈ ಮನೋಹರ್ ಪ್ರಸಾದ್ ರವರ ದೂರಿನ ಮೇಲೆ ಶರಣ್ ಪಂಪ್ವೆಲ್ ಮತ್ತಿತರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.

Recent News


Leave a Comment: