ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಾಯಘಾತದಿಂದ ನಿಧನ

ಸುದ್ದಿಗಳು News

Posted by vidyamaana on 2024-07-05 17:20:19 |

Share: | | | | |


ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಾಯಘಾತದಿಂದ ನಿಧನ

ಪುತ್ತೂರು: ಖ್ಯಾತ ಯಕ್ಷಗಾನ ಕಲಾವಿದರಾಗಿದ್ದಂತ ಕುಂಬ್ಳೆ ಶ್ರೀಧರ ರಾವ್ ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿರುವುದಾಗಿ ತಿಳಿದು ಬಂದಿದೆ.

ಇಂದು ನೆಕ್ಕಿಲಾಡಿ ಗ್ರಾಮದ ಶಾಂತಿನಗರದ ಸಮೀಪದಲ್ಲಿನ ಬೇರಿಕೆ ನಿವಾಸಿಯಾಗಿದ್ದಂತ ಶ್ರೀಧರ ರಾವ್ ಅವರಿಗೆ ಇಂದು ಬೆಳಿಗ್ಗೆ ತೀವ್ರ ಎದೆನೋವು ಕಾಣಿಸಿಕೊಂಡಿತ್ತು.

ಕೂಡಲೇ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಆದ್ರೇ ಚಿಕಿತ್ಸೆ ಫಲಿಸದೇ ಅವರು ಇಂದು ನಿಧನರಾಗಿದ್ದಾರೆ.

ಮೃತರು ಶಾಂತಿನಗರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯ ನಿರ್ವಹಿಸಿ ನಿವೃತ್ತರಾಗಿರುವ ಪತ್ನಿ ಸುಲೋಚನಾ, ಪುತ್ರರಾದ ಬೆಂಗಳೂರಿನಲ್ಲಿ ಪತ್ರಕರ್ತರಾಗಿರುವ ಗಣೇಶ್ ಪ್ರಸಾದ್, ಕೃಷ್ಣಪ್ರಸಾದ್ ಮತ್ತು ದೇವಿಪ್ರಸಾದ್, ಸೊಸೆಯಂದಿರು ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.

 Share: | | | | |


ವಿಟ್ಲ : ಬಸ್-ಪಿಕಪ್‌ ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ

Posted by Vidyamaana on 2024-04-04 12:53:09 |

Share: | | | | |


ವಿಟ್ಲ : ಬಸ್-ಪಿಕಪ್‌ ಮುಖಾಮುಖಿ ಡಿಕ್ಕಿ : ಹಲವರಿಗೆ ಗಾಯ

ವಿಟ್ಲ-ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಬಸ್ಸಿಗೆ ಪಿಕಪ್ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ.

ವಾರ್ ರೂಂ ಆದ ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿ

Posted by Vidyamaana on 2023-07-24 15:38:28 |

Share: | | | | |


ವಾರ್ ರೂಂ ಆದ ಸಂಸದ ನಳಿನ್ ಕುಮಾರ್ ಕಟೀಲ್ ಕಚೇರಿ

ಮಂಗಳೂರು: ತೀವ್ರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಕಚೇರಿಯನ್ನು ವಾರ್ ರೂಂ ಆಗಿ ಮಾರ್ಪಾಡು ಮಾಡಲಾಗಿದೆ.

ಮಳೆಯಿಂದ ತೊಂದರೆ ಉಂಟಾದಲ್ಲಿ ವಾರ್ ರೂಂ ನಿಂದ ನೆರವಿನ ಸಹಾಯ ಹಸ್ತಕ್ಕಾಗಿ ಈ ಕೆಳಕಂಡ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಾರ್ ರೂಮ್ (ಲ್ಯಾಂಡ್ ಲೈನ್): 0824-2448888 ಮೊ: 9606595356/9606595394

ಪುತ್ತೂರು ಗಾಂಧಿ ಕಟ್ಟೆಯ ಬಳಿ ಇತ್ತಂಡಗಳ ನಡುವೆ ಹೊಡೆದಾಟ

Posted by Vidyamaana on 2024-02-02 11:29:07 |

Share: | | | | |


ಪುತ್ತೂರು ಗಾಂಧಿ ಕಟ್ಟೆಯ ಬಳಿ ಇತ್ತಂಡಗಳ ನಡುವೆ ಹೊಡೆದಾಟ

ಪುತ್ತೂರು : ಎರಡು ತಂಡಗಳ ನಡುವೆ ಹೊಡೆದಾಟ ನಡೆದ ಘಟನೆ ಫೆ.1 ರಂದು ರಾತ್ರಿ ಪುತ್ತೂರು ಬಸ್ ನಿಲ್ದಾಣದ ಸಮೀಪದ ಹೂವಿನ ಮಾರುಕಟ್ಟೆ ಬಳಿ ನಡೆದಿದೆ.


ಪುತ್ತೂರು ಬಸ್ ನಿಲ್ದಾಣ ಸಮೀಪದ ಗಾಂಧಿಕಟ್ಟೆ ಸಮೀಪ ಹಣ್ಣು-ಹಂಪಲು ವಿತರಣೆಯ ಪಿಕಪ್ ವಾಹನದವರು ಹಾಗೂ ಮಾರುತಿ 800 ಕಾರಿನಲ್ಲಿದ್ದವರ ನಡುವೆ ಹೂವಿನ ಮಾರುಕಟ್ಟೆ ಮುಂಭಾಗ ನಡುರಸ್ತೆಯಲ್ಲೇ ಹೊಡೆದಾಟ ನಡೆದಿದೆ ಎಂದು ವರದಿಯಾಗಿದೆ.


ಹೊಡೆದಾಟದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಯಾವ ಕಾರಣಕ್ಕೆ ಹೊಡೆದಾಟ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿಲ್ಲ.

ಬಾವಿಗೆ ಹಾರಿ ಟೆಂಪೋ ಚಾಲಕ ಆತ್ಮಹತ್ಯೆ ; ತೊಕ್ಕೊಟ್ಟಿನ ಹೊಟೇಲ್ ಮಾಲಕರ ಮನೆ ಆವರಣದ ಬಾವಿಗೆ ಹಾರಿದ ನಾಗೇಶ್

Posted by Vidyamaana on 2023-09-27 20:54:00 |

Share: | | | | |


ಬಾವಿಗೆ ಹಾರಿ ಟೆಂಪೋ ಚಾಲಕ ಆತ್ಮಹತ್ಯೆ ; ತೊಕ್ಕೊಟ್ಟಿನ ಹೊಟೇಲ್ ಮಾಲಕರ ಮನೆ ಆವರಣದ ಬಾವಿಗೆ ಹಾರಿದ ನಾಗೇಶ್

ಉಳ್ಳಾಲ, ಸೆ.27: ಆಟೋ ಟೆಂಪೊ ಚಾಲಕರೋರ್ವರು ತಾನು ಟೆಂಪೋ ಇರಿಸುತ್ತಿದ್ದ ಹೊಟೇಲ್ ಮಾಲಕರ ಮನೆಯಂಗಳದ ಬಾವಿಗೆ ಬಿದ್ದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ ಚರ್ಚ್ ಬಳಿ ನಡೆದಿದೆ. 


ತೊಕ್ಕೊಟ್ಟು, ಕೃಷ್ಣ ನಗರ, ಲಚ್ಚಿಲ್ ನಿವಾಸಿ ನಾಗೇಶ್ (62) ಆತ್ಮಹತ್ಯೆಗೈದ ದುರ್ದೈವಿ. ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು. ಇಂದು ಬೆಳಗ್ಗೆ ನಾಗೇಶ್ ಅವರು ಟೆಂಪೋ ತೆಗೆಯದೆ ನಾಪತ್ತೆಯಾಗಿದ್ದು ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಮನೆಯಂಗಳದಲ್ಲಿ ನಿಲ್ಲಿಸಿದ್ದ ಟೆಂಪೋ ಸೀಟಲ್ಲಿ ನಾಗೇಶ್ ಅವರ ಮೊಬೈಲ್, ನಗದು , ಫೋಟೊ, ಚಪ್ಪಲಿ ದೊರಕಿದ್ದು ಅನುಮಾನಗೊಂಡ ಮನೆ ಮಂದಿ, ಸ್ಥಳೀಯರು ಬಾವಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬಾವಿಯಲ್ಲಿ ನಾಗೇಶ್ ದೇಹವಿರುವುದನ್ನು ಪತ್ತೆ ಮಾಡಿದ್ದು ಮೃತದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.  ಮೃತ ನಾಗೇಶ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಅನಾರೋಗ್ಯದ ಬಗ್ಗೆ ಚಿಂತಿತರಾಗಿದ್ದರು. ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ತೊಕ್ಕೊಟ್ಟಿನ ನಿತ್ಯಾನಂದ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನ ಅಗಲಿದ್ದಾರೆ

ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ರಾಷ್ಟ್ರ ಭಕ್ತರ ಮೇಲೆ ಕೇಸ್ ದಾಖಲು ಹೆಚ್ಚಳ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪ

Posted by Vidyamaana on 2023-10-28 16:29:10 |

Share: | | | | |


ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ರಾಷ್ಟ್ರ ಭಕ್ತರ ಮೇಲೆ ಕೇಸ್ ದಾಖಲು ಹೆಚ್ಚಳ ಮಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪ

ಮಂಗಳೂರು: ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಕೇಸ್ ಗಳನ್ನು ದಾಖಲಿಸಲಾಗುತ್ತಿದ್ದು, ಹಿಂದೂ ಕಾರ್ಯಕರ್ತರ ಮೇಲೆ ಕೂಡಾ ಕೇಸ್ ಹಾಕಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪಿಸಿದ್ದಾರೆ.


ಮಂಗಳೂರಿನಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ನಳೀನ್ ಕುಮಾರ್ ಕಟೀಲ್, ಜನಪ್ರತಿನಿಧಿಗಳ ಮೇಲೆ ಕೂಡಾ ಕೇಸ್ ಹಾಕಿ ಅವರ ಹಕ್ಕುಗಳನ್ನು ಕಸಿಯಲಾಗುತ್ತಿದೆ ಎಂದು ಹೇಳಿದ್ದಾರೆ.


ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನರ ಪರ ಧ್ವನಿ ಎತ್ತಿದ ಶಾಸಕರ ಮೇಲೆ ಕೇಸ್ ಹಾಕಲಾಗಿದ್ದು, ಪೊಲೀಸ್ ಇಲಾಖೆಯ ಮೂಲಕ ಸರ್ಕಾರ ಎಫ್ ಐ ಆರ್ ದಾಖಲಿಸಿದೆ ಎಂದು ನಳೀನ್ ಕುಮಾರ್ ಕಟೀಲ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಶಾಸಕ ಹರೀಶ್ ಪೂಂಜಾ ಮೇಲೆ ಒಂದೇ ತಿಂಗಳಿನಲ್ಲಿ ಎರಡನೇ ಎಫ್‌ಐ ಆರ್ ದಾಖಲಿಸಲಾಗಿದ್ದು, ಸಿಎಂ ಸಿದ್ಧರಾಮಯ್ಯ ಅಧಿಕಾರಕ್ಕೆ ಬಂದ ಮೇಲೆ ರಾಷ್ಟ್ರ ಭಕ್ತರ ಮೇಲೆ ಕೇಸ್ ಗಳನ್ನು ದಾಖಲಿಸುತ್ತಿರುವುದು ಹೆಚ್ಚಾಗುತ್ತಿದ್ದು,ರಾಷ್ಟ್ರ ವಿರೋಧಿಗಳ ಮೇಲೆ ಒಂದೂ ಕೇಸ್ ದಾಖಲಾಗುತ್ತಿಲ್ಲ ಎಂದು ಕಟೀಲ್  ಟೀಕಿಸಿದಾರೆ

ಅಕ್ರಮ ಮದ್ಯ ಮಾರಾಟ ಪ್ರಕರಣ: ಆರೋಪಿ ಖುಲಾಸೆ

Posted by Vidyamaana on 2024-01-05 21:23:18 |

Share: | | | | |


ಅಕ್ರಮ ಮದ್ಯ ಮಾರಾಟ ಪ್ರಕರಣ: ಆರೋಪಿ ಖುಲಾಸೆ

ಪುತ್ತೂರು:  ಅಕ್ರಮ ಮಧ್ಯ ಮಾರಾಟ ಮಾಡಿದ್ದಾರೇ ಎನ್ನಲಾದ ಪ್ರಕರಣದ ಆರೋಪಿ ಆಶೋಕ್ ಸುವರ್ಣ ರವರನ್ನು ಮಾನ್ಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಸದ್ರಿ ಪ್ರಕರಣದಿಂದ ಖುಲಾಸೆ ಮಾಡಿರುತ್ತದೆ.


ಪುತ್ತೂರು  ತಾಲೂಕು ಬಲ್ನಾಡು ಗ್ರಾಮದ ನ್ಯೂ ಜನತಾ ಕಾಲೋನಿಯಲ್ಲಿರುವ ಆಶೋಕ್ ಸುವರ್ಣ ಎಂಬವರಿಗೆ ಸೇರಿದ ಮನೆಯ ಒಳಗಡೆ ಅಡಿಗೆ ಕೋಣೆಯಲ್ಲಿ 2 ಗುಂಡಿಗಳನ್ನು ತೆಗೆದು ಅದರ ಒಳಗೆ ಅಕ್ರಮವಾಗಿ ಮಧ್ಯದ ಬಾಟಲಿಗಳನ್ನು ಇಟ್ಟು ಟೈಲ್ಸ್ ಮುಚ್ಚಿರುವುದನ್ನು ಹಾಗೂ ನೈಲಾನ್ ಚೀಲದಲ್ಲಿ ಮಧ್ಯದ ಬಾಟಲಿಗಳನ್ನು ಇಟ್ಟಿರುವುದನ್ನು ಪತ್ತೆ ಹಚ್ಚಿದ್ದು, ಸೊತ್ತುಗಳನ್ನು ವಶಕ್ಕೆ ತೆಗೆದೆಕೊಂಡು ಈ ನಿಟ್ಟಿನಲ್ಲಿ ದೂರು ದಾಖಲಿಸಿಕೊ0ಡ ಅಬಕಾರಿ ಪೊಲೀಸರು ಆಶೋಕ್ ಸುವರ್ಣರವರನ್ನು ಬ0ಧಿಸಿದ್ದರು ಹಾಗೂ ಅವರ ಮೇಲೆ ಕೇಸು ದಾಖಲಿಸಿದ್ದರು ಹಾಗೂ ನ್ಯಾಯಾಲಯಕ್ಕೆ ಅ0ತಿಮ ವರದಿಯನ್ನು ಸಲ್ಲಿಸಿದ್ದರು.  


ಹೀಗಿರುವಲ್ಲಿ ನ್ಯಾಯಾಲಯವು ಈ ಪ್ರಕರಣವನ್ನು ಹ0ತ ಹ0ತವಾಗಿ ತನಿಖೆಗೆ ಕೈಗೆತ್ತಿಕೊ0ಡು ಹಾಗೂ ಪ್ರೋಸಿಕ್ಯೂಷನ್ ಸುಮಾರು 7 ಸಾಕ್ಷಿಗಳನ್ನು ತನಿಖೆ ನಡೆಸಿ ಮತ್ತು 8 ದಾಖಲೆಗಳನ್ನು ಹಾಗೂ ಸುಮಾರು 27 ಮುದ್ದೆ ಮಾಲುಗಳನ್ನು ಪರಿಶೀಲಿಸಿ, ಪ್ರೋಸಿಕ್ಯೂಷನ್ ಈ ಪ್ರಕರಣವನ್ನು ಸ0ಶಯಾತೀತವಾಗಿ ಸಾಭೀತುಪಡಿಸಲು ವಿಫಲವಾಗಿದೆ ಎ0ದೂ ತೀರ್ಮಾನಿಸಿ, ಆರೋಪಿಯನ್ನು ನಿರಪರಾದಿಯೆಂದು ಬಿಡೂಗಡೆಗೊಳಿಸಲು ಮಾನ್ಯ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರು ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧಿಶರಾದ ಶ್ರೀಯುತ ಶಿವಣ್ಣ ಹೆಚ್ ಆರ್ ರವರು ಆದೇಶಿಸಿರುತ್ತಾರೆ.


ಆರೋಪಿಯ ಪರವಾಗಿ ಹಿರಿಯ ವಕೀಲರಾದ ಕಜೆ ಲಾ ಚೇಂಬರ್ಸ್ನ ಶ್ರೀ.ಮಹೇಶ್ ಕಜೆಯವರು ವಾದಿಸಿದ್ದರು.

Recent News


Leave a Comment: